ಲೇಖಕ: admin

ಮಡಿಕೇರಿ ಜೂ.9 NEWS DESK : ಹಾರಂಗಿ ಅಣೆಕಟ್ಟು ಹಾಗೂ ಕುಶಾಲನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಎನ್‌ಡಿಆರ್‌ಎಫ್ ತಂಡ ಭೇಟಿ ನೀಡಿತು. ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ಮಾಹಿತಿ ನೀಡಿದರು. ಎನ್‌ಡಿಆರ್‌ಎಫ್ ತಂಡದ ಮುಖ್ಯಸ್ಥರಾದ ಇನ್ಸ್ಪೆಕ್ಟರ್ ಅಜಯ್ ಕುಮಾರ್, ಹಾರಾಂಗಿ ಸಹಾಯಕ ಅಭಿಯಂತರರಾದ ಸೌಮ್ಯ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಜೂ.9 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟ ಮಾಡಲಾಗಿದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಪಂದ್ಯಂಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿಯ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ”ಒಂದೇ ಊರು ಮೂರು ಚೆಕ್ ಡ್ಯಾಂ” ವರದಿಗೆ ಅಣ್ಣೀರ ಹರೀಶ್ ಮಾದಪ್ಪ ಪಡೆದುಕೊಂಡಿದ್ದಾರೆ. ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿಯನ್ನು ವಾರ್ತಾಭಾರತಿ ಪತ್ರಿಕೆಯಲ್ಲಿ ಪ್ರಕಟವಾದ” ಕೊಡಗಿನ ಕ್ರೀಡಾಕಲಿಗಳಿಗೆ ಕಾಡುತ್ತಿರುವ ದೈಹಿಕ ಶಕ್ತಿ ಕೊರತೆ ” ವರದಿಗೆ ಇಸ್ಮಾಯಿಲ್ ಕಂಡಕೆರೆ ಪಡೆದುಕೊಂಡಿದ್ದಾರೆ. ಸಂಘದ ಮಾಜಿ ಉಪಾಧ್ಯಕ್ಷರಾದ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವೀಡಿಯೋಗ್ರಫಿ ಪ್ರಶಸ್ತಿಯನ್ನು ಇಬ್ಬರು ಪಡೆದುಕೊಂಡಿದ್ದಾರೆ. ವಿಸ್ತಾರ ಚಾನಲ್ ನಲ್ಲಿ ಪ್ರಸಾರವಾಗಿರುವ” ಹಸಿರ ಮನಸಿರಿಗೆ ಚಂದದ ಹೊದಿಕೆ” ಸುದ್ದಿಯ ವೀಡಿಯೋಗ್ರಫಿಗೆ ಮನೋಜ್ ಆರ್.ಆರ್. ಪಡೆದುಕೊಂಡಿದ್ದಾರೆ. ಚಿತ್ತಾರ ವಾಹಿನಿಯಲ್ಲಿ ಪ್ರಸಾರವಾದ ದಟ್ಟ ಅರಣ್ಯದೊಳಗೆ ಜಲಲ ಜಲಲ ಜಲಧಾರೆ ವರದಿಯ ವೀಡಿಯೋಗ್ರಫಿಗೆ ಸಂತೋಷ್ ರೈ ಪಡೆದುಕೊಂಡಿದ್ದಾರೆ.…

Read More

ಮಡಿಕೇರಿ ಜೂ.9 NEWS DESK : ಮೂರ್ನಾಡು 66 ಕೆವಿ ವಿದ್ಯುತ್ ಉಪ ಕೇಂದ್ರ ನಿರ್ಮಾಣ ಆಗಲಿರುವುದರಿಂದ ಹಾಲಿ 33 ಕೆವಿ ವಿದ್ಯುತ್ ಉಪ ಕೇಂದ್ರದ 11 ಕೆವಿ ವಿದ್ಯುತ್ ಮಾರ್ಗಗಳ ಮರುಹೊಂದಾಣಿಕೆ ಕಾಮಗಾರಿ ನಿರ್ವಹಿಸಬೇಕಿದ್ದು, ಜೂ.10 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.  ಹಾಗೆಯೇ ಸುಂಟಿಕೊಪ್ಪ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಾಕೂರು, ಎಫ್4-ಮಾದಾಪುರ, ಎಫ್5-ಸುಂಟಿಕೊಪ್ಪ ಹಾಗೂ ಎಫ್6 ಹೊಸಕೋಟೆ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲಾಗಿದ್ದು, ಜೂನ್, 10 ರಂದು ಬೆಳಗ್ಗೆ 10 ರಿಂದ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸುಂಟಿಕೊಪ್ಪ ಟೌನ್, ಪನ್ಯಾ, ಹರದೂರು, ಬೆಟ್ಟಗೇರಿ, ಸಿಸಿಎಲ್ ನಾಕೂರು ಶಿರಂಗಾಲ, ಹೇರೂರು,…

Read More

ಮಡಿಕೇರಿ ಜೂ.9 NEWS DESK : ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು(ಯುಆರ್‍ಡಬ್ಲ್ಯು), ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು (ವಿಆರ್‍ಡಬ್ಲ್ಯು) ಹುದ್ದೆಗಳು ಖಾಲಿ ಇದ್ದು, ಬೌದ್ಧಿಕ ವಿಕಲತೆ (ಬುದ್ದಿಮಾಂದ್ಯತೆ) ಹಾಗೂ ಮಾನಸಿಕ ಅಸ್ವಸ್ಥತೆ ಇರುವ ವಿಕಲಚೇತನರನ್ನು ಹೊರತುಪಡಿಸಿ ಅರ್ಜಿ ಸಲ್ಲಿಸಬಯಸುವವರು ಜು.7 ರೊಳಗೆ ಅರ್ಜಿ ಸಲ್ಲಿಸಬಹುದು. ನಗರ ಪುನರ್ವಸತಿ ಕಾರ್ಯಕರ್ತರು, ಮಾಸಿಕ ಗೌರವಧನ ರೂ.9 ಸಾವಿರ, ಎಸ್‍ಎಸ್‍ಎಲ್‍ಸಿ ಉತ್ತೀರ್ಣ, ಅನುತ್ತೀರ್ಣ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮಾಸಿಕ ಗೌರವಧನ ರೂ.9 ಸಾವಿರ ಎಸ್‍ಎಸ್‍ಎಲ್‍ಸಿ ಉತ್ತೀರ್ಣ/ ಅನುತ್ತೀರ್ಣ, ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಹುದ್ದೆಗಳು ಖಾಲಿ ಇರುವ ವಿವರ ಯುಆರ್‍ಡಬ್ಲ್ಯು ನಗರಸಭೆ ಮಡಿಕೇರಿ-3 ಹುದ್ದೆ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ವಿರಾಜಪೇಟೆ ಪುರಸಭೆ ವಿಆರ್‍ಡಬ್ಲ್ಯು::  ಮಡಿಕೇರಿ ತಾಲ್ಲೂಕು ಬಲ್ಲಮಾವಟಿ,…

Read More

ಮಡಿಕೇರಿ ಜೂ.9 NEWS DESK : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಕೆಂದು ಒತ್ತಾಯಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಹಾರ್ವರ್ಡ್ ವಿದ್ವಾಂಸ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ವಿಚಾರಣೆಯ ಮುಂದಿನ ದಿನಾಂಕವನ್ನು 2025 ಜು.23 ಕ್ಕೆ ನ್ಯಾಯಾಧೀಶರು ಮುಂದೂಡಿದರು. ಸಿಎಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಅರ್ಜಿದಾರ ಸಂಖ್ಯೆ-2 ಆಗಿದ್ದಾರೆ. ಕೇಂದ್ರ ಕಾನೂನು ಸಚಿವಾಲಯ, ಕೇಂದ್ರ ಗೃಹ ಸಚಿವಾಲಯ ಮತ್ತು ಕರ್ನಾಟಕ ರಾಜ್ಯವನ್ನು ಪ್ರತಿವಾದಿ ಸಂಖ್ಯೆ ಕ್ರಮವಾಗಿ 1, 2 ಮತ್ತು 3 ಎಂದು ಉಲ್ಲೇಖಿಸಲಾಗಿದೆ. ಹೈ ಕೋರ್ಟ್ ವಕೀಲರಾದ ಕೀರನ್ ನಾರಾಯಣ್ ಅವರು ಡಾ.ಸುಬ್ರಮಣಿಯನ್ ಸ್ವಾಮಿ ಹಾಗೂ ಎನ್.ಯು.ನಾಚಪ್ಪ ಅವರ ಪರವಾಗಿ ನ್ಯಾಯಾಲಯದಲ್ಲಿ ಹಾಜರಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಎನ್.ಯು.ನಾಚಪ್ಪ ಅವರು, ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕಾನೂನು ಹೋರಾಟದಿಂದ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ…

Read More

ಕುಶಾಲನಗರ ಜೂ.9 NEWS DESK : ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಶಿರಂಗಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಭೇಟಿ ನೀಡಿ ಆರೋಗ್ಯದ ಬಗ್ಗೆ ಅರಿವು ಮೂಡಿಸಿದರು.  ಇಲಾಖೆಯ ಸೂಚನೆಯಂತೆ ಸ್ವಚ್ಛತೆ, ಆರೋಗ್ಯದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಮತ್ತು ಶಾಲಾ ಶಿಕ್ಷಕರಿಗೆ ನೀಡಿದರು. ಮುಂಜಾಗ್ರತಾ ಕ್ರಮವಾಗಿ ಶಾಲಾ ಆವರಣದಲ್ಲಿ ಲಾರ್ವಾ ಸಮೀಕ್ಷೆ ‌ ಮತ್ತು ಹಿರಿಯ ಆರೋಗ್ಯ ನಿರೀಕ್ಷಕ ವಿಶ್ವಜ್ಞಾ ಡೆಂಗ್ಯೂ ರೋಗ, ಕೋವಿಡ್ – 19 ಹಾಗೂ ಈಡಿಸ್ ಲಾರ್ವಾ ಮುಕ್ತ ಶಾಲಾ ಆವರಣವನ್ನಾಗಿ ಮಾಡಲು ಮಾಹಿತಿಯನ್ನು ನೀಡಿದರು. ಈ ಸಂದರ್ಭ  ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳಾದ ಸೌರಭ್, ಬಿಂದು ಸೇರಿದಂತೆ ಶಾಲಾ ಮುಖ್ಯೋಪಾಧ್ಯಾರು ಹಾಗೂ ಸಹ ಶಿಕ್ಷಕರು , ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು.

Read More

ಕುಶಾಲನಗರ ಜೂ.9 NEWS DESK :  ಕುಶಾಲನಗರದ ಶ್ರೀ ಚೌಡೇಶ್ವರಿ ದೇವಾಲಯದ ದೇವಾಂಗ ಸಂಘದ ವತಿಯಿಂದ ಕುಶಾಲನಗರದ ರಥಬೀದಿಯಲ್ಲಿರುವ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ವಾರ್ಷಿಕೋತ್ಸವು ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೆ ಗಣಪತಿ ಹೋಮ, ಧ್ವಜಾರೋಹಣ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ನಂತರ ಸಮುದಾಯದ ಬಾಂಧವರು ಕಾವೇರಿ ನದಿಗೆ ತೆರೆಳಿ ನದಿಯಲ್ಲಿ ಗಂಗಾಪೂಜೆ ನೆರವೇರಿಸಿ, ನದಿಯಿಂದ ಕಳಸ ಹೊತ್ತವರು ಜಾನಪದ ವೀರಗಾಸೆ ನೃತ್ಯ,ಮಂಗಳವಾದ್ಯದೊಂದಿಗೆ ನಗರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ಸಾಗಿ ದೇವಾಲಯಕ್ಕೆ ತಲುಪಿದರು.  ನಂತರ ದೇವಾಲಯದಲ್ಲಿ ದೇವಿಗೆ ಪೂಜಾ ವಿಧಿ ವಿಧಾನಗಳು ನಡೆದು ಮಹಾಮಂಗಳಾರತಿ, ಸಾದ ವಿನಿಯೋಗ  ಹಾಗೂ ಅನ್ನಸಂತರ್ಪಣೆ ನೆರವೇರಿತು. ಪೂಜಾ ಕೈಂಕರ್ಯಯನ್ನು ದೇವಾಲಯದ ಅರ್ಚಕ ಪ್ರಸನ್ನ ಕುಮಾರ್ ನೆರವೇರಿಸಿದರು. ಸಂಜೆ ವಿದ್ಯುತ್ ದೀಪಾಲಂಕೃತ ಭವ್ಯ ಮಂಟಪದಲ್ಲಿ ದೇವಿಯ ವಿಗ್ರಹವನ್ನು ಕುಳ್ಳಿರಿಸಿ ಪೂಜೆ ಸಲ್ಲಿಸಿ, ವೀರಗಾಸೆ ನೃತ್ಯ, ಮಂಗಳ ವಾದ್ಯದೊಂದಿಗೆ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆಯು ದೇವಾಲಯದ ಆವರಣದಿಂದ ಬೈಜನಹಳ್ಳಿನವರೆಗೆ ನಗರದ ಪ್ರಮುಖ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಸಾಗಿತು.…

Read More

ಮಡಿಕೇರಿ ಜೂ.9 NEWS DESK :  ವಿರಾಜಪೇಟೆ ತಾಲ್ಲೂಕು ಕುಂಜಲಗೇರಿ ಗ್ರಾಮದಲ್ಲಿ ವಿವಿಧ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ವಲಯ ಕಾಂಗ್ರೆಸ್ ವತಿಯಿಂದ ಕುಂಜಲಗೇರಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಸುಮಾರು 70ಕ್ಕೂ ಅಧಿಕ ಮಂದಿ ಕಾರ್ಯಕರ್ತರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಶಾಲು ಹೊದಿಸಿ ಪಕ್ಷಕ್ಕೆ ಬರ ಮಾಡಿಕೊಂಡರು. ಈ ಸಂದರ್ಭ ಮಾತನಾಡಿದ ಶಾಸಕರು, ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಗಳ ಯಶಸ್ವಿ ಅನುಷ್ಠಾನ ರಾಜ್ಯಾದ್ಯಂತ ನಡೆದಿದೆ. ಈ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವಲ್ಲಿ ಪಕ್ಷದ ಕಾರ್ಯಕರ್ತರ ಶ್ರಮ ಅಗತ್ಯ ಎಂದರು. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಕಾರ್ಯಕರ್ತರು ಪಕ್ಷ ಸಂಘಟನೆಗೆ ಒತ್ತು ನೀಡಲು ಕರೆ ನೀಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ…

Read More

ಮಡಿಕೇರಿ ಜೂ.9 NEWS DESK : ಕೊಡಗಿನಲ್ಲಿ  ಭಾರೀ ಮಳೆಯಾಗುವ ಸೂಚನೆ ದೊರೆತ್ತಿದ್ದು, ಹವಮಾನ ಇಲಾಖೆ ಜೂ.12 ರಿಂದ 14ರ ವರೆಗೆ ರೆಡ್ ಅಲರ್ಟ್ ಘೋಷಿಸಿದೆ.    

Read More

ಮಡಿಕೇರಿ ಜೂ.9 NEWS DESK : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಘಟಕ ಮತ್ತು ಕೊಡಗು ಕನ್ನಡ ಭವನ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಚುಟುಕು ಕಾವ್ಯಶ್ರೀ ಪ್ರಶಸ್ತಿ ಪ್ರದಾನ ಮತ್ತು ಕೊಡಗು ಕಾವ್ಯ ಕವಿಗೋಷ್ಠಿ ಕಾರ್ಯಕ್ರಮ ಜು.6 ರಂದು ನಡಯಲಿದೆ. ನಗರದ ಪತ್ರಿಕಾ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ನಡೆಸಿದ ಕೊಡಗು ಜಿಲ್ಲೆಯ ಕವಿಗಳಿಗೆ ನೀಡಿದ ಸ್ಪರ್ಧೆಯಲ್ಲಿ ವಿಜೇತರಾದ 5 ಮಂದಿಗೆ “ಕೊಡಗು ಜಿಲ್ಲಾ ಚುಟುಕು ಕಾವ್ಯಶ್ರೀ ಪ್ರಶಸ್ತಿ 2025 ನೀಡಿ ಗೌರವಿಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಸ್ಪರ್ಧಾಳುಗಳಿಗೆ ಪ್ರಮಾಣಪತ್ರ ಪುಸ್ತಕ ನೀಡಿ ಪುರಸ್ಕೃರಿಸಲಾಗುವುದು. ಹೆಸರು ನೋಂದಾಯಿಸಲು ಮನವಿ :: “ಕೊಡಗು ಮಳೆಗಾಲ ಕವಿಗೋಷ್ಠಿ” ಗೆ ಹೆಸರು ನೋಂದಾಯಿಸಲು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಹಾಗೂ ಕೊಡಗು ಕನ್ನಡ ಭವನ ಅಪೇಕ್ಷಿಸಿದೆ. ಕವಿಗೋಷ್ಠಿಯಲ್ಲಿ ಹೆಸರು ನೋಂದಾಯಿಸುವವರು ಕಾರ್ಯದರ್ಶಿ ಬೊಟ್ಟೋಳಂಡ ನಿವ್ಯ ಕಾವೇರಮ್ಮ 9449505092  ವಾಟ್ಸಪ್ ನಲ್ಲಿ ಹೆಸರು ನೋಂದಾಯಿಸಲು…

Read More