ಲೇಖಕ: admin

ಬೆಂಗಳೂರು NEWS DESK ಜೂ.16 : ಇಸ್ರೇಲ್‌ ಮತ್ತು ಇರಾನ್‌ ನಡುವೆ ಉದ್ವಿಗ್ನತೆ ಮುಂದುವರೆದಿದ್ದು, ಕರ್ನಾಟಕ ರಾಜ್ಯ 9 ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ.

Read More

(Box)  ಅಪ್ರೆಂಟಿಸ್ ಕಾಯಿದೆ, 1961 ರ ಅಡಿಯಲ್ಲಿ ಮತ್ತು ಅಪ್ರೆಂಟಿಸ್ಶಿಪ್ ನೀತಿಯ ಪ್ರಕಾರ ಅಪ್ರೆಂಟಿಸ್‍ಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 1911 ರಲ್ಲಿ ಸ್ಥಾಪನೆಯಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿದೆ. ದೇಶಾದ್ಯಂತ 4,500 ಕ್ಕೂ ಮಿಕ್ಕಿ ಶಾಖೆಗಳು, ಹಾಗೂ ನೆಟ್ವರ್ಕ್ ಮೂಲಕ ಕಾರ್ಯನಿರ್ವಹಿಸುವ ಒಟ್ಟು 7,00,000 ಕೋಟಿ ರೂ.ಗಳಿಗಿಂತ ಹೆಚ್ಚಿನ ವ್ಯವಹಾರದೊಂದಿಗೆ, 33,000 ಕ್ಕೂ ಹೆಚ್ಚು ಉದ್ಯೋಗಿಗಳ ಬಲದೊಂದಿಗೆ ನಡೆಸಲ್ಪಡುತ್ತಿರುವ. ಅಗ್ರಗಣ್ಯ ಬ್ಯಾಂಕ್ ಎಂದು ಗುರುತಿಸಲ್ಪಟ್ಟಿದೆ. ಕೇಂದ್ರ ಉನ್ನತ ಶಿಕ್ಷಣ ಸಚಿವಾಲಯದ ಸಹಭಾಗಿತ್ವದಲ್ಲಿ ಬ್ಯಾಂಕ್ ಈ ಅಪ್ರೆಂಟಿಸ್ ಷಿಪ್ ನೀಡುತ್ತಿದೆ. 1961ರ ಅಪ್ರೆಂಟಿಸ್ ಷಿಪ್ ಆಕ್ಟ್ ಪ್ರಕಾರವೇ ಈ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, 2025-26 ನೇ ಸಾಲಿನಲ್ಲಿ ದೇಶಾದ್ಯಂತ ಒಟ್ಟು 4,500 ಅಭ್ಯರ್ಥಿಗಳಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ. ಕರ್ನಾಟಕದಿಂದ 105 ಮಂದಿಗೆ ಅವಕಾಶ ಸಿಗಲಿದೆ. ಆನ್ಲೈನ್ ಪರೀಕ್ಷೆ ಮೂಲಕ ಕರ್ನಾಟಕ ಸೇರಿದಂತೆ ದೇಶದಾದ್ಯಂತವಿರುವ ಶಾಖೆಗಳಲ್ಲಿ ಈ ತರಬೇತಿಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ…

Read More

ಮಡಿಕೇರಿ ಜೂ.16 NEWS DESK : ಕ್ಲೋಸ್‌ಬರ್ನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸ್ಥಳೀಯ ಬೆಳೆಗಾರರಾದ ಜೆ. ಶರತ್‌ ಬಾಬು ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅಗತ್ಯವಿರುವ ನೋಟ್‌ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಶಾಲೆಯಲ್ಲಿ 1 ರಿಂದ 7ನೇ ತರಗತಿವರೆಗೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಅಗತ್ಯವಿರುವ ನೋಟ್‌ ಪುಸ್ತಕಗಳನ್ನು ಖರೀದಿಸಿ ಶಿಕ್ಷಕರಿಗೆ ತಲುಪಿಸಿದ್ದರು. ಶಿಕ್ಷಕರು ಅದನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು. ಸರ್ಕಾರಿ ಶಾಲೆ ಹಾಗೂ ವಿದ್ಯಾರ್ಥಿಗಳ ಮೇಲಿನ ಕಾಳಜಿಯಿಂದ ನೆರವಾದ ಶರತ್‌ ಬಾಬು ಅವರ ಕಾರ್ಯಕ್ಕೆ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪುಸ್ತಕ ವಿತರಣೆ ಸಂದರ್ಭ ಮುಖ್ಯ ಶಿಕ್ಷಕಿ ಸುಜಾತ, ಶಿಕ್ಷಕರಾದ ಉಷಾ, ಪ್ರಜ್ಞಾ ಹಾಜರಿದ್ದರು.

Read More

ಮಡಿಕೇರಿ ಜೂ.16 NEWS DESK : ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಕೊಡಗು ಬಿಜೆಪಿ ವತಿಯಿಂದ ಜಿಲ್ಲಾದ್ಯಂತ ಆ.15ರ ವರೆಗೆ ತಾಯಿ ಹೆಸರಿನಲ್ಲಿ ಒಂದು ಸಸಿ ನೆಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಮಡಿಕೇರಿಯ ಬನ್ನಿ ಮಂಟಪದ ಬಳಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 11 ವರ್ಷಗಳು ತುಂಬಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಕಲ್ಪದಿಂದ ಸಿದ್ದಿ ಎಂಬ ಜನಸಂಪರ್ಕ ಅಭಿಯಾನವನ್ನು ಬಿಜೆಪಿ ಆರಂಭಿಸಿದೆ. ಇದನ್ನು ಜಿಲ್ಲಾ ಕೇಂದ್ರ ಮಡಿಕೇರಿಯಿಂದ ಕಾರ್ಯಕ್ರಮ ಆರಂಭಿಸಲಾಗಿದೆ. ಮಡಿಕೇರಿ ನಗರ, ಮಂಡಲ ವತಿಯಿಂದ ದಿನಕ್ಕೊಬ್ಬ ಕಾರ್ಯಕರ್ತ ಗಿಡ ನೆಡುವ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದರು. ಮಡಿಕೇರಿ ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕವನ್ ಕಾವೇರಪ್ಪ ಮಾತನಾಡಿ, ಕಳೆದ 11 ವರ್ಷಗಳ ಆವಧಿಯಲ್ಲಿ ಪ್ರಧಾನಿ ಮೋದಿ ಶೇ.85ರಷ್ಟು ಆಶ್ವಾಸನೆಯನ್ನು ಈಡೇರಿಸಿದ್ದಾರೆ. ಅದನ್ನು ಜನರಿಗೆ ತಲುಪಿಸುವ ಕೆಲಸವಾಗುತ್ತಿದೆ…

Read More

ಮಡಿಕೇರಿ ಜೂ.16 NEWS DESK : ಪೊನ್ನಂಪೇಟೆ ಹೋಬಳಿ ಹುದೂರು ಗ್ರಾಮದ ಹೆಚ್.ಕೆ.ರವಿ ಎಂಬವರ ಮನೆಯ ಗೋಡೆ ವಿಪರೀತ ಗಾಳಿ ಮಳೆಯಿಂದ ಕುಸಿದು ತೀವ್ರ ಹಾನಿಯಾಗಿದೆ.

Read More

ನಾಪೋಕ್ಲು ಜೂ.16 NEWS DESK : ಕೊಳಕೇರಿ ಗ್ರಾಮದ ಶ್ರೀ ಅಮ್ಮನೂರು ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ  ಸಹಾಯಧನ ಹಸ್ತಾಂತರಿಸಲಾಯಿತು. ಸಮೀಪದ ಕೊಳಕೇರಿಯ ಶ್ರೀ ಅಮ್ಮನೂರು ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು 50 ಸಾವಿರ ರೂಗಳ ಸಹಾಯ ಬಿಡುಗಡೆ ಮಾಡಿದ್ದರು. ಈ ಮೊತ್ತವನ್ನು ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಧರ್ಮಸ್ಥಳ ಸಂಘದ ಯೋಜನಾಧಿಕಾರಿ ಪುರುಷೋತ್ತಮ ಹಸ್ತಾಂತರಿಸಿದರು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ  ಅಧ್ಯಕ್ಷ ಜಾಲಿ, ಕಾರ್ಯದರ್ಶಿ ಗಿರೀಶ್, ಆಡಳಿತ ಮಂಡಳಿ ಸದಸ್ಯರಾದ ಪೆÇನ್ನಪ್ಪ, ಶಂಕರ, ಚೋಮಣಿ, ಅಶೋಕ್, ಬಿದ್ದಪ್ಪ ಇನ್ನಿತರ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.

Read More

ಕಾರ್ಕಳ ಜೂ.16 NEWS DESK : ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 4 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಎಸ್.ಡಿ.ಸುಮಂತಗೌಡ ಶೇ.99.923686 ನೊಂದಿಗೆ 596 ಅಂಕಗಳನ್ನುಗಳಿಸಿ ರಾಷ್ಟ್ರಮಟ್ಟದಲ್ಲಿ 1623ನೇ ರ‍್ಯಾಂಕ್ , ಎಸ್.ಎನ್.ಪ್ರಜ್ವಲ್ ಶೇ.99.686435 ನೊಂದಿಗೆ 588 ಅಂಕಗಳನ್ನುಗಳಿಸಿ, ರಾಷ್ಟ್ರಮಟ್ಟದಲ್ಲಿ 2483ನೇ ರ‍್ಯಾಂಕ್ , ಹೆಚ್.ಎ.ರಾಜೇಶ್ ಶೇ.99.857286 ನೊಂದಿಗೆ 583 ಅಂಕಗಳಿಸಿ ರಾಷ್ಟ್ರಮಟ್ಟದಲ್ಲಿ 3025ನೇ ರ‍್ಯಾಂಕ್ ಪಡೆದು ಅಭೂತ ಪೂರ್ವ ಸಾಧನೆಗೈದಿದ್ದಾರೆ. ಇತರ ವಿದ್ಯಾರ್ಥಿಗಳಾದ ಸಾತ್ವಿಕ್ ಭಂಡಾರಿ 560, ಹೇಮಂತ್ ಕುಮಾರ್ 551, ಪ್ರಾಪ್ತಿಶೆಟ್ಟಿ 541, ಹೆಚ್.ಡಿ.ಪ್ರಥಮ್ ಪಟೇಲ್ 539, ಬಿ.ಎಮ್.ಸಂಗೀತಾ 536, ಡಿ.ಶ್ರೀನಿಧಿ 531, ಎಸ್.ವಿನಯ್ 523, ಬಿ.ಸ್ನೇಹಾ ಬಸವರಾಜ್ 521, ಯುವರಾಜ್ ಪಟೇಲ್ 521, ಜಿ.ಗಣೇಶ್ 519, ಶಕ್ತಿ ಎಸ್.ಗೌಡ 519, ಸೃಷ್ಟಿ ಪಾಟೀಲ್ 515, ಪಿ.ಯು.ಶ್ರೀನಿಧಿ 514, ಹೆಚ್.ಎಮ್.ನಿನಾದ್ 513,…

Read More

ಮಡಿಕೇರಿ ಜೂ.16 NEWS DESK : ಶ್ರೀ ಯೋಗಿನಾರಾಯಣ ಕೊಡಗು ಜಿಲ್ಲಾ ಬಲಿಜ ಸಂಘದ ಹೆಸರಿನಲ್ಲಿ ಸಮುದಾಯಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು. ಮೂರ್ನಾಡಿನ ಬಲಮುರಿ ರಸ್ತೆಯಲ್ಲಿರುವ ಗಣೇಶ್ ಬಿಲ್ಡಿಂಗ್‌ನಲ್ಲಿ ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಂಘದ ಜಿಲ್ಲಾಧ್ಯಕ್ಷ ಟಿ.ಜಿ.ಗಣೇಶ್ ನಾಯ್ಡು ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು. ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಂಘವನ್ನು ಮೊದಲು ಟ್ರಸ್ಟ್ ಆಗಿ ನೋಂದಣಿ ಮಾಡಿಕೊಳ್ಳಬೇಕು ಸಂಘದ ಸಂಘದ ನಿರ್ದೇಶಕರು ಸಲಹೆ ನೀಡಿದರು. ನಂತರ ಸಭೆಯಲ್ಲಿ ಸದಸ್ಯರ ಶಿಕ್ಷಣ ಅಭಿವೃದ್ಧಿ, ಸದಸ್ಯರ ಆರ್ಥಿಕ ಅಭಿವೃದ್ಧಿ, ಜನಾಂಗಬಾಂಧವರ ಪ್ರತಿಭೆ ವ್ಯಕ್ತಪಡಿಸಲು ಸೂಕ್ತ ವೇದಿಕೆ ಕಲ್ಪಿಸಲು ವಿವಿಧ ಆಯೋಜನೆ ಕುರಿತು ಚರ್ಚೆ ನಡೆಸಲಾಯಿತು. ಇದೇ ಬಡತನದಲ್ಲಿರುವ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕಲ್ಪಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಶಿಕ್ಷಣ ಇಲಾಖೆಯಿಂದ ಮಾಹಿತಿ ಪಡೆದು ವಿದ್ಯಾರ್ಥಿ ವೇತನ ನೀಡುವಂತೆ ನಿರ್ಧರಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಟಿ.ಜಿ.ಗಣೇಶ್ ನಾಯ್ಡು ಅವರು, ಬಲಿಜ ಸಮಾಜದ ಏಳಿಗೆಗಾಗಿ…

Read More

*ಜಾತಿಯೇ ಇರಲಿ, ಧರ್ಮ‌ವೇ ಇರಲಿ ಅದೆಲ್ಲಾ ಮನೆಯೊಳಗೆ ಆಚರಣೆಯಾಗಲಿ. ಹೊರಗೆ ಬಂದ ಕೂಡಲೇ ನಾವೆಲ್ಲರೂ ಭಾರತೀಯರಾಗಬೇಕು : ಸಿ.ಎಂ ಸಿದ್ದರಾಮಯ್ಯ ಕರೆ* ಬೆಂಗಳೂರು NEWS DESK ಜೂ.15: ಪೊನ್ನಣ್ಣ ಅವರಿಗೆ ಉತ್ತಮ‌ ಭವಿಷ್ಯವಿದೆ. ಇವರನ್ನು ಬೆಂಬಲಿಸಿ ಪೊನ್ನಣ್ಣ ರಾಜ್ಯದ ಆಸ್ತಿ ಆಗ್ತಾರೆ. ಕೊಡವ ಸಮಾಜದ ಆಸ್ತಿ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಸಂತನಗರದ ಕೊಡವ ಸಮಾಜದಲ್ಲಿ ಕೊಡವ ಸಮಾಜದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕೊಡವ ಸಮಾಜ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರಾದರೂ ದೇಶ ಸೇವೆಯಲ್ಲಿ ಇವರಿಗೆ ಸರಿಸಮಾನವಾದವರು ಬೇರೆ ಇಲ್ಲ. ಸಂಸ್ಕೃತಿ, ಶಿಸ್ತಿನಲ್ಲಿ ಕೊಡವರು ಮುಂಚೂಣಿಯಲ್ಲಿದ್ದಾರೆ. ಸೈನ್ಯಕ್ಕೆ, ದೇಶ ರಕ್ಷಣೆಗೆ, ಕ್ರೀಡೆಗೆ, ರಾಜಕಾರಣಕ್ಕೆ ಕೊಡವರ ಕೊಡವರ ಕೊಡುಗೆ ಅಪಾರ ಎಂದು ಮೆಚ್ಚುಗೆ ಸೂಚಿಸಿದರು. ಎ.ಕೆ.ಸುಬ್ಬಯ್ಯ ಮ ಮತ್ತು ಎಂ.ಸಿ.ನಾಣಯ್ಯ ಉತ್ತಮ ಸಂಸದೀಯ ಪಟುಗಳು. ಇವರು ಸದನದಲ್ಲಿ ಸಮಾಜಮುಖಿಯಾಗಿ ಮಾತನಾಡಿದ ಫೈರ್ ಬ್ರಾಂಡ್ ಗಳು. ಪೊನ್ನಣ್ಣ ಅವರಿಗೂ ಫೈರ್ ಬ್ರಾಂಡ್ ಆಗುವ ಎಲ್ಲಾ ಲಕ್ಷಣಗಳೂ ಇವೆ ಎಂದರು. ಯಾವುದೇ ಸಮುದಾಯಗಳು ಜಾಗ ಕೇಳಿದರೂ ಗೈಡೆನ್ಸ್ ಬೆಲೆಯಲ್ಲಿ ಶೇ10…

Read More

ಸಕಲೇಶಪುರ NEWS DESK ಜೂ.15 : ಭಾರೀ ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಷಗೊಂಡು ಕಾಡಾನೆ ಮತ್ತು ಅದರ ಮರಿಯಾನೆ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಗುಡ್ಡೆಬೆಟ್ಟ ಗ್ರಾಮದ ತೋಟವೊಂದರಲ್ಲಿ ನಡೆದಿದೆ. ಆಹಾರ ಹುಡುಕಿ ಬಂದ ತಾಯಿಯಾನೆ ಹಾಗೂ ಮರಿಯಾನೆ ವಿದ್ಯುತ್ ಗೆ ಜೊತೆಯಾಗಿ ಬಲಿಯಾಗಿವೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More