ಲೇಖಕ: admin

ಮಡಿಕೇರಿ ಜು.12 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕೊಡವ ಭಾಷೆ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ’ ಏರ್ಪಡಿಸುವ ಸಂಬಂಧ ಸ್ವರಚಿತ ಕವನ ಆಹ್ವಾನಿಸಲಾಗಿದೆ. ಯಾವುದೇ ಜಾತಿ ಧರ್ಮ ಆಧಾರಿತ ಕವನಗಳನ್ನು ಹೊರತುಪಡಿಸಿ, ಕೊಡವ ಸಾಹಿತ್ಯ-ಸಂಸ್ಕೃತಿ ಇಲ್ಲಿನ ಪರಿಸರ, ಪ್ರಕೃತಿ ಒಳಗೊಂಡಂತೆ ತಾತ್ವಿಕ ವಿಚಾರಗಳಿಗೆ ಒತ್ತುಕೊಡುವಂತೆ ಕವನಗಳಿಗೆ ಅವಕಾಶ ನೀಡಲಾಗುವುದು. 25 ಸಾಲುಗಳಿಗೆ ಮೀರಿದ ಕವನಗಳನ್ನು ವಾಚಿಸಲು ಅವಕಾಶ ಇರುವುದಿಲ್ಲ. ಯಾವುದೇ ಕವನಗಳ ಸಾಲುಗಳನ್ನು ಗೋಷ್ಠಿಯಲ್ಲಿ ಪುನರುಚ್ಚರಿಸುವಂತಿಲ್ಲ. ಕವನಗಳನ್ನು ಕಳುಹಿಸುವ ಹಾಗೂ ಭಾಗವಹಿಸುವ ಕವಿಗಳಿಗೆ ಜಾತಿ-ಧರ್ಮಗಳ ನಿರ್ಬಂಧ ಇರುವುದಿಲ್ಲ. ಕೊಡವ ಭಾಷೆಯು ಕಡ್ಡಾಯವಾಗಿದ್ದು, ತಮಗಳ ಕವನಗಳನ್ನು ಅಕಾಡೆಮಿ ಮೊಬೈಲ್ ಸಂಖ್ಯೆ 8762942976 ಕ್ಕೆ ಕಳುಹಿಸಲು ಜುಲೈ, 19 ಕೊನೆಯ ದಿನವಾಗಿದೆ. ಕವಿಗೋಷ್ಠಿಯು ನಾಯಕಂಡ ಬೇಬಿ ಚಿಣ್ಣಪ್ಪ ಅವರ ಮಾರ್ಗದರ್ಶನದಲ್ಲಿ ನಡೆಯಲಿದ್ದು, ಪುತ್ತರಿರ ಪಪ್ಪು ತಿಮ್ಮಯ್ಯ ಹಾಗೂ ಕಂಬೆಯಂಡ ಡೀನಾ ಬೋಜಣ್ಣ ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅಕಾಡೆಮಿ ನಿಯಮದಂತೆ ಕವಿಗೋಷ್ಠಿಗೆ ಆಯ್ಕೆಯಾಗುವ ಹಾಗೂ ಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳಿಗೆ ಸಂಭಾವನೆ ನೀಡಲಾಗುವುದು…

Read More

ಕಾರ್ಕಳ ಜು.12 NEWS DESK : ಕಾರ್ಕಳ ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ 6/8 ಕರ್ನಾಟಕ ಎನ್.ಸಿ.ಸಿ ಉಪನೌಕಾ ಘಟಕವನ್ನು ಉದ್ಘಾಟಿಸಲಾಯಿತು. 6 ಕರ್ನಾಟಕ ಎನ್.ಸಿ.ಸಿ ನೌಕಾ ಘಟಕ ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ಅವರು ಘಟಕವನ್ನು ಉದ್ಘಾಟಿಸಿ ಮಾತನಾಡಿ, ಎನ್.ಸಿ.ಸಿಯ ಶ್ರೇಷ್ಠತೆ, ಅದರಲ್ಲಿರುವ ಅವಕಾಶಗಳು, ಭಾರತೀಯ ರಕ್ಷಣಾ ಪಡೆಯೊಂದಿಗಿನ ನಂಟು, ಯುವಜನತೆಯ ಪಾತ್ರ ಮತ್ತು ದೇಶದ ಭವಿಷ್ಯ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಪ್ರೇರಣಾದಾಯಕ ಮಾತುಗಳನ್ನು ಹೇಳಿದರು.  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹ ಸಂಸ್ಥಾಪಕ ವಿದ್ವಾನ್ ಗಣಪತಿ ಭಟ್ ಎನ್.ಸಿ.ಸಿ ಯ ಶಿಸ್ತು, ಸಮಯ ಪಾಲನೆ, ನಾಯಕತ್ವ ಹಾಗೂ ದೇಶಪ್ರೇಮದ ಕುರಿತು ಉಲ್ಲೇಖಿಸಿ, “ಯುವಜನತೆ ರಾಷ್ಟ್ರದ ಭವಿಷ್ಯ, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರೆ ದೇಶ ಪ್ರಗತಿಯ ಮಾರ್ಗದಲ್ಲಿ ಸಾಗುತ್ತದೆ” ಎಂದು ವಿದ್ಯಾರ್ಥಿಗಳಿಗೆ ಹೇಳಿದರು. ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್ ಕಮಾಂಡರ್ ಎಂ.ಎ.ಮುಲ್ತಾನಿ, ಪಿ.ಐ.ಸ್ಟಾಫ್ ವರ್ಗದವರು, ಕಾಲೇಜು ಎನ್.ಸಿ.ಸಿ ನೌಕಾ ಘಟಕದ ಸಿ.ಟಿ.ಒ ಆಗಿರುವ ಆಂಗ್ಲ ಭಾಷಾ ಉಪನ್ಯಾಸಕ ಮಹೇಶ್ ಆರ್. ಶೆಣೈ…

Read More

ನಾಪೋಕ್ಲು ಜು.12 NEWS DESK  : ಶಿಸ್ತು, ಶ್ರದ್ಧೆ ಮತ್ತು ಜ್ಞಾನದ ಪ್ರತಿಬಿಂಬ ಗುರುಗಳು ಎಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಹೇಳಿದರು. ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವತಿಯಿಂದ ಚೇರಂಬಾಣೆ ಗೌಡ ಸಮಾಜದ ಸಭಾಂಗಣದಲ್ಲಿ ಗುರುಪೂರ್ಣಿಮೆಯ ಅಂಗವಾಗಿ ಆಯೋಜಿಸಿದ ಗುರುವಂದನಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಮ್ಮ ಬದುಕಿನಲ್ಲಿ ತಂದೆ ತಾಯಿಗೆ ಇರುವ ಶ್ರೇಷ್ಠ ಸ್ಥಾನದಲ್ಲಿ ನಿಲ್ಲುವವರು ಗುರುಗಳು ಎಂದ ಅವರು ಗುರುಪೂರ್ಣಿಮೆ ದಿನವನ್ನು ಆಚರಿಸುವುದು ನಮ್ಮ ಸಂಸ್ಕೃತಿಯ ಜ್ಞಾನ ಪರಂಪರೆಗಾಗಿ ನಮಿಸುವ ಸನ್ನಿವೇಶ. ಇದು ಕೇವಲ ಧಾರ್ಮಿಕ ಆಚರಣೆ ಅಲ್ಲ ಜೀವನದ ಸತ್ಯವನ್ನು ಅರಿತವರಿಗೆ ಕೃತಜ್ಞತೆಯ ಪ್ರಾಮಾಣಿಕ ಸೂಚನೆ. ಹಿಂದೂ ಧರ್ಮದ ಪ್ರಕಾರ ವೇದವ್ಯಾಸರ ಜನ್ಮದಿನ, ಗುರು ದ್ರೋಣಾಚಾರ್ಯರಿಗೆ ಏಕಲವ್ಯ ತನ್ನ ಬಲಗೈಯ ಹೆಬ್ಬೆರಳನ್ನು ಗುರು ಕಾಣಿಕೆಯಾಗಿ ನೀಡಿದ ದಿನ ಎಂದು ದಿನದ ಮಹತ್ವದ ಬಗ್ಗೆ ವಿವರಿಸಿದರು. ಬೈಮನ ಜ್ಯೋತಿ ತಿಮ್ಮಯ್ಯ ಅವರು ಗುರುಪೂರ್ಣಿಮೆಯ ಕುರಿತು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಈ…

Read More

ನಾಪೋಕ್ಲು ಜು.12 NEWS DESK : ನೆಲಜಿ ಗ್ರಾಮದ ಸಹಕಾರ ದವಸ ಭಂಡಾರದ (ನಂ.94ನೇ) ಮುಂದಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಬಾಳೆಯಡ ಪಿ.ರಾಜ ಕುಂಞಪ್ಪ ಆಯ್ಕೆಯಾಗಿದ್ದಾರೆ. ಸಂಘದ ಆಡಳಿತ ಮಂಡಳಿಯ ಪದಾಧಿಕಾರಿಗಳ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಬದಂಜೆಟ್ಟಿರ ಬಿ.ದೇವಿ ದೇವಯ್ಯ, ಕಾರ್ಯದರ್ಶಿಯಾಗಿ ಮಾಳೆಯಂಡ ಸಿ.ಈರಪ್ಪ ಆಗಿದ್ದಾರೆ. ನಿರ್ದೇಶಕರುಗಳಾಗಿ ಅಪ್ಪುಮಣಿಯಂಡ ಎಂ.ನವೀನ ಉತ್ತಯ್ಯ, ಚೀಯಕಪೂವಂಡ ಎಂ.ತಮ್ಮನಿ ಅಪ್ಪಚ್ಚು, ಕೋಟೆರ ಎಂ.ಪ್ರಸಾದ್ ಜೋಯಪ್ಪ, ಚೀಯಕಪೂವಂಡ ಸುಜಾ ಪೆಮ್ಮಯ್ಯ, ಕೈಬುಲಿರ ಎಸ್. ಉಮೇಶ್ ಉತ್ತಪ್ಪ, ಮಡಿವಾಳರ ಬಿ.ಬೆಳ್ಳಿಯಪ್ಪ, ಕೈಬುಲಿರ ಜಿ.ಭಾರತಿ, ಚೀಯಕಪೂವಂಡ ಎ.ಚಂಪ ಸೀತವ್ವ ಆಯ್ಕೆಯಾಗಿದ್ದಾರೆ. ಸಂಘದ ಚುನಾವಣಾ ಅಧಿಕಾರಿಯಾಗಿ ಪ್ರದೀಪ್ ಕುಮಾರ್ ಕಾರ್ಯನಿರ್ವಹಿಸಿದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಜು.12 NEWS DESK : ದೇಶ ಕಾಯೋಣ ಬನ್ನಿ ಎಂದು ವಿದ್ಯಾರ್ಥಿಗಳಿಗೆ ಯೋಧ ಎಂ.ಬಿ ಬೆಳ್ಳಿಯಪ್ಪ ಅವರು ಕರೆನೀಡಿದರು, ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಇದೇ ಸಂಸ್ಥೆಯಲ್ಲಿ ಐದು ವರ್ಷಗಳ ಕಾಲ ಅಧ್ಯಯನ ಮಾಡಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂ.ಬಿ.ಬೆಳ್ಳಿಯಪ್ಪ ಆಪರೇಷನ್ ಸಿಂಧೂರ್ ನಲ್ಲಿಯೂ ಕಾರ್ಯವನ್ನು ನಿರ್ವಹಿಸಿ, ತಮ್ಮ ಕಾರ್ಯದಕ್ಷತೆಯನ್ನು ಮೆರೆದಿದರು. ವಿದ್ಯಾರ್ಥಿಗಳಿಗೆ ತಮ್ಮ ಸೇನೆಯ ಅನುಭವವನ್ನು ಹಂಚಿಕೊಂಡು ಸೇನೆಗೆ ಸೇರುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ಉನ್ನತಿಯನ್ನು ಹೊಂದಬೇಕಾದರೆ ಕಾರ್ಯ ಸಾಧನೆಗೆ ಶಿಸ್ತು ಮತ್ತು ಪ್ರಾಮಾಣಿಕ ಪ್ರಯತ್ನ ಬೇಕು ಎಂದು ಕಿವಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜು ನ ಪ್ರಾಂಶುಪಾಲರಾದ ಡಿ.ಎಸ್.ರಾಮಕೃಷ್ಣ ವಹಿಸಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರದ ಸಿ.ಆರ್.ಲೋಕೇಶ್, ಉಪನ್ಯಾಸಕರು ಅಧ್ಯಾಪಕರು ಸಭೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಮುಫೀದಾ ಸ್ವಾಗತಿಸಿದರು. ರಾಹುಲ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಸ್ಪಂದನ್ ವಂದಿಸಿದರು. ವರದಿ : ದುಗ್ಗಳ ಸದಾನಂದ 

Read More

ಪಾಲಿಬೆಟ್ಟ ಜು.12 NEWS DESK : ಪತ್ರಕರ್ತರು ಸುದ್ದಿಗೆ ಮಾತ್ರ ಸೀಮಿತವಾಗದೆ ಸಾಮಾಜಿಕ ಕಳಕಳಿಯೊಂದಿಗೆ ಸಮಾಜಮುಖಿ ಕಾರ್ಯಗಳನ್ನು ಮಾಡುವುದರ ಮೂಲಕ ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳ ಶಿಕ್ಷಣ ಕಲಿಕಗೆ ನೆರವಾಗುತ್ತಿರುವ ಪರಿಣಾಮವೇ ಬೆಂಗಳೂರಿನ ಸಮಾಜ ಸೇವಾ ಸಂಸ್ಥೆಗಳು ಬ್ಯಾಗ್ ಕಲಿಕಾ ಪರಿಕರಗಳನ್ನು ಸರ್ಕಾರಿ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿತರಣೆ ಮಾಡಿ ಮಾದರಿಯಾಗಿದ್ದಾರೆ ಎಂದು ಜಿಲ್ಲಾ ಪಂಚಾಯತಿ ಸಾಮಾಜಿಕ ನ್ಯಾಯ ಸಮಿತಿಯ ಮಾಜಿ ಅಧ್ಯಕ್ಷ ಮೂಕೊಂಡ ವಿಜು ಸುಬ್ರಮಣಿ ಮೆಚ್ಚುಗೆ ವ್ಯಕ್ತಪಡಿಸಿದರು. ಪಾಲಿಬೆಟ್ಟ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ U.ST ಸಂಸ್ಥೆ ಬೆಂಗಳೂರು, ಬನವಾಸಿ ಕನ್ನಡಿಗರು, ಕನ್ನಡಮಯ ಟ್ರಸ್ಟ್ ಬೆಂಗಳೂರು, ನಮ್ಮ ಕೊಡಗು ತಂಡ ಮತ್ತು ಕೊಡಗು ಪತ್ರಕರ್ತರ ಸಂಘದ ಸಂಯುಕ್ತ ಆಶ್ರದಲ್ಲಿ ನಡೆದ ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ಹೆಚ್ಚಾಗಿ ಆಗಮಿಸುತ್ತಿದ್ದು ವಿದ್ಯಾರ್ಥಿಗಳ ಶಿಕ್ಷಣದ ಭವಿಷ್ಯಕ್ಕೆ ನೆರವಾಗಲು ಸರ್ಕಾರಗಳು ಹಾಗೂ ವಿವಿಧ ಸಮಾಜ ಸೇವಾ ಸಂಸ್ಥೆಗಳು ಎಲ್ಲ ರೀತಿಯ ಸಹಕಾರ ನೀಡುತ್ತಿದ್ದು…

Read More

ಬೆಂಗಳೂರು ಜು.14 NEWS DESK : ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಿಲುಕಿ 11 ಜನ ಮೃತಪಟ್ಟಿದ್ದ ದುರಂತದ ತನಿಖೆಗಾಗಿ, ಸರಕಾರ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಡಿ’ಕುನ್ಹ ಅವರು ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ  ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಮತ್ತು ಇತರರು ಉಪಸಿತರಿದ್ದರು.  

Read More

ಮಾಹಿತಿ -ಭಾಗ 2 ದೇಶದ 11 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿಯಿರುವ 5208 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಪೂರ್ವ ಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಮೊದಲ ಬಾರಿಗೆ ವ್ಯಕ್ತಿತ್ವ ಪರೀಕ್ಷೆಯ ಜೊತೆಯಲ್ಲಿ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಅರ್ಜಿ ಸಲ್ಲಿಕೆ ಮತ್ತಿತರ ವಿವರಗಳನ್ನು ಭಾಗ -1 ರಲ್ಲಿ ನೀಡಲಾಗಿತ್ತು. ಪರೀಕ್ಷೆಯಲ್ಲಿ ಆದ ಬಹು ಮುಖ್ಯ ಬದಲಾವಣೆ ಕುರಿತಾದ ವಿಸ್ತೃತ ಮಾಹಿತಿ ಇದೆ. ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು: ಅಭ್ಯರ್ಥಿ ಬ್ಯಾಂಕ್ ಆಯ್ಕೆ ಮಾಡಿಕೊಳ್ಳುವುದಕ್ಕೆ ಆನ್ಲೈನ್ ಅರ್ಜಿ ನಮೂನೆಯಲ್ಲಿ ಬ್ಯಾಂಕ್ ಆದ್ಯತೆಯ ಆದೇಶವನ್ನು ಅಳವಡಿಸಲಾಗಿದೆ. ಅಭ್ಯರ್ಥಿಗಳು ಈ ಹಂತದಲ್ಲಿ ಅವರ ಬ್ಯಾಂಕ್ ಗಳ ಆದ್ಯತೆಯ ಕ್ರಮವನ್ನು ಅಗತ್ಯವಾಗಿ ಸೂಚಿಸಬೇಕು. ಯಾವ್ಯಾವ ಬ್ಯಾಂಕ್ ಗಳಲ್ಲಿ ಎಷ್ಟೆಷ್ಟು ಹುದ್ದೆಗಳಿವೆ ಹಾಗೂ ನಮ್ಮ ರಾಜ್ಯದಲ್ಲಿ ಶಾಖೆಗಳಿವೆಯಾ ಎಂಬುದರ ಮೇಲೆ ನಿಮ್ಮ ಆದ್ಯತೆಯ ಆಯ್ಕೆ ಇರಲಿ. ಒಮ್ಮೆ ನೀವು ಆಯ್ಕೆಯಾದರೆ ನಂತರದ ದಿನಗಳಲ್ಲಿ ಬ್ಯಾಂಕ್/ಸ್ಥಳ ಬದಲಾವಣೆಗಾಗಿ ಸಲ್ಲಿಸುವ ವಿನಂತಿಯನ್ನು ಪರಿಗಣಿಸಲಾ ಗುವುದಿಲ್ಲ. ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ…

Read More

ಮಾಹಿತಿ ಭಾಗ 1 ದೇಶದ 11 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿಯಿರುವ 5208 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಪೂರ್ವ ಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ,ಮೊದಲ ಬಾರಿಗೆ ವ್ಯಕ್ತಿತ್ವ ಪರೀಕ್ಷೆಯ ಜೊತೆಯಲ್ಲಿ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಅರ್ಜಿ ಸಲ್ಲಿಕೆ ಮತ್ತಿತರ ವಿವರಗಳು ಇಲ್ಲಿವೆ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್), ಈ ವರ್ಷದಲ್ಲಿ ಇಲ್ಲಿಯವರೆಗೆ 11,516ಕ್ಕೂ ಹೆಚ್ಚಿನ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಂತಾಗಿದೆ.(ಎಸ್ ಬಿ ಆಯ್ ಹಾಗೂ ಲೋಕಲ್ ಬ್ಯಾಂಕ ಆಫೀಸರ್/ ಇಂಟರ್ನ ಷಿಪ್ ಹೊರತುಪಡಿಸಿ) ಪದವೀಧರ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿ ಕೊಳ್ಳಬೇಕಾಗಿದೆ.ಎಸ್ಬಿಐ, ಬ್ಯಾಂಕ್ ಆಫ್ ಬರೋಡಾ ಸೇರಿದಂತೆ ವಿವಿಧ ಬ್ಯಾಂಕ್ಗಳು ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೂ ನೇಮಕಾತಿ ನಡೆಸುತ್ತಿವೆ.ಈ ಮೂಲಕ ಒಟ್ಟಾರೆ, 50,000ಕ್ಕೂ ಅಧಿಕ ಸಿಬ್ಬಂದಿ ಬ್ಯಾಂಕ್ ನ್ನು 2025-26 ನೇ ವರ್ಷಕ್ಕೆ ಪ್ರವೇಶಿಸಲಿದ್ದಾರೆ. ಬ್ಯಾಂಕ್‍ಗಳಲ್ಲಿ ಅಪ್ರೆಂಟಿಸ್ಷಿಪ್ : ಇತ್ತೀಚಿನ ವರ್ಷಗಳಲ್ಲಿ ಪಿಎಮ್ ಇಂಟರ್ನ ಷಿಪ್ ಯೋಜನೆಯಡಿ ಪದವೀಧರರಿಗೆ ತರಬೇತಿ ನೀಡಲು ಬ್ಯಾಂಕ್ಗಳು ಸ್ಟೈಪೆಂಡ್…

Read More

ವಿರಾಜಪೇಟೆ ಜು.12 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‍ನ ಕೃಷಿ ಕಾರ್ಯಕ್ರಮದಡಿಯಲ್ಲಿ ಕಳತ್ಮಾಡು ಕಾರ್ಯಕ್ಷೇತ್ರದ ಕಳತ್ಮಾಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ಕಳತ್ಮಾಡು ಶಾಲಾ ಮುಖ್ಯ ಶಿಕ್ಷಕ ಭಾಗ್ಯವತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಐ.ಕ್ಯಮ್. ಯುವಸೇನಾ ಅಧ್ಯಕ್ಷ ಎನ್.ಹೆಚ್.ವಿಘ್ನೇಶ ಮಾತನಾಡಿ, ಗಿಡಮರಗಳನ್ನು ಬೆಳೆಸಬೇಕು. ನೆಟ್ಟ ಗಿಡಗಳನ್ನು ಪೋಷಣೆ ಮಾಡಬೇಕು. ಪರಿಸರ ಸಂರಕ್ಷಣೆಯಿಂದ ಶುದ್ಧವಾದ ಗಾಳಿ, ನೀರು ಸಿಗುತ್ತದೆ. ಪರಿಸರದ ರಕ್ಷಣೆ ಮಾಡದೆ ಇದ್ದರೆ ಜೀವ ಸಂಕುಲವೇ ಅವನತಿಯತ್ತ ಸಾಗುತ್ತದೆ ಎಂದರಲ್ಲದೆ ವನಮಹೋತ್ಸವ ಹೇಗೆ ಮಾಡಬೇಕು ಎಂದು ಮಾಹಿತಿ ನೀಡಿದರು. ಎಸ್‍ಡಿಎಂಸಿ ಅಧ್ಯಕ್ಷೆ ಉಷಾ ಮಾತನಾಡಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮಗಳಿಂದ ಮರ ಗಿಡಗಳ ಬಗ್ಗೆ ಅರಿವು ಮೂಡಿಸಲಾಗಿದೆ ಎಂದರು. ಒಕ್ಕೂಟದ ಅಧ್ಯಕ್ಷರಾದ ಸಿ.ಪಿ. ಡಾಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಾಗೃತಿ ಕಾರ್ಯಕ್ರಮದ…

Read More