ಕುಶಾಲನಗರ ಜೂ.16 NEWS DESK : ಶೇ.25 ರ ನಿಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ.ಶಂಶುದ್ಧೀನ್ ಪಂಚಾಯಿತಿ ಸಭಾಂಗಣದಲ್ಲಿ ಹೊಲಿಗೆಯಂತ್ರ ವಿತರಿಸಿದರು. ನಂತರ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಮಟ್ಟವನ್ನು ಸುಧಾರಿಸುವ ದೃಷ್ಟಿಯಿಂದ ಶೇ.25 ನಿಧಿಯಲ್ಲಿ ಹೊಲಿಗೆ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಫಲಾನುಭವಿಗಳು, ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಸಹಾಯ ಧನ, ಅಂತ್ಯಸಂಸ್ಕಾರದ ಹಣ ನೀಡಲಾಗುವುದು. ಸಂಬಂಧಿಸಿದವರು ಪಂಚಾಯಿತಿಗೆ ಅರ್ಜಿ ನೀಡಿ ಇದರ ಉಪಯೋಗ ಪಡಿಸಿಕೊಳ್ಳಬೇಕು ಎಂದರು. ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಮಾತನಾಡಿ, ಶೇ.25 ರ ನಿಧಿಯಲ್ಲಿ ಹೊಲಿಗೆ ಯಂತ್ರ ವಿತರಿಸಲಾಗುತ್ತಿದೆ. ಹಾಗೆಯೇ ಪರಿಶಿಷ್ಟ ಜಾತಿ ಹಾಗೂ ಪಂಗಡದವರು ಸರ್ಕಾರ ನೀಡುವ ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದರು. ಈ ಸಂದರ್ಭ ಲೆಕ್ಕ ಸಹಾಯಕಿ ಮಮತ, ಬಿಲ್ ಕಲೆಕ್ಟರ್ ಅವಿನಾಶ್, ಸಿಬ್ಬಂದಿಗಳಾದ ಪವಿತ್ರ, ಲೈನಾ ಇದ್ದರು.
ಲೇಖಕ: admin
ಗೋಣಿಕೊಪ್ಪ ಜೂ.16 NEWS DESK : ತೀವ್ರ ಮಳೆಯಿಂದ ಮನೆಯ ಹಿಂಬದಿ ಗೋಡೆ ಕುಸಿದು ಅಪಾರ ನಷ್ಟ ಅನುಭವಿಸಿದ ಪೊನ್ನಂಪೇಟೆ ಕೃಷ್ಣ ನಗರದ ಹೆಚ್.ಕೆ.ರವಿ ಅವರ ಕುಟುಂಬಕ್ಕೆ ಪರಿಹಾರ ಒದಗಿಸಿಕೊಡುವ ಭರವಸೆಯನ್ನು ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಲಪ್ಪ ನೀಡಿದರು. ಮನೆ ಗೋಡೆ ಕುಸಿದು ಸಂಕಷ್ಟದಲ್ಲಿರುವ ಕುಟುಂಬದವರನ್ನು ಭೇಟಿ ಮಾಡಿದ ಸುಜಾಕುಶಲಪ್ಪ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಮಳೆ ಹನಿ ಪರಿಹಾರ ಅನುದಾನದಿಂದ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾಮಾನ್ಯ ಜನರ ಬದುಕು ಸಂಕಷ್ಟಕ್ಕೆ ತಂದಿದೆ. ಅಲ್ಲಲ್ಲಿ ಮರಗಳು ಬಿದ್ದು ಹಾನಿ ಉಂಟು ಮಾಡುತ್ತಿದ್ದರೆ, ಮತ್ತೊಂದೆಡೆ ಮನೆಯ ಗೋಡೆಗಳು ಕುಸಿದು ಸಮಸ್ಯೆ ಎದುರಾಗುತ್ತಿದೆ. ಈ ಬಗ್ಗೆ ತಾಲೂಕಿನ ಆಡಳಿತ ಅಧಿಕಾರಿಗಳು ಮುಂಜಾಗೃತವಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾ ಭಾರತೀಯ ಜನತಾ ಪಾರ್ಟಿ ಅಧ್ಯಕ್ಷ ನಾಪಂಡ…
ಗೋಣಿಕೊಪ್ಪ ಜೂ.16 NEWS DESK : ಭಾವನಾತ್ಮಕ ವಿಚಾರಗಳಿಂದ ಚುನಾವಣೆ ಎದುರಿಸಲು ಸಾಧ್ಯವಿಲ್ಲ ಕಾರ್ಯಕರ್ತರು ಸಾಮಾನ್ಯ ಜನರ ಹೃದಯಸ್ಪರ್ಶಿಯಾಗಬೇಕು ಎಂದು ವಿಧಾನಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸಲಹೆ ನೀಡಿದರು. ಗೋಣಿಕೊಪ್ಪ ದುರ್ಗಾಬೋಜಿ ಸಭಾಂಗಣದಲ್ಲಿ ವಿರಾಜಪೇಟೆ ಬಿಜೆಪಿ ಮಂಡಲ ಆಯೋಜಿಸಿದ ಮೋದಿ ಸರ್ಕಾರದ 11 ವರ್ಷದ ಜನಪರ ಆಡಳಿತದ ವಿಚಾರ ವಿನಿಮಯ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ಪ್ರತಿಯೊಬ್ಬ ಭಾರತೀಯ ಪ್ರಜೆಗೂ ದೇಶ ಕಟ್ಟುವ ಮಹತ್ತರ ಜವಾಬ್ದಾರಿ ಇದೆ. ಅದನ್ನು ಸಮರ್ಪಕವಾಗಿ ನಿಭಾಯಿಸಲು, ಆ ಗುರಿಯತ್ತ ಸಾಗಲು ಒಬ್ಬ ನಾಯಕನ ಅಗತ್ಯ ಇದೆ. ಅಂತಹ ನಾಯಕ ಇಂದು ನಮಗೆ ಮೋದಿಯಾಗಿ ದೊರಕಿರುವುದು ಬಹುಜನ್ಮದ ಪುಣ್ಯ ಎಂದು ಶ್ಲಾಘಿಸಿದರು. ದೇಶ ಇಂದು ಆರ್ಥಿಕವಾಗಿ 4ನೇ ಸ್ಥಾನವನ್ನು ತಲುಪಿದೆ. ಈ ಪ್ರಗತಿ ನಮ್ಮ ಸುತ್ತಮುತ್ತಲಿನ ದೇಶಗಳಿಗೆ ಜೀರ್ಣಿಸಿಕೊಳ್ಳಲಾಗದ ವಿಚಾರವಾಗಿದ್ದರೂ, ಮೋದಿ ಸರ್ಕಾರ ಈ ದೇಶವನ್ನು ಮತ್ತಷ್ಟು ಪ್ರಗತಿಯ ಕಡೆಗೆ ಕೊಂಡೊಯ್ಯಲು ಸತಾಯಗತಾಯ ಪ್ರಯತ್ನ ನಡೆಸುತ್ತಿದ್ದಾರೆ. ಕೃಷಿ ಕ್ಷೇತ್ರ, ಶೈಕ್ಷಣಿಕ, ವಿಜ್ಞಾನಗಳಲ್ಲಿ ಪ್ರಗತಿಯನ್ನು ಕಂಡುಕೊಳ್ಳುತ್ತಿದೆ.…
ಮಡಿಕೇರಿ ಜೂ.16 NEWS DESK : ಶ್ರೀ ಕಾಟೂರ್ ನಾರಾಯಣನ್ ನಂಬ್ಯಾರ್ ಸ್ಮಾರಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕರಿಕೆ ಗ್ರಾಮ ಪಂಚಾಯತ್ ಹಾಗೂ ಅರಣ್ಯ ಇಲಾಖೆಯ ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಗಿಡ ನೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ವಲಯ ಅರಣ್ಯಾಧಿಕಾರಿ ಪರಶುರಾಮ, ಗ್ರಾ ಪಂ ಅಭಿವೃದ್ಧಿ ಅಧಿಕಾರಿ ಪಿ.ಪಿ.ಗಣಪತಿ, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಯಶೋಧ ಸ್ವಾಗತಿಸಿದರು. ಅರಣ್ಯ ಇಲಾಖೆ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣಿನ ಗಿಡವನ್ನು ವಿತರಿಸಲಾಯಿತು.
ಬೆಂಗಳೂರು ಜೂ.16 NEWS DESK : ಕರ್ನಾಟಕ ರಾಜ್ಯದ ಯಶಸ್ವಿಯಾಗಿ ನೋಂದಾಯಿಸಿದ ಅಭ್ಯರ್ಥಿಗಳಿಗೆ ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇ) ಅನ್ನು 2025ರ ಜೂನ್ 30 ರಿಂದ ಜುಲೈ 10 ರವರೆಗೆ ನಡೆಸಲಾಗುತ್ತಿದೆ. ಪರೀಕ್ಷೆಯ ಪ್ರವೇಶ ಪತ್ರಗಳು 2025ರ ಜೂನ್ 14 ರಿಂದ ಸೇನಾ ವೆಬ್ ಪೋರ್ಟಲ್ www.joinindianarmy.nic.in ನಲ್ಲಿ ಲಭ್ಯವಿದೆ. ಅಭ್ಯರ್ಥಿಗಳಿಗೆ ಸೂಚನೆಗಳು :: (ಎ).ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಈ ಬಗ್ಗೆ ಅವರ ಇ-ಮೇಲ್ ಮೂಲಕವೂ ಮಾಹಿತಿ ನೀಡಲಾಗುವುದು, (ಬಿ).ಪರೀಕ್ಷೆ ನಡೆಯುವ ದಿನಾಂಕವನ್ನು ಆಧರಿಸಿ ಕ್ರಮವಾಗಿ www.joinindianarmy.nic.in ವೆಬ್ಸೈಟ್ನಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಿ, (ಸಿ).ಆನ್ಲೈನ್ ಪರೀಕ್ಷೆಯನ್ನು 202ರ ಜೂನ್ 30 ರಿಂದ ಜುಲೈ 10ರವರೆಗೆ ವಿವಿಧ ಕೇಂದ್ರಗಳಲ್ಲಿ ವಿವಿಧ ಸಮಯಗಳಲ್ಲಿ ನಡೆಸಲಾಗುವುದು, (ಡಿ).ನಿಗದಿಪಡಿಸಿರುವ ದಿನಾಂಕ ಮತ್ತು ಸಮಯದ ಸ್ಲಾಟ್ನಲ್ಲಿ ತಮ್ಮ ಪರೀಕ್ಷಾ ಕೇಂದ್ರಗಳನ್ನು ಸಮಯಕ್ಕೆ ಸರಿಯಾಗಿ ತಲುಪಿ, (ಇ).ಜೆಐಎ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಲಾದ ಮೂಲ ಪ್ರವೇಶ ಪತ್ರವನ್ನು (ಕಲರ್ ಪ್ರಿಂಟ್ ಔಟ್) ಕೊಂಡೊಯ್ಯಿರಿ, (ಎಫ್).ನಿಮ್ಮ ಆಧಾರ್ ಕಾರ್ಡ್ ಅನ್ನು ಮೂಲ ಪ್ರತಿ…
ಮಡಿಕೇರಿ ಜೂ.16 NEWS DESK : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 48.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.28 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 913.84 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 488.06 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 80.55 ಮಿ.ಮೀ. ಕಳೆದ ವರ್ಷ ಇದೇ ದಿನ 0.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1383.07 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 679.07 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 47.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 953.05 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 435.85 ಮಿ.ಮೀ. ಮಳೆಯಾಗಿತ್ತು. ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 48.49 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ಮಡಿಕೇರಿ ಜೂ.16 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ, ಸ್ವ-ಆಡಳಿತ, ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು ಸೇರಿದಂತೆ ಕೊಡವರ ಪರವಾದ ಕಾನೂನು ಬದ್ಧ ಹಕ್ಕುಗಳ ಪ್ರತಿಪಾದನೆಯ ವಿಚಾರ ಸಂಕಿರಣ ಜೂ.18 ರಂದು ನಡೆಯಲಿದೆ ಎಂದು ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ಹೊರವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಅಂದು ಬೆಳಿಗ್ಗೆ 10.30 ಗಂಟೆಗೆ ನಡೆಯುವ ವಿಚಾರ ಸಂಕಿರಣದಲ್ಲಿ ಸುಪ್ರೀಂ ಕೋರ್ಟ್ ವಕೀಲ ವಿಕ್ರಮ್ ಹೆಗ್ಡೆ ಅವರು ಉಪನ್ಯಾಸ ನೀಡುವರು, ಇವರ ಪತ್ನಿ ಪ್ರಖ್ಯಾತ ಕಾನೂನು ತಜ್ಞೆ ಹಿಮಾ ಲಾರೆನ್ಸ್ ಉಪಸ್ಥಿತರಿರುವರು ಎಂದು ಎನ್.ಯು.ನಾಚಪ್ಪ ತಿಳಿಸಿದರು. ಪ್ರಾದೇಶಿಕ ಸ್ವಾಯತ್ತತೆಯ ಬೇಡಿಕೆಗಳ ಕುರಿತು ತಾವು ಹೊಂದಿರುವ ಪರಿಣತಿಯ ಆಧಾರದಲ್ಲಿ ವಿಕ್ರಮ್ ಹೆಗ್ಡೆ ಅವರು ಉಪನ್ಯಾಸ ನೀಡಲಿದ್ದಾರೆ. ಸಾಂವಿಧಾನಿಕ ಕಾನೂನಿನಲ್ಲಿ ಅವರ ಹಿನ್ನೆಲೆ ಮತ್ತು ಸಿಎನ್ಸಿ ಪರವಾಗಿ ಭಾರತದ ಸುಪ್ರಿಂಕೋರ್ಟ್ನಲ್ಲಿ ಕೊಡವ ಬಂದೂಕು ವಿನಾಯಿತಿ ಪ್ರಕರಣದಲ್ಲಿ ಅವರ ಪಾಲ್ಗೊಳ್ಳುವಿಕೆಯಿಂದ ಅವರ…
ಸೋಮವಾರಪೇಟೆ ಜೂ.16 NEWS DESK : ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಹಂತದಲ್ಲೇ ಇಂಗ್ಲೀಷ್ ಕಲಿಸುವ ನಿರ್ಧಾರ ಶ್ಲಾಘನೀಯ ಎಂದು ರೋಟರಿ ಕ್ಲಬ್ ಅಧ್ಯಕ್ಷ ಜೆ.ಕೆ.ಪೊನ್ನಪ್ಪ ಹೇಳಿದರು. ಗೋಣಿಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ಕೆಜಿ ಮತ್ತು ಯುಕೆಜಿಯ 19 ಮಕ್ಕಳಿಗೆ ಸಮವಸ್ತ್ರ ಖರೀದಿಸಲು 17 ಸಾವಿರ ರೂ.ಗಳನ್ನು ವಿತರಿಸಿ ಮಾತನಾಡಿದರು. ಕಳೆದ ಒಂದು ದಶಕಗಳಿಂದ ಗ್ರಾಮೀಣ ಭಾಗದ ಅತೀ ಹೆಚ್ಚು ಮಕ್ಕಳು ಇಂಗ್ಲೀಷ್ ಮಾಧ್ಯಮದಲ್ಲಿ ಕಲಿಯುತ್ತಿದ್ದಾರೆ. ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳನ್ನು ಗ್ರಾಮೀಣ ಭಾಗದ ವಿದ್ಯಾರ್ಥಿನಿ ಪಡೆದು ಜಿಲ್ಲೆಗೆ ಟಾಫರ್ ಆಗಿ, ರಾಜ್ಯದಲ್ಲಿ ಮೂರನೇ ಸ್ಥಾನ ಗಳಿಸಿದ್ದಾರೆ. ಆ ವಿದ್ಯಾರ್ಥಿ ಇಂಗ್ಲೀಷ್ ಮಾಧ್ಯಮದಲ್ಲಿ ಕಲಿತ್ತಿದ್ದು ಎಂದು ಹೇಳಿದರು. ಕನ್ನಡ ಕಲಿಕೆ ಕಡ್ಡಾಯವಾಗಿರಬೇಕು. ಜೊತೆಯಲ್ಲಿ ಇಂಗ್ಲೀಷ್ನ್ನು ಕಲಿಸಬೇಕು. ಪೂರ್ವ ಪ್ರಾಥಮಿಕ ಹಂತದಲ್ಲಿ ಮಕ್ಕಳು ಭಾಷೆಯನ್ನು ಬೇಗ ಕಲಿಯುತ್ತಾರೆ ಎಂದು ಅಭಿಪ್ರಾಯಿಸಿದರು. ನಂತರ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ವೇದಿಕೆಯಲ್ಲಿ ಕಾರ್ಯದರ್ಶಿ ಕೆ.ಡಿ.ಬಿದ್ದಪ್ಪ, ವಲಯ ಸೇನಾನಿ ಪ್ರಕಾಶ್ ಕುಮಾರ್,…
ಸೋಮವಾರಪೇಟೆ ಜೂ.16 NEWS DESK : ರಕ್ತದಾನದಿಂದ ಮೂರು ಜೀವಗಳನ್ನು ಉಳಿಸಬಹುದು. ಈ ಕಾರಣದಿಂದ ರಕ್ತದಾನ ಪವಿತ್ರವಾದ ದಾನ ಎಂದು ಜಿಲ್ಲಾ ರಕ್ತನಿಧಿ ಘಟಕದ ವೈದ್ಯಾಧಿಕಾರಿ ಕರುಂಬಯ್ಯ ಹೇಳಿದರು. ಜೆಸಿಐ ಸೋಮವಾರಪೇಟೆ ಪುಷ್ಪಗಿರಿ, ಡಾಲ್ಫೀನ್ಸ್ ಸ್ಪೂೀಟ್ರ್ಸ್ ಕ್ಲಬ್ ಹಾಗೂ ಒಕ್ಕಲಿಗರ ಯುವ ವೇದಿಕೆ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ತಿಂಗಳಿಗೆ 500 ಯೂನಿಟ್ನಷ್ಟು ರಕ್ತದ ಅವಶ್ಯಕತೆಯಿದೆ. ಸಂಘ ಸಂಸ್ಥೆಗಳು ಶಿಬಿರಗಳನ್ನು ಆಯೋಜಿಸಬೇಕು. ರಕ್ತದಾನಿಗಳಿಗೆ ಹತ್ತಿರವಾದ ಸ್ಥಳದಲ್ಲೇ ಶಿಬಿರಗಳನ್ನು ಆಯೋಜಿಸಿದರೆ ಉಪಯೋಗವಾಗಲಿದೆ. ಪ್ರತಿ ತಿಂಗಳು ಜಿಲ್ಲೆಯಲ್ಲಿ 10 ಶಿಬಿರಗಳ ಆಯೋಜನೆಗೊಂಡಾಗ ಅವಶ್ಯಕತೆಯಷ್ಟು ರಕ್ತ ಸಂಗ್ರಹವಾಗಲಿದೆ ಎಂದು ಹೇಳಿದರು. ಜೆಸಿಐ ಸಂಸ್ಥೆಯ ಅಧ್ಯಕ್ಷೆ ಜಗದಾಂಭ ಗುರುಪ್ರಸಾದ್, ಒಕ್ಕಲಿಗರ ಯುವವೇದಿಕೆ ಅಧ್ಯಕ್ಷ ಕೆ.ಬಿ.ಸುರೇಶ್, ಡಾಲ್ಫೀನ್ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಮಹೇಶ್, ಜೆಸಿಐ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ರಾಜೇಶ್, ಕಾರ್ಯದರ್ಶಿ ವಿನುತ ಸುದೀಪ್ ಇದ್ದರು. 48 ಮಂದಿ ರಕ್ತದಾನ ಮಾಡಿದರು.…
ಕುಶಾಲನಗರ ಜೂ.16 NEWS DESK : ಕರ್ನಾಟಕ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಡಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 2025-26ನೇ ಪ್ರಸ್ತುತ ಸಾಲಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಸಿಇಟಿಯ ಕೌನ್ಸಿಲಿಂಗ್ ಮೂಲಕ ಪ್ರವೇಶವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಪೈಕಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸ್ತುತ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ (ಇ ಅಂಡ್ ಸಿ )ವಿಭಾಗ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗ ಸೇರಿದಂತೆ ಒಟ್ಟು 4 ಕೋರ್ಸ್ ಗಳಿಗೆ ತಲಾ 60 ವಿದ್ಯಾರ್ಥಿಗಳಂತೆ ಪ್ರವೇಶವಕಾಶ ಕಲ್ಪಿಸಲಾಗಿದೆ. ಪ್ರಸ್ತುತ ನಮ್ಮ ಕಾಲೇಜಿನಲ್ಲಿ ಪ್ರಸ್ತುತ 805 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ಪರಶಿವಮೂರ್ತಿ ತಿಳಿಸಿದರು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿ ಸಿಇಟಿ ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿ ಕೊಳ್ಳುವ ವಿದ್ಯಾರ್ಥಿಗಳು…






