ಮಡಿಕೇರಿ NEWS DESK ಮಾ.10 : ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ವಿರಾಜಪೇಟೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಿ.ಪಿ.ಕವಿತಾ ಅಧಿಕಾರ ಸ್ವೀಕರಿಸಿದ್ದಾರೆ. ಈ ಸಂದರ್ಭ ಗ್ರಾ.ಪಂ ಯ ನಿಕಟಪೂರ್ವ ಅಧ್ಯಕ್ಷ ಆಪಟ್ಟೀರ ಟಾಟು ಮೊಣ್ಣಪ್ಪ, ಅಭಿವೃದ್ಧಿ ಅಧಿಕಾರಿ ಹೆಚ್.ಟಿ.ಸುಕೇಶ್, ಕಾರ್ಯದರ್ಶಿ ಬಿ.ಬಿ.ಪೆಮ್ಮಯ್ಯ, ಸಿಬ್ಬಂದಿಗಳಾದ ಸಚಿತ್ ಟಿ.ಜಿ, ಬಾನಂಡ ಪದ್ಮಿನಿ ಸುದನ್ ಹಾಗೂ ಎನ್.ಆರ್.ಗುರು ಹಾಜರಿದ್ದರು. ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಪಿ.ಪಿ.ಕವಿತಾ ಅವರು ಮಾಯಮುಡಿ ಗ್ರಾ.ಪಂ ಕುರಿತು ಮಾಹಿತಿ ಪಡೆದರು.
ಲೇಖಕ: admin
ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ ಹಾಗೂ ಮಾನವನ ನಡುವಿನ ಸಂಘರ್ಷ ಕೈಮೀರಿ ಹೋಗಿದೆ. ಕಳೆದ 10 ದಿನಗಳಲ್ಲಿ ಕಾಡಾನೆ ದಾಳಿಗೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಆದರೆ ಅರಣ್ಯ ಸಚಿವರು ಮಾತ್ರ ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿಲ್ಲವೆಂದು ಬಿಜೆಪಿ ವಿರಾಜಪೇಟೆ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅರಣ್ಯ ಸಚಿವರಿಗೆ ಅರಣ್ಯ ಖಾತೆಯ ಜವಾಬ್ದಾರಿಯನ್ನು ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ. ಕೊಡಗು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ವನ್ಯಜೀವಿಗಳ ದಾಳಿಯ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎಲ್ಲೆಂದರಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ, ಇದೇ ಫೆ.28 ರಂದು ಕಾಡಾನೆ ದಾಳಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸಾವಿಗೀಡಾದ ಘಟನೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಇದೀಗ ಕುಶಾಲನಗರ ತಾಲ್ಲೂಕಿನ ಬಾಳೆಗಂಡಿ ಎಂಬಲ್ಲಿ ಜಲಜಾಕ್ಷಿ ಎಂಬುವವರು ಜೀವ ಕಳೆದುಕೊಂಡಿದ್ದಾರೆ. ಆದರೆ ಅರಣ್ಯ ಸಚಿವರು ಮಾತ್ರ ಈ ಘಟನೆಗಳಿಗೂ ತಮಗೂ…
ಮಡಿಕೇರಿ NEWS DESK ಮಾ.10 : ಕಾಡಾನೆ ದಾಳಿಯಿಂದ ದುರದೃಷ್ಟವಶಾತ್ ಮೃತಪಟ್ಟ ಜಲಜಾಕ್ಷಿ ಅವರ ಬಾಳೆಗುಂಡಿ ಹಾಡಿ ನಿವಾಸಕ್ಕೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಮೃತ ಜಲಜಾಕ್ಷಿ ಅವರ ಕುಟುಂಬದ ಸದಸ್ಯರುಗಳಿಗೆ ಸಾಂತ್ವನ ಹೇಳಿದ ಶಾಸಕರು ಮೊದಲ ಹಂತದ ಪರಿಹಾರ ರೂ.5 ಲಕ್ಷ ರೂಪಾಯಿಗಳ ಚೆಕ್ ನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ನಂತರ ಮಾತನಾಡಿದ ಶಾಸಕರು ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ. ಈ ಹಿನ್ನೆಲೆಯಲ್ಲಿ ದಾಳಿ ಮಾಡಿದ ಕಾಡಾನೆ ಸೆರೆಗೆ ತಕ್ಷಣ ಕಾರ್ಯಪ್ರವೃತ್ತವಾಗುಂತೆ ಅರಣ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಆನೆ- ಮಾನವ ಸಂಘರ್ಷ ತಡೆಗೆ ಶಾಶ್ವತ ಪರಿಹಾರ ಸೂಚಿಸಲು ತಿಳಿಸಲಾಗಿದೆ ಎಂದರು.
ಮಡಿಕೇರಿ NEWS DESK ಮಾ.10 : ಮಡಿಕೇರಿ- ಮುಕ್ಕೋಡ್ಲು- ಹಮ್ಮಿಯಾಲ ನಡುವೆ ಸಂಚರಿಸುತ್ತಿದ್ದ ಬಸ್ ನಿಯಮಿತವಾಗಿ ಬಾರದೆ ಇರುವುದರಿಂದ ಗ್ರಾಮಸ್ಥರು ಸಮಸ್ಯೆ ಎದುರಿಸುತ್ತಿದ್ದರು. ಮಡಿಕೇರಿಯ ಕೆಎಸ್ಆರ್ಟಿಸಿ ಡಿಪೋ ಅಧಿಕಾರಿಗಳಿಗೆ ಅನೇಕ ಬಾರಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು ನೇರವಾಗಿ ಶಾಸಕ ಡಾ.ಮಂತರ್ ಗೌಡ ಅವರಿಗೆ ದೂರು ಸಲ್ಲಿಸಿದರು. ಇದಕ್ಕೆ ತಕ್ಷಣ ಸ್ಪಂದಿಸಿದ ಶಾಸಕರು ಮಡಿಕೇರಿ ಕೆಎಸ್ಆರ್ಟಿಸಿ ಡಿಪೋದಲ್ಲಿ ಹಮ್ಮಿಯಾಲ ಗ್ರಾಮಸ್ಥರ ಸಮ್ಮುಖದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮಡಿಕೇರಿ- ಮುಕ್ಕೋಡ್ಲು- ಹಮ್ಮಿಯಾಲ ಭಾಗದ ಸಾರಿಗೆ ಸಮಸ್ಯೆಯನ್ನು ತಕ್ಷಣ ಬಗೆಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇದೀಗ ಗ್ರಾಮದ ಜನರ ಬೇಡಿಕೆಯಂತೆ ಮಡಿಕೇರಿ – ಮುಕ್ಕೋಡ್ಲು- ಹಮ್ಮಿಯಾಲ ನಡುವಿನ ಬಸ್ ವ್ಯವಸ್ಥೆಯನ್ನು ಕಾರ್ಯರೂಪಕ್ಕೆ ತರಲಾಗಿದೆ.
ಮೈಸೂರು ಮಾ.9 NEWS DESK : ವಿಶ್ವಮಟ್ಟದಲ್ಲಿ ಖ್ಯಾತಿ ತಂದುಕೊಟ್ಟಿರುವ ಮೈಸೂರು ಸಿಲ್ಕ್ಸ್ ಪ್ರಿಯರಿಗೆ ಸಂತಸದ ಸುದ್ದಿ. ಟಿ. ನರಸೀಪುರದ ಕೆಎಸ್ಐಸಿ ಫಿಲೇಚರ್ ಕಾರ್ಖಾನೆ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದ ಸ್ಡೇಡಿಯಂ ಯೋಜನೆಯನ್ನು ಸರ್ಕಾರ ಕೈಬಿಟ್ಟಿದೆ. ಇದು ನಿಜಕ್ಕೂ ಸಂತಸದ ಸುದ್ದಿ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಸ್ಡೇಡಿಯಂ ನಿರ್ಮಾಣ ಯೋಜನೆಯನ್ನು ಕೈಬಿಡಲಾಗಿದೆ ಎಂದು ಸಚಿವ ಕೆ.ವೆಂಕಟೇಶ್ ವಿಧಾನ ಮಂಡಲ ಅಧಿವೇಶನದಲ್ಲಿ ಘೋಷಣೆ ಮಾಡಿರುವ ಕುರಿತು ಯದುವೀರ್ ಒಡೆಯರ್ ಪ್ರತಿಕ್ರಿಯೆ ನೀಡಿದರು. ಸರ್ಕಾರದ ಈ ತೀರ್ಮಾವನ್ನು ಸ್ವಾಗತಿಸುತ್ತೇನೆ. ಇದು ಸಂಘಟಿತ ಹೋರಾಟಕ್ಕೆ ಸಿಕ್ಕಿರುವ ಜಯ. ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ನಾನೂ ಸೇರಿದಂತೆ ನಮ್ಮ ಬಿಜೆಪಿಯ ಹಲವಾರು ನಾಯಕರು ಭಾಗವಹಿಸಿದ್ದರು. ಈಗ ಸರ್ಕಾರ ಯೋಜನೆ ಕೈಬಿಟ್ಟಿರುವುದು ಸ್ವಾಗತಾರ್ಹ ಎಂದರು. ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಅವರೊಂದಿಗೆ ಪಾಲ್ಗೊಂಡು ನೈತಿಕವಾಗಿ ಬೆಂಬಲ ನೀಡಿದ್ದೆ. ನಂತರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ಸ್ಡೇಡಿಯಂ ನಿರ್ಮಾಣ ಯೋಜನೆ ಕೈಬಿಡುವಂತೆ ವೈಯಕ್ತಿಕವಾಗಿ ಮನವಿಯನ್ನೂ…
ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ.
ವಿರಾಜಪೇಟೆ ಮಾ.9 NEWS DESK : ವಿರಾಜಪೇಟೆ ಪುರಸಭೆಯಲ್ಲಿ ಮುಖ್ಯ ರಸ್ತೆಯ ಬದಿಗಳಲ್ಲಿರುವ ಕಟ್ಟಡದ ಮಾಲೀಕರಿಗೆ ಕಾನೂನು ರೀತಿಯ ಪರಿಹಾರಕ್ಕಾಗಿ ಮತ್ತು ಹಲವು ಮಂಡನೆಗಳ ಅಂಗೀಕಾರಕ್ಕೆ ಒತ್ತಾಯಿಸಿ ವಿರಾಜಪೇಟೆ ಪುರಸಭೆ ಕಚೇರಿ ಮುಂದೆ ಮಾ.12 ರಂದು ನಾಗರಿಕ ಸಮಿತಿ ಮತ್ತು ಸಾರ್ವಜನಿಕ ಕಾರ್ಯಕರ್ತರ ಕೂಟದ ಸಂಯುಕ್ತ ಹೋರಾಟ ಸಮಿತಿ ವತಿಯಿಂದ ನಡೆಯುವ ಹೋರಾಟ, ಹಕ್ಕೋತ್ತಾಯಕ್ಕೆ ವಿರಾಜಪೇಟೆಯ ಸಿಪಿಐಎಂ ಪಕ್ಷದ ಘಟಕದಿಂದ ಸಂಪೂರ್ಣವಾಗಿ ಬೆಂಬಲಿಸುವುದಾಗಿ ಮತ್ತು ಹೋರಾಟದಲ್ಲಿ ಭಾಗವಹಿಸುವುದಾಗಿ ಸಿಪಿಐಎಂ ವಿರಾಜಪೇಟೆ ಘಟಕ ಕಾರ್ಯದರ್ಶಿ ಕೆ.ಎಸ್ ರಮೇಶ್ (ಶಾಜಿ)ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ರಮೇಶ್ ಅವರು, ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ನಾಗರಿಕ ಸಮಿತಿ ಮತ್ತು ಇನ್ನಿತರ ಜನಪರ ಕಾಳಜಿ ಉಳ್ಳ ಸಂಘಟನೆಗಳು ನಡೆಸುವ ಹೋರಾಟಕ್ಕೆ ನಮ್ಮ ಸಂಘಟನೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ತಿಳಿಸಿದ್ದಾರೆ.
ಮಡಿಕೇರಿ ಮಾ.9 NEWS DESK : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ, ನೀರು, ಕಾಡು, ಪರಿಸರಗಳನ್ನು ಪೂಜಿಸುವುದು ಮತ್ತು ವೀರ ಪರಂಪರೆ ಇವು ಕೊಡಗಿನ ಸಂಸ್ಕೃತಿ ಎಂದು ಕೊಡಗು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಧೋಶ್ ಪೂವಯ್ಯ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಗೋಣಿಕೊಪ್ಪಲು ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ 2025-26ನೇ ಸಾಲಿನ ದಿ.ಇರುವೈಲು ರಘುರಾಮ ಅಸ್ರಣ್ಣ ಮತ್ತು ಲೀಲಾ ಅಸ್ರಣ್ಣ ಜ್ಞಾಪಕಾರ್ಥ ದತ್ತಿ ಕಾರ್ಯಕ್ರಮದ ಆಶಯದಂತೆ ಕೊಡಗಿನ ಸಾಂಸ್ಕೃತಿಕ ಚಿಂತನೆ ಕುರಿತು ಉಪನ್ಯಾಸ ನುಡಿದರು. ಕೊಡಗಿನ ಬೇರೆ ಬೇರೆ ಜನಾಂಗಗಳು ತಮ್ಮದೇ ಆದ ರೀತಿಯಲ್ಲಿ ಜನಪದ ಹಾಡು ಮತ್ತು ನೃತ್ಯಗಳ ಮೂಲಕ ಕೊಡಗಿನ ಸಂಸ್ಕೃತಿಗೆ ಕೊಡುಗೆ ನೀಡಿದ್ದಾರೆ. ಕೊಡವ ಜನಾಂಗದ ದುಡಿಕೊಟ್ಟ್ ಪಾಟ, ಬಾಳೋಪಾಟ, ಮಂಗಲಪಾಟ, ದೇವಡಪಾಟ, ಬೆಂದುಪಾಟ, ಕೊಡಗಿನ ಜಾನಪದ ನೃತ್ಯಗಳಾದ ಉಮ್ಮತ್ತಾಟ್, ಬೊಳ್ಕಾಟ್, ಕತ್ತಿಯಾಟ್,…
ಮಡಿಕೇರಿ ಮಾ.9 NEWS DESK : ಪಂಜರಪೇಟೆಯ ಕೊಡವ ಕೇರಿಯ ವತಿಯಿಂದ ಹೆಗ್ಗಳ ಗ್ರಾಮದ ವೃದ್ಧಾಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಅನಾಥಾಶ್ರಮಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಆರೋಗ್ಯ ವಿಚಾರಿಸಲಾಯಿತು. ಸುಮಾರು 42 ವಾಸಿಗಳಿಗೆ ಕೇರಿಯ ವತಿಯಿಂದ ಮೊಟ್ಟೆ, ಪರೋಟ, ಪಪ್ಸ್, ಕಲ್ಲಂಗಡಿ, ಬ್ರಷ್, ಬಟ್ಟೆ, ಸಾಬೂನು, ಪೇಸ್ಟ್, ಟವಲ್, ಬಿಸ್ಕೆಟ್ಸ್, ಸೊಳ್ಳೆ ಬತ್ತಿ, ಜ್ಯೂಸ್ ಸೇರಿದಂತೆ ಅಗತ್ಯ ಸಾಮಾಗ್ರಿಗಳನ್ನು ವಿತರಿಸಲಾಯಿತು. ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದವು. ಕೇರಿಯ ಪರವಾಗಿ ಅಧ್ಯಕ್ಷರಾದ ವಾಂಚೀರ ನಾಣಯ್ಯ, ಸದಸ್ಯರಾದ ಡಿ.ಸಿ.ಧ್ರುವಕುಮಾರ್, ಚರ್ಮನ್, ಸುರೇಶ್, ಪರದಂಡ ವಿಠಲ, ಅಶ್ವಿನಿ, ನವಿತಾ, ಧ್ರುವ, ದೇಶ್ ಹಾಜರಿದ್ದರು.
ಮಡಿಕೇರಿ ಮಾ.9 NEWS DESK : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೊಡವ ಕೂಟಾಳಿಯಡ ಕೂಟದ ವತಿಯಿಂದ ಸಾಧಕ ಕೊಡವ ಮಹಿಳೆಯರನ್ನು ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಾರಮಾಡ ಮಾಚಮ್ಮ, ಕಾಡ್ಯಮಾಡ ರೀಟಾ ಬೋಪಯ್ಯ, ಕರೋಟಿರ ಶಶಿ ಸುಬ್ರಮಣಿ, ಮಾಳೇಟಿರ ಸೀತಮ್ಮ ವಿವೇಕ್ ಅವರನ್ನು ಕೂಟದ ಪ್ರಮುಖರು ಹಾಗೂ ಪದಾಧಿಕಾರಿಗಳು ಅವರ ಮನೆಗೆ ತೆರಳಿ ಸನ್ಮಾನಿಸಿ, ಗೌರವಿಸಿರು. ಈ ಸಂದರ್ಭ ಕೂಟದ ಅಧ್ಯಕ್ಷರಾದ ಚೊಟ್ಟಂಡ ಪ್ರಭು ಸೋಮಯ್ಯ, ಕಾರ್ಯದರ್ಶಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು.






