ಮಡಿಕೇರಿ ಜೂ.17 NEWS DESK : ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಚೇರಂಬಾಣೆ ಗ್ರಾಮ ಪಂಚಾಯತಿಯ ಬೆಂಗೂರು ಗ್ರಾಮದ ದೋಣಿ ಕಾಡು ರಸ್ತೆ ಜಲಾವೃತಗೊಂಡಿದೆ. ಸ್ಥಳಕ್ಕೆ ಮಡಿಕೇರಿ ತಾಲ್ಲೂಕು ತಹಶೀಲ್ದಾರರು ಭೇಟಿ ನೀಡಿ ಪರಿಶೀಲಿಸಿ, ಸೂಕ್ತ ನಿರ್ದೇಶನ ನೀಡಿದರು. ಸಾರ್ವಜನಿಕರ ಅನುಕೂಲಕ್ಕಾಗಿ ದೋಣಿಯನ್ನು ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳದಲ್ಲಿ ಭಾಗಮಂಡಲ ಹೋಬಳಿ ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.
ಲೇಖಕ: admin
ಮಡಿಕೇರಿ ಜೂ.17 NEWS DESK : ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯದ ಸಮೀಪದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆ ಅಪಾಯದ ಅಂಚಿನಲ್ಲಿದ್ದು, ತಹಶಿಲ್ದಾರರಾದ ಕಿರಣ್ ಗೌರಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆ ಹೆಚ್ಚಿರುವುದರಿಂದ ಸೇತುವೆಯಲ್ಲಿ ಪ್ರವಾಸಿಗರು ತೆರಳದಂತೆ ರಾಮೇಶ್ವರ ದೇವಾಲಯದ ಬಳಿಗೆ ಹೋಗುವ ಗೇಟ್ ಗೆ ಬೀಗ ಅಳವಡಿಸಲಾಯಿತು.
ಮಡಿಕೇರಿ ಜೂ.17 NEWS DESK : ಹಿಂದೂ ರುದ್ರಭೂಮಿಗಾಗಿ ಒತ್ತಾಯಿಸಿ ಸ್ಮಶಾನ ಹೋರಾಟ ಸಮಿತಿ ನೆಲ್ಲಿಹುದಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನೆಲ್ಲಿಹುದಿಕೇರಿ ಗ್ರಾಮದ ಅಂಚೆ ಕಚೇರಿ ಬಳಿಯಿಂದ ಗ್ರಾಮ ಪಂಚಾಯಿತಿ ವರೆಗೆ ಅಣುಕು ಶವಯಾತ್ರೆ ನಡೆಸಿದ ಪ್ರತಿಭಟನಾಕಾರರು ಪಂಚಾಯಿತಿ ಕಚೇರಿಯ ಎದುರು ಅಣುಕು ಶವವನ್ನಿಟ್ಟು, ಪಂಚಾಯಿತಿ ಆಡಳಿತ ಮಂಡಳಿಯ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಸ್ಮಶಾನ ಹೋರಾಟ ಸಮಿತಿಯ ಪ್ರಮುಖ ಪಿ.ಆರ್.ಭರತ್, ನೆಲ್ಲಿಹುದಿಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಹಿಂದೂಗಳ ಸಂಖ್ಯೆ 6,000ಕ್ಕೂ ಅಧಿಕ ಇದ್ದು, ಸ್ಮಶಾನ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಇರುವ ಸ್ಮಶಾನವು ಕಾವೇರಿ ನದಿ ದಡದಲ್ಲಿದ್ದು, ಮಳೆಗಾಲದಲ್ಲಿ ನದಿ ದಡ ಕುಸಿಯುತ್ತದೆ. ಇದರಿಂದ ಶವ ಸಂಸ್ಕಾರಕ್ಕೆ ಜಾಗವಿಲ್ಲದೆ ಗ್ರಾಮಸ್ಥರು ಸಮಸ್ಯೆಗೆ ಸಿಲುಕಿಕೊಂಡಿದ್ದಾರೆ ಎಂದರು. ಶಾಶ್ವತ ಸ್ಮಶಾನದ ಜಾಗಕ್ಕಾಗಿ ಒತ್ತಾಯಿಸಿ ಕಳೆದ ಹಲವು ತಿಂಗಳಿನಿಂದ ಹೋರಾಟ ನಡೆಸಲಾಗುತ್ತಿದೆ. ಅಧಿಕಾರಿಗಳು ಭರವಸೆ ನೀಡುತ್ತಿದ್ದಾರೆಯೇ ಹೊರತು ಸ್ಮಶಾನಕ್ಕಾಗಿ ಜಾಗ ಗುರುತಿಸಿಲ್ಲ. ಅಲ್ಲದೆ ಸ್ಮಶಾನಕ್ಕಾಗಿ ಮೀಸಲಾಗಿರುವ ಜಾಗವನ್ನು ಒತ್ತುವರಿದಾರರಿಂದ…
ಮಡಿಕೇರಿ ಜೂ.17 NEWS DESK : ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆ ಕಾವೇರಿ ನದಿ ಪ್ರವಾಹದಿಂದ ಸಂಪರ್ಕ ಕಡಿತಗೊಂಡಿದ್ದು, ಬದಲಿ ರಸ್ತೆ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾರ್ವಜನಿಕರು ಅಪಾಯದ ಸ್ಥಳಗಳಿಗೆ ತೆರಳದಂತೆ ಹಾಗೂ ಆ ಭಾಗದ ಜನರಿಗೆ ಕಾಳಜಿ ಕೇಂದ್ರಕ್ಕೆ ತೆರಳಲು ಸೂಚನೆ ನೀಡಿದರು.
ನಾಪೋಕ್ಲು ಜೂ.17 NEWS DESK : ದನದ ಕೊಟ್ಟಿಗೆ ಕುಸಿದು ಅಪಾರ ನಷ್ಟ ಉಂಟಾಗಿರುವ ಘಟನೆ ಹೋದವಾಡ ಗ್ರಾಮದಲ್ಲಿ ನಡೆದಿದೆ. ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊದವಾಡ ಗ್ರಾಮದ ನಿವಾಸಿ ಬಿ.ಬಿ.ದರ್ನಪ್ಪ ಎಂಬವರ ದನದ ಕೊಟ್ಟಿಗೆ ಮಳೆ ಗಾಳಿಗೆ ಕುಸಿದು ಬಿದ್ದು ನಷ್ಟ ಸಂಭವಿಸಿದೆ. ಕೊಟ್ಟಿಗೆಯಲ್ಲಿದ್ದ ಜಾನುವಾರುಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಜಾನುವಾರುಗಳನ್ನು ರಕ್ಷಿಸಿ ಜೀವಪಾಯದಿಂದ ಪಾರು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಹೊದ್ದೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಚಂದ್ರಶೇಖರ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಂಡಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜೂ.17 NEWS DESK : ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ರಾಜ್ಯದ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳಿಗೆ ಅಫಿಲಿಯೇಶನ್ ನೀಡಲು ನಿರ್ದರಿಸಿ, ರಾಜ್ಯದಲ್ಲಿ ಕಳೆದ ಸಾಲಿನಿಂದ ಕೃಷಿ ವಿಜ್ಞಾನಗಳ ಖಾಸಗಿ ಕಾಲೇಜುಗಳಿಗೆ ಅಫಿಲಿಯೇಶನ್ ಕೃಷಿ ಮತ್ತು ಕೃಷಿ ಸಂಬಂಧಿತ ಪದವಿ ಓದಲು ಬಯಸುವ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಲಭ್ಯ ಸೀಟುಗಳು ಕಡಿಮೆ ಇವೆ. ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾಲಯಗಳಲ್ಲಿ ಪದವಿ ಕಾರ್ಯಕ್ರಮಕ್ಕೆ ದಾಖಲಾಗಲು ಅರ್ಜಿ ಸಲ್ಲಿಸಿರುತ್ತಾರೆ. ಅದರಲ್ಲಿ ಕೇವಲ 3 ಸಾವಿರ ವಿದ್ಯಾರ್ಥಿಗಳಿಗೆ ಕೃಷಿ ಹಾಗೂ ಕೃಷಿ ಸಂಬಂಧಿತ ಪದವಿ ಸೀಟುಗಳು ಹಂಚಿಕೆಯಾಗುತ್ತಿದೆ. ಉಳಿದ ವಿದ್ಯಾರ್ಥಿಗಳಿಗೆ ಈ ಪದವಿಗಳಿಗೆ ಪ್ರವೇಶ ಪಡೆಯಲು ಅವಕಾಶವಿಲ್ಲದಂತಾಗಿದೆ. ಈ ಹಿನ್ನಲೆಯಲ್ಲಿ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳ ಕಾಯ್ದೆ 2009 ರಲ್ಲಿ (ವಿಭಾಗ 44 ರಿಂದ 51) ವಿವರಿಸಿರುವಂತೆ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಖಾಸಗಿ ಕಾಲೇಜುಗಳಿಗೆ ಅಫಿಲಿಯೇಶನ್ ನೀಡಲು ಅವಕಾಶ ಇರುವುದನ್ನು ಬಳಸಿಕೊಂಡು ಕೆಳದಿ ಶಿವಪ್ಪ…
ಮಡಿಕೇರಿ ಜೂ.17 NEWS DESK : ಪ್ರಸಕ್ತ (2025-26) ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಡಿಪ್ಲೊಮಾ ದಾಖಲಾತಿಗೆ ಈ ಹಿಂದೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜೂನ್, 27 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು www.uahs.edu.in ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಯನ್ನು ಜೂನ್, 27 ರೊಳಗೆ ಸಲ್ಲಿಸಬಹುದಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45 (ಕನಿಷ್ಠ ಶೇ.40 ಪ.ಜಾ. ಮತ್ತು ಪ.ಪಂ./ಪ್ರವರ್ಗ-1) ಅಂಕಗಳೊಂದಿಗೆ ಉತ್ತೀರ್ಣರಾದ, 19 ವರ್ಷ ವಯಸ್ಸು ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50ರಷ್ಟು ಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪ್ಲೊಮಾ ಕೋರ್ಸ್ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇμÉ್ಮ ಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋದನೆ ಇರುತ್ತದೆ. ಹಾಗೂ ಕೃಷಿ ರಂಗದ ಪ್ರಾಯೋಗಿಕ ಪರಿಚಯ/ಅನುಭವ ಆಧಾರಿತ…
ಮಡಿಕೇರಿ ಜೂ.16 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸೆರಬ್ರಲ್ ಪಾಲ್ಸಿ, ಸ್ನಾಯುಕ್ಷಯ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕ್ಲೆರೋಸಿಸ್, ಅಟಿಸಮ್, ಬೌದ್ಧಿಕ ಮತ್ತು ಬಹು ಅಂಗವೈಕಲ್ಯ (ಶ್ರವಣ ಮತ್ತು ದೃಷ್ಟಿ ನ್ಯೂನತೆ) ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆ ಮಾಡುತ್ತಿರುವ ಆರೈಕೆದಾರರಿಗೆ ಮಾಹೆಯಾನ ರೂ.1 ಸಾವಿರ ಗಳ ಪ್ರೋತ್ಸಾಹಧನ ನೀಡುವ ಯೋಜನೆಗೆ 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದ ಫಲಾನುಭವಿ ಹೊರತುಪಡಿಸಿ 2025-26ನೇ ಸಾಲಿಗೆ ವಿಕಲತೆ ಇರುವವರನ್ನು ಆರೈಕೆ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳನ್ನು ಆಯಾಯ ತಾಲ್ಲೂಕಿನ ಎಂಆರ್ಡಬ್ಲ್ಯುಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ತಾಲ್ಲೂಕಿನ ಎಂಆರ್ಡಬ್ಲ್ಯುಗಳಿಗೆ ಎಲ್ಲಾ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಇದರ ಪ್ರಯೋಜನವನ್ನು ಕೊಡಗು ಜಿಲ್ಲೆಯಲ್ಲಿ ಈ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರು ಪಡೆದುಕೊಳ್ಳಬೇಕಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ…
ಮಡಿಕೇರಿ ಜೂ.16 NEWS DESK : ಕಾವೇರಿ ನಾಡು ಕೊಡಗು ಜಿಲ್ಲೆಯಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕೆಲವು ಮನೆಗಳಿಗೆ ಹಾನಿಯಾಗಿದೆ. ಮಂಜಿನ ನಗರಿ ಮಡಿಕೇರಿಯಲ್ಲಿ ಚಳಿಗಾಳಿ ಸಹಿತ ಅಧಿಕ ಮಳೆಯಾಗುತ್ತಿದೆ. ಭರ್ತಿಯಾಗುತ್ತಿರುವ ಹಾರಂಗಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ. ಭಾರೀ ಗಾಳಿ ಮಳೆಯಿಂದ ದಕ್ಷಿಣ ಕೊಡಗಿನ ಪೊನ್ನಂಪೇಟೆ ಬಳಿಯ ಕೃಷ್ಣ ನಗರದ ನಿವಾಸಿ ಹೆಚ್.ಕೆ.ರವಿ ಎಂಬುವವರ ಮನೆಯ ಗೋಡೆ ಕುಸಿದು ಹಾನಿಯಾಗಿದೆ. ಬಾಡಗ ಬಾಣಂಗಾಲ ಗ್ರಾಮದ ಕೆ.ಪಿ.ಅಮೀನ ಕುಂಞ ಮಹಮ್ಮದ್ ಎಂಬುವವರ ಮನೆಯ ಮುಂಭಾಗದ ಗೋಡೆ ಮತ್ತು ಮೇಲ್ಚಾವಣಿ ಹಾನಿಗೊಳಗಾಗಿದೆ. ಮನೆ ಗೋಡೆ ಕುಸಿದು ಸಂಕಷ್ಟದಲ್ಲಿರುವ ಕುಟುಂಬಗಳನ್ನು ಭೇಟಿ ಮಾಡಿದ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಲಪ್ಪ ಅವರು ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಮಳೆಹಾನಿ ಪರಿಹಾರದ ಅನುದಾನದಿಂದ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾಮಾನ್ಯ ಜನರ ಬದುಕು ಸಂಕಷ್ಟಕ್ಕೆ ಸಿಲುಕುತ್ತಿದೆ.…
ಕುಶಾಲನಗರ ಜೂ.16 NEWS DESK : ಮಳೆಯ ಸಂದರ್ಭದಲ್ಲಿ ಕುಶಾಲನಗರ ಪಟ್ಟಣದ ಕೆಲವು ಬಡಾವಣೆಗಳಲ್ಲಿ ಶಂಕಿತ ಜ್ವರ ಪ್ರಕರಣಗಳು ಕಂಡುಬಂದಿದ್ದು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ ವತಿಯಿಂದ ಜಿಲ್ಲಾ ಆರೋಗ್ಯ ಇಲಾಖೆಯ ಸರ್ವೆ ಕಾರ್ಯ ತಂಡ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಲಾರ್ವ ಉತ್ಪತ್ತಿಯಾಗುವ ಸ್ಥಳಗಳ ನೀರಿನ ಮಾದರಿಯನ್ನು ಸಂಗ್ರಹಿಸಲಾಯಿತು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿಶ್ವಜ್ಞಾ ಮತ್ತಿತರರು ವಿವಿಧ ಬಡಾವಣೆಗಳು ಮತ್ತು ಮನೆಗಳಿಗೆ ಭೇಟಿ ನೀಡಿ ಸಾಂಕ್ರಾಮಿಕ ರೋಗ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಿದರು. ಜಿಲ್ಲಾ ಆರೋಗ್ಯ ಇಲಾಖೆಯ ಜಿಲ್ಲಾ ಷಎಂಟ ಮಾಲಜಿಸ್ಟ್ ಮಂಜುನಾಥ್ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿಯಿಂದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿಶ್ವಜ್ಞಾ, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಚಂದ್ರೇಶ್ ,ಮುಖೇಶ್, ರಘು ಮತ್ತು ಆಶಾ ಕಾರ್ಯಕರ್ತೆಯರು ಪಟ್ಟಣದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಈಡಿಸ್ ಲಾರ್ವಾ ಸಮೀಕ್ಷೆಯನ್ನು ನಡೆಸಿ ಅಡ್ಡ ಪರಿಶೀಲನೆಯನ್ನು ಮಾಡಿದರು. ಇದೇ ವೇಳೆಯಲ್ಲಿ ಸಾರ್ವಜನಿಕರಿಗೆ ಡೆಂಗ್ಯೂ ಜ್ವರ , ಮಲೇರಿಯ ಜ್ವರ,…






