ಲೇಖಕ: admin

ಮಡಿಕೇರಿ ಜೂ.24 NEWS DESK : ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಗ್ರಾಮ ಸಭೆ ಪಂಚಾಯಿತಿ ಅಧ್ಯಕ್ದರಾದ ಚೆಟ್ಟಡ್ಕ ಎಲ್. ವಿಶ್ವ ಅವರ ಅಧ್ಯಕ್ಷತೆಯಲ್ಲಿ ಹೊಸಪಟ್ಟಣದ ಸಮುದಾಯ ಭವನದಲ್ಲಿ ನಡೆಯಿತು. ಸಭೆಯಲ್ಲಿ ಉಪಸ್ಥಿತರಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖೆಯಲ್ಲಿನ ವಿಚಾರಗಳು ಹಾಗೂ ಸಾರ್ವಜನಿಕರಿಗೆ ದೊರಕುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಹೊಸಪಟ್ಟಣ, ವಿರೂಪಾಕ್ಷ ಪುರ ವ್ಯಾಪ್ತಿಯಲ್ಲಿ ಹುಲಿಗಳೆರಡು ಕಾಣಿಸಿಕೊಂಡು ಕಾಡಂಚಿನ ನಿವಾಸಿಗಳಲ್ಲಿ ಆತಂಕ ಮೂಡಿಸಿದ್ದು ಈ ಬಗ್ಗೆ ಅರಣ್ಯಾಧಿಕಾರಿಗಳು ನಿಗಾವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ಜೀವಹಾನಿ ಆಗದಂತೆ ತುರ್ತು ಕ್ರಮ ವಹಿಸುವಂತೆ ಗ್ರಾ.ಪಂ ಸದಸ್ಯ ಆರ್.ಕೆ.ಚಂದ್ರು ಒತ್ತಾಯಿಸಿದರು. ದಾಸವಾಳ ಗ್ರಾಮದಲ್ಲಿ ಕಾಡಾನೆ ಹಾವಳಿಗೆ ಅಳವಡಿಸಿರುವ ರೈಲ್ವೆ ಬ್ಯಾರಿಕೇಡ್ ಹಾಳಾಗಿದ್ದು, ಸರಿಪಡಿಸಬೇಕೆಂದು ಗ್ರಾಮಸ್ಥರಾದ ಸಚಿನ್ ಆಗ್ರಹಿಸಿದರು. ಮೀನುಕೊಲ್ಲಿ, ಆನೆಕಾಡು ಅರಣ್ಯ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದಲ್ಲಿ ಕಾಡು ಮರಗಳ ಹನನವಾಗುತ್ತಿದೆ. ಇಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಕುಮ್ಮಕ್ಕಿನಿಂದಲೇ ನಡೆಯುತ್ತಿದೆ ಎಂದು ಮಾವಾಜಿ ರವಿ ನೇರವಾಗಿ ಆರೋಪಿಸಿದರು. ಈ ಬಗ್ಗೆ ಜಂಟಿ ಕಾರ್ಯಾಚರಣೆ ಮಾಡಿ ಮರಗಳ್ಳರನ್ನು…

Read More

ಮಡಿಕೇರಿ ಜೂ.24 NEWS DESK : ವಿರಾಜಪೇಟೆ ಹೋಬಳಿ ಪೊದಕೋಟೆ ಗ್ರಾಮದಲ್ಲಿ ಮಳೆಯಿಂದ ಮನೆಗೆ ಹಾನಿಯಾಗಿದೆ. ಗ್ರಾಮದ ನಿವಾಸಿ ಹೆಚ್.ಕೆ.ಬಾಬು ವಾಸದ ಮನೆಯು ಮಳೆಯಿಂದಾಗಿ ಭಾಗಶಃ ಹಾನಿಯಾಗಿದ್ದು, ಕಂದಾಯ ಪರಿವೀಕ್ಷಕರು, ಸಹಾಯಕ ಅಭಿಯಂತರರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಸದಸ್ಯರೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

Read More

ವಿರಾಜಪೇಟೆ ಜೂ.24 NEWS DESK : ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ನೂತನ ಪ್ರಭಾರ ಉಪನಿರ್ದೇಶಕರಾಗಿ ತಾತಂಡ ಜ್ಯೋತಿ ಪ್ರಕಾಶ್ ನೇಮಕಗೊಂಡಿದ್ದಾರೆ. ಉಪನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುಳಾ ಅವರು ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಸೇವೆಯಲ್ಲಿ ಹಿರಿತನ ಹೊಂದಿರುವ, ಪ್ರಸ್ತುತ ವಿರಾಜಪೇಟೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿರುವ ಜ್ಯೋತಿ ಅವರು ಪ್ರಭಾರಿ ಉಪನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು.

Read More

ವಿರಾಜಪೇಟೆ ಜೂ.24 NEWS DESK : ವಿರಾಜಪೇಟೆ ಕೊಡವ ಸಮಾಜ ಮತ್ತು ಲೋಪಮುದ್ರ ದೃಷ್ಟಿ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ವಿರಾಜಪೇಟೆಯ ಕೊಡವ ಸಮಾಜದ ಸಭಾಂಗಣದಲ್ಲಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಲೋಪಮುದ್ರ ದೃಷ್ಟಿ ಆಸ್ಪತ್ರೆಯ ನೇತ್ರ ತಜ್ಞರಾದ ಡಾ.ಸೌಮ್ಯ ಗಣೇಶ್ ನಾಣಯ್ಯ, ಇಂದು ನಾವು ಕಣ್ಣಿನ ತೊಂದರೆ ಇರುವವರಿಗೆ ಸ್ಕ್ರೀನಿಂಗ್ ಟೆಸ್ಟ್ ಮಾಡುತ್ತಿದ್ದೇವೆ. ಹೆಚ್ಚಿನ ಜನರಿಗೆ ಕಣ್ಣಿನ ತೊಂದರೆಯ ಬಗ್ಗೆ ತಿಳಿದಿರುವುದಿಲ್ಲ. ಬಿಪಿ, ಶುಗರ್, ಇನ್ನಿತರ ಆರೋಗ್ಯ ಸಮಸ್ಯೆಗಳಿದ್ದರೆ ಕಣ್ಣಿಗೆ ಯಾವ ರೀತಿಯ ಪರಿಣಾಮಗಳಾಗುತ್ತದೆ ಎಂಬುವುದು ತಿಳಿದಿರುವುದಿಲ್ಲ. ಆದರಿಂದ ಸ್ಕ್ರೀನಿಂಗ್ ಟೆಸ್ಟ್ ಬಹಳ ಮುಖ್ಯವಾಗಿದ್ದು, ಸ್ಕ್ರಿನಿಂಗ್ ಟೆಸ್ಟ್ ಮಾಡಿ ಹೆಚ್ಚಿನ ಚಿಕೆತ್ಸೆಯ ಅವಶ್ಯಕತೆ ಇದ್ದರೆ ನಮ್ಮ ಮುಖ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತೇವೆ. ವಿರಾಜಪೇಟೆ ಕೊಡವ ಸಮಾಜ ಒಂದೊಳ್ಳೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.  ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಎ.ಮನು ಕುಮಾರ್ ಮಾತನಾಡಿ, ವಿರಾಜಪೇಟೆ ಕೊಡವ ಸಮಾಜ ಮತ್ತು ಲೋಪಮುದ್ರ ದೃಷ್ಟಿ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ…

Read More

ಮಡಿಕೇರಿ ಜೂ.24 NEWS DESK : ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಟೋಳಿ ಗುಂಡಿಕೆರೆಯ ಮಸೀದಿ ಮುಂಭಾಗದಿಂದ ಬೇಟೋಳಿ ಸರ್ಕಾರಿ ಶಾಲೆಯವರೆಗೆ ಮತ್ತು ಸ್ಥಳೀಯ ಅಲ್ಪಸಂಖ್ಯಾತ ಕುಟುಂಬಸ್ಥರುಗಳ ಮನೆಗಳಿಗೆ ಹಾದು ಹೋಗುವ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕರ ಸ್ಪಂದನೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರು  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದ್ದರು. ಇದೀಗ ಕ್ಷೇತ್ರದ ನಿರಂತರ ಅಭಿವೃದ್ಧಿಯ ಭಾಗವಾಗಿ, ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆ ಅನುದಾನ ರೂ.30 ಲಕ್ಷದ ಅನುದಾನದಲ್ಲಿ ಸುಸಜ್ಜಿತ ಕಾಂಕ್ರೀಟ್ ರಸ್ತೆ  ನಿರ್ಮಾಣವಾಗಿದೆ. ಗ್ರಾಮಸ್ಥರ ಮನವಿ ಸ್ಪಂದಿಸಿದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ರಸ್ತೆ ನಿರ್ಮಾಣಕ್ಕೆ ಅನುದಾನ ತರುವಲ್ಲಿ ಸಹಕರಿಸಿದ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್ ಪಿ.ಎ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ…

Read More

ಮಡಿಕೇರಿ ಜೂ.24 NEWS DESK :  ಗ್ರಾಮ ಪಂಚಾಯ್ತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ವೈಜ್ಞಾನಿಕ ರೂಪದ ಕನಿಷ್ಟ ವೇತನ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಮತ್ತು ಕಾರ್ಮಿಕ ಕಾನೂನುಗಳ ತಿದ್ದುಪಡಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘ(ಸಿಐಟಿಯು ಸಂಯೋಜಿತ) ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ ಸಂಘದ ಸದಸ್ಯರು ಹಾಗೂ ಗ್ರಾ.ಪಂ ನೌಕರರು ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು. ಸಂಘÀಟನೆಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯ್ತಿ ನೌಕರರ ಸಂಘದಿಂದ ರಾಜ್ಯದಾದ್ಯಂತ ಆಯೋಜಿತ ಮುಷ್ಕರದ ಭಾಗವಾಗಿ ಇಂದು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಹಲವಾರು ವರ್ಷಗಳಿಂದ ಗ್ರಾಮ ಪಂಚಾಯ್ತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಇಲ್ಲಿಯವರೆಗು ಸರ್ವೋಚ್ಛ ನ್ಯಾಯಾಲಯದ ಸೂಚನೆಗಳಿದ್ದರು ಕನಿಷ್ಟ ವೇತನ ಪಾವತಿಯಾಗುತ್ತಿಲ್ಲ. ಪ್ರಸ್ತುತ ಪಂಚಾಯ್ತಿಗಳಲ್ಲಿ ನೌಕರರು ‘ಜೀತದಾಳು’ಗಳಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ದಿನದಿಂದ ದಿನಕ್ಕೆ ನಿತ್ಯೋಪಯೋಗಿ ವಸ್ತುಗಳ…

Read More

ನವದೆಹಲಿ ಜೂ.24 NEWS DESK : ನಟ-ನಿರ್ದೇಶಕ ಅಮೀರ್ ಖಾನ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಸಂದರ್ಭದಲ್ಲಿ ಬಾಲಿವುಡ್ ನ ಸಂವೇಧನಾಶೀಲ ನಟ-ನಿರ್ದೇಶಕ ಅಮೀರ್ ಖಾನ್ ಮುಖಾಮುಖಿ ಭೇಟಿಯಾಗಿದ್ದು, ಪರಸ್ಪರ ಕುಶಲೋಪರಿ ವಿಚಾರಿಸಿ ಶುಭ ಹಾರೈಸಿದರು.

Read More

ಮಡಿಕೇರಿ ಜೂ.24 NEWS DESK  : ವಿರಾಜಪೇಟೆಯ ತ್ರಿವೇಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರರಾಷ್ಟ್ರೀಯ 11ನೇ ಯೋಗ ದಿನವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಆಪಾಡಂಡ ಕಾರ್ಯಪ್ಪ ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ಅರಸು ಅಚ್ಚಮ್ಮ ಮಾತನಾಡಿ, ಪ್ರತಿನಿತ್ಯ ಯೋಗ ಮಾಡುವುದರಿಂದ ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಫ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಕಾವೇರಮ್ಮ ದಿನದ ಮಹತ್ವ, ಯೋಗ ಅಂತರಾಷ್ಟ್ರೀಯ ಮಹತ್ವ ಪಡೆದುಕೊಂಡ ಬಗ್ಗೆ ವಿವರಿಸಿದರು. ಶಿಕ್ಷಕರಾದ ಸವೆಂಟಿ ಅಗಸ್ಟಿನ್ ಸ್ವಾಗತಿಸಿದರು. ಜ್ಯೋತಿ ನಿರೂಪಿಸಿ, ವಂದಿಸಿದರು. ಯೋಗ ತರಬೇತುದಾರರಾದ ಬಿಂದು ಮಾರ್ಗದರ್ಶನದಲ್ಲಿ ಮುಖ್ಯಶಿಕ್ಷಕರುಗಳು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಲಾಯಿತು.

Read More

ಮಡಿಕೇರಿ ಜೂ.24 NEWS DESK : ಭಾರತದಲ್ಲಿ ಬ್ಯಾಂಕಿಂಗ್ ವೃತ್ತಿಯನ್ನು ಆರಿಸಿಕೊಳ್ಳುವ ಹೊಸಬರಿಗೆ ಮತ್ತು ಅನುಭವಿ ವೃತ್ತಿಪರರಿಗೆ ಅತ್ಯಂತ ಪ್ರತಿಷ್ಠಿತ ಉದ್ಯೋಗಗಳಲ್ಲಿ ಒಂದಾಗಿದೆ. ಬ್ಯಾಂಕ್‍ಗಳು ತನ್ನ ಉದ್ಯೋಗಿಗಳಿಗೆ ಸುಂದರವಾದ ಪ್ಯಾಕೇಜ್‍ಗಳು, ಆಕರ್ಷಕ ಸಂಬಳ, ಉದ್ಯೋಗ ಭದ್ರತೆಯ ಜೊತೆಗೆ ಇತರ ಸವಲತ್ತುಗಳನ್ನು ನೀಡುತ್ತವೆ ಎಂಬುದು ಬಹಿರಂಗ ಸತ್ಯವಾಗಿದೆ. ಕನ್ನಡ ಓದಲು, ಬರೆಯಲು ಹಾಗೂ ಮಾತನಾಡಲು ಬಲ್ಲ ಅಭ್ಯರ್ಥಿಗಳಿಗೆ ಇವು ಮೀಸಲಾಗಿವೆ. ಉಳಿದ ಹುದ್ದೆಗಳಿಗೂ ಆಯಾ ರಾಜ್ಯಗಳ ಭಾಷಾ ನಿಯಮ ಅನ್ವಯವಾಗಲಿದೆ. ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಾಕಾಂಕ್ಷಿಗಳಿಗೆ, ಈ ಹಿಂದೆ ಮೇ ತಿಂಗಳಲ್ಲಿ ಈ ಕುರಿತು ಅಧಿಸೂಚನೆ ಪ್ರಕಟಿಸಿತ್ತು. ಮೇ ಕೊನೆಯ ವಾರದಲ್ಲಿ ಅರ್ಜಿ ಸಲ್ಲಿಕೆ ಕೊನೆಗೊಳಿಸಿದ್ದರೂ, ಇದೀಗ ಅದೇ ಅಧಿಸೂಚನೆಗೆ ಮತ್ತೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಕೋರಿದೆ. ಹೊಸ ಪ್ರಕಟಣೆಗಳ ಪ್ರಕಾರ, ಅಭ್ಯರ್ಥಿಗಳು ಜೂನ್ 30 ರೊಳಗೆ ಅರ್ಜಿ ಸಲ್ಲಿಸಬೇಕು. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯ ವಿರುವುದಿಲ್ಲ,…

Read More

ನಾಪೋಕ್ಲು ಜೂ.24 NEWS DESK : ಬೆಟ್ಟತ್ತೂರು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಪರದಾಡುವಂತಾಗಿದೆ. ಗ್ರಾಮದಲ್ಲಿ ಕಾಡಾನೆಗಳ ಹಿಂಡು ನಿರಂತರ ದಾಂಧಲೆ ನಡೆಸುತ್ತಿದ್ದು, ಕಾಫಿ, ತೆಂಗು, ಬಾಳೆ ಗಿಡಗಳನ್ನು ನಾಶಪಡಿಸಿವೆ. ಗ್ರಾಮದ ನಿವಾಸಿ ಮರದಾಳು ರಾಮಚಂದ್ರ ಅವರ ಮನೆಯ ಸುತ್ತಮುತ್ತ ದಾಳಿ ನಡೆಸಿರುವ ಕಾಡಾನೆಗಳ ಹಿಂಡು ತೆಂಗು, ಬಾಳೆ ಗಿಡಗಳನ್ನು ಸಂಪೂರ್ಣ ಧ್ವಂಸಗೊಳಿಸಿವೆ. ಅಲ್ಲದೆ ಕೃಷಿ ಪಸಲುಗಳಿಗೆ ಹಾನಿ ಉಂಟು ಮಾಡಿದೆ. ಇತ್ತೀಚೆಗೆ ನೆಟ್ಟ ಹಣ್ಣಿನಗಿಡಗಳೂಧ್ವಂಸವಾಗಿವೆ. ಕಾಡಾನೆಗಳ ಉಪಟಳವನ್ನು ತಡೆಗಟ್ಟಲು ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More