ಲೇಖಕ: admin

ಮಡಿಕೇರಿ ಜೂ.9 NEWS DESK : ಸ್ನೇಹಕೃಪಾ ಮೂವೀಸ್ ಲಾಂಚನದಲ್ಲಿ ಕಲಾ ಸಾರ್ವಭಾಮ ಸುಧಾಕರ ಬನ್ನಂಜೆ ಕತೆ ಚಿತ್ರಕತೆ ಸಂಭಾಷಣೆ ಹಾಡು ಬರೆದು ನಿರ್ಮಿಸಿ ನಿರ್ದೇಶಿಸಿದ ಗಂಟ್ ಕಲ್ವೆರ್ ತುಳು ಚಿತ್ರ ಇದೀಗ ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕರಾವಳಿಯ ಜನರ ಮನಗೆದ್ದ ಈ ಚಿತ್ರ ಇದೀಗ ಮೂರನೇ ವಾರದತ್ತ ಮುನ್ನಡೆದಿದೆ. ಚಿತ್ರ ನೋಡಿದ ಜನರು ಉತ್ತಮ ಕತೆ, ಹಾಸ್ಯ, ಹಾಡು, ಸಾಹಸ ತುಂಬಿರುವ ಈ ಚಿತ್ರ ಟೋಟಲ್ ಪ್ಯಾಕೇಜ್ ಅನ್ನುತ್ತಿದ್ದಾರೆ. ನಾಯಕ ಆರ್ಯನ್ ಶೆಟ್ಟಿ, ನಾಯಕಿ ಸ್ಮಿತಾ ಸುವರ್ಣ ಜನರ ಮನ ಗೆದ್ದಿದ್ದಾರೆ. ಆರ್ಯನ್ ಸಾಹಸ ದೃಶ್ಯ ಸೂಪರ್ ಅಂತಿದ್ದಾರೆ ಚಿತ್ರ ನೋಡಿದವರು. ನವೀನ್ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು ,ಉಮೇಶ್ ಮಿಜಾರ್, ಸುಂದರ ರೈ ಮಂದಾರ, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ರವಿ ಸುರತ್ಕಲ್ ಮುಂತಾದ ಹಾಸ್ಯ ದಿಗ್ಗಜರ ಜತೆ ಪ್ರಶಾಂತ ಎಳ್ಳಂಪಳ್ಳಿ ಚೊಟ್ಟ ಪಾತ್ರದ ಮೂಲಕ ಮಿಂಚಿದ್ದಾರೆ. ಪಡೀಲ್ ಬೋಳಾರ ಅವರ ಹಾಸ್ಯದ ಜುಗಲ್ಬಂದಿ ಹೊಟ್ಟೆಹುಣ್ಣಾಗುವಂತೆ ನಗಿಸುತ್ತದೆ. ಹೊಸ…

Read More

ನಾಪೋಕ್ಲು ಜೂ.9 NEWS DESK : ದಕ್ಷಿಣ ಕನ್ನಡ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡಂತೆ ಲಯನ್ಸ್ ಜಿಲ್ಲಾ 317 ಡಿ ಯ ಅಧೀನದಲ್ಲಿ ಬರುವ ರೆವಿನ್ಯೂ ಜಿಲ್ಲೆಯ ನೂತನ ರಾಜ್ಯಪಾಲ ಲಯನ್ ಅರವಿಂದ ಶೆನ್ನೈ ಅವರ ನಾಯಕತ್ವದಲ್ಲಿ ಕೊಡಗು ಜಿಲ್ಲಾ ಪ್ರಾಂತೀಯ ಅಧ್ಯಕ್ಷರಾಗಿ ನಾಪೋಕ್ಲು ಲಯನ್ಸ್ ಕ್ಲಬ್‍ನ ಡಾ.ಕೋಟೆರ ಸಿ.ಪಂಚಮ್ ತಿಮ್ಮಯ್ಯ ಅವರನ್ನು ನೇಮಕ ಮಾಡಲಾಗಿದೆ. ಕೊಡಗು ಪ್ರಾಂತ್ಯದಲ್ಲಿ 12 ಲಯನ್ಸ್ ಸಂಸ್ಥೆಗಳಿದ್ದು, ಜೂನ್ ತಿಂಗಳಿಂದ ಒಂದು ವರ್ಷದ ಅವಧಿಗೆ ಇವರು ಅಧಿಕಾರದಲ್ಲಿರುತ್ತಾರೆ. ಇವರ ಅಧೀನದಲ್ಲಿ ಮೂವರು ವಲಯ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಮಡಿಕೇರಿಯ ಲಯನ್ಸ್ ಕ್ಲಬ್ ವತಿಯಿಂದ ನಟರಾಜ ಕೆಸ್ತೂರ್, ಗೋಣಿಕೊಪ್ಪ ಲಯನ್ಸ್ ಕ್ಲಬ್ಬಿನ ಚಿಟ್ಟಿಮಾಡ ಅಪ್ಪಣ್ಣ, ಮೂರ್ನಾಡು ಲಯನ್ಸ್ ಕ್ಲಬ್ಬಿನ ಬಡುವಂಡ ಬಿಂದು ಗಣಪತಿ ಆಯ್ಕೆಯಾಗಿದ್ದಾರೆ. ಇವರು ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರವನ್ನು ವಹಿಸಿಕೊಂಡರು ಈ ಸಂದರ್ಭ ವಲಯ್ಯಾಧ್ಯಕ್ಷ ಬಡುವಂಡ ಬಿಂದು ಗಣಪತಿ, ನಟರಾಜ ಕೆಸ್ತೂರ್, ಚಿಟ್ಟಿಮಾಡ ಅಪ್ಪಣ್ಣ, ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಜೂ.9 NEWS DESK : ಅಮ್ಮತಿ ಕಾರ್ಮಾಡುವಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಂಗನವಾಡಿ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಪ್ರತಿಯೊಬ್ಬನಿಗೂ ವಿದ್ಯಾಭ್ಯಾಸದ ಮೊದಲ ಅಧ್ಯಾಯ ಅಂಗನವಾಡಿಯಿಂದಲೇ ಪ್ರಾರಂಭ ಆಗುತ್ತದೆ. ಮಕ್ಕಳಲ್ಲಿ ವಿದ್ಯೆಯ ಬಗ್ಗೆ ಮುತುವರ್ಜಿ ಮೂಡಲು ಅಂಗನವಾಡಿಗಳು ಮೂಲ ಕಾರಣವಾಗಬೇಕು. ಹಾಗಾಗಬೇಕಾದಲ್ಲಿ ಅಂಗನವಾಡಿಯಲ್ಲಿನ ವಾತಾವರಣವೂ ಮಕ್ಕಳ ಕಲಿಕೆಯ ಉತ್ಸಾಹಕ್ಕೆ ಪೂರಕವಾಗಿರಬೇಕು ಎಂದು ಹೇಳಿದರು. ಪುಟಾಣಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಸರಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅಂಗನವಾಡಿಯಲ್ಲಿ ಇರುವ ಶಿಕ್ಷಕರು ಮತ್ತು ಸಹಾಯಕಿಯರು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವವರಾಗಿದ್ದಾರೆ. ಇವರೆಲ್ಲರೂ ತಮ್ಮ ತಮ್ಮ ಜವಾಬ್ದಾರಿಗಳನ್ನು ಅರಿತು, ದೇಶದ ಭವಿಷ್ಯದ ಪ್ರಜೆಗಳನ್ನು ರೂಪಿಸುವಲ್ಲಿ ಶ್ರಮವಹಿಸಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ  ಜಾನ್ಸನ್, ಪಂಚಾಯಿತಿ ಅಧ್ಯಕ್ಷರು, ಇಲಾಖೆಯ ಅಧಿಕಾರಿಗಳು,…

Read More

ಮಡಿಕೇರಿ ಜೂ.9 NEWS DESK : ಇತ್ತೀಚಿನ ಕಾಲಘಟ್ಟದಲ್ಲಿ ಅತೀ ವೇಗವಾಗಿ ಹರಡುತ್ತಿರುವ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಬೇಕಾದರೆ, ಸಾಮಾಜಿಕ ಜಾಲತಾಣದಲ್ಲಿ ಪತ್ರಿಕಾ ಮಾಧ್ಯಮ ಹಿಡಿತ ಸಾಧಿಸುವ ಅನಿವಾರ್ಯತೆ ಇದೆ ಎಂದು ಕೊಡಗು ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ(ಪರೀಕ್ಷಾಂಗ) ಮೇಚಿರ ರವಿಶಂಕರ್ ನಾಣಯ್ಯ ಅಭಿಪ್ರಾಯಪಟ್ಟರು. ನಗರದ ಪತ್ರಿಕಾ ಭವನದಲ್ಲಿ ನಡೆದ ಕೊಡಗು ಪ್ರೆಸ್‍ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಂದಿನ ಕಾಲದಲ್ಲಿ ಬದುಕಿನ ಮೌಲ್ಯಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿತ್ತು. ಬದಲಾದ ಕಾಲಘಟ್ಟದಲ್ಲಿ ಮಾನವೀಯ ಮೌಲ್ಯಗಳನ್ನು ಮರೆತಿರುವುದು ಸಮಾಜದ ಅನೇಕ ಸಮಸ್ಯೆಗಳಿಗೆ ಕಾರಣವಾಗಿದೆ. ಜನರಲ್ಲಿ ಮತ್ತೆ ಮೌಲ್ಯಗಳನ್ನು ಮೂಡಿಸುವಲ್ಲಿ ಪತ್ರಿಕಾ ಮಾಧ್ಯಮದ ಪಾತ್ರ ಮಹತ್ತರವಾಗಿದೆ. ಮನೆಯೇ ಮೊದಲ ಪಾಠ ಶಾಲೆ ಎಂಬ ಮಾತಿನಂತೆ ಪೋಷಕರು ಮಕ್ಕಳಿಗೆ ಎಳೆ ವಯಸ್ಸಿನಿಂದಲೇ ಜೀವನದ ಮೌಲ್ಯಗಳನ್ನು ಕಲಿಸಿಕೊಡಬೇಕು ಎಂದರು. ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಆಧಾರಸ್ತಂಭ ಇದ್ದಂತೆ. ಈ ವೃತ್ತಿಯನ್ನು ಜವಾಬ್ದಾರಿಯುತವಾಗಿ ನಿಷ್ಠೆಯಿಂದ ನಿಭಾಯಿಸುವುದು ಕಷ್ಟಕರ. ಸಾಮಾಜಿಕ ಬದಲಾವಣೆಯನ್ನು ತರುವ ಮತ್ತು ಜನಾಭಿಪ್ರಾಯ ರೂಪಿಸುವ ಜವಾಬ್ದಾರಿ…

Read More

ಮಡಿಕೇರಿ ಜೂ.9 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಗೋಣಿಕೊಪ್ಪಲು ಪಂಚಾಯಿತಿ ಹಳೆ ಕಟ್ಟಡದ ಸಭಾಂಗಣದಲ್ಲಿ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆ ವಿತರಣೆ  ಕಾರ್ಯಕ್ರಮ ನಡೆಯಿತು.  ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳನ್ನು ವಿತರಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಇಂದಿನ ಕಾಲಘಟ್ಟದಲ್ಲಿ ಹಿರಿಯರನ್ನು ಗೌರವಿಸುವುದು ಮತ್ತು ಹಿರಿಯರಿಗೆ ಬೇಕಾದ ಎಲ್ಲಾ ಸೌಕರ್ಯ-ಸೌಲತ್ತುಗಳನ್ನು ಕಲ್ಪಿಸುವುದು ನಮ್ಮೆಲ್ಲರ ಪ್ರಮುಖ ಆದ್ಯತೆ ಆಗಿರಬೇಕು. ನಮ್ಮ ಹಿರಿಯರು ಕಟ್ಟಿದ ನಾಡಿನಲ್ಲಿ ನಾವೆಲ್ಲ ಇಂದು ಜೀವಿಸುತ್ತಿದ್ದು, ಅದನ್ನು ಉಳಿಸಿ ಬೆಳೆಸುವಂತಹ ಜವಾಬ್ದಾರಿ ನಮ್ಮೆಲ್ಲರ ಮೇಲೆ ಇದೆ ಎಂಬುದನ್ನು ಪ್ರತಿಯೊಬ್ಬರು ಅರಿತುಕೊಂಡಲ್ಲಿ ನಾಡಿನ ಎಲ್ಲಾ ಹಿರಿಯ ಜೀವಿಗಳಿಗೆ ನಾವು ನ್ಯಾಯ ಒದಗಿಸಿದಂತೆ ಆಗುತ್ತದೆ ಎಂದು ಹೇಳಿದರು. ಸರ್ಕಾರ ಹಿರಿಯ ನಾಗರಿಕರ ಅನುಕೂಲಕೆಂದು ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ಇದರ ಸದುಪಯೋಗ ಎಲ್ಲಾ ಹಿರಿಯರಿಗೆ ತಲುಪುವಂತೆ ಆಗಲು ನಾವೆಲ್ಲರೂ ಶ್ರಮ ವಹಿಸಬೇಕೆಂದು ಕರೆ ನೀಡಿದರು.  ಈ ಸಂದರ್ಭ ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷ…

Read More

ಸುಂಟಿಕೊಪ್ಪ ಜೂ.7 NEWS DESK : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸುಂಟಿಕೊಪ್ಪ ಪೊಲೀಸ್ ಠಾಣೆ ಆವರಣದಲ್ಲಿ ಗಿಡ ನೆಡುವುದರೊಂದಿಗೆ ವಿಶ್ವ ಪರಿಸರ ದಿನ ಆಚರಿಸಲಾಯಿತು. ಸುಂಟಿಕೊಪ್ಪ ಪೊಲೀಸ್ ಠಾಣೆ ಆವರಣದಲ್ಲಿ ಠಾಣಾಧಿಕಾರಿ ಮೋಹನ್ ರಾಜ್ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ಸುಂಟಿಕೊಪ್ಪ ನಾಡು ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀಶಾ ನಾವು ಪರಿಸರವನ್ನು ಉಳಿಸಬೇಕೆಂದರೆ ಪ್ಲಾಸಿಕ್ ಬಳಕೆಯನ್ನು ಕಡಿಮೆ ಮಾಡಿಬೇಕು, ಪರಿಸರದಲ್ಲಿರುವ ಪಕ್ಷಿಗಳಿಗೆ ಮನೆಯ ಮುಂದೆ ನೀರನ್ನು ಇಡಬೇಕು ಎಂದು ಹೇಳಿದರು. ಈ ಸಂದರ್ಭ ಅಪರಾಧ ವಿಭಾಗದ ಸಬ್‍ಇನ್ಸ್‍ಪೇಕ್ಟರ್ ಭಾರತಿ, ಎಎಸ್‍ಐ ಸೈಮನ್ ಡಿ.ಕುನ್ಹ, ಪೇದೆ ಜಗದೀಶ್ ಪಾಲ್ಗೊಂಡಿದರು.

Read More

ಸುಂಟಿಕೊಪ್ಪ ಜೂ.9 NEWS DESK : ಸುಂಟಿಕೊಪ್ಪದಲ್ಲಿ ಮುಸ್ಲಿಂ ಬಾಂಧವರು ತ್ಯಾಗ, ಸಮಾನತೆ, ಸಹಬಾಳ್ವೆಯ ಸಂಕೇತವಾದ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಭಾಂದವರು ವಿಶೇಷ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭ ಹಾರೈಸಿಕೊಂಡರು. ಸುಂಟಿಕೊಪ್ಪ ಪಟ್ಟಣದ ಸುನ್ನಿ ಶಾಫಿ ಜುಮ್ಮ ಮಸ್ಜಿದ್‍ನಲ್ಲಿ ಇಬ್ರಾಹಿಂ ಯಾಸನಿ, ಸುನ್ನಿ ಹನಫಿ ಮುಸ್ಲಿಂ ಜಮಾಅತ್ ಮೌಲನಾ ಜುಬೇರ್, ಸುನ್ನಿ ಶಾಫಿ ಜುಮಾ ಮಸ್ಜಿದ್ ಧಾರ್ಮಿಕ ಧರ್ಮಗುರುಗಳಾದ ಇಸಾಂ ಬಾಕವಿ, ಮಸ್ಜಿದ್ ಮೌಲನಾ ಇನಾಂ, ಗದ್ದೆಹಳ್ಳದ ನೂರು ಜುಮ್ಮ ಮಸ್ಜಿದ್ ಮುಸ್ಲಿಯರ್ ಅಬ್ದುಲ್ ಅಜೀಜ್ ಸಖಾಫಿ ಅವರುಗಳು ಧಾರ್ಮಿಕ ಪ್ರವಚ ಪ್ರಾರ್ಥನೆಯನ್ನು ಸಲ್ಲಿಸಿದರು. ಸಲಾಫಿ ಮಸೀದಿಯಲ್ಲಿ ಬಕ್ರೀದ್ ಈದ್‍ಉಲ್ ಆಧಾ ಅಂಗವಾಗಿ ನಿಷಾದ್ ಸಲಾಯಿ ಅವರು ಧಾರ್ಮಿಕ ಪ್ರವಚನ ಹಾಗೂ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಪುರುಷರು, ಮಹಿಳೆಯರು, ಮಕ್ಕಳು ಒಗ್ಗೂಡಿ ಪ್ರಾರ್ಥನೆಯನ್ನು ಸಲ್ಲಿಸಿದರು. ಸುಂಟಿಕೊಪ್ಪ ಠಾಣಾಧಿಕಾರಿ ಮೋಹನ್ ರಾಜ್, ಹಾಗೂ ಪೊಲೀಸ್ ಸಿಬ್ಬಂದಿಗಳು ಸೂಕ್ತ ಬಂದೋಬಸ್ತ್ ವಹಿಸಿದ್ದರು.

Read More

ಕುಶಾಲನಗರ ಜೂ.7 NEWS DESK : ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಆರೋಗ್ಯ, ನೈರ್ಮಲ್ಯ , ವೈಯಕ್ತಿಕ ಸ್ವಚ್ಛತೆ ಹಾಗೂ ಶುಚಿತ್ವಕ್ಕೆ ಹೆಚ್ಚಿನ ಕಾಳಜಿ ವಹಿಸುವ ಮೂಲಕ  ಸೊಳ್ಳೆಗಳ ಕಡಿತದಿಂದ ಬರುವ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಿದೆ ಎಂದು ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ ಬಿ.ಎಲ್. ಶ್ರೀನಿವಾಸ್ ಕರೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕುಶಾಲನಗರ ತಾಲ್ಲೂಕು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ತಾಲ್ಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಮುಖ್ಯ ಶಿಕ್ಷಕರು, ಆರೋಗ್ಯ ಕಾರ್ಯಕ್ರಮದ ನೋಡಲ್ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ನೀಡಿ ಸಾಂಕ್ರಾಮಿಕ ರೋಗಗಳ ನಿವಾರಣೆಗೆ ಸಮುದಾಯದ ಸಹಕಾರ ಅಗತ್ಯ ಎಂದರು. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಇಕೋ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ( ಎನ್ನೆಸ್ಸೆಸ್…

Read More

ಮಡಿಕೇರಿ ಜೂ.9 NEWS DESK : ಪದಗಳ ತಜು೯ಮೆಗಿಂತ ಭಾವನೆಗಳನ್ನು ದಾಖಲಿಸುವ ಭಾವಾನುವಾದ ಪ್ರಕಾರವು, ಅನುವಾದ ಸಾಹಿತ್ಯದಲ್ಲಿ ಮಹತ್ವದ್ದಾಗಿರುತ್ತದೆ ಎಂದು ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಮಡಿಕೇರಿಯ ಲೇಖಕಿ ದೀಪಾಭಾಸ್ತಿ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಪತ್ರಕತ೯ರ ಸಂಘದ ವತಿಯಿಂದ ನಗರದ ಲಾಲಿ ಪೆಟಲ್ ಸಭಾಂಗಣದಲ್ಲಿ ಆಯೋಜಿತ ಪತ್ರಕತೆ೯ ದೀಪಾಭಾಸ್ತಿಗೆ ಅಭಿನಂದನಾ ಸಮಾರಂಭ ಮತ್ತು ಸಂವಾದ ಕಾಯ೯ಕ್ರಮದಲ್ಲಿ ಪಾಲ್ಗೊಂಡು ದೀಪಾಭಾಸ್ತಿ ಮಾತನಾಡಿದರು. ಬಾನುಮುಷ್ತಾಕ್ ಅವರ ಎದೆಯ ಹಣತೆ ಕೃತಿ ಸೇರಿದಂತೆ 6 ಕಥಾಸಂಕಲನಗಳಲ್ಲಿನ 12 ಕಥೆಗಳನ್ನು ಆಯ್ಕೆ ಮಾಡಿ ಇಂಗ್ಲೀಷ್ ನಲ್ಲಿ ಬರೆದ ಹಾಟ್೯ ಲ್ಯಾಂಪ್ ಕೖತಿ ಸಂಬಂಧಿತ ಮಾಹಿತಿ ನೀಡಿದ ದೀಪಾಭಾಸ್ತಿ, ಕನ್ನಡದಿಂದ ಇಂಗ್ಲೀಷ್ ಗೆ ಅನುವಾದ ಮಾಡುವಾಗ ಖಂಡಿತವಾಗಿಯೂ ಪದಗಳನ್ನು ತಜು೯ಮೆ ಮಾಡಬಾರದು. ಇದರ ಬದಲಿಗೆ ಮೂಲಕೃತಿಯಲ್ಲಿನ ಪದಗಳ ಭಾವವನ್ನು ಅಥೈ೯ಸಿಕೊಂಡು ತನ್ನದೇ ಶೈಲಿಯಲ್ಲಿ ಭಾವಾನುವಾದ ಮಾಡಿದರಷ್ಟೇ ಅನುವಾದ ಸಾಹಿತ್ಯಕ್ಕೆ ಗಟ್ಟಿತನ ದೊರಕುತ್ತದೆ ಎಂದು ಅಭಿಪ್ರಾಯಪಟ್ಟರು. ಪಂಪ, ಕುವೆಂಪು ಸೇರಿದಂತೆ ಕನ್ನಡದ ಅನೇಕ ಸಾಹಿತಿಗಳ ಅತ್ಯಂತ ಶ್ರೇಷ್ಟ ಕೖತಿಗಳು ಇನ್ನಾದರೂ…

Read More

ಮಡಿಕೇರಿ ಜೂ.9 NEWS DESK : ಕ್ಯಾನ್ಸರ್ ಪೀಡಿತ ರೋಗಿಯ ನೆರವಿಗಾಗಿ ಮಡಿಕೇರಿಯ ವಿನುತಾ ವಸಂತ್ ಅವರು ರೋಟರಿ ವುಡ್ಸ್ ಮೂಲಕ ತಲೆಕೂದಲನ್ನು ನೀಡಿದರು. ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲು, ಕಾಯ೯ದಶಿ೯ ಕಿರಣ್ ಕುಂದರ್ ಅವರುಗಳು ದಾನವಾಗಿ ನೀಡಲ್ಪಟ್ಟ ಕೂದಲನ್ನು ಪಡೆದು ಮಂಗಳೂರಿನ ರೋಗಿಗೆ ರವಾನಿಸಿದರು. ಸ್ವಾಥ೯ ರಹಿತ ಸೇವೆಗೆ ವಿನುತಾವಸಂತ್ ನಿದಶ೯ನವಾಗಿದ್ದಾರೆ. ಇವರ ಸೇವೆ ಆದಶ೯ಪ್ರಾಯವಾಗಿದೆ ಎಂದೂ ಹರೀಶ್ ಕಿಗ್ಗಾಲು ಶ್ಲಾಘಿಸಿದರು.

Read More