ಮಡಿಕೇರಿ ಜು.28 NEWS DESK : ಕೊಡಗು ಪತ್ರಕತ೯ರ ಸಂಘ (ರಿ) ಹಾಗೂ ರೋಟರಿ ಮಿಸ್ಟಿ ಹಿಲ್ಸ್ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಕಾಗಿ೯ಲ್ ವಿಜಯ್ ದಿವಸ್ ಕಾರ್ಯಕ್ರಮ ಮತ್ತು ಯೋಧರಿಗೆ ಗೌರವ ನಮನ ಸಲ್ಲಿಸುವ ಕಾಯ೯ಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಭಾಗವಹಿಸಿ ವೀರ ಯೋಧರಿಗೆ ಗೌರವಾರ್ಪಣೆ ಮಾಡಿದರು. ದೇಶ ರಕ್ಷಣೆಯಲ್ಲಿ ವೀರ ಯೋಧರ ಕೊಡುಗೆಯನ್ನು ಸ್ಮರಿಸಿದ ಪೊನ್ನಣ್ಣ ವೀರತ್ವಕ್ಕೆ ಕೊಡಗು ಹೆಸರುವಾಸಿಯಾಗಿದ್ದು, ಕೊಡಗಿನ ಸಾವಿರಾರು ಜನ ಸೈನಿಕರ ಕೊಡುಗೆ ಈ ದೇಶದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಬಣ್ಣಿಸಿದರು. ದೇಶದ ಪ್ರತಿಯೊಬ್ಬರು ದೇಶಭಕ್ತಿಯನ್ನು ಬೆಳೆಸಿಕೊಂಡಲ್ಲಿ, ನಮ್ಮ ನಾಡು, ನಮ್ಮ ದೇಶ ಸಮೃದ್ಧವಾಗುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಪೊನ್ನಣ್ಣ ಅಭಿಪ್ರಾಯಪಟ್ಟರು. ನಮ್ಮ ದೇಶವನ್ನು ಕಾಯುವ ಯೋಧರನ್ನು ನಾವು ಸದಾ ಸ್ಮರಿಸುತ್ತಾ ಅವರಿಗೆ ಚಿರಋಣಿಯಾಗಿರಬೇಕು ಎಂದು ಇದೇ ಸಂದರ್ಭದಲ್ಲಿ ಅವರು ಕಿವಿಮಾತು ಹೇಳಿದರು. ಕೊಡಗಿನಿಂದ ದೇಶದ ಸೈನ್ಯಕ್ಕೆ ನೀಡಲಾದ ಯೋಧರ ಕೊಡುಗೆ ಬೇರೆ ಯಾವ ರಾಜ್ಯದಿಂದಲೂ ಇಲ್ಲ ಎಂದು ಹೇಳಿದ…
ಲೇಖಕ: admin
ಮಡಿಕೇರಿ ಜು.28 NEWS DESK : ಹಣತೆ ಉರಿಸಿ, ಪುಪ್ಪಗಳನ್ನು ಅಪಿ೯ಸಿ, ದೇಶಭಕ್ತಿಯ ಹಾಡುಗಳೊಂದಿಗೆ ಯೋಧರು, ಹಾಗೂ ಭಾರತ ಮಾತೆಗೆ ಜೈಘೋಷಗಳ ಮೂಲಕ ವಿನೂತನ ರೀತಿಯಲ್ಲಿ ಕೊಡಗು ಪತ್ರಕತ೯ರ ಸಂಘ (ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಕಾಗಿ೯ಲ್ ವಿಜಯ್ ದಿವಸ್ ಅಂಗವಾಗಿ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು. ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಜಿಲ್ಲೆಯಾದ್ಯಂತಲಿನ 75 ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡು ಅಮರ್ ಜವಾನ್ ಸ್ಮಾರಕದ ಪ್ರತಿಕೖತಿಗೆ ಪುಪ್ಪಾಚ೯ನೆ ಮಾಡಿ, ಹಣತೆ ಬೆಳಗಿ ಯೋಧರಿಗೆ ಭಾವಪೂಣ೯ ಗೌರವ ನಮನ ಸಲ್ಲಿಸಿದರು. ಯೋಧರೆ ನಾವೆಂದೂ ಮರೆಯೋದಿಲ್ಲ ನಿಮ್ಮನ್ನು ಎಂಬ ಸಂದೇಶ ಸಾರುವ ಕಾಯ೯ಕ್ರಮವನ್ನು ಕಾಗಿ೯ಲ್ ಸಮರದಲ್ಲಿ ಹುತಾತ್ಮರಾದ ಪೆಮ್ಮಂಡ ಕಾವೇರಪ್ಪ ಅವರ ಪತ್ನಿ ಪೆಮ್ಮಂಡ ಶೋಭಾ ಕಾವೇರಪ್ಪ ದೀಪಬೆಳಗಿಸಿ ಉದ್ಘಾಟಿಸಿದರು. ರೋಟರಿ ಜಿಲ್ಲೆಯ ನಿಕಟಪೂವ೯ ಗವನ೯ರ್ , ಮಾಜಿ ನೌಕದಳದ ಅಧಿಕಾರಿ ವಿಕ್ರಂದತ್ತ, ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಕಾಯ೯ದಶಿ೯ ಸುರೇಶ್ ಬಿಳಿಗೇರಿ, ರೋಟರಿ…
ಮಡಿಕೇರಿ NEWS DESK ಜು 27 : ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ಜಿಲ್ಲೆಯ ಹಲವೆಡೆ ಪ್ರವಾಸಿ ತಾಣಗಳ ಮಾಹಿತಿ ಫಲಕಗಳನ್ನು ಅಳವಡಿಸುವ ಯೋಜನೆಗೆ ರಾಜಾಸೀಟ್ ಹೊರಬದಿಯಲ್ಲಿ ಫಲಕ ಅನಾವರಣಗೊಳಿಸುವ ಮೂಲಕ ಚಾಲನೆ ದೊರಕಿದೆ. ನಗರದ ಹೆಸರಾಂತ ಪ್ರವಾಸೀ ತಾಣ ರಾಜಾಸೀಟ್ ನಲ್ಲಿ ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ರಾಜಾಸೀಟ್ ನಿಂದ ಇರುವ ದೂರದ ಮಾಹಿತಿಯುಳ್ಳ ಬೖಹತ್ ಹೋಡಿ೯ಂಗ್ ನ್ನು ಅನಾವರಣಗೊಳಿಸಲಾಯಿತು. ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ, ಪ್ರಧಾನ ಕಾಯ೯ದಶಿ೯ ನಾಸೀರ್, ನಗರಸಭೆಯ ಪೌರಾಯುಕ್ತ ರಮೇಶ್ ಹಾಜರಿದ್ದರು. ಇಂಥ ಮಾಹಿತಿ ಫಲಕಗಳನ್ನು ಪ್ರವಾಸಿಗರ ಅನುಕೂಲತೆಗಾಗಿ ಜಿಲ್ಲೆಯ 12 ಪ್ರಮುಖ ಪ್ರವಾಸಿ ತಾಣಗಳಲ್ಲಿ ಅಳವಡಿಸಲಾಗುತ್ತಿದ್ದು, ಆಯಾ ಪ್ರವಾಸಿ ತಾಣದಿಂದ ಬೇರೆ ಕಡೆಗಳಲ್ಲಿನ ಪ್ರವಾಸಿ ತಾಣಕ್ಕೆ ಎಷ್ಟು ದೂರವಾಗಲಿದೆ. ಆ ಪ್ರವಾಸಿ ತಾಣದ ವಿಶೇಷ ಏನೆಂಬ ಮಾಹಿತಿ ಈ ಹೋಡಿ೯ಂಗ್ ನಲ್ಲಿರಲಿದೆ ಎಂದು ದಿನೇಶ್ ಕಾಯ೯ಪ್ಪ ಮಾಹಿತಿ ನೀಡಿದರು.…
ಸೋಮವಾರಪೇಟೆ NEWS DESK ಜು.27 : ಸೋಮವಾರಪೇಟೆ ಸಮೀಪದ ಶಾಂತಳ್ಳಿ ಜೇಡಿಗುಂಡಿ ಸಮೀಪ ರಸ್ತೆಯ ಮೇಲೆ ಬರೆ ಕುಸಿಯುವ ಸಂದರ್ಭ ಸುದ್ದಿ ಮಾಡುತ್ತಿದ್ದ ಪತ್ರಕರ್ತ ಹರಗ ಶರಣ್ ಎಂಬುವವರ ಓಮಿನಿ ವ್ಯಾನ್ ಮೇಲೆ ಮರ ಬಿದ್ದು ಹಾನಿಯಾಗಿದೆ. ಬರೆ ಕುಸಿತದ ಫೋಟೋ ತೆಗೆಯುತ್ತಿದ್ದ ಸಂದರ್ಭ, ವಾಹನದ ಮೇಲೆ ಮರವೊಂದು ಬಿದ್ದ ಪರಿಣಾಮ ವಾಹನ ಸಂಪೂರ್ಣ ಜಖಂಗೊಂಡಿದೆ. ಶರಣ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೋಮವಾರಪೇಟೆ NEWS DESK ಜು.27 : ಸೋಮವಾರಪೇಟೆ ತಾಲ್ಲೂಕಿನಾದ್ಯಂತ ಮಳೆಯ ಆರ್ಭಟ ಭಾನುವಾರವೂ ಮುಂದುವರಿದಿದ್ದು, ಗ್ರಾಮೀಣ ಭಾಗದ ಬಹುತೇಕ ಗ್ರಾಮಗಳು ಕತ್ತಲೆಯಲ್ಲಿವೆ. ವಿದ್ಯುತ್ ಮಾರ್ಗದ ಮೇಲೆ ಮರಗಳು ಬಿದ್ದಿದ್ದು ಕಂಬಗಳು ನೆಲಕ್ಕುರುಳಿವೆ. ಸೋಮವಾರಪೇಟೆ, ಶಾಂತಳ್ಳಿ, ಸಕಲೇಶಪುರ ರಾಜ್ಯ ಹೆದ್ದಾರಿಯ ಶಾಂತಳ್ಳಿ-ಜೇಡಿಗುಂಡಿ ಬಳಿಯಲ್ಲಿ ರಸ್ತೆಯ ಮೇಲೆ ಬರೆ ಕುಸಿದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಗೌಡಳ್ಳಿ ಗ್ರಾಮ ಪಂಚಾಯಿತಿಯ ಗ್ರಂಥಾಲಯ ಶೀಟ್ಗಳು ಗಾಳಿಗೆ ಹಾರಿಹೋಗಿವೆ. ಬಳಗುಂದ ಗ್ರಾಮದ ಮಣಿ ಎಂಬವರ ಮನೆಯ ತಡೆಗೋಡೆ ಕುಸಿದು ಹಾನಿಯಾಗಿದೆ. ಸೋಮವಾರಪೇಟೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಸಮೀಪ ಬರೆ ಕುಸಿಯಲು ಪ್ರಾರಂಬಿಸಿದ್ದು, ಪಟ್ಟಣ ಪಂಚಾಯಿತಿ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಅಂಗಡಿಯವರು ಸೂಕ್ತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದ್ದಾರೆ. ಚಿಕ್ಕತೋಳೂರು ಗ್ರಾಮದ ಸಿ.ಎನ್.ಪ್ರಕಾಶ್ ಅವರ ಕೊಟ್ಟಿಗೆಯ ಮೇಲೆ ವಿದ್ಯುತ್ ಕಂಬ ಬಿದ್ದು ಹಾನಿಯಾಗಿದೆ. ಸಿ.ಈ.ಸುಬ್ಬಯ್ಯ ಅವರ ಮನೆ ಮೇಲೆ ಬೈನೆ ಮರ ಬಿದ್ದಿದೆ. ಯಡೂರು ಗ್ರಾಮದ ಎಂ.ಎಸ್.ಹೊನ್ನಪ್ಪ ಅವರ ಮನೆ ಸಮೀಪದ ಬರೆಕುಸಿದಿದೆ. ಸೂರ್ಲಬ್ಬಿ ಪ್ರೌಢಶಾಲೆಯ ವೇದಿಕೆ ಕಟ್ಟಡದ ಮೇಲ್ಚಾವಣಿ…
ಮಡಿಕೇರಿ NEWS DESK ಜು.27 : ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಅವರ ನೇತೃತ್ವದ ನಿಯೋಗ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಭೇಟಿ ಮಾಡಿತು. ಗೌಡ ಸಮಾಜಕ್ಕೆ ಭೂಮಿ ಮಂಜೂರು ಮಾಡುವಂತೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭ ಶಾಸಕರಾದ ಎ.ಎಸ್ .ಪೊನ್ನಣ್ಣ, ಡಾ.ಮಂತರ್ ಗೌಡ ಉಪಸ್ಥಿತರಿದ್ದರು. ಪ್ರಮುಖರಾದ ಕೊಲ್ಯದ ಗಿರೀಶ್, ಕುಯ್ಯಮುಡಿ ವಸಂತ ದಂಬೆಕೋಡಿ ಆನಂದ, ಹುದೇರಿ ರಾಜೇಂದ್ರ, ಪೊನ್ನಚ್ಚನ ಮಧು, ಅಮೆ ಸೀತಾರಾಮ ಮತ್ತಿತರರು ಹಾಜರಿದ್ದರು.
ಮಡಿಕೇರಿ NEWS DESK ಜು.27 : ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ವತಿಯಿಂದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮೂರ್ನಾಡುವಿನ ಪಿಎಂ ಶ್ರೀ ಮಾದರಿ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ದಿ.ಕೊಕ್ಕಲೆರ ಚಂಗಪ್ಪ ಅವರ ಜ್ಞಾಪಕಾರ್ಥ ದತ್ತಿನಿಧಿ ಸ್ವೀಕಾರ, ಹಿರಿಯ ಸಾಹಿತಿ ಕಿಗ್ಗಾಲು ಎಸ್.ಗಿರೀಶ್ ಅವರು ರಚಿಸಿರುವ ಪತ್ತೆದಾರಿ ಕಾದಂಬರಿ “ಕಣ್ಮರೆಯಾದ ಕಾಂತಮಣಿ” ಪುಸ್ತಕ ಬಿಡುಗಡೆ ಮತ್ತು ಮೂರ್ನಾಡು ಹೋಬಳಿ ಶಾಲೆಗಳ ಶಿಕ್ಷಕರುಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಮೂರ್ನಾಡುವಿನ ಪಿಎಂ ಶ್ರೀ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ದತ್ತಿ ಪ್ರಶಸ್ತಿಗಳಿದ್ದು, ಮೂರ್ನಾಡಿನಲ್ಲಿ ಇದೇ ಮೊದಲ ಬಾರಿಗೆ ದತ್ತಿನಿಧಿ ಸ್ಥಾಪನೆ ಮಾಡಿರುವುದು ಪ್ರಶಂಸನೀಯವೆಂದರು. ಇಲ್ಲಿಯವರೆಗೆ ಎಲ್ಲಾ ಕಡೆ ಮಕ್ಕಳಿಗಾಗಿ ಪ್ರಬಂಧ ಸ್ಪರ್ಧೆ…
ಮಡಿಕೇರಿ NEWS DESK ಜು.27 : ಕೊಡಗು ಜಿಲ್ಲೆಯಾದ್ಯಂತ ಗಾಳಿ ಮಳೆ ಮುಂದುವರೆದಿದ್ದು, ಹಲವೆಡೆ ವಿದ್ಯುತ್ ಕಂಬಗಳು, ಮರಗಳು ಮತ್ತು ಮನೆಗಳು ಬಿದ್ದು ಹಾನಿ ಸಂಭವಿಸಿದೆ. ಸಾಲು ಸಾಲು ವಿದ್ಯುತ್ ಕಂಬಗಳು ನೆಲಕಚ್ಚಿರುವುದರಿಂದ ಜಿಲ್ಲೆಯ ಬಹುತೇಕ ಗ್ರಾಮಗಳು ಕಾರ್ಗತ್ತಲಿನಲ್ಲಿವೆ. ಚಳಿ, ಗಾಳಿ, ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲಿ ಒಂದೇ ದಿನದಲ್ಲಿ ದಾಖಲೆಯ 10 ಇಂಚು ಮಳೆಯಾಗಿದ್ದರೆ, ದಕ್ಷಿಣ ಕೊಡಗಿನ ಹುದಿಕೇರಿಯಲ್ಲಿ 8 ಇಂಚು, ಶ್ರೀಮಂಗಲದಲ್ಲಿ 7 ಇಂಚು, ಕಾವೇರಿಯ ಉಗಮ ಸ್ಥಾನ ಮಡಿಕೇರಿ ತಾಲ್ಲೂಕಿನ ತಲಕಾವೇರಿ ಮತ್ತು ಭಾಗಮಂಲದಲ್ಲಿ 6 ಇಂಚು ಮಳೆಯಾಗಿದೆ. ಕುಶಾಲನಗರ ತಾಲ್ಲೂಕಿನ ಹಾರಂಗಿ ಜಲಾಶಯದಿಂದ 25 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಜಲಾಶಯದ ಎದುರು ಇರುವ ಯಡವನಾಡು- ಹಾರಂಗಿ ಸೇತುವೆ ನೀರಿನಿಂದ ಮುಳುಗಡೆಯಾಗಿದ್ದು, ಸೇತುವೆಯ ಎರಡು ಬದಿಯಲ್ಲಿ ಪೋಲೀಸ್ ಬ್ಯಾರಿಕೇಡ್ ನ್ನು ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು ಅಳವಡಿಸಿದರು. ಸಾರ್ವಜನಿಕರು ಹಾಗೂ ವಾಹನಗಳು ಹೋಗದಂತೆ ಎಚ್ಚರಿಕೆ ನೀಡಿದ್ದಾರೆ. *ಹಲವೆಡೆ ಹಾನಿ* ಅಮ್ಮತ್ತಿ ಹೋಬಳಿ ಪುಲಿಯೇರಿ…
ಸೋಮವಾರಪೇಟೆ NEWS DESK ಜು.27 : ಅತಿಯಾದ ಮಳೆಯಿಂದ ಬರೆಕುಸಿಯುವ ಭೀತಿಯಿಂದ ಮುಂಜಾಗ್ರತೆಯಾಗಿ ಪಟ್ಟಣ ಬಸ್ಸ್ ನಿಲ್ದಾಣದ 5 ಅಂಗಡಿಗಳನ್ನು ತಹಸೀಲ್ದಾರ್ ಕೃಷ್ಣ ಮೂರ್ತಿ ಇಂದು ಖಾಲಿಮಾಡಿಸಿ ಬೀಗ ಜಡಿದಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ,ರಭಸದ ಗಾಳಿಯಿಂದ ಅಲ್ಲಲ್ಲಿ ಮರಗಳು,ಮನೆಗಳು ಧರೆಗುರುಳಿವೆ.ಪಟ್ಟಣದ ಮಡಿಕೇರಿ ರಸ್ತೆಯಲ್ಲಿರುವ ಬಸಪ್ಪ ಪೆಟ್ರೋಲ್ ಬಂಕ್ ಹಿಂಬಾಗದಲ್ಲಿ ತಡೆಗೋಡೆ ನಿರ್ಮಿಸಲು ಮಣ್ಣು ತೆಗೆದು ಹಲವು ಸಮಯಗಳಾಗಿದ್ದರೂ ಈ ವರೆಗೆ ಕಾಮಗಾರಿ ನಡೆಸದ ಹಿನ್ನಲೆಯಲ್ಲಿ ಭಾರಿ ಮಳೆಯಿಂದ ಬರೆಕುಸಿಯುವ ಭೀತಿ ಎದುರಾಗಿದೆ ಇದರ ಮೇಲ್ಭಾಗದಲ್ಲಿ ಖಾಸಗಿ ಬಸ್ ನಿಲ್ದಾಣದಲ್ಲಿರುವ ತರಕಾರಿ ಅಂಗಡಿ,ಪಟ್ಟಣ ಪಂಚಾಯ್ತಿ ಸದಸ್ಯ ಸಂಜೀವ ಅವರದ್ದು ಸೇರಿದಂತೆ 5 ಅಂಗಡಿಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು ಈಬಗ್ಗೆ ಗಮನ ಹರಿಸಿದ ತಾಲೂಕು ದಂಡಾಧಿಕಾರಿ ಕೃಷ್ಣಮೂರ್ತಿಯವರು ಸ್ಥಳಕ್ಕೆ ತೆರಳಿ ವಿಪತ್ತು ನಿರ್ವಹಣಾ ಕಾಯಿದೆಯಡಿ ಎಚ್ಚರಿಕೆ ಹಾಗೂ ಮಾಹಿತಿ ನೀಡಿ ತಕ್ಷಣವೇ ಎಲ್ಲಾ ಅಂಗಡಿಗಳನ್ನು ತಕ್ಷಣವೇ ಖಾಲಿಮಾಡಿಸಿ ಬೀಗ ಜಡಿದಿದ್ದಾರೆ. ವಿಪತ್ತು ನಿರ್ವಹಣಾ ಕಾಯಿದೆಯಡಿ ಅಂಗಡಿಗಳನ್ನು ಖಾಲಿ ಮಾಡಿಸಿದ್ದೇವೆ, ಬರೆ ಕುಸಿಯದಂತೆ…
ವಿರಾಜಪೇಟೆ ಜು.26 NEWS DESK : ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಯೋಧರ ಧೈರ್ಯ ಹಾಗೂ ತ್ಯಾಗವು ದೇಶದ ಪ್ರತಿಯೊಬ್ಬ ನಾಗರೀಕರಿಗೆ ಆದರ್ಶವಾಗಲಿ ಎಂದು ವಿರಾಜಪೇಟೆಯ ಕೊಡಗು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಹೇಳಿದರು. ಕೊಡಗು ಮಾಜಿ ಸೈನಿಕರ ಸಂಘದ ವತಿಯಿಂದ ವಿರಾಜಪೇಟೆ ಪಟ್ಟಣದಲ್ಲಿನ ಹುತಾತ್ಮರ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕ್ಕೆ ಪುಷ್ಪನಮನ ಸಲ್ಲಿಸಿ ಸೈನಿಕರ ತ್ಯಾಗ ಬಲಿದಾನದ ಕುರಿತು ಮಾತನಾಡಿದರು. ಈ ಸಂದರ್ಭ ತಾಲ್ಲೂಕು ಆಡಳಿತ ವತಿಯಿಂದ ತಹಶೀಲ್ದಾರ್ ಅನಂತ ಶಂಕರ ಅವರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ಪೋಲಿಸ್ ಇಲಾಖೆ ವತಿಯಿಂದ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ನೇತೃತ್ವದಲ್ಲಿ, ಪುರಸಭೆ ವತಿಯಿಂದ, ಮಾಜಿ ಸೈನಿಕರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಹಾಗೂ ರೋಟರಿ ಶಾಲೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ವತಿಯಿಂದ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವನ್ನಿಟ್ಟು ನಮನ ಸಲ್ಲಿಸಲಾಯಿತು.…






