ನಾಪೋಕ್ಲು ಜೂ.7 NEWS DESK : ಕಿಡ್ನಿ ವೈಫಲ್ಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬೆಟ್ಟದ ಕಾಡುವಿನ ಯುವಕ ಕಿರಣ್ ಚಿಕಿತ್ಸೆಗಾಗಿ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದಿಂದ ಆರ್ಥಿಕ ನೆರವು ನೀಡಲಾಯಿತು. ಸಿದ್ದಾಪುರದ ನೆಲ್ಲಿಹುದಿಕೇರಿಯ ಬೆಟ್ಟದಕಾಡುವಿನ ತನಿಯಪ್ಪ ಮತ್ತು ಮೀನ ದಂಪತಿಗಳ ಪುತ್ರ ಕಿರಣ್ ಎರಡು ಕಿಡ್ನಿ ವೈಫಲ್ಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು, ಇವರ ಚಿಕಿತ್ಸೆಗಾಗಿ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ನೇತೃತ್ವದಲ್ಲಿ ದಾನಿಗಳಿಂದ ಸಂಗ್ರಹಿಸಲಾದ ಮೊತ್ತವನ್ನು ಕಿರಣ್ ಪೋಷಕರಿಗೆ ಹಸ್ತಾಂತರಿಸಲಾಯಿತು. ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಜಿಲ್ಲಾಧ್ಯಕ್ಷ ಕೆ.ಕುಶಾಲಪ್ಪ ಮಾತನಾಡಿ, ಬಡತನ ತುಂಬಿದ ಕುಟುಂಬಕ್ಕೆ ನಾಡಿನ ದಾನಿಗಳಿಂದ ಸಂಗ್ರಹಗೊಂಡ ರೂ.52 ಸಾವಿರ ಧನ ಸಹಾಯವನ್ನು ನೀಡಲಾಗಿದೆ. ಮುಂದಿನ ಚಿಕಿತ್ಸೆಗಾಗಿ ಸುಮಾರು 15 ಲಕ್ಷ ದಷ್ಟು ಅಗತ್ಯ ಇದ್ದು, ನಾಡಿನ ಸಮಸ್ತ ಬಾಂಧವರು ಈ ಕುಟುಂಬಕ್ಕೆ ಸಹಾಯ ಹಸ್ತ ನೀಡುವಂತೆ ಮನವಿ ಮಾಡಿದರು. ಈ ಸಂದರ್ಭ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಕೂಡಿಗೆ, ಪದಾಧಿಕಾರಿಗಳಾದ ಮಂಜು ಬೈಚನಹಳ್ಳಿ, ಯೋಗೀಶ್…
ಲೇಖಕ: admin
ಮಡಿಕೇರಿ ಜೂ.7 NEWS DESK : ಪೊನ್ನಂಪೇಟೆ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿರುವ ಮಲ್ಲಂಗಡ ಕುಟುಂಬಸ್ಥರ ಐನ್ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ಐನ್ ಮನೆ ಹಿರಿಯರು ಹಾಗೂ ಪ್ರಮುಖದೊಂದಿಗೆ ಮಾತನಾಡಿದ ಶಾಸಕರು, ಮಲ್ಲಂಗಡ ಐನ್ ಮನೆಯ ಇತಿಹಾಸದ ಬಗ್ಗೆ ತಿಳಿದುಕೊಂಡರು ಹಾಗೂ ಅಭಿವೃದ್ಧಿಗೆ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಮಲ್ಲಂಗಡ ಕುಟುಂಬಸ್ಥರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಜೂ.7 NEWS DESK : ಸಂಪಾಜೆ ಗ್ರಾಮದ ಪೇರಡ್ಕ-ಗೂನಡ್ಕ ಮೊಹಿಯುದ್ದಿನ್ ಜುಮ ಮಸ್ಜಿದ್ ನಲ್ಲಿ ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಖತೀಬ್ ನಹೀಮ್ ಫೈಜಿ ಅಲ್ ಮಹಬರಿ ಈದ್ ಸಂದೇಶ ನೀಡಿದರು. ಎಲ್ಲಾ ಸಮುದಾಯದವರು ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಲು ಕರೆ ನೀಡಿದರು. ನಂತರ ಎಲ್ಲರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಖಬರಸ್ಥಾನದಲ್ಲಿ ಮೃತಪಟ್ಟವರಿಗೆ ಪೇರಡ್ಕ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ನೆರೆವೇರಿಸಿದರು. ಪೇರಡ್ಕ-ಗೂನಡ್ಕ ಜಮಅತ್ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್, ಸಂಪಾಜೆ ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂಎಂ.ಆರ್.ಡಿ.ಎ ಅಧ್ಯಕ್ಷ ಜಿ.ಕೆ.ಹಮೀದ್ ಗೂನಡ್ಕ, ಜಮಾತ್ ಉಪಾಧ್ಯಕ್ಷ ಟಿ.ಬಿ.ಹನೀಫ್ ತೆಕ್ಕಿಲ್ ಗೂನಡ್ಕ, ಕಾರ್ಯದರ್ಶಿ ಪಿ.ಕೆ.ಉಮ್ಮರ್ ಜಡ್ಜ್ ಗೂನಡ್ಕ, ಜೊತೆ ಕಾರ್ಯದರ್ಶಿ ಸಿನಾನ್ ಜಡ್ಜ್ ಗೂನಡ್ಕ, ಸದಸ್ಯರುಗಳಾದ ಮೊಯಿದು ದರ್ಕಾಸ್ ಗೂನಡ್ಕ,ಇಬ್ರಾಹಿಂ ಸೆಟ್ಯಡ್ಕ, ಬಾತಿಶ ತೆಕ್ಕಿಲ್ ಸೇಟ್ಯಡ್ಕ, ಉಸ್ಮಾನ್ ಪಾಂಡಿ ಗೂನಡ್ಕ, ಖಜಾಂಚಿ ತೆಕ್ಕಿಲ್ ಮೊಹಮದ್ ಕುಂಞಿ ಪೇರಡ್ಕ, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಮುನೀರ್ ದಾರಿಮಿ ದರ್ಕಾಸ್ ಹಾಜರಿದ್ದರು.
ಕುಶಾಲನಗರ ಜೂ.7 NEWS DESK : ಮುಸಲ್ಮಾನರ ಪವಿತ್ರ ಹಬ್ಬಗಳಲ್ಲಿ ಒಂದಾದ ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಕುಶಾಲನಗರದ ಪ್ರಮುಖ ಮಸೀದಿಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕುಶಾಲನಗರದ ಶಾಫಿ ಹಾಗೂ ಹನಫಿ ಬಾಂಧವರು ಮದೀಸಿಗಳಲ್ಲಿ ಬಕ್ರೀದ್ ನ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಆಚರಿಸಿದರು. ನಾಡಿನಲ್ಲಿ ಸರ್ವ ಸಮುದಾಯದವರು ಶಾಂತಿ, ಸಮಾಧಾನದಿಂದಿರಲು ಹಾಗೂ ಬೆಳೆ, ಮಳೆಯಾಗಲು ಪ್ರಾರ್ಥಿಸಿದರು. ನಂತರ ಎಲ್ಲರಿಗೂ ಬಕ್ರೀದ್ ಹಬ್ಬದ ಶುಭಾಶಯಗಳನ್ನು ಹಂಚಿಕೊಳ್ಳುವ ಮೂಲಕ ಸಹೋದರತೆಯ ಸಂದೇಶವನ್ನು ಸಾರಿದರು. ಈ ಸಂದರ್ಭ ಹಿಲಾಲ್ ಮಸೀದಿಯ ಧರ್ಮಗಳು, ದಾರುಲ್ ಉಲೂಂ ಮದ್ರಸ ಪ್ರಾಂಶುಪಾಲ ತಮ್ಲೀಕ್ ದಾರಿಮಿ, ಅಧ್ಯಕ್ಷ ಹುಸೇನ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಬಕ್ರೀದ್ ಹಬ್ಬದ ಹಿನ್ನಲೆ ಬಗ್ಗೆ ವಿವರಿಸಿದರು. ಕುಶಾಲನಗರದ ಹಿಲಾಲ್ ಮಸೀದಿ, ಜಾಮಿಯಾ ಮಸೀದಿ, ನೂರೇ ಮದೀನ, ಕೂಡಿಗೆ, ನಂಜರಾಯಪಟ್ಟ ಸೇರಿದಂತೆ ಸಮೀಪದ ಮಸೀದಿಗಳಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆಯನ್ನು ನೆರವೇರಿಸಲಾಯಿತು. ಆಯಾ ಭಾಗದ ಕಮಿಟಿ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಇದ್ದರು.
ಮಡಿಕೇರಿ ಜೂ.7 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ ವಿದ್ಯಾರಂಭ ಕಾರ್ಯಕ್ರಮ ನಡೆಯಿತು. ನೂತನ ಶೈಕ್ಷಣಿಕ ವರ್ಷಕ್ಕೆ ಶಾಲೆಯ ಪ್ರಾಂಶುಪಾಲರಾದ ಕೆ.ಎಸ್. ಸುಮಿತ್ರಾ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಅತ್ಯಧಿಕ ಮೊಬೈಲ್ ಫೋನ್ ಬಳಕೆ ಮಾಡದಂತೆ ಎಚ್ಚರ ವಹಿಸಿ ಎಂದು ತಿಳಿಸಿದರು. ಮೊಬೈಲ್ ಮಕ್ಕಳ ಶಾರೀರಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ತೊಂದರೆ ಉಂಟು ಮಾಡುತ್ತದೆ. ವಿದ್ಯಾರ್ಥಿಗಳು ಪುಸ್ತಕಪಠನ, ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಬೇಕು ಎಂದು ಕಿವಿಮಾತು ಹೇಳಿದರು. ಶಾಲಾ ಶೈಕ್ಷಣಿಕ ಸಂಯೋಜಕಿ ಭಾರತಿ ಮಕ್ಕಳಿಗೆ ಅಕ್ಷರಭ್ಯಾಸ ಮಾಡಿದರು. ಕಾರ್ಯಕ್ರಮದಲ್ಲಿ ಪೋಷಕವೃಂದ, ಶಿಕ್ಷಕ ವೃಂದದವರು ಭಾಗವಹಿಸಿದ್ದರು. ಶಿಕ್ಷಕಿ ಬಿ.ಎಂ.ಶೃತಿ ನಿರೂಪಿಸಿದರು. ನಳಿನಿ ಕಿರಣ್ ವಂದಿಸಿದರು. ಕೊಡಗು ವಿದ್ಯಾಲಯ ಶಿಕ್ಷಕ ವೃಂದದವರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.
ಮಡಿಕೇರಿ ಜೂ.7 NEWS DESK : ಕೊಡಗು ಜಿಲ್ಲೆಯಾದ್ಯಂತ ನೆಲೆಸಿರುವ ಬಲಿಜ ಸಮಾಜ ಬಾಂಧವರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿಗೆ ಪೂರಕವಾಗಿ ‘ಶ್ರೀ ಯೋಗಿನಾರಾಯಣ ಕೊಡಗು ಜಿಲ್ಲಾ ಬಲಿಜ’ ಸಂಘವನ್ನು ಅಸ್ತಿತ್ವಕ್ಕೆ ತಂದು ನೋಂದಣಿ ಮಾಡಲಾಗಿದೆಯೆಂದು ಸಂಘದ ಜಿಲ್ಲಾಧ್ಯಕ್ಷರಾದ ಟಿ.ಜಿ.ಗಣೇಶ್ ನಾಯ್ಡು ಮೂರ್ನಾಡು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು 35 ಸಾವಿರ ಬಲಿಜ ಸಮಾಜ ಬಾಂಧವರು ನೆಲೆಸಿದ್ದಾರೆ. ಇವರಲ್ಲಿ ಶಿಕ್ಷಣದ ಜಾಗೃತಿಯೊಂದಿಗೆ, ಅವರ ಸಮಸ್ಯೆಗಳಿಗೆ ಸ್ಪಂದಿಸಿ, ಕಷ್ಟ ಸುಖಗಳಿಗೆ ನೆರವಾಗುವ ಉದ್ದೇಶದಿಂದ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆಯೆಂದರು. ಸಂಘದ ಮುಖೇನ ಸಮಾಜ ಬಾಂಧವರಿಗೆ ಯೋಗ್ಯ ಶಿಕ್ಷಣವನ್ನು ಒದಗಿಸುವ ನಿಟ್ಟಿನ ಪ್ರಯತ್ನ, ಅವರ ಸಂಕಷ್ಟಗಳಿಗೆ ಸ್ಪಂದಿಸಿ ನೆರವಾಗುವುದು, ಆರ್ಥಿಕ ಅಭಿವೃದ್ಧಿಗೆ ಪೂರಕ ಬೆಂಬಲ ಮತ್ತು ಪ್ರೋತ್ಸಾಹವನ್ನು ನೀಡುವುದು, ಎಲೆ ಮರೆಯ ಕಾಯಿಯಂತಿರುವ ಸಮಾಜದ ಪ್ರತಿಭಾವಂತರನ್ನು ಗುರುತಿಸಿ ಬೆಳಕಿಗೆ ತರುವುದು ಹಾಗೂ ಸಮುದಾಯದ ಒಳಗಿನ ಯಾವುದೇ ಭಿನ್ನಾಭಿಪ್ರಾಯ ಗುಂಪುಗಾರಿಕೆಗಳನ್ನು ಇಲ್ಲವಾಗಿಸಿ ಸದೃಢವಾಗಿ ಬಲಿಜ ಸಮಾಜವನ್ನು ಕಟ್ಟುವುದು ಸಂಘದ ಪ್ರಮುಖ…
ಮಡಿಕೇರಿ ಜೂ.7 NEWS DESK : ಕೊಡಗು ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಎನ್ಸಿಸಿ ಘಟಕ, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳೊಂದಿಗೆ ಅರಣ್ಯ ಇಲಾಖೆಯ ಸಹಯೋಗದಲ್ಲಿ ನಡೆದ ಕಾಯ೯ಕ್ರಮದಲ್ಲಿ ವಿದ್ಯಾರ್ಥಿಗಳು ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಗಿಡ ನೆಟ್ಟರು. ಶಾಲೆಯ ಪ್ರಾಂಶುಪಾಲೆ ಕೆ.ಎಸ್.ಸುಮಿತ್ರ, ಆಡಳಿತಾಧಿಕಾರಿ ಪಿ.ರವಿ, ಎನ್ಸಿಸಿ ಅಧಿಕಾರಿ ಮೇಜರ್ ದಾಮೋದರ್, ಅರಣ್ಯಾಧಿಕಾರಿಗಳಾದ ಅಭಿಷೇಕ್ ಐಎಫ್ಎಸ್ ಹಾಗೂ ಲತಾ (ಎಸಿಎಫ್), ಎನ್ಸಿಸಿ ಸಿಬ್ಬಂದಿ ರಮೇಶ್ ಮತ್ತು ಶಾಲಾ ಶಿಕ್ಷಕ ವೃಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಡಿಕೇರಿ ಜೂ.7 NEWS DESK : ಕಾಡಾನೆ ದಾಳಿಗೆ ಸಿಲುಕಿದ ಬೆಳೆಗಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಪ್ರವೀಣ್ ಅವರ ಮಾವ, ಕರಡಿಗೋಡು ನಿವಾಸಿ ಕುಕ್ಕುನೂರು ಪುರುಷೋತ್ತಮ (78) ಎಂಬುವವರೇ ಮೃತ ದುರ್ದೈವಿ. ಶುಕ್ರವಾರ ಸಂಜೆ ಸುಮಾರು 6.30 ಗಂಟೆ ವೇಳೆಗೆ ಮನೆಯ ಸಮೀಪದ ತೋಟಕ್ಕೆ ತೆರಳಿದ್ದವರು ನಂತರ ಮನೆಗೆ ಬಂದಿರಲಿಲ್ಲ. ಇದರಿಂದ ಗಾಬರಿಗೊಂಡ ಕುಟುಂಬದ ಸದಸ್ಯರು ತೋಟದಲ್ಲಿ ಹುಡುಕಾಟ ನಡೆಸಿದಾಗ ಪುರುಷೋತ್ತಮ ಅವರು ಕಾಡಾನೆ ತುಳಿತಕ್ಕೆ ಸಿಲುಕಿ ಮೃತಪಟ್ಟಿರುವುದು ಕಂಡು ಬಂದಿದೆ. ಅಲ್ಲದೆ ಕಾಡಾನೆಯೊಂದು ತೋಟ ವ್ಯಾಪ್ತಿಯಲ್ಲಿ ಓಡಾಡುತ್ತಿರುವುದು ಗೋಚರಿಸಿದೆ. ಮಾಹಿತಿ ತಿಳಿದ ತಕ್ಷಣ ಅರಣ್ಯ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು. ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೆ ಸೂಕ್ತ ಪರಿಹಾರ ದೊರಕಿಸಿ ಕೊಡುವ ಭರವಸೆ ನೀಡಿದರು. ಇಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ…
ಮಡಿಕೇರಿ ಜೂ.7 NEWS DESK : ಪಾಲಿಬೆಟ್ಟದಲ್ಲಿ ಸುಮಾರು 2.97 ಕೋಟಿ ರೂ.ಗಳಲ್ಲಿ ನಿರ್ಮಾಣವಾದ ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿರಾಜಪೇಟೆ ತಾಲೂಕಿನಲ್ಲಿ ನಿರ್ಮಾಣಗೊಂಡ ವಿದ್ಯಾರ್ಥಿ ನಿಲಯವು, ಸುತ್ತಮುತ್ತಲಿನ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂಥ ವಾತಾವರಣ ನಿರ್ಮಿಸಲಿದೆ ಎಂದು ಹಾರೈಸಿದರು. ಇಲ್ಲಿ ವಿದ್ಯಾರ್ಥಿನಿಯರಿಗೆ ಬೇಕಾದಂತಹ ಎಲ್ಲಾ ಮೂಲಭೂತ ಸೌಕರ್ಯವೂ ಸದಾ ಒದಗುವಂತೆ ನೋಡಿಕೊಳ್ಳುವುದು ಪ್ರಥಮ ಆದ್ಯತೆ ಆಗಿರಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿನಿಯರಿಗೆ ಸುರಕ್ಷೆ ಹಾಗೂ ಉತ್ತಮ ವಾತಾವರಣ ಇರುವಂತೆ ನೋಡಿಕೊಳ್ಳಬೇಕು ಎಂದು ಶಾಸಕರು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ವಿರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಜಾನ್ಸನ್, ಕೆಡಿಪಿ ಸದಸ್ಯರಾದ ಗಣೇಶ್, ಪಾಲಿಬೆಟ್ಟ ವಲಯ ಅಧ್ಯಕ್ಷ…
ಮಡಿಕೇರಿ ಜೂ.7 NEWS DESK : ಗೋಣಿಕೊಪ್ಪ ಮೈಸೂರು ರಸ್ತೆಯಲ್ಲಿ ನೂತನವಾಗಿ ಆರಂಭಗೊಂಡ ಎಂ.ಆರ್.ಪಿ.ಎಲ್ ಪೆಟ್ರೋಲ್ ಬಂಕ್ ಅನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಈ ಹಿಂದಿನಿಂದಲೂ ಇವರದೇ ಒಡೆತನದ ಇನ್ನೊಂದು ಪೆಟ್ರೋಲ್ ಬಂಕ್, ಈಗಾಗಲೇ ವಾಹನ ಸವಾರರಿಗೆ ಸೇವೆ ಒದಗಿಸುವಲ್ಲಿ ಉತ್ತಮ ಹೆಸರನ್ನು ಮಾಡಿದ್ದು, ಈ ಕ್ಷೇತ್ರದಲ್ಲಿ ತಮ್ಮ ಉದ್ಯಮವನ್ನು ವಿಸ್ತರಿಸಿ ಜನರಿಗೆ ಮತ್ತಷ್ಟು ಸೇವೆ ನೀಡುವಂತಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಪೆಟ್ರೋಲ್ ಬಂಕ್ ಮಾಲೀಕರ ಕುಟುಂಬಸ್ಥರು ಹಾಗೂ ಪ್ರಮುಖರು ಉಪಸಿತರಿದ್ದರು.






