ಲೇಖಕ: admin

ಮಡಿಕೇರಿ ಜೂ.21 NEWS DESK : ಪೊನ್ನಂಪೇಟೆಯ ಮದರ್ಸ್ ಆರ್ಮ್ ಮೊಂಟೆಸ್ಸರಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪುಟಾಣಿ ಮಕ್ಕಳು ವಿವಿಧ ಭಂಗಿಗಳ ಯೋಗವನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆದರು, ಅಲ್ಲದೆ ಇತರರಿಗೆ ಮಾದರಿಯಾದರು. ಶಿಕ್ಷಕರು ಹಾಗೂ ಸಿಬ್ಬಂದಿಗಳು ಕೂಡ ಪುಟಾಣಿಗಳೊಂದಿಗೆ ಯೋಗ ಮಾಡಿದರು. ಯೋಗಾಸನದ ಮಹತ್ವವನ್ನು ವಿವರಿಸಿದ ಮದರ್ಸ್ ಆರ್ಮ್ ಮೊಂಟೆಸ್ಸರಿ ಶಾಲೆಯ ಸಂಸ್ಥಾಪಕಿ ವಿದ್ಯಾಶ್ರೀ ಅಶೋಕ್ ಭಟ್ ಅವರು ಆರೋಗ್ಯಕರ ಜೀವನಕ್ಕೆ ಬಾಲ್ಯದಿಂದಲೇ ಯೋಗಾಭ್ಯಾಸ ಮಾಡಿಸುವುದು ಅತ್ಯಗತ್ಯವಾಗಿದೆ. ಜೀವನ ಶೈಲಿಯನ್ನು ಉತ್ತಮಗೊಳಿಸಲು ಯೋಗ ಸಹಕಾರಿಯಾಗಿದೆ ಎಂದರು. ತರಬೇತುದಾರರಾದ ಪ್ರೇಕ್ಷ ಭಟ್, ಶಾಲಾ ಸಿಬ್ಬಂದಿಗಳಾದ ಸೌಮ್ಯ ಬಿ., ಜಮುನಾ, ಶರಣ್ಯ, ಸಿಲ್ಯ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Read More

ಮಡಿಕೇರಿ ಜೂ.21 NEWS DESK : ವಾಣಿಜ್ಯ ಹಾಗೂ ಸಹಕಾರ ಬ್ಯಾಂಕುಗಳು ತಮ್ಮ ಲಾಭಾಂಶದ ಗುರಿ ಜೊತೆಗೆ ಸಮಾಜ ಮುಖಿಯಾಗಿ ಕೆಲಸ ಮಾಡಬೇಕು ಎಂದು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬ್ಯಾಂಕುಗಳು, ಕೃಷಿಕರು, ಉದ್ಯಮಿಗಳು, ಸಣ್ಣ ಉದ್ಯಮಿಗಳು, ವ್ಯಾಪಾರಸ್ಥರು, ಗುಡಿ ಕೈಗಾರಿಕೆ… ಹೀಗೆ ಪ್ರತಿಯೊಬ್ಬರಿಗೂ ಸಾಲ ನೀಡುವುದರ ಜೊತೆಗೆ ಬ್ಯಾಂಕುಗಳ ಗುರಿ ಮತ್ತು ಪ್ರಗತಿ ಸಾಧಿಸುವಂತಾಗಬೇಕು. ಹಾಗೆಯೇ ಎಲ್ಲರನ್ನು ಒಳಗೊಂಡ ಸಾಧನೆ ಅತೀ ಮುಖ್ಯ ಎಂದು ಸಂಸದರು ಪ್ರತಿಪಾದಿಸಿದರು. ಬ್ಯಾಂಕುಗಳು ಕೇಂದ್ರ ಸರ್ಕಾರದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಬ್ಯಾಂಕುಗಳ ವಾಣಿಜ್ಯ, ವ್ಯಾಪಾರ, ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ ಹೀಗೆ ಆದ್ಯತಾ ವಲಯಕ್ಕೂ ಹೆಚ್ಚಿನ ಅವಕಾಶ ಮಾಡಬೇಕು ಎಂದು ಸಂಸದರು ನುಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸು ನನಸು ಮಾಡುವಲ್ಲಿ ಬ್ಯಾಂಕುಗಳು…

Read More

ಮಡಿಕೇರಿ ಜೂ.21 NEWS DESK : ಭಾಗಮಂಡಲ ಪಂಚಾಯಿತಿ ವ್ಯಾಪ್ತಿಯ ತಾವೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಕಳೆದ ಎರಡೂವರೆ ವರ್ಷಗಳಿಂದ ಕಾರಣಾಂತರಗಳಿಂದ ಮುಚ್ಚಲ್ಪಟ್ಟಿದ್ದ ಶಾಲೆಯನ್ನು ತಾವೂರು ಗ್ರಾಮಸ್ಥರು ಹಾಗೂ ಸಾರ್ವಜನಿಕರ ಮನವಿಯ ಮೇರೆಗೆ ಶಿಕ್ಷಣ ಇಲಾಖೆ ಪುನರ್ ಆರಂಭಿಸಿದೆ.  ಪ್ರಸ್ತುತ ಶಾಲೆಗೆ ಆರು ಮಕ್ಕಳು ದಾಖಲಾಗಿದ್ದು, ಮಕ್ಕಳಿಗೆ ಶಾಲಾ ಕಿಟ್ ನೀಡುವುದರ ಮೂಲಕ ಶಾಸಕರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕರ್ನಾಟಕ ರಾಜ್ಯ ಸರಕಾರವು ವಿದ್ಯಾರ್ಥಿಗಳ ಉತ್ತಮ ವಿದ್ಯಾಭ್ಯಾಸಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸದಲ್ಲಿ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಬದ್ಧವಾಗಿದೆ. ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಎ.ಎಸ್.ಪೊನ್ನಣ್ಣ ಕರೆ ನೀಡಿದರು.  ಡಿಡಿಪಿಐ ರಂಗಧಾಮಯ್ಯ, ಬಿಇಓ ದೊಡ್ಡೆಗೌಡರು, ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಕೋಳಿಬೈಲು ವೆಂಕಟೇಶ್, ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಕೆಪಿಸಿಸಿ ಸದಸ್ಯ…

Read More

ಕುಶಾಲನಗರ ಜೂ.21 NEWS DESK : ಕೊಡಗು ಸೈನಿಕ ಶಾಲೆಯಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಶೀರ್ಷಿಕೆಯಡಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಎನ್‌ಸಿಸಿ ಘಟಕದ ವತಿಯಿಂದ ಶಾಲೆಯ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕ ಸಿ.ಎಚ್‌.ಎಮ್‌ ಅನೂಪ್ ಚೌಹಾನ್ ಯೋಗಾಸನದ ವಿವಿಧ ಆಸನಗಳ ಪ್ರದರ್ಶನ ನೀಡಿ ಭಾಗವಹಿಸಿದವರಿಗೆ ಮಾರ್ಗದರ್ಶನ ನೀಡಿದರು.  ಯೋಗಾಸನವು ಆರೋಗ್ಯದಲ್ಲಿ ಸ್ಥಿರತೆ, ಶಿಸ್ತು ಹಾಗೂ ಆನಂದಮಯ ಜೀವನಕ್ಕೆ ಅತಿ ಅವಶ್ಯಕವೆಂಬ ಅರಿವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಲಾಯಿತು. ಇದರೊಂದಿಗೆ ವಿದ್ಯಾರ್ಥಿಗಳು ತಮ್ಮ ದೈನಂದಿನ ಬದುಕಿನಲ್ಲಿ ಯೋಗವನ್ನು ಅಳವಡಿಸಿಕೊಳ್ಳುವ ಅಗತ್ಯತೆಯೊಂದಿಗೆ ಪ್ರಕೃತಿಯೊಂದಿಗೆ ಸಹ-ಜೀವನ ನಡೆಸಬೇಕೆನ್ನುವ ಜಾಗೃತಿಯನ್ನು ಮೂಡಿಸಲಾಯಿತು.  ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್, ಆಡಳಿತಾಧಿಕಾರಿ ವಿಂಗ್ ಕಮಾಂಡರ್ ಪಿ.ಪ್ರಕಾಶ್ ರಾವ್, ಎನ್.ಸಿ.ಸಿ ಜೆಡಿ ಕಂಪನಿಯ ಕಮಾಂಡಿಂಗ್ ಅಧಿಕಾರಿ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಶಾಜಿ,  ಉಪಪ್ರಾಂಶುಪಾಲರು, ಎನ್‌ಸಿಸಿ ಘಟಕದ ಅಧಿಕಾರಿಗಳು ಹಾಗೂ ಶಾಲಾ ವೈದ್ಯಾಧಿಕಾರಿ ಡಾ. ಚಿನ್ಮಯ್ ಮತ್ತು  ಶಾಲೆಯ ಎಲ್ಲಾ…

Read More

ಗೋಣಿಕೊಪ್ಪ ಜೂ.21 NEWS DESK : ಗೋಣಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾವೇರಿ ಮಹಿಳಾ ಸಮಾಜದ ವತಿಯಿಂದ 11ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕ ಮಹೇಶ್ ಯೋಗದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಯೋಗ ತರಬೇತುದಾರ ಮಧು ಮಾಚಯ್ಯ ಮಕ್ಕಳಿಗೆ ಯೋಗ ತರಬೇತಿ ನೀಡಿದರು. ವಿದ್ಯಾರ್ಥಿಗಳಿಗೆ 40ಕ್ಕೂ ಹೆಚ್ಚು ಯೋಗ ಮ್ಯಾಟ್‍ಗಳನ್ನು ಗೋಣಿಕೊಪ್ಪ ನಗರ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಸುರೇಶ್ ರೈ ನೇತೃತ್ವದಲ್ಲಿ ವಿತರಿಸಲಾಯಿತು. ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಬಿ.ಎನ್.ಪ್ರಕಾಶ್, ರಾಜಶೇಖರ್ ಕೆ, ಗೀತಾ, ಶಿಕ್ಷಕರುಗಳಾದ ಚಂದನ ಮಂಜುನಾಥ್, ಪಾಣತಲೆ ಹರಿಣಿ, ರೇವತಿ, ವಿದ್ಯಾ ಮಂಜುಳಾ, ಚೇತನ್, ಆಗ್ನೇಶ್, ಕರಿಯಪ್ಪ, ಸುಮಿ ಮತ್ತು ಅನಿಲ್, ಕಾರ್ತಿಕ್ ಹಾಜರಿದ್ದರು.

Read More

ಕೊಳ್ಳೇಗಾಲ ಜೂ.21 NEWS DESK : ಇಡೀ ವಿಶ್ವಕ್ಕೆ ಯೋಗವನ್ನು ಕೊಡುಗೆಯಾಗಿ ನೀಡಿ ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದು ಕೊಳ್ಳೇಗಾಲದ ಕಾಮಗೆರೆ ಸಂತ ಫ್ರಾನ್ಸಿಸ್ ಕ್ಷೇವಿಯರ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ.ಐಸಾಕ್ ರತ್ನಾಕರ್ ಅಭಿಪ್ರಾಯಪಟ್ಟರು. ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 2014ರಲ್ಲಿ ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯಲ್ಲಿ ಎಲ್ಲಾ ದೇಶಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದ ಸಭೆಯಲ್ಲಿ ಜೂ.21 ನ್ನು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನಾಗಿ ವಿಶ್ವದಾದ್ಯಂತ ಆಚರಿಸಲು ಮನವಿ ಸಲ್ಲಿಸಿದ್ದರು. ಅದಕ್ಕೆ ಪೂರಕವಾಗಿ ವಿಶ್ವಸಂಸ್ಥೆಯು ಜೂ.21 ನ್ನು ವಿಶ್ವದಾದ್ಯಂತ ಯೋಗ ದಿನಾಚರಣೆ ಆಚರಿಸಲು ಕರೆ ನೀಡಿದೆ ಎಂದರು. ನಮ್ಮ ರಾಷ್ಟ್ರದಲ್ಲಿ 11ನೇ ವರ್ಷದ ಯೋಗ ದಿನಾಚರಣೆಯನ್ನು ಆಚರಿಸುತ್ತಿದ್ದು, ಮಹತ್ವದ್ದಾಗಿದೆ ಎಂದರು. ಈ ಭಾರಿ ಯೋಗವು ಒಂದು ಭೂಮಿ ಹಾಗೂ ಒಂದು ಅರೋಗ್ಯಕ್ಕಾಗಿ ಎಂಬ ದ್ಯೇಯವಾಗಿದ್ದು, ಯೋಗದಿಂದ ಆರೋಗ್ಯದ ಸ್ಥಿರತೆ ಸಾಧ್ಯ ಎಂದು ಹೇಳಿದರು. ವಿದ್ಯಾಸಂಸ್ಥೆಯ ದೈಹಿಕ…

Read More

ಮಡಿಕೇರಿ ಜೂ.21 NEWS DESK : ದೇವಟ್‌ ಪರಂಬ್‌ ಕೊಡವ ನರಮೇಧದ ಸ್ಮಾರಕದಲ್ಲಿ ಸಿಎನ್‌ಸಿ ಸ್ವಯಂಸೇವಕರು ಪುಷ್ಪ ನಮನ ಸಲ್ಲಿಸಿ, ಸಿಎನ್‌ಸಿ ಸಂಘಟನೆಯ ಹೋರಾಟ ಫಲಪ್ರದವಾಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕೊಡವ ಜನಾಂಗದ ಯೋಗಕ್ಷೇಮ ಮತ್ತು ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ಸಾಧಿಸಲು ಶಕ್ತಿ ನೀಡುವುದು. ಸ್ವಯಂ ನಿಯಮ, ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು ಮತ್ತು ಸೂಕ್ಷ್ಮ ಸೂಕ್ಷ್ಮ ಆದಿಮಸಂಜಾತ ಏಕ-ಜನಾಂಗೀಯ ಕೊಡವರಿಗೆ ಎಸ್‌ಟಿ ವರ್ಗೀಕರಣ, ಮತ್ತು ವಿಶ್ವಸಂಸ್ಥೆಯ ಆದಿಮಸಂಜಾತ ಜನರ ಹಕ್ಕುಗಳಲ್ಲಿ ಕಲ್ಪಿಸಲಾದ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಅವರ ತಾಯಿಯ ಮಣ್ಣಿನಲ್ಲಿ ಅವರ ಐತಿಹಾಸಿಕ ನಿರಂತರತೆಗಾಗಿ ಕೊಡವ ಸಮುದಾಯಕ್ಕೆ ಸಾರ್ವತ್ರಿಕ ಮನ್ನಣೆ ದೊರಕುವಂತಾಗಬೇಕೆಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದರು.  1964 ರ ವೆನಿಸ್ ಚಾರ್ಟರ್‌ನ ಆರ್ಟಿಕಲ್ 7 ಮತ್ತು ಭಾರತ ಸಂವಿಧಾನದ ಆರ್ಟಿಕಲ್ 49ರ ಅಡಿಯಲ್ಲಿ ದೇವಟ್ ಪರಂಬ್ ಕೊಡವ ದುರಂತ ಹತ್ಯಾಕಾಂಡದ ಸ್ಥಳದಲ್ಲಿ ಅಂತರರಾಷ್ಟ್ರೀಯ ಕೊಡವ ನರಮೇಧದ ಸ್ಮಾರಕವನ್ನು ನಿರ್ಮಿಸುವಂತೆ ಸಿಎನ್‌ಸಿ ಭಾರತ ಸರ್ಕಾರ ಮತ್ತು ಸರ್ಕಾರವನ್ನು ಒತ್ತಾಯಿಸಿತು ಮತ್ತು…

Read More

ಮಡಿಕೇರಿ ಜೂ.21 NEWS DESK : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಇವರ ಸಹಯೋಗದೊಂದಿಗೆ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ವಿಷಯದಡಿ ನಗರದ ಕೆಳಗಿನ ಗೌಡ ಸಮಾಜದಲ್ಲಿ ನಡೆದ ಅಂತರರಾಷ್ಟ್ರೀಯ 11 ನೇ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತೀಯ ಮೂಲದ ಯೋಗ ವಿಶ್ವದಾದ್ಯಂತ ಪಸರಿಸಿದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ಆರೋಗ್ಯ, ಆಯಸ್ಸು ಹೆಚ್ಚಾಗಲಿದೆ. ಇದರಿಂದ ಕ್ರಿಯಾಶೀಲತೆ ಮತ್ತು ಚಲನಶೀಲತೆಯಿಂದ ಬದುಕು ನಡೆಸಲು ಸಹಕಾರಿಯಾಗಲಿದೆ. ಜೊತೆಗೆ ಮಾನಸಿಕವಾಗಿಯೂ ಸಹ ಸದೃಢರಾಗಿರಬಹುದು ಎಂದು ಡಾ.ಮಂತರ್ ಗೌಡ ಅಭಿಪ್ರಾಯಪಟ್ಟರು. ಯೋಗವು ಇಡೀ ವಿಶ್ವ ಮೆಚ್ಚುಗೆ ವ್ಯಕ್ತಪಡಿಸಿದೆ. ಇತ್ತೀಚಿನ ದಿನಗಳಲ್ಲಿ ರಕ್ತದೊತ್ತಡ, ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ದಿನನಿತ್ಯ ಅರ್ಧಗಂಟೆಯಾದರೂ ವ್ಯಾಯಾಮ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಅವರು ಹೇಳಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ…

Read More

ಮಡಿಕೇರಿ ಜೂ.21 NEWS DESK : ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಸಭೆಯು ನಗರದ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಯುವಶಕ್ತಿಯೇ ದೇಶದ ಶಕ್ತಿ. ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಇಂದಿನಿಂದಲೂ ಯುವ ಕಾಂಗ್ರೆಸ್ ಕೊಡುಗೆ ಬಹು ದೊಡ್ಡದಾಗಿದೆ. ಯುವಕರಿಗೆ ರಾಜಕೀಯ ಅನುಭವ ಹಾಗೂ ಸಂಘಟನೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಬಲಾಢ್ಯರಾಗಲು ಯುವ ಕಾಂಗ್ರೆಸ್ ಒಂದು ಮಹತ್ವದ ಘಟಕವಾಗಿದೆ. ಇಂದಿನ ಯುವ ಕಾಂಗ್ರೆಸ್ ಪದಾಧಿಕಾರಿಗಳು ಇದರ ಸದುಪಯೋಗವನ್ನು ಪಡೆಸಿಕೊಂಡು ತಮ್ಮ ರಾಜಕೀಯ ಭವಿಷ್ಯ ರೂಪಿಸುವುದರೊಂದಿಗೆ ಜನರ ಸೇವೆ ಮಾಡುವುದರಲ್ಲಿ ನಿರತರಾಗಬೇಕೆಂದು ಕರೆ ನೀಡಿದರು. ರಾಜಕೀಯದ ಪ್ರತಿಯೊಂದು ಹಂತದಲ್ಲೂ ಸವಾಲುಗಳು ಎದುರಾಗುತ್ತದೆ. ಅದರಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಅವರಿಗೆ ಸವಾಲುಗಳನ್ನು ಎದುರಿಸಲು ಇಂತಹ ಸನ್ನಿವೇಶ ಉಪಯೋಗವಾಗಲಿದೆ. ಯುವಕರಲ್ಲಿರುವ ಆ ಶಕ್ತಿಯನ್ನು ಸಮಾಜದ ಒಳಿತಿಗೆ ಸದುಪಯೋಗಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಸಭೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್…

Read More

ಮಡಿಕೇರಿ ಜೂ.21 NEWS DESK : ಭಾಗಮಂಡಲ ಕೆವಿಜಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಂಗಳೂರು  ಭಾರತ್ ಬೆಂಜ್ ಮೋಟಾರ್ ಲಿಮಿಟೆಡ್ ವತಿಯಿಂದ ಮೆಕ್ಯಾನಿಕ್ ಮೋಟಾರ್ ವೆಹಿಕಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ನಡೆಯಿತು. ಕ್ಯಾಂಪಸ್ ಸಂದರ್ಶನವನ್ನು ಕಂಪನಿಯ ಹೆಚ್.ಆರ್ ಕಮಲಾಕರ್ ಮತ್ತು ಮೈಸೂರು ಬ್ರಾಂಚಿನ ಮ್ಯಾನೇಜರ್ ನವನೀತ್ ನಡೆಸಿದರು. ಭಾರತ್ ಬೆಂಜಿನ ಕರ್ನಾಟಕದ ವಿವಿಧ ಶೋರೂಮ್ ಮತ್ತು ಸರ್ವಿಸ್ ಸೆಂಟರ್ ಗಳಿಗೆ ಆಯ್ಕೆ ನಡೆಯಿತು. ಸಂದರ್ಶನದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಅಭಿನಂದನೆ ಸಲ್ಲಿಸಿದರು.

Read More