ಮಡಿಕೇರಿ ಜು 25 NEWS DESK : ಕಾಗಿ೯ಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ಜು.26 ರಂದು ಕೊಡಗು ಪತ್ರಕತ೯ರ ಸಂಘ (ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಕಾಗಿ೯ಲ್ ಹುತಾತ್ಮರಿಗೆ ಗೌರವ ನಮನ ಕಾಯ೯ಕ್ರಮ ದೀಪನಮನ, ಗಾನ ನಮನ ಮತ್ತು ಪುಪ್ಪ ನಮನ ಆಯೋಜಿಸಲಾಗಿದೆ. ನಗರದ ಗೌಡ ಸಮಾಜದಲ್ಲಿ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಆಯೋಜಿತ ಕಾಯ೯ಕ್ರಮದಲ್ಲಿ ಜಿಲ್ಲೆಯಾದ್ಯಂತಲಿನ 85 ಸಂಘಸಂಸ್ಥೆಗಳು ಪಾಲ್ಗೊಳ್ಳುತ್ತಿವೆ ಎಂದು ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಮಾಹಿತಿ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮೈಸೂರಿನ ಪಾವನ ಇವೆಂಟ್ಸ್ ನಿಂದ ದೇಶಭಕ್ತಿ ಗೀತೆ ಕಾಯ೯ಕ್ರಮ ಇದೇ ಸಂದಭ೯ಆಯೋಜಿತವಾಗಿದ್ದು ಕಾಗಿ೯ಲ್ ವಿಜಯ್ ದಿವಸ್ ಕಾಯ೯ಕ್ರಮಕ್ಕೆ ಶಕ್ತಿ ಪ್ರತಿಷ್ಟಾನ, ಪತ್ರಿಕಾಭವನ ಟ್ರಸ್ಟ್, ಕೊಡಗು ಔಷಧಿ ವ್ಯಾಪಾರಸ್ಥರ ಸಂಘ, ಭಾರತೀಯ ಮೆಡಿಕಲ್ ಅಸೋಸಿಯೇಷನ್ ನ ಕೊಡಗು ಘಟಕ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು,…
ಲೇಖಕ: admin
ಮಡಿಕೇರಿ NEWS DESK ಜು.25 : ದೇವರಕೊಲ್ಲಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗೋಣಿಕೊಪ್ಪಲಿನ ಮಾರುಕಟ್ಟೆ ರಸ್ತೆಯ ನಿವಾಸಿಗಳಾದ ನಿಹಾದ್, ರಿಸ್ವಾನ್, ರಾಕಿಬ್ ಹಾಗೂ ರೀಶು ಮೃತ ದುರ್ದೈವಿಗಳು. ಮೃತದೇಹಗಳನ್ನು ಸುಳ್ಯದ ಆಸ್ಪತ್ರೆಯಲ್ಲಿ ಇಡಲಾಗಿದೆ.
ಜಲವಾರ್ ಜು.25 NEWS DESK : ಇಂದು ಬೆಳಗ್ಗೆ ರಾಜಸ್ಥಾನದ ಜಲವಾರ್ ಜಿಲ್ಲೆಯ ಮನೋಹರ್ಥನಾ ಬ್ಲಾಕ್ನ ಪೀಪ್ಲೋಡಿ ಗ್ರಾಮದಲ್ಲಿ ಸರ್ಕಾರಿ ಶಾಲಾ ಕಟ್ಟಡ ಕುಸಿದು ಅವಶೇಷಗಳಡಿಯಲ್ಲಿ ಸಿಲುಕಿ ಮೃತಪಟ್ಟ ವಿದ್ಯಾರ್ಥಿಗಳ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. 30ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದು, ದುರಂತ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಟ್ಟಡ ಕುಸಿದಾಗ ದೊಡ್ಡ ಅಪಘಾತದ ಶಬ್ದ ಕೇಳಿ ಗ್ರಾಮಸ್ಥರು ಮತ್ತು ಶಾಲಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಯಿತು, ಸ್ಥಳೀಯರು ಮತ್ತು ತುರ್ತು ರಕ್ಷಣಾ ಸಿಬ್ಬಂದಿ ಮಕ್ಕಳನ್ನು ಅವಶೇಷಗಳಿಂದ ಹೊರತೆಗೆದರು. ಎಲ್ಲಾ ಗಾಯಗೊಂಡ ವಿದ್ಯಾರ್ಥಿಗಳನ್ನು ಮೊದಲು ಮನೋಹರ್ಥನಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಮಡಿಕೇರಿ ಜು.25 NEWS DESK : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕುಶಾಲನಗರ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ರೈತರು ಮುಸುಕಿನ ಜೋಳ ಬೆಳೆಯನ್ನು ಬೆಳೆದಿದ್ದು ಪ್ರಸ್ತುತ ಅಲ್ಲಲ್ಲಿ ಮುಸುಕಿನ ಜೋಳ ಬೆಳೆಗೆ ಸುಳಿ ಎಲೆ ಬಿಳಿ ರೋಗ ಅಥವಾ ಕೇದಿಗೆ ರೋಗ ಅಥವಾ Downey mildew ರೋಗದ ಬಾಧೆ ಕಂಡು ಬಂದಿರುತ್ತದೆ. ಈ ರೋಗವನ್ನು ಹತೋಟಿ ಮಾಡಲು ರೈತರು ಈ ಕ್ರಮಗಳನ್ನು ಅನುಸರಿಸಲು ಕೋರಿದೆ. ಮುಸುಕಿನ ಜೋಳ ಬೆಳೆಯ ಹೊಲದಲ್ಲಿರುವ ಕಳೆಗಳನ್ನು ಕಿತ್ತುಹಾಕುವುದು ಹಾಗೂ ಬದುಗಳು ಸಹ ಕಳೆಯಿಂದ ಮುಕ್ತವಾಗಿರುವಂತೆ ನೋಡಿಕೊಳ್ಳುವುದು. ಮುಸುಕಿನ ಜೋಳ ಬಿತ್ತನೆ ಸಂದರ್ಭದಲ್ಲಿ ಪೊಟ್ಯಾಶ್ ರಸಗೊಬ್ಬರ ಕೊಡದೆ ಇರುವ ರೈತರು ತುರ್ತಾಗಿ 25 ಕೆಜಿ ಪೊಟ್ಯಾಶ್ ಗೊಬ್ಬರವನ್ನು ಪ್ರತಿ ಎಕರೆಗೆ ನೀಡತಕ್ಕದ್ದು. ರಾಸಾಯನಿಕ ನಿಯಂತ್ರಣವಾಗಿ 1.0 ಎಂಎಲ್ ಟೆಬುಕೋನೊಜೋಲ್ ಅಥವಾ 2 ಗ್ರಾಂ ಮೆಟಲಾಕ್ಸಿಲ್+ ಮ್ಯಾನ್ಕೋಜೆಬ್ ಶಿಲೀಂದ್ರ ನಾಶಕವನ್ನು ಪ್ರತಿ ಲೀಟರ್ ನೀರಿಗೆ ಅಂಟು ದ್ರಾವಣದೊಂದಿಗೆ ಬೆರೆಸಿ ಮುಸುಕಿನ ಜೋಳದ ಬೆಳೆಯ ಎಲ್ಲಾ…
ಮಡಿಕೇರಿ ಜು.25 NEWS DESK : ಕಂದಾಯ ಸಚಿವರು ಬಲ್ಯಮಂಡೂರು ಬಳಿಯ ಸೇತುವೆಯನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಪರಿಶೀಲಿಸಿದರು.
ಮಡಿಕೇರಿ NEWS DESK ಜು.25 : ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟ ಗುರಿ,ಸಾದಿಸುವ ಛಲ ಇದ್ದಲ್ಲಿ ಜೀವನದಲ್ಲಿ ಏನನ್ನು ಬೇಕಾದರೂ ಸಾದಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವಯ೯ ಹೇಳಿದ್ದಾರೆ. ಮಾದಾಪುರದ ಶ್ರೀಮತಿ ಡಿ. ಚೆನ್ಮಮ್ಮ ಪದವಿ ಪೂವ೯ ಕಾಲೇಜಿನಲ್ಲಿ ವಿದ್ಯಾಥಿ೯ ಸಂಘ ಉದ್ಘಾಟಿಸಿ ಅವರು ಮಾತನಾಡಿದರು. ಎಂತಹುದ್ದೇ ಕಠಿಣ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಎದೆಗುಂದದೆ ಸೋಲು ಗೆಲವುಗಳನ್ನು ಸ್ಥಿತಪ್ರಜ್ಞ ರಾಗಿ ಸ್ವೀಕರಿಸುವಂತೆ ವಿದ್ಯಾರ್ಥಿಗಳಿಗೆ ಅವುರು ಕರೆನೀಡಿದರು. ಗರಗಂದೂರು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪಾರ್ವತಿ ಮಾತನಾಡಿ ,ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳು ಉತ್ತಮ ನಾಯಕತ್ವ ಗುಣ ಗಳನ್ನು ಮೈಗೂಡಿಸಿಕೊಳ್ಳುವoತೆ ಕಿವಿಮಾತು ಹೇಳಿದರು. ಶ್ರೀಮತಿ ಡಿ. ಚೆನ್ನಮ್ಮ ವಿದ್ಯಾಸಂಸ್ಥೆಯ ಅಧ್ಯಕ್ಷ ಕರ್ನಲ್ ಬಿ ಜಿ ವಿ ಕುಮಾರ್, ಕಾರ್ಯದರ್ಶಿ ಮಧು ಬೋಪಣ್ಣ, ಪ್ರಾಂಶುಪಾಲ ಮಂದಪ್ಪ, ಆಡಳಿತ ಮಂಡಳಿ ಸದಸ್ಯರಾದ ಟಿ.ಪಿ.ಸಂದೇಶ್ ಮುಖ್ಯ ಶಿಕ್ಷಕಿ ರೀಟಾ ವೇದಿಕೆಯಲ್ಲಿದ್ದರು. ದೈಹಿಕ ಶಿಕ್ಷಕ ಪಾಲಾಕ್ಷ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಕಿ ಪವಿತಾ ವಂದಿಸಿದರು. ಕಾಯ೯ಕ್ರಮವನ್ನು ಉಪನ್ಯಾಸಕಿ ಪ್ರಮೀಳಾ…
ಮಡಿಕೇರಿ NEWS DESK ಜು.25 : ಆಶಾ ಕಾರ್ಯಕರ್ತೆಯರಿಗೆ ಈಗಾಗಲೇ ಘೋಷಿಸಿರುವ 10 ಸಾವಿರ ರೂ. ಗೌರವ ಧನವನ್ನು ನೀಡದಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕೊಡಗು ಜಿಲ್ಲಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಉಪಾಧ್ಯಕ್ಷೆ ಎಂ.ಉಮಾದೇವಿ ಹಾಗೂ ಕೊಡಗು ಜಿಲ್ಲಾಧ್ಯಕ್ಷೆ ತೆಕ್ಕಡೆ ಬಿ.ಪೂರ್ಣಿಮಾ ಅವರ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಜಿಲ್ಲಾ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸಂಘದ ಉಪಾಧ್ಯಕ್ಷೆ ಉಮಾದೇವಿ ಎಂ.ಅವರು ಮಾತನಾಡಿ, ಕಳೆದ ಜನವರಿಯಲ್ಲಿ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ಸೇರಿಸಿ ಕನಿಷ್ಟ 10 ಸಾವಿರ ಗೌರವ ಧನವನ್ನು ನೀಡುವುದಾಗಿ ಭರವಸೆ ನೀಡಿದ್ದರು. ಅಲ್ಲದೆ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಇನ್ಸೆಂಟಿವ್ನ್ನು ಶೀಘ್ರ…
ಮಡಿಕೇರಿ ಜು.25 NEWS DESK : ನಗರ ದಸರಾ ಸಮಿತಿಯ 2024ನೇ ಸಾಲಿನ ಜಮಾ ಖರ್ಚು ಮಂಡನೆ ಹಾಗೂ 2025 ರ ಅಕ್ಟೋಬರ್ ಮಾಹೆಯಲ್ಲಿ ಜರುಗುವ ಮಡಿಕೇರಿ ದಸರಾ ಆಚರಣೆಯ ಪೂರ್ವ ಸಿದ್ಧತೆ ಬಗ್ಗೆ ಜು.26 ರಂದು ಸಂಜೆ 4 ಗಂಟೆಗೆ ನಗರ ದಸರಾ ಸಮಿತಿಯ ಅಧ್ಯಕ್ಷರು ಹಾಗೂ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಗರದ ಹೋಟೆಲ್ ರಾಜ್ ದರ್ಶನ್ನಲ್ಲಿ ದಸರಾ ಆಚರಣೆಯ ಪೂರ್ವಭಾವಿ ಸಭೆ ನಡೆಯಲಿದೆ. ಸಂಪ್ರದಾಯದಂತೆ ಜು.26 ರಂದು ಮಧ್ಯಾಹ್ನ 3 ಗಂಟೆಗೆ ಪೇಟೆ ಶ್ರೀರಾಮಮಂದಿರ ದೇವಾಲಯದಲ್ಲಿ ಪ್ರಥಮ ಪೂಜೆ ನಡೆಯಲಿದೆ ಎಂದು ನಗರಸಭೆ ಹಾಗೂ ನಗರ ದಸರಾ ಸಮಿತಿ ಅಧ್ಯಕ್ಷರಾದ ಪಿ.ಕಲಾವತಿ ಅವರು ತಿಳಿಸಿದ್ದಾರೆ.
ಮಡಿಕೇರಿ ಜು.25 NEWS DESK : ಸೆಪ್ಟೆಂಬರ್ 1 ರಿಂದ ತಿಂಗಳಾವಧಿಗೆ ಜರುಗಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಲಿಂಗಾಯಿತ ಮಠದಿಪತಿಗಳ ಒಕ್ಕೂಟದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಯಿತು. ಅಕ್ಟೋಬರ್ 5 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರ ನೇತೃತ್ವದಲ್ಲಿ ಸುಮಾರು ಹತ್ತಕ್ಕೂ ಅಧಿಕ ಪೀಠಾಧಿಪತಿಗಳು ಮುಖ್ಯಮಂತ್ರಿಗಳನ್ನು ಭೇಟಿಯಾದರು. ಇದೇ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್ ಪೊನ್ನಣ್ಣ ಅವರನ್ನು ಆಹ್ವಾನಿಸಲಾಯಿತು.
ಮಡಿಕೇರಿ ಜು.25 NEWS DESK : 2025-26 ನೇ ಸಾಲಿನ ಕಾರ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾರ್ಯಾಧ್ಯಕ್ಷರಾಗಿ ಕೋಟೆಮಾರಿಯಮ್ಮ ದೇವಾಲಯದ ಅರುಣ್ ಕುಮಾರ್ ಆಯ್ಕೆಯಾಗಿದ್ದಾರೆ. ಮಡಿಕೇರಿ ದಸರಾ ಸಮಿತಿಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆಯು ಮಡಿಕೇರಿಯ ರಾಜ್ ದರ್ಶನ್ ಸಭಾಂಗಣದಲ್ಲಿ ನಡೆಯಿತು. ಬಹಳ ಕುತುಹಲ ಕೆರಳಿಸಿದ್ದ ಕಾರ್ಯಧ್ಯಕ್ಷ ಸ್ಥಾನಕ್ಕೆ ತೆರೆಬಿದ್ದಿದ್ದು, ಮುಂದಿನ ಎರಡು ವರ್ಷ ಬಿ.ಕೆ.ಅರುಣ್ ಕುಮಾರ್ ಅಧಿಕಾರ ವಹಿಸಲಿದ್ದಾರೆ. ಈ ಒಂದು ಸ್ಥಾನಕ್ಕೆ ನಾಲ್ಕು ಜನರ ನಡುವೆ ಬಹಳ ಪೈಪೋಟಿ ನಡೆದಿದ್ದು, ಚುನಾವಣೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಿತು. ಇದರಲ್ಲಿ ಕೋಟೆಮಾರಿಯಮ್ಮ ದೇವಾಲಯದ ಜಿ.ಸಿ.ಜಗದೀಶ್, ಕೋದಂಡ ರಾಮ ದೇವಾಲಯದ ಜಯಂತಿ ಶೆಟ್ಟಿ ರೈ, ಕೋಟೆ ಮಾರಿಯಮ್ಮ ದೇವಾಲಯದ ಅರುಣ್ ಕುಮಾರ್ ಹಾಗೂ ದೇಚೂರು ಶ್ರೀ ರಾಮಮಂದಿರ ದೇವಾಲಯದ ಟಿ.ಎಂ.ಅಯ್ಯಪ್ಪ ಅವರುಗಳ ನಡುವೆ ಪೈಪೋಟಿ ನಡೆಯಿತು. ಚುನಾವಣೆಯಲ್ಲಿ ಕೋಟೆ ಮಾರಿಯಮ್ಮ ದೇವಾಲಯದ ಅರುಣ್ ಕುಮಾರ್ 6 ಮತಗಳನ್ನ ಪಡೆಯುವ ಮೂಲಕ ಮುಂದಿನ ಎರಡು ವರ್ಷ ಅಧಿಕಾರ ಹಿಡಿದಿದ್ದಾರೆ. ಇದರ ಜೊತೆಗೆ ಉಪಾಧ್ಯಕ್ಷರಾಗಿ ಪೇಟೆ…






