ಲೇಖಕ: admin

ಕುಶಾಲನಗರ ಜು.10 NEWS DESK : ಕುಶಾಲನಗರ ಸಾಯಿ ಬಡಾವಣೆಯ ಶ್ರೀ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಗುರು ಪೂರ್ಣಿಮಾ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಮುಂಜಾನೆ ದೇವರಿಗೆ ವಿಶೇಷ ಆರತಿ ಕಾರ್ಯಕ್ರಮಗಳು ಜರುಗಿದವು. ಕುಶಾಲನಗರ ದೇವಾಲಯಗಳ ಒಕ್ಕೂಟದ ಸಮಿತಿಯ ಪ್ರತಿನಿಧಿಗಳು ಫಲತಾಂಬೂಲಗಳೊಂದಿಗೆ ದೇವಾಲಯಕ್ಕೆ ಆಗಮಿಸಿ ಸಾಮೂಹಿಕ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ದೇವಾಲಯದಲ್ಲಿ ಗಣಪತಿ ಹೋಮ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಸಾಯಿ ಬಾಬಾ ಮೂರ್ತಿ ಗೆ ಪೂಜೆ ಸಲ್ಲಿಸುವ ಮೂಲಕ ಅಷ್ಟ ಅಭಿಷೇಕ ಕಾರ್ಯಕ್ರಮ ಜರುಗಿತು. ದೇವಾಲಯ ಅರ್ಚಕರಾದ ನವೀನ್ ಕುಮಾರ್ ಶುಕ್ಲ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ದೇವಾಲಯ ಟ್ರಸ್ಟ್ ಅಧ್ಯಕ್ಷರಾದ ಧರೇಶ್ ಬಾಬು ಹಾಗೂ ಆಡಳಿತ ಮಂಡಳಿ ಸದಸ್ಯರು ಹಾಗೂ ಕುಶಾಲನಗರದ ವಿವಿಧ ದೇವಾಲಯಗಳ ಪ್ರತಿನಿಧಿಗಳು ಭಕ್ತಾದಿಗಳು ಇದ್ದರು.

Read More

ಮಡಿಕೇರಿ ಜು.10 NEWS DESK :  ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಡಿಕೇರಿ ತಾಲ್ಲೂಕು ಬಾಲಭವನ ಸಮಿತಿ ಸಹಯೋಗದಲ್ಲಿ 2025-26ನೇ ಸಾಲಿನ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮವು ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಕೃಷ್ಣಮೂರ್ತಿ ಅವರು, ತಂತ್ರಜ್ಞಾನ ಯುಗದಲ್ಲಿ ಮೊಬೈಲ್ ಪೋನ್‍ಗಳು ಸರ್ವವ್ಯಾಪಿಯಾಗಿದ್ದು, ಸಂವಹನ, ಮನರಂಜನೆ ಮತ್ತು ಮಾಹಿತಿ ಪ್ರವೇಶಕ್ಕೆ ಅನಿವಾರ್ಯ ಸಾಧನಗಳಾಗಿ ಕಾರ್ಯನಿರ್ವಹಿಸುತ್ತಿವೆ. ಈ ಸಾಧನಗಳು ಹಲವಾರು ಪ್ರಯೋಜನಗಳನ್ನು ನೀಡುತ್ತವೆಯಾದರೂ, ಅವುಗಳ ಸಂಭಾವ್ಯ ಋಣಾತ್ಮಕ ಪರಿಣಾಮ ಗುರುತಿಸುವುದು ಅತ್ಯಗತ್ಯ ಎಂದರು. ವಿಶೇಷವಾಗಿ ವಿದ್ಯಾರ್ಥಿಗಳ ಮೇಲೆ, ಶೈಕ್ಷಣಿಕ ಕಾರ್ಯಕ್ಷಮತೆಯಿಂದ ಹಿಡಿದು ಮಾನಸಿಕ ಮತ್ತು ದೈಹಿಕ ಆರೋಗ್ಯದವರೆಗೆ ಮೊಬೈಲ್ ಫೋನ್ ಗಳು ಪರಿಣಾಮ ಬೀರುತ್ತದೆ. ಮಕ್ಕಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಓದಿನಲ್ಲಿ ಹೆಚ್ಚಾಗಿ ಆಸಕ್ತಿ…

Read More

ಮಡಿಕೇರಿ ಜು.10 NEWS DESK : ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರ ಅನುಕೂಲಕ್ಕಾಗಿ ಜುಲೈ, 07 ರಿಂದ ಆಗಸ್ಟ್, 07 ರವರೆಗೆ ವಿಶೇಷ ನೋಂದಣಿ ಅಭಿಯಾನ ನಡೆಯಲಿದೆ. 2024-25 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಯುವನಿಧಿ ಯೋಜನೆಯ ಫಲಾನುಭವಿಗಳು ತ್ರೈಮಾಸಿಕ ಆನ್‍ಲೈನ್‍ನಲ್ಲಿ ಲಾಗಿನ್ ಆಗಿ ಸ್ವ ಘೋಷಣೆ ನೀಡಬೇಕು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005997154 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ  ತಿಳಿಸಿದ್ದಾರೆ.

Read More

ಮಡಿಕೇರಿ ಜು.10 NEWS DESK : ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರಿಗೆ ಶಿವಶರಣ ಹಡಪದ ಅಪ್ಪಣ್ಣ ಅವರು ಆತ್ಮೀಯರಾಗಿ, ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ ಎಂದು ಕುಶಾಲನಗರದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕೆ.ಎ.ಸೌಮ್ಯ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶರಣರು 12ನೇ ಶತಮಾನದಲ್ಲಿ ತಮ್ಮ ವಚನಗಳ ಮೂಲಕ ಸಾಮಾಜಿಕ ಬದಲಾವಣೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಆ ನಿಟ್ಟಿನಲ್ಲಿ ಬಸವಣ್ಣನವರ ಜೊತೆಗೂಡಿ ಹಡಪದ ಅಪ್ಪಣ್ಣ ಅವರು ಸಮಾಜ ಸುಧಾರಣೆಗೆ ಪ್ರಯತ್ನಿಸಿದ್ದಾರೆ ಎಂದು ನುಡಿದರು. ಹಡಪದ ಅಪ್ಪಣ್ಣ ಅವರು 12ನೇ ಶತಮಾನದಲ್ಲಿ ಧಾರ್ಮಿಕ, ಸಾಮಾಜಿಕವಾಗಿ ಎಲ್ಲರನ್ನು ಮೇಲೆತ್ತುವಲ್ಲಿ ಶ್ರಮಿಸಿದ್ದಾರೆ. ಎಲ್ಲರಿಗೂ ಸಮಾನತೆ ಕಲ್ಪಿಸಲು ಶ್ರಮಿಸಿದ್ದಾರೆ. ಕಂದಾಚಾರವನ್ನು ಗಟ್ಟಿಯಾಗಿ ಪ್ರಶ್ನಿಸುವ ಮೂಲಕ ಅಸಮಾನತೆ ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದರು. ಹಡಪದ ಅಪ್ಪಣ್ಣ ಅವರ ಕಾಲ ಕ್ರಿ.ಶ.1160 ಎಂದು…

Read More

ಸುಂಟಿಕೊಪ್ಪ ಜು.10 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಂಟಿಕೊಪ್ಪ ವಲಯದ ವತಿಯಿಂದ ಜ್ಞಾನದೀಪ ಯೋಜನೆಯಡಿಯಲ್ಲಿ ಕಾನ್‍ಬೈಲ್ ಸರಕಾರಿ ಪ್ರಾಥಮಿಕ ಶಾಲೆಗೆ ಓರ್ವ ಶಿಕ್ಷಕರ ನಿಯೋಜನೆ ಮಾಡಲಾಯಿತು. ಕಾನ್‍ಬೈಲ್ ಶಾಲೆಯಲ್ಲಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 52 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಪೂರ್ಣಕಾಲಿಕವಾಗಿ ಇರ್ವರು ಶಿಕ್ಷಕರು ಮತ್ತು ಅರೆಕಾಲಿಕವಾಗಿ ಓರ್ವ ಶಿಕ್ಷಕಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದರಿಂದ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯನ್ನು ಮನಗಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಮುಖರು ಜ್ಞಾನದೀಪ ಯೋಜನೆಯಡಿಯಲ್ಲಿ ಶಾಲೆಗೆ ಓರ್ವ ಶಿಕ್ಷಕರನ್ನು ನೇಮಕಾತಿಗೊಳಿಸಲಾಯಿತು. ಈ ಸಂದರ್ಭ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯ ದಿಸೆಯಲ್ಲಿ ಶ್ರೀ.ಕ್ಷೇ.ಧ.ಗ್ರಾ.ಯೋ. ವತಿಯಿಂದ ಶಾಲೆಗೆ ಶಿಕ್ಷಕರನ್ನು ನೇಮಕಗೊಳಿಸುವಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕರು, ತಾಲೂಕು ಯೋಜನಾಧಿಕಾರಿ ಮತ್ತು ಕಾನ್‍ಬೈಲ್ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಯಶೋಧ ಅವರಿಗೆ ಶಾಲೆಯ ಮುಖ್ಯೋಪಾದ್ಯಾಯನಿ ಶಾಂತಿ, ಸಹಶಿಕ್ಷಕರು, ಮಕ್ಕಳ ಪೋಷಕರು ಹಾಗೂ ಗ್ರಾಮಸ್ಥರು ಸಂಸ್ಥೆಯ ಸೇವೆಯನ್ನು ಶ್ಲಾಘಿಸಿದ್ದಾರೆ.

Read More

ಮಡಿಕೇರಿ ಜು.10 NEWS DESK : ಕುತಂತ್ರದಿಂದ ಕೊಡವರ ಹತ್ಯೆಯಾದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ತೆರಳಿದ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಕೊಡವಲ್ಯಾಂಡ್ ಪರ ಹಕ್ಕೊತ್ತಾಯ ಮಂಡಿಸಿದರು. ವಿಶ್ವಾಸಘಾತುಕ “ಕೆಳದಿ/ಪಾಲೇರಿ ರಾಜ ಪರಿವಾರದ ಅಧೀನದಲ್ಲಿದ್ದ ಕೊಡಗು ರಾಜ್ಯವನ್ನು ಪರಾಕ್ರಮಿ ಕೊಡವರು ಹೈದರ್ ಮತ್ತು ಟಿಪ್ಪುವಿನ ಆಕ್ರಮಣದಿಂದ 32ಕ್ಕೂ ಹೆಚ್ಚು ಬಾರಿ ಕಾಪಾಡಿದರು. ಈ ಸೋಲಿನ ಸೇಡು ತೀರಿಸಿಕೊಳ್ಳಲು, ಟಿಪ್ಪು ಕೊಡವ ಜನಾಂಗವನ್ನು ವಂಚನೆಯ ಮೂಲಕ ಸಂಪೂರ್ಣವಾಗಿ ನಾಶಮಾಡಲು ಸಂಚು ಹೂಡಿದನು. ಟಿಪ್ಪು ಸಂಚಿನಿಂದ ದೇವಟ್ ಪರಂಬುವಿನಲ್ಲಿ ನಡೆದ ನರಮೇಧದ ಸ್ಮರಣಾರ್ಥ ಅಂತರರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು ಹಾಗೂ ಕೊಡವರ ನರಮೇಧವನ್ನು ವಿಶ್ವ ರಾಷ್ಟ್ರಸಂಸ್ಥೆ ಯುಎನ್‍ಒ ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾಚಪ್ಪ ಇದೇ ಸಂದರ್ಭ ಒತ್ತಾಯಿಸಿದರು. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು, ಆದಿಮಸಂಜಾತ ಏಕ-ಜನಾಂಗೀಯ ಕೊಡವ…

Read More

ವಿರಾಜಪೇಟೆ ಜು.10 NEWS DESK : ವಿರಾಜಪೇಟೆಯ ಮಗ್ಗುಲದಲ್ಲಿರುವ ಭಾರತೀಯ ವೈದ್ಯಕೀಯ ಸಂಘ ಮತ್ತು ಕೊಡಗು ವೈದ್ಯಕೀಯ ಕಾಲೇಜು ವತಿಯಿಂದ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಕಂಜಿತಂಡ ಸುನಿಲ್ ಮುದ್ದಯ್ಯ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಳೆದ 30 ವರ್ಷಗಳಲ್ಲಿ ಆರೋಗ್ಯ ಮತ್ತು ಸಾಮಾಜಿಕ ಸೇವೆಗೆ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಮಡಿಕೇರಿಯ ಕಾಲೇಜು ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಡಾ.ಸುನಿಲ್ ಮುದ್ದಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಡಿಕೇರಿಯ ಕೋಯಿಮ್ಸ್‍ನ ನಿರ್ದೇಶಕ ಮತ್ತು ಡೀನ್ ಡಾ. ಎ.ಕೆ.ಲೋಕೇಶ್ ಮತ್ತು ಐಎಂಎ ಅಧ್ಯಕ್ಷ ಡಾ.ಶ್ಯಾಮ್ ಮತ್ತು ಅನೇಕ ಪ್ರಖ್ಯಾತ ವೈದ್ಯರು, ಶಿಕ್ಷಣ ತಜ್ಞರು ಮತ್ತು ಆರೋಗ್ಯ ಕ್ಷೇತ್ರದ ತಜ್ಞರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Read More

ಮಡಿಕೇರಿ ಜು.10 NEWS DESK : ಮಡಿಕೇರಿ ನಗರದ ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾನ್ವೆಂಟ್ ಜಂಕ್ಷನ್ ನಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಯಾಣಿಕರ ತಂಗುದಾಣವನ್ನು ಜು.11 ರಂದು ಉದ್ಘಾಟಿಸಲಾಗುವುದು ಎಂದು 17ನೇ ವಾರ್ಡ್ ನ ನಗರಸಭಾ ಸದಸ್ಯ ಅರುಣ್ ಶೆಟ್ಟಿ ಅವರು ತಿಳಿಸಿದ್ದಾರೆ.  ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಪ್ರಯಾಣಿಕರ ತಂಗುದಾಣವನ್ನು ಉದ್ಘಾಟಿಸಲಿದ್ದಾರೆ. ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಪೌರಾಯುಕ್ತ ಹೆಚ್.ಆರ್.ರಮೇಶ್, ಸದಸ್ಯ ಮುಸ್ತಫ, ಮೂಡ ಅಧ್ಯಕ್ಷ ಬಿ.ವೈ.ರಾಜೇಶ್, ಬಿಜೆಪಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಶಕ್ತಿ ದಿನಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್, ಟೌನ್ ಬ್ಯಾಂಕ್ ನಿರ್ದೇಶಕರು ಹಾಗೂ ನಗರಸಭಾ ಸ್ಥಾಯಿ ಸಮಿತಿಯ ಮಾಜಿ ಸದಸ್ಯರಾದ ಪ್ರತಿಭಾ ಶೆಟ್ಟಿ, ಜಿಲ್ಲಾಧಿಕಾರಿಗಳು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Read More

ಮಡಿಕೇರಿ ಜು.10 NEWS DESK : ಮಾಯಮುಡಿ ಗ್ರಾಮ ವ್ಯಾಪ್ತಿಯಲ್ಲಿ ಸರಕಾರ ಅನುಮೋದಿಸಿದ ಶಾಲೆಗೆ, ಕೊಠಡಿಗಳನ್ನು ನಿರ್ಮಿಸುವ ಉದ್ದೇಶದಿಂದ ರೂ.79 ಲಕ್ಷದ ಕಾಮಗಾರಿಗೆ ಚಾಲನೆ ದೊರೆಯಿತು.  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರದ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಈ ಶಾಲೆಯ ಹಳೆ ವಿದ್ಯಾರ್ಥಿ. ಹಾಗಾಗಿ ಸಚಿವರು ಈ ಶಾಲೆಯ ಅಭಿವೃದ್ಧಿಗೆ ತಮ್ಮ ವಿಶೇಷ ಅನುದಾನದ ಮೂಲಕ  ರೂ.79 ಲಕ್ಷ ನೀಡಿರುವುದನ್ನು ನೀಡಿರುವುದಾಗಿ ತಿಳಿಸಿದರು. ಕ್ಷೇತ್ರದ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ, ತಾನು ಹಾಗೂ ಸರಕಾರ ಮಕ್ಕಳ ವಿದ್ಯಾರ್ಜನೆ ಕಡೆಗೆ ಹೆಚ್ಚಿನ ಗಮನವನ್ನು ನೀಡುತ್ತಿದ್ದು, ಪೋಷಕರು ಹಾಗೂ ಶಿಕ್ಷಕರು ಮಕ್ಕಳ ವಿದ್ಯಾಭ್ಯಾಸ ಉನ್ನತಿಗಾಗಿ ಶ್ರಮಿಸಬೇಕೆಂದು ಕರೆ ನೀಡಿದರು. ಸಾಲು ಕೊಠಡಿಯಲ್ಲಿ ಮಕ್ಕಳಿಗೆ ಬೇಕಾದ ಎಲ್ಲಾ ಆಧುನಿಕ ಸೌಲತ್ತುಗಳನ್ನು ಒದಗಿಸಲು ಸರಕಾರ ಬದ್ಧವಾಗಿದೆ ಎಂದು ಇದೇ ಸಂದರ್ಭ ಶಾಸಕರು ಹೇಳಿದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಧರ್ಮಜ ಉತ್ತಪ್ಪ,  ವಿಧಾನ ಪರಿಷತ್…

Read More

ಮಡಿಕೇರಿ ಜು.10 NEWS DESK : ಮಾಯಮುಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಯ ನೂತನ ಕೊಠಡಿಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಇಂದಿನ ಯುಗದಲ್ಲಿ ಸ್ಥಳೀಯ ಭಾಷೆಯೊಂದಿಗೆ ಆಂಗ್ಲ ಭಾಷೆಯು ಅತ್ಯಂತ ಮಹತ್ವ ಪಡೆದಿದ್ದು, ಮಕ್ಕಳು ಚಿಕ್ಕದರಿಂದಲೇ ಆಂಗ್ಲ ಭಾಷೆ ಕಲಿತುಕೊಂಡಲ್ಲಿ ಮುಂದಿನ ದಿನಗಳಲ್ಲಿ ಅವರ ಭವಿಷ್ಯಕ್ಕೆ ಒಳ್ಳೆಯದಾಗಲಿದೆ ಎಂದು ಹೇಳಿದರು. ಮಕ್ಕಳು ಮಾತೃಭಾಷೆಯೊಂದಿಗೆ ಆಂಗ್ಲವನ್ನು ಕಲಿತುಕೊಂಡು ತಮ್ಮ ಮುಂದಿನ ಭವಿಷ್ಯದಲ್ಲಿ ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾನಂಡ ಪ್ರತ್ಯು, ವಲಯ ಕಾಂಗ್ರೆಸ್ ಅಧ್ಯಕ್ಷ ಟಾಟು ಮೊಣ್ಣಪ್ಪ, ಸ್ಥಳೀಯ ಪ್ರಮುಖರು, ಪಕ್ಷದ ಪ್ರಮುಖರು ಶಾಲೆಯ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಹಾಗೂ ಸ್ಥಳೀಯ…

Read More