ಮಡಿಕೇರಿ ಜೂ.24 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಕಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅರಣ್ಯ ಇಲಾಖೆ ಸೋಮವಾರಪೇಟೆ ವಲಯದ ಜಂಟಿ ಆಶ್ರಯದಲ್ಲಿ ಕಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ ನಡೆಯಿತು. ಶಾಲೆಯ ಅವರಣದಲ್ಲಿ ಗಿಡ ನೆಟ್ಟು ಕಾರ್ಯಕ್ರಮ ಉದ್ಘಾಟಿಸಿದ ಅರಣ್ಯಇಲಾಖೆಯ ಅರಣ್ಯ ಪಾಲಕರಾದ ಚಂದ್ರಶೇಖರ್, ಎಲ್ಲರೂ ಪರಿಸರವನ್ನು ಸಂರಕ್ಷಿಸುವ ಕೆಲಸವನ್ನು ಮಾಡಬೇಕು. ಒಂದು ದಿನದ ಕಾರ್ಯಕ್ರಮವಾಗಿ ಆಚರಿಸದೆ ಪ್ರತಿನಿತ್ಯ ಒಂದೊಂದು ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣಗೆ ಪಣತೊಡಬೇಕು ಎಂದು ಕರೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಒಕ್ಕೂಟದ ಅಧ್ಯಕ್ಷ ಗೋಪಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಮುಖ್ಯ ಶಿಕ್ಷಕರಾದ ಸರಳಕುಮಾರಿ, ಕೃಷಿ ಮೇಲ್ವಿಚಾರಕರಾದ ಹರೀಶ್ ಕುಮಾರ್ ಹಾಜರಿದ್ದರು. ಕೃಷಿ ಮೇಲ್ವಿಚಾರಕರಾದ ಹರೀಶ್ ನಿರೂಪಿಸಿದರು, ಸೇವಾಪ್ರತಿನಿಧಿ ಚೆನ್ನಮ್ಮ ರಾಜು ಸ್ವಾಗತಿಸಿದರು. ಶಿಕ್ಷಕಿ…
ಲೇಖಕ: admin
ಗೋಣಿಕೊಪ್ಪ ಜೂ.24 NEWS DESK : ಹೆಣ್ಣು ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸುವ ಮೂಲಕ ಪೋಷಕರು ಹೆಣ್ಣುಮಕ್ಕಳ ಭದ್ರತೆಯ ಬಗ್ಗೆ ಗಮನ ಹರಿಸಬೇಕು ಎಂದು ಗೋಣಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಹೆಚ್.ಕೆ.ಕುಮಾರ್ ಕರೆ ನೀಡಿದರು. ಶಾಲೆಯ ಆವರಣದಲ್ಲಿ ನಡೆದ ಪೋಷಕರ ಸಭೆ ಮತ್ತು ಶಾಲಾಭಿವೃದ್ಧಿ ಸಮಿತಿ ರಚನಾ ಸಭೆಯಲ್ಲಿ ಪೋಷಕರ ಉದ್ದೇಶಿಸಿ ಮಾತನಾಡಿದರು. ಹೆಣ್ಣುಮಕ್ಕಳು ಮನೆಯಲ್ಲಿರುವುದರಿಂದ ಆಘಾತಕಾರಿ ಘಟನೆಗಳು ನಡೆಯುವ ಸಂಭವಗಳು ಹೆಚ್ಚಿರುತ್ತದೆ. ಹೀಗಾಗಿ ಹೆಣ್ಣು ಮಕ್ಕಳ ಸುರಕ್ಷತೆಗೆ ಪೋಷಕರು ಜಾಗೃತೆ ವಹಿಸಬೇಕು. ಹೆಣ್ಣು ಮಕ್ಕಳನ್ನು ಶಾಲೆಗೆ ಕಳಿಸುವುದರಿಂದ ಪೋಷಕರು ತಮ್ಮ ಮಕ್ಕಳ ಭದ್ರತೆ ಆತಂಕದಿಂದ ದೂರ ಇರಬಹುದು ಎಂದು ಸಲಹೆ ನೀಡಿದರು. ಶಾಲಾ ಅಭಿವೃದ್ಧಿ ಸಮಿತಿ ರಚನೆ :: ನಂತರ ನಡೆದ ಶಾಲಾ ಅಭಿವೃದ್ಧಿ ಸಮಿತಿ ರಚನೆ ನಡೆಯಿತು. ಸಮಿತಿ ಅಧ್ಯಕ್ಷರಾಗಿ ಕೆ.ಬಿ.ಜಗದೀಶ್, ಉಪಾಧ್ಯಕ್ಷರಾಗಿ ಬಿ.ಆರ್.ದಿವ್ಯ ಮತ್ತು ಸದಸ್ಯರುಗಳಾಗಿ ಪಿಂಟು ಸಿಂಗ್, ರಾಕೇಶ್, ಅರುಣ್ ಕುಮಾರ್ ವಿ, ಸೌಮ್ಯ, ತೇಜಸ್ವಿನಿ, ದೀಪಿಕಾ, ಅನಿತಾ, ಪಿ.ಬಿ.ಮೀನಾ, ಮಂಜುಳಾ, ರೆಜಿಯ ಸುಲ್ತನ್,…
ಕುಶಾಲನಗರ ಜೂ.23 NEWS DESK : ಕುಶಾಲನಗರ ಲಯನ್ಸ್ ಇಂಟರ್ನ್ಯಾಷನಲ್ ನೂತನ ಅಧ್ಯಕ್ಷರಾಗಿ ಎನ್.ಟಿ.ನಾರಾಯಣ, ಕಾರ್ಯದರ್ಶಿಯಾಗಿ ಎಂ.ಜಿ.ಕಿರಣ್ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಡಾ.ಶರತ್ ಕುಮಾರ್ ಮ್ಯಾಥ್ಯೂ ನೇಮಕಗೊಂಡಿದ್ದಾರೆ. 2025-26 ರ ಆಡಳಿತ ಮಂಡಳಿಯ ತಂಡದ ಪ್ರತಿಜ್ಞಾವಿಧಿ ಸಮಾರಂಭ ಜೂ.24ರಂದು ಕುಶಾಲನಗರ ಗೌಡ ಸಮಾಜದಲ್ಲಿ ನಡೆಯಲಿದೆ. ಲಯನ್ಸ್ ಇಂಟರ್ನ್ಯಾಷನಲ್ ಹಿಂದಿನ ಸಾಲಿನ ಜಿಲ್ಲಾ ರಾಜ್ಯಪಾಲ ಎಂ.ಬಿ.ಸದಾಶಿವ ಪ್ರತಿಜ್ಞಾವಿಧಿ ಭೋದಿಸಲಿದ್ದಾರೆ.
ಮಡಿಕೇರಿ ಜೂ.23 NEWS DESK : ಪುಣ್ಯಭೂಮಿ ‘ಕೊಡವಲ್ಯಾಂಡ್’ ನ ರಕ್ಷಣೆ ಆದಿಮಸಂಜಾತ ಏಕ-ಜನಾಂಗೀಯ ಕೊಡವ ಸಮುದಾಯದ ಹೊಣೆಯಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ. ಸಿಎನ್ಸಿ ವತಿಯಿಂದ ಪೊನ್ನಂಪೇಟೆಯಲ್ಲಿ ನಡೆದ 6ನೇ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಷ್ಟ್ರೀಯ ಜನಗಣತಿಯೊಂದಿಗೆ ಜಾತಿವಾರು ಸಮೀಕ್ಷೆಯ ಸಂದರ್ಭ ಆದಿಮಸಂಜಾತ ಏಕ-ಜನಾಂಗೀಯ ಕೊಡವರಿಗೆ ಪ್ರತ್ಯೇಕ ಕೋಡ್ ಮತ್ತು ಕಲಮ್ಅನ್ನು ಅಳವಡಿಸಬೇಕು. ಹೀಗೆ ಮಾಡುವುದರಿಂದ ಮಾತ್ರ ಕೊಡವರ ಹಾಗೂ ಕೊಡವಲ್ಯಾಂಡ್ ನ ರಕ್ಷಣೆ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕೊಡವಲ್ಯಾಂಡ್ ನ್ನು ಸಂರಕ್ಷಿಸಲು ಸಮಸ್ತ ಕೊಡವರು ಜಾಗೃತರಾಗಬೇಕು ಮತ್ತು ಸಂವಿಧಾನದತ್ತವಾದ ಹಕ್ಕುಗಳ ಪರ ಸಂಘಟಿತರಾಗಬೇಕು. ಕೊಡವರಿಗೆ ಪ್ರತ್ಯೇಕ ಕೋಡ್ ಮತ್ತು ಕಲಮ್ಅನ್ನು ಅಳವಡಿಸುವುದು 2026ರ ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರ ಪುನರ್ ವಿಂಗಡಣೆಗೆ ಮಾನದಂಡವಾಗಲಿದೆ. ಇದನ್ನು ಕೊಡವರು ಸೂಕ್ಷ್ಮವಾಗಿ ಅವಲೋಕಿಸಬೇಕು ಮತ್ತು ಈ ಬೇಡಿಕೆಗೆ ಒತ್ತು ನೀಡಬೇಕೆಂದು ಕರೆ ನೀಡಿದರು. ಜಾತಿವಾರು ಜನಗಣತಿಯಲ್ಲಿನ ಪ್ರತ್ಯೇಕ “ಕೋಡ್ ಮತ್ತು ಕಾಲಮ್”…
ಮಡಿಕೇರಿ ಜೂ.23 NEWS DESK : ವಿರಾಜಪೇಟೆ 66/33 ಕೆ.ವಿ. ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲದಲ್ಲಿ ಜೂನ್, 24 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ 33/11 ಕೆವಿ ವಿದ್ಯುತ್ ಉಪಕೇಂದ್ರ ಮೂರ್ನಾಡುವಿನಿಂದ ಹೊರಹೊಮ್ಮುವ ಪಾರಾಣೆ, ನಾಪೋಕ್ಲು, ಮೂರ್ನಾಡು, ಹೊದ್ದೂರು, ಮರಗೋಡು ಫೀಡರ್ಗಳ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ. ಹಾಗೆಯೇ ವಿರಾಜಪೇಟೆ 66/33 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರ ಮಗ್ಗುಲದಲ್ಲಿ ಜೂನ್, 24 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ಶಾಖಾ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.…
ಮಡಿಕೇರಿ ಜೂ.23 NEWS DESK : ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ (ಐಟಿಡಿಪಿ) ಕಚೇರಿಯಲ್ಲಿ ನೂತನವಾಗಿ ಅರಣ್ಯ ಹಕ್ಕು ಕೋಶ ಆರಂಭಿಸಲಾಗಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕಕಾಲದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅರಣ್ಯ ಹಕ್ಕು ಕೋಶವನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಮಾರ್ಗದರ್ಶನದಲ್ಲಿ ನಗರದ ಜಿ.ಪಂ.ಭವನದ ಐಟಿಡಿಪಿ ಕಚೇರಿಯಲ್ಲಿ ಅರಣ್ಯಹಕ್ಕು ಕೋಶ ತೆರೆಯಲಾಗಿದೆ. ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಈ ಕೋಶ ಕಾರ್ಯನಿರ್ವಹಿಸಲಿದ್ದು, ಈಗಾಗಲೇ ಅರಣ್ಯ ಹಕ್ಕುಪತ್ರವನ್ನು ಪಡೆದಿರುವ ಕುಟುಂಬಗಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವುದು ಮತ್ತು ಸಂಗ್ರಹವಾಗಿರುವ ದತ್ತಾಂಶಗಳನ್ನು ಡಿಜಿಟಲೀಕರಣಗೊಳಿಸುವುದು ಅರಣ್ಯ ಹಕ್ಕು ಕೋಶದ ಪ್ರಮುಖ ಕಾರ್ಯವಾಗಿರುತ್ತದೆ ಎಂದು ಎಸ್.ಹೊನ್ನೇಗೌಡ ಮಾಹಿತಿ ನೀಡಿದರು. ಅರಣ್ಯ ಹಕ್ಕು ಪತ್ರ ಹೊಂದಿಲ್ಲದವರ ಮತ್ತು ಅರ್ಜಿ ಸಲ್ಲಿಸಿ ತಿರಸ್ಕೃತಗೊಂಡಿರುವ ಕುಟುಂಬಗಳ ಕುರಿತು ಪುನರ್ ಪರಿಶೀಲನೆ ನಡೆಸಿ ಅರ್ಹ ಅರಣ್ಯವಾಸಿಗಳಿಗೆ ಅಗತ್ಯ…
ಮಡಿಕೇರಿ ಜೂ.23 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ (ಮಕ್ಕಳ ವಿಭಾಗ) ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಅತಿಸಾರ ಬೇಧಿ ತಡೆಗಟ್ಟುವಿಕೆ ಅಭಿಯಾನಕ್ಕೆ ಚಾಲನೆ ದೊರೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಉದ್ಘಾಟಿಸಿ ಮಾತನಾಡಿ, ಸ್ಟಾಪ್ ಡೈಯೇರಿಯ ಕ್ಯಾಂಪೇನ್ ಅನ್ನು ಜು.31 ರವರೆಗೆ ಆಯೋಜಿಸಲಾಗಿದೆ. ಎಲ್ಲಾ ಐದು ವರ್ಷದ ಒಳಗಿನ ಮಕ್ಕಳಿಗೆ ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಒಂದು ಮಗುವಿಗೆ ಎರಡು ಪ್ಯಾಕೆಟ್ ಓಆರ್ಎಸ್ ಮತ್ತು ಒಂದು ಪ್ಯಾಕೆಟ್ ಜಿಂಕ್ ಮಾತ್ರೆಯನ್ನು ನೀಡಲಾಗುವುದು ಎಂದರು. ಭೇದಿ ಆದಲ್ಲಿ ಮಾತ್ರ ಜಿಂಕ್ ಮಾತ್ರೆಯನ್ನು 14 ದಿನಗಳವರೆಗೆ ಉಪಯೋಗಿಸುವುದು. ಈ ಬಗ್ಗೆ ಪ್ರತಿಯೊಬ್ಬ ಪೋಷಕರಿಗೂ ಮಾಹಿತಿ ತಿಳಿದಿರಬೇಕು. ಗುಣಮುಖವಾಗದಿದ್ದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೋರಿಸಬೇಕು. ಅತಿಸಾರ ಬೇಧಿಯಿಂದ ಉಂಟಾಗುವ…
ವಿರಾಜಪೇಟೆ ಜೂ.23 NEWS DESK : ಸಂತ ಅನ್ನಮ್ಮ ಪ್ರೌಢ ಶಾಲೆಯ ಎನ್ಸಿಸಿ ಘಟಕದ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ.ಜೇಮ್ಸ್ ಡೊಮಿನಿಕ್ ಉದ್ಘಾಟಿಸಿ, ಯೋಗದ ಮಹತ್ವದ ಬಗ್ಗೆ ತಿಳಿಸಿದರು. ಯೋಗ ಗುರುಗಳಾದ ಸವಿತಾ ಉತ್ತಪ್ಪ ಹಾಗೂ ಉತ್ತಮನ್ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸವನ್ನು ಮಾಡಿಸಿ ಯೋಗದ ಪಾತ್ರವನ್ನು ವಿವರಿಸಿದರು. ವಿವಿಧ ಆಸನಗಳ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಈ ಸಂದರ್ಭ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಬೆನ್ನಿ ಜೋಸೆಫ್, ಏರ್ ಫೋರ್ಸ್ ಎನ್ ಸಿ ಸಿ ಅಧಿಕಾರಿ ಅಬ್ದುಲ್ ಮುನೀರ್, ಆರ್ಮಿ ಎನ್ ಸಿ ಸಿ ಘಟಕದ ಅಧಿಕಾರಿ ಸಹನಾ, ಶಿಕ್ಷಕರಾದ ರೂಪ, ಲಕ್ಷ್ಮೀಶ ಇತರರು ಹಾಜರಿದ್ದರು.
ವಿರಾಜಪೇಟೆ ಜೂ.23 NEWS DESK : ಸಂತ ಅನ್ನಮ್ಮ ಪಿ.ಯು.ಕಾಲೇಜು, ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ, ಸ್ನಾತಕೋತ್ತರ ವಿಭಾಗ, ಎನ್. ಎಸ್.ಎಸ್ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಂತ ಅನ್ನಮ್ಮ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪಿ.ಯು.ಕಾಲೇಜು ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಯೋಗವು ಪ್ರಾಚೀನ ಕಾಲದ ಇತಿಹಾಸವನ್ನು ಹೊಂದಿದೆ. ವಿಶ್ವಕ್ಕೆ ಭಾರತವು ನೀಡಿದ ಕೊಡುಗೆಯಾಗಿದೆ. ಪ್ರತಿನಿತ್ಯ ಯೋಗಾಭ್ಯಾಸವನ್ನು ಮಾಡುವುದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಲು ಸಾಧ್ಯವಾಗುತ್ತದೆ. ಇಂದಿನ ಯುವ ಜನತೆಯು ಮೊಬೈಲ್ ಗೀಳಿಗೆ ಬೀಳದೆ ಯೋಗವನ್ನು ತಮ್ಮ ಜೀವನದ ಒಂದು ಭಾಗ ಎಂಬುದಾಗಿ ಅಳವಡಿಸಿಕೊಳ್ಳಿ ಎಂದು ಕಿವಿಮಾತನ್ನು ಹೇಳಿದರು. ಆ ಮೂಲಕ ಆರೋಗ್ಯವಂತ ಪರಿಸರ ನಿರ್ಮಿಸಿ ಎಂದು ಹೇಳಿದರು. ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಯೋಗಾಭ್ಯಾಸವು ಸುಂದರ ಬದುಕಿಗೆ ಅತ್ಯಗತ್ಯವಾಗಿದೆ. ಅದರಲ್ಲಿಯೂ ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ತೊಡಗಬೇಕು. ನಕಾರಾತ್ಮಕ ಚಿಂತನೆಗಳನ್ನು ತೊಡೆದು ಹಾಕಿ ಜೀವನದಲ್ಲಿ ಸಕಾರಾತ್ಮಕ…
ನಾಪೋಕ್ಲು ಜೂ.23 NEWS DESK : ನಾಪೋಕ್ಲು ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಬಿ.ಎಂ.ಶಾರದ ಮಾತನಾಡಿ ಯೋಗದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ನಿತ್ಯ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳು ಸದೃಢ ಆಗಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಪ್ರೊ.ಕಲ್ಯಾಟಂಡ ಪೂಣಚ್ಚ, ಸಂಸ್ಥೆಯ ನಿರ್ದೇಶಕರು, ಶಿಕ್ಷಕ ವೃಂದದವರು ಹಾಜರಿದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ಸರಿತ ವಿದ್ಯಾರ್ಥಿಗಳಿಂದ ವಿವಿಧ ಯೋಗಾಸನಗಳನ್ನು ನಡೆಸಿಕೊಟ್ಟರು. ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆಯ ಅಂಗವಾಗಿ ಯೋಗದ ಐತಿಹಾಸಿಕ ಹಿನ್ನಲೆ ಮತ್ತು ಯುವ ಪೀಳಿಗೆಗೆ ಯೋಗದ ಮಹತ್ವವನ್ನು ಸಂಸ್ಥೆಯ ಆಡಳಿತ ಮಂಡಳಿಯ ಸಂಚಾಲಕ ಎಂ.ಶಂಕರನಾರಾಯಣ ಭಟ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ದೈಹಿಕ ಶಿಕ್ಷಕ ಕುಶಾಲಪ್ಪ ನಡೆಸಿಕೊಟ್ಟರು. ಯೋಗದಿನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಸ್ಪರ್ಧೆಯ ಬಹುಮಾನಗಳ…






