ಮಡಿಕೇರಿ ಜೂ.14 NEWS DESK : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಹೋಬಳಿ ಮಟ್ಟದ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಅತೀರಾ, ತುಂಗಾ-13901, ಆರ್ಎನ್ಆರ್-15048, ಇಂಟಾನ್, ಬಿ.ಆರ್-2655, ತನು ಮತ್ತು ಐ.ಆರ್-64 ಭತ್ತದ ಬಿತ್ತನೆ ಬೀಜಗಳು ಲಭ್ಯವಿರುತ್ತದೆ. ಬಿತ್ತನೆ ಬೀಜಗಳನ್ನು ಪಡೆದುಕೊಳ್ಳುವ ರೈತ ಫಲಾನುಭವಿಗಳು ಜಮೀನಿನ ಪಹಣಿ ಪತ್ರ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಗಳೊಂದಿಗೆ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಸರ್ಕಾರ ನಿಗಧಿಪಡಿಸಿದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ಪಡೆದುಕೊಳ್ಳುವಂತೆ ವಿರಾಜಪೇಟೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಮನವಿ ಮಾಡಿದ್ದಾರೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುವ ಭತ್ತದ ಬಿತ್ತನೆ ಬೀಜಗಳ ವಿವರ: ಅತೀರಾ ವಿರಾಜಪೇಟೆ 90, ಅಮ್ಮತ್ತಿ 35, ಬಾಳೆಲೆ 100 ಪೊನ್ನಂಪೇಟೆ 162.50, ಹುದಿಕೇರಿ 80, ಶ್ರೀಮಂಗಲ 90 ಒಟ್ಟು 557.50 ಕ್ವಿಂಟಾಲ್, ತುಂಗಾ-13901 ವಿರಾಜಪೇಟೆ 20, ಅಮ್ಮತ್ತಿ 20, ಬಾಳೆಲೆ 10, ಪೊನ್ನಂಪೇಟೆ 25,…
ಲೇಖಕ: admin
ಮಡಿಕೇರಿ ಜೂ.14 NEWS DESK : ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಿದ್ದರಿಂದ 4 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಬಿಡಲಾಯಿತು. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಶೀಘ್ರವೇ ಜಲಾಶಯದ ನೀರಿನ ಮಟ್ಟ ಗರಿಷ್ಠ ಮಿತಿಯನ್ನು ತಲುಪಬಹುದೆಂದು ಹಾರಂಗಿ ಜಲಾಶಯದ ಕಾರ್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮಿ ಐ.ಕೆ. ತಿಳಿಸಿದ್ದಾರೆ. ಈ ಹಿನ್ನೆಲೆ ಕಾವೇರಿ ನದಿ ಪಾತ್ರದಲ್ಲಿ ನೆಲೆಸಿರುವವರು ತಮ್ಮ ಆಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕೋರಿದ್ದಾರೆ.
ನಾಪೋಕ್ಲು ಜೂ.14 NEWS DESK : ಟೌನ್ ಅಂಗನವಾಡಿ ಕಾರ್ಯಕರ್ತೆ ಎಂ.ಪಿ.ಜ್ಯೋತಿ ಸೇವ ನಿವೃತ್ತಿ ಹೊಂದಿದ್ದು, ಬಲ್ಲಮಾವಟಿ ವೃತ್ತದ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಟೌನ್ ಅಂಗನವಾಡಿಯಲ್ಲಿ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭದಲ್ಲಿ ಕಾರ್ಯಕರ್ತರು ಹಾಗೂ ಸಹಾಯಕಿಯರು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಿರು. ಈ ಸಂದರ್ಭ ಉತ್ತಮ ಅಂಗನವಾಡಿ ಕಾರ್ಯಕರ್ತೆ ಎಂದು ರಾಜ್ಯ ಪ್ರಶಸ್ತಿ ಪಡೆದ ಹಳೇತಾಲುಕಿನ ಕಾರ್ಯಕರ್ತೆ ಭಾಗ್ಯವತಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶೀಲಾ, ಬಲ್ಲಮಾವಟಿ ಹಾಗೂ ನಾಪೋಕ್ಲು ವೃತ್ತದ ಕಾರ್ಯಕರ್ತೆಯರು, ಸಹಾಯಕಿ ಹಾಗೂ ಪುಟಾಣಿ ಮಕ್ಕಳು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಪವಿತ್ರ ಸ್ವಾಗತಿಸಿ, ನಿರೂಪಿಸಿದರು. ಭಾಗ್ಯವತಿ ವಂದಿಸಿದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಜೂ.14 NEWS DESK : ಕೃಷಿಕ ಜೀವನ ಮತ್ತು ಔದ್ಯಮಿಕ ಕ್ಷೇತ್ರದ ಸಾಧನೆಯಷ್ಟೆ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದ ಸಾಧನೆ ಬಾಳಿನ ನೆಮ್ಮದಿಗೆ ಅವಶ್ಯ ಎಂದು ಮಡಿಕೇರಿ ಆಕಾಶವಾಣಿ ಕೇಂದ್ರದ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ನುಡಿದರು. ಚೇರಂಬಾಣೆ ಗೌಡ ಸಮಾಜ ಮತ್ತು ಗೌಡ ಮಹಿಳಾ ಒಕ್ಕೂಟದ ವತಿಯಿಂದ ಸಮಾಜದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಬಳಿಕ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗು ವಿಭಿನ್ನ ಸಂಸ್ಕೃತಿ ಸಂಪ್ರದಾಯ ಉಳ್ಳ ಬಹು ಭಾಷಿಕರ ನೆಲೆವೀಡು. ದೇಶಕ್ಕೆ ಕೀರ್ತಿ ತಂದುಕೊಟ್ಟ ಸೈನಿಕರ ಕ್ರೀಡಾಳುಗಳ ತವರು. ಈ ಎಲ್ಲಾ ಕ್ಷೇತ್ರಗಳ ಸಾಧನೆಯೊಂದಿಗೆ ಅರೆಭಾಷಿಕ ಜನಾಂಗ ಇತ್ತೀಚಿನ ದಿನಗಳಲ್ಲಿ ಸಂಗೀತ, ನೃತ್ಯ, ನಾಟಕ, ಭರತನಾಟ್ಯ ಹೀಗೆ ಲಲಿತಕಲೆಗಳು ಮತ್ತು ಸಾಹಿತ್ಯದ ವಿವಿಧ ಸಾಧನಾ ಪಥಗಳಲ್ಲಿ ದಿಟ್ಟ ಹೆಜ್ಜೆ ಇಡುತ್ತಿರುವುದು ಆಶಾದಾಯಕ ಬೆಳವಣಿಗೆ. ಇದು ಜನಾಂಗದ ಸರ್ವಾಂಗೀಣ ಪ್ರಗತಿಯ ಪ್ರತೀಕ ಎಂದು ಸಂಪಾಜೆ ನುಡಿದರು. ಬಾನುಲಿಯಲ್ಲಿ ಬಿತ್ತರಗೊಳ್ಳುವ ಭಕ್ತಿಗೀತೆಗಳು, ಸುಪ್ರಭಾತ, ವೈವಿಧ್ಯಮಯ ಕಾರ್ಯಕ್ರಮಗಳು ಹಿರಿಯರ ಮುಂದಾಲೋಚನೆಯಿಂದ…
ನಾಪೋಕ್ಲು ಜೂ.14 NEWS DESK : ಅವಂದೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಗರ್ಭಗುಡಿ ಮತ್ತು ತೀರ್ಥ ಮಂಟಪದ ಗರ್ಭವಿನ್ಯಾಸ ಕಾರ್ಯಕ್ರಮ ಸಂಪನ್ನಗೊಂಡಿತು. ಪುರಾತನ ಇತಿಹಾಸ ಪ್ರಸಿದ್ಧ ಅವಂದೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಗರ್ಭಗುಡಿ ಮತ್ತು ತೀರ್ಥ ಮಂಟಪದ ಗರ್ಭವಿನ್ಯಾಸ, ಹೋಮ, ಹವನ ಮತ್ತು ಬಲಿ ಪೂಜೆ ವಿಧಿ ವಿಧಾನಗಳನ್ನು ಕಾಸರಗೋಡಿನ ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರು ಮತ್ತು ತಂಡದವರಾದ ಮುರಾರಿ, ಮಧು, ಪ್ರಸನ್ನ, ಶರತ್, ಸುಪ್ರೀತ್ ನೆರವೇರಿಸಿದರು. ದೇವಸ್ಥಾನವನ್ನು ಪುನರ್ ಪ್ರತಿಷ್ಠಾಪನೆ ಮಾಡುವ ಉದ್ದೇಶದಿಂದ ಜೀರ್ಣೋದ್ಧಾರ ಕೆಲಸ ಕಾರ್ಯಗಳು ಯಶಸ್ವಿಯಾಗಿ ನಡೆಯುತ್ತಿದೆ. ಈ ಅಭಿವೃದ್ಧಿ ಕೈಂಕರ್ಯದಲ್ಲಿ ಅವಂದೂರು ಗ್ರಾಮದ ಗ್ರಾಮಸ್ಥರು ಹಾಗೂ ಹೊರಗಿನ ದಾನಿಗಳು ತನು ಮನ ಧನ ಸಹಾಯ ನೀಡಿ ಕೈ ಜೋಡಿಸುತ್ತಿದ್ದಾರೆ. ಕ್ಷೇತ್ರಕ್ಕೆ ಆಗಮಿಸಿದ ತಂತ್ರಿಗಳನ್ನು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಮತ್ತು ಗ್ರಾಮಸ್ಥರ ಉಪಸ್ಥಿತಿಯಲ್ಲಿ ಧಾರ್ಮಿಕ ಸಂಪ್ರದಾಯದಂತೆ ಗೌರವಯುತವಾಗಿ ಶಿವ ಸ್ವರೂಪ ಪೂರ್ಣಕುಂಭ ಕಳಶದ ಮೆರವಣಿಗೆಯೊಂದಿಗೆ ಮುತ್ತೈದೆಯರು ಬರಮಾಡಿಕೊಂಡರು. ಕಾರ್ಯಕ್ರಮದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ…
ಕುಶಾಲನಗರ NEWS DESK ಜೂ.14 : ಮನುಷ್ಯನ ಜೀವನದಲ್ಲಿ ನೀರಿನ ಪಾತ್ರ ಅತೀ ಮುಖ್ಯವಾಗಿದ್ದು, ಜಲ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಕುಶಾಲನಗರ ಭೂಮಿಕ ಮಹಿಳಾ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಜೆ ಫಿಲೋಮಿನಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಕುಶಾಲನಗರ ಕಾವೇರಿ ಮಹಾ ಆರತಿ ಕ್ಷೇತ್ರದಲ್ಲಿ ನಡೆದ 173 ನೆಯ ಹುಣ್ಣಿಮೆ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸ್ವಚ್ಛವಾಗಿ ಹರಿಯುವ ನದಿಯ ನೀರನ್ನು ಕಲುಷಿತಗೊಳಿಸದಂತೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು, ಪ್ರಕೃತಿ ಪರಿಸರವನ್ನು ಆರಾಧಿಸುವ ಮೂಲಕ ಸಂರಕ್ಷಣೆ ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಆರತಿ ಪೂಜೆ ಕಾರ್ಯಕ್ರಮದ ಅಂಗವಾಗಿ ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರು ಅರ್ಚನೆ ಅಷ್ಟೋತ್ತರ ಮೂಲಕ ನದಿಗೆ ಆರತಿ ಬೆಳಗಿದರು. ಇದೇ ಸಂದರ್ಭ ಕುಶಾಲನಗರ ಪುರಸಭೆಯಲ್ಲಿ 35 ವರ್ಷಗಳ ಕಾಲ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಕುಪ್ಪು ಸ್ವಾಮಿ ಅವರನ್ನು ಆರತಿ ಬಳಗದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರು ಹಾಗೂ ನಮಾಮಿ ಕಾವೇರಿ…
ಮಡಿಕೇರಿ ಜೂ.13 NEWS DESK : ಕೊಡಗು ಪತ್ರಕತ೯ರ ಸಂಘ (ರಿ)ದ ವತಿಯಿಂದ ವಾರ್ಷಿಕ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನಿಸಲಾಗಿದೆ. ಸಂಘದಿಂದ 8 ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದ್ದು, ಮುದ್ರಣ ಮಾಧ್ಯಮಕ್ಕೆ ಅತ್ಯುತ್ತಮ ಕ್ರೀಡೆ, ರಾಜಕೀಯ, ಕೃಷಿ ಹಾಗೂ ಗ್ರಾಮೀಣ ವರದಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಇದರೊಂದಿಗೆ ಸಂಘದ ಹಿರಿಯ ಸಲಹೆಗಾರರಾದ ಶಕ್ತಿ ದಿನ ಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ.ಅನಂತಶಯನ ಅವರು ತಮ್ಮ ತಾಯಿ ರಾಜಲಕ್ಷ್ಮಿ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿ, 2. ಗ್ರಾಮೀಣ ವರದಿ – ಕೊಡಗು ಚೇಂಬರ್ ಆಫ್ ಕಾಮಸ್೯ ಅಧ್ಯಕ್ಷ ಬಿ.ಆರ್. ನಾಗೇಂದ್ರಪ್ರಸಾದ್ ಮತ್ತು ಪುತ್ರ ಬಿ.ಎನ್. ಅಂಜನ್ ಅವರು ದಿವಂಗತ ಬಿ.ಆರ್.ಶಶಿರಮ್ಮ ಮತ್ತು ದಿವಂಗತ ಬಿ.ಟಿ. ರಾಮದಾಸ ಶೆಟ್ಟಿ ಅವರ ಜ್ಞಾಪಕಾಥ೯ ಸ್ಫಾಪಿಸಿರುವ ದತ್ತಿ ಪ್ರಶಸ್ತಿ. ಕೖಷಿ ವರದಿ – ಶ್ರೀಮತಿ ಕಾಂತಿ ಸತೀಶ್ ಅವರು ನೀಡಿರುವ ದತ್ತಿ ಪ್ರಶಸ್ತಿ. 4 ಕ್ರೀಡಾವರದಿ – ದಿ.ಕೆ.ಬಿ. ಮಹತೇಂಶ್ ಸ್ಮರಣಾಥ೯ ಅವರ ಪತ್ನಿ ಭಾಗೀರಥಿ ಅವರು ನೀಡಿರುವ…
ಕುಶಾಲನಗರ NEWS DESK ಜೂ.14 : ಕೊಡಗು ಜಿಲ್ಲಾ ವ್ಯಾಪ್ತಿಯ ವಿರಾಜಪೇಟೆ, ಮಡಿಕೇರಿ, ಸೋಮವಾರಪೇಟೆ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಘಟಕ ಪ್ರತಿನಿಧಿಗಳ ಮತ್ತು ಸಂಯೋಜಕರ ಸಭೆಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ(NDRF) ಅಧಿಕಾರಿಗಳ ಉಪಸ್ಥಿತಿಯಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ನಡೆಸಲಾಯಿತು. ಈ ಸಂದರ್ಭ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ ಪಾಯಸ್ ಶೌರ್ಯ ಕಾರ್ಯಕ್ರಮದ ಹಿನ್ನೆಲೆ ಹಾಗೂ ಸೇವಾ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸಿದರು. ಜೊತೆಗೆ ಪ್ರಕೃತಿ ವಿಕೋಪ ಸಂದರ್ಭ ಶೌರ್ಯ ಸ್ವಯಂ ಸೇವಕರ ಸಹಕಾರದ ಬಗ್ಗೆ ಪತ್ರವನ್ನು NDRF ಅಧಿಕಾರಿಗಳಿಗೆ ನೀಡಿದರು. ಕೊಡಗು ಜಿಲ್ಲಾ ವಿಪತ್ತು ನಿರ್ವಹಣಾ ಕೋಶದ ಅಧಿಕಾರಿಗಳಾದ ಅನನ್ಯ ವಾಸುದೇವನ್ ಈ ಸಂದರ್ಭ ಮಾತನಾಡಿ, ವಿಪತ್ತಿನ ಸಂದರ್ಭದಲ್ಲಿ ಸ್ಥಳೀಯ ಸ್ವಯಂ ಸೇವಕರ ಸೇವೆ ಬಹಳ ಮುಖ್ಯವಾಗಿರುತ್ತದೆ ಎಂದರಲ್ಲದೆ ವಿಪತ್ತು ನಿರ್ವಹಣೆ ಕೇವಲ ಸರ್ಕಾರದ ಕೆಲಸವಲ್ಲ, ಸರ್ಕಾರದ ಜತೆ ಸಾರ್ವಜನಿಕರ ಜವಾಬ್ದಾರಿ ಕೂಡ ಮುಖ್ಯವಾಗಿದೆ, ರಾಜ್ಯದಲ್ಲಿ ಸರ್ಕಾರೇತರ ಸಂಸ್ಥೆಯಾಗಿ ಸಮರ್ಪಕವಾದ ಆಡಳಿತ ವ್ಯವಸ್ಥೆ ಮತ್ತು ಉತ್ತಮ…
ಕುಶಾಲನಗರ NEWS DESK ಜೂ.14 : ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿಗೆ ಈ ಬಾರಿ ಶೇ.100ರಷ್ಟು ಫಲಿತಾಂಶ ಬಂದಿದೆ. ಉತ್ತೀರ್ಣ ಆದವರ ಪೈಕಿ 100 ವಿದ್ಯಾರ್ಥಿಗಳು ವಿವಿಧ ಜಾಗತಿಕ ಕಂಪನಿಗಳಿಗೆ ನೇಮಕ ಮತ್ತು ತರಬೇತಿ ಕಾರ್ಯಗಾರ ಗಳಿಗೆ ಆಯ್ಕೆಯಾಗಿದ್ದಾರೆ. ಇನ್ನು ಕೆಲವರು ಹೆಚ್ಚಿನ ವ್ಯಾಸಂಗಕ್ಕೆ ಇಚ್ಚಿಸಿದ್ದು ಕೆಸಿಇಟಿ ಪರೀಕ್ಷೆಗಳನ್ನು ಬರೆದಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಪರಶಿವಮೂರ್ತಿ ತಿಳಿಸಿದ್ದಾರೆ. ಇತ್ತೀಚೆಗೆ ಕಾಲೇಜಿನಲ್ಲಿ ನಡೆದ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಲೇಜಿನಲ್ಲಿ ನಾಲ್ಕು ವಿಭಾಗದಲ್ಲಿ ಕೂಡ ಶೇ. 100 ಫಲಿತಾಂಶ ಬಂದಿದ್ದು ಹರ್ಷದಾಯಕ ವಿಷಯವಾಗಿದೆ. ವಿಭಾಗದ ಮುಖ್ಯಸ್ಥರು, ಬೋಧಕ, ಬೋಧಕೇತರ ವರ್ಗ ಹಾಗೂ ಕಾಲೇಜು ಸಿಬ್ಬಂದಿ ಶ್ರಮವೇ ಇದಕ್ಕೆ ಕಾರಣ ಎಂದರು. ಈ ಸಂದರ್ಭ ಸಿವಿಲ್ ವಿಭಾಗದ ಮುಖ್ಯಸ್ಥ ಡಾ. ಎಸ್. ಸತೀಶ್ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ವಿದ್ಯಾರ್ಥಿಗಳ ಸಾಧನೆಗಳನ್ನು ಗೌರವಿಸುವ ಭಾಷಣಗಳು, ಸಾಂಸ್ಕೃತಿಕ ಪ್ರದರ್ಶನಗಳು ಮತ್ತು ಪ್ರಶಸ್ತಿ ವಿತರಣೆ ಈ ಸಂದರ್ಭ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ತಮ್ಮ ಕಳೆದ ವಿದ್ಯಾರ್ಥಿಗಳು…
ಮಡಿಕೇರಿ NEWS DESK ಜೂ.14 : ದಕ್ಷಿಣ ಕೊಡಗಿನ ಕುಟ್ಟದ ಬಾಡಗ ಮಹಿಳಾ ಸಾಂಸ್ಕೃತಿಕ ಮಂಡಳಿ ಬೆಳ್ಳಿ ಹಬ್ಬದ ಸಂಭ್ರದಲ್ಲಿದೆ. ಇತ್ತೀಚೆಗೆ ನಡೆದ ಮಂಡಳಿಯ 25ನೇ ವಾರ್ಷಿಕ ಮಹಾಸಭೆಯಲ್ಲಿ ಇನ್ನು ಮುಂದೆಯೂ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸಲು ನಿರ್ಧಾರ ಕೈಗೊಳ್ಳಲಾಯಿತು. ಮಹಿಳಾ ಸಾಂಸ್ಕೃತಿಕ ಮಂಡಳಿಯ ಕಚೇರಿಯ ಸಭಾಂಗಣದಲ್ಲಿ ನಡೆದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಡಳಿಯ ಅಧ್ಯಕ್ಷರಾದ ಕಳ್ಳಿಚಂಡ ಶಾಲಿನಿ ಕಾರ್ಯಪ್ಪ ಅವರು ಸಂಘದ ಯಶೋಗಾಥೆಯ ಕುರಿತು ವಿವರಿಸಿದರು. 2001ರಲ್ಲಿ ಮುಕ್ಕಾಟಿರ ರೇಣು ಗಣಪತಿ ಅವರ ಅಧ್ಯಕ್ಷತೆಯಲ್ಲಿ ಮಹಿಳಾ ಸಾಂಸ್ಕೃತಿಕ ಮಂಡಳಿ ಸ್ಥಾಪನೆಗೊಂಡಿತು. ಆರಂಭದ 6 ವರ್ಷಗಳ ಕಾಲ ರೇಣು ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು. 2007 ರಿಂದ ತಾವು ಅಧ್ಯಕ್ಷರಾಗಿ ಮುಂದುವರೆದಿದ್ದು, ಇದೀಗ ಮಂಡಳಿ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವುದು ಹರ್ಷ ತಂದಿದೆ ಎಂದರು. ಮಂಡಳಿಯಲ್ಲಿ 104 ಮಹಿಳಾ ಸದಸ್ಯರಿದ್ದು, ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ನಡೆಸುತ್ತಾ ಬರಲಾಗಿದೆ. ಅಪಘಾತ ಮತ್ತು ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವವರಿಗೆ ಮಂಡಳಿ ಧನ ಸಹಾಯ ಮಾಡಿದೆ. ವಿದ್ಯಾರ್ಥಿಗಳಿಗೆ…






