ಲೇಖಕ: admin

ಮಡಿಕೇರಿ ಜೂ.21 NEWS DESK : ಪ್ರಸಕ್ತ (2025-26) ಸಾಲಿಗೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ, ವಾಸವಿ ಜಲಶಕ್ತಿ ಮತ್ತು ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್‍ಲೈನ್ kacdc.karnataka.gov.in ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ, 31 ಕೊನೆಯ ದಿನವಾಗಿದೆ. ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು(ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಶೇಷಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.5 ಮೀಸಲಾತಿ ಇರಿಸಿದೆ.…

Read More

ಮಡಿಕೇರಿ ಜೂ.21 NEWS DESK  : ಪ್ರಸಕ್ತ (2025-26) ಸಾಲಿಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ, ಕಾಲೇಜು, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ ಇಲ್ಲಿಗೆ ವಿಜ್ಞಾನ ವಿಭಾಗದ ಭೌತಶಾಸ್ತ್ರ (1 ಹುದ್ದೆ) ಮತ್ತು ರಸಾಯನಶಾಸ್ತ(1 ಹುದ್ದೆ) ವಿಷಯಗಳಿಗೆ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿಯನ್ನು ಜೂನ್, 27 ರೊಳಗೆ ಸಲ್ಲಿಸಬಹುದು(ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುವುದು). ವೇತನ ಶ್ರೇಣಿ ರೂ.18,150. ಎಂಎಸ್ಸಿ, ಬಿ.ಇಡಿ ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂ.ಸಂ. 08272–225528, 9686138688 ಹಾಗೂ ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂ.ಸಂ. 7676473767 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಜೂ.21 : ರಾಷ್ಟ್ರೀಯ ಜನಗಣತಿಯ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜೂ.23 ರಂದು ಪೊನ್ನಂಪೇಟೆಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಪೊನ್ನಂಪೇಟೆಯಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಬೇಡಿಕೆಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದು ಹೇಳಿದ್ದಾರೆ. 2025-26 ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ…

Read More

ಕುಶಾಲನಗರ ಜೂ.21 NEWS DESK : ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಯ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರು ದೇವಾಲಯದ ಆವರಣಕ್ಕೆ ಭೇಟಿ ಮಾಡಿ ದೇವಾಲಯದ ಆಡಳಿತ ಮಂಡಳಿ ಸದಸ್ಯರೊಂದಿಗೆ ಚರ್ಚಿಸಿದರು. ದೇವಾಲಯ ಜೀರ್ಣೋದ್ಧಾರ ಸಮಿತಿ ಮೂಲಕ 2 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿ ಸಂಬಂಧ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಪಿ.ಗಣಪತಿ ಮತ್ತು ಪ್ರಮುಖರು ಶಾಸಕರಿಗೆ ಮನವಿ ಪತ್ರ ಸಲ್ಲಿಸಿ ಶಿಥಿಲಾವಸ್ಥೆಗೊಂಡಿದ್ದ ದೇವಾಲಯದ ಜೀರ್ಣೋದ್ಧಾರ ಕೆಲಸಕ್ಕೆ ಆದ್ಯತೆ ಮೇರೆಗೆ ಸರಕಾರದ ಮೂಲಕ ಹೆಚ್ಚಿನ ಸಹಾಯಧನ ಒದಗಿಸಿ ಕೊಡುವಂತೆ ಮನವಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು ಸರಕಾರದ ಮೂಲಕ ಹೆಚ್ಚಿನ ಅನುದಾನ ಕಲ್ಪಿಸುವ ಭರವಸೆ ವ್ಯಕ್ತಪಡಿಸಿದರು.  ಇದರೊಂದಿಗೆ ವೈಯಕ್ತಿಕವಾಗಿ ಕೂಡ ಸಹಕಾರ ನೀಡುವ ಬಗ್ಗೆ ಇಂಗಿತ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಪಿ.ಗಣಪತಿ 2027ರ ಒಳಗೆ ದೇವಸ್ಥಾನದ ಚೀರ್ಣೋದರ ಕಾಮಗಾರಿಗಳು…

Read More

ಸೋಮವಾರಪೇಟೆ ಜೂ.21 NEWS DESK : ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ, ಹಾಸನ ಮತ್ತು ಕೊಡಗು ಜಿಲ್ಲೆ, ಕೊಡಗು ಪತ್ರಕರ್ತರ ಸಂಘ ತಾಲ್ಲೂಕು ಘಟಕ, ಕೂಡಿಗೆ ಕಳಲೆ ಬಿಜಿಎಸ್ ಸೇವಾಸಂಘ ಮತ್ತು ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ನಡೆದ ಯುವ ವಿಕಸನ ಕಾರ್ಯಕ್ರಮವನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಹೆಚ್.ಪಿ.ಸಂದೇಶ್ ಉದ್ಘಾಟಿಸಿದರು. ಶನಿವಾರಸಂತೆ ಯಶಸ್ವಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಹಾಸನ ಶಾಖ ಮಠದ ಕಾರ್ಯದರ್ಶಿಗಳಾದ ಶಂಭುನಾಥಸ್ವಾಮೀಜಿ ಅವರ ದಿವ್ಯ ಸಾನಿಧ್ಯ ವಹಿಸಿದ್ದರು. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಚ್.ಟಿ.ಅನಿಲ್, ಸೋಮವಾರಪೇಟೆ ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್.ಹರೀಶ್ ಕುಮಾರ್, ಉಪಾಧ್ಯಕ್ಷ ಎಸ್.ಎ.ಮುರುಳೀಧರ್, ಕಾರ್ಯದರ್ಶಿ ಡಿ.ಪಿ.ಲೋಕೇಶ್, ಕಳಲೆ-ಕೂಡಿಗೆ ಬಿಜಿಎಸ್ ಸೇವಾಸಂಘದ ಅಧ್ಯಕ್ಷ ಆರ್.ಪಿ.ಲಕ್ಷ್ಮಣ್, ಉಪಾಧ್ಯಕ್ಷ ಕಳಲೆ ಕೃಷ್ಣೇಗೌಡ, ಭಾರತೀ ವಿದ್ಯಾಸಂಸ್ಥೆಯ ಅಧ್ಯಕ್ಷ ಜಗನ್‍ಪಾಲ್ ಪಾಲ್ಗೊಂಡಿದ್ದರು. ಒಂದು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಗಮನ ಸೆಳೆದರು.

Read More

ಮಡಿಕೇರಿ ಜೂ.21 NEWS DESK : ಯೋಗವು ಜೀವನ ಪಾಠ ಹೇಳಿಕೊಡುವುದರೊಂದಿಗೆ ವ್ಯಕ್ತಿಯ ಸದೃಢ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯೋಗದಿಂದ ಏಕಾಗ್ರತೆ ವೃದ್ಧಿಯಾಗುವುದರೊಂದಿಗೆ ಮಕ್ಕಳ ಜ್ಞಾನ ಹೆಚ್ಚಿಸುವಲ್ಲಿ ಸಹಕಾರಿಯಾಗಲಿದೆ. ಭಾರತದ ಪುರಾತನ ಪದ್ಧತಿಗಳಲ್ಲಿ ಯೋಗಾಸನ ಅಭ್ಯಾಸವು ಒಂದಾಗಿದೆ. ಯೋಗ ಕಾರ್ಯಕ್ರಮವು ಕೇವಲ ಯೋಗ ದಿನಾಚರಣೆಗೆ ಮಾತ್ರ ಸೀಮಿತವಾಗದೆ, ದಿನನಿತ್ಯದ ಬದುಕಿನಲ್ಲಿ ಎಲ್ಲರೂ ಅಳವಡಿಸಿಕೊಳ್ಳುವಂತೆ ಆಗಬೇಕು ಎಂದು ಕರೆ ನೀಡಿದರು. ಈ ಸಂದರ್ಭ ಶ್ರೀ ರಾಮಕೃಷ್ಣ ಶಾರದ ಆಶ್ರಮದ ಅಧ್ಯಕ್ಷರಾದ ಪರಹಿತನಂದಾ ಸ್ವಾಮಿ, ಕಾರ್ಯಕ್ರಮ ಆಯೋಜಕರು ಹಾಗೂ ಪ್ರಮುಕರು ಹಾಜರಿದ್ದರು.

Read More

ಮಡಿಕೇರಿ ಜೂ.21 NEWS DESK : ಭಾಗಮಂಡಲ ವ್ಯಾಪ್ತಿಯಲ್ಲಿ ರೂ.70 ಲಕ್ಷ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ವಿವಿಧ ರಸ್ತೆಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಭಾಗಮಂಡಲ ಪಂಚಾಯತ್ ವ್ಯಾಪ್ತಿಯ ತಾವೂರು ಹೈಸ್ಕೂಲ್ ಪೈಸಾರಿ ರಸ್ತೆ, ತಣ್ಣಿಮಾನಿ, ಚೇರಂಗಾಲ, ಕೋರಂಗಲ ಹಾಗೂ ಭಾಗಮಂಡಲ ಪಟ್ಟಣ ವ್ಯಾಪ್ತಿಯಲ್ಲಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಹಲವು ರಸ್ತೆಗಳನ್ನು ಉದ್ಘಾಟಿಸಿದರು. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕರು ಕರೆ ನೀಡಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಲಯ ಅಧ್ಯಕ್ಷ ಕೋಳಿಬೈಲು ವೆಂಕಟೇಶ್, ಕೆಡಿಪಿ ಸದಸ್ಯ ಬಾಚಮಂಡ ಲವ ಚಿಣ್ಣಪ್ಪ, ಗ್ಯಾರಂಟಿ ಅನುಷ್ಠಾನದ ಉಪಾಧ್ಯಕ್ಷ ಗಿರೀಶ್, ರಮಾನಾಥ್ ಬೇಕಲ್, ಹರ್ಷ, ಪ್ರಕಾಶ್, ಪಕ್ಷದ ಮುಖಂಡರು,ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ಮಡಿಕೇರಿ ಜೂ.21 NEWS DESK : ತಮಿಳುನಾಡಿನ ಸೇಲಂ ಉಕ್ಕು ಸ್ಥಾವರದ ಆವರಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪಾಲ್ಗೊಂಡು ಯೋಗಾಭ್ಯಾಸ ಮಾಡಿದರು. ನಂತರ ಮಾತನಾಡಿದ ಅವರು, ರಾಷ್ಟ್ರದ ಬೆನ್ನೆಲುಬಾಗಿರುವ ಉಕ್ಕು ಕ್ಷೇತ್ರದ ಕುಟುಂಬದೊಂದಿಗೆ ಯೋಗದ ಅನನ್ಯತೆ, ಅವಿಸ್ಮರಣೆಯ ಕ್ಷಣಗಳನ್ನು ಅನುಭವಿಸುವ ಭಾಗ್ಯ ನನ್ನದಾಯಿತು. ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ. ಇದು ಮಾನಸಿಕ ಶಾಂತಿ, ಮಾನಸಿಕ ಸ್ಪಷ್ಟತೆ, ದೈಹಿಕ ಸ್ವಾಸ್ತ್ಯತೆ ಮತ್ತು ಸಾಮೂಹಿಕ ಯೋಗಕ್ಷೇಮಕ್ಕೆ ಪರಿಣಾಮಕಾರಿ ಮಾರ್ಗವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಯೋಗವು ಜಗತ್ತನ್ನೇ ಒಗ್ಗೂಡಿಸಿದೆ. ಜಗತ್ತಿನ ಯೋಗಕ್ಷೇಮಕ್ಕೆ ನಮ್ಮ ಪಾರಂಪರಿಕ ಯೋಗವು ಮಹೋನ್ನತ ಕೊಡುಗೆ ನೀಡುತ್ತಿದೆ ಎಂದು ಹೇಳಿದರು. ಸೇಲಂ ಟೌನ್‌ಶಿಪ್‌ನಲ್ಲಿರುವ ಹಿಲ್ ವ್ಯೂ ಕ್ರೀಡಾಂಗಣದಲ್ಲಿ ಸ್ಥಾವರದ ನೂರಾರು ಉದ್ಯೋಗಿಗಳು ಮತ್ತು ಅವರ ಕುಟುಂಬಗಳು ಯೋಗಾಭ್ಯಾಸ ಮಾಡಲು ಪಾಲ್ಗೊಂಡು ಯೋಗಾಭ್ಯಾಸ ಮಾಡಿದರು.

Read More

ಮಡಿಕೇರಿ ಜೂ.21 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ವಿಷಯದಡಿ ಅಂತರಾಷ್ಟ್ರೀಯ 11ನೇ ಯೋಗ ದಿನಾಚರಣೆಯು ಅರ್ಥಪೂರ್ಣವಾಗಿ ಜರುಗಿತು. ನಗರದ ಕೆಳಗಿನ ಗೌಡ ಸಮಾಜದಲ್ಲಿ ಯೋಗಾಭಿಮಾನಿಗಳು ಭಾಗವಹಿಸಿ ಯೋಗ, ಧ್ಯಾನ ಮಾಡಿ ಗಮನ ಸೆಳೆದರು. ಯೋಗ ಗುರು ಕೆ.ಕೆ.ಮಹೇಶ್ ಕುಮಾರ್ ನೇತೃತ್ವದಲ್ಲಿ ಸೂರ್ಯ ನಮಸ್ಕಾರ, ವೃಕ್ಷಾಸನ, ಪಾದಹಸ್ತಾಸನ, ಉದ್ರ್ವಾಸನ, ತಾಡಾಸನ, ಅರ್ಧ ಮತ್ಸೇಂದ್ರಾಸನ, ಭುಜಂಗಾಸನ, ಪವನಮುಕ್ತಾಸನ, ಭದ್ರಾಸನ, ತ್ರಿಕೋನಾಸನ, ಉಷ್ಟ್ರಾಸನ, ವಜ್ರಾಸನ, ಶಲಭಾಸನ, ಶಶಾಂಕಾಸನ, ಮಂಡೂಕಾಸನ, ವಕ್ರಾಸನ, ಮಕರಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಶವಾಸನ, ಕಪಾಲಭಾತಿ, ಶೀತಲಿ ಪ್ರಾಣಾಯಾಮ, ಭ್ರಾಮರಿ ಪ್ರಾಣಾಯಾಮ, ಧ್ಯಾನ, ನಾಡಿಶೋಧ ಪ್ರಾಣಾಯಾಮ ಹೀಗೆ ಹಲವು ರೀತಿಯ ಯೋಗ ಮಾಡಲಾಯಿತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷರಾದ ಕಲಾವತಿ, ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪವಿಭಾಗಧಿಕಾರಿ ವಿನಾಯಕ್ ನರ್ವಾಡೆ,…

Read More

ಮಡಿಕೇರಿ ಜೂ.21 NEWS DESK : ನೇರಳೆ ಕೃಷಿಯು ಕಡಿಮೆ ಖರ್ಚಿನ, ಹೆಚ್ಚು ಲಾಭದಾಯಕ ಕೃಷಿಯಾಗಿದೆ. ಒಂದು ಎಕರೆಯಲ್ಲಿ ನೇರಳೆ ಕೃಷಿ ಮಾಡಿ ವರ್ಷಕ್ಕೆ 4-8 ಲಕ್ಷ ರೂ. ವರೆಗೆ ಆದಾಯ ಗಳಿಸಬಹುದು ಎಂದು ಕೆಲವು ರೈತರು ವರದಿ ಮಾಡಿದ್ದಾರೆ. ಇದು ಕೃಷಿ ಪದ್ಧತಿ, ಮಣ್ಣಿನ ಫಲವತ್ತತೆ, ಹವಾಮಾನ, ಮತ್ತು ಮಾರುಕಟ್ಟೆ ಬೆಲೆಗಳ ಮೇಲೆ ಅವಲಂಬಿತವಾಗಿರುತ್ತದೆ. ಉತ್ತಮ ಆರೈಕೆ ಮತ್ತು ಮಾರ್ಕೆಟಿಂಗ್ ತಂತ್ರಗಳೊಂದಿಗೆ, ಈ ಲಾಭವನ್ನು ಗಳಿಸಬಹುದು. ತೋಟಗಾರಿಕೆ ಇಲಾಖೆಯಿಂದಲೂ ನೇರಳೆ ಗಿಡಗಳಿಗೆ ಸಹಾಯಧನ ಲಭ್ಯವಿದೆ. ನೇರಳೆ ಕೃಷಿಯು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಬರ ನಿರೋಧಕ ಮತ್ತು ಕಡಿಮೆ ನಿರ್ವಹಣೆಯ ಬೆಳೆಯಾಗಿ ಉತ್ತಮ ಆದಾಯದ ಮೂಲವಾಗಿದೆ.

Read More