ಲೇಖಕ: admin

ಮಡಿಕೇರಿ ಜು.11 NEWS DESK : ಜಿಲ್ಲೆಯ ಲೈನ್‍ಮನೆಗಳಲ್ಲಿ ವಾಸಿಸುವ ಬುಡಕಟ್ಟು ಆದಿವಾಸಿಯ 2000 ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ಹಕ್ಕು ಪತ್ರವನ್ನು ಎರಡು ಮೂರು ತಿಂಗಳಲ್ಲಿ ವಿತರಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ನಿವೇಶನ ಹಕ್ಕು ಪತ್ರ ನೀಡುವ ಸಂಬಂಧ ಆಯಾಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಜಾಗ ಗುರುತಿಸಲಾಗಿದ್ದು, ಮಾನ್ಯ ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿ ನಿವೇಶನ ಹಕ್ಕುಪತ್ರ ವಿತರಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ಮಾಹಿತಿ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನೇಕ ಬುಡಕಟ್ಟು ಸಮಾಜದವರು ಬಡವರಿದ್ದು, ಇವರಿಗೆ ನಿವೇಶನ ಇಲ್ಲದವರಿಗೆ ಹಕ್ಕು ಪತ್ರ ನೀಡಲು ಅಭಿಯಾನ ಮಾದರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುಮಾರು 1500 ಕ್ಕೂ ಹೆಚ್ಚು ನಿವೇಶನ ರಹಿತರಿದ್ದು, ನಿವೇಶನ ಹಕ್ಕುಪತ್ರ ನೀಡಲು ಮುಂದಾಗಲಾಗಿದೆ. ಈಗಾಗಲೇ ಸರ್ಕಾರಿ ಜಾಗ ಗುರುತಿಸಲಾಗಿದೆ ಎಂದರು.…

Read More

ಮಡಿಕೇರಿ ಜು.11 NEWS DESK : ಕೊಡಗು ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆಯಡಿಯಲ್ಲಿ ‘ಕೇಂದ್ರ ಸರ್ಕಾರದ ಜಾತಿ ಮತ್ತು ಜನಗಣತಿಯ ಕುರಿತು ಸ್ಪಷ್ಟತೆ ಹಾಗೂ ಜನಗಣತಿಯ ಹಿನ್ನೋಟ ಮತ್ತು ಮುನ್ನೋಟ’ ಎಂಬ ವಿಷಯದ ಕುರಿತು ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ದೇಶದಲ್ಲಿ ಅನೇಕ ಸಾಮಾಜಿಕ ಸುಧಾರಣೆಗಳನ್ನು ತಂದಿದ್ದು, ಇದೀಗ ಜಾತಿ ಮತ್ತು ಜನಗಣತಿಯ ದಿಟ್ಟ ಹೆಜ್ಜೆ ಇಟ್ಟಿದೆ. ಈ ಮಹತ್ವದ ಕಾರ್ಯದ ಯಶಸ್ಸಿಗೆ ಕಾರ್ಯಕರ್ತರ ಪಾತ್ರವೂ ಅಗತ್ಯ ಎಂದರು. ಪ್ರತಿಯೊಬ್ಬರು ಪಕ್ಷ ಸಂಘಟನೆಯ ಮೂಲಕ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಕೈಬಲ ಪಡಿಸಬೇಕು ಎಂದು ಕರೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ಪೂಜಾರಿ, ಎಸ್.ಎನ್.ರಘು, ಉಪಾಧ್ಯಕ್ಷ…

Read More

ಮಡಿಕೇರಿ ಜು.11 NEWS DESK : ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯಾವುದೇ ಅನಾಹುತ ಸಂಭವಿಸದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜೂನ್, 26 ರಂದು ನಡೆದ ಕೆಡಿಪಿ ಸಭೆಯಲ್ಲಿ ಸೂಚಿಸಲಾಗಿದ್ದ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಹೆಚ್ಚಿನ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಹಲವು ರಸ್ತೆಗಳು ಗುಂಡಿ ಬಿದ್ದಿದ್ದು, ಸದ್ಯ ವೆಟ್‍ಮಿಕ್ಸ್ ಹಾಕಬೇಕು ಮತ್ತು ಶೀಘ್ರ ರಸ್ತೆ ಗುಂಡಿ ಮುಚ್ಚುವ ಕಾರ್ಯ ಆಗಬೇಕು ಎಂದರು. ಅಂಗನವಾಡಿ, ಶಾಲೆ, ವಿದ್ಯಾರ್ಥಿ ನಿಲಯ, ವಸತಿ ಶಾಲೆಗಳು ಸೇರಿದಂತೆ ಕಟ್ಟಡ ಸುಸ್ಥಿತಿ ಸಂಬಂಧಿಸಿದಂತೆ ವರದಿ ನೀಡಲು ಸೂಚಿಸಲಾಗಿತ್ತು. ಅದರಂತೆ ಅಧಿಕಾರಿಗಳು ವರದಿ ನೀಡಿದ್ದು, ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಕಳೆದ ಬಾರಿಯ…

Read More

ಮಡಿಕೇರಿ ಜು.11 NEWS DESK : ಸೋಮವಾರಪೇಟೆ ತಾಲ್ಲೂಕು ಹೋಂಸ್ಟೇ ಅಂಡ್ ಟೂರಿಸಂ ಅಸೋಸಿಯೇಷನ್ ನ ತ್ರೈಮಾಸಿಕ ಸಭೆಯು ದಿ ಬ್ಲಾಸಂ ಕೂರ್ಗ್ ರೆಸಾರ್ಟ್ ಕೋರ್ ಕೊಲ್ಲಿಯಲ್ಲಿ ನಡೆಯಿತು. ಸಿ.ಕೆ.ರೋಹಿತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಪ್ರವಾಸೋದ್ಯಮ ಸಂಬಂಧಪಟ್ಟ ಅಭಿವೃದ್ಧಿ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವ ಬಗ್ಗೆ ಚರ್ಚಿಸಲಾಯಿತು. ಪ್ರವಾಸೋದ್ಯಮದವರಿಗೆ ಅನುಕೂಲವಾಗುವಂತಹ ಪ್ರವಾಸೋದ್ಯಮ ಸ್ಥಳಗಳ ಮಾರ್ಗಸೂಚಿ ಫಲಕಗಳು ಅಳವಡಿಸುವುದು, ಪ್ರವಾಸೋದ್ಯಮ ಸ್ಥಳಗಳ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು ಮತ್ತು ಸಂಘದ ವತಿಯಿಂದ ಕಾರೆಕೊಪ್ಪ ಜಂಕ್ಷನ್ ಬಳಿ ಬಸ್ ತಂಗುದಾಣನ್ನು ನಿರ್ಮಿಸುವಂತಹ ಕೆಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಆರ್ಟ್ ಆಫ್ ಲಿವಿಂಗ್ ಶಿಕ್ಷಕಿ ರಾಗಿಣಿ ಅವರು ಯೋಗದ ಪ್ರಾಮುಖ್ಯತೆ ಬಗ್ಗೆ ಮಾತನಾಡಿದರು. ಅಲ್ಲದೆ ಸೋಮವಾರಪೇಟೆ ತಾಲೂಕಿನಲ್ಲಿ ನೂತನವಾಗಿ ಆರ್ಟ್ ಆಫ್ ಲಿವಿಂಗ್ ಕೇಂದ್ರ  ತೆರೆದಿರುವ ಬಗ್ಗೆ ಮತ್ತು ಯೋಗ ಶಿಬಿರವನ್ನು ಸದುಉಪಯೋಗ ಪಡೆಸಿಕೊಳ್ಳುವಂತೆ ತಿಳಿಸಿದರು. ಸಭೆಯಲ್ಲಿ ದಿ ಬ್ಲಾಸಂ ಕೂರ್ಗ್ ರೆಸಾರ್ಟ್ ಮಾಲೀಕರಾದ ಓಂ ಪ್ರಕಾಶ್ ಚೌದ್ರಿ,…

Read More

ಸೋಮವಾರಪೇಟೆ ಜು.11 NEWS DESK : ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ ನವರ ನಿಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಕಂಬನಿ ಮಿಡಿದಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ತಿಪ್ಪಣ್ಣ ನವರು ತೊಂಬತ್ತರ ದಶಕದಲ್ಲಿ ಭೀಮಣ್ಣ ಖಂಡ್ರೆಯವರೊಂದಿಗೆ ರಾಜ್ಯವ್ಯಾಪಿ ಪ್ರವಾಸಮಾಡಿ ಸಮುದಾಯವನ್ನು ಒಗ್ಗೂಡಿಸುವ ಹಾಗೂ ಮಹಾಸಭಾವನ್ನು ಬಲಿಷ್ಠ ಗೊಳಿಸಿದರು. ಈ ಸಂದರ್ಭ ಸೋಮವಾರಪೇಟೆಗೂ ಆಗಮಿಸಿ ಸಭೆ ನಡೆಸಿದ ಬಗ್ಗೆ ಮಹೇಶ್ ಸ್ಮರಿಸಿಕೊಂಡರು. ತಮ್ಮ ಇಳಿ ವಯಸ್ಸಿನಲ್ಲಿಯು ಮಹಾಸಭಾದ ರಾಜ್ಯಾಧ್ಯಕ್ಷರಾಗಿ ಹಲವು ವರ್ಷ ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದಿದ್ದಾರೆ.

Read More

ಕುಶಾಲನಗರ ಜು.11 NEWS DESK : ಹನ್ನೆರಡನೇ ಶತಮಾನದಲ್ಲಿ ಬೇರು ಬಿಟ್ಟಿದ್ದ ಮೇಲು ಕೀಳು, ವರ್ಣ ಬೇಧ, ವರ್ಗ ಬೇಧ, ಅಸಮಾನತೆ, ಬಡವ – ಬಲ್ಲಿದ, ಜಾತಿ ಪದ್ಧತಿಯ ನಿವಾರಣೆಯ ಭಾಗವಾಗಿ ಅನುಭವ ಮಂಟಪದಲ್ಲಿ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿದ್ದ ಹಡಪದ ಅಪ್ಪಣ್ಣ ಅವರನ್ನು ನೇಮಿಸುವ ಮೂಲಕ ಬಸವಣ್ಣನವರ ಬಳಿ ಬರುವ ಎಲ್ಲರೂ ಹಡಪದ ಅಪ್ಪಣ್ಣ ನವರ ಮೂಲಕವೇ ಭೇಟಿಯಾಗಬೇಕೆಂಬ ಆಶಯಕ್ಕೆ ಅನುಗುಣವಾಗಿ ಸತ್ಯ ಶುದ್ದ ಕಾಯಕ ಪ್ರಜ್ಞೆಯ ಹಡಪದ ಅಪ್ಪಣ್ಣ 114 ಕ್ಕೂ ಹೆಚ್ಚು ವಚನಗಳನ್ನು ರಚಿಸುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು ಎಂದು ಕೊಡಗು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹೇಂದ್ರಕುಮಾರ್ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಳ ಜಾತಿಯವರನ್ನು ಕೀಳಾಗಿ ಕಾಣುತ್ತಾ ಮೂಢನಂಬಿಕೆ ಹಾಗೂ ಶೋಷಣೆಯನ್ನು ಬಿತ್ತುವ…

Read More

ಭಾಗಮಂಡಲ ಜು.11 NEWS DESK : ಮಡಿಕೇರಿಯಿಂದ ತಲಕಾವೇರಿ ಸಂಚಾರಕ್ಕೆ ಉತ್ತಮ ರಸ್ತೆಗಳ ನಿರ್ಮಾಣವಾಗಬೇಕಾಗಿದೆ. ಕುಂದಚೇರಿ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಕೊಡಗು, ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಕುಂದಚೇರಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ  ಶರತ್ ಪದಕಲ್ಲು ಮನವಿ ಸಲ್ಲಿಸಿದರು. ಕುಂದಚೇರಿ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಗ್ರಾಮದ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ವಿಧಾನ ಸಭಾ ಅಧ್ಯಕ್ಷ ಕೆ.ಜಿ ಬೋಪಯ್ಯ, ಮಾಜಿ ಸಚಿವ ಅಪ್ಪಚ್ಚು ರಂಜನ್, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗೇಶ್ ಕುಂದಾಲ್ಪಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ಅಶ್ವಿನ್ ಕಾಂಗಿರ, ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ, ಮನುಮುತ್ತಪ್ಪ, ವಿ.ಎಸ್.ಎಸ್.ಎನ್ ಅಧ್ಯಕ್ಷ  ಶ್ರೀಧರ್, ನಿರ್ದೇಶಕರುಗಳು, ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು,  ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಇದ್ದರು. ಈ ಸಂದರ್ಭ ಸಿಂಗತೂರು ಗ್ರಾಮದ ಬಹು ವರ್ಷಗಳ ಬೇಡಿಕೆಯ ಮಹಾವಿಷ್ಣು ದೇವಸ್ಥಾನದ ಜೀರ್ಣೋದ್ಧಾರದ ವ್ಯವಸ್ಥೆಯನ್ನುವ ವೀಕ್ಷಿಸಿದ ಸಂಸದರು, ಜೀರ್ಣೋದ್ಧಾರ…

Read More

ಮಡಿಕೇರಿ ಜು.11 NEWS DESK : ಭಾರತ ಸರ್ಕಾರದ ಕೇಂದ್ರೀಯ ರೇಷ್ಮೆ ಮಂಡಳಿಗೆ 2024-25ನೇ ಸಾಲಿನ ನೇಮಕಾತಿ ಅಧಿಸೂಚನೆಗನ್ವಯ ಮಗ್ಗುಲ ಗ್ರಾಮದ ಕೆ.ಬಿ.ಭರತ್ ವಿಜ್ಞಾನಿಯಾಗಿ ಆಯ್ಕೆಯಾಗಿದ್ದಾರೆ. ಇವರು ಪ್ರಸ್ತುತ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ರೇಷ್ಮೆ ಕೃಷಿಯಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕಗಳನ್ನು ಪಡೆದು, ಆಂಧ್ರ ಪ್ರದೇಶದ ರಾಜ ಮಂಡ್ರಿಯ ಐ ಟಿ ಸಿ ಲಿಮಿಟೆಡ್ ಅಗ್ರಿ ಬಿಸಿನೆಸ್ ಡಿವಿಷನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಭರತ್ ಮಗ್ಗುಲ ಗ್ರಾಮದ ದಿ. ಕುಪ್ಪಚ್ಚಿರ ಭೀಮಯ್ಯ ಮತ್ತು ಕವಿತಾ ದಂಪತಿಯ ಪುತ್ರ.

Read More

ಮಡಿಕೇರಿ ಜು.11 NEWS DESK : ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧವು ಸಂವೇದನಾಶೀಲವಾದುದು, ಮನುಷ್ಯನಿಗಿರುವಷ್ಟೇ ಸ್ವಾತಂತ್ರ್ಯ ಮತ್ತು ಸಮಾನ ಹಕ್ಕುಗಳು ಈ ಭೂಮಿಯಲ್ಲಿ ಜೀವಿಸುತ್ತಿರುವ ಪ್ರಾಣಿ ಸಂಕುಲಕ್ಕೂ ಇದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಿಸಿದರು. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್, ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ಕೊಡಗು ಹಾಗೂ ಕೊಡಗು ವಿಶ್ವವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಕೇಂದ್ರ ಆವರಣದಲ್ಲಿ “ವಿಶ್ವ ಪ್ರಾಣಿ-ಜನ್ಯರೋಗಗಳ” ದಿನದ ಅಂಗವಾಗಿ “ವನ್ಯಜೀವಿ: ಪ್ರಾಣಿಜನ್ಯರೋಗಗಳು” ವಿಷಯದ ಕುರಿತು ನಡೆದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಾಣಿಗಳು ಮತ್ತು ಮನುಷ್ಯರ ನಡುವೆ ಹರಡುವ ಪ್ರಾಣಿಜನ್ಯ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತೀ ವರ್ಷ ಜು.6 ರಂದು ಪ್ರಾಣಿಜನ್ಯ ದಿನವನ್ನು ಆಚರಣೆ ಮಾಡಲಾಗುತ್ತದೆ. ಪಶುವೈದ್ಯಕೀಯ ವೃತ್ತಿಯು ಪ್ರಾಣಿಗಳ ಆರೋಗ್ಯ ಮತ್ತು ಯೋಗಕ್ಷೇಮ ಹಾಗೂ ಸಾರ್ವಜನಿಕ ಆರೋಗ್ಯದ ರಕ್ಷಣೆಗೆ ಮೀಸಲಾಗಿರುವ ಒಂದು ಉದಾತ್ತ…

Read More

ಮಡಿಕೇರಿ ಜು.11 NEWS DESK : ಕುಶಾಲನಗರದ ಅತ್ತೂರು ಜ್ಞಾನಗಂಗಾ ವಸತಿಶಾಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಮಂತ್ರಿಮಂಡಲದ ಪದಗ್ರಹಣ ಹಾಗೂ ಗುರು ಪೂರ್ಣಿಮಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಶಾಲಾ ಚುನಾವಣೆಯ ಮೂಲಕ ಆಯ್ಕೆಯಾದ ಶಾಲಾ ನಾಯಕಿ 10ನೇ ತರಗತಿಯ ಟಿ.ಎಸ್.ಶ್ರೀನಿಧಿ ಹಾಗೂ ಉಪನಾಯಕ 9ನೇ ತರಗತಿಯ ಎಂ.ಶಶಾಂಕ್ ಸೇರಿದಂತೆ ಮಂತ್ರಿಮಂಡಲದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರಾದ ಎಸ್.ಎಂ.ಸತ್ಯಸುಲೋಚನ ಪ್ರಮಾಣ ವಚನ ಬೋಧಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಕೆ.ಸುಧೀರ್ ಅವರು ನಾಯಕರಾಗಿ ಆಯ್ಕೆಯಾದವರಿಗೆ ಜವಾಬ್ದಾರಿಗಳು ಹೆಚ್ಚುತ್ತದೆ, ಪ್ರತಿಯೊಬ್ಬರು ತಮ್ಮ ಕರ್ತವ್ಯವನ್ನು ಶಿಸ್ತಿನಿಂದ ಪಾಲಿಸಬೇಕು. ಅಲ್ಲದೆ ನಾಯಕರಿಗೆ ಇರಬೇಕಾದ ಜವಾಬ್ದಾರಿಗಳೇನು ಎಂದು ತಿಳಿದುಕೊಂಡು ಅದನ್ನು ಪಾಲಿಸಬೇಕು ಎಂದು ಕರೆ ನೀಡಿದರು. ಪರಿಶ್ರಮ, ಪ್ರಾಮಾಣಿಕತೆ, ಕರ್ತವ್ಯನಿಷ್ಠೆಯನ್ನು ಅಳವಡಿಸಿಕೊಂಡರೆ ಉತ್ತಮ ನಾಯಕನಾಗಲು ಸಾಧ್ಯವೆಂದು ಅಭಿಪ್ರಾಯಪಟ್ಟ ಅವರು, ಆಯ್ಕೆಯಾದವರೆಲ್ಲರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಎಂದು ಶುಭ ಕೋರಿದರು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಬಿ.ಎಸ್.ನಿಂಗಪ್ಪ ಅವರು ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕ್ತಿ…

Read More