ಲೇಖಕ: admin

ನಾಪೋಕ್ಲು ಜೂ.23 NEWS DESK : ಮನೆ, ವ್ಯವಹಾರ, ಬೋಧನೆ ಮತ್ತು ಜೀವನದ ಎಲ್ಲ ಕ್ಷೇತ್ರಗಳಲ್ಲೂ ನಾವು ಸ್ವಚ್ಛ ಕನ್ನಡವನ್ನು ಬಳಸಬೇಕು. ಬಳಸಿದರೆ ಮಾತ್ರ ಕನ್ನಡ ಉಳಿದಿತು. ಮಾತೃಭಾಷೆಯ ಗೌರವ ಉಳಿಸುವಲ್ಲಿ ತಾಯಂದಿರ ಪಾತ್ರ ಮಹತ್ತ್ವಪೂರ್ಣವಾದುದು ಎಂದು ಮಡಿಕೇರಿ ಆಕಾಶವಾಣಿ ಕೇಂದ್ರದ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ನುಡಿದರು. ಕೊಡಗಿನ ಸಮರ್ಥ ಕನ್ನಡಿಗರು ಬಳಗದ ವತಿಯಿಂದ ಮಡಿಕೇರಿ ಲಯನ್ಸ್ ಸಭಾಂಗಣದಲ್ಲಿ ಬಾನುಲಿ ಸೇವೆಗಾಗಿ ತನಗೆ ನೀಡಿದ ಗೌರವ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡಿದರು. “ಕನ್ನಡ ಇಂದು ಉಳಿದಿರುವುದು ತಾಯಂದಿರಿಂದ. ಇಂಥ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಮಹಿಳೆಯರು ತಮ್ಮ ಹಲವು ಬೇಸರಗಳನ್ನು ಮರೆಯುತ್ತಾರೆ. ಜೊತೆಗೆ ನಾಡು ನುಡಿಯ ಮಹತ್ತ್ವದ ಬಗ್ಗೆ ಅರಿವು ಬೆಳೆಸಿಕೊಳ್ಳಲು, ಅದು ಮನೆ ಮಕ್ಕಳಲ್ಲಿ ಹಂಚಿ ಮುಂದುವರಿಯಲು ಕಾರಣರಾಗುತ್ತಿದ್ದಾರೆ. ಇದು ಸಣ್ಣ ಕೆಲಸವಲ್ಲ ಎಂದು ಸುಬ್ರಯ ಸಂಪಾಜೆ ನುಡಿದರು. ಮೂರು ದಶಕಗಳ ರೇಡಿಯೋ ಸೇವೆಗಾಗಿ ಸುಬ್ರಾಯ ಸಂಪಾಜೆ ಅವರನ್ನು ಪತ್ನಿ ಸಹಿತ ಶಾಲು ಹೊದಿಸಿ ಸನ್ಮಾನಿಸಿದ ಹಿರಿಯರಾದ ಶ್ರೀಮತಿ…

Read More

ಮಡಿಕೇರಿ ಜೂ.23 NEWS DESK : ತನ್ನ ಕ್ಷೇತ್ರದ ಜನರ ಕೋರಿಕೆಗೆ ತಕ್ಷಣವೇ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ ಅವರ ಕಾರ್ಯಕ್ಷಮತೆಗೆ ಪಶ್ಚಿಮ ಘಟ್ಟ ಮೂಲ ನಿವಾಸಿಗಳ ಸಂಘದ ಪ್ರಧಾನ ಸಂಚಾಲಕ ಕಾಳಚಂಡ ರವಿ ತಮ್ಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎರಡು ದಿನದ ಹಿಂದೆ ಮಡಿಕೇರಿಯಲ್ಲಿ ಜರುಗಿದ ಕಾರ್ಯಕ್ರಮವೊಂದರಲ್ಲಿ ಮಡಿಕೇರಿ ಕ್ಷೇತ್ರದಶಾಸಕರಾದ ಡಾ.ಮಂತರ್ ಗೌಡ ಅವರನ್ನು ಭೇಟಿ ಮಾಡಿದ ಸಾಮಾಜಿಕ ಹೋರಾಟದ ಮೂಲಕ ಗುರುತಿಸಿಕೊಂಡಿರುವ ರವಿ ತಮ್ಮಯ್ಯ ತಮ್ಮ ಗ್ರಾಮದ ಮೂಲಭೂತ ಸೌಕರ್ಯ ಕೊರತೆಯನ್ನು ನಿವಾರಿಸುವಂತೆ ವಿನಂತಿಸಿಕೊಂಡಿದ್ದರು. ಅದಕ್ಕೆ  ತಕ್ಷಣವೇ ಸ್ಪಂದಿಸಿದ ಶಾಸಕರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಂದಾಜು ಪಟ್ಟಿ ತಯಾರಿಸಿ ಸೂಕ್ತ ಕಾರ್ಯಕ್ರಮ ರೂಪಿಸುವಂತೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗಕ್ಕೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಅಭಿಯಂತರಾದ ರಘು ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ  ತೆನ್ನಿರ ಮೈನಾ ಹಾಗೂ ಇತರ ಸಿಬ್ಬಂದಿಗಳೊಂದಿಗೆ ತೆರಳಿ ರವಿ ತಮ್ಮಯ್ಯ ಸಮ್ಮುಖದಲ್ಲಿ ಸ್ಥಳ ಪರಿಶೀಲನೆ ನಡೆಸಿದರು. ಎರಡು ದಿನದಲ್ಲಿ ಅಂದಾಜು…

Read More

ನಾಪೋಕ್ಲು ಜೂ.23 NEWS DESK : ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಎನ್.ಸಿ.ಸಿ ಸಂಯುಕ್ತ ಆಶ್ರಯದಲ್ಲಿ “ಯೋಗ ಫಾರ್ ಒನ್ ಅರ್ಥ್, ಒನ್ ಹೆಲ್ತ್” ಎಂಬ ಘೋಷವಾಕ್ಯದೊಂದಿಗೆ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮೂರ್ನಾಡು ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ತೇಜಸ್ ಯೋಗಾಸನದ ಮಹತ್ವವನ್ನು ತಿಳಿಸಿ ಯೋಗಾಸನದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ, ಪ್ರಾಣಾಯಾಮ, ವೃಕ್ಷಾಸನ, ಚಕ್ರಾಸನ, ಶವಾಸನ ಮುಂತಾದ ಆಸನಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ವೇಣು ಅಪ್ಪಣ್ಣ, ಖಜಾಂಚಿ ಯತೀಶ್ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ರಶ್ಮಿ ಎನ್‍ಎಸ್‍ಎಸ್ ಕಾರ್ಯಕ್ರಮಾಧಿಕಾರಿ ಧಮಯಂತಿ, ಎನ್ ಸಿ ಸಿ ಅಧಿಕಾರಿ ಕಾವೇರಪ್ಪ ಹಾಗೂ ವಿದ್ಯಾಸಂಸ್ಥೆಯ ಎಲ್ಲಾ ವಿಭಾಗದ ಶಿಕ್ಷಕರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ 

Read More

ನಾಪೋಕ್ಲು ಜೂ.23 NEWS DESK : ಕೊಡಗಿನ ಸಂಸ್ಕೃತಿ, ಕ್ರೀಡೆ ಹಾಗೂ ಇತಿಹಾಸವನ್ನು ಪೋಷಿಸಿ ಬೆಳೆಸಲು ಸದಾ ಸಿದ್ಧ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಕೊಳಕೇರಿ ಗ್ರಾಮದ ಕುಂಡ್ಯೋಳಂಡ ಮನೆಯ ಮುಖ್ಯಸ್ಥರ ಕೋರಿಕೆ ಮೇರೆಗೆ ಕುಂಡ್ಯೋಳಂಡ ಐನ್ ಮನೆಯಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಪಾಲ್ಗೊಂಡು ಕುಟುಂಬಸ್ಥರ ಆತಿಥ್ಯವನ್ನು ಸ್ವೀಕರಿಸಿ ಮಾತನಾಡಿದ ಶಾಸಕರು, ಕೊಡವ ಜನಾಂಗದ ಆಚಾರ, ವಿಚಾರ, ಸಂಸ್ಕೃತಿ ವಿಭಿನ್ನವಾಗಿದೆ. ಅದರೊಂದಿಗೆ ಹಾಕಿಕ್ರೀಡೆಯು ಮಹತ್ವವನ್ನು ಹೊಂದಿದೆ. ಮುಂದಿನ ಸಾಲಿನಲ್ಲಿ ನಡೆಯುವ ಹಾಕಿ ಉತ್ಸವದ ಯಶಸ್ವಿಗೆ ಸಕಲ ಸಹಕಾರ ನೀಡುವುದಾಗಿ ಭರವಸೆ ನೀಡಿದರು. 2024ರಲ್ಲಿ ಜರುಗಿದ ಕುಂಡ್ಯೋಳಂಡ ಕಪ್ ಹಾಕಿ ನಮ್ಮೆ ಅಭೂತಪೂರ್ವ ಯಶಸ್ಸು ಕಂಡಿತ್ತು. ಈ ಯಶಸ್ಸಿನ ಹಿಂದೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ಕೊಡುಗೆ ಬಹು ದೊಡ್ಡದು. ಕುಂಡ್ಯೋಳಂಡ ಕುಟುಂಬಸ್ಥರ ಕೋರಿಕೆ ಮೇರೆಗೆ ಶಾಸಕರು ಈ ಹಾಕಿ ಪಂದ್ಯಾಟಕ್ಕೆ ವಿಶೇಷ ಅನುದಾನ ಒದಗಿಸುವಲ್ಲಿ ಶ್ರಮಿಸಿದರು. ಶಾಸಕರ ಈ ಪ್ರಯತ್ನಕ್ಕೆ ತಮ್ಮ ಕೃತಜ್ಞತೆಯನ್ನು…

Read More

ಮಡಿಕೇರಿ ಜೂ.23 NEWS DESK : ರೋಟರಿ ಜಿಲ್ಲೆ 3181 ನ ಜಿಲ್ಲಾ ಯೋಜನಾ ಕಾಯ೯ದಶಿ೯ಯಾಗಿ ಮಡಿಕೇರಿ ರೋಟರಿ ಸಂಸ್ಥೆಯ ಕಿರಿಯಮಾಡ ರತನ್ ತಮ್ಮಯ್ಯ ನೇಮಕಗೊಂಡಿದ್ದಾರೆ. ಕೊಡಗು, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆಗಳಿಗೊಳಪಡುವ 87 ರೋಟರಿ ಸಂಸ್ಥೆಗಳಿಗೆ ಜಿಲ್ಲಾ ಯೋಜನಾ ಕಾಯ೯ದಶಿ೯ಯಾಗಿ ರತನ್ ತಮ್ಮಯ್ಯ ಅವರನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಮುಂದಿನ ಸಾಲಿನ ರೋಟರಿ ಅವಧಿಗೆ ಆಯ್ಕೆ ಮಾಡಿ ಮುಂದಿನ ಅವಧಿಯ ರೋಟರಿ ಜಿಲ್ಲಾ ಗವನ೯ರ್ ರಾಮ್ಕಿ ನೇಮಕಾತಿ ನೀಡಿದ್ದಾರೆ. ಮಡಿಕೇರಿ ರೋಟರಿ ಸಂಸ್ಥೆಯಲ್ಲಿ ಅಧ್ಯಕ್ಷ, ವಲಯ ಸೇನಾನಿ, ರೋಟರಿ ವಲಯ 6 ರ ಸಹಾಯಕ ಗವನ೯ರ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾಯ೯ನಿವ೯ಹಿಸಿದ ಅನುಭವ ಹೊಂದಿರುವ ರತನ್ ತಮ್ಮಯ್ಯ ಮುಂದಿನ ರೋಟರಿ ಅವಧಿಗೆ ಸಂಧ್ಯಾ ಸುರಕ್ಷ, ಅಂಗನವಾಡಿಗಳಿಗೆ ಕಾಯಕಲ್ಪ, ರಕ್ತದಾನ ಅಭಿಯಾನ, ಮಹಿಳೆಯರ ಸ್ವಾವಲಂಭಿ ಜೀವನಕ್ಕಾಗಿ ಸ್ವಾವಲಂಭಿ ಸ್ತ್ರೀ , ಸಕಾ೯ರಿ ಶಾಲಾ ಮಕ್ಕಳಿಗೆ ಪ್ರೋತ್ಸಾಹ ಸೇರಿದಂತೆ 11 ವಿವಿಧ ಯೋಜನೆಗಳನ್ನು ರೋಟರಿ ಸಂಸ್ಥೆಗಳು ಅನುಷ್ಟಾನಗೊಳಿಸುವ ಹೊಣೆ…

Read More

ಮಡಿಕೇರಿ NEWS DESK ಜೂ.23 : ಗಾರೆ ಕೆಲಸಕ್ಕೆಂದು ಶ್ರೀಮಂಗಲಕ್ಕೆ ಬಂದಿದ್ದ ತಮಿಳುನಾಡು ರಾಜ್ಯದ ದಿಂಡಿಕ್ಕಲ್ ಜಿಲ್ಲೆಯ ನಾಗೂರು ಮೂಲದ ಕುಮಾರ ಕೆ. ಎಂಬುವವರು ನಾಪತ್ತೆಯಾಗಿರುವ ಕುರಿತು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಮಾರ ಅವರ ಪತ್ನಿ ಪೇಚಿಯಮ್ಮ ಎಂಬುವವರು ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಜೂ.1 ರಂದು ಪತಿ ಕುಮಾರ ಅವರು ಊರಿನಿಂದ ಸ್ನೇಹಿತರೊಂದಿಗೆ ಗಾರೆ ಕೆಲಸಕ್ಕೆಂದು ಹೋದವರು ಶ್ರೀಮಂಗಲದಲ್ಲಿ ತಂಗಿದ್ದರು. ಜೂ.15 ರಂದು ನನಗೆ ಕರೆ ಮಾಡಿ ನಾನು ಅನಾರೋಗ್ಯಕ್ಕೆ ಒಳಗಾಗಿದ್ದು, ಊರಿಗೆ ಮರಳುತ್ತೇನೆ ಎಂದು ಹಾಗೂ ಜೂ.16 ರಂದು ನಾನು ಊರಿಗೆ ಬರುತ್ತಿದ್ದು, ಬಸ್ ನಲ್ಲಿದ್ದೇನೆ ಎಂದು ತಿಳಿಸಿದ್ದರು. ಆದರೆ ಕುಮಾರ ಅವರು ಇಲ್ಲಿಯವರೆಗೆ ಮನೆಗೆ ಬಂದಿರುವುದಿಲ್ಲ, ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಬರುತ್ತಿದೆ ಎಂದು ಪೇಚಿಯಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಕುಮಾರ ಅವರು ಪತ್ತೆಯಾದರೆ ಶ್ರೀಮಂಗಲ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. *ಕಾಣೆಯಾದ ವ್ಯಕ್ತಿಯ ಚಹರೆ* ಹೆಸರು…

Read More

ವಿರಾಜಪೇಟೆ ಜೂ.23 NEWS DESK : ಪತ್ರಕರ್ತರು ಸಮಾಜದ ಎರಡು ಕಣ್ಣುಗಳಿದ್ದಂತೆ, ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಬಹುಮುಖ್ಯ ಎಂದು ಸಮಾಜ ಸೇವಕಿ ಕಾಣತಂಡ ಬೀನ ಜಗದೀಶ್ ಹೇಳಿದರು, ನಗರದ ಎ-ಜೆಡ್ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಸಮಾಜದಲ್ಲಿ ನಡೆಯುತ್ತಿರುವ ಘಟನೆಗಳು ಜನಸಾಮಾನ್ಯರಿಗೆ ತಲುಪಲು ಪತ್ರಕರ್ತರು ಪ್ರಮುಖ ಕಾರಣಕರ್ತರು. ತಮ್ಮ ವೈಯುಕ್ತಿಕ ಬದುಕನ್ನು ಬದಿಗೊತ್ತಿ ಸಮಾಜ ನಿರ್ಮಾಣದಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಕೆಲಸ ಶ್ಲಾಘನೀಯ. ಮುಂದಿನ ದಿನಗಳಲ್ಲಿ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ದತ್ತಿನಿಧಿ ಪ್ರಶಸ್ತಿ ಸ್ಥಾಪಿಸುವುದಾಗಿ ಕಾಣತಂಡ ಬೀನ ಜಗದೀಶ್ ಇದೇ ಸಂದರ್ಭ ಭರವಸೆ ನೀಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತಾನಾಡಿ, ಪತ್ರಕರ್ತರು ಬದಲಾದ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸಬೇಕಾಗಿದೆ. ಪ್ರಸ್ತುತ ದಿನಗಳಲ್ಲಿ…

Read More

ಕಾರ್ಕಳ ಜೂ.23 NEWS DESK : ಯೋಗ ದಿನಾಚರಣೆಯ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ‘ಮನಃಶಾಂತಿಗೆ ಯೋಗ’ ಶೀರ್ಷಿಕೆಯಡಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ 2 ಗಿನ್ನಿಸ್ ದಾಖಲೆ ಸೃಷ್ಟಿಸಿ, 9 ವಿಶ್ವದಾಖಲೆ ನಿರ್ಮಿಸಿದ ಅದ್ಭುತ ಪ್ರತಿಭೆ ಉಡುಪಿಯ ಸೈಂಟ್ ಸಿಸಿಲಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನುಶ್ರೀ ‘ತನು ಯೋಗ ಭೂಮಿ’ ಮುಖಾಂತರ ಯೋಗ ಪ್ರದರ್ಶನವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯರಾದ ವಿದ್ವಾನ್ ಗಣಪತಿ ಭಟ್, ಯೋಗವು ಕೇವಲ ವ್ಯಾಯಾಮವಲ್ಲ. ಅದು ಬದುಕುವ ಒಂದು ಶೈಲಿ. ನಾವು ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯಕರ ಮತ್ತು ಸಂತುಷ್ಟ ಜೀವನವನ್ನು ಬದುಕಬಹುದು ಎಂದು ಯೋಗದ ಮಹತ್ವವನ್ನು ಕುರಿತು ತಿಳಿಸಿದರು. ಕಾರ್ಯಕ್ರಮದ ಕೊನೆಗೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ತನುಶ್ರೀಯವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಬೋಧಕ – ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

Read More

ಮಡಿಕೇರಿ ಜೂ.23 NEWS DESK : ಸುಂಟಿಕೊಪ್ಪ ಹೋಬಳಿಯ ಕಾನ್ ಬೈಲು ಬೈಚನಹಳ್ಳಿ ಗ್ರಾಮದಲ್ಲಿ ಮಳೆಯಿಂದ ಮನೆಯ ಗೋಡೆ ಕುಸಿತಗೊಂಡಿದೆ. ಗ್ರಾಮದ ನಿವಾಸಿ ಪಿ.ಬಿ.ಗುರುವ  ಎಂಬವರ ಮನೆಯ ಹಿಂಬದಿಯ ಗೋಡೆ ರಾತ್ರಿ ಸುರಿದ ಬಾರಿ ಮಳೆ ಗಾಳಿಯಿಂದ ಕುಸಿದು ಹಾನಿಯಾಗಿದೆ. ಸ್ಥಳಕ್ಕೆ ಸುಂಟಿಕೊಪ್ಪ ಹೋಬಳಿ  ಕಂದಾಯ ಪರೀವಿಕ್ಷಕರು ಹಾಗೂ ನಾಕೂರು ಶಿರಂಗಾಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಂಟಿ ಪರಿಶೀಲಿಸಿದರು. ಮಡಿಕೇರಿ ತಾಲ್ಲೂಕು ಕಾಟಕೇರಿ ಗ್ರಾಮದ ಅಶ್ವಥ್ ಭಟ್ ಎಂಬುವರ ವಾಸದ ಮನೆಯ ಗೋಡೆ ಮಳೆ ಗಾಳಿಯಿಂದಾಗಿ ಕುಸಿದು ಹಾನಿಯಾಗಿದೆ.

Read More

ಸೋಮವಾರಪೇಟೆ ಜೂ.23 NEWS DESK : ಭಾರತೀಯ ಪುರಾತನ ಪದ್ಧತಿಗಳಲ್ಲಿ ಯೋಗಕ್ಕೆ ವಿಶೇಷ ಸ್ಥಾನಮಾನವಿದೆ. ಯೋಗವನ್ನು ಇಂದು ವಿದೇಶೀಗರು ಹೆಚ್ಚು ಅಭ್ಯಾಸ ಮಾಡುತ್ತಿದ್ದಾರೆ. ಆದರೆ ಭಾರತೀಯರು ಮಹತ್ವ ಅರಿಯುವಲ್ಲಿ ವಿಫಲರಾಗುತ್ತಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಅಭಿಪ್ರಾಯಿಸಿದರು. ಶ್ರೀ ರವಿಶಂಕರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ಸೋಮವಾರಪೇಟೆ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯೋಗವು ಮನಸ್ಸು, ದೇಹ, ಉಸಿರಿನ ಹೊಂದಾಣಿಕೆಯಾಗಿದೆ. ಇದರ ಅಭ್ಯಾಸದಿಂದ ಜೀವನ ಸುಗಮವಾಗುತ್ತದೆ ಎಂದು ಅಭಿಪ್ರಾಯಿಸಿದರು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶಿಕ್ಷಕಿ ರಾಗಿಣಿ ಪ್ರಾಣಾಯಾಮದ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯಿಂದ ಪ್ರತಿನಿತ್ಯ ಯೋಗಾಭ್ಯಾಸ, ಆನಂದೋತ್ಸವ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಶಾಲಾ ಕಾಲೇಜುಗಳಲ್ಲಿ ಯೋಗದ ಮಹತ್ವದ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಹಾನಗಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಯಶಾಂತ್ ಕುಮಾರ್, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯೆ…

Read More