ಲೇಖಕ: admin

ಬೆಂಗಳೂರು ಜು.14 NEWS DESK : ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸರೋಜಾ ದೇವಿ ಜನಿಸಿದ್ದು 1938ರ ಜನವರಿ 7ರಂದು. ಅವರು ಬೆಂಗಳೂರಿನಲ್ಲಿ ಹುಟ್ಟಿದರು. ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ. ಸರೋಜಾ ಬಳಿ ಭೈರಪ್ಪ ಅವರು ಡ್ಯಾನ್ಸ್ ಕಲಿಯುವಂತೆ ಪ್ರೋತ್ಸಾಹಿಸಿದರು. ಅವರು ಚಿತ್ರರಂಗಕ್ಕೆ ಬರಲು ತಂದೆಯಿಂದಲೇ ಬೆಂಬಲ ಸಿಕ್ಕಿತ್ತು. ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು. ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು. ಸರೋಜಾದೇವಿ ಅವರು ಕನ್ನಡ ಚಲನಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ಮಹಾನ್ ನಟಿ. ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಿ.ಸರೋಜಾದೇವಿ ದಕ್ಷಿಣ ಭಾರತದ ಧೀಮಂತ ಅಭಿನೇತ್ರಿ. ಸುಮಾರು…

Read More

ಮಡಿಕೇರಿ ಜು.12 NEWS DESK : ಕೊಡವರು ಬಂದೂಕು ವಿನಾಯಿತಿ ಪ್ರಮಾಣಪತ್ರವನ್ನು ಪಡೆಯಲು ಜಮ್ಮಾ ಪ್ರಮಾಣ ಪತ್ರಗಳನ್ನು ಅವಲಂಬಿಸುವ ಬದಲು ಕೊಡವ ಜನಾಂಗೀಯ ಪ್ರಮಾಣ ಪತ್ರವನ್ನು ಪಡೆಯುವಂತೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಸಲಹೆ ನೀಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸಂವಿಧಾನದ 25 ಮತ್ತು 26ನೇ ವಿಧಿಗಳ ಅಡಿಯಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದುವ ಕೊಡವ ಸಮುದಾಯದ ಹಕ್ಕನ್ನು ಧಾರ್ಮಿಕ ಸಂಸ್ಕಾರವಾಗಿ ಸಂರಕ್ಷಿಸಲು ಕೊಡವ ಜನಾಂಗೀಯ ಪ್ರಮಾಣ ಪತ್ರವನ್ನು ಪಡೆಯುವ ಕ್ರಮ ಸಹಕಾರಿಯಾಗಲಿದೆ. ಕೊಡವ ಸಮುದಾಯದ ಸಂಪ್ರದಾಯ ಮತ್ತು ಹಕ್ಕುಗಳ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಕೊಡವ ಜನಾಂಗ ಪ್ರಮಾಣ ಪತ್ರದ ಅಗತ್ಯವಿದೆ. ಕೊಡವ ಪ್ರಮಾಣ ಪತ್ರವು ಜಮ್ಮಾ ಹೊಂದಿರುವವರ ಪ್ರಮಾಣ ಪತ್ರಗಳನ್ನು ಅವಲಂಬಿಸದೆ ಬಂದೂಕು ವಿನಾಯಿತಿಯ ಹಕ್ಕನ್ನು ಗಟ್ಟಿಗೊಳಿಸುತ್ತದೆ ಎಂದು ತಿಳಿಸಿದ್ದಾರೆ. ಜಮ್ಮಾ ಭೂಮಿಯನ್ನು ಖರೀದಿಸುವ ಮೂಲಕ ಅಥವಾ ಈ ಉದ್ದೇಶಕ್ಕಾಗಿ ಮಾತ್ರ ಕೊಡವ ಮಹಿಳೆಯರೊಂದಿಗೆ ವಿವಾಹವಾಗುವ ಮೂಲಕ ಕೊಡವರಲ್ಲದ ಹೊರಗಿನವರು ಬಂದೂಕು ವಿನಾಯಿತಿ ಸವಲತ್ತನ್ನು ಬಳಸಿಕೊಳ್ಳುವುದನ್ನು ತಡೆಯಬೇಕು. ಕೊಡವ…

Read More

ಕುಶಾಲನಗರ ಜು.12 NEWS DESK : ನದಿ ಮೂಲ ಹಾಗೂ ಜಲಮೂಲಗಳು ಯಾವುದೇ ರೀತಿಯಲ್ಲಿ ಕಲುಷಿತಗೊಳ್ಳದಂತೆ ಸಂರಕ್ಷಣೆ ಜಾಗೃತಿ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕುಶಾಲನಗರ ಲಯನ್ಸ್ ಕ್ಲಬ್ ಅಧ್ಯಕ್ಷ ಎನ್.ಟಿ.ನಾರಾಯಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನಮಾಮಿ ಕಾವೇರಿ ಆಶ್ರಯದಲ್ಲಿ ನಡೆದ 174ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನದಿ ಹಾಗೂ ಪರಿಸರ ಸಂರಕ್ಷಣೆಯ ಸಂಬಂಧ ಲಯನ್ಸ್ ಕ್ಲಬ್ ಮೂಲಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ಅರಿವು ಮೂಡಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದಾಗಿ ಅವರು ತಿಳಿಸಿದರು. ಕಾವೇರಿ ಮಹಾ ಆರತಿ ಬಳಗದ ಮೂಲಕ ಕಳೆದ ಹಲವು ವರ್ಷಗಳಿಂದ ನಡೆಯುತ್ತಿರುವ ನದಿ ಪರಿಸರ ಸಂರಕ್ಷಣೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಗುರುಪೂರ್ಣಿಮೆಯ ಅಂಗವಾಗಿ ನಡೆದ ಆರತಿ ಕಾರ್ಯಕ್ರಮದಲ್ಲಿ ಅರ್ಚಕರಾದ ಆದಿತ್ಯ ಭಟ್ ಅವರು ಕುಂಕುಮಾರ್ಚನೆ ಅಷ್ಟೋತ್ತರ ನಂತರ ನದಿಗೆ ಆರತಿ ಬೆಳಗಿದರು. ಈ ಸಂದರ್ಭ ಕುಶಾಲನಗರ ಲಯನ್ಸ್ ಕ್ಲಬ್ ಕಾರ್ಯದರ್ಶಿ ಎಂ ಜಿ ಕಿರಣ್, ಉಪಾಧ್ಯಕ್ಷರುಗಳಾದ ಕೆಎನ್…

Read More

ಮಡಿಕೇರಿ ಜು.12 NEWS DESK : ಕಾಯಕ ಮಹತ್ವ, ತ್ರಿವಿಧ ದಾಸೋಹ ಪರಿಕಲ್ಪನೆ, ಸಾಮಾಜಿಕ ಸಮಾನತೆ, ಸ್ತ್ರೀ ಸಮಾನತೆ, ದಯೆ ಮತ್ತು ಧರ್ಮದ ಪರಿಕಲ್ಪನೆ, ಅನುಭಾವ, ಸಮ ಸಮಾಜದ ನಿರ್ಮಾಣ ಮೊದಲಾದ ವಿಶ್ವ ಮೌಲಿಕ ಆಶಯಗಳನ್ನು ಶರಣರ ವಚನಗಳಲ್ಲಿ ಕಾಣಬಹುದಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಪಟ್ಟರು. ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಪುಣ್ಣಿಮೆ ಪೂಜಾ ಕಾರ್ಯಕ್ರಮ, ಶಿವಾನುಭವ ಗೋಷ್ಠಿ ಮತ್ತು ಫ.ಗು‌.ಹಳಕಟ್ಟಿಯವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಸವಾದಿ ಶರಣರು ನಡೆ-ನುಡಿ ಒಂದಾಗಿಸಿಕೊಂಡು ಬದುಕಿದವರು. ಕ್ರಿ.ಶ. ಹನ್ನೆರಡನೇ ಶತಮಾನದಲ್ಲಿಯೇ ಕರ್ಮಠತನದ ಸಾಮಾಜಿಕ ವ್ಯವಸ್ಥೆಯ ವರ್ಗ-ಜಾತಿ-ಲಿಂಗ ತಾರತಮ್ಯವನ್ನು ನೇರವಾಗಿ ವಿರೋಧಿಸಿ ಸಮ ಸಮಾಜದ ಮಾನವೀಯ ಮೌಲ್ಯಗಳನ್ನು ಇಡೀ ಜಗತ್ತಿಗೆ ಸಾರಿದರು. ಜನಪರವಾದ ಮತ್ತು ಲೋಕಕಲ್ಯಾಣಕರವಾದ ಚಿಂತನೆಗಳು ಬಸವಾದಿ ಶರಣರ ವಚನಗಳಲ್ಲಿ ಕಂಡುಬರುತ್ತದೆ. ವಚನ ಪಿತಾಮಹ, ವಚನ ಕಮ್ಮಟ, ರಾವ್ ಬಹದ್ದೂರ್, ರಾವ್ ಸಾಹೇಬ್ ಎಂದೇ ಪ್ರಸಿದ್ಧರಾಗಿದ್ದ  ಫ.ಗು. ಹಳಕಟ್ಟಿಯವರು ತಮ್ಮ ವಕೀಲ ವೃತ್ತಿಯನ್ನು ತ್ಯಜಿಸಿ…

Read More

ಮಡಿಕೇರಿ ಜು.12 NEWS DESK : ಸ್ಕೌಟ್ ಮತ್ತು ಗೈಡ್ ಮಡಿಕೇರಿ ತಾಲ್ಲೂಕು ಸ್ಥಳೀಯ ಸಂಸ್ಥೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಪದಗ್ರಹಣ ಕಾರ್ಯಕ್ರಮ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ನಡೆಯಿತು. ತಾಲೂಕಿನ ನೂತನ ಅಧ್ಯಕ್ಷರಾಗಿ ಈರಮಂಡ ಹರಿಣಿ ವಿಜಯ್, ಉಪಾಧ್ಯಕ್ಷರಾಗಿ ಬಿ.ಎನ್.ರಮೇಶ್, ಪಿ.ಎಂ.ರವಿ, ಅರುಣ್, ನೀಲಮ್ಮ, ಕಡ್ಲೇರ ತುಳಸಿ ಮೋಹನ್, ಕುಡೆಕಲ್ ಸಂತೋಷ್, ಪ್ರಧಾನ ಕಾರ್ಯದರ್ಶಿಯಾಗಿ ಆರ್.ಪಿ.ಚಂದ್ರಶೇಖರ್, ಖಜಾಂಚಿಯಾಗಿ ಸಿ.ಎಸ್.ಕಾವೇರಮ್ಮ, ಸಹ ಕಾರ್ಯದರ್ಶಿಯಾಗಿ ಚಂದನ್ ನಂದರಬೆಟ್ಟು ಹಾಗೂ ನಳಿನಿ ಅವರುಗಳನ್ನು ಆಯ್ಕೆ ಮಾಡಲಾಗಿದೆ. ಸ್ಕೌಟ್ ಮತ್ತು ಗೈಡ್‌ನ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.

Read More

ಬೆಂಗಳೂರು ಜು.12 NEWS DESK : ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ, ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಂಘ ಅತ್ಯಂತ ಯಶಸ್ವಿ ಆಗಿದೆ. ಇದಕ್ಕಾಗಿ ಶ್ರಮಿಸಿದ ಯಲ್ಲಮ್ಮ ಮತ್ತು ಜೊತೆಗಿರುವ ಪ್ರತಿಯೊಬ್ಬರೂ ಅಭಿನಂದನಾರ್ಹರು ಎಂದರು.  ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ಶೋಷಿತ ಜಾತಿ-ಸಮುದಾಯಗಳಿಗೆ ಕೊಟ್ಟಿರುವ ಮಂತ್ರ. ಶೂದ್ರರು ಮತ್ತು ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಆದರೆ ಅಂಬೇಡ್ಕರ್ ಅವರ ಕಾರಣದಿಂದ ಶೂದ್ರ ಮತ್ತು ಮಹಿಳಾ ಕುಲಕ್ಕೆ ಶಿಕ್ಷಣ ಕಲಿಯುವ ಅವಕಾಶ ಒದಗಿ ಬಂತು. ಇದಕ್ಕೆ ನಮ್ಮ ಸಂವಿಧಾನ…

Read More

ವಿರಾಜಪೇಟೆ ಜು.12 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕೃಷಿ ಕಾರ್ಯಕ್ರಮದಡಿಯಲ್ಲಿ ಪೊನ್ನಂಪೇಟೆ ವಲಯದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಶಾಲೆಯ ಉಪ ಪ್ರಾಂಶುಪಾಲರಾದ ಚಂಗಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪರಿಸರ ಸಂರಕ್ಷಣೆ ಹಾಗೂ ಕಾರ್ಯಕ್ರಮದ ಬಗ್ಗೆ ವಲಯ ಮೇಲ್ವಿಚಾರಕ ನಾಗರಾಜ್ ಪ್ರಾಸ್ತವಿಕವಾಗಿ ಮಾತನಾಡಿದರು. ಪೊನ್ನಂಪೇಟೆ ಪಟ್ಟಣ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪ ಮಾತನಾಡಿ ಗಿಡಮರಗಳನ್ನು ಬೆಳೆಸಬೇಕು, ನೆಟ್ಟ ಗಿಡಗಳನ್ನು ಪೋಷಣೆ ಮಾಡಬೇಕು, ಪರಿಸರ ಸಂರಕ್ಷಣೆಯಿಂದ ಶುದ್ಧವಾದ ಗಾಳಿ ನೀರು ಸಿಗುತ್ತದೆ. ಹಾಗೂ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಯ ಪರಿಸರದಲ್ಲಿ ಗಿಡ ನಾಟಿ ಮಾಡಿ ಪರಿಸರ ಸಂರಕ್ಷಿಸಬೇಕು ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆ ಆಯೋಜಿಸಿ, ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಲಯ ಉಪ ಅರಣ್ಯಅಧಿಕಾರಿ ಜೆ.ಕೆ.ಬಿರಾದರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ತಮ್ಮಯ್ಯ, ಕೃಷಿ ಮೇಲ್ವಿಚಾರಕ ವಸಂತ್, ಒಕ್ಕೂಟದ…

Read More

ವಿರಾಜಪೇಟೆ ಜು.14 NEWS DESK : ವಿರಾಜಪೇಟೆಯಲ್ಲಿ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಎನ್.ಎಂ.ನಾಣಯ್ಯ, ವಿದ್ಯಾರ್ಥಿಗಳ ಜೀವನವನ್ನು ರೂಪಿಸುವಲ್ಲಿ ಕಾಲೇಜು ಹಂತ ಮಹತ್ತರ ಪಾತ್ರವನ್ನು ವಹಿಸುತ್ತದೆ. ಜೀವನದಲ್ಲಿ ಶಿಸ್ತು, ಸಂಯಮ, ಸಮಯ ಪರಿಪಾಲನೆಯನ್ನು ರೂಢಿಸಿಕೊಂಡು ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕು, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವವನ್ನು ನೀಡಬೇಕೆಂದು ಕಿವಿ ಮಾತನ್ನು ಹೇಳಿದರು. ವಿದ್ಯಾರ್ಥಿನಿ ಭೂಮಿಕಾ ಮತ್ತು ತಂಡದವರು ಪ್ರಾರ್ಥಿಸಿದರು. ಪ್ರಕೃತಿ ಸ್ವಾಗತಿಸಿದರು. ಡೋನಾ ನಿರೂಪಿಸಿದರು. ಪ್ರತೀಕ್ಷಾ ವಂದಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.

Read More

ಕುಶಾಲನಗರ ಜು.14 NEWS DESK : ಪ್ರಸ್ತುತ ಹಿಂದೂ ಧರ್ಮದ ಮೇಲಿನ ಸಮಸ್ಯೆಗಳ ಪರಿಹಾರಕ್ಕಾಗಿ ಹಿಂದೂಗಳ ಬಲಿಷ್ಠ ಸಂಘಟನೆಯ ಅವಶ್ಯಕತೆ ಇಂದು ತುರ್ತು ಅಗತ್ಯವಿದೆ ಎಂದು ಸನಾತನ ಸಂಸ್ಥೆಯ ಪ್ರಮುಖರಾದ ಸೌ.ಲಕ್ಷ್ಮಿ ಪೈ ಅಭಿಪ್ರಾಯಿಸಿದರು. ಕುಶಾಲನಗರದ ಗೌಡ ಸಮಾಜದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಧನೆ ಮತ್ತು ಧರ್ಮ ಸಂಘಟನೆಯ ಅಡಿಪಾಯವಾಗಿದ್ದರೆ ಮಾತ್ರ ರಾಷ್ಟ್ರ-ಧರ್ಮ ಕಾರ್ಯದ ಕಟ್ಟಡ ಭದ್ರವಾಗಿರಲು ಸಾಧ್ಯ. ಸಾಧನೆಯಿಂದಲೇ ಯಾವುದೇ ಪರಿಸ್ಥಿತಿಯನ್ನು ಎದುರಿಸುವ, ಯಾವುದೇ ಪರಿಸ್ಥಿತಿಯಲ್ಲಿ ಸ್ಥಿರವಾಗಿರುವ, ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಕ್ಷಮತೆ ನಿರ್ಮಾಣವಾಗುತ್ತದೆ. ಎಲ್ಲರೂ ಆಧ್ಯಾತ್ಮಿಕ ಸಾಧನೆಯೊಂದಿಗೆ ರಾಷ್ಟ್ರ-ಧರ್ಮದ ಕಾರ್ಯ ಮಾಡುವ ಸಂಕಲ್ಪ ತೊಡಬೇಕಿದೆ ಎಂದರು. ಗುರುಪೂರ್ಣಿಮೆ ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಮತ್ತು ಗುರುಸೇವೆಗಾಗಿ ಸಂಕಲ್ಪ ಮಾಡುವ ಪವಿತ್ರ ದಿನ. ಭಾರತದ ಒಂದು ಪ್ರಮುಖ ವೈಶಿಷ್ಟ್ಯವೆಂದರೆ ಗುರು-ಶಿಷ್ಯ ಪರಂಪರೆ. ಈ ದೈವೀ ಪರಂಪರೆಯು ಕೇವಲ ಗುರು ಮತ್ತು ಶಿಷ್ಯ, ಅಧ್ಯಾತ್ಮ ಮತ್ತು ಮೋಕ್ಷಕ್ಕೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಅದು ವಿಶ್ವ ಕಲ್ಯಾಣದ…

Read More

ಮಡಿಕೇರಿ ಜು.14 NEWS DESK : ಪ್ರಸಕ್ತ (2025-25) ಸಾಲಿಗೆ ಪ್ರೀ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ (Pre matric & Post matric) ತರಗತಿಗಳಲ್ಲಿ ವ್ಯಾಂಸಗ ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ಹೊಸದಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಎಸ್‍ಎಸ್‍ಪಿ ತಂತ್ರಾಂಶದಲ್ಲಿ https://ssp.postmatric.karnataka.gov.in/homepage.aspx ವೆಬ್‍ಸೈಟ್ ಚಾಲನೆಯಲ್ಲಿದ್ದು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ. 08272-295829 ನ್ನು ಹಾಗೂ ತಾಲ್ಲೂಕಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕು ರಾಜೇಶ್ ಬಿ.ಆರ್ ಮೊ.ಸಂ-8073192914, ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕು ಹರೀಶ್ ಟಿ.ಆರ್-8861428931 ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಪ್ರಥನ್ ಕುಮಾರ್ ಸಿ.ಬಿ-9900883654 ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

Read More