ಮಡಿಕೇರಿ ಆ.14 NEWS DESK : ಸಮರ್ಥ ಕನ್ನಡಿಗರು ಸಂಸ್ಥೆಯ ವತಿಯಿಂದ ಉಚಿತವಾಗಿ ತ್ರಿವರ್ಣ ಧ್ವಜ ವಿತರಣೆ ಮಾಡಲಾಗುತ್ತಿದ್ದು, ಆಸಕ್ತರು ಸಂಪರ್ಕಿಸುವಂತೆ ಸಂಸ್ಥೆಯ ಪ್ರಮುಖರು ತಿಳಿಸಿದ್ದಾರೆ. ಹರ್ ಘರ್ ತಿರಂಗ ಎನ್ನುವ ಭಾರತೀಯ ಅಂಚೆ ಕಚೇರಿಯ ಪರಿಕಲ್ಪನೆಯಡಿಯಲ್ಲಿ ಸಮರ್ಥ ಕನ್ನಡಿಗರು ಸಂಸ್ಥೆಯ ಸಂಸ್ಥಾಪಕ ಲಿಂಗೇಶ್ ಹುಣಸೂರು ಅವರು ಅಂಚೆ ಕಛೇರಿಯಿಂದ 100 ( ನೂರು )ತ್ರಿವರ್ಣ ಧ್ವಜಗಳನ್ನು ಖರೀದಿಸಿ ಅದನ್ನು ಉಚಿತವಾಗಿ ನೀಡುತ್ತಿದ್ದು, ಆಸಕ್ತರು ಸಮರ್ಥ ಕನ್ನಡಿಗರು ಕೊಡಗು ಜಿಲ್ಲಾ ಘಟಕದ ಪ್ರಧಾನ ಸಂಚಾಲಕರಾದ ಜಯಲಕ್ಷ್ಮಿ ಕೆ ಇವರಿಂದ ಪಡೆದುಕೊಳ್ಳಬೇಕಾಗಿ ಸಮರ್ಥ ಕನ್ನಡಿಗರು ಸಂಸ್ಥೆ ವಿನಂತಿಸಿಕೊಂಡಿದೆ.
ಲೇಖಕ: admin
ಮಡಿಕೇರಿ ಆ.14 NEWS DESK : 41 ಕೋಟಿ ರೂಪಾಯಿ ವೆಚ್ಚದಲ್ಲಿ 450 ಹಾಸಿಗೆ ಸಾಮರ್ಥ್ಯದ ಮಡಿಕೇರಿಯ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ (ಎರಡನೇ ಹಂತ) ಆ.15 ರಂದು ಕಾಮಗಾರಿಯ ಶಿಲಾನ್ಯಾಸ ನಡೆಯಲಿದೆ. ಕಾಮಗಾರಿಗಳಿಗೆ ವಿಶೇಷ ಒತ್ತು ನೀಡಿ ಅನುದಾನ ಒದಗಿಸಿದ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಧನ್ಯವಾದ ಸಲ್ಲಿಸಿದರು.
ನಾಪೋಕ್ಲು ಆ.14 NEWS DESK : ವಿದ್ಯಾರ್ಥಿ ಜೀವನದಲ್ಲಿ, ಚಂಚಲ ಮನಸ್ಸನ್ನು ನಿಯಂತ್ರಿಸಲು ಏಕಾಗ್ರತೆ ಮತ್ತು ಶಿಸ್ತು ಬಹಳ ಮುಖ್ಯ ಎಂದು ಬೆಟ್ಟಗೇರಿ ಉದಯ ಪ್ರೌಢ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಭಾರತ ಸರ್ಕಾರ ಕಾಫೀ ಮಂಡಳಿ ನಿರ್ದೇಶಕರಾದ ತಳೂರು ಕಿಶೋರ್ ಕುಮಾರ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಮಡಿಕೇರಿ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಟ್ಟಗೇರಿ, ವಲಯ ಮತ್ತು ಬೆಟ್ಟಗೇರಿ ಉದಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಬೆಟ್ಟಗೇರಿ ಉದಯ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆದ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯ ಕುರಿತಂತೆ ಮಾದಕ ವ್ಯಸನದಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳೇ ಉತ್ತಮ…
ನಾಪೋಕ್ಲು ಆ.14 NEWS DESK : ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅವಂದೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಆವರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಂಭ್ರಮದ ಪ್ರಯುಕ್ತವಾಗಿ ಸಂಘಟನೆ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ಸಂಘಟನೆಯ ಸ್ವಯಂಸೇವಕರಾದ ಧನಂಜಯ ಅಗೋಳಿಕಜೆ ಮಾತನಾಡಿ, ರಕ್ಷಾ ಬಂಧನದ ಮಹತ್ವವನ್ನು ವಿವರಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಭಾರತದ ಹಾಗೂ ವಿಶ್ವದ ಅತಿ ದೊಡ್ದ ಸ್ವಯಂಸೇವ ಸಂಘಟನೆಯಾಗಿದ್ದು, 27 ಸೆಪ್ಟೆಂಬರ್ 1925ರ ವಿಜಯ ದಶಮಿಯ ದಿನ ಮಹಾರಾಷ್ಟ್ರ ರಾಜ್ಯದ ನಾಗಪುರದಲ್ಲಿ ಡಾ. ಕೇಶವ ಬಲಿರಾಂ ಹೆಡಗೆವಾರ್ ಈ ಸಂಘಟನೆಯನ್ನು ಹುಟ್ಟುಹಾಕಿದರು. ಹಿಂದೂ ರಾಷ್ಟ್ರೀಯವಾದ ಬಲಪಂಥೀಯ ಸಂಘಟನೆಯೆಂದು ಸಾಮಾನ್ಯವಾಗಿ ಪರಿಗಣಿಸಲ್ಪಡುವ ಈ ಸಂಸ್ಥೆ ಭಾರತದ ನಾಗಪುರದಲ್ಲಿ ತನ್ನ ಮುಖ್ಯ ಕಾರ್ಯಾಲಯ ಹೊಂದಿದೆ. ಹಿಂದೂ ಸಂಘಟನೆ ಮತ್ತು ಐಕ್ಯತೆಯನ್ನು ತನ್ನ ಗುರಿಯನ್ನಾಗಿ ಹೊಂದಿರುವ ಈ ಸಂಸ್ಥೆಗೆ ಹೊಂದಿಕೊಂಡಿರುವ ಇತರ ಸಂಸ್ಥೆಗಳನ್ನು ಒಟ್ಟಾಗಿ ಸೇರಿಸಿ ಸಾಮಾನ್ಯವಾಗಿ “ಸಂಘ ಪರಿವಾರ” ಎಂದು ಕರೆಯಲಾಗುತ್ತದೆ. ರಾಷ್ಟ್ರೀಯ ಸ್ವಯಂಸೇವಕ…
ನಾಪೋಕ್ಲು ಆ.14 NEWS DESK : ಕೊಟ್ಟಮುಡಿ ಕೆ.ಎಂ.ಜೆ, ಎಸ್.ವೈ.ಎಸ್, ಎಸ್.ಎಸ್.ಎಫ್ ಕೊಟ್ಟಮುಡಿ ಶಾಖೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ನಾಪೋಕ್ಲು, ಬೆಟ್ಟಗೇರಿ, ಮಡಿಕೇರಿ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ ಕೊಟ್ಟಮುಡಿ ಮರ್ಕಝ್ ಸಂಸ್ಥೆಯಿಂದ ಕೊಟ್ಟಮುಡಿ, ಮೂರ್ನಾಡು ಜಂಕ್ಷನ್ ವರೆಗೆ ರಸ್ತೆಯ ಎರಡು ಬದಿಗಳಲ್ಲಿ ತುಂಬಿಕೊಂಡಿದ್ದ ಕಾಡು ಗಿಡಗಂಟಿಗಳನ್ನು ಕಡಿದು ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸ್ವಚ್ಚತಾ ಕಾರ್ಯದಲ್ಲಿ ಎಸ್ವೈಎಸ್ ಕೊಟ್ಟಮುಡಿ ಶಾಖೆ ಅಧ್ಯಕ್ಷ ಹುಸೈನ್ ಝುಹ್ರಿ, ಉಪಾಧ್ಯಕ್ಷ ಮೈಸಿ ಕತ್ತಣೀರ, ಕಾರ್ಯದರ್ಶಿ ರಫೀಕ್ ಅಝ್ಹರಿ, ಕೊಡಗು ಜಿಲ್ಲಾ ಇಸಾಬ ಕಾರ್ಯದರ್ಶಿ ಬಷೀರ್, ಮಡಿಕೇರಿ ಡಿವಿಷನ್ ಇಸಾಬ ಕಾರ್ಯದರ್ಶಿ ಅಶ್ಕರ್ ಸಖಾಫಿ, ಕೆ.ಎಂ.ಜೆ ಉಪಾಧ್ಯಕ್ಷ ಶಾದುಲಿ ಹಾಜಿ, ಆರ್.ಎಂ.ಹಸೈನಾರ್, ಸದಸ್ಯರುಗಳಾದ ಖಲೀಲ್ ಹಿಮಮಿ, ಹಮೀದ್ ಮಮ್ಮು, ಮೂಸಾನ್, ಅಬೂಬಕರ್, ಹಂಸ ಬೀಟಿಬಾಣೆ, ಬಸೀಪ, ಝಕರಿಯ್ಯ, ಹಮೀದ್ ಬಲಿಪುರ, ಬಷೀರ್, ಹಸೈನಾರ್ ಬಲಿಪುರ, ಸಿ.ಎ.ಹಸೈನಾರ್, ಆಬಿದ್ ಮತ್ತು ಹಲವಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಆ.14 NEWS DESK : ತುಮಕೂರಿನಲ್ಲಿ ಇನ್ಫನೈಟ್ ಡಾನ್ಸ್ ಸ್ಟುಡಿಯೋ ವತಿಯಿಂದ 6ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ತಂಡ ಪ್ರಥಮ ಸ್ಥಾನ ಪಡೆದುಕೊಳ್ಳುವ ಮೂಲಕ 50,000/- ನಗದು ಹಾಗೂ ಟ್ರೋಫಿ ಯನ್ನು ತನ್ನದಾಗಿಸಿಕೊಂಡಿದೆ. ಸ್ಪರ್ಧೆಯ ತೀರ್ಪುಗಾರರಾಗಿ ಡಾನ್ಸ್ ಕರ್ನಾಟಕ ಡಾನ್ಸ್ ನಾ ಶಶಿ ಮಾಸ್ಟರ್, ಜಗ್ಗ ಮಾಸ್ಟರ್, ರಾಹುಲ್ ರಾವ್, ಶೋಭಿತ ಕಾರ್ಯನಿರ್ವಹಿಸಿದರು. ಮೈಸೂರಿನ ಜಗನ್ ಮೋಹನ್ ಪ್ಯಾಲೇಸ್ ನಲ್ಲಿ ವಿ ಪಿ ನ್ ಹಾಗೂ ಯು ಸ್ ಏ ವತಿಯಿಂದ ಆಯೋಜಿಸಿದ್ದ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆದುಕೊಂಡಿದೆ, ಇದರ ತೀರ್ಪುಗರರಾಗಿ ಡಿ ಕೆ ಡಿ ಯ ಅರುಣ್ ಮಾಸ್ಟರ್ ಕಾರ್ಯನಿರ್ವಹಿಸಿದರು. ಸತತ ಮೂರು ಪ್ರಥಮ ಸ್ಥಾನ ಪಡೆಯುವ ಮೂಲಕ ಕಿಂಗ್ಸ್ ವಿದ್ಯಾರ್ಥಿಗಳು ಹ್ಯಾಟ್ರಿಕ್ ವಿಜಯ ಪಡೆದಿದ್ದಾರೆ. ತಂಡದ ಕೊರಿಯೋಗ್ರಾಫರ್ ಮಹೇಶ್ ಹಾಗೂ ಕಿರಣ್ ನೇತೃತ್ವದಲ್ಲಿ ವರುಣವಿ, ಪ್ರಜ್ಞಾ, ಯಶ್ವಿತ, ದೀಪಿಕ್ಷಾ, ಹುಂಶಿಕ, ವರ್ಷಿಣಿ ಶೆಟ್ಟಿ, ತ್ರಿಶ, ಸೋನಾಕ್ಷಿ,…
ನಾಪೋಕ್ಲು ಆ.14 NEWS DESK : ಶಿಕ್ಷಣ ಇಲಾಖೆಯಲ್ಲಿ 31ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸ.ಹಿ.ಪ್ರಾ.ಶಾಲೆ ಪಡಿಯಾಣಿಯಲ್ಲಿ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕರಾದ ಕೆ.ಸಿ.ದಮೇಂದ್ರ ಅವರನ್ನು ಬೀಳ್ಕೊಡಲಾಯಿತು. ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ., ವಿದ್ಯಾರ್ಥಿಗಳು, ಮಡಿಕೇರಿ ತಾಲೂಕಿನ ಶಿಕ್ಷಕರ ಸಂಘ, ಬಿ.ಆರ್.ಸಿ. ವತಿಯಿಂದ ಕೆ.ಸಿ.ದಮೇಂದ್ರ ದಂಪತಿಗಳಿಗೆ ನೆನಪಿನ ಕಾಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ನಿವೃತ್ತಿ ಹೊಂದಿದ ಕೆ.ಸಿ.ದಮೇಂದ್ರ ಶಾಲೆಗೆ ಮರದ ಕಪಾಟನ್ನು ಕೊಡುಗೆಯಾಗಿ ನೀಡಿದರು. ಸಮಾರಂಭದಲ್ಲಿ ಪ್ರಭಾರಿ ಮುಖ್ಯ ಶಿಕ್ಷಕರಾದ ಬೋಜಮ್ಮ, ಸಹ ಶಿಕ್ಷಕಿಯರಾದ ಕೆ.ಎ.ಹೇಮಮಾಲಿನಿ, ಕೆ.ಜೆ.ರಾಧಾ, ಕೆ.ಎಂ.ಬುಶೀರ, ನಿವೃತ್ತ ದೈಹಿಕ ಶಿಕ್ಷಕಿ ಎಂ.ಬಿ.ಭಾರತಿ, ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾದ ಮೋಹನ್ ಪೆರಾಜೆ ಮತ್ತು ಸದಸ್ಯರು, ಬಿ.ಆರ್.ಸಿ ಮಂಜುಳಾ ಚಿತ್ರಾಪುರ, ಪ್ರಸಾದ್, ಎಸ್.ಡಿ.ಎಂ.ಸಿ ಪದಾಧಿಕಾರಿ ಸದಸ್ಯರು, ಶಿಕ್ಷಕರು, ಪೋಷಕರು ಹಾಜರಿದ್ದರುರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಆ.14 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ , ಹೆಬ್ಬಾಲೆ ಕೆನರಾ ಬ್ಯಾಂಕ್, ಹೆಬ್ಬಾಲೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಹಯೋಗದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ನ ವ್ಯವಸ್ಥಾಪಕ ಮಹೇಶ್ ಕುಮಾರ್ ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಆರ್ಥಿಕ ಸಲಹೆಗಾರರದ ನಬಿ ಮಾತನಾಡಿ, ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತವಿಮೆಯಾಗಿದ್ದು, ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436/-ರೂಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇ ರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000/-ರೂ ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು. ಎರಡನ್ನೂ ಮಾಡಿಸಿಕೊಂಡಲ್ಲಿ…
ಸಿದ್ದಾಪುರ ಆ.14 NEWS DESK : ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಅಯ್ಕೆಗೆ ನಡೆದ ಚುನಾವಣೆಯಲ್ಲಿ ಪ್ರತಿಸರ್ಧಿಗಳಿಲ್ಲದ ಕಾರಣ ಅಧ್ಯಕ್ಷರಾಗಿ ವೈ.ಆರ್.ಜಯಲಕ್ಷ್ಮಿ ಹಾಗೂ ಉಪಾಧ್ಯಕ್ಷರಾಗಿ ಎಂ.ಎನ್.ವಿಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 17 ಸದಸ್ಯರುಗಳಿರುವ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷರು ಉಪಾಧ್ಯಕ್ಷರ ಆಯ್ಕೆಗೆ ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ಅಧ್ಯಕ್ಷೆ ಆಕಾಂಕ್ಷಿಯಾಗಿ ವೈ.ಆರ್.ಜಯಲಕ್ಷ್ಮಿ ಹಾಗೂ ಉಪಾಧ್ಯಕ್ಷರ ಆಕಾಂಕ್ಷಿಯಾಗಿ ಎಂ.ಎನ್.ವಿಜು ನಾಮಪತ್ರ ಸಲ್ಲಿಸಿದರು. ನಾಮಪತ್ರ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು ಪ್ರತಿಸ್ಪರ್ಧಿಗಳಿಲ್ಲದ ಕಾರಣ ಅಧ್ಯಕ್ಷರಾಗಿ ಜಯಲಕ್ಷ್ಮಿ ಹಾಗೂ ಉಪಾಧ್ಯಕ್ಷರಾಗಿ ಎಂ.ಎನ್.ವಿಜು ಅವರನ್ನ ಅವಿರೋಧವಾಗಿ ಆಯ್ಕೆಯ ಘೋಷಣೆ ಮಾಡಿದರು. 17 ಸದಸ್ಯರ ಪೈಕಿ ಓರ್ವ ಸದಸ್ಯೆ ಗೈರಾಜರಾಗಿದ್ದರು. ವಿರಾಜಪೇಟೆ ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿಯಾಗಿದ್ದ ಪಿ.ಸಿ.ಪ್ರವೀಣ್ ಚುನಾವಣಾ ಪ್ರಕ್ರಿಯೆ ನಡೆಸಿದರು. ಈ ಸಂದರ್ಭ ಅಧಿಕಾರಿಗಳಾದ ಗಣೇಶ್, ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿ ಶ್ರೀಕಾಂತ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಸೇರಿದಂತೆ ಮತ್ತಿತರರು ಹಾಜರಿದ್ದರು. ನೂತನ ಅಧ್ಯಕ್ಷೆ ಜಯಲಕ್ಷ್ಮಿ ಮಾತನಾಡಿ 2…
ಮಡಿಕೇರಿ ಆ.14 NEWS DESK : ರಿಯಾಯಿತಿ ದರದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡದಂತೆ ತಡೆಯಲು ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಮತ್ತು ವೀರಾಜಪೇಟೆ ತಾಲ್ಲೂಕುಗಳ ಕೈಗಾರಿಕ ಪ್ರದೇಶಗಳಲ್ಲಿ ರಿಯಾಯಿತಿ ದರದ ಬೇವು ಲೇಪಿತ ಯೂರಿಯಾ ರಸಗೊಬ್ಬರ ಬಳಸುತ್ತಿರುವ ಕಾರ್ಖಾನೆ/ ಕೈಗಾರಿಕೆಗಳನ್ನು ಪತ್ತೆ ಹಚ್ಚಿ, ಬಳಸುತ್ತಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿಯಲ್ಲಿ ಹಾಗೂ ರಸಗೊಬ್ಬರ (ನಿಯಂತ್ರಣ) ಆದೇಶ 1985ರ ಅನ್ವಯ ಸೂಕ್ತ ಕ್ರಮ ವಹಿಸಲು ಹಾಗೂ ಅಂತಹ ಕೈಗಾರಿಕೆಗಳ ಪರವಾನಿಗೆ ರದ್ದುಪಡಿಸಲು ಜಿಲ್ಲಾಧಿಕಾರಿ ಅವರು ಕೃಷಿ, ಕೈಗಾರಿಕೆ ಮತ್ತು ವಾಣಿಜ್ಯ, ತೋಟಗಾರಿಕೆ, ಕಾಫಿ ಮಂಡಳಿ, ಪೊಲೀಸ್ ಹಾಗೂ ಅರಣ್ಯ ಇಲಾಖೆಗಳನ್ನು ಒಳಗೊಂಡಂತೆ ತಾಲ್ಲೂಕುವಾರು 3 (ಮೂರು) ತಂಡಗಳನ್ನು ರಚಿಸಿ ಆದೇಶಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ರಿಯಾಯಿತಿ ದರದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳಿಗೆ ಅಕ್ರಮವಾಗಿ ಬಳಕೆ ಮಾಡುತ್ತಿರುವುದು ಅಥವಾ ಅಕ್ರಮವಾಗಿ ದಾಸ್ತಾನು ಮಾರಾಟ ಮತ್ತು ಸಾಗಾಣಿಕೆ ಮಾಡುತ್ತಿರುವುದು ಕಂಡುಬಂದಲ್ಲಿ ದೂರವಾಣಿ…






