ಮಡಿಕೇರಿ ಜು.15 NEWS DESK : ಸಮಾಜದ ಉತ್ತಮ ಅಭಿವೃದ್ಧಿಗೆ ಮತ್ತು ಗ್ರಾಮಗಳ ಮೂಲಭೂತ ಸೌಕರ್ಯಗಳಿಗೆ ಅಧಿಕಾರಿಗಳು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿದಾಗ ಗ್ರಾಮಗಳು ಅಭಿವೃದ್ಧಿಯಾಗಲು ಸಾಧ್ಯ ಎಂದು ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯ ಮತ್ತು ಕಾನ್ಸೀರಾಂಜೀ ನಗರದ ಸ್ಥಾಪಕಾಧ್ಯಕ್ಷ ಕೆ.ಮೊಣ್ಣಪ್ಪ ಅಭಿಪ್ರಾಯಪಟ್ಟರು. ಸಮಾಜ ಕಲ್ಯಾಣ ಇಲಾಖೆಯ ಕೇಂದ್ರ ಕಚೇರಿಯಲ್ಲಿ ನಿರ್ದೇಶಕರಾದ ಶೇಖರ್ ಅವರನ್ನು ಹೊದ್ದೂರು ಗ್ರಾಮ ಪಂಚಾಯಿತಿಯ ಸದಸ್ಯರು ಮತ್ತು ಕಾನ್ಸೀರಾಂಜೀ ನಗರದ ಪಾಲೆಮಾಡುವಿನ ನಿವಾಸಿಗಳ ಪರವಾಗಿ ಸನ್ಮಾನಿಸಿ ಮಾತನಾಡಿದರು. ಅಧಿಕಾರಿಗಳನ್ನು ಸರಕಾರದ ಮಾನದಂಡದಂತೆ ಕರ್ತವ್ಯದ ಧ್ಯೇಯೋದ್ದೇಶದಿಂದ ಪ್ರಮಾಣ ವಚನ ಮಾಡಿ ಬರುತ್ತಾರೆ. ಸರ್ಕಾರಿ ಹುದ್ದೆಯಲ್ಲಿರುವ ಶೇ.75 ರಷ್ಟು ಅಧಿಕಾರಿಗಳು ನಾಮಕಾವಸ್ಥೆಗೆ ಕೆಲಸ ಮಾಡುತ್ತಾ ದರ್ಪ ಮತ್ತು ಬೇಜವಾಬ್ದಾರಿತನದಿಂದ ಕೂಡಿದ್ದು ಅಧಿಕಾರಿಗಳ ಭ್ರಷ್ಟಾಚಾರವು ತಾಂಡವವಾಡುತ್ತಿದೆ. ಇಂತಹ ಅಧಿಕಾರಿಗಳನ್ನು ಸಮಾಜವು ಸೂಕ್ಷ್ಮವಾಗಿ ನೋಡುತ್ತಿದೆ ಎಂಬ ಅರಿವು ಮೂಡಿಸಬೇಕು. ಆದ್ದರಿಂದ, ನಿಷ್ಠಾವಂತ ಅಧಿಕಾರಿಗಳಿಗೆ ಸನ್ಮಾನ ಅಭಿನಂದನೆಯನ್ನು ಸಲ್ಲಿಸುವ ಮೂಲಕ ಅಧಿಕಾರಿಗಳ ಜವಾಬ್ದಾರಿ ಮತ್ತು ಕರ್ತವ್ಯವನ್ನು ಹೆಚ್ಚಿಸಿ ಪ್ರಜ್ನಾವಂತ ಸಮಾಜಕ್ಕೆ ಮತ್ತು ಅಧಿಕಾರಿಗಳಿಗೆ…
ಲೇಖಕ: admin
ಮಡಿಕೇರಿ ಜು.15 NEWS DESK : ನಾಪೋಕ್ಲು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ನಡೆಯಿತು. ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವನಜಾಕ್ಷಿ ಮತ್ತು ನಾಪೋಕ್ಲು ಠಾಣೆಯ ಪಿಎಸ್ಐ ರಾಘವೇಂದ್ರ ಮನೆ ಮನೆಗೆ ಭೇಟಿ ನೀಡಿ ಕಾರ್ಯಕ್ರಮದ ಉದ್ದೇಶ ಮತ್ತು ಸೈಬರ್ ಅಪರಾಧ, ಮಾದಕ ವಸ್ತು, ಬಾಲಾಪರಾಧ, ಪೋಕ್ಸೋ ಕಾಯಿದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು. ಈ ಸಂದರ್ಭ ಠಾಣೆಯ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿದ್ದರು.
ಬೆಂಗಳೂರು ಜು.15 NEWS DESK : ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ವಿಧಾನಸೌಧದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾತುಗಳು: • ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. • ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದ್ದರೂ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು. • ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ. • ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ…
ಮಡಿಕೇರಿ ಜು.15 NEWS DESK :ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.86 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 58.85 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1713.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1188.57 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 41.90 ಮಿ.ಮೀ. ಕಳೆದ ವರ್ಷ ಇದೇ ದಿನ 88.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2510.17 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1739.21 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.55 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 48.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1597.25 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1221.25 ಮಿ.ಮೀ. ಮಳೆಯಾಗಿತ್ತು. ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 26.32 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 33.02…
ಬೆಂಗಳೂರು ಜು.15 NEWS DESK : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ವಿಶ್ವ ಯುವ ಕೌಶಲ್ಯ ದಿನಾಚರಣೆ 2025 ಹಾಗೂ ವಿಶ್ವ ಕೌಶಲ್ಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ” ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು, ಬಳಿಕ ಕರ್ನಾಟಕ ರಾಜ್ಯ ಶುಶ್ರೂಷಕ ಪರಿಷತ್ತು ವತಿಯಿಂದ ಆಧಾರ್ ಹಾಗೂ ಡಿಜಿ ಲಾಕರ್ ಇ ಕೆವೈಸಿ ಮೂಲಕ ಸಮೂಹದ ವರೆಗೆ ನೋಂದಣಿ ಪ್ರಮಾಣ ಪತ್ರಗಳನ್ನು ವಿತರಿಸುವ ತಂತ್ರಜ್ಞಾನವನ್ನು ಲೋಕಾರ್ಪಣೆಗೊಳಿಸಿದರು.
ಮಡಿಕೇರಿ NEWS DESK ಜು.15 : ಮಡಿಕೇರಿಯ ಜಿಲ್ಲಾ ಸರಕಾರಿ ಆಸ್ಪತ್ರೆಯಿಂದ ಕಾಣೆಯಾಗಿದ್ದ ಮಡಿಕೇರಿ ತಾಲ್ಲೂಕಿನ ಅರೆಕಾಡು ಗ್ರಾಮದ ನಿವಾಸಿ ಕೆ.ಎನ್.ರಘು (38) ಅವರ ಮೃತದೇಹ ಪತ್ತೆಯಾಗಿದೆ. ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕ್ರಿಟಿಕಲ್ ಕೇರ್ ಕಟ್ಟಡದ ನೀರು ತುಂಬಿದ ಗುಂಡಿಯಲ್ಲಿ ರಘು ಅವರ ಮೃತದೇಹ ದೊರೆತ್ತಿದ್ದು, ಮಡಿಕೇರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರಘು ಅವರನ್ನು ಅವರ ತಾಯಿ ರತ್ನ ಹಾಗೂ ಪತ್ನಿ ರಾಜೇಶ್ವರಿ ಅವರು ಜು.8 ರಂದು ಮಡಿಕೇರಿಯ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಿದ್ದರು. ಜು.11 ರಂದು ಬೆಳಗ್ಗಿನ ಜಾವ 5 ಗಂಟೆ ಸುಮಾರಿನಲ್ಲಿ ತಾಯಿಯ ಬಳಿಯಿಂದ 200 ರೂ. ಪಡೆದ ರಘು ಅವರು ಕಾಫಿ ಹಾಗೂ ತಿಂಡಿಯನ್ನು ತರಲು ಹೊಟೇಲ್ ಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಮರಳಿರಲಿಲ್ಲ, ಅಲ್ಲದೆ ಮನೆಗೂ ಬಂದಿರಲಿಲ್ಲ. ಇದರಿಂದ ಆತಂಕಗೊAಡ ಪತ್ನಿ ರಾಜೇಶ್ವರಿ ಅವರು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು…
ಕುಶಾಲನಗರ ಜು.15 NEWS DESK : ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿನ್ ನಿಂಬಾಳ್ಕರ್ ಅವರಿಗೆ ಮುಖ್ಯ ಮಂತ್ರಿ ಪದಕ ಲಭಿಸಿದೆ. ಅರಣ್ಯ ಇಲಾಖೆಯಲ್ಲಿ 200ಕ್ಕೂ ಹೆಚ್ಚು ಅರಣ್ಯ ಮೊಕದ್ದಮೆಗಳು, 30ಕ್ಕೂ ಹೆಚ್ಚು ವನ್ಯಜೀವಿ ಪ್ರಕರಣಗಳು ಹಾಗೂ 50ಕ್ಕೂ ಹೆಚ್ಚು ಉಚ್ಚ ನ್ಯಾಯಾಲಯದ ಪ್ರಕರಣಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡಿ ಅರಣ್ಯ ಕಾನೂನು ಬಗ್ಗೆ ತರಬೇತಿ ಶಾಲೆಯಲ್ಲಿ ಭೋಧನೆಯನ್ನು ಮಾಡಿರುತ್ತಾರೆ. ಇವರು ಮೂಲತಃ ಬೆಳಗಾವಿ ಜಿಲ್ಲೆ, ಅಥಣಿ ಯವರಾಗಿದ್ದು ಕಳೆದ 8 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಕಳೆದ ಕೆಲವು ವರ್ಷಗಳ ಕಾಲ ವಿರಾಜಪೇಟೆ ಉಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಕುಶಾಲನಗರದ ಮೀನುಕೊಲ್ಲಿ ವಲಯದಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕುಶಾಲನಗರ ಜು.15 NEWS DESK : ಗಂಧದಕೋಟಿಯಲ್ಲಿರುವ ಅರಣ್ಯ ತರಬೇತಿ ಕೇಂದ್ರದ ಉಪ ವಲಯ ಅರಣ್ಯಾಧಿಕಾರಿ ಐಶ್ವರ್ಯ ಆರ್.ಗೌಡರ್ ಅವರು ಮುಖ್ಯಮಂತ್ರಿ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರು ಇಲಾಖೆಯಲ್ಲಿ ಮಾಡಿರುವ ಸಕ್ರಿಯ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 120 ಉಪ ವಲಯ ಅರಣ್ಯಾಧಿಕಾರಿ ಹಾಗೂ 45 ಅರಣ್ಯ ವೀಕ್ಷಕರಿಗೆ ವೃತ್ತಿ ಬುನಾದಿ ತರಬೇತಿಯಲ್ಲಿ- ವನ್ಯಜೀವಿ ನಿರ್ವಹಣೆ, ಸಸ್ಯಶಾಸ್ತ್ರ, ಮಣ್ಣು ಶಾಸ್ತ್ರ, ಲೆಕ್ಕ ಪತ್ರ ನಿರ್ವಹಣೆ ಮೊದಲಾದ ವಿಷಯಗಳ ಕುರಿತು ಬೋಧನೆ ಮಾಡಿರುವುದು. 100ಕ್ಕೂ ಹೆಚ್ಚು ಬಗೆಯ ಸಸ್ಯ ಪ್ರಬೇಧ ಗುರುತಿಸುವ ಜ್ಞಾನ ಹೊಂದಿರುವುದು, ಪಕ್ಷಿ ಹಾಗೂ ಜೀವಿ ಸಂಕುಲದ ಬಗ್ಗೆ ಹೊಂದಿರುವ ಜ್ಞಾನವನ್ನು ಇಲಾಖೆ ಗುರುತಿಸಿ ಗೌರವಿಸುತ್ತಿದೆ. ಮಾನವ ವನ್ಯ ಜೀವಿ ಸಂಘರ್ಷ, ಜೇನುಕೃಷಿ, ವನ್ಯಜೀವಿ ಕಾನೂನು, ಇಕ್ಟ್ ವಿಷಯದ ಬಗ್ಗೆ ತರಬೇತಿ, ಚಿಣ್ಣರ ವನ ದರ್ಶನ ಕಾರ್ಯಕ್ರಮ ಪೊನ್ನಂಪೇಟೆ ವಲಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಾಲಾ ಕಾಲೇಜುಗಳ ಮಕ್ಕಳಿಗೆ ಮಾಡಿರುವ ಬೋಧನೆಯ ಸುಧೀರ್ಘ ಸೇವೆಗೆ ಐಶ್ವರ್ಯ ಗೌಡರ್ ಅವರಿಗೆ…
ಮಡಿಕೇರಿ ಜು.15 NEWS DESK : ಭಾಗಮಂಡಲದಲ್ಲಿ ನೂತನ ಸಮುದಾಯ ಭನವ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಭಾಗಮಂಡಲ ನಾಡಗೌಡ ಸಮಾಜದ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಸಮಾಜದ ಪ್ರಮುಖರು, ಭಾಗಮಂಡಲ ಗ್ರಾಮದಲ್ಲಿ 1983 ರಲ್ಲಿ ನಿರ್ಮಿಸಿರುವ ಗೌಡ ಸಮುದಾಯ ಭವನದಲ್ಲಿ ಮೂಲ ಸೌಲಭ್ಯಗಳ ಕೊರತೆ ಇದ್ದು, ಭಾಗಮಂಡಲ ಭಾಗದಲ್ಲಿ ಏಕೈಕ ಸಮುದಾಯ ಭವನ ಇದಾಗಿದೆ. ಗೌಡ ಸಮಾಜ ಮತ್ತು ಎಲ್ಲಾ ಜಾತಿ-ಧರ್ಮದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೂತನವಾಗಿ ಸಮುದಾಯ ಭವನ ನಿರ್ಮಿಸಲು ಅನುದಾನ ಮಂಜೂರು ಮಾಡಲು ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಅನುದಾನ ಮಂಜೂರು ಮಾಡುವ ಬಗ್ಗೆ ಭರವಸೆ ನೀಡಿದರು. ನಿಯೋಗದಲ್ಲಿ ಭಾಗಮಂಡಲ ನಾಡಗೌಡ ಸಮಾಜದ ಅಧ್ಯಕ್ಷ ಕುದ್ಪಾಜೆ ಪಿ.ಪಳಂಗಪ್ಪ, ಗೌಡ ಸಮಾಜದ ಪ್ರಮುಖರಾದ ಹೊಸೂರು ಸತೀಶ್ ಜೋಯಪ್ಪ, ಪ್ರಕಾಶ್ ಕುದ್ಪಾಜೆ, ದೇವಂಗೋಡಿ ಹರ್ಷ, ಕುಯ್ಯಮುಡಿ ರಂಜು ನಿಡ್ಯಮಲೆ ರವಿ, ಕುದ್ಪಾಜೆ ಗಗನ್, ನಿಡ್ಯಮಲೆ…
ಕುಶಾಲನಗರ, ಜು.15 NEWS DESK : ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜತೆಗೆ ಆಂಗ್ಲ ಭಾಷೆಯ ಕೌಶಲ್ಯ ಬೆಳೆಸಲು ಆಂಗ್ಲ ಮಾಧ್ಯಮ ಶಿಕ್ಷಣ ಸಹಕಾರಿಯಾಗಲಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಪೋಷಕರು ಮತ್ತು ಗ್ರಾಮಸ್ಥರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಕರಿಸಬೇಕು ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ( ಅಭಿವೃದ್ಧಿ) ಸಿ.ರಂಗಧಾಮಪ್ಪ ಸೋಮವಾರ ಮನವಿ ಮಾಡಿದರು. ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು (ಕೂಡ್ಲೂರು ) ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಿಂದ ಎಸ್.ಡಿ.ಎಂ.ಸಿ.ಸಹಭಾಗಿತ್ವದಲ್ಲಿ ನೂತನವಾಗಿ ಸೋಮವಾರ ಆರಂಭಿಸಲಾದ ಆಂಗ್ಲ ಮಾಧ್ಯಮ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸುವ ಕಾರ್ಯಕ್ರಮಗಳ ಭಾಗವಾಗಿ ರಾಜ್ಯ ಸರ್ಕಾರವು ಇದೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಬೋಧಿಸುತ್ತಿರುವ ಕನ್ನಡ ಮಾಧ್ಯಮದ ಜತೆಗೆ ಆಂಗ್ಲ ಮಾಧ್ಯಮ (ದ್ವಿ ಭಾಷಾ ಮಾಧ್ಯಮ) ತರಗತಿ ಆರಂಭಿಸಲಾಗುತ್ತಿದೆ. ಜಿಲ್ಲೆಯಲ್ಲಿ…






