ಲೇಖಕ: admin

ಮಡಿಕೇರಿ ಜೂ.19 NEWS DESK : ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಸಲಹೆ ನೀಡಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಬಡವರಿಗಾಗಿ ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ ಯೋಜನೆಯು ಅರ್ಹ ಫಲಾನುಭವಿಗಳಿಗೆ ಕಡ್ಡಾಯವಾಗಿ ತಲುಪಬೇಕು. ಯಾವುದೇ ಕಾರಣಕ್ಕೂ ಬಡವರಿಗೆ ಅನ್ಯಾಯ ಆಗಬಾರದು ಎಂದು ಧರ್ಮಜ ಉತ್ತಪ್ಪ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಅನ್ನಭಾಗ್ಯ ಅಕ್ಕಿಯು ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಬಗ್ಗೆ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಲಾಗಿದ್ದು, ಕೆಲವು ಮಾಲೀಕರು ತಮ್ಮ ಕಾರ್ಮಿಕರ ಪಡಿತರ ಚೀಟಿಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದು, ಅದನ್ನು ಕೂಡಲೇ ಪಡಿತರ ಚೀಟಿದಾರರ ಕುಟುಂಬಕ್ಕೆ ಹಿಂತಿರುಗಿಸಬೇಕು. ಅಲ್ಲದೇ ಪಡಿತರಚೀಟಿ ಹೊಂದಿರುವವರೂ ಸಹ ಹಣದಾಸೆಗೆ ತಮಗೆ ದೊರೆಯುವ ಪಡಿತರವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಕೇಳಿಬರುತ್ತಿದೆ.…

Read More

ಹಾಸನ ಜೂ.19 NEWS DESK : ಹಾಸನದ ನೂತನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಂತರ ಮಾತನಾಡಿದ ಅವರು, ನಮ್ಮ ತಂದೆ ತಾಯಿ ಅವರ ಉಪಸ್ಥಿತಿಯಲ್ಲಿ ಉನ್ನತ ಹುದ್ದೆಯ ಅಧಿಕಾರ ಸ್ವೀಕರಿಸಿರುವುದು ತುಂಬ ಸಂತೋಷ ತಂದಿದೆ ಎಂದರು. ತಂದೆ ಅವರಿಂದ ಪೆನ್ನು ಪಡೆದು ಸಿ.ಟಿ.ಸಿ.ಗೆ ಸಹಿ ಮಾಡಿದರು. ಮಗಳು ಉನ್ನತ ಹುದ್ದೆಗೇರುವುದು ನಮ್ಮ ತಂದೆ ಅವರ ಕನಸ್ಸಾಗಿತ್ತು ಎಂದು ತಿಳಿಸಿದರು. ಇದಕ್ಕೂ ಮುನ್ನ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿದ ಅವರು ಶ್ರೀ ಸಿದ್ದೇಶ್ವರ ಸ್ವಾಮಿ ದೇವರ ದರ್ಶನ ಪಡೆದರು. ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ನೂತನ ಜಿಲ್ಲಾಧಿಕಾರಿ ಅವರನ್ನು ಸ್ವಾಗತಿಸಿದರು.

Read More

ಮಡಿಕೇರಿ ಜೂ.19 NEWS DESK : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ಹಾಗೂ ಸಂಸತ್ ನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಮಡಿಕೇರಿಯ ಜಿಲ್ಲಾಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿ.ಜಿ.ಮೋಹನ್ ಅವರ ನೇತೃತ್ವದಲ್ಲಿ ರೋಗಿಗಳನ್ನು ಭೇಟಿಯಾದ ಪಕ್ಷದ ಪ್ರಮುಖರು ಆರೋಗ್ಯ ವಿಚಾರಿಸಿದರು. ನಂತರ ಹಣ್ಣು ಹಂಪಲನ್ನು ನೀಡಿ ಧೈರ್ಯ ತುಂಬಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಡಿಸಿಸಿ ಸದಸ್ಯರಾದ ಪುಷ್ಪಾ ಪೂಣಚ್ಚ, ಖಲೀಲ್ ಬಾಷ, ಹಬೀಬ್, ಅರ್ಜುನ್, ಸೂರ್ಯ, ಕಿರಣ್, ಮೊಹಮ್ಮದ್ ಕೌಸರ್, ಕವನ್, ದಿನೇಶ್, ಹಜೀಜ್, ಜಾನ್ಸನ್ ಪಿಂಟೋ, ಮೋಹನ್ ಮೌರ್ಯ, ಸುಬ್ರಮಣಿ ಮತ್ತಿತರ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Read More

ಮಡಿಕೇರಿ ಜೂ.19 NEWS DESK : ಮಡಿಕೇರಿ ಲಯನ್ಸ್ ಸಂಸ್ಥೆಯ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಮದನ್ ಮಾದಯ್ಯ ಅಧಿಕಾರ ಸ್ವೀಕರಿಸಿದರು. ಮಂಗಳೂರು ರಸ್ತೆಯಲ್ಲಿರುವ ಆಕ್ಸಿರಿಚ್ ಹೊಟೇಲ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಲಯನ್ಸ್ ಜಿಲ್ಲಾ ಗವರ್ನರ್ ಡಾ.ಗೀತಾಪ್ರಕಾಶ್ ಪದಗ್ರಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಲಯನ್ಸ್ ಕ್ಲಬ್ ನಿರಂತರ ಸೇವಾ ಚಟುವಟಿಕೆಯನ್ನು ನಡೆಸಿಕೊಂಡು ಬರುತ್ತಿದ್ದು, ಎಲ್ಲಾ ಸದಸ್ಯರ ಸಹಕಾರದಿಂದ ಲಯನ್ಸ್ ಕ್ಲಬ್ ಮುನ್ನಡೆಯುತ್ತಿದೆ ಎಂದರು. ಅಧ್ಯಕ್ಷರಾದವರು ಕೆಲಸ ಮಾಡಿಸುವಂತಿರಬೇಕು, ಯುವಕರಿಗೆ ಧೈರ್ಯ ಮತ್ತು ಪ್ರೋತ್ಸಾಹ ನೀಡುವ ಕೆಲಸ ಆಗಬೇಕು, ಸಂಸ್ಥೆಯ ಅಭಿವೃದ್ಧಿ ದೃಷ್ಟಿಯಿಂದ ನಾಯಕತ್ವ, ಮಾರ್ಗದರ್ಶನ ಹಾಗೂ ಸೇವೆಯ ಗುಣಗಳನ್ನು ಹೊಂದಿರಬೇಕು ಎಂದು ಹೇಳಿದರು. ನೂತನ ಅಧ್ಯಕ್ಷ ಮದನ್ ಮಾದಯ್ಯ ಮಾತನಾಡಿ, ಲಯನ್ಸ್ ಸಂಸ್ಥೆ ವಿಶ್ವದಾದ್ಯಂತ ಹಲವು ಕಡೆ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಲಯನ್ಸ್ ನ ಮುಖ್ಯ ಗುರಿ ಸೇವೆ ಮತ್ತು ಸಾಂಗತ್ಯವಾಗಿದೆ. ಬಡವರ ಹಾಗೂ ಸಾರ್ವಜನಿಕರ ಜನಪರ ಸೇವೆಯನ್ನು ಮಾಡಿಕೊಂಡು ಬಂದಿದೆ ಎಂದರು. ಸಮಾಜದಲ್ಲಿನ ಪ್ರತಿಯೊಬ್ಬರಿಗೂ…

Read More

ಮಡಿಕೇರಿ ಜೂ.19 NEWS DESK : ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕೊಯವ ಸಮಾಜದ ನಿಯೋಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ಶಾಸಕರನ್ನು ಭೇಟಿಯಾದ ಪ್ರಮುಖರು  ಸಮಾಜದ ಹಲವು ಅಭಿವೃದ್ಧಿ ಕಾರ್ಯಗಳಿಗೆ ಮನವಿ ಸಲ್ಲಿಸಿದರು. ಹಿಂದುಳಿದ ವರ್ಗಗಳ ಕೊಡಗು ಜಿಲ್ಲಾಧ್ಯಕ್ಷ ಬಾನಂಡ ಪೃತ್ಯು, ಕೋಯವ ಸಮಾಜದ ಅಧ್ಯಕ್ಷ ಜೆ.ಸಿ.ಮಾದಪ್ಪ, ಕಾರ್ಯದರ್ಶಿ ಟಿ.ಜಿ ಕಾರ್ಯಪ್ಪ, ನಿರ್ದೇಶಕರುಗಳಾದ ಎಂ.ಜಿ ಮಹೇಶ್, ಎಂ.ಪೂಣಚ್ಚ ಕೆ.ಎನ್.ಸುಬ್ಬಯ್ಯ ಮೊದಲಾದವರು ಉಪಸ್ಥಿತರಿದ್ದರು.  ಮನವಿಯನ್ನು ಸ್ವೀಕರಿಸಿದ ಶಾಸಕರು, ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯಕ್ಕನುಸಾರ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು.

Read More

ಕುಶಾಲನಗರ ಜೂ.19 NEWS DESK : ಸೈನಿಕ ಶಾಲೆಗಳ ಅಂತರ ವಲಯದ ರಾಷ್ಟ್ರೀಯ ಮಟ್ಟದ ಸುಬ್ರತೋ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಇದೇ ಮೊದಲ ಬಾರಿಗೆ ರನ್ನರ್ ಅಪ್ ಪ್ರಶಸ್ತಿಗೆ ಕೊಡಗು ಸೈನಿಕ ಶಾಲಾ ತಂಡ ಪಾತ್ರವಾದ ಹಿನ್ನೆಲೆ ಆಡಗಾರರೊಂದಿಗೆ ಕೂಡಿಗೆಯಲ್ಲಿ ಭವ್ಯ ವಿಜಯೋತ್ಸವ ಮೆರವಣಿಗೆ ನಡೆಯಿತು. ಜೂ.9 ರಿಂದ 15ರವರೆಗೆ ಒರಿಸ್ಸಾ ರಾಜ್ಯದ ಭುವನೇಶ್ವರದ ಸೈನಿಕ್ ಶಾಲೆಯಲ್ಲಿ ಆಯೋಜಿತ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಸೈನಿಕ ಶಾಲೆಯ ಜೂನಿಯರ್ ತಂಡ ಈ ಸಾಧನೆ ಮಾಡಿತ್ತು. ಇದರ ಪ್ರಯುಕ್ತ ಕೂಡಿಗೆ ಸೈನಿಕ ಶಾಲೆಯ ಜೂನಿಯರ್ ಫುಟ್ಬಾಲ್ ತಂಡದ ಆಟಗಾರರು ವಿಜಯಪತಾಕೆಯೊಂದಿಗೆ ವಿಜಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿದ್ದು ವಿಶೇಷ. ಫುಟ್ಬಾಲ್ ಪಂದ್ಯಾವಳಿಯಲ್ಲಿ ಶಾಲೆಯ ಜೂನಿಯರ್ ಪುಟ್ಬಾಲ್ ತಂಡವು, ನಾಯಕ ಕೆಡೆಟ್ ಯಶ್ ಪ್ರತಾಪ್ ನೇತೃತ್ವದಲ್ಲಿ ಕ್ರೀಡಾಕೂಟದ ಕೊನೆಯವರೆಗೂ ಉತ್ತಮ ಪ್ರದರ್ಶನ ನೀಡಿದರೆ, ತಂಡದ ಗೋಲ್ ಕೀಪರ್ ಕೆಡೆಟ್ ಆರ್ಯನ್ ಅತ್ಯುತ್ತಮ ಗೋಲ್ ಕೀಪರ್ ಪ್ರಶಸ್ತಿಗೆ ಭಾಜನರಾದರು. ಇದು ಕೂಡಿಗೆ ಸೈನಿಕ ಶಾಲೆಯ ಇತಿಹಾಸದಲ್ಲೆ ರಾಷ್ಟ್ರಮಟ್ಟದ ವೇದಿಕೆಯಲ್ಲಿ ಮೂಡಿ…

Read More

ಮೈಸೂರು ಜೂ.19 NEWS DESK : ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಬಹು ಗ್ರಾಮ ಸ್ಕೀಮ್‌ (ಎಂವಿಎಸ್‌)ಗಳನ್ನು ತ್ವರಿತವಾಗಿ ಅನುಮೋದನೆ ಮಾಡಬೇಕು ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌ ಪಾಟೀಲ್‌ ಅವರಿಗೆ ಮನವಿ ಮಾಡಲಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದ ನಂತರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಲು ಎಂವಿಎಸ್‌ಗೆ ತ್ವರಿತ ಅನುಮೋದನೆ ನೀಡಬೇಕಾಗಿದೆ ಎಂದು ಮಡಿಕೇರಿ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ಒಳಚರಂಡಿ ವಿಭಾಗದ ಅಧಿಕಾರಿಗಳು ನನಗೆ ಮಾಹಿತಿ ನೀಡಿದ್ದರು ಎಂದು ಸಂಸದರು ವಿವರಿಸಿದ್ದಾರೆ. ಈ ಸಂಬಂಧ ಕೊಡಗು ಜಿಲ್ಲೆಯವರ ನೀರಿನ ಸಮಸ್ಯೆ ನೀಗಿಸಲು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ. ಅತಿ ಶೀಘ್ರದಲ್ಲೇ ಇದಕ್ಕೆ ಅನುಮೋದನೆ ನೀಡುವ ಭರವಸೆ ನೀಡಿದ್ದಾರೆ. ಮನವಿ ಸ್ವೀಕರಿಸಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಮಾತನಾಡಿ, ಸಮಸ್ಯೆ…

Read More

ಮಡಿಕೇರಿ ಜೂ.19 NEWS DESK : ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಮರುನೇಮಕಗೊಂಡ ನಾಪಂಡ ರವಿ ಕಾಳಪ್ಪ ಇಂದು ರಾಜ್ಯ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ ಬಿ.ವೈ.ವಿಜಯೇಂದ್ರ ಅವರಿಂದ ಆದೇಶ ಪ್ರತಿ ಸ್ವೀಕರಿಸಿದರು. ರಾಜ್ಯ ಚುನಾವಣಾ ಅಧಿಕಾರಿ ಕ್ಯಾ. ಗಣೇಶ ಕಾರ್ಣಿಕ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ.ರಾಜೀವ, ನಂದೀಶ್ ರೆಡ್ಡಿ, ಪ್ರೀತಮ್ ಗೌಡ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ರಾಜ್ಯದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಜೂ.19 NEWS DESK : ಕೊಡಗಿನ ಕವಿ, ಬರಹಗಾರ, ಕೊಡಗು ಜಿಲ್ಲಾ ದಸಾಪ ಅಧ್ಯಕ್ಷ ಅರ್ಜುನ್ ಮೌರ್ಯ ಗೆ 2025ರ ರಾಷ್ಟ್ರಮಟ್ಟದ “ಇಂಡಿಯನ್ ಐಕಾನಿಕ್ ಆಥರ್ -2025” ಅವಾಡ್೯ ಲಭಿಸಿದೆ. ಅರ್ಜುನ್ ಮೌರ್ಯ ಅವರ ಸಾಹಿತ್ಯ ಸೇವೆ ಗುರುತಿಸಿ “ಪ್ರೈಡ್ ಇಂಡಿಯಾ ಅವಾಡ್೯” ಸಂಸ್ಥೆಯ ವತಿಯಿಂದ ಹೈದರಾಬಾದ್ ನ ‘ದಿ ಪಾಕ್೯’ ಹೊಟೇಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಾಲಿವುಡ್ ತಾರೆ ಕಾವ್ಯ ತಾಪರ್ ಹಾಗೂ ಪ್ರೈಡ್ ಇಂಡಿಯಾ ಅವಾಡ್೯ ಸಂಸ್ಥೆಯ ಸಿಇಓ ವಿನಯ್ ಕುಮಾರ್  ಪ್ರಶಸ್ತಿ ನೀಡಿ ಗೌರವಿಸಿದರು. ಇತ್ತೀಚೆಗಷ್ಟೇ ಅರ್ಜುನ್ ಮೌರ್ಯ ಅವರ “ಬೆಂದೊಡಲ ಕುಣಿತ” ಕಾವ್ಯ ಸಂಕಲನವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮುಕುಂದರಾಜ್ ಕೊಡಗು ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಬಿಡುಗಡೆ ಮಾಡಿದ್ದರು. ಅರ್ಜುನ್ ಮೌರ್ಯ ಅವರು ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ವಿರಾಜಪೇಟೆ ಸೈಂಟ್ ಆನ್ಸ್ ಪದವಿ ಕಾಲೇಜಿನ ಕನ್ನಡ ಭಾಷಾ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Read More

ಮಡಿಕೇರಿ ಜೂ.19 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ ದಿನಾಚರಣೆಯು ನಗರದ ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ತಿಪ್ಪಣ್ಣ ಸಿರಸಗಿ ಹಿರಿಯ ನಾಗರಿಕರಿಗೆ ಆಗುವ ದೌರ್ಜನ್ಯಗಳನ್ನು ತಡೆಯಲು ಸರ್ಕಾರವು ಶ್ರಮಿಸುತ್ತಿದೆ. ಹಿರಿಯ ನಾಗರೀಕರು ಇಲಾಖೆಗಳ ಪ್ರಯೋಜನ ಪಡೆದುಕೊಳ್ಳುವಂತೆ ಕಿವಿಮಾತು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಹಿರಿಯ ನಾಗರಿಕರ ದೌರ್ಜನ್ಯಕ್ಕೆ ಸಂಬಂಧಪಟ್ಟಂತೆ ಕಾನೂನಿನ ನೆರವು ನೀಡಲು ಕಾನೂನು ಸೇವೆಗಳ ಪ್ರಾಧಿಕಾರದ ಅವಕಾಶ ಬಳಸಿಕೊಳ್ಳುವಂತೆ ಕೋರಿದರು. ಹಿರಿಯ ನಾಗರಿಕರಿಗೆ…

Read More