ವಿರಾಜಪೇಟೆ ಜು.10 NEWS DESK : ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ವಿರಾಜಪೇಟೆಯಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಹಾಗೂ ನಾನಾ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ವಿರಾಜಪೇಟೆಯ ಕಾರು ನಿಲ್ದಾಣದಲ್ಲಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಯಿತು. ವಿರಾಜಪೇಟೆಯ ಮಾರಿಯಮ್ಮ ದೇವಾಲಯದ ಬಳಿಯಿಂದ ಮೆರವಣಿಗೆಯಲ್ಲಿ ಸಾಗಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿ ಕಾರು ನಿಲ್ದಾಣದಲ್ಲಿ ಜಮಾವಣೆಗೊಂಡರು. ನಂತರ ಮಾತನಾಡಿದ ಸಿ.ಐ.ಟಿ.ಯು ಪ್ರಧಾನ ಕಾರ್ಯದರ್ಶಿ ಎ.ಸಿ. ಸಾಬು, ಕೇಂದ್ರ ಸರಕಾರವು ಕಾರ್ಮಿಕ ನೀತಿಗಳಿಗೆ ವಿರುದ್ದವಾಗಿ ಕಾನೂನುಗಳನ್ನು ಜಾರಿಗೆ ತಂದಿದೆ. ಇಂದು ರಾಜ್ಯಾದಾದ್ಯಂತ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿ ಮುಷ್ಕರ ನಡೆಯುತ್ತಿದೆ. ಬೆಲೆ ಏರಿಕೆಯಿಂದಾಗಿ ಕಾರ್ಮಿಕರ ಬದುಕು ಶೋಚನೀತ ಸ್ಥಿತಿಗೆ ತಲುಪಿದ್ದಾರೆ. ಸುಮಾರು 70 ವರ್ಷಗಳಿಂದ ಕಾರ್ಮಿಕರಿಗೆ ನಿಗದಿಗೊಳಿಸಿರುವ ದುಡಿಮೆಯ ಸಮಯ 8 ಗಂಟೆ. ಆದರೆ ಕೇಂದ್ರ ಸರಕಾರವು 8 ಗಂಟೆ ಬದಲು 12 ಗಂಟೆ ದುಡಿಯುವಂತೆ ಕಾನೂನು…
ಲೇಖಕ: admin
ಕುಶಾಲನಗರ ಜು.10 NEWS DESK : ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ವರ್ಗದಿಂದ ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಜೆ.ಸಿ.ಟಿ.ಯು ಹಾಗೂ ಎಸ್.ಕೆ.ಎಂ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರವು ಕಾರ್ಮಿಕ ವಿರೋಧಿ ನೀತಿಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಅಲ್ಲದೇ ಕಾರ್ಮಿಕರ ಹತ್ತಲವಾರು ಬೇಡಿಕೆಗಳನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಅವರು ಪಟ್ಟು ಹಿಡಿದರು. ನಂತರ ತಹಶಿಲ್ದಾರರ ಕಚೇರಿಗೆ ಮೆರವಣಿಗೆ ಸಾಗಿದ ಪ್ರತಿಭಟನಾಕಾರರು, ತಹಶಿಲ್ದಾರರ ಮೂಲಕ ಪ್ರಧಾನ ಮಂತ್ರಿಯವರಿಗೆ ಮನವಿ ಪತ್ರ ನೀಡಿದರು. ಸಿ.ಐ.ಟಿ.ಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರ ಕಾರ್ಮಿಕ ಆಗ್ರಹ, ಬೇಡಿಕೆಗಳನ್ನು ಈಡೇರಿಸಬೇಕು ಎಂದರು. ಈ ಸಂದರ್ಭ ವಿವಿಧ ಸಂಘಟನೆಗಳ ಪ್ರಮುಖರಾದ ಉದಯ್ ಕುಮಾರ್, ಜಮುನಾ, ಸಾವಿತ್ರಿ, ರಾಣಿ, ಲಲಿತಮ್ಮ, ರಘು, ಗಿರೀಶ್, ಕೃಷ್ಣಕುಮಾರ್, ಜಯರಾಮ್, ಯೋಗೇಶ್, ಜಯಣ್ಣ, ಮಂಜುನಾಥ್ ಹಾಗೂ ಐವತ್ತಕ್ಕೂ ಅಧಿಕ…
ದೆಹಲಿ ಜು.9 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವರಾದ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು. ಇದೇ ವೇಳೆ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಮಾಲೋಚನೆ ನಡೆಸಿದರು. ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಹಾಜರಿದ್ದರು.
ಮಡಿಕೇರಿ ಜು.9 NEWS DESK : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಜುಲೈ, 11 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಜು.11 ರಂದು ಬೆಳಗ್ಗೆ 11.30 ಗಂಟೆಗೆ ಮಡಿಕೇರಿಗೆ ಆಗಮಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದಾರೆ.
ಮಡಿಕೇರಿ ಜು.9 NEWS DESK : ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಜು.10 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, “ಸಾಮೂಹಿಕ ಸತ್ಯನಾರಾಯಣ” ಪೂಜೆ ಯಶಸ್ವಿಗೊಳಿಸಬೇಕಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.
ಮಡಿಕೇರಿ ಜು.9 NEWS DESK : ಮಡಿಕೇರಿ-ನಾಪೋಕ್ಲು-ಯಡಪಾಲ-ಕೆದಮುಳ್ಳೂರು-ವಿರಾಜಪೇಟೆ ಮಾರ್ಗ ಮೈಸೂರಿಗೆ ಹಾಗೆಯೇ ಮೈಸೂರು-ವಿರಾಜಪೇಟೆ-ಕೆದಮುಳ್ಳೂರು-ಯಡಪಾಲ-ನಾಪೋಕ್ಲು-ಮಡಿಕೇರಿ ಮಾರ್ಗದ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ನಾಪೋಕ್ಲುವಿನಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕರು, ಬೆಳಗ್ಗೆ 7 ಗಂಟೆಗೆ ಮಡಿಕೇರಿಯಿಂದ ಹೊರಟು ನಾಪೋಕ್ಲು-ಯಡಪಾಲ-ಕೆದಮುಳ್ಳೂರು-ವಿರಾಜಪೇಟೆ ಮಾರ್ಗ ಮೈಸೂರಿಗೆ ತೆರಳಿ ಮತ್ತೆ ಅದೇ ಮಾರ್ಗದಲ್ಲಿ ಸಂಚರಿಸಲಿದೆ ಎಂದು ಹೇಳಿದರು. ಹಲವು ವರ್ಷಗಳಿಂದ ಇಲ್ಲಿನ ಸ್ಥಳೀಯರು ಕೆಎಸ್ಆರ್ಟಿಸಿ ಬಸ್ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದ್ದರು, ಈ ಹಿನ್ನೆಲೆ ಸಾರ್ವಜನಿಕರ ಬೇಡಿಕೆ ಈಡೇರಿದೆ ಎಂದು ಪೊನ್ನಣ್ಣ ತಿಳಿಸಿದರು. ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಕ ಅಮರಲಿಂಗಯ್ಯ, ವಿಭಾಗೀಯ ಸಂಚಲನಾಧಿಕಾರಿ ಜಯ ಶಾಂತಕುಮಾರ್, ಮಡಿಕೇರಿ ಕೆಎಸ್ಆರ್ಟಿಸಿ ಘಟಕದ ವ್ಯವಸ್ಥಾಪಕರಾದ ಎಂ.ಮೆಹಬೂಬ್ ಅಲಿ ಇತರರು ಇದ್ದರು. ಇದೇ ಸಂದರ್ಭ ಗ್ರಾ.ಪಂ.ವತಿಯಿಂದ ನಿರ್ಮಾಣ ಮಾಡಿರುವ ಬಸ್ ನಿಲ್ದಾಣವನ್ನು ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ನಾಪೋಕ್ಲು ಗ್ರಾ.ಪಂ.ಅಧ್ಯಕ್ಷರಾದ ವನಜಾಕ್ಷಿ, ಉಪಾಧ್ಯಕ್ಷರಾದ ಶಶಿ ಮಂದಣ್ಣ, ಪಿಡಿಒ ಚೋಂದಕ್ಕಿ, ಸದಸ್ಯರು ಇತರರು ಇದ್ದರು.
ಮಡಿಕೇರಿ ಜು.9 NEWS DESK : ನಾಪೋಕ್ಲುವಿನ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ತಮ್ಮ 51ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬದವರ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ನಂತರ ಮಾತನಾಡಿದ ಶಾಸಕರು, ಕಾರ್ಯಕ್ರಮ ಆಯೋಜಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ಶಾಲೆಯಲ್ಲಿ ಓದಲು ಅವಕಾಶ ಸಿಕ್ಕಿರುವುದು ತಮಗೆ ಅದೃಷ್ಟವೇ ಸರಿ ಎಂದು ನುಡಿದರು. ಇಲ್ಲಿನ ಉತ್ತಮ ವಾತಾವರಣ, ಪರಿಸರ ಚೆನ್ನಾಗಿದ್ದು, ಲಭ್ಯವಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು. ಹೆಚ್ಚಿನ ವಿದ್ಯಾರ್ಥಿಗಳು ಇರುವ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಆಟದ ಮೈದಾನವನ್ನು ನಿರ್ಮಿಸಲಾಗುವುದು ಎಂದು ಇದೇ ಸಂದರ್ಭ ಭರವಸೆ ನೀಡಿದರು. ‘ವಿದ್ಯಾರ್ಥಿಗಳಲ್ಲಿ ಮುಂದಾಲೋಚನೆ ಹಾಗೂ ದೂರದೃಷ್ಟಿ ಇರಬೇಕು. ಪೋಷಕರ ಕನಸನ್ನು ನನಸು ಮಾಡಲು ಪ್ರಯತ್ನಿಸಬೇಕು. ಬದುಕು ಬದಲಾಯಿಸಲು ವಿಫುಲ ಅವಕಾಶಗಳಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು…
ಮಡಿಕೇರಿ ಜು.9 NEWS DESK : ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆಎಸ್ಆರ್ಟಿಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್ಗಳಲ್ಲಿ ಜುಲೈ, 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಫೀಡರ್ಗಳ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಈ ಫೀಡರ್ನಿಂದ ಹೊರಹೊಮ್ಮುವ ವಿರಾಜಪೇಟೆ ಪಟ್ಟಣ, ಗೋಣಿಕೊಪ್ಪ ರಸ್ತೆ, ಪಂಜರಪೇಟೆ, ವಿದ್ಯಾನಗರ, ಕೆಎಸ್ಆರ್ಟಿಸಿ, ಶಾಂತಿನಗರ, ಸುಭಾಶ್ನಗರ, ಮೀನುಪೇಟೆ, ಹೆಗ್ಗಳ, ಬೇಟೋಳಿ, ಆರ್ಜಿ, ರಾಮನಗರ, ತೋರ, ಬೂದಿಮಾಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಜು.9 NEWS DESK : ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟ ಹಾಗೂ ಧಾರವಾಡ ಜಿಲ್ಲಾ ಕಿವುಡರ ಸಂಘದ ಸಹಯೋಗದಲ್ಲಿ ನಡೆದ 20ನೇ ಕರ್ನಾಟಕ ರಾಜ್ಯ ಕಿವುಡರ ಚೆಸ್ ಚಾಂಪಿಯನ್ಶಿಪ್ನಲ್ಲಿ ಕೊಡಗಿನ ಪದಾಧಿಕಾರಿಗಳು ಭಾಗವಹಿಸಿದ್ದರು. ಹುಬ್ಬಳ್ಳಿಯ ಶಾಂತಿನಾಥ ಸಾಂಸ್ಕೃತಿಕ ಭವನದಲ್ಲಿ ಜು.3 ರಿಂದ 5ರ ವರೆಗೆ ನಡೆದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲಾ ಕಿವುಡರ ಸಂಘದ ಉಪಾಧ್ಯಕ್ಷ ಶಂಕರನಾರಾಯಣ ಹೆಬ್ಬಾರ್ ಹಾಗೂ ಕಾರ್ಯದರ್ಶಿ ರಂಜಿತ್ ಪಾಲ್ಗೊಂಡಿದ್ದರು.
ಮಡಿಕೇರಿ ಜು.9 NEWS DESK : ಯುವ ಕಾಂಗ್ರೆಸ್ ವತಿಯಿಂದ ವಿಕಾಸ್ ಜನ ಸೇವಾ ಟ್ರಸ್ಟ್ ವೃದ್ಧಾಶ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ 51ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ವಯೋವೃದ್ಧರ ಯೋಗ ಕ್ಷೇಮ ವಿಚಾರಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನಂತರ ಹಿರಿಯರಿಗೆ ಸ್ವೇಟರ್ ಹಾಗೂ ಬ್ಲಾಂಕೆಟ್ ಗಳನ್ನು ವಿತರಿಸಿ ಊಟದ ವ್ಯವಸ್ಥೆಯನ್ನು ಮಾಡಲಾಯಿತು. ಕೊಡಗು ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಮೈಸಿ ಕತ್ತಾಣಿ, ರಾಹುಲ್ ಮಾರ್ಷಲ್, ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕವನ ಕೊತ್ತೊಳಿ, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಮೂಡ ಸದಸ್ಯರಾದ ಚಂದ್ರಶೇಖರ್ ಆರ್.ಪಿ, ಮಿನಾಜ್ ಪ್ರವೀಣ್, ಮಡಿಕೇರಿ ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೌಸರ್, ಮಡಿಕೇರಿ ನಗರಸಭ ಸದಸ್ಯರಾದ ಜಗದೀಶ್ ಜಿ.ಸಿ, ಕಾರ್ಮಿಕ ಘಟಕ ಜಿಲ್ಲಾ ಅಧ್ಯಕ್ಷ ದಿನೇಶ್ ಕೆ.ಆರ್, ಎನ್.ಎಸ್.ಯು.ಐ ಮಡಿಕೇರಿ ಬ್ಲಾಕ್ ಅಧ್ಯಕ್ಷ ಶರಣ್, ಸೇವಾದಳದ ನಜೀರ್, ಹಬೀಬ್, ಶೋಯಬ್ ಸಿದ್ದಾಪುರ, ಮಿಥುನ್ ಸಿದ್ದಾಪುರ, ಜಕ್ರಿಯ,…






