ಲೇಖಕ: admin

ಸೋಮವಾರಪೇಟೆ ಡಿ.9 NEWS DESK : ರೈತ ಹೋರಾಟ ಸಮಿತಿ ವತಿಯಿಂದ ಸಿ ಮತ್ತು ಡಿ ಜಾಗದ ವಿಚಾರದಲ್ಲಿನ ದೋಷ ಸರಿಪಡಿಸುವಂತೆ ಶಾಸಕ ಡಾ.ಮಂತರ್ ಗೌಡ ಸಮ್ಮುಖದಲ್ಲಿ ಕರ್ನಾಟಕ ಅಡ್ವಕೇಟ್ ಜನರಲ್ ಸಿ.ಕೆ.ಶಶಿಕಿರಣ್ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು. ಬೆಂಗಳೂರಿನ ಹೈಕೋರ್ಟ್ ಕಚೇರಿಯಲ್ಲಿ ಮನವಿ ಸಲ್ಲಿಸಿದ ಶಾಸಕರು, ಸಿ ಆ್ಯಂಡ್ ಡಿ ಭೂಮಿಯ ಸಮಸ್ಯೆ ಬಗ್ಗೆ ವಿವರಿಸಿದರು. ಸಿ ಆ್ಯಂಡ್ ಡಿ ಭೂಮಿಯ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ, ಸರ್ಕಾರ ಗಮನಕ್ಕೆ ತರಲಾಗುವುದು ಎಂದು ಶಶಿಕಿರಣ್ ಶೆಟ್ಟಿ ಭರವಸೆ ನೀಡಿದರು. ಕೊಡಗಿನಲ್ಲಿರುವ ರೈತರ ಸಂಖ್ಯೆ ಮತ್ತು ಸಿ ಆ್ಯಂಡ್ ಡಿ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ಕುಟುಂಬಗಳ ವಿವರವನ್ನು ಸೇರಿದಂತೆ ಕೆಲ ದಾಖಲಾತಿಗಳನ್ನು ನೀಡುವಂತೆ ಸಮಿತಿಯ ಪದಾಧಿಕಾರಿಗಳಿಗೆ ತಿಳಿಸಿದರು.  ಹೋರಾಟ ಸಮಿತಿ ಅಧ್ಯಕ್ಷ ಚಕ್ರವರ್ತಿ ಸುರೇಶ್ ಮಾಹಿತಿ ನೀಡಿ, ಜಿಲ್ಲೆಯಲ್ಲಿರುವ ಸಿ ಆ್ಯಂಡ್ ಡಿ ಭೂಮಿಯನ್ನು ಸರ್ಕಾರ, ಅರಣ್ಯ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿಸಿ, ರೈತರಿಗೆ ದಾಖಲಾತಿ ಮಾಡಿಸಿಕೊಟ್ಟರೆ ಕೊಡಗಿನಲ್ಲಿ 50…

Read More

ಸೋಮವಾರಪೇಟೆ ಜು.9 NEWS DESK : ರಾತ್ರಿ ಸುರಿದ ಗಾಳಿ-ಮಳೆ ತಾಲ್ಲೂಕಿನ ಹಲವೆಡೆ ಮನೆಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಪಿಡಿಒಗಳು ಭೇಟಿ ನೀಡಿ ಮಾಹಿತಿ ಪಡೆದರು. ಸಮೀಪದ ನೇರುಗಳಲೆ ಗ್ರಾ.ಪಂ ವ್ಯಾಪ್ತಿಯ ತಣ್ಣೀರುಹಳ್ಳ ಗ್ರಾಮದ ಲಕ್ಷ್ಮೀ ಎಂಬವರ ವಾಸದ ಮನೆ ಗೋಡೆ ಕುಸಿದು ಭಾಗಶಃ ಹಾನಿಯಾಗಿದೆ. ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಬೆಟ್ಟ ಗ್ರಾಮದ ಪ್ರಮೀಳ ಅವರ ಮನೆಯ ಸೋರುತ್ತಿದ್ದು, ತಾತ್ಕಾಲಿಕವಾಗಿ ಪಂಚಾಯಿತಿ ವತಿಯಿಂದ ಟಾರ್ಪಲನ್ನು ಪಂಚಾಯಿತಿ ಅಧ್ಯಕ್ಷೆ ಗೀತಾ, ಉಪಾಧ್ಯಕ್ಷ ನತೀಶ್ ಮಂದಣ್ಣ ವಿತರಿಸಿದರು. ಬೆಟ್ಟದಳ್ಳಿ ಗ್ರಾ ಪಂ. ವ್ಯಾಪ್ತಿಯ ಬೇಕನಳ್ಳಿ ಗ್ರಾಮದ ಮುತ್ತಣ್ಣ ಎಂಬವರ ಮನೆಯ ಗೋಡೆ ಕುಸಿದಿರುವ ಪರಣಾಮ ಪಿಡಿಒ ರವಿ ಅವರು ಟಾರ್ಪಲ್ ವಿತರಿಸಿದರು.

Read More

ಮಡಿಕೇರಿ ಜು.9 NEWS DESK :  ನಾಡಿನ ಜೀವನದಿ, ಕಾವೇರಿ ಉಗಮಸ್ಥಾನ ತಲಕಾವೇರಿ ಹಾಗೂ ಪವಿತ್ರ ಕ್ಷೇತ್ರ ಶ್ರೀಭಗಂಡೇಶ್ವರ ದೇವಾಲಯಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಮತ್ತು ಕುಟುಂಬದವರು ಬುಧವಾರ ಭೇಟಿ ನೀಡಿ, ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಎ.ಎಸ್.ಪೊನ್ನಣ್ಣ ಅವರ 51ನೇ ಜನ್ಮ ದಿನದ ಪ್ರಯುಕ್ತ ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಮತ್ತು ಮಹಾಸಂಕಲ್ಪ ಪ್ರಾರ್ಥನೆ ಸಲ್ಲಿಸಿದರು. ಮೊದಲಿಗೆ ಮಹಾ ಗಣಪತಿಗೆ ಪೂಜೆ, ನಂತರ ಶ್ರೀಭಗಂಡೇಶ್ವರ ದೇವಾಲಯದಲ್ಲಿ ನಾಡಿನ ಎಲ್ಲರಲ್ಲಿ ಸಮೃದ್ಧಿ, ಸಂತಸ ತರುವಂತಾಗಲಿ ಎಂದು ಪ್ರಾರ್ಥಿಸಿದರು, ನಂತರ ಮಹಾವಿಷ್ಣು ಮತ್ತು ಸುಬ್ರಮಣ್ಯ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಲಕಾವೇರಿಗೆ ತೆರಳಿ ಕುಂಕುಮಾರ್ಚನೆ ಪೂಜೆ ಸಲ್ಲಿಸಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಅವರು ತಾಯಿ ಕಾವೇರಿ ಮಾತೆ ಶಾಸಕರಿಗೆ ಒಳಿತು ಉಂಟುಮಾಡಲಿ, ಸರ್ಕಾರದಲ್ಲಿ ಮತ್ತಷ್ಟು ಅವಕಾಶ ದೊರೆಯಲಿ ಎಂದು ಪ್ರಾರ್ಥಿಸಿದರು.…

Read More

ವಿರಾಜಪೇಟೆ ಜು.9 NEWS DESK : ಅರಮೇರಿಯ ಎಸ್.ಎಂ.ಎಸ್ ವಿದ್ಯಾಸಂಸ್ಥೆಯಲ್ಲಿ 2025-26ನೇ ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭವು ಜರುಗಿತು. ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಕುಸುಮ್ ಟಿಟೋ ನೂತನ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞೆಯನ್ನು ಭೋದಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರುಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶೈಕ್ಷಣಿಕ ವರ್ಷಕ್ಕೆ ಚುನಾವಣೆಯ ಮೂಲಕ ವಿದ್ಯಾರ್ಥಿ ನಾಯಕರನ್ನು ಆಯ್ಕೆ ಮಾಡಲಾಯಿತು. ಶಾಲಾ ನಾಯಕಿಯಾಗಿ ಕಟ್ಟೆರ ತನಿಶ್ ಪೂಣಚ್ಚ ಹಾಗೂ ಉಪನಾಯಕಿಯಾಗಿ ಎಂ.ಯು.ದೇಷ್ಣ ದೇಚಮ್ಮ ಆಯ್ಕೆಗೊಂಡರು.

Read More

ಮಡಿಕೇರಿ NEWS DESK ಜು.8 : ದಕ್ಷಿಣ ಕೊಡಗಿನ ನೋಕ್ಯ ಮತ್ತು ಭದ್ರಗೋಳ ಗ್ರಾಮದಲ್ಲಿ ಹಸುಗಳನ್ನು ಹಾಗೂ ಎಮ್ಮೆಯೊಂದನ್ನು ಕಳ್ಳತನ ಮಾಡಿದ ಆರೋಪದಡಿ ನಾಲ್ವರು ಆರೋಪಿಗಳನ್ನು ಜಿಲ್ಲಾ ಪೊಲಿಸರು ಬಂಧಿಸಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನ ಕೋಟೆ ಗ್ರಾಮದ ಉಬೈದ್ ಕೆ.ಎಂ.(37), ಪೊನ್ನಂಪೇಟೆ ಸೀತಾ ಕಾಲೋನಿಯ ಗಜನ್ ಗಣಪತಿ(25), ಬೇಗೂರು ಗ್ರಾಮದ ಹನೀಫ ಸಿ.ಈ.(36) ಹಾಗೂ ಕೇರಳದ ಮಾನಂದವಾಡಿಯ ಅಜನಸ್(21) ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಲಾದ ಬೊಲೇರೋ ಪಿಕಪ್, ಮಾರುತಿ ಓಮ್ನಿ, ಟಾಟಾ ಇಂಟ್ರಾ, ಒಂದು ಚಾಕು ಮತ್ತು ಹಗ್ಗ, 3 ಮೊಬೈಲ್ ಮತ್ತು 7 ಸಾವಿರ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ ಜೂ.24 ರಂದು ನೋಕ್ಯ ಗ್ರಾಮದ ಆನಂದ ಎ.ಎಸ್. ಎಂಬುವವರ ತೋಟದ ಕೊಟ್ಟಿಗೆಯಲ್ಲಿದ್ದ 2 ಹಸುಗಳನ್ನು ಮತ್ತು ಭದ್ರಗೋಳ ಗ್ರಾಮದ ಪಿ.ಪಿ.ಮುತ್ತಣ್ಣ ಎಂಬುವವರ ಮನೆಯ ಕೊಟ್ಟ್ಟಿಗೆಯಲ್ಲಿದ್ದ ಎಮ್ಮೆಯೊಂದನ್ನು ಕಳ್ಳತನ ಮಾಡಲಾಗಿದ್ದು, ಈ ಬಗ್ಗೆ ಗೋಣಿಕೊಪ್ಪ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು. ಡಿವೈಎಸ್‌ಪಿ ಮಹೇಶ್ ಕುಮಾರ್, ಸಿಪಿಐ ಶಿವರಾಜ ಆರ್.…

Read More

ವಿರಾಜಪೇಟೆ ಜು.8 NEWS DESK : ಕಂಡಂಗಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಹಣ್ಣಿನ ಸಸಿಗಳು, ಗಿಡಮೂಲಿಕೆ ಸಸಿಗಳನ್ನು ನೆಡಲಾಯಿತು. ಈ ಸಂದರ್ಭ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೂಕಚಂಡ ಪ್ರಸನ್ನ ಸುಬ್ಬಯ್ಯ, ಡಿ.ಆರ್.ಎಫ್.ಓ ಶ್ರೀಧರ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಡಂಗಾಲದ ಕಾವೇರಿ ಇಕೋ ಕ್ಲಬ್‍ನ ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದರು.

Read More

ಮಡಿಕೇರಿ ಜು.8 NEWS DESK : ಭಾರತೀಯ ವಾಯು ಪಡೆಯಿಂದ ಅಗ್ನಿಪತ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯುಪಡೆ ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಷ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ  ಶೇ.50 ರಷ್ಟು  ಅಂಕಗಳೊಂದಿಗೆ  ತೇರ್ಗಡೆ ಆಗಿರಬೇಕು. ಇಲ್ಲವೇ 02 ವರ್ಷದ ವೃತ್ತಿಪರ ಕೋರ್ಸ್‍ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ ಮಾಡಿ ಶೇ.50 ರಷ್ಟು ಅಥವಾ ಯಾವುದೇ ಪಿಯುಸಿ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಭ್ಯರ್ಥಿಯು 2005ರ ಜುಲೈ, 02 ರಿಂದ 2009ರ ಜನವರಿ, 02 ರ ನಡುವೆ ಜನಿಸಿರಬೇಕು. (ಎರಡೂ ದಿನಾಂಕಗಳು ಸೇರಿದಂತೆ) ಅರ್ಜಿ ಶುಲ್ಕ 550 ರೂ.ಗಳಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರ ಮತ್ತು ಸೂಚನೆಗಳಿಗೆ ವೆಬ್‍ಸೈಟ್ https://agnipathvayu.cdac.in ನೋಡಬಹುದು. ವೆಬ್‍ಸೈಟ್‍ನಲ್ಲಿ 2025…

Read More

ಮಡಿಕೇರಿ ಜು.8 NEWS DESK : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಯೋಜನೆ ಹಾಗೂ ಸಾಧನೆ ಕುರಿತು ಬೀದಿ ನಾಟಕ ಹಾಗೂ ಜಾನಪದ ಸಂಗೀತ ಕಾರ್ಯಕ್ರಮ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದೆ. ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡ ಆಯ್ಕೆ ಮಾಡಲಾಗುವುದು. ಪ್ರತಿ ಬೀದಿನಾಟಕ ತಂಡದಲ್ಲಿ 8 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರು ಇರಬೇಕು. ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಈ ಹಿಂದೆ ಸರ್ಕಾರದ ವಿವಿಧ ಇಲಾಖೆಗಳ ಬೀದಿ ನಾಟಕ…

Read More

ಮಡಿಕೇರಿ ಜು.8 NEWS DESK : ಕರ್ಣಂಗೇರಿ ಅಂಗನವಾಡಿ ಕೇಂದ್ರದ ವ್ಯಾಪ್ತಿಗೆ ಒಳಪಟ್ಟ ಎಲ್ಲಾ ಮಕ್ಕಳಿಗೆ ಅಂದತ್ವ ನಿವಾರಣೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಳಕ್ಕಾಗಿ ವಿಟಮಿನ್ ಎ ದ್ರಾವಣವನ್ನು ಹಾಕಲಾಯಿತು. ಆರೋಗ್ಯ ಇಲಾಖೆಯ phco ದೇವಕಿ ಅವರು ವಿಟಮಿನ್ ಎ ದ್ರಾವಣ, ಅತಿಸಾರ ತಡೆಗಟ್ಟುವ ಮುನ್ನಚರಿಕಾ ಕ್ರಮದ ಬಗ್ಗೆ, ಜಿಂಕ್ ಮಾತ್ರೆ ಬಳಕೆ ಬಗ್ಗೆ ತಿಳಿಸಿದರು. ಓ ಆರ್ ಎಸ್ ಬಳಕೆ ಬಗ್ಗೆ ಪ್ರತ್ಯಕ್ಷತೆ ಮಾಡಿ ಅರಿವು ಮೂಡಿಸಿದರು. ಮೇಲ್ವಿಚಾರಕ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಮಳೆಗಾಲದಲ್ಲಿ ಮಕ್ಕಳಿಗೆ ಬರುವಂತ ಕಾಯಿಲೆಗಳನ್ನು ತಡೆಗಟ್ಟಲು ಪೋಷಣಯುಕ್ತ ಆಹಾರದೊಂದಿಗೆ ಸ್ವಚ್ಛತೆಗೆ ಹೆಚ್ಚು ಗಮನಹರಿಸಲು ಮತ್ತು ಕುದಿಸಿ ಆರಿಸಿದ ನೀರನ್ನು ಬಳಸಲು ಸಲಹೆ ನೀಡಿದರು. ಕೈ ತೊಳೆಯುವ ವಿಧಾನಗಳ ಬಗ್ಗೆ ಅರಿವು ಮೂಡಿಸಿದರು. ತೂಕದ ಮಹತ್ವವನ್ನು ತಿಳಿಸಿ ಎಲ್ಲಾ ಮಕ್ಕಳ ತೂಕ ಎತ್ತರವನ್ನು ಪರಿಶೀಲಿಸಿ ಪ್ರತಿ ತಿಂಗಳು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬೆಳವಣಿಗೆಯ ಮಟ್ಟವನ್ನು ಗುರುತಿಸಿಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ…

Read More

ಮಡಿಕೇರಿ ಜು.8 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದ್ದು, ಅಮಾಯಕರ ಸಾವು ನಿರಂತರವಾಗಿದೆ. ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವಲ್ಲಿ ಸಂಪೂರ್ಣವಾಗಿ ವಿಫಲರಾಗಿರುವ ಅರಣ್ಯ ಸಚಿವರು ಹಾಗೂ ವಿರಾಜಪೇಟೆ ಶಾಸಕರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಮ್ ಆದ್ಮಿ ಪಾರ್ಟಿಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಪೊನ್ನಪ್ಪಸಂತೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆಯ ಕುರಿತು ಬೇಸರ ವ್ಯಕ್ತಪಡಿಸಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅರಣ್ಯ ಇಲಾಖೆಯ ನಿರ್ಲಕ್ಷ್ಯ, ಅರಣ್ಯ ಸಚಿವರು ಹಾಗೂ ಶಾಸಕರ ಇಚ್ಛಾಶಕ್ತಿಯ ಕೊರತೆಯಿಂದ ವನ್ಯಜೀವಿ ದಾಳಿ ತಡೆಗೆ ಶಾಶ್ವತ ಪರಿಹಾರ ದೊರೆಯುತ್ತಿಲ್ಲವೆಂದು ಟೀಕಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕರಡಿಗೊಡು, ಮಾಲ್ದಾರೆ, ಬಾಳೆಲೆ, ಆನಂದಪುರ, ಮಾಯಮುಡಿ ಸೇರಿದಂತೆ ವಿವಿಧ ಭಾಗಗಳಲ್ಲಿ ಕಾಡಾನೆ ದಾಳಿಯಿಂದ ಸಾವು ನೋವುಗಳಾಗುತ್ತಿದೆ. ಇದೀಗ ಪೊನ್ನಪ್ಪಸಂತೆ ಗ್ರಾಮದಲ್ಲಿ ಆನೆ ದಾಳಿಯಿಂದ ಅಮಾಯಕ ವ್ಯಕ್ತಿ ಮೃತಪಟ್ಟಿದ್ದಾರೆ. ಕೃಷಿಯನ್ನೇ ಅವಲಂಬಿಸಿರುವ ಕೊಡಗಿನ ರೈತಾಪಿ…

Read More