ಸೋಮವಾರಪೇಟೆ ಜು.26 NEWS DESK : ಕಾರ್ಗಿಲ್ ವಿಜಯ ದಿನದ ಅಂಗವಾಗಿ ಹಿಂದೂಜಾಗರಣ ವೇದಿಕೆ ವತಿಯಿಂದ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಗೌರವ ಸಲ್ಲಿಸಲಾಯಿತು. ಸೋಮವಾರಪೇಟೆ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಈರಪ್ಪ ದಿನದ ಮಹತ್ವ ಕುರಿತು ಮಾತನಾಡಿದರು. ಈ ಸಂದರ್ಭ ದೇಶಕ್ಕಾಗಿ ಬಲಿದಾನ ಮಾಡಿದ ಸೈನಿಕರಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು , ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹಾಗೂ ದೇಶಭಕ್ತರು ಭಾಗವಹಿಸಿದರು.
ಲೇಖಕ: admin
ಮಡಿಕೇರಿ ಜು.25 NEWS DESK : ಕೊಡಗು ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದ್ದು, ಸಾವು ನೋವು ಸಂಭವಿಸಿದೆÉ. ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದರೆ, ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಮರ ಬಿದ್ದು ಚಾಲಕ ಹಾಗೂ ವಿದ್ಯಾರ್ಥಿನಿ ಗಾಯಗೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ಗಾಳಿಯ ವೇಗ ಹೆಚ್ಚುತ್ತಲೇ ಇರುವುದರಿಂದ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ. ಭಾರೀ ಗಾಳಿಮಳೆಗೆ ಮನೆಯ ಗೋಡೆ ಕುಸಿದ ಪರಿಣಾಮ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕಲಬುರ್ಗಿ ಜಿಲ್ಲೆಯ ನಿವಾಸಿ ರವಿ ಎಂಬುವವರ ಪತ್ನಿ ಸುಷ್ಮಾ (37) ಮೃಪಟ್ಟಿದ್ದಾರೆ. ಮೃತರ ಸಹೋದರ ಅಕ್ಷಯ್ ಗೆ ಭುಜ ಭಾಗಕ್ಕೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಕುಟುಂಬವರ್ಗಕ್ಕೆ ಸಾಂತ್ವಾನ ಹೇಳಿದರು. ಅಧಿಕಾರಿಗಳನ್ನು ಸಂಪರ್ಕಿಕಿಸಿದ ಅವರು ಅಗತ್ಯ ತುರ್ತು ಕ್ರಮಕೈಗೊಳ್ಳುವಂತೆ ತಿಳಿಸಿದರು. *ಆಟೋದ ಮೇಲೆ ಬಿದ್ದ ಮರ* ಸೋಮವಾರಪೇಟೆ…
ಮಡಿಕೇರಿ ಜು.26 NEWS DESK : ಅಪ್ರೆಂಟಿಸ್ ಕಾಯಿದೆ, 1961 ರ ಅಡಿಯಲ್ಲಿ ಮತ್ತು ಅಪ್ರೆಂಟಿಸ್ಶಿಪ್ ನೀತಿಯ ಪ್ರಕಾರ ಅಪ್ರೆಂಟಿಸ್ಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಇಂಡಿಯನ್ ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ ಅಪ್ರೆಂಟಿಸ್ ಶಿಪ್ ನೀಡಲು ಮುಂದಾಗಿದೆ. 2025-26 ನೇ ಸಾಲಿಗೆ ದೇಶದಾದ್ಯಂತ ಒಟ್ಟು 1,500 ಅಭ್ಯರ್ಥಿಗಳಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದ್ದು, ಕರ್ನಾಟಕದಿಂದ 42 ಮಂದಿಗೆ ಅವಕಾಶ ಸಿಗಲಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 7ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ಇದು ಒಂದು ವರ್ಷದ ಉದ್ಯೋಗ ತರಬೇತಿಯಾಗಿರುತ್ತದೆ. ಅಪ್ರೆಂಟಿಸ್ಷಿಪ್ ಒಂದು ಉದ್ಯೋಗ ತರಬೇತಿಯಾಗಿದೆಯೇ ಹೊರತು ಬ್ಯಾಂಕ್ನಿಂದ ನಡೆಯುವ ನೇಮಕಾತಿ ಆಗಿರುವುದಿಲ್ಲ ಎಂದು ಬ್ಯಾಂಕ್ ಸ್ಪಷ್ಟನೆ ನೀಡಿದೆ. ಅರ್ಹತೆಗಳೇನು ? :: ಕಲೆ, ವಿಜ್ಞಾನ, ವಾಣಿಜ್ಯ ಸೇರಿದಂತೆ ಯಾವುದೇ ವಿಷಯಗಳಲ್ಲಿ ಪದವಿ ಪಡೆದಿದ್ದರೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಆದರೆ, ಅಭ್ಯರ್ಥಿಗಳು ಕೇಂದ್ರ ಸರಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ನಿಗದಿತ ವಿದ್ಯಾರ್ಹತೆ…
ಮಡಿಕೇರಿ ಜು.26 NEWS DESK : ಐತಿಹಾಸಿಕ ಮಡಿಕೇರಿ ದಸರಾ ಆಚರಣೆಗೆ ಪೂರ್ವಭಾವಿಯಾಗಿ ಸಂಪ್ರದಾಯದAತೆ ನಗರದ ಪೇಟೆ ಶ್ರೀರಾಮಮಂದಿರದಲ್ಲಿ ದಸರಾ ಉತ್ಸವ ಸಮಿತಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಆ ಮೂಲಕ ದಸರಾ ಜನೋತ್ಸವದ ಸಿದ್ಧತಾ ಕಾರ್ಯಗಳಿಗೆ ಚಾಲನೆ ನೀಡಲಾಯಿತು. ಮಡಿಕೇರಿ ದಸರಾ ಉತ್ಸವವನ್ನು ಯಾವುದೇ ವಿಘ್ನಗಳಿಲ್ಲದೆ ಯಶಸ್ವಿಗೊಳಿಸುವಂತೆ ಸಮಿತಿಯ ಪ್ರಮುಖರು ಪ್ರಾರ್ಥಿಸಿದರು. ದಸರಾ ಸಮಿತಿಯ ನೂತನ ಕಾರ್ಯಾಧ್ಯಕ್ಷ ಬಿ.ಕೆ.ಅರುಣ್ ಕುಮಾರ್ ಮಾತನಾಡಿ ಐತಿಹಾಸಿಕ ಮಡಿಕೇರಿ ದಸರಾ ಉತ್ಸವದ ಸಿದ್ಧತಾ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ದಸರಾ ಹಬ್ಬದ ಆಚರಣೆಗೆ ಎಲ್ಲರ ಸಹಕಾರದ ಅಗತ್ಯವಿದ್ದು, ಒಗ್ಗಟ್ಟನಿಂದ ಅದ್ದೂರಿಯಾಗಿ ಆಚರಿಸೋಣವೆಂದು ಮನವಿ ಮಾಡಿದರು. ಮಡಿಕೇರಿ ದಸರಾ ಸಮಿತಿಯ ಅಧ್ಯಕ್ಷರಾದ ನಗರಸಭೆಯ ಅಧ್ಯಕ್ಷೆ ಪಿ.ಕಲಾವತಿ, ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ, ದಸರಾ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ದಶ ಮಂಟಪ ಸಮಿತಿಯ ಅಧ್ಯಕ್ಷ ಬಿ.ಎಂ.ಹರೀಶ್ ಅಣ್ವೇಕರ್, ಸಮಿತಿಯ ಪ್ರಮುಖರಾದ ಜಿ.ಎಂ.ಸತೀಶ್ ಪೈ, ಕಾನೆಹಿತ್ಲು ಮೊಣ್ಣಪ್ಪ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ನಗರಸಭೆ ಸದಸ್ಯರು, ದಶಮಂಟಪ ಸಮಿತಿಯ…
ಮಡಿಕೇರಿ ಜು.26 NEWS DESK : ಬಿಜೆಪಿಯ ಶಾಸಕರುಗಳೇ ಇದ್ದ ಇಪ್ಪತ್ತೈದು ವರ್ಷಗಳ ಅವಧಿಯಲ್ಲಿ ನಡೆಯದ ಅಭಿವೃದ್ಧಿ ಕಾರ್ಯಗಳು ಕಾಂಗ್ರೆಸ್ ಆಡಳಿತದ ಈ ಅವಧಿಯಲ್ಲಿ ನಡೆಯುತ್ತಿದೆ. ಆದರೆ ಜಿಲ್ಲೆಯ ಜನರಿಗೆ ಅಭಿವೃದ್ಧಿಯ ವಿಚಾರದಲ್ಲಿ ಬಿಜೆಪಿ ತಪ್ಪು ಸಂದೇಶವನ್ನು ನೀಡುತ್ತಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾದ ಟಿ.ಈ.ಸುರೇಶ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ಸಾಕಷ್ಟು ಉತ್ತಮ ಕೆಲಸಗಳನ್ನು ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ ನಡೆಯದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ನಡೆಯುತ್ತಿದೆ. ಅಭಿವೃದ್ಧಿಯ ಬಗ್ಗೆ ಬಿಜೆಪಿಗೆ ಕಾಳಜಿ ಇದ್ದಿದ್ದರೆ ಅವರ ಅವಧಿಯಲ್ಲಿ ಅದನ್ನು ಮಾಡಬೇಕಿತ್ತು ಎಂದು ಹೇಳಿದರು. ಪ್ರತಿಪಕ್ಷ ಬಿಜೆಪಿಗೆ ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲ. ಇದಕ್ಕೆ ಬದಲಾಗಿ ಕೇವಲ ಕಾಂಗ್ರೆಸ್ ಆಡಳಿತವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನಷ್ಟೆ ಮಾಡುತ್ತಿರುವುದಾಗಿ ಟೀಕಿಸಿದರು. *ಅಭಿವೃದ್ಧಿ ಕಾರ್ಯ* :: ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರು ತಮ್ಮ ಇಲ್ಲಿನವರೆಗಿನ ಅಧಿಕಾರದ…
ಮಡಿಕೇರಿ ಜು.26 NEWS DESK : ಕೊಡಗು ವಿದ್ಯಾಲಯದ ಎನ್ಸಿಸಿ ಘಟಕದ ವತಿಯಿಂದ ನಗರದಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಪ್ರತಿಮೆಯನ್ನು ಶುಚಿಗೊಳಿಸುವುದರ ಮೂಲಕ ಕಾರ್ಗಿಲ್ ವಿಜಯ ದಿವಸ್ ನ್ನು ಆಚರಿಸಲಾಯಿತು. ಕೊಡಗು ವಿದ್ಯಾಲಯದ ಎನ್ಸಿಸಿ ಕೆಡೆಟ್ ಗಳು ಪ್ರತಿಮೆಯನ್ನು ಶುಚಿಗೊಳಿಸಿ, ಆವರಣದ ಸುತ್ತ ಬೆಳೆದಿದ್ದ ಕಾಡು ಸಸಿಗಳನ್ನು ಕಿತ್ತು, ಗುಡಿಸಿ ಶುಚಿಗೊಳಿಸಿದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಪ್ರಾಂಶುಪಾಲರಾದ ಸುಮಿತ್ರಾ ಕೆ.ಎಸ್., ಆಡಳಿತ ಅಧಿಕಾರಿ ರವಿ.ಪಿ ನೆರವೇರಿಸಿದರು. ಶಾಲೆಯ ಎನ್ ಸಿ ಸಿ ಅಧಿಕಾರಿ ಮೇಜರ್ ದಾಮೋದರ ಗೌಡ ಹಾಗೂ ಎನ್ ಸಿ ಸಿ ಸಿಬ್ಬಂದಿಗಳು ಹಾಜರಿದ್ದರು.
ಮಡಿಕೇರಿ ಜು.26 NEWS DESK : ಮಡಿಕೇರಿ ಕೊಡವ ಸಮಾಜ, ಕೊಡವ ಸಮಾಜ ಪೊಮ್ಮಕ್ಕಡ ಒಕ್ಕೂಟ ಮತ್ತು ನಗರದ ಕೊಡವ ಕೇರಿಗಳ ಸಂಯುಕ್ತಾಶ್ರಯದಲ್ಲಿ ಆ.3 ರಂದು ಸಾಂಪ್ರದಾಯಿಕ 8ನೇ ವರ್ಷದ ‘ಕಕ್ಕಡ ಒತ್ತೊರ್ಮೆ ಕೂಟ’ವನ್ನು ಆಯೋಜಿಸಲಾಗಿದೆ ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಎಂ.ಪಿ.ಮುತ್ತಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಗಾರಿನ ಅವಧಿಯಲ್ಲಿ ಬರುವ ಕಕ್ಕಡ ಮಾಸದಲ್ಲಿ, ದೇಹದ ಉಷ್ಣತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮದ್ದ್ ಸೊಪ್ಪು ಮತ್ತಿತರ ಖಾದ್ಯ ಪದಾರ್ಥಗಳನ್ನು ಮಾಡಲಾಗುತ್ತದೆ. ಇವುಗಳನ್ನು ಯುವ ಸಮೂಹಕ್ಕೆ ಪರಿಚಯಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಅಂದು ಬೆಳಗ್ಗೆ 10 ಗಂಟೆಗೆ ನಗರದ ಕೊಡವ ಸಮಾಜದ ಸಭಾಂಗಣದಲ್ಲಿ ಕಕ್ಕಡ ನಮ್ಮೆ ಒತ್ತೊರ್ಮೆ ಕೂಟ ಆರಂಭಗೊಳ್ಳಲಿದೆ. ಜಿಲ್ಲೆಯ ಶಾಸಕರುಗಳಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಎಂಎಲ್ಸಿ ಶಾಂತೆಯಂಡ ವೀಣಾ ಅಚ್ಚಯ್ಯ, ಸಮಾಜ ಸೇವಕಿ ಕಾಂಚನ ಪೊನ್ನಣ್ಣ ಹಾಗೂ ಸಮಾಜ ಸೇವಕಿ ದಿವ್ಯಾ ಮಂತರ್ ಗೌಡ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.…
ಮಡಿಕೇರಿ ಜು.26 NEWS DESK : ಭಾಗಮಂಡಲ ಹೋಬಳಿ ಕರಿಕೆ ಗ್ರಾಮದ ಸುಮತಿ ಎಂಬವರ ವಾಸದ ಮನೆಯ ಮೇಲೆ ಮರ ಬಿದ್ದು ಶೀಟ್ ಗಳು ಹಾನಿಯಾಗಿದೆ. ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಮಡಿಕೇರಿ ಜು.26 NEWS DESK : ವಿರಾಜಪೇಟೆ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಗಾಳಿಗೆ ಕೆದಮುಳ್ಳೂರು ಗ್ರಾಮದ ಚುರಿಯಾಲ್ನಲ್ಲಿರುವ ಪನ್ನಂಗಾಲತ್ತಮ್ಮೆ ಗುಡಿಯ ಮೇಲೆ ಮರ ಬಿದ್ದು ಹಾನಿಯಾಗಿದೆ. ದೇವಾಲಯದ ಅರ್ಧ ಭಾಗದಷ್ಟು ಹಾನಿಗೀಡಾಗಿದ್ದು, ಯಾರೂ ಇಲ್ಲದ್ದರಿಂದ ಅನಾಹುತ ತಪ್ಪಿದೆ. ಸ್ಥಳಕ್ಕೆ ವಿರಾಜಪೇಟೆ ತಹಶೀಲ್ದಾರರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಮಡಿಕೇರಿ ಜು.26 NEWS DESK : ಕೊಡಗಿನಲ್ಲಿ ಪ್ರವಾಸೋದ್ಯಮಿಗಳು ಒಗ್ಗಟ್ಟಿನಿಂದ ಪರಿಸರ ಸ್ನೇಹಿಯಾದ ವಿನೂತನ ಯೋಜನೆ ಜಾರಿಗೆ ಮುಂದಾದರೆ ಖಂಡಿತವಾಗಿಯೂ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉಜ್ವಲ ಭವಿಷ್ಯವಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿಪ್ರಾಯಪಟ್ಟಿದ್ದಾರೆ. ಕೊಡಗಿನ ನಿಸಗ೯ ಸಂಪತ್ತು, ಶ್ರೀಮಂತ ಸಂಸ್ಕೃತಿಯನ್ನೂ ಪ್ರವಾಸೋದ್ಯಮಿಗಳು ಸುರಕ್ಷಿತವಾಗಿ ಕಾಪಾಡಿಕೊಳ್ಳುವ ನಿಟ್ಟಿನಲ್ಲಿಯೂ ಗಮನ ನೀಡಬೇಕೆಂದು ಅವರು ಕಿವಿಮಾತು ಹೇಳಿದ್ದಾರೆ. ನಗರದ ಹೊರವಲಯದಲ್ಲಿನ ವೈಲ್ಡರ್ ನೆಸ್ ರೆಸಾಟ್೯ನಲ್ಲಿ ಕೂಗ್೯ ಹೋಟೆಲ್ಸ್, ರೆಸಾಟ್೯ ಅಸೋಸಿಯೇಷನ್ ನ ನೂತನ ವೆಬ್ ಸೈಟ್, ಲಾಂಛನ ಅನಾವೋರಣಗೊಳಿಸಿ ಕಾಯ೯ಕ್ರಮ ಉದ್ಘಾಟಿಸಿ ಜಿಲ್ಲಾಧಿಕಾರಿ ಮಾತನಾಡಿದರು. ಕುಶಾಲನಗರ – ಮಡಿಕೇರಿ ನಡುವಿನ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲು ಖಾಸಗಿ ಜಾಗ ದೊರಕಿದರೆ, ಶೌಚಾಲಯ, ಮಿನಿ ರೆಸ್ಟೋರೆಂಟ್ ವ್ಯವಸ್ತೆ ಕಲ್ಪಿಸಲು ಸಕಾ೯ರದಿಂದ ಸಾಧ್ಯವಿದೆ. ಸದ್ಯದಲ್ಲಿಯೇ ಮೈಸೂರು – ಕುಶಾಲನಗರ ನಡುವಿನ ಚತುಷ್ಪಥ ಹೆದ್ದಾರಿ ಕಾಮಗಾರಿ ಮುಕ್ತಾಯವಾದ ನಂತರ ಕುಶಾಲನಗರದಲ್ಲಿ ವಾಹನ ದಟ್ಟಣೆ ಇಳಿಮುಖವಾಗುವ ಸಾಧ್ಯತೆಯಿದೆ ಎಂದರಲ್ಲದೇ, ಮಡಿಕೇರಿಯಲ್ಲಿ ವಾಹನ ದಟ್ಟಣೆ ಮತ್ತು ವಾಹನ ನಿಲುಗಡೆ ಸಮಸ್ಯೆ ನಿವಾರಿಸಲು…






