ನಾಪೋಕ್ಲು ಜ.24 NEWS DESK : ಹೊದವಾಡ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಕ್ರಮ ನಡೆಯಿತು. ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ಅವರ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಮಡಿಕೇರಿ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ಮಾತನಾಡಿ, ಮಕ್ಕಳು ಶಿಕ್ಷಣವನ್ನು ಪಡೆದು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು. ಓದುವ ವಯಸ್ಸಿನಲ್ಲಿ ಇತರ ಯಾವುದೇ ಆಕರ್ಷಣೆಗಳಿಗೆ ಒಳಗಾಗಬಾರದು. ಸುರಕ್ಷಿತ ಮತ್ತು ಅಸುರಕ್ಷಿತ ಸ್ಪರ್ಶಗಳ ಕುರಿತು ಮಕ್ಕಳಿಗೆ ಮಾಹಿತಿ ನೀಡಿ ಮಕ್ಕಳು ಯಾವುದೇ ದೌರ್ಜನಕ್ಕೆ ಒಳಗಾದರೆ ಮಕ್ಕಳ ಸಹಾಯವಾಣಿ ಸಂಖ್ಯೆ 1098ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದರು. ಜಿಲ್ಲಾ ಮಹಿಳಾ ಮಿಷನ್ ಶಕ್ತಿ ಸಂಯೋಜಕಿ ಮಮತಾ ಮಾತನಾಡಿ, ಹೆಣ್ಣುಮಕ್ಕಳಿಗೆ 18 ವರ್ಷ ತುಂಬಿದ ಬಳಿಕ ಗಂಡು ಮಕ್ಕಳಿಗೆ 21 ವರ್ಷ ತುಂಬಿದ ಬಳಿಕ ವಿವಾಹ ನೆರವೇರಿಸಬೇಕು ಎಂದರು. ಈ ಯೋಜನೆಯು ಸಂಕಷ್ಟದಲ್ಲಿರುವ ಮಹಿಳೆಯರು…
ಲೇಖಕ: admin
ವಿರಾಜಪೇಟೆ ಜ.24 NEWS DESK : ವಿರಾಜಪೇಟೆಯ ಅಮ್ಮತ್ತಿ ಕಾರ್ಮಾಡುವಿನ ರಾಮಮಂದಿರದಲ್ಲಿ ಜಾತ್ಯತೀತ ಜನತಾದಳದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಜೆಡಿಎಸ್ ಎಸ್ಸಿ-ಎಸ್ಟಿ ಘಟಕದ ಜಿಲ್ಲಾಧ್ಯಕ್ಷೆ, ಗ್ರಾ.ಪಂ ಮಾಜಿ ಸದಸ್ಯೆ ಅಮ್ಮತಿ ಜಯಮ್ಮ ಅವರ ನೇತೃತ್ವದಲ್ಲಿ ಪುಟಾಣಿ ಮಕ್ಕಳು, ಸಾರ್ವಜನಿಕರು, ಮಹಿಳೆಯರು ಹಾಗೂ ಪಕ್ಷದ ಮುಖಂಡರು ಕೇಕ್ ಕತ್ತರಿಸಿ, ಸಿಹಿ ಹಂಚಿ ಸಂಭ್ರಮಿಸದರು. ಈ ಸಂದರ್ಭ ವಿರಾಜಪೇಟೆ ತಾಲೂಕು ಅಧ್ಯಕ್ಷ ಪಿ.ಎ.ಮಂಜುನಾಥ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಜೀದ್ ಚೋಕಂಡಳ್ಳಿ, ಮಡಿಕೇರಿ ತಾಲೂಕಿನ ಅಲ್ಪಸಂಖ್ಯಾತರ ಘಟಕದ ಅಶ್ರಫ್, ಸಿದ್ದಾಪುರದ ಸಿಯಾಬುದ್ದೀನ್, ವಿರಾಜಪೇಟೆ ತಾಲ್ಲೂಕು ಕಾರ್ಯದರ್ಶಿ, ಹರ್ಷ ಟಿ.ಆರ್, ಮೇಘನಾ, ಸುಮತಿ, ಗೀತಾ, ಸರಸು ಸೇರಿದಂತೆ ಇತರ ಕಾರ್ಯಕರ್ತರು ಹಾಜರಿದ್ದರು.
ಕುಶಾಲನಗರ ಜ.24 NEWS DESK : ಮೈಸೂರು ಜಿಲ್ಲೆಯ ಸುತ್ತೂರು ಸಂಸ್ಥಾನ ಮಠ ಕನ್ನಡ ನಾಡಿನ ಕಲೆ, ಆಚಾರ, ಆಹಾರ, ಸಂಸ್ಕೃತಿ ಗಳ ಸಂಗಮ ಎಂದು ಕುಶಾಲನಗರದ ಉದ್ಯಮಿ ಎಸ್.ಎಲ್.ಎನ್ ಸಂಸ್ಥೆಯ ಸಾತಪ್ಪನ್ ಶ್ಲಾಘಿಸಿದರು. ನಂಜನಗೂಡು ತಾಲ್ಲೂಕು ಸುತ್ತೂರು ಮಠದ ಆವರಣದಲ್ಲಿ ಒಂದು ವಾರ ಕಾಲ ನಡೆದ ಐತಿಹಾಸಿಕ ಸುತ್ತೂರು ಜಾತ್ರೋತ್ಸವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಜೆಎಸ್ಎಸ್ ವಿದ್ಯಾಸಂಸ್ಥೆ ಗಳು ರಾಜ್ಯದಲ್ಲಿ ಅಷ್ಟೇ ಅಲ್ಲದೇ ದೇಶ ವಿದೇಶಗಳಲ್ಲಿ ತೆರೆದುಕೊಳ್ಳುವ ಮೂಲಕ ಲಕ್ಷಾಂತರ ಮಂದಿಗೆ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ಸಂಗತಿ. ಮಣಿಪುರ ಹಾಗೂ ನಾಗಲ್ಯಾಂಡ್ ಶಿಕ್ಷಣ ವಂಚಿತ ಸಾವಿರಾರು ಬಡ ಮಕ್ಕಳನ್ನು ಕರೆ ತಂದು ಸುತ್ತೂರು ಮಠದಲ್ಲಿ ತ್ರಿವಿಧ ದಾಸೋಹ ನೀಡುತ್ತಿರುವುದು ಸುಲಭದ ಸೇವೆಯಲ್ಲ ಎಂದು ಸಾತಪ್ಪನ್ ಹೇಳಿದರು. ಒಂದು ವಾರ ಕಾಲ ನಡೆಯುವ ಜಾತ್ರೋತ್ಸವ ದಲ್ಲಿ ದೇಶೀಯ ಕ್ರೀಡೆಗಳು, ಜಾನಪದ ಕಲೆಗಳು, ನಶಿಸುವ ಅಂಚಿನಲ್ಲಿರುವ ಎಲ್ಲಾ ಕ್ರೀಡಾ ಪ್ರಾಕಾರಗಳು ಜಾತ್ರೋತ್ಸವದಲ್ಲಿ ಸೇರುವ ಲಕ್ಷಾಂತರ ಮಂದಿಗೆ ಹೆಮ್ಮೆ…
ಮಡಿಕೇರಿ ಜ.23 NEWS DESK : ಕೊಡಗು ಜಿಲ್ಲೆಯಲ್ಲಿ ಯಶಸ್ವಿನಿ ಯೋಜನೆಯನ್ನು 2025-26 ನೇ ಸಾಲಿಗೂ ಮುಂದುವರೆಸಲು ಅರ್ಹ ಸದಸ್ಯರ ನೋಂದಣಿಯು ಪ್ರಾರಂಭಿಸಲಾಗಿದ್ದು, ಈ ಯೋಜನೆಯಡಿ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯರ ನೋಂದಣಿಗೆ ಇದೇ ಮಾರ್ಚ್ 31 ರ ವರಗೆ ಅವಕಾಶವಿದೆ. ಜಿಲ್ಲೆಯಲ್ಲಿರುವ ಯಾವುದೇ ಸಹಕಾರ ಸಂಘಗಳು/ ಸಹಕಾರ ಬ್ಯಾಂಕ್ಗಳು ಮತ್ತು ಸೌಹಾರ್ದ ಸಹಕಾರಿ ಸಂಘಗಳಲ್ಲಿ ಸದಸ್ಯರಾಗಿರುವವರು ಈ ಯೋಜನೆಯ ಉಪಯೋಗ ಪಡೆದುಕೊಳ್ಳಬಹುದು. ಅದರಂತೆ ಈ ಯಶಸ್ವಿನಿ ಯೋಜನೆಯ ವಿಮೆ ಮಾಡಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದೆ. ನೋಂದಣಿಗೆ ಲಗತ್ತಿಸಬೇಕಾದ ದಾಖಲೆಗಳು. ಅರ್ಜಿ ನಮೂನೆ, ರೇಷನ್ ಕಾರ್ಡ್/ ಆಧಾರ್ ಕಾರ್ಡ್, ಯೋಜನೆಗೆ ಒಳಪಡುವ ಸದಸ್ಯರ ಪ್ರತಿಯೊಬ್ಬರ ತಲಾ 2 ಫೋಟೋ, ಗ್ರಾಮೀಣ ಸಹಕಾರ ಸಂಘಗಳ ಹೊಸ ಸದಸ್ಯರ ನೋಂದಣಿ ಹಾಗೂ ನವೀಕರಣಕ್ಕೆ ಸಂಬಂಧಿಸಿದಂತೆ ಗರಿಷ್ಟ 04 ಸದಸ್ಯರ ಕುಟುಂಬ ಒಂದಕ್ಕೆ ರೂ 500 ಗಳ ವಂತಿಕೆ ಹಾಗೂ 04 ಕ್ಕಿಂತ ಹೆಚ್ಚಿನ ಸದಸ್ಯರುಗಳ ಕುಟುಂಬದ ಪ್ರತೀಯೊಬ್ಬ ಹೆಚ್ಚುವರಿ ಸದಸ್ಯರಿಗೆ ರೂ…
ಮಡಿಕೇರಿ ಜ.23 NEWS DESK : ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಅವಧಿಯಲ್ಲಿ ಆರಂಭಿಸಿದ್ದ, ‘ಜಮ್ಮಾಬಾಣೆ’ ಸಮಸ್ಯೆ ಬಗೆಹರಿಕೆಗೆ ಪೂರಕವಾಗಿರುವ ‘ಪೌತಿ ಖಾತೆ ಆಂದೋಲನ’ವನ್ನು ಈಗಿನ ಸರಕಾರ ಮುಂದುವರಿಸಬೇಕು ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಮ್ಮಾಬಾಣೆ’ ಸಮಸ್ಯೆಗೆ ಸಂಬಂಧಿಸಿದಂತೆ ಬಿಜೆಪಿಯ ವಿರುದ್ಧ ಅಸಂಬದ್ಧ ಹೇಳಿಕೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ಪ್ರಮುಖರು ಜನರ ಹಾದಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಜಮ್ಮಾಬಾಣೆ ಸಮಸ್ಯೆಯ ಶೇ.90ರಷ್ಟನ್ನು ಬಿಜೆಪಿ ಅಧಿಕಾರದ ಅವಧಿಯಲ್ಲಿ ಬಗೆಹರಿಸಲಾಗಿದೆ. ಅದರ ಲಾಭ ಬಿಜೆಪಿಗೆ ಹೋಗುತ್ತದೆ ಎನ್ನುವ ಆತಂಕದಲ್ಲಿರುವ ಕಾಂಗ್ರೆಸ್ ರಾಜಕೀಯ ಕಾರಣಗಳಿಗೋಸ್ಕರ ಬಿಜೆಪಿ ಸರಕಾರದ ಕ್ರಮಗಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ಆರೋಪಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೆ.ಜಿ.ಬೋಪಯ್ಯ, 2012ರಲ್ಲಿ ರಾಷ್ಟ್ರಪತಿಗಳ ಅಂಕಿತವಾಗಿ ಬಂದ ಜಮ್ಮಾಬಾಣೆ ವಿಧೇಯಕವನ್ನು ಜಾರಿಗೊಳಿಸಕೂಡದೆಂದು ಸಲ್ಲಿಕೆಯಾಗಿದ್ದ ನಾಲ್ಕು ರಿಟ್ ಪಿಟೀಷನ್ಗಳನ್ನು 2024ರಲ್ಲಿ ವಜಾಗೊಳಿಸಿರುವ ರಾಜ್ಯ ಉಚ್ಚ ನ್ಯಾಯಾಲಯ, ಸಮಸ್ಯೆಯ ಬಗೆಹರಿಕೆಗೆ ಅಗತ್ಯ ಆದೇಶವನ್ನು ನೀಡಿ, 30 ದಿನಗಳಲ್ಲಿ ಜಾರಿಗೊಳಿಸುವಂತೆ ತಿಳಿಸಿದ್ದನ್ನು ಉಲ್ಲೇಖಿಸಿದರು.…
ಮಡಿಕೇರಿ ಜ.23 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹಿರಿಯ ನಾಗರಿಕರಿಗಾಗಿ ಕೇಂದ್ರ ಪ್ರಾಯೋಜಿತ ಅಟಲ್ ವಯೋ ಅಭ್ಯುದಯ ಯೋಜನೆಯಡಿ ಕೇಂದ್ರ ಸರ್ಕಾರದ ಸ್ಟೇಟ್ ಆಕ್ಷನ್ ಪ್ಲಾನ್ ಫಾರ್ ಸೀನಿಯರ್ ಸಿಟಿಜನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಹಿರಿಯ ನಾಗರಿಕರ ಕಾಯ್ದೆ 2007, ಹಿರಿಯ ನಾಗರಿಕರ ಆಸ್ತಿ ಸಂರಕ್ಷಣೆ, ಹಿರಿಯ ನಾಗರಿಕರಿಗೆ ಇರುವ ಸೌಲಭ್ಯಗಳ ಕುರಿತಾಗಿ ಸಾರ್ವಜನಿಕರಿಗೆ ಕಾನೂನು ಅರಿವು ಮತ್ತು ನೆರವು ಶಿಬಿರ ಕಾರ್ಯಕ್ರಮವು ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಉದ್ಘಾಟಿಸಿ ಮಾತನಾಡಿ, ಹಿರಿಯ ನಾಗರಿಕರು ಸಮಾಜದ ಆಸ್ತಿ. ಹಿರಿಯರಿಗೆ ಸರ್ಕಾರ ಹಾಗೂ ಸಂಘ ಸಂಸ್ಥೆಗಳಿಂದ ಇರುವಂತಹ ಅವರ ಹಕ್ಕುಗಳನ್ನು ಪಡೆಯುವಲ್ಲಿ ಹಾಗೂ ತಮ್ಮ ಆಸ್ತಿಯಲ್ಲಿ ತಮಗೆ ಅಗತ್ಯವಿರುವಷ್ಟನ್ನು ಇಟ್ಟುಕೊಂಡು ಮಕ್ಕಳಿಗೆ ನೀಡುವಂತಾಗಬೇಕು ಎಂದು…
ಮಡಿಕೇರಿ ಜ.23 NEWS DESK : ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ ಮಾ.25 ಮತ್ತು 26ರಂದು ಮಡಿಕೇರಿ ನಗರದಲ್ಲಿ 36ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದೆ. ರಾಮೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಶ್ರೀ ಕೋದಂಡ ರಾಮೋತ್ಸವ ಸಮಿತಿ ಹಾಗೂ ಭಕ್ತರ ಪೂರ್ವಭಾವಿ ಸಭೆಯನ್ನು ಫೆ.2 ರಂದು ಸಂಜೆ 4.30 ಗಂಟೆಗೆ ಶ್ರೀ ಕೋದಂಡರಾಮ ದೇವಾಲಯದ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ ಅವರು ತಿಳಿಸಿದ್ದಾರೆ. ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ರಾಮೋತ್ಸವದ ಯಶಸ್ಸಿಗಾಗಿ ಸಮಿತಿ ಹಾಗೂ ಉಪಸಮಿತಿಗಳನ್ನು ರಚಿಸಲಾಗುವುದು. ಶ್ರೀ ಕೋದಂಡ ರಾಮೋತ್ಸವ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ನಗರದಲ್ಲಿರುವ ಎಲ್ಲಾ ದೇವಾಲಯಗಳ ಪದಾಧಿಕಾರಿಗಳು, ಸದಸ್ಯರು, ಸಂಘ ಸಂಸ್ಥೆಗಳ ಪ್ರಮುಖರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ. ಕಳೆದ ವರ್ಷ ಸರ್ವ ಜನರ, ಸಂಘ ಸಂಸ್ಥೆಗಳ,…
ಮಡಿಕೇರಿ ಜ.23 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ (5ನೇ ತರಗತಿಗೆ) ಅಥ್ಲೆಟಿಕ್ಸ್ ಮತ್ತು ಹಾಕಿ ಕ್ರೀಡೆಗೆ 2026-27ನೇ ಸಾಲಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯು ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಫೆಬ್ರವರಿ, 05 ರಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿಗೆ ಫೆಬ್ರವರಿ, 06 ರಂದು ಕೂಡಿಗೆ ಸರ್ಕಾರಿ ಕ್ರೀಡಾ ಶಾಲೆ ಹಾಗೂ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ಫೆಬ್ರವರಿ, 07 ರಂದು ಪೊನ್ನಂಪೇಟೆ ತಾಲ್ಲೂಕು ಮಿನಿ ಕ್ರೀಡಾಂಗಣದಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು ಫೆಬ್ರವರಿ, 05, 06 ಮತ್ತು 07 ರಂದು ಬೆಳಗ್ಗೆ 9 ಗಂಟೆ ಒಳಗೆ ಇಲಾಖಾ ತರಬೇತುದಾರರಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮಹಾಬಲ ಅಥ್ಲೆಟಿಕ್ಸ್ ತರಬೇತುದಾರರು ದೂ.ಸಂ.9980887499, ಬಿಂದ್ಯಾ ಹಾಕಿ ತರಬೇತುದಾರರು 9481058092 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.
ವಿರಾಜಪೇಟೆ ಜ.23 NEWS DESK : ವಿರಾಜಪೇಟೆ ಗಡಿಯಾರ ಕಂಬದಿಂದ ಖಾಸಗಿ ಬಸ್ಸು ನಿಲ್ದಾಣದವರೆಗೆ ಏಕಮುಖ ಸಂಚಾರವೇ ಇರಲಿ. ಅಭಿವೃದ್ಧಿ ಹೆಸರಿನಲ್ಲಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಿದರೆ ವರ್ತಕರಿಗೆ ವ್ಯಾಪಾರ ವಹಿವಾಟು ಸಮಸ್ಯೆಯಾಗುತ್ತದೆ ಎಂದು 200ಕ್ಕೂ ಅಧಿಕ ಮಂದಿ ವರ್ತಕರು ಸಾಮೂಹಿಕವಾಗಿ ಸಭೆ ನಡೆಸಿ ವಿರಾಜಪೇಟೆ ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. ವಿರಾಜಪೇಟೆಯ ಹಿಲ್ಪ್ಯಾಲೆಸ್ ಹೋಟೆಲ್ ಸಭಾಂಗಣದಲ್ಲಿ ನಡೆದ ವರ್ತಕರ ಸಭೆಯಲ್ಲಿ ರಸ್ತೆ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ. ಅಭಿವೃದ್ಧಿಯ ಜೊತೆಗೆ ಏಕಮುಖ ಸಂಚಾರ ವ್ಯವಸ್ಥೆ ಇದ್ದು ವಾಹನ ನಿಲುಗಡೆಗೆ ಪರ್ಯಾಯ ವ್ಯವಸ್ಥೆ ಮಾಡಬೇಕು, ವರ್ತಕರು ಹಾಗೂ ಮಾಲೀಕರು ತಮ್ಮ ವಾಹನಗಳನ್ನು ರಸ್ತೆ ಬದಿ ನಿಲುಗಡೆ ಮಾಡದೆ ಸಹಕರಿಸುವಂತೆ ತೀರ್ಮಾನಿಸಲಾಯಿತು. ವಿರಾಜಪೇಟೆ ವರ್ತಕ, ವಿರಾಜಪೇಟೆ ವರ್ತಕರ ಸಂಘದ ಅಧ್ಯಕ್ಷ ಪಿ.ಎ.ಮಂಜುನಾಥ್ ಮಾತನಾಡಿ, ದ್ವಿಮುಖ ಸಂಚಾರ ಮಾಡುವುದು, ರಸ್ತೆ ಬದಿಯಲ್ಲಿ ವಾಹನ ನಿಲುಗಡೆಗೆ ಅವಕಾಶವಿಲ್ಲ ಎಂಬ ವಿಚಾರಕ್ಕೆ ಸಭೆ ಸೇರಿ ಒಮ್ಮತದ ತೀರ್ಮಾನ ತೆಗೆದುಕೊಂಡು ಗಡಿಯಾರ ಕಂಬದಿಂದ ಖಾಸಗಿ ಬಸ್…
ವಿರಾಜಪೇಟೆ ಜ.23 NEWS DESK : ಕುಶಾಲನಗರದ ರೈತಭವನದಲ್ಲಿ ನಡೆದಲ್ಲಿ ನಡೆದ ರಾಜ್ಯ ಮಟ್ಟದ 4ನೇ ಅಬಾಕಸ್ ಮತ್ತು ಕ್ಯಾಲಿಗ್ರಫಿ ಸ್ಪರ್ಧೆಯಲ್ಲಿ ರೋಟರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ರೋಟರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಚಿರಂತ್, ಚರಣ್, ಲಿಥಿನ್ ಮತ್ತು ಯದುನಂದನ್ (7ನೇ ತರಗತಿ), ರಕ್ಷಿತಾ (5ನೇ ತರಗತಿ), ಮತ್ತು ಫಾದಿಲ್ ಮತ್ತು ರಕ್ಷಕ್ (4ನೇ ತರಗತಿ) ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಚಿರಂತ್ ಅಬಾಕಸ್ ಹಾಗೂ ಕ್ಯಾಲಿಗ್ರಫಿ ಎರಡರಲ್ಲೂ ಪ್ರಥಮ ಬಹುಮಾನವನ್ನು ಮತ್ತು ಯದುನಂದನ್ ಅಬಾಕಸ್ನಲ್ಲಿ ತೃತೀಯ ಹಾಗೂ ಕ್ಯಾಲಿಗ್ರಫಿಯಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.






