ಮಡಿಕೇರಿ ಜೂ.14 NEWS DESK : ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಮಡಿಕೇರಿಯ ಲೇಖಕಿ ದೀಪಾ ಭಾಸ್ತಿ ಅವರನ್ನು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪಿ.ಎಲ್.ಧರ್ಮ ಭೇಟಿ ಮಾಡಿ ಅಭಿನಂದಿಸಿದರು. ಮಡಿಕೇರಿ ನಗರದಲ್ಲಿರುವ ದೀಪಾಭಾಸ್ತಿ ಅವರ ಮನೆಗೆ ಭೇಟಿ ನೀಡಿದ ಕುಲಪತಿ ದೀಪಾ ಭಾಸ್ತಿಯವರ ಸಾಧನೆಗೆ ಸಹಕಾರ ನೀಡಿದ ಪತಿ ಚೆಟ್ಟೀರ ನಾಣಯ್ಯ ಹಾಗೂ ಪೋಷಕರನ್ನು ಅಭಿನಂದಿಸಿದರು. 2004 ರಿಂದ 2006 ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡಿದ ದೀಪಾ ಭಾಸ್ತಿ ಅವರು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ ಎಂದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಕನ್ನಡದ ಹಣತೆ ವಿಶ್ವ ಮಟ್ಟದಲ್ಲಿ ರಾರಾಜಿಸಲು ದೀಪಾ ಭಾಸ್ತಿ ಅವರ ಕೊಡುಗೆ ಬಹು ಮುಖ್ಯ ಎಂದರು. ಹಳೇ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು, ಕೊಡಗು ಕನ್ನಡ ಭವನದ ನಿರ್ದೇಶಕ ಅರುಣ್ ಕುಮಾರ್ ಪಿ.ಹಾಜರಿದ್ದರು.
ಲೇಖಕ: admin
ವಿರಾಜಪೇಟೆ ಜೂ.14 NEWS DESK : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆರು ಮಂದಿ ಪತ್ರಕರ್ತರು ಆಯ್ಕೆಯಾಗಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಎ.ಎಸ್ ಮುಸ್ತಫ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಾಸಕರಾದ ಎ.ಎಸ್ ಪೊನ್ನಣ್ಣ ಅವರು ತಮ್ಮ ತಂದೆ ದಿವಂಗತ ಎ.ಕೆ ಸುಬ್ಬಯ್ಯ ಹಾಗೂ ತಾಯಿ ದಿವಂಗತ ಎ.ಎಸ್ ಪೊನ್ನಮ್ಮ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿಗೆ ಇಬ್ಬರು ಆಯ್ಕೆಯಾಗಿದ್ದಾರೆ. ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ಕರ್ನಾಟಕ ಸೂಪರ್ ಡಿವಿಷನ್ ಗೆ ಲಗ್ಗೆಯಿಟ್ಟ ಕೊಡಗಿನ ಪ್ರಥಮ ಮಹಿಳಾ ಫುಟ್ಬಾಲ್ ಕ್ಲಬ್-ಯುನೈಟೆಡ್ ಎಫ್.ಸಿ ಕೊಡಗು” ವರದಿಗೆ ಕೆ.ಎಂ ಇಸ್ಮಾಯಿಲ್ ಕಂಡಕರೆ ಪಡೆದುಕೊಂಡಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ “ಮಾಲ್ದಾರೆ ಮಹಿಳೆಯರ ಕ್ರಿಕೆಟ್ ಕ್ರೇಜ್” ವರದಿಗೆ ಸತೀಶ್ ನಾರಾಯಣ್ ಪಡೆದುಕೊಂಡಿದ್ದಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅದ್ಯಕ್ಷರಾದ ಬಿ.ಆರ್ ಸವಿತಾ ರೈ ಅವರು ತಮ್ಮ ತಂದೆ ದಿವಂಗತ ಬಿ.ಎಸ್ ರಂಗನಾಥ ರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕೃಷಿ…
ಮಡಿಕೇರಿ ಜೂ.14 NEWS DESK : ಸೋಮವಾರಪೇಟೆ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಮುದಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕಾಮತ್, ಅವರು ಮಲೇರಿಯಾ ಸೋಂಕಿನ ಕುರಿತು ಎಚ್ಚರ ವಹಿಸುವುದು ಅಗತ್ಯವೆಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಸೋಮವಾರಪೇಟೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ ಸುಂಟಿಕೊಪ್ಪ ಆಯುಷ್ಮಾನ್ ಆರೋಗ್ಯ ಮಂದಿರದಲ್ಲಿ ನಡೆದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದು ಜಾಗತಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಗಿದೆ. ಒಂದು ಬಾರಿ ಈ ಸೋಂಕಿತ ಅನಾಫಿಲಿಸ್ ಹೆಣ್ಣು ಸೊಳ್ಳೆಯು ಮನುಷ್ಯನಿಗೆ ಕಚ್ಚಿದ ಬಳಿಕ ಪ್ಲಾಸ್ಮೋಡಿಯವು ಮನುಷ್ಯನ ಯಕೃತ್ ನಲ್ಲಿ ತನ್ನ ಸಂತಾನಾಭಿವೃದ್ಧಿ ಮಾಡಿ ಸೋಂಕು ಉಂಟು ಮಾಡಿ ಕೆಂಪು ರಕ್ತ ಕಣಗಳನ್ನು ನಾಶಪಡಿಸುತ್ತದೆ ಎಂದು ತಿಳಿಸಿದರು. ತಾಲೂಕು ಆರೋಗ್ಯ ಅಧಿಕಾರಿ ಡಾ.ಇಂದುದರ್ ಸೋಂಕಿತ ಅನಾಫಿಲಿಸ್…
ಮಡಿಕೇರಿ ಜೂ.14 NEWS DESK : ಅಖಿಲ ಭಾರತೀಯ ಸೈನಿಕ ಶಾಲೆಗಳ ಗುಂಪು-ಹೆಚ್ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಕೊಡಗು ಸೈನಿಕ ಶಾಲೆಯ ತಂಡ ಉತ್ತಮ ಪ್ರದರ್ಶನ ನೀಡಿ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಸೈನಿಕ ಶಾಲೆ ಕೊಡಗಿನ ಆತಿಥ್ಯದಲ್ಲಿ ಕೂಡಿಗೆ ಕ್ರೀಡಾಶಾಲೆಯ ಅಸ್ಟ್ರೋ ಟರ್ಫ್ ಹಾಕಿ ಮೈದಾನದಲ್ಲಿ ನಡೆದ ಅಖಿಲ ಭಾರತೀಯ ಸೈನಿಕ ಶಾಲೆಗಳ ಗುಂಪು- ಹೆಚ್ ವಿಭಾಗದ ಹಾಕಿ ಪಂದ್ಯಾವಳಿ- 2025 ಪಂದ್ಯಾವಳಿ ನಡೆಯಿತು. ಪಂದ್ಯಾವಳಿಯಲ್ಲಿ ಜೂನಿಯರ್ ವಿಭಾಗದಿಂದ ಸೈನಿಕ ಶಾಲೆ ಕಝಕೂಟಂ, ಸಬ್ ಜೂನಿಯರ್ ವಿಭಾಗದಿಂದ ಸೈನಿಕ ಶಾಲೆ ಅಮರಾವತಿನಗರ ಹಾಗೂ ಬಾಲಕಿಯರ ಜೂನಿಯರ್ ವಿಭಾಗದಿಂದ ಸೈನಿಕ ಶಾಲೆ ಕಲಿಕಿರಿ ಪ್ರಥಮ ಸ್ಥಾನ ಪಡೆದುಕೊಂಡಿತು. ಜೂ.9 ರಿಂದ ಐದು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಕೇರಳದ ಸೈನಿಕ ಶಾಲೆ ಕಝಕೂಟಂ, ಆಂಧ್ರಪ್ರದೇಶದ ಸೈನಿಕ ಶಾಲೆ ಕಲಿಕಿರಿ, ತಮಿಳುನಾಡಿನ ಸೈನಿಕ ಶಾಲೆ ಅಮರಾವತಿನಗರ ಮತ್ತು ಅತೀಥೆಯ ತಂಡವಾದ ಸೈನಿಕ ಶಾಲೆ ಕೊಡಗು ಭಾಗವಹಿಸಿದ್ದವು. ಇದರೊಂದಿಗೆ ಪಂದ್ಯಾವಳಿಯಲ್ಲಿ ಪ್ರತಿ ಶಾಲೆಯಿಂದ ಬಾಲಕರ ಜೂನಿಯರ್,…
ಮಡಿಕೇರಿ ಜೂ.14 NEWS DESK : ಹುದಿಕೇರಿಯಲ್ಲಿ ನೂತನ ವಿದ್ಯುತ್ ಪ್ರಸರಣ ಉಪ-ಕೇಂದ್ರ ಸ್ಥಾಪನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಈ ಹಿಂದೆ ಕ್ಷೇತ್ರದ ಜನತೆಗೆ ಕೊಟ್ಟ ಭರವಸೆಯಂತೆ ಈ ಭಾಗದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಉತ್ತಮ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಒದಗಿಸುವ ಸಲುವಾಗಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಶೀಘ್ರದಲ್ಲೇ ಇದನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಚೀಫ್ ಎಲೆಕ್ಟ್ರಿಕ್ ಆಫೀಸರ್ ರೋಷನ್ ಅಪ್ಪಚ್ಚು ಮಾತನಾಡಿ, ಸುಮಾರು 19.34 ಕೋಟಿ ರೂಪಾಯಿ ವೆಚ್ಚದ ಈ ಯೋಜನೆ ಒಂದು ವರ್ಷದ ಕಾಲಾವಧಿಯಲ್ಲಿ ಪೂರ್ಣಗೊಳ್ಳಲಿದ್ದು, ಉಪ ಕೇಂದ್ರದಿಂದ 11 ಕೆವಿಯ 12 ಮಾರ್ಗ ಪೊನ್ನಂಪೇಟೆಯಿಂದ ಹುದಿಕೇರಿವರೆಗೆ ಹೊರಹೋಗಲಿದೆ ಎಂದರು. ಶಾಸಕರ ಪ್ರಯತ್ನದಿಂದಾಗಿ ಕ್ಷೇತ್ರಾದ್ಯಂತ ಹಲವು ವಿದ್ಯುತ್ ಉಪ-ಕೇಂದ್ರಗಳು ಸ್ಥಾಪನೆಗೊಳ್ಳುತಿದೆ ಎಂದು ಹೇಳಿದರು. ಈ ಸಂದರ್ಭ ಚೆಸ್ಕಾಂ ಅಧಿಕಾರಿಗಳು, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷ ಸೂರಜ್,…
ವಿರಾಜಪೇಟೆ ಜೂ.14 NEWS DESK : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಗೊಂಡಿದ್ದು, ಅತ್ಯುತ್ತಮ ಶೈಕ್ಷಣಿಕ ವರದಿ ಪ್ರಶಸ್ತಿಗೆ ವಿರಾಜಪೇಟೆಯ ಪತ್ರಕರ್ತರಾದ ರಜಿತ ಕಾರ್ಯಪ್ಪ ಭಾಜನರಾಗಿದ್ದಾರೆ. ವಿರಾಜಪೇಟೆಯ ಪ್ರಗತಿ ಶಾಲೆಯ ಮುಖ್ಯಸ್ಥರಾದ ಮಾದಂಡ ತಿಮ್ಮಯ್ಯ ಅವರು ತಮ್ಮ ತಾಯಿ ದಿವಂಗತ ತುಂಗಾ ಪೂವಯ್ಯ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಶೈಕ್ಷಣಿಕ ವರದಿಗೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ “ಸರಕಾರಿ ಶಾಲೆ ಆದರ್ಶ ಸಂಸ್ಥೆ” ವರದಿಗೆ ರಜಿತಾ ಕಾರ್ಯಪ್ಪ ಪಡೆದುಕೊಂಡಿದ್ದಾರೆ. ಜೂನ್ 22 ರಂದು ನಡೆಯಲಿರುವ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕಾರ್ಯದರ್ಶಿ ತಿಳಿಸಿದ್ದಾರೆ.
ಪೊನ್ನಂಪೇಟೆ ಜೂ.14 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧೀನದಲ್ಲಿ ‘ಕೆ.ಎಂ.ಎ. ದಫ್ ಮುಟ್ಟ್ (ರಾತೀಬ್)’ ತಂಡವನ್ನು ನೂತನವಾಗಿ ಅಸ್ತಿತ್ವಕ್ಕೆ ತರಲಾಗಿಗಿದ್ದು, ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ದಫ್ ಮುಟ್ಟ್ ಪ್ರದರ್ಶನವನ್ನು ಪ್ರಸ್ತುತಪಡಿಸಿದೆ. ಈ ಮೂಲಕ ಕೊಡವ ಮುಸ್ಲಿಮರ ಸಾಂಪ್ರದಾಯಿಕ ಧಾರ್ಮಿಕ ಕಲೆಯನ್ನು ಬೆಂಗಳೂರು ದೂರದರ್ಶನ ಚಂದನ ವಾಹಿನಿ ದಾಖಲೀಕರಣಗೊಳಿಸಿತು. ಕೊಡವ ಮುಸ್ಲಿಂ ಸಮುದಾಯದ ಸಾಂಪ್ರದಾಯಿಕ ಧಾರ್ಮಿಕ ಕಲೆಯಾದ ‘ದಫ್ ಮುಟ್ಟ್’ ಅನ್ನು ಮತ್ತಷ್ಟು ಪ್ರೋತ್ಸಾಹಿಸಿ ಅದರ ಅಸ್ತಿತ್ವವನ್ನು ಉಳಿಸಿ ಬೆಳೆಸುವ ಹಿನ್ನೆಲೆಯಲ್ಲಿ ಈ ತಂಡವನ್ನು ರಚಿಸಲಾಗಿದ್ದು, ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಹೆಚ್.ಸೂಫಿ ಹಾಜಿ ಅವರ ನೇತೃತ್ವದಲ್ಲಿ ಬೆಂಗಳೂರಿಗೆ ತೆರಳಿದ ‘ಕೆ.ಎಂ.ಎ. ದಫ್ ಮುಟ್ಟ್’ ತಂಡ ದೂರದರ್ಶನದ ಅತ್ಯಾಧುನಿಕ ಸ್ಟುಡಿಯೋದಲ್ಲಿ ಈ ಕಲೆಯನ್ನು ಎರಡು ಗಂಟೆಗಳ ಕಾಲ ಪ್ರದರ್ಶಿಸಿತು. ಈ ಸಂದರ್ಭ ಮಾತನಾಡಿದ ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಸೂಫಿ ಹಾಜಿ, ಧೀರತ್ವ ತೋರಿದ ಹುತಾತ್ಮ ಸೂಫಿವರ್ಯರನ್ನು ಸ್ತುತಿಗೀತೆಗಳ ಮೂಲಕ ಸ್ಮರಿಸುವ ಸೂಫಿ ಸಾಹಿತ್ಯದ ಪ್ರಮುಖ ಭಾಗವಾಗಿರುವ ದಫ್ ಮುಟ್ಟ್ ಕೊಡವ…
ಮಡಿಕೇರಿ ಜೂ.14 NEWS DESK : ಕೊಡಗು ಜಿಲ್ಲೆಯಲ್ಲಿ 2024-25ನೇ ಸಾಲಿನ ಕಾರ್ಯಾದೇಶದಂತೆ ಮಳೆಹಾನಿ ಕಾಮಗಾರಿಗಳು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್- ಕೇಂದ್ರ ಸರ್ಕಾರದ ಅನುದಾನ) ಅನುದಾನದಿಂದ ನಡೆಯುತ್ತಿದೆ. ಆದರೆ ಜಿಲ್ಲೆಯ ಕಾಂಗ್ರೆಸಿಗರು ಈ ಕಾಮಗಾರಿಗಳನ್ನು ರಾಜ್ಯ ಸರ್ಕಾರದ ಅನುದಾನದಿಂದ ಕೈಗೆತ್ತಿಕೊಳ್ಳಲಾಗಿದೆ ಎಂದು ಜನರ ಹಾದಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿರಾಜಪೇಟೆ ಮಂಡಲ ಬಿಜೆಪಿಯ ವಕ್ತಾರರು ಹಾಗೂ ಕೊಡಗು ಜಿಲ್ಲಾ ದಿಶಾ ಸಮಿತಿಯ ಸದಸ್ಯರಾದ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೋಟ್ಯಾಂತರ ರೂ. ಎನ್ಡಿಆರ್ಎಫ್ ಅನುದಾನದಿಂದ ಜಿಲ್ಲಾ ವ್ಯಾಪಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಈ ಕಾಮಗಾರಿ ರಾಜ್ಯ ಸರ್ಕಾರದ ಅನುದಾನದಿಂದ ಕಾರ್ಯಗತಗೊಳ್ಳುತ್ತಿದೆ ಎಂದು ಕಾಂಗ್ರೆಸಿಗರು ಪ್ರತಿಬಿಂಬಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎನ್ಡಿಆರ್ಎಫ್ ಶೇ.75ರಷ್ಟು ಅನುದಾನ ನೀಡಿದರೆ ಉಳಿದ ಶೇ.25ನ್ನು ರಾಜ್ಯ ಸರ್ಕಾರ ನೀಡಬೇಕಾಗುತ್ತದೆ. 2024-25ನೇ ಸಾಲಿನಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ರಸ್ತೆ ದುರಸ್ತಿಯ 495 ಕಾಮಗಾರಿಗಳಿಗೆ ಎನ್ಡಿಆರ್ಎಫ್ ಮೂಲಕ 1,483.69 ಲಕ್ಷ…
ಮಡಿಕೇರಿ ಜೂ.14 NEWS DESK : ಮಡಿಕೇರಿ ತಾಲ್ಲೂಕಿನ ಮುಕೋಡ್ಲು ಗ್ರಾಮಕ್ಕೆ ತೆರಳುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸ್ಥಳೀಯ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತದ ಕೇಂದ್ರ ಸ್ಥಾನವಾದ ಮಡಿಕೇರಿಯಿಂದ ಕೇವಲ 15 ಕಿ.ಮೀ ದೂರದಲ್ಲಿರುವ ಮುಕ್ಕೋಡ್ಲು ಗ್ರಾಮ ಕಳೆದ ಹಲವು ದಶಕಗಳಿಂದ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಗುರಿಯಾಗಿದೆ. ರಾಜಕೀಯವಾಗಿ ಹೆಚ್ಚು ಪ್ರಭಾವೀ ಗ್ರಾಮವಾಗಿದ್ದರೂ ಜನಪ್ರತಿನಿಧಿಗಳ ಕರುಣೆ ಈ ಗ್ರಾಮಕ್ಕೆ ವರವಾಗಿ ದೊರೆತ್ತಿಲ್ಲ. ಮುಕ್ಕೋಡ್ಲುವಿನ ಕಲ್ಲುಕೊಟ್ಟು ವರೆಗಿನ ರಸ್ತೆ ಸಂಪೂರ್ಣವಾಗಿ ಹೊಂಡ ಗುಂಡಿಗಳಿಂದ ಕೂಡಿದ್ದು, ವಾಹನಗಳ ಸಂಚಾರ ಅಸಾಧ್ಯವಾಗಿದೆ. ಮುಕ್ಕೋಡ್ಲು ಮೂಲಕ ಪ್ರಖ್ಯಾತ ಪ್ರವಾಸಿತಾಣ ಮಾಂದಲಪಟ್ಟಿ ಹಾಗೂ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಗೂ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಮಳೆಗಾಲದಲ್ಲಿ ಈ ರಸ್ತೆಯಲ್ಲಿ ಸಂಚರಿಸುವುದು ದೊಡ್ಡ ಸಾಹಸವೇ ಆಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯಾವುದೇ ಅನುದಾನ ಮುಕ್ಕೋಡ್ಲು ಭಾಗದ ಗ್ರಾಮೀಣ ರಸ್ತೆಯ ಅಭಿವೃದ್ಧಿಗೆ ವಿನಿಯೋಗವಾಗಿಲ್ಲ ಎನ್ನುವ ಆರೋಪ ಗ್ರಾಮಸ್ಥರಿಂದ ಕೇಳಿ ಬಂದಿದೆ. ಮುಕ್ಕೋಡ್ಲು ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ನೂರಾರು ಗ್ರಾಮಸ್ಥರು ನೆಲೆಸಿದ್ದಾರೆ.…
ಮಡಿಕೇರಿ ಜೂ.14 NEWS DESK : ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಸುಸಜ್ಜಿತ ಹಾಕಿ ಮೈದಾನ ನಿರ್ಮಾಣವಾಗುತ್ತಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪರಿಶೀಲನೆ ನಡೆಸಿದರು. ಶಾಲೆಯ ಅಧ್ಯಾಪಕರು, ಆಡಳಿತ ಮಂಡಳಿ ಹಾಗೂ ಅಧಿಕಾರಿಗಳಿಂದ ಅಗತ್ಯ ಮಾಹಿತಿಯನ್ನು ಪಡೆದರು. ಬಳಿಕ ತಮ್ಮ ಸಲಹೆ ಸೂಚನೆಗಳನ್ನು ನೀಡಿ, ಮಕ್ಕಳ ಕ್ರೀಡಾ ಭವಿಷ್ಯದ ದೃಷ್ಟಿಯಿಂದ ಮೈದಾನದ ಉನ್ನತೀಕರಣ ಹಾಗೂ ಸೌಲತ್ತುಗಳ ಒದಗಿಸುವುದು ತನ್ನ ಪ್ರಥಮ ಆದ್ಯತೆಯಾಗಿದ್ದು, ಮಕ್ಕಳಿಗೆ ಅನುಕೂಲ ಆಗುವಂತೆ ಎಲ್ಲಾ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕೆಂದು ಸಲಹೆ ನೀಡಿದರು. ಶಾಲಾ ಮೈದಾನವನ್ನು ಉನ್ನತೀಕರಣಗೊಳಿಸಿ, ಹಾಕಿ ಆಟಕ್ಕೆ ಮೈದಾನ ನಿರ್ಮಿಸುವ ಬಗ್ಗೆ ಚರ್ಚಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು, 2027 ರಲ್ಲಿ ಅಜ್ಜಿಕುಟ್ಟಿರ ಕುಟುಂಬದವರು ಹಮ್ಮಿಕೊಂಡಿರುವ ಹಾಕಿ ಉತ್ಸವವನ್ನು ಇದೇ ಮೈದಾನದಲ್ಲಿ ನಡೆಸಲು ಚಿಂತಿಸುತ್ತಿರುವುದಾಗಿ ಹೇಳಿದರು. ವೈಜ್ಞಾನಿಕವಾಗಿ ಎಲ್ಲವನ್ನು ಪರಿಶೀಲಿಸಿ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು. ಚೀಫ್ ಎಲೆಟ್ರಿಕಲ್ ಆಫೀಸರ್ ತಿತೀರ ರೋಷನ್ ಅಪ್ಪಚ್ಚು,…






