ಲೇಖಕ: admin

ಸೋಮವಾರಪೇಟೆ ಜೂ.20 NEWS DESK : ಪಟ್ಟಣದ ವಕ್ರ್ಸ್‍ಶಾಪ್ ಏರಿಯಾದಲ್ಲಿ ಪಂಚಾಯಿತಿ ಉದ್ದಿಮೆ ನಿಧಿಯಿಂದ 80ಲಕ್ಷ ರೂ.ಗಳ ವೆಚ್ಚದಲ್ಲಿ ಪೇ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ತೀರ್ಮಾನ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆ ಬಾಕಿಯಿದ್ದು, ಇನ್ನು ಮೂರು ತಿಂಗಳಲ್ಲಿ ಕಾಮಗಾರಿ ಮುಗಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅಧ್ಯಕ್ಷೆ ಜಯಂತಿ ಶಿವಕುಮಾರ್ ಹೇಳಿದರು. ಪ.ಪಂ.ಅಧ್ಯಕ್ಷರಾದ ಜಯಂತಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಟ್ರಾಫಿಕ್ ಸಮಸ್ಯೆ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಪಟ್ಟಣದ ಪೊಲೀಸರ ಠಾಣೆಯ ಕಾರ್ಯವೈಖರಿ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಪಟ್ಟಣದಲ್ಲಿ ಪೊಲೀಸ್ ಠಾಣೆ ಇರುವುದರ ಬಗ್ಗೆಯೇ ಸಾರ್ವಜನಿಕ ವಲಯದಲ್ಲಿ ಸಂಶಯವಿದೆ. ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಜನರು ಬೇಸತ್ತಿದ್ದಾರೆ ಎಂದು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಬಹುತೇಕ ಸದಸ್ಯರು ತಮ್ಮ ಅಸಮಾಧಾನ ಹೊರಹಾಕಿದರು. ಹಿಂದೆಲ್ಲಾ ಹೋಗಾಡ್ರ್ಸ್‍ಗಳು ಒಂದಷ್ಟು ಟ್ರಾಫಿಕ್ ಕಿರಿಯನ್ನು ಹೋಗಲಾಡಿಸಿದ್ದರು. ಈಗ ಠಾಣೆಯಲ್ಲಿ ಸಿಬ್ಬಂದಿಗಳ ಸಂಖ್ಯೆಯೂ ಹೆಚ್ಚಿದೆ. ಆದರೆ ಠಾಣೆ ಬಿಟ್ಟು ಹೊರಬರುತ್ತಿಲ್ಲ ಎಂದು…

Read More

ಸೋಮವಾರಪೇಟೆ ಜೂ.20 NEWS DESK :  ಪಟ್ಟಣದ ವಕ್ರ್ಸ್‍ಶಾಪ್ ಏರಿಯಾದಲ್ಲಿ ಪಂಚಾಯಿತಿ ಉದ್ದಿಮೆ ನಿಧಿಯಿಂದ 80ಲಕ್ಷ ರೂ.ಗಳ ವೆಚ್ಚದಲ್ಲಿ ಪೇ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ತೀರ್ಮಾನ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆ ಬಾಕಿಯಿದ್ದು, ಇನ್ನು ಮೂರು ತಿಂಗಳಲ್ಲಿ ಕಾಮಗಾರಿ ಮುಗಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅಧ್ಯಕ್ಷೆ ಜಯಂತಿ ಶಿವಕುಮಾರ್ ಹೇಳಿದರು. ಪ.ಪಂ.ಅಧ್ಯಕ್ಷರಾದ ಜಯಂತಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಟ್ರಾಫಿಕ್ ಸಮಸ್ಯೆ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಪಟ್ಟಣದ ಪೊಲೀಸರ ಠಾಣೆಯ ಕಾರ್ಯವೈಖರಿ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಪಟ್ಟಣದಲ್ಲಿ ಪೊಲೀಸ್ ಠಾಣೆ ಇರುವುದರ ಬಗ್ಗೆಯೇ ಸಾರ್ವಜನಿಕ ವಲಯದಲ್ಲಿ ಸಂಶಯವಿದೆ. ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಜನರು ಬೇಸತ್ತಿದ್ದಾರೆ ಎಂದು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಬಹುತೇಕ ಸದಸ್ಯರು ತಮ್ಮ ಅಸಮಾಧಾನ ಹೊರಹಾಕಿದರು. ಹಿಂದೆಲ್ಲಾ ಹೋಗಾಡ್ರ್ಸ್‍ಗಳು ಒಂದಷ್ಟು ಟ್ರಾಫಿಕ್ ಕಿರಿಯನ್ನು ಹೋಗಲಾಡಿಸಿದ್ದರು. ಈಗ ಠಾಣೆಯಲ್ಲಿ ಸಿಬ್ಬಂದಿಗಳ ಸಂಖ್ಯೆಯೂ ಹೆಚ್ಚಿದೆ. ಆದರೆ ಠಾಣೆ ಬಿಟ್ಟು ಹೊರಬರುತ್ತಿಲ್ಲ ಎಂದು…

Read More

ಮಡಿಕೇರಿ ಜೂ.20 NEWS DESK : ಗೋಣಿಕೊಪ್ಪಲುವಿನ ಅಮ್ಮ ಕೊಡವ ಸಮಾಜದ ಸಭಾಂಗಣಕ್ಕೆ ರೂ.2 ಕೋಟಿ ಅನುದಾನದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ತಡೆಗೋಡೆ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಭೂಮಿ ಪೂಜೆ ನೆರವೇರಿಸಿದರು. ಬಳಿಕ ಸಮಾಜದ ಪ್ರಮುಖರೊಂದಿಗೆ ಮಾತನಾಡಿದ ಶಾಸಕರು, ಸಮಾಜದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರೂ.20 ಲಕ್ಷಗಳ ಹೆಚ್ಚುವರಿ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಗೋಣಿಕೊಪ್ಪಲು ನಗರ ಕಾಂಗ್ರೆಸ್ ಅಧ್ಯಕ್ಷ  ಪ್ರಮೋದ್ ಗಣಪತಿ, ಅಮ್ಮ ಕೊಡವ ಸಮಾಜದ ಅಧ್ಯಕ್ಷ ಬಾನಂಡ ಪೃತ್ಯು, ನಾಳಿಯಮಾಂಡ ಉಮೇಶ್, ಪಂಚಾಯಿತಿ ಉಪಾಧ್ಯಕ್ಷ ಮಂಜುಳ, ಪಕ್ಷದ ಪ್ರಮುಖರು ಅಮ್ಮ ಕೊಡವ ಸಮಾಜದ ಪ್ರಮುಖರು, ಇಲಾಖೆಯ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು. ಈ ಹಿಂದೆ ಅಮ್ಮ ಕೊಡವ ಸಮಾಜದ ಪ್ರಮುಖರು  ಶಾಸಕರನ್ನು ಭೇಟಿಯಾಗಿ ತಮ್ಮ ಸಮಾಜದ ಸಭಾಂಗಣಕ್ಕೆ…

Read More

ಮಡಿಕೇರಿ ಜೂ.19 NEWS DESK :  ಪ್ರಸಕ್ತ (2025-26) ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯುತ ತರಬೇತಿ ಅಥವಾ ಶಿಷ್ಯ ವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ 03 ತಿಂಗಳ ಯುಪಿಎಸ್ಸಿ ಮುಖ್ಯ ಪರೀಕ್ಷಾ ಪೂರ್ವ ತರಬೇತಿ ನೀಡುವ ಮೂಲಕ ರಾಜ್ಯದ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿಸಲು, ಅಭ್ಯರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಕಲಿಕಾ ಪೂರಕ ವಾತಾವರಣ ಒದಗಿಸಲು, ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತೆ ತರಬೇತಿ ನೀಡಲಾಗುತ್ತಿದ್ದು, ಈ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 21 ಕೊನೆಯ ದಿನವಾಗಿದೆ. ಕೋರ್ಸ್ ವಿವರ ಯುಪಿಎಸ್‍ಸಿ ಮುಖ್ಯ ಪರೀಕ್ಷಾ ಪೂರ್ವ ತರಬೇತಿ, ತರಬೇತಿ ಅವಧಿ 3 ತಿಂಗಳು, 21 ರಿಂದ 35 ವರ್ಷದೊಳಗಿರಬೇಕು. ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದವರಾಗಿರಬೇಕು. ಅಭ್ಯರ್ಥಿಯು ಯುಪಿಎಸ್ಸಿ…

Read More

ಮಡಿಕೇರಿ ಜೂ.20 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಡಾ. ಎಂ.ಎನ್‌.ಆತೀಶ್‌ (ಡಿ.ಎಂ ನೆಫ್ರೋಲಜಿ) ಸೂಪರ್‌ ಸ್ಪೆಷಾಲಿಟಿ ತಜ್ಞ ವೈದ್ಯರನ್ನು ನೇಮಕ ಮಾಡಲಾಗಿದೆ. ಪ್ರತಿ ವಾರದ ಬುಧವಾರ ನೆಫ್ರೋಲಜಿ ಕ್ಲೀನಿಕ್‌ ಅನ್ನು ಆಸ್ಪತ್ರೆಯಲ್ಲಿ ಪ್ರಾರಂಬಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಮೂತ್ರಪಿಂಡ ಸಂಬಂಧಿತ ಸಮಸ್ಯೆ ಇರುವವರು, ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಿರುವವರು ಹಾಗೂ ನೆಫ್ರೋಲಜಿಗೆ ಸಂಬಂದಿತ ಯಾವುದೇ ಸಮಸ್ಯೆಗಳಿದಲ್ಲಿ ಹಾಗೂ ನಿಯಮಿತ ಆರೋಗ್ಯ ತಪಾಸಣೆ ಮಾಡಿಕೊಳ್ಳಲು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಭೋದಕ ಆಸ್ಪತ್ರೆಗೆ ಭೇಟಿ ನೀಡಿ ಸದುಪಯೋಗಪಡೆದುಕೊಳ್ಳುವಂತೆ ಕೋರಲಾಗಿದೆ.

Read More

ಮಡಿಕೇರಿ ಜೂ.20 NEWS DESK : ಎಪಿಟಿ 2.0 ಅಡಿಯಲ್ಲಿ ಹೊಸ ತಂತ್ರಾಂಶವನ್ನು ಜೂನ್, 23 ರಂದು ಅಳವಡಿಸುತ್ತಿರುವ ಕಾರಣ ನಗರದ ಪ್ರಧಾನ ಅಂಚೆ ಕಚೇರಿ ಮತ್ತು ಅದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಉಪ ಅಂಚೆ ಕಚೇರಿಗಳು ಮತ್ತು ಅದರ ಕಾರ್ಯವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಖಾ ಅಂಚೆ ಕಚೇರಿಗಳಲ್ಲಿ ಜೂನ್, 21 ರಂದು ಯಾವುದೇ ರೀತಿಯ ಅಂಚೆ ವಹಿವಾಟು ಇರುವುದಿಲ್ಲ. ಮಡಿಕೇರಿ ಪ್ರಧಾನ ಅಂಚೆ ಕಚೇರಿ ಹಾಗೂ ಉಪ ಅಂಚೆ ಕಚೇರಿಗಳಾದ ಮಡಿಕೇರಿ(ಡಿಒಸಿ), ವಿದ್ಯಾನಗರ, ಅಮ್ಮತ್ತಿ, ಭಾಗಮಂಡಲ, ಬಾಳೆಲೆ, ಚೆಟ್ಟಳ್ಳಿ, ಚೆಯ್ಯಂಡಾಣೆ, ಗೋಣಿಕೊಪ್ಪಲು, ಹುದಿಕೇರಿ, ಕೊಡ್ಲಿಪೇಟೆ, ಕೂಡಿಗೆ ಕುಶಾಲನಗರ, ಕುಟ್ಟ, ಮಾದಾಪುರ, ಮೂರ್ನಾಡು, ನಾಪೋಕ್ಲು, ಪಾಲಿಬೆಟ್ಟ, ಪೊನ್ನಂಪೇಟೆ, ಶನಿವಾರಸಂತೆ, ಸಿದ್ದಾಪುರ, ಸೋಮವಾರಪೇಟೆ, ಶ್ರೀಮಂಗಲ, ಸುಂಟಿಕೊಪ್ಪ, ತಿತಿಮತಿ, ವಿರಾಜಪೇಟೆ, ಅಂಚೆ ಕಚೇರಿಗಳು ಜೂನ್, 21 ರಂದು ಯಾವುದೇ ಅಂಚೆ ವಹಿವಾಟು ನಡೆಸುವುದಿಲ್ಲ ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

Read More

ಸುಂಟಿಕೊಪ್ಪ ಜೂ.19 NEWS DESK : ನಮ್ಮ ಕಾಲದಲ್ಲಿ ಶಿಕ್ಷಣಕ್ಕೆ ಪೋಷಕರೇ ಒತ್ತು ನೀಡಬೇಕಾಗಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಪ್ರತಿಯೊಂದು ಮಗು ಶಿಕ್ಷಣವನ್ನು ಪಡೆಯಬೇಕೆಂಬ ನಿಯಮದಡಿಯಲ್ಲಿ ಸರಕಾರ ಪಠ್ಯ ಪುಸ್ತಕ ಹಾಗೂ ದಾನಿಗಳು ನೋಟ್ ಪುಸ್ತಕಗಳನ್ನು ವಿತರಿಸುವ ಮೂಲಕ ಶಿಕ್ಷಣಕ್ಕೆ ಒತ್ತು ನೀಡುತ್ತಿರುವುದು ಆಶಾದಾಯಕ ವಿಚಾರ. ಮಕ್ಕಳು ಸವಲತ್ತುಗಳನ್ನು ಪಡೆದುಕೊಂಡು ಉತ್ತಮ ಶಿಕ್ಷಣದತ್ತ ಗಮನ ಹರಿಸುವಂತೆ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಗದ್ದೆಹಳ್ಳ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಪ್ರೌಢಶಾಲೆ ಪದವಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ವತಿಯಿಂದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ದಾನಿಗಳಾದ ಪಿ.ಎಂ.ಲತೀಫ್ ಅವರು ನೀಡಿರುವ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ಮಕ್ಕಳು ಶಿಕ್ಷಣದಿಂದ ವಂಚಿತಗೊಳ್ಳದ್ದಂತೆ ಸರಕಾರ ಹಾಗೂ ದಾನಿಗಳು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು ಉತ್ತಮ ಬೆಳವಣಿಗೆ ಮಕ್ಕಳು ಶಿಕ್ಷಣ ಪಡೆದು…

Read More

ಸುಂಟಿಕೊಪ್ಪ ಜೂ.20 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಾ ಕಾವೇರಿ ಜ್ಞಾನ ವಿಕಾಸ ಕೇಂದ್ರ ಹಾಗೂ ಭೂಮಿಕ ಸ್ವಸಹಾಯ ಸಂಘ ಸಂಯುಕ್ತಾಶ್ರಯದಲ್ಲಿ ಪುಟ್ಟ ಮಕ್ಕಳಿಗೆ ಅಜ್ಜಿಯ ಕೈ ತುತ್ತು ಸ್ವ ಉದ್ಯೋಗದ ಕುರಿತು ಕಾನ್‍ಬೈಲ್ ವಿಭಾಗದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವ ಸಹಾಯ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಗಾರವನ್ನು ನೀಡಲಾಯಿತು. ಮಂಜಿಕೇರೆ ಸಮುದಾಯ ಭವನದಲ್ಲಿ ಕಾನ್‍ಬೈಲ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದ ಕಾನ್‍ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಆಯೋಜಿಸಲಾಗಿದ್ದ ಸ್ವ ಸಹಾಯ ಸಂಘದ ಪದಾಧಿಕಾರಿಗಳ ಮಕ್ಕಳಿಗೆ ಮಕ್ಕಳಿಗೆ ಅಜ್ಜಿಯಂದಿರ ಕೈ ತುತ್ತು ಎಂಬ ವಿನೂತನ ಕಾರ್ಯಕ್ರಮವನ್ನು ಅಯೋಜಿಸುವ ಮೂಲಕ ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಹಿಂದಿನ ಕಾಲದ ಆಚಾರ, ವಿಚಾರ, ವೈಚಾರಿಕತೆಯು ಮರೆಯಾಗುತ್ತಿದ್ದು, ಮಕ್ಕಳಿಗೆ ಹಿರಿಯರೊಂದಿಗೆ ಇರಬೇಕಾದ ಗೌರವ, ಪ್ರೀತಿ, ಅನ್ಯೂನತೆ, ವಾತ್ಸಲ್ಯತೆಯು ಕುಂಠಿತಗೊಳ್ಳುತ್ತಿರುವುದು ಸೊಜಿಗದ ವಿಚಾರವಾಗಿದೆ. ಇದನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಇಂತಹ ಅಜ್ಜಿಯ ಕೈ ತುತ್ತು ಎಂಬ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ…

Read More

ಮಡಿಕೇರಿ ಜೂ.19 NEWS DESK : ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ಅನುಗುಣವಾಗಿ ಪತ್ರಕರ್ತರು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತಾಗಬೇಕು ಎಂದು  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಹೇಳಿದರು. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಿದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಮತ್ತು ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಸ್ಮರಣ ಸಂಚಿಕೆ ಬೆಳ್ಳಿಪಯಣ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಾಂಪ್ರದಾಯಿಕ ಮಾಧ್ಯಮಗಳ ಮೇಲೆ ಇಂದಿಗೂ ಓದುಗರು ವಿಶ್ವಾಸ ಇಟ್ಟುಕೊಂಡಿದ್ದಾರೆ. ಆದರೆ ಸಾಮಾಜಿಕ ಜಾಲತಾಣಗಳ ಮೂಲಕ ವರದಿಗಳು ಹೆಚ್ಚು ಜನರಿಗೆ ತಲುಪುತ್ತಿದೆ. ಮಾಧ್ಯಮದಲ್ಲಿನ ಕೆಲಸ ಸವಾಲಿನಿಂದ ಕೂಡಿದೆ. ಪರಿಣಾಮಕಾರಿ ವರದಿಗೆ ಪತ್ರಕರ್ತರು ನಿರಂತರವಾಗಿ ಪ್ರಯತ್ನಿಸಬೇಕು. ಮಾಧ್ಯಮದವರು ಆಧುನಿಕ ತಂತ್ರಜ್ಞಾನ ರೂಢಿಸಿಕೊಳ್ಳಬೇಕು. ಮಾಧ್ಯಮಗಳು ಸಮಾಜದ ಪ್ರತಿಬಿಂಬ ಆಗಿರುವುದರಿಂದ ತಪ್ಪುಗಳಿದ್ದರೆ ಪ್ರಶ್ನೆ ಮಾಡಬೇಕು. ಪ್ರಚಾರ ಬಯಸುವವರ ಬೆನ್ನು ಹತ್ತುವ ಬದಲು ಸಮಾಜಕ್ಕೆ ಉಪಯೋಗ ಆಗುವ ವರದಿ ಮಾಡಬೇಕು. ವರದಿ ಮಾಡಿದ ವಿಷಯಗಳನ್ನು ವರದಿಗಾರ…

Read More

ಮಡಿಕೇರಿ ಜೂ.19 NEWS DESK : ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ ನೀಡಿ ಭೂಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದರು. ಭೂ ಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ವಿತರಿಸುವ ಹಿನ್ನೆಲೆ ಅಗತ್ಯ ಕ್ರಮವಹಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಸರ್ಕಾರ ಕಂದಾಯ ಇಲಾಖೆಯಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಸುಧಾರಣೆ ಮತ್ತು ಬದಲಾವಣೆ ಜಾರಿಗೊಳಿಸಿದ್ದು, ಅವುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು. ಸಕಾಲ ಯೋಜನೆ, ಪಿಂಚಣಿ ಯೋಜನೆ ಸಂಬಂಧಿಸಿದಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕೃಷ್ಣಮೂರ್ತಿ, ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಇತರರು ಇದ್ದರು. ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಭೆ: ಸೋಮವಾರಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇದೇ ಸಂದರ್ಭದಲ್ಲಿ ಸಭೆ ನಡೆಸಿದರು. ಈ…

Read More