ಲೇಖಕ: admin

ಮಡಿಕೇರಿ ಜೂ.18 NEWS DESK : ಇತ್ತೀಚೆಗೆ ಸಿದ್ದಾಪುರ ಸಮೀಪ ಕರಡಿಗೋಡು ಭಾಗದ ಕಾಫಿ ತೋಟಗಳ ಸುತ್ತಮುತ್ತ ಕಾಣಿಸಿಕೊಂಡಿದ್ದ ಹುಲಿಯ ಚಲನವಲನದ ಮೇಲೆ ಅರಣ್ಯ ಇಲಾಖೆ ನಿಗಾ ವಹಿಸಿದೆ. ಎರಡು ದಿನಗಳ ಹಿಂದೆ ರಾತ್ರಿ ವೇಳೆ ಹುಲಿ ಸಂಚಾರ ಕಂಡು ಬಂದು ಗ್ರಾಮದಲ್ಲಿ ಆತಂಕ ಮೂಡಿತ್ತು. ರಾಜ್ಯ ವನ್ಯ ಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಹಾಗೂ ಅರಣ್ಯ ಅಧಿಕಾರಿಗಳು ಇಂದು ಸ್ಥಳಕ್ಕೆ ಭೇಟಿ ನೀಡಿ ಹುಲಿ ಚಲನವಲನದ ಮೇಲೆ ನಿಗಾ ವಹಿಸಿರುವ ಅರಣ್ಯ ಸಿಬ್ಬಂದಿಗಳ ಕಾರ್ಯಾರಚಣೆಯನ್ನು ಪರಿಶೀಲಿಸಿದರು. ವಿರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಮ್ ಹಾಗೂ ಉಪ ವಲಯ ಅರಣ್ಯ ಅಧಿಕಾರಿ ಸಂಜಿತ್ ಸೋಮಯ್ಯ ಅವರ ಉಪಸ್ಥಿತಿಯಲ್ಲಿ 30 ಅರಣ್ಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಾರ್ಯಾಚರಣೆ ವೇಳೆ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಹುಲಿ ಅರಣ್ಯ ಭಾಗಕ್ಕೆ ತೆರಳಿರುವ ಸುಳಿವು ಸಿಕ್ಕಿದೆ. ಆದರೂ ಕಾರ್ಯಾಚರಣೆ ಮುಂದುವರೆದಿದ್ದು, ಹುಲಿ ಗ್ರಾಮದಲ್ಲಿ ಕಂಡು ಬಂದರೆ ಅರವಳಿಕೆ ನೀಡಿ ಸೆರೆ ಹಿಡಿಯಲು ಕ್ರಮ ಕೈಗೊಳ್ಳಲಾಗುವುದು.…

Read More

ಕುಶಾಲನಗರ ಜೂ.17 NEWS DESK : ನಿರಂತರ ಮಳೆಯಿಂದಾಗಿ ಮನೆಯ ಗೋಡೆ ಹಾಗೂ ಮೇಲ್ಛಾವಣಿ ಹಾನಿಯಾದ ಘಟನೆ ಕುಶಾಲನಗರದ ಟೌನ್ ಕಾಲೋನಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಕುಶಾಲನಗರದ ಪತ್ರಕರ್ತ ಎಚ್.ಸಿ.ಜಯಪ್ರಕಾಶ್ ಅವರ ಮನೆಯು ಹಾನಿಯಾಗಿದ್ದು, ಮಕ್ಕಳು ಕೂದಲೆಳೆಯಿಂದ ಪಾರಾಗಿದ್ದಾರೆ. ಸುಮಾರು 60 ವರ್ಷ ಹಳೆಯ ಮನೆಯಾದ್ದರಿಂದ ನಿರಂತರ ಮಳೆ ಬಿದ್ದ ಕಾರಣ ಮನೆ ಗೋಡೆಗಳು ಸಂಪೂರ್ಣ ಹಾನಿಯಾಗಿ ಗೋಡೆ ಕುಸಿದು ಬಿದ್ದಿದೆ. ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡುತ್ತಿದ್ದ ಸಂದರ್ಭ, ಶಿಥಿಲಗೊಂಡಿದ್ದ ಗೋಡೆ ಅಧಿಕಾರಿಗಳ‌ ಎದುರೇ ಕುಸಿದು ಬಿದ್ದಿದೆ. ಅದೃಷ್ಠವಷಾತ್ ಸ್ಥಳದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಸ್ಥಳೀಯ ವಾರ್ಡ್ ಸದಸ್ಯ ಜಯವರ್ಧನ್ ಮಾತನಾಡಿ, ಕುಶಾಲನಗರದ ಟೌನ್ ಕಾಲೋನಿಯಲ್ಲಿ ಮಳೆಯಿಂದ ಮನೆಗೆ ಹಾನಿಯಾಗಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಮನೆ ವಾಸಿಸಲು ಯೋಗ್ಯವಿಲ್ಲದ ಕಾರಣ ಪುರಸಭೆಯಿಂದ ಸೂಕ್ತ ಪರಿಹಾರ ಒದಗಿಸಲಾಗುವುದು. ಸರ್ಕಾರ ಕೂಡಾ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಪತ್ರಕರ್ತ…

Read More

ಸೋಮವಾರಪೇಟೆ ಜೂ.17 NEWS DESK : ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ, ಹಾಸನ ಮತ್ತು ಕೊಡಗು ಜಿಲ್ಲೆ, ಕೊಡಗು ಪತ್ರಕರ್ತರ ಸಂಘ ತಾಲ್ಲೂಕು ಘಟಕ, ಕಳಲೆ, ಕೂಡಿಗೆ ಬಿಜಿಎಸ್ ಸೇವಾಸಂಘ ಮತ್ತು ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಜೂ.21 ರಂದು ವಿದ್ಯಾರ್ಥಿಗಳಿಗೆ ಐಎಎಸ್, ಐಪಿಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್.ಹರೀಶ್ ಕುಮಾರ್ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರಸಂತೆ ಯಶಸ್ವಿ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಹೆಚ್.ಪಿ.ಸಂದೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆದಿಚುಂಚನಗಿರಿ ಹಾಸನ ಶಾಖ ಮಠದ ಕಾರ್ಯದರ್ಶಿಗಳಾದ ಶಂಭುನಾಥಸ್ವಾಮೀಜಿ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು. ಶಾಸಕರಾದ ಡಾ.ಮಂತರ್‍ಗೌಡ, ಮೈಸೂರು ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕರಾದ ಡಾ.ಬೋರಲಿಂಗಯ್ಯ, ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಬೆಂಗಳೂರು ಸಂಚಾರ ನಿಯಂತ್ರಣ ವಿಭಾಗದ ಪೊಲೀಸ್ ಆಯುಕ್ತರಾದ ಎಂ.ಎನ್.ಅನುಚೇತ್, ಬೆಂಗಳೂರಿನ ಇಂಡಿಯನ್ ಐಎಎಸ್ ಅಕಾಡೆಮಿ ಸಿ.ಇ.ಒ. ಪಿ.ಸಿ.ಶ್ರೀನಿವಾಸ್,…

Read More

ಸೋಮವಾರಪೇಟೆ ಜೂ.17 NEWS DESK : ಸೋಮವಾರಪೇಟೆ ತಾಲ್ಲೂಕು ಮೊಗೇರ ಸೇವಾ ಸಮಿತಿ ಸಭೆಯು ತಾಲ್ಲೂಕು ಅಧ್ಯಕ್ಷ ವಸಂತ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸೋಮವಾರಪೇಟೆ ಪತ್ರಿಕಾಭವನದಲ್ಲಿ ನಡೆದ ಸಭೆಯಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಉಚಿತ ನೋಟ್‍ಬುಕ್ ಗಳನ್ನು ವಿತರಿಸಲು ತೀರ್ಮಾನಿಸಲಾಯಿತು. ಸಂಘದ ಮಾಜಿ ಅಧ್ಯಕ್ಷ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರ ಚಿಕಿತ್ಸೆಗೆ 10 ಸಾವಿರ ರೂ.ಗಳನ್ನು ಸಂಘದ ವತಿಯಿಂದ ಕುಟುಂಬಕ್ಕೆ ನೀಡಲಾಯಿತು. ಅಸ್ಸಾಂ ಮೂಲದ ವ್ಯಕ್ತಿಯೋರ್ವ ಕಾರೇಕೊಪ್ಪ ಜಂಕ್ಷನ್‍ನಲ್ಲಿ ಕಾರ್ಮಿಕ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಪೊಲೀಸರು ಎಚ್ಚೆತ್ತುಕೊಳ್ಳಬೇಕು. ಇಲ್ಲಿನ ಕಾರ್ಮಿಕರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಸಭೆಯಲ್ಲಿ ಅಧ್ಯಕ್ಷರು ಒತ್ತಾಯಿಸಿದರು. ಕಡಿಮೆ ಸಂಬಳಕ್ಕೆ ಹೊರರಾಜ್ಯದ ಕೂಲಿ ಕಾರ್ಮಿಕರ ಕರೆತಂದು ಲೈನ್‍ಮನೆಯಲ್ಲಿ ಇಟ್ಟುಕೊಳ್ಳುತ್ತಾರೆ. ಅವರ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿಯನ್ನು ನೀಡುತ್ತಿಲ್ಲ. ಹಲ್ಲೆ, ಕೊಲೆ, ಮಾನಭಂಗದಂತಹ ಕೃತ್ಯಗಳು ನಡೆದಾಗ ಮಾಲೀಕರನ್ನೇ ಹೊಣೆಗಾರರನ್ನಾಗಿ ಮಾಡಿ, ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಕೆ.ಕೆ.ಗಣೇಶ್, ಸಲಹೆಗಾರ ಕೆ.ವಿ.ನಂದ ಇದ್ದರು.

Read More

ಮಡಿಕೇರಿ ಜೂ.17 NEWS DESK : ನಗರಸಭೆ ಅಧ್ಯಕ್ಷರಾದ ಕಲಾವತಿ ಪಿ.ಅವರ ಅಧ್ಯಕ್ಷತೆಯಲ್ಲಿ ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ಜೂನ್, 18 ರಂದು ಬೆಳಗ್ಗೆ 11 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

Read More

ಸೋಮವಾರಪೇಟೆ ಜೂ.17 NEWS DESK : ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ನಡೆಯುತ್ತಿರುವ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಸಕ್ತ ವರ್ಷದಿಂದ ಪಿಸಿಎಂಸಿ ವಿಭಾಗಕ್ಕೆ ಸರ್ಕಾರ ಅನುಮತಿ ನೀಡಿದ್ದು, ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಬಹುದು ಎಂದು ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಡಾ.ಮಂತರ್‍ಗೌಡ ಅವರ ಸಹಕಾರದಿಂದ ಅನುಮತಿ ಸಿಕ್ಕಿದೆ. ಸ್ಥಳೀಯ ವಿದ್ಯಾರ್ಥಿಗಳು ಕಂಪ್ಯೂಟರ್ ಸೈನ್ಸ್ ಕಲಿಕೆಗೆ ಉಪಯೋಗವಾಗಲಿದೆ ಎಂದು ಹೇಳಿದರು. ಈಗಾಗಲೇ ವಿಜ್ಞಾನ ವಿಭಾಗದಲ್ಲಿ ಪಿಸಿಎಂಬಿ, ವಾಣಿಜ್ಯ ವಿಭಾಗದಲ್ಲಿ ಇಬಿಎಸಿ, ಎಚ್‍ಇಬಿಎ ತರಗತಿಗಳು ನಡೆಯುತ್ತಿವೆ. ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.100ರಷ್ಟು ಫಲಿತಾಂಶ ದೊರೆತ್ತಿದೆ ಎಂದು ಹೇಳಿದರು. ಗ್ರಾಮೀಣ ವಿದ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣ ನೀಡಲೇಬೇಕೆಂಬ ಉದ್ದೇಶದಿಂದ 2002ರಲ್ಲಿ ಪೂರ್ವ ಪ್ರಾಥಮಿಕ ತರಗತಿಯಲ್ಲಿ 40 ಮಕ್ಕಳಿಂದ ಪ್ರಾರಂಭವಾದ ವಿದ್ಯಾಸಂಸ್ಥೆ, ಪ್ರಸಕ್ತ ಎಲ್‍ಕೆಜಿಯಿಂದ ದ್ವಿತೀಯ ಪಿಯುಸಿ ತನಕ 800 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶೇ.99ರಷ್ಟು ಮಕ್ಕಳು ಗ್ರಾಮೀಣ…

Read More

ಮಡಿಕೇರಿ ಜೂ.17 NEWS DESK : ಬೆಂಗಳೂರು ಕಾಲ್ತುಳಿತದ ದುರಂತ ಘಟನೆಯ ಹೊಣೆಹೊತ್ತು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಆರ್‍ಸಿಬಿ ತಂಡ ಐಪಿಎಲ್‍ನಲ್ಲಿ ಜಯಗಳಿಸಿದ ಹಿನ್ನೆಲೆ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ವಿಜಯೋತ್ಸವವನ್ನು ಆಯೋಜಿಸಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಕಾನೂನು ಸುವ್ಯವಸ್ಥೆ ಹದಗೆಡುವ ಕುರಿತು ಸರ್ಕಾರಕ್ಕೆ ಮೊದಲೇ ಮಾಹಿತಿ ನೀಡಿದ್ದರೂ ಅವರ ಮಾತನ್ನು ಲೆಕ್ಕಿಸದ ಸರ್ಕಾರ ವಿಜಯೋತ್ಸವ ಆಚರಿಸಿ 11 ಮಂದಿ ಅಮಾಯಕರ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಿದರು. ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿ ಹಾಕಲು ನಿಷ್ಠಾವಂತ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದು ಖಂಡನೀಯ. ಕಾಂಗ್ರೆಸ್ಸಿಗರ…

Read More

ಗೋಣಿಕೊಪ್ಪ ಜೂ.17 NEWS DESK : ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಜನತೆಗೆ ಯಾವುದೇ ಭದ್ರತೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ ಆರೋಪಿಸಿದರು. ಪೊನ್ನಂಪೇಟೆ ತಾಲ್ಲೂಕು ಆಡಳಿತ ಕಚೇರಿಯಲ್ಲಿ ನಡೆದ ವಿರಾಜಪೇಟೆ ಬಿಜೆಪಿ ಮಂಡಲ ನಡೆಸಿದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ರಾಜ್ಯ ಸರ್ಕಾರಕ್ಕೆ ಸಾಮಾನ್ಯ ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಅವರ ಜೀವದ ಬಗ್ಗೆ ಒಂದಿಷ್ಟು ಗೌರವವಿಲ್ಲ. ಹೀಗಾಗಿ ಐಪಿಎಲ್ ಪಂದ್ಯಾಟದ ವಿಜೇತ ಸಂಭ್ರಮದಲ್ಲಿ 11 ಯುವಕರು ಜೀವ ಕಳೆದುಕೊಳ್ಳಬೇಕಾದಂತ ಪರಿಸ್ಥಿತಿ ಎದುರಾಯಿತು. ಸರ್ಕಾರದ ಭದ್ರತೆಯ ವೈಫಲ್ಯ ಮತ್ತು ಬೇಜವಾಬ್ದಾರಿತನವೇ ಈ ಘಟನೆಗೆ ಮೂಲ ಕಾರಣ ಎಂದು ದೂರಿದರು. ನೈತಿಕ ಹೊಣೆ ಹೊತ್ತು ರಾಜ್ಯದ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ನೀಡುವ ಮೂಲಕ ಈ ಘಟನೆಯಿಂದ ಪ್ರಾಯಶ್ಚಿತ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು. ಸರ್ಕಾರಕ್ಕೆ ಮುಂದಿನ ಚುನಾವಣೆಗೆ ಮತದಾರರನ್ನು ಸೆಳೆಯುವ ಆಸಕ್ತಿಯಷ್ಟೇ ಉಳಿದುಕೊಂಡಿದೆ ಹೀಗಾಗಿಯೇ ಐಪಿಎಲ್ ಪಂದ್ಯಾಟದ ವಿಜಯ ಸಂಭ್ರಮವನ್ನು ಆಚರಿಸಲು ಮುಂದಾಗಿದೆ. ಯಾವುದೇ…

Read More

ಬೆಂಗಳೂರು ಜೂ.17 NEWS DESK : ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ – 2025 ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉದ್ಘಾಟಿಸಿ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ, ಸಾಧಕರನ್ನು ಗೌರವಿಸಿದರು.  ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸಚಿವರಾದ ಬೈರತಿ ಸುರೇಶ್, ಡಾ.ಎಂ.ಸಿ.ಸುಧಾಕರ್, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯಕಾರ್ಯದರ್ಶಿ ಅಂಜುಮ್ ಪರ್ವೇಜ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಜೂ.17 NEWS DESK : ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಜು.10 ರಂದು ಗುರು ಪೂರ್ಣಿಮಾ ಮಹೋತ್ಸವ ನಡೆಯಲಿದೆ. ಕುಶಾಲನಗರ ಗೌಡ ಸಮಾಜದಲ್ಲಿ ಸಂಜೆ.4.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮಹರ್ಷಿ ವ್ಯಾಸ ಮತ್ತು ಗುರುಪ್ರತಿಮೆಗಳ ಪೂಜೆ, ರಾಷ್ಟ್ರ ಮತ್ತು ಧರ್ಮಕಾರ್ಯ ಮಾಡುವವರ ಸತ್ಕಾರ ಸಂತರ ಸಂದೇಶ ಮತ್ತು ಕಾರ್ಯಕರ್ತರ ಅನುಭವಕಥನ, ಕಿರುಚಿತ್ರ ಹಾಗೂ ಸ್ವರಕ್ಷಣೆಯ ಪ್ರಾತ್ಯಕ್ಷಿಕೆಗಳು, ರಾಮರಾಜ್ಯ ಸ್ಥಾಪನೆಗಾಗಿ ಸಾಮೂಹಿಕ ನಾಮಜಪ, ಗಣ್ಯರಿಂದ ಮಾರ್ಗದರ್ಶನ ನಡೆಯಲಿದೆ ಎಂದು ಸಮಿತಿಯ ಪ್ರಮುಖರು ತಿಳಿಸಿದ್ದಾರೆ.

Read More