ಲೇಖಕ: admin

ಮಡಿಕೇರಿ ಜೂ.19 NEWS DESK : ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಯುವಲ್ಲಿ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಿಷನ್ ವಾತ್ಸಲ್ಯ ಯೋಜನೆ ಅನುಷ್ಠಾನ ಸಂಬಂಧ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ್ಯ ವಿವಾಹ ತಡೆಯುವಲ್ಲಿ ಜಿಲ್ಲೆಯ ಹಾಡಿಗಳು, ಲೈನ್‍ಮನೆಗಳು ಸೇರಿದಂತೆ ಗ್ರಾಮ ಮಟ್ಟದಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಕಾಯ್ದೆ ಕಾನೂನುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಆಯೋಜಿಸುವಂತೆ ಸೂಚಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ತಿಪ್ಪಣ್ಣ ಸಿರಸಗಿ ಅವರು ಮಾಹಿತಿ ನೀಡಿ ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬಾಲ್ಯ ವಿವಾಹ ಸಂಬಂಧಿಸಿದಂತೆ 3 ಪ್ರಕರಣ ದಾಖಲಾಗಿದ್ದು, ಈಗಾಗಲೇ ಎರಡು ಬಾಲ್ಯ ವಿವಾಹ ಪ್ರಕರಣ ತಡೆಯಲಾಗಿದೆ. ಉಳಿದಂತೆ ಒಂದು ಪ್ರಕರಣ ಎಫ್‍ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿಯನ್ನು ಹೋಗಲಾಡಿಸಲು ಹಲವು…

Read More

ನಾಪೋಕ್ಲು ಜೂ.19 NEWS DESK : ಕಾಡಾನೆಯೊಂದು ಮನೆಯ ಅಂಗಳದಲ್ಲಿ ದಾಂಧಲೆ ನಡೆಸಿ, ಹೂ ಕುಂಡಗಳನ್ನು ಹಾನಿಗೊಳಿಸಿದ ಘಟನೆ ಕಕ್ಕಬ್ಬೆ ಗ್ರಾ.ಪಂ ವ್ಯಾಪ್ತಿಯ ಮರಂದೋಡ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಮುಕ್ತರ್ ಅಹಮದ್ ಎಂಬವರ ತೋಟದಲ್ಲಿ ಕಾಫಿ, ಬಾಲೆ, ಫಸಲು ಬರಿತ ತೆಂಗಿನ ಮರವನ್ನು ನಾಶ ಪಡಿಸಿದಲ್ಲದೇ, ಮನೆಯ ಮುಂದಿದ್ದ ಗಿಡಗಳಿಗೆ ಹಾನಿ ಮಾಡಿ ನಷ್ಟ ಉಂಟುಮಾಡಿದೆ. ಇದರಿಂದಾಗಿ ವಿದ್ಯುತ್ ತಂತಿಗಳು ತುಂಡಾಗಿ ವಿದ್ಯುತ್ ಸ್ಥಗಿತಗೊಂಡಿದೆ. ಮನೆಯಂಗಳಕ್ಕೆ ಬಂದಿರುವ ಕಾಡಾನೆಯ ಚಲನವಲನಗಳು ಸಿ ಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾದೆ. ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ವಿರಾಜಪೇಟೆ ಜೂ.19 NEWS DESK : ವಿರಾಜಪೇಟೆ ಕೊಡವ ಸಮಾಜ ಹಾಗೂ ಗೋಣಿಕೊಪ್ಪ ಲೋಪಾಮುದ್ರಾ ದೃಷ್ಟಿ ಕಣ್ಣಿನ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಜೂ.23 ರಂದು ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 4.30 ಗಂಟೆ ತನಕ ವಿರಾಜಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ಶಿಬಿರ ನಡೆಯಲಿದೆ. ಸಾರ್ವಜನಿಕರು ಶಿಬಿರದ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಶಿಬಿರದ ಆಯೋಜಕರು ವಿನಂತಿಸಿಕೊಂಡಿದ್ದಾರೆ. ಹೆಚ್ಚಿನ ವಿವರಕ್ಕೆ ವಿರಾಜಪೇಟೆ ಕೊಡವ ಸಮಾಜ ವ್ಯವಸ್ಥಾಪಕ ತಾತಂಡ ದಿಲೀಪ್-9740620915, ಆಡಳಿತಾಧಿಕಾರಿ ಹರ್ಷಿತ್ ಕರುಂಬಯ್ಯ, ಲೋಪಾಮುದ್ರಾ ದೃಷ್ಟಿ ಕಣ್ಣಿನ ಆಸ್ಪತ್ರೆ ಗೋಣಿಕೊಪ್ಪ-9481920056 ಇವರನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Read More

ಮಡಿಕೇರಿ ಜೂ.19 NEWS DESK : ನಗರಸಭೆಯ ದ್ವಿತೀಯ ದರ್ಜೆ ಸಹಾಯಕ ಹಾಗೂ ಮೀನು, ಮಾಂಸ ಮಾರುಕಟ್ಟೆಯ ಉಸ್ತುವಾರಿ ಸಿಬ್ಬಂದಿ ಬಶೀರ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ತನಿಖೆ ನಡೆಸಲು ನಗರಸಭೆಯ ಸಾಮಾನ್ಯ ಸಭೆ ನಿರ್ಧಾರ ಕೈಗೊಂಡಿದೆ. ನಗರ ಸಭೆ ಅಧ್ಯಕ್ಷೆ ಕಲಾವತಿ ಅಧ್ಯಕ್ಷತೆಯಲ್ಲಿ ನೂತನ ಆಡಳಿತ ಮಂಡಳಿಯ ಮೊದಲ ಸಾಮಾನ್ಯ ಸಭೆ ಬುಧವಾರ ನಡೆಯಿತು. ಸಭೆಯ ಪ್ರಾರಂಭದಲ್ಲೇ ವಿಚಾರ ಪ್ರಸ್ತಾಪಿಸಿದ ಸದಸ್ಯ ಮನ್ಸೂರ್, ನಗರದ ಮಾರುಕಟ್ಟೆ ಆವರಣದಲ್ಲಿ ನಗರ ಸಭೆ ವತಿಯಿಂದ ಕೇವಲ ಒಂದು ಕುರಿ ಮಾಂಸ ಮಳಿಗೆಯನ್ನು ಟೆಂಡರ್ ಕರೆಯಲಾಗಿದೆ. ಆ ಮಳಿಗೆಯ ಪಕ್ಕದಲ್ಲೇ ಮತ್ತೊಂದು ಕುರಿ ಮಾಂಸ ಮಳಿಗೆ ಇದ್ದು, ಅದನ್ನು ಕೂಡ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆ ಮೂಲಕ ಮತ್ತೊಂದು ಮಳಿಗೆಯ ಹಣವನ್ನು ತಿನ್ನುತ್ತಿರುವವರು ಯಾರು..? ಹೀಗೆ ಹಲವು ವರ್ಷಗಳಿಂದ ನಗರ ಸಭೆಗೆ ವಂಚಿಸಲಾಗುತ್ತಿದೆ. ಈ ಬಗ್ಗೆ ನಗರ ಸಭೆ ಸೂಕ್ತ ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು. ಇದಕ್ಕೆ ಇತರ ಸದಸ್ಯರು ಕೂಡ ಪಕ್ಷಾತೀತವಾಗಿ ಧ್ವನಿಗೂಡಿಸಿ ಸೂಕ್ತ…

Read More

ಸೋಮವಾರಪೇಟೆ ಜೂ.19 NEWS DESK : ಕಾಡಾನೆ ಮತ್ತು ಕಾಡು ಪ್ರಾಣಿಗಳಿಂದ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ಯಡವಾರೆ, ಕಾಜೂರು ಮತ್ತು ಐಗೂರು ಗ್ರಾಮ ಅರಣ್ಯ ಸಂರಕ್ಷಣಾ ಸಮಿತಿ ಸದಸ್ಯರು ಕೊಡಗು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಭಾಗಗಳಲ್ಲಿ ಕಾಡಾನೆ ಸೇರಿದಂತೆ ಕಾಡು ಪ್ರಾಣಿಗಳ ನಿರಂತರ ಹಾವಳಿಯಿಂದ ಸಾಕಷ್ಟು ಸಮಸ್ಯೆಯಾಗಿದೆ. ವಿಷಯಕ್ಕೆ ಸಂಬಂಧಿಸಿದಂತೆ ಮೂರು ತಿಂಗಳ ಹಿಂದೆ ಗ್ರಾಮಸ್ಥರು ನಡೆಸಿದ ಸಭೆಗೆ ವಲಯ ಅರಣ್ಯಾಧಿಕಾರಿಗಳು ಆಗಮಿಸಿ ರೈತರ ಅಹವಾಲುಗಳನ್ನು ಆಲಿಸಿ ಮುಂದಿನ ಒಂದು ತಿಂಗಳ ಒಳಗೆ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನಿಡಿದ್ದರು. ಆದರೆ, ಇಲ್ಲಿಯವರೆಗೂ ಯಾವುದೇ ಪರಿಹಾರವಾಗಿಲ್ಲ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿ ಸರಿಯಾಗಿ ನಡೆದಿರುವುದಿಲ್ಲ. ಇಲ್ಲಿ ಅಳವಡಿಸಿರುವ ಸೋಲಾರ್ ತಂತಿ ಬೇಲಿ ಪ್ರಯೋಜನಕ್ಕೆ ಇಲ್ಲದಂತಾಗಿದೆ. ಇಲ್ಲಿ ಹಾವಳಿ ನಡೆಸುತ್ತಿರುವ ಪುಂಡಾನೆಗಳನ್ನು ಸೆರೆ ಹಿಡಿದು ಬೇರೆಡೆಗೆ ಸಾಗಿಸಲು ಮನವಿ ಮಾಡಲಾಗಿತ್ತು. ಯಡವನಾಡು ಮತ್ತು ಯಡವಾರೆ ಗ್ರಾಮಗಳ ರಸ್ತೆಯ ಎರಡೂ ಬದಿಯಲ್ಲಿ ಬೆಳೆದಿರುವ…

Read More

ಮಡಿಕೇರಿ NEWS DESK ಜೂ.18 : ಕೊಡಗು ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಸುರಿಯುತ್ತಿದ್ದ ಧಾರಾಕಾರ ಮಳೆ ಇಂದು ಇಳಿಮುಖಗೊಂಡಿತು. ಮಡಿಕೇರಿ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದ್ದು, ಉಳಿದೆಡೆ ಕಡಿಮೆ ಪ್ರಮಾಣದ ಮಳೆ ಸುರಿದಿದೆ. ತಲಕಾವೇರಿ ಹಾಗೂ ಭಾಗಮಂಡಲ ಭಾಗದಲ್ಲಿ ಮಳೆಯ ವೇಗ ಕಡಿಮೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 4 ಇಂಚು ಮಳೆಯಾಗಿದೆ. ಮಡಿಕೇರಿಯಲ್ಲಿ ಚಳಿಗಾಳಿ ಮುಂದುವರಿದಿದ್ದು, ಮಂಜು ಮುಸುಕಿದ ವಾತಾವರಣವಿದೆ. *ಡಿಸಿಎಂ ಗೆ ಹಾರಂಗಿ ಮಾಹಿತಿ* ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ವಿಡಿಯೋ ಕರೆ ಮೂಲಕ ಹಾರಂಗಿ ಸ್ಥಿತಿಗತಿಯನ್ನು ವಿವರಿಸಿದರು. ಸೇತುವೆ ನಿರ್ಮಾಣದ ಬಗ್ಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲು ಮನವಿ ಮಾಡಿದರು. ಹಾರಂಗಿ ಜಲಾಶಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗಿ ಜಲಾಶಯದಲ್ಲಿ ಒಳ ಹರಿವಿನ ಪ್ರಮಾಣ ಏರಿಕೆಯಾದ ಹಿನ್ನೆಲೆಯಲ್ಲಿ ಹೆಚ್ಚಿನ ನೀರನ್ನು ನದಿಗೆ ಹರಿಯ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರು ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ…

Read More

ಮಡಿಕೇರಿ ಜೂ.18 NEWS DESK : ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆಯನ್ನು ಪಡೆಯುವುದು ಕೊಡವರ ಸಾಂವಿಧಾನಿಕ ಹಕ್ಕಾಗಿದ್ದು, ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಹೋರಾಟಕ್ಕೆ ಎಲ್ಲರು ಕೈಜೋಡಿಸಬೇಕೆಂದು ಖ್ಯಾತ ಸುಪ್ರೀಂಕೋರ್ಟ್ ವಕೀಲ ವಿಕ್ರಮ್ ಹೆಗ್ಡೆ ಕರೆ ನೀಡಿದ್ದಾರೆ. ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಮಡಿಕೇರಿಯ ಹೊರವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ಕೊಡವರ ಹಕ್ಕುಗಳ ಕುರಿತು ವಿಚಾರ ಮಂಡಿಸಿದರು. 1834ರಲ್ಲಿ ಕೊಡಗು ಎಂಬ ಸ್ವತಂತ್ರ ರಾಜ್ಯವನ್ನು ಬ್ರಿಟಿಷರು ವಶಪಡಿಸಿಕೊಂಡು, 1874ರ ಶೆಡ್ಯೂಲ್ಡ್ ಡಿಸ್ಟ್ರಿಕ್ಟ್ಸ್ ಕಾಯ್ದೆಯಡಿ ತರಲಾಯಿತು. ಬಳಿಕ 1919ರ ಭಾರತ ಸರ್ಕಾರ ಕಾಯ್ದೆಯಡಿಯಲ್ಲಿ ಕೊಡಗನ್ನು ಚೀಫ್ ಕಮಿಷನರ್ ಪ್ರಾಂತ್ಯವನ್ನಾಗಿ ಮಾಡಲಾಯಿತು. 1923ರಲ್ಲಿ ಕೊಡಗು ತನ್ನದೇ ಆದ ಶಾಸನ ಮಂಡಳಿಯನ್ನು ಪಡೆಯಿತು. ಆದರೆ 1956ರಲ್ಲಿ ರಾಜ್ಯ ಪುನರ್ ರಚನೆಯ ಕಾಯ್ದೆಯಡಿ ಕೊಡಗನ್ನು ಮೈಸೂರಿನೊಂದಿಗೆ ವಿಲೀನಗೊಳಿಸಿದ ನಂತರ ಕೊಡವ ಸಮುದಾಯದ ಅನನ್ಯ ಬೇಡಿಕೆಗಳಿಗೆ ಅಗತ್ಯ ಸ್ಪಂದನ ದೊರೆಯಲಿಲ್ಲ ಎಂದು ವಿಕ್ರಮ್ ಹೆಗ್ಡೆ ಗಮನ…

Read More

ಸೋಮವಾರಪೇಟೆ ಮಾ.18 NEWS DESK : ಯೋಗ ಮಾಡುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವೈದ್ಯಾಧಿಕಾರಿ ಅರುಣ್ ಕುಮಾರ್ ಹೇಳಿದರು. 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪಟ್ಟಣ ಆಯುಷ್ ಇಲಾಖೆಯಲ್ಲಿ ನಡೆದ ಯೋಗದಿನಾಚರಣೆ ಹಾಗೂ ಪತ್ರಕರ್ತರಿಗೆ ಯೋಗ ತರಬೇತಿ, ಆಯುಷ್ ಪರಿಚಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಯುರ್ವೇದ ಬಗ್ಗೆ ಜನರಿಂದ ಜನರಿಗಾಗಿ ಸಂದೇಶ, ಜನರ ಸಹಭಾಗಿತ್ವ, ಜನ ಆಂದೋಲನ ಎಂಬು ಮೂರು ಉದ್ದೇಶವನ್ನು ಇಟ್ಟುಕೊಂಡು ಆಯುರ್ವೇದ ದಿನ ಆಚರಿಸಲಾಗುತ್ತಿದೆ. ಪಟ್ಟಣದ ಆಯುಷ್ ಇಲಾಖೆಯಲ್ಲಿ ಆಯುರ್ವೇದ, ಹೋಮಿಯೋಪತಿ, ಉಚಿತ ಚಿಕಿತ್ಸಾ ಸೌಲಭ್ಯವಿದ್ದು ರೋಗಿಗಳು ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಆಯುರ್ವೇದ ವೈದ್ಯೆ ಕೆ.ಎಸ್.ಶ್ವೇತ ಮಾತನಾಡಿ, ಉತ್ತಮ ಆರೋಗ್ಯಕ್ಕೆ ಆಯುರ್ವೇದ ಔಷಧಿ ಸಹಕಾರಿಯಾಗಿದ್ದು, ಭಾರತ ದೇಶಕ್ಕೆ ಆಯುರ್ವೇದದ ಮೂಲಕ ಘನತೆ ಹೆಚ್ಚಾಗಿದೆ. ಪ್ರಪಂಚದಲ್ಲಿ ಎಲ್ಲರೂ ನಮ್ಮ ದೇಶಕ್ಕೆ ಬಂದು ಆಯುರ್ವೇದ ಕುರಿತು ಅಧ್ಯಯನ ಮಾಡುತ್ತಾರೆ. ಹೋಮಿಯೋಪತಿ ವಿಭಾಗದ ವೈದ್ಯೆ ಸೌಪರ್ಣೀಕಾ ಮಾತನಾಡಿ, ಹೋಮಿಯೋಪತಿ ಒಂದು ಸಮಗ್ರ…

Read More

ಮೈಸೂರು ಜೂ.18 NEWS DESK : ಕಿತ್ತಳೆ ನಾಡು ಕೊಡಗಿನಲ್ಲಿ ಹೆಚ್ಚಾಗಿರುವ ಬಿಎಸ್‌ಎನ್‌ಎಲ್‌ ಜಾಲ ವ್ಯವಸ್ಥೆಯನ್ನು ಸರಿಪಡಿಸಬೇಕು. ಈ ನಿಟ್ಟಿನಲ್ಲಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ  ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಯದುವೀರ್‌, ಕೊಡಗಿನಲ್ಲಿ ಈಗ ಅತ್ಯಂತ ತುರ್ತಾಗಿ ಈ ಸಮಸ್ಯೆ ಪರಿಹರಿಸಬೇಕು ಎಂದು ಮಾಡಿದರು. ಈ ಸಂಬಂಧ ಯದುವೀರ್‌ ಅವರು ಪತ್ರವೊಂದನ್ನು ಸಚಿವರಿಗೆ ನೀಡಿದ ನಂತರ ಮಾಧ್ಯಮ ಹೇಳಿಕೆ ನೀಡಿದ್ದಾರೆ. ಕೊಡಗಿನಲ್ಲಿ ಇತ್ತೀಚೆಗೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದ ವಿದ್ಯುತ್‌ ಕಂಬಗಳು, ಟೆಲಿಫೋನ್‌ ಕಂಬಗಳು ನೆಲಕ್ಕುರುಳಿವೆ. ಅವುಗಳ ದುರಸ್ತಿಗೂ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕೊಡಗಿನಲ್ಲಿ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸೇವೆ ಅತ್ಯಂತ ಕಳಪೆಯಾಗಿದೆ. ಇಲ್ಲಿ ಟವರ್‌ಗಳನ್ನು ಬದಲಿಸಬೇಕು, ಉತ್ತಮ ಕನೆಕ್ಟೆವಿಟಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜವಾಗಿಲ್ಲ. ಈ ಬಗ್ಗೆಯೂ ಸಚಿವರ…

Read More

ಮಡಿಕೇರಿ ಜೂ.18 NEWS DESK : ಖಾಸಗಿ ಜಮೀನುಗಳಲ್ಲಿರುವ ಎಲ್ಲಾ ಕಾಡಾನೆಗಳನ್ನು ಸೆರೆ ಹಿಡಿದು ಅರಣ್ಯ ಆವಾಸಸ್ಥಾನಗಳಿಗೆ ಸ್ಥಳಾಂತರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಎನ್ವಿರಾನ್ಮೆಂಟ್ ಅಂಡ್ ಹೆಲ್ತ್ ಫೌಂಡೇಶನ್‍ನ ಸ್ಥಾಪಕ ಕರ್ನಲ್ ಚೆಪ್ಪುಡಿರ ಮುತ್ತಣ್ಣ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕಾಫಿ ತೋಟಗಳಲ್ಲಿ ಕಾಡಾನೆಗಳ ಹಾವಳಿ ಮೀತಿಮಿರಿದ್ದು, ಮುಂದಿನ ದಿನಗಳಲ್ಲಿ ಕಾರ್ಮಿಕರ ಕೊರತೆ ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಅರಣ್ಯ ಸಚಿವರು ಕ್ರಮ ಕೈಗೊಳ್ಳಬೇಕು ಎಂದರು. ಕಾಡಾನೆಗಳ ನಿಯಂತ್ರಣಕ್ಕೆ ಅವುಗಳಿಗೆ ಆಹಾರ ಮತ್ತು ನೀರಿನ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು. ತಂತಿ ಬೇಲಿಗಳ ರೂಪದಲ್ಲಿ ಬ್ಯಾರಿಕೇಡ್‍ಗಳ ಆವರಣಗಳನ್ನು ರಚಿಸಬೇಕು. ನೀರು ಲಭ್ಯತೆ ಇರುವ ಅರಣ್ಯ ಪ್ರದೇಶಗಳಿಗೆ ಕಾಡಾನೆಗಳನ್ನು ಬಿಡಬೇಕು, ಅರಣ್ಯ ಗಡಿಯಲ್ಲಿರುವ ಬ್ಯಾರಿಕ್ಯಾಡ್ ಗಳನ್ನು ಮೇಲ್ದರ್ಜೆಗೇರಿಸಿ ನಿರ್ವಹಣೆಗೆ ಆಯಾ ಗಾಮ ಪಂಚಾಯತ್ ಗಳ ಸಹಭಾಗಿತ್ವ ಪಡೆದುಕೊಳ್ಳಬೇಕು, ಕಾಡಾನೆಗಳ ಸುರಕ್ಷಿತ ತಾಣಗಳನ್ನು ತೆರೆಯಬೇಕು ಮತ್ತು ಆನೆ ಕಾರಿಡಾರ್ ಗಳನ್ನು ನಿರ್ಮಿಸಬೇಕು ಎಂದು ಆಗ್ರಹಿಸಿದರು. ಹುಲಿ ಸುರಕ್ಷಿತ ಪ್ರದೇಶದ ಹೊರವಲಯದಲ್ಲಿರುವ ಏಳು ವರ್ಷ ಮೇಲ್ಪಟ್ಟ…

Read More