ಲೇಖಕ: admin

ಮಡಿಕೇರಿ ಜು.23 NEWS DESK : ಗಯಾನ ದೇಶದಲ್ಲಿ ಮೃತಪಟ್ಟ ಅನಿವಾಸಿ ಭಾರತೀಯ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದ ನಿವಾಸಿ ಪಿ.ಬಿ.ಗಿರೀಶ ಬಾಬು (37) ಅವರ ಮೃತ ದೇಹವನ್ನು ಭಾರತಕ್ಕೆ ತರಲು ಕರ್ನಾಟಕ ಸರ್ಕಾರ ಆರ್ಥಿಕ ನೆರವು ನೀಡಿದೆ. ಬಡ ಕುಟುಂಬದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 3.60 ಲಕ್ಷ ರೂ. ಬಿಡುಗಡೆ ಮಾಡಿದ್ದಾರೆ. ಪಿ.ಬಿ.ಗಿರೀಶ ಬಾಬು ಅವರು ದಕ್ಷಿಣ ಅಮೆರಿಕಾದ ಗಯಾನಾ ದೇಶದ ಶೆರಿಫ್ ಜನರಲ್ ಆಸ್ಪತ್ರೆಯಲ್ಲಿ ಸ್ಟಾಪ್‍ನರ್ಸ್ ಆಗಿ ಸುಮಾರು ಎರಡು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. 2025 ರ ಜುಲೈ 3 ರಂದು ಅನಾರೋಗ್ಯ ಕಾರಣದಿಂದ ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಪಿ.ಬಿ.ಗಿರೀಶ ಬಾಬು ಅವರು ಬಹು ಅನಿಯಮಿತ ರಕ್ತಸ್ರಾವದ ಹೃದಯಘಾತದಿಂದ 2025 ರ ಜು.14 ರಂದು ಸಾವನ್ನಪ್ಪಿದ್ದಾರೆ. ನಂತರ ಅನಿವಾಸಿ ಭಾರತೀಯ ಸಮಿತಿಯು ಆಸ್ಪತ್ರೆ ಹಾಗೂ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪಿ.ಬಿ.ಗಿರೀಶಬಾಬು ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ…

Read More

ಮಡಿಕೇರಿ ಜು.23 NEWS DESK : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಕೆಂದು ಒತ್ತಾಯಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಹಾರ್ವರ್ಡ್ ವಿದ್ವಾಂಸ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಜೋಶಿ ಅವರ ಸಮ್ಮುಖದಲ್ಲಿ ನಡೆಯಿತು. ನ್ಯಾಯಾಲಯವು ಮುಂದಿನ ವಿಚಾರಣೆಯನ್ನು 2025 ಆ.24 ಕ್ಕೆ ನಿಗಧಿ ಪಡಿಸಿತು. ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ನೇತೃತ್ವದಲ್ಲಿ ವಕೀಲರುಗಳಾದ ಕಿರಣ್ ನಾರಾಯಣ್, ಸತ್ಯ ಸಭರ್ವಾಲ್, ಪಲ್ಲಕ್ ಪಲ್ಲಕ್ ಬಿಷ್ಣೋಯ್, ಮಾಧಿಯಾ ನಯೀಮ್ ಹಾಗೂ ಅನನ್ಯ ದೀಕ್ಷಿತ್ ಉಪಸ್ಥಿತರಿದ್ದರು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಅರ್ಜಿದಾರ ಸಂಖ್ಯೆ-2 ಆಗಿದ್ದಾರೆ. ಕೇಂದ್ರ ಗೃಹ ಮಂತ್ರಾಲಯ, ಕೇಂದ್ರ ಕಾನೂನು ಮಂತ್ರಾಲಯ ಮತ್ತು ಕರ್ನಾಟಕ ರಾಜ್ಯವನ್ನು ಪ್ರತಿವಾದಿ ಸಂಖ್ಯೆ ಕ್ರಮವಾಗಿ 1, 2 ಮತ್ತು 3 ಎಂದು…

Read More

ಮಡಿಕೇರಿ ಜು.23 NEWS DESK : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮ್ಹಾನ್ಸ್ ಸಹಯೋಗದೊಂದಿಗೆ ಯುವ ಸ್ಪಂದನ ಮತ್ತು ಜೀವನ ಕೌಶಲ್ಯ ಕಾರ್ಯಕ್ರಮ ನಡೆಯಿತು. ನಗರದ ಸರ್ಕಾರಿ ಪದವಿ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಕ್ಷೇತ್ರ ಸಂಪರ್ಕ ಅಧಿಕಾರಿ ಆರ್.ನವ್ಯ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯದ ಬಗ್ಗೆ ತರಬೇತಿ ನೀಡಿದರು. ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಪ್ರಸನ್ನ ಮಾತನಾಡಿ, ಯುವ ಜನರು ಸಮಾಜದ ಆಸ್ತಿಯಾಗಿ ಬೆಳೆಯಬೇಕು ಎಂದು ಕರೆ ನೀಡಿದರು. ಯುವ ಜನರು ಹಾದಿ ತಪ್ಪದೆ ಸರಿಯಾದ ಹಾದಿಯಲ್ಲಿ ನಡೆಯಬೇಕು. ದುಶ್ಚಟಗಳಿಗೆ ತುತ್ತಾಗಬಾರದು. ಸಮಾಜದಲ್ಲಿ ಯುವ ಜನರಿಗೆ ತಮ್ಮದೇ ಆದ ಸ್ಥಾನವಿದ್ದು, ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದು ಹೇಳಿದರು. ಉಪನ್ಯಾಸಕರಾದ ಡಾ. ಎಂ.ಎನ್.ಪ್ರಕಾಶ್ ಮಾತನಾಡಿ, ಯುವ ಜನರು ಮಾನಸಿಕ ಒತ್ತಡಕ್ಕೆ ತುತ್ತಾಗದೆ, ತಮ್ಮ ಬುದ್ದಿಮತ್ತೆಯನ್ನು ಹೆಚ್ಚಿಸಿಕೊಳ್ಳಬೇಕು. ಓದಿನ ಕಡೆ ಗಮನಹರಿಸಬೇಕು. ಕಲಿಕೆಯಲ್ಲಿ ಸದಾ ತೀವ್ರತೆ ಇರಬೇಕು. ಆ…

Read More

ಮಡಿಕೇರಿ ಜು.23 NEWS DESK : ರೋಟರಿ ಮಡಿಕೇರಿ ವತಿಯಿಂದ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ರಸ್ತೆಯ ನಗರಸಭಾ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು ಮತ್ತು ಕಲಿಕಾ ಸಲಕರಣೆಗಳನ್ನು ಉಚಿತವಾಗಿ ನೀಡಲಾಯಿತು. ಶಾಲಾ ಆವರಣದಲ್ಲಿ ಜು.19 ರಂದು ನಡೆದ ಸರಳ ಸಮಾರಂಭದಲ್ಲಿ ಈ ಶಾಲೆಯಲ್ಲಿ ಸೇವಾ ಮನೋಭಾವದಿಂದ ಸೇವೆ ಸಲ್ಲಿಸುತ್ತಿರುವ ಇಬ್ಬರು ಶಿಕ್ಷಕರಿಗೆ ರೋಟರಿ ವತಿಯಿಂದ ಗೌರವಧನವನ್ನು ಕೂಡ ವಿತರಿಸಲಾಯಿತು. ರೋ.ಡಾ.ಎಂ.ಜಿ.ಪಾಟ್ಕರ್ ಹಾಗೂ ರೋ.ಹೆಚ್.ಎಸ್.ಅನಂತ ಸುಬ್ಬರಾವ್ ಅವರು ಕಾರ್ಯಕ್ರಮದ ಪ್ರಾಯೋಜಕತ್ವವನ್ನು ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ರೋಜಿ, ರೋಟರಿ ಅಧ್ಯಕ್ಷೆ ರೋ.ಲಲಿತಾ ರಾಘವನ್, ಕಾರ್ಯದರ್ಶಿ ರೋ.ಬಿ.ಎಂ.ಸೋಮಣ್ಣ, ರೋ.ಡಾ.ಎಂ.ಜಿ.ಪಾಟ್ಕರ್, ಡಾ.ಜಯಲಕ್ಷ್ಮಿ ಪಾಟ್ಕರ್, ರೋ.ಹೆಚ್.ಎಸ್.ಅನಂತ ಸುಬ್ಬರಾವ್, ರೋಟರಿ ಸದಸ್ಯರು ಹಾಗೂ ನಗರಸಭಾ ಸದಸ್ಯೆ ಸಬಿತ ಉಪಸ್ಥಿತರಿದ್ದರು.

Read More

ಮಡಿಕೇರಿ ಜು.23 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ದಸರಾ ಉತ್ಸವ ಸಮಿತಿಯ ಜಂಟಿ ಅಧ್ಯಕ್ಷರುಗಳಾಗಿ ನಾಗರಾಜ್ ವಿಷ್ಣುಪ್ರಿಯ, ಕಿಶೋರ್ ಬಾಬು, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಲ್.ಸತೀಶ್ ಹಾಗೂ ಖಜಾಂಚಿಯಾಗಿ ಪವನ್ ಸಿ.ಎಸ್ ಆಯ್ಕೆಯಾಗಿದ್ದಾರೆ.

Read More

ಮಡಿಕೇರಿ ಜು.23 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ಟ್ರಸ್ಟ್ ಸಮಿತಿಯ ನೂತನ ಅಧ್ಯಕ್ಷರಾಗಿ ಎಸ್.ಸಿ.ಹರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎಸ್.ಪ್ರಕಾಶ್, ಉಪಾಧ್ಯಕ್ಷರಾಗಿ ಎಂ.ವಿ.ಲೋಕೇಶ್ ಹಾಗೂ ಖಜಾಂಚಿಯಾಗಿ ಪೂಜಾರಿ ಉಮೇಶ್ ಆಯ್ಕೆಯಾಗಿದ್ದಾರೆ.   

Read More

ವಿರಾಜಪೇಟೆ ಜು.23 NEWS DESK : ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ನೂತನ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕರು ಹಾಗೂ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳಾದ ರೆ.ಫಾ.ಜೇಮ್ಸ್ ಡೊಮಿನಿಕ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲೇ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು. ತಮ್ಮ ವ್ಯಕ್ತಿತ್ವ ವಿಕಸನವನ್ನು ಮಾಡುವುದರ ಮೂಲಕ ಶಾಲೆಗೂ ಪೋಷಕರಿಗೂ ಕೀರ್ತಿ ತರಬೇಕು ಎಂದರು. ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು ಮಾತನಾಡಿ, ವಿದ್ಯಾರ್ಥಿ ನಾಯಕರಿಗೆ ಸೇವಾ ಮನೋಭಾವನೆಯು ಅತೀ ಮುಖ್ಯ. ನಿಷ್ಕಲ್ಮಷ ಸೇವೆಯನ್ನು ಸಮಾಜಕ್ಕೆ ಸಲ್ಲಿಸಬೇಕು. ಅಹಂ ನ್ನು ತೊರೆದು ಸೇವಾ ಮನೋಭಾವನೆಯನ್ನು ಮೂಡಿಸಿಕೊಂಡು ಶಿಸ್ತನ್ನು ಮೈಗೂಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು. ಸಂತ ಅನ್ನಮ್ಮ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಬೆನ್ನಿ ಜೋಸೆಫ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಥಮಿಕ ಶಾಲಾ…

Read More

ವಿರಾಜಪೇಟೆ ಜು.23 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ (ಕೆ.ಎಂ.ಇ.ಎಫ್.) ಸಹಯೋಗದಲ್ಲಿ ಸಂಸ್ಥೆಯ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿ ವರ್ಷದಂತೆ ಈ ಸಾಲಿನಲ್ಲೂ ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2025 ಅನ್ನು ನೀಡಲು ಉದ್ದೇಶಿಸಲಾಗಿದ್ದು, ಈ ಕುರಿತು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದು ತೇರ್ಗಡೆ ಹೊಂದಿ ಇದೀಗ ವಿದ್ಯಾಭ್ಯಾಸ ಮುಂದುವರಿಸುತ್ತಿರುವ ಕೆ.ಎಂ.ಎ. ಸದಸ್ಯರ ಮಕ್ಕಳು “ಕೆ. ಎಂ. ಎ. ಪ್ರತಿಭಾ ಪುರಸ್ಕಾರ-2025″ಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಎರಡೂ ವಿಭಾಗದಲ್ಲೂ ಶೇ.75%ಕ್ಕಿಂತ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಎರಡೂ ವಿಭಾಗಗಳಲ್ಲಿ ಸಲ್ಲಿಕೆಯಾದ ಅರ್ಜಿಗಳ ಪೈಕಿ ಅತೀ ಹೆಚ್ಚು ಅಂಕ ಪಡೆದ ಆಧಾರದಲ್ಲಿ ತಲಾ13 ಅರ್ಜಿಗಳನ್ನು ಅಂತಿಮವಾಗಿ ಪರಿಗಣಿಸಲಾಗುವುದು. ಇದರಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆಯುವ ವಿದ್ಯಾರ್ಥಿಗಳಿಗೆ ಆಕರ್ಷಕ ಟ್ರೋಫಿಯೊಂದಿಗೆ ನಗದು ಬಹುಮಾನ ಮತ್ತು…

Read More

ಮಡಿಕೇರಿ ಜು.23 NEWS DESK : ರಾಜ್ಯದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಬುಡಕಟ್ಟು ಆದಿವಾಸಿ ಆಶ್ರಮ ಶಾಲೆಯಲ್ಲಿ ಆದಿವಾಸಿ ಸಮುದಾಯದ ಶಿಕ್ಷಕರಿಗೆ ಆದ್ಯತೆ ನೀಡಬೇಕು ಮತ್ತು ನಿಯಮಗಳಲ್ಲಿ ಸಡಿಲಿಕೆ ನೀಡಿ ವಿದ್ಯಾರ್ಥಿಹತೆಗೆ ಅನುಗುಣವಾಗಿ ಖಾಯಂ ಹುದ್ದೆಗಳಿಗೆ ನಿಯುಕ್ತಿಗೊಳಿಸವಂತೆ ಬುಡಕಟ್ಟು ಕೃಷಿಕರ ಸಂಘ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಪಿ.ಕೆ.ಸಿದ್ದಪ್ಪ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಪ್ರದೇಶಗಳಲ್ಲಿನ ಆದಿವಾಸಿ ಹಾಡಿ, ಕಾಲೋನಿಗಳಲ್ಲಿ ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆಯಿಂದ 119 ಆಶ್ರಮ ಶಾಲೆಗಳಿಗೆ ಸರ್ಕಾರದಿಂದ ಖಾಯಂ ಶಿಕ್ಷಕರನ್ನು ನೇಮಕ ಮಾಡದೇ ಇರುವುದರಿಂದ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹೊರಸಂಪನ್ಮೂಲ ವ್ಯವಸ್ಥೆಯ ಮೂಲಕ 450 ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಈ ಪೈಕಿ 32 ಮಂದಿ ಕಳೆದ ಹದಿನೈದು ವರ್ಷಗಳಿಗೂ ಅಧಿಕ ಅವಧಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು. ಕೊಡಗು ಜಿಲ್ಲೆಯ 11 ಶಾಲೆಗಳಲ್ಲಿ 6 ಮಂದಿ ಆದಿವಾಸಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಆಶ್ರಮ ಶಾಲೆಗಳಿಗೆ ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗಳ ನೇಮಕಾತಿ ಮಾಡಲಾಗುತ್ತಿದ್ದು, ಹೊರ…

Read More

ಮಡಿಕೇರಿ ಜು.23 NEWS DESK : ಸುಂಟಿಕೊಪ್ಪ ಗ್ರಾಮ ಪಂಚಾಯ್ತಿಯ ಉಪಾಧ್ಯಕ್ಷ ಸ್ಥಾನ ಮತ್ತು ಸದಸ್ಯ ಸ್ಥಾನದಿಂದ ವಜಾ ಗೊಳಿಸಿರುವ ಹಾಗೂ ಮುಂದಿನ ಆರು ವರ್ಷಗಳವರೆಗೆ ಯಾವುದೇ ಚುನಾವಣೆಯಲ್ಲಿ ಪಾಲ್ಗೊಳ್ಳದಂತೆ ನನ್ನ ವಿರುದ್ಧ ಪಂಚಾಯತ್ ರಾಜ್ ಇಲಾಖೆಯ ಅರೆ ನ್ಯಾಯಕ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಸುಂಟಿಕೊಪ್ಪ ಗ್ರಾ.ಪಂ ಸದಸ್ಯ ಕೆ.ಕೆ.ಪ್ರಸಾದ್ ಕುಟ್ಟಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆಯವ ಯಾವುದೇ ಕಾಮಗಾರಿ ಪಂಚಾಯ್ತಿ ಸಭೆ ಮತ್ತು ಗ್ರಾಮಸಭೆಯಲ್ಲಿ ಅನುಮೋದನೆಗೊಂಡು, ಇದಕ್ಕೆ ಪಿಡಿಒ, ಇಂಜಿನಿಯರ್‍ಗಳ ಸಮ್ಮತಿಯ ಬಳಿಕ ಜಾರಿಗೊಳ್ಳುತ್ತದೆ. ಹೀಗೆ ಅನುಷ್ಟಾನಗೊಂಡ ಕಾಮಗಾರಿಯ ಬಿಲ್ ಹಣದ ಪಾವತಿಯ ಹಕ್ಕು ತನ್ನದಾಗಿರುವುದಿಲ್ಲ. ಬದಲಾಗಿ ಅದು ಪಂಚಾಯ್ತಿಯ ಅಧಿಕಾರಿಗಳದ್ದಾಗಿರುತ್ತದೆ. ಹೀಗಿರುವಾಗ ತನ್ನ ವಿರುದ್ಧ ಬಂದಿರುವ ಆರೋಪಗಳಿಗೆ ಸಮಬಂಧಿಸಿದಂತೆ ಕಾನೂನು ಹೋರಾಟ ನಡೆಸುವುದಾಗಿ ಸ್ಪಷ್ಟಪಡಿಸಿದರು. ಸೋಲಾರ್ ದೀಪ ಅಳವಡಿಕೆಗೆ ಸಂಬಂಧಿಸಿದಂತೆ ಪರಿಶಿಷ್ಟರ ಅನುದಾನ ದುರುಪಯೋಗವಾಗಿದೆಯೆಂದು ಆರೋಪಿಸಿ ನಡೆದ ವ್ಯಾಜ್ಯದಲ್ಲಿ ಪಂಚಾಯತ್ ರಾಜ್ ಇಲಾಖೆಯ ಅರೆ…

Read More