ಲೇಖಕ: admin

ಮಡಿಕೇರಿ ಜು.26 NEWS DESK :  ಜಿಲ್ಲೆಯಲ್ಲಿ  ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದಾಗಿ ಕೊಡಗಿನ  ವಿವಿಧೆಡೆ ಹಾನಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.  ಸಂಪಾಜೆ ವ್ಯಾಪ್ತಿಯ ಮೇಕೇರಿ ಗ್ರಾಮದ ಸುಭಾಸ್ ನಗರದ  ನಸೀಮಾ ಎಂಬವರ ಮನೆಯ ಮೇಲೆ ಮರ ಬಿದ್ದು ಭಾಗಶಃ ಹಾನಿ ಉಂಟಾಗಿದೆ.  ಡಬ್ಬಡ್ಕ ಗ್ರಾಮದ ಮುಕ್ಕಾಟಿ ತಮ್ಮಯ್ಯ ಎಂಬುವರ ಮನೆಯ ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿಯಾಗದ್ದು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶನಿವಾರಸಂತೆ ಹೋಬಳಿ ಕೊರಲಳ್ಳಿ ಗ್ರಾಮದ ಸುಕನ್ಯಾ  ಎಂಬುವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಕೆದಮಳ್ಳೂರು ಗ್ರಾಮದ ಚೂರಿಯಾಲದ ದೇವಸ್ಥಾನದ ಮೇಲೆ ಮರ ಬಿದ್ದು ದೇವಸ್ಥಾನವು ಅರ್ಧಕ್ಕಿಂತ ಹೆಚ್ಚು ಹಾನಿಯಾಗಿದ್ದು, ಸ್ಥಳಕ್ಕೆ ವಿರಾಜಪೇಟೆ ತಹಶಿಲ್ದಾರರು ಭೇಟಿ ನೀಡಿ ಪರಿಶೀಸಿದ್ದಾರೆ. ಅಮ್ಮತ್ತಿ ಹೋಬಳಿ ಬಿಳುಗುಂದ ಗ್ರಾಮದ ಹೆಚ್.ಟಿ.ಗಣೇಶ್ ಎಂಬುವರ ವಾಸದ ಮನೆಯ ಹಿಂಬದಿಯ ಗೋಡೆ ಮತ್ತು ಮೇಲ್ಚಾವಣಿ ಮಳೆಯಿಂದ ಕುಸಿದು ಬಿದ್ದು ತೀವ್ರ ಹಾನಿಯಾಗಿದೆ. ಮಡಿಕೇರಿ -ಸೋಮವಾರಪೇಟೆ ಮಾರ್ಗದ ರಸ್ತೆ ಕಾಜೂರು ಬಳಿ ಮರ ರಸ್ತೆಗೆ…

Read More

ಕುಶಾಲನಗರ ಜು.26 NEWS DESK :  ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ವಿದ್ಯಾರ್ಥಿನಿ ವಿ.ಜೆ.ಜಾಯ್ಸ್ ಲೀನಾ 2024-25ನೇ ಶೈಕ್ಷಣಿಕ ಸಾಲಿನ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ರ‍್ಯಾಂಕ್ ಗಳಿಸಿದ್ದಾರೆ. ಕೊಡಗು ಜಿಲ್ಲೆಯ ಏಕೈಕ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಇದೇ ಪ್ರಥಮ ಬಾರಿಗೆ ಈ ಗೌರವಕ್ಕೆ ಭಾಜನವಾಗಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಫಲಿತಾಂಶ ಪ್ರಕಟಿಸಿದ್ದು, ರ‍್ಯಾಂಕ್ ಪಟ್ಟಿ ಬಿಡುಗಡೆ ಮಾಡಿದೆ. ಇತ್ತೀಚೆಗೆ ಬೆಳಗಾಂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ 25ನೇ ಘಟಿಕೋತ್ಸವದಲ್ಲಿ ಜಾಯ್ಸ್ ಲೀನಾ ಅವರಿಗೆ ಪ್ರಮಾಣ ಪತ್ರ ನೀಡಲಾಯಿತು. ಕುಶಾಲನಗರ ಪಟ್ಟಣದ ಬಸವೇಶ್ವರ ಬಡಾವಣೆಯ ಆಟೋ ಚಾಲಕ ಜೋಸೆಫ್ ವಂದನಾಥ್ ಮತ್ತು ಜೋಸೆಫಿನ್ ದಂಪತಿಗಳ ಪುತ್ರಿ ಜಾಯ್ಸ್ ಲೀನಾ ಕುಶಾಲನಗರ ಫಾತಿಮಾ ಕಾನ್ವೆಂಟ್ ನಲ್ಲಿ ತನ್ನ ಪ್ರಾಥಮಿಕ ಶಿಕ್ಷಣ ಮುಗಿಸಿ, ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಮಾಡಿ ನಂತರ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು.

Read More

ಸೋಮವಾರಪೇಟೆ ಜು.26 NEWS DESK : ಮನೆಯ ಗೋಡೆ ಕುಸಿದು ಕಾರ್ಮಿಕ‌ ಮಹಿಳೆ ಮೃತಪಟ್ಟ ಸ್ಥಳಕ್ಕೆ ಮಾಜಿ ಶಾಸಕ ಎಂ.ಪಿ.ಅಪ್ಪಚುರಂಜನ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಹಾನಗಲ್ಲು ಗ್ರಾಮದಲ್ಲಿ ಮನೆಯ ಗೋಡೆಕುಸಿದು ಸುಷ್ಮಾ ಎಂಬ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮನೆಯೊಳಗಿದ್ದ ಮೂವರು ಮಕ್ಕಳು ಹಾಗೂ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ರಂಜನ್ ಘಟನೆಯ ಬಗ್ಗೆ ಮಾಹಿತಿ ಪಡೆದು ಬೇಸರ ವ್ಯಕ್ತಪಡಿಸಿದರು.  ಕುಟುಂಬವರ್ಗಕ್ಕೆ ಸಾಂತ್ವಾನ ಹೇಳುವುದರೊಂದಿಗೆ, ದೈರ್ಯತುಂಬಿದರು. ಈ ಸಂದರ್ಭ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಕಿಸಿದ ಅವರು ಅಗತ್ಯ ತುರ್ತು ಕ್ರಮಕೈಗೊಳ್ಳುವಂತೆ ತಿಳಿಸಿದರು. ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್, ಕಾರ್ಯದರ್ಶಿ ಸೋಮೇಶ್ ಹಾಗೂ ಮುಂತಾದವರು ಹಾಜರಿದ್ದರು.

Read More

ಮಡಿಕೇರಿ ಜು.26 NEWS DESK : ಪೆರಾಜೆ ವಲಯ ಕಾಂಗ್ರೆಸ್ ಸಮಿತಿ ಹಾಗೂ ಕಾರ್ಯಕರ್ತರ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪೆರಾಜೆ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ನಡೆದ ಸಭೆಯಲ್ಲಿ ಪಕ್ಷ ಸಂಘಟನೆ, ಪಕ್ಷದಲ್ಲಿನ ಆಂತರಿಕ ವಿಷಯಗಳು ಕುರಿತು ಸುದೀರ್ಘ ಚರ್ಚೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಪೆರಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ  ಜಯರಾಮ್ ಪೆರುಮುಂಡ, ಕೊಲ್ಯದ ಗಿರಿಶ್, ರಮನಾಥ್ ಬೇಕಲ್, ನೆರವಂಡ ಉಮೇಶ್, ಸುರೇಶ್ ಪೆರುಮುಂಡ, ಟಿ.ಎಂ.ಶಹೀದ್, ಸೂರಜ್ ಹೊಸೂರು, ಡಿಸಿಸಿ ಪದಾಧಿಕಾರಿಗಳು, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.  

Read More

ಮಡಿಕೇರಿ NEWS DESK ಜು.26 : ಸೋಮವಾರಪೇಟೆ ತಾಲ್ಲೂಕಿನಲ್ಲಿ ಭಾರೀ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಕುಂಬೂರು ಗ್ರಾಮದಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಮರ ಬಿದ್ದು ಹಾನಿಯಾಗಿದೆ. ಆಟೋ ಚಾಲಕ ಕುಂಬೂರು ಗ್ರಾಮದ ನಿವಾಸಿ ಪ್ರವೀಣ್ ಹಾಗೂ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

Read More

ಮಡಿಕೇರಿ ಜು.26 NEWS DESK : ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ 2025-26 ನೇ ಸಾಲಿಗೆ ಪ್ರಥಮ ಬಿ.ಎ ತರಗತಿಗಳಿಗೆ ಹೆಣ್ಣುಮಕ್ಕಳಿಗೆ ಉಚಿತ ಪ್ರವೇಶಾತಿ ನೀಡಲಾಗುವುದು. ಈ ಕಾಲೇಜಿಗೆ ಪ್ರವೇಶ ಪಡೆಯಲು ಇಚ್ಛಿಸಿರುವ ವಿದ್ಯಾರ್ಥಿನಿಯರು ಕಛೇರಿಯಿಂದ ಅರ್ಜಿಯನ್ನು ಪಡೆದುಕೊಂಡು ಭರ್ತಿಮಾಡಿ ಸೂಕ್ತ ದಾಖಾಲಾತಿಗಳೊಂದಿಗೆ ಪ್ರವೇಶ ಪಡೆಯಲು ಸೂಚಿಸಲಾಗಿದೆ. ಅರ್ಜಿ ಸಲ್ಲಿಸಲು 31/07/2025 ಕಡೆಯ ದಿನ  ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು. 9483826271 9008140516, 991639338, 9449946142.

Read More

ಮಡಿಕೇರಿ ಜು.26 NEWS DESK :  ಪೆರಾಜೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಆಟೋರಿಕ್ಷಾ ತಂಗುದಾಣವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕರನ್ನು ಆಟೋ ಚಾಲಕರು ಹಾಗೂ ಸ್ಥಳೀಯರು  ಆತ್ಮೀಯವಾಗಿ ಬರಮಾಡಿಕೊಂಡು ಧನ್ಯವಾದ ಅರ್ಪಿಸಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ  ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ವಲಯ ಅಧ್ಯಕ್ಷರಾದ ಜಯರಾಮ್ ಪೆರುಮುಂಡ, ಪಕ್ಷದ ಪ್ರಮುಖರಾದ ಕೊಲ್ಯದ ಗಿರಿಶ್, ರಮನಾಥ್ ಬೇಕಲ್, ನೆರವಂಡ ಉಮೇಶ್, ಸುರೇಶ್ ಪೆರುಮುಂಡ, ಟಿ.ಎಂ.ಶಹೀದ್, ಸೂರಜ್ ಹೊಸೂರು, ಚುನಾಯಿತ ಜನಪ್ರತಿನಿಧಿಗಳು, ಸರಕಾರಿ ನಾಮನಿರ್ದೇಶಿತ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಡಿಸಿಸಿ ಪದಾಧಿಕಾರಿಗಳು, ವಲಯದ ಪ್ರಮುಖರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಈ ಭಾಗದಲ್ಲಿ ಆಟೋರಿಕ್ಷಾ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಸುಸಜ್ಜಿತ ಆಟೋ ತಂಗುದಾಣದ ಅಗತ್ಯತೆಯನ್ನು ಮನಗಂಡಿದ್ದ ಶಾಸಕರು ಈ ಹಿಂದೆ ಇದಕ್ಕಾಗಿ ಅನುದಾನ ಒದಗಿಸಿದ್ದರು.

Read More

ಮೈಸೂರು ಜು.26 NEWS DESK :  ಮೈಸೂರು ಕಲ್ಚರಲ್ ಅಸೋಸಿಯೇಷನ್, ವಿಸ್ಮಯ ಪ್ರಕಾಶನ ಹಾಗೂ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಸಹಯೋಗದಲ್ಲಿ ಮೈಸೂರಿನ ಸಂಗೀತ ವಿವಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರ ಮೂರು ಕೃತಿಗಳ ಲೋಕಾರ್ಪಣೆಗೊಂಡಿತು.  ಸುತ್ತೂರು ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯವಹಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಪೊಲೀಸ್ ಅಕಾಡೆಮಿ ಸಹಾಯಕ ನಿರ್ದೇಶಕ ಸಂದೇಶ್ ಕುಮಾರ್ ಅವರು ಮೈಸೂರು ವೃತ್ತಗಳ ವೃತ್ತಾಂತ, ಮಹಾವೀರ ಚಕ್ರ ಪುರಸ್ಕೃತ ವೀರ ಸೇನಾನಿ ಲೆಫ್ಟಿನೆಂಟ್ ಕರ್ನಲ್ ಪಿ.ಎಸ್. ಗಣಪತಿ ಅವರು ಸಿಂದೂರ, ಶಾಸಕ ಟಿ.ಎಸ್. ಶ್ರೀವತ್ಸ ಅವರು ಮೈಸೂರಿನ ಗಲ್ಲಿ ಕಥೆ ಪುಸ್ತಕವನ್ನು ಬಿಡುಗಡೆಗೊಳಿಸಿದರು.  ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದ ಸುತ್ತೂರು ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಅವರು, ಮೂರು ಕೃತಿಗಳ ವಿಷಯ ಆಯ್ಕೆ ವಿಭಿನ್ನವಾಗಿದೆ. ಗಲ್ಲಿ, ರಸ್ತೆಗಳ ಮಹತ್ವದ ಕುರಿತು ಬರೆಯುವುದು ಉತ್ತಮ ಪ್ರಯೋಗವಾಗಿದೆ. ಸೇನಾನಿಯಾಗುವ ಆಕಾಂಕ್ಷೆ ಹೊಂದಿದ್ದ ರಮೇಶ್ ಉತ್ತಪ್ಪ…

Read More

ಸೋಮವಾರಪೇಟೆ ಜು.26 NEWS DESK : ಸಮೀಪದ ಕಾನ್ವೆಂಟ್ ಬಾಣೆಯ ಅಂಗನವಾಡಿಗೆ ಶಾಸಕ ಡಾ. ಮಂತರ್ ಗೌಡ ಅವರು ಭೇಟಿ ನೀಡಿ ಪರಿಶೀಲಿಸಿದರು. ಅಂಗನವಾಡಿಯಲ್ಲಿ ಮಕ್ಕಳ ಸಂಖ್ಯೆ, ನೀಡುತ್ತಿರುವ ಆಹಾರ ಮತ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದ ಅವರು, ಕೇಂದ್ರವನ್ನು ಸರಿಯಾಗಿ ನೋಡಿಕೊಳ್ಳುವುದರೊಂದಿಗೆ, ಮಕ್ಕಳಿಗೆ ಕಾಲ ಕಾಲಕ್ಕೆ ಸರ್ಕಾರ ನಿಗದಿಗೊಳಿಸಿರುವ ಆಹಾರವನ್ನು ವಿತರಿಸಬೇಕು ಎಂದು ತಿಳಿಸಿದರು. ಇದೇ ಸಂದರ್ಭ ಅಂಗನವಾಡಿ ಶಿಕ್ಷಕಿ ಬೊಳ್ಳಮ್ಮ ಅವರು,  ಕಟ್ಟಡ ಶಿಥಿಲವಾಗಿರುವ ಬಗ್ಗೆ ಶಾಸಕರ ಗಮನಕ್ಕೆ ತಂದರು. ಶಾಸಕರ ಆಪ್ತ ಸಹಾಯಕ ಕಿರಣ್ ಇದ್ದರು.

Read More

ಸೋಮವಾರಪೇಟೆ ಜು.26 NEWS DESK : ತಾಕೇರಿ ಗ್ರಾಮದ ಹಿರಿಯ ವಾಲಿಬಾಲ್ ಆಟಗಾರ ಹಾಗೂ ಕಾಫಿ ಬೆಳೆಗಾರ ಮೇದಪ್ಪ (ಅಣ್ಣ-58) ಅನಾರೋಗ್ಯದಿಂದ ನಿಧನರಾದ್ದಾರೆ. ಮೃತರು ಪತ್ನಿ, ಪುತ್ರಿಯನ್ನು ಆಗಲಿದ್ದಾರೆ. ತಾಕೇರಿ ಗ್ರಾಮದ ಮೃತರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಿತು.

Read More