ಕುಶಾಲನಗರ ಜು.7 NEWS DESK : ರಾಷ್ಟ್ರೀಯ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ನ ಕೊಡಗು ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾಗಿ ಕುಶಾಲನಗರದ ಡಾ.ಹೆಚ್.ಎಂ.ರಘುಕೋಟಿ ಅವರು ಆಯ್ಕೆಯಾಗಿದ್ದಾರೆ. ಪರಿಷತ್ ನ ಸಂಸ್ಥಾಪಕ ಅಧ್ಯಕ್ಷರಾದ ಡಾ.ಜಾನ್ ಸುಮುವೆಲ್ ಜೆ.ಕಿಮ್, ರಾಷ್ಟ್ರೀಯ ಸಂಯೋಜಕರಾದ ಜೆ.ಆಲ್ಬರ್ಟ್ ಮನೋಜ್ ರಾಜ್, ರಾಷ್ಟ್ರೀಯ ಉಪಾಧ್ಯಕ್ಷರಾದ ಮಣಿಕಂದನ್, ರಾಷ್ಟ್ರೀಯ ಮಹಿಳಾ ಸಭಾಧ್ಯಕ್ಷರಾದ ರೋಹಿಣಿ ದೀಕ್ಷಿತ್, ರಾಷ್ಟ್ರೀಯ ಆಡಳಿತ ಮಂಡಳಿಯ ನಿರ್ದೇಶಕರಾದ ಬಿಷಪ್ ಸ್ಯಾಮ್ಸನ್ಸ್ ಸಂತೋಷ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಘಟಕದ ರಾಜ್ಯಾಧ್ಯಕ್ಷರಾದ ಅನಿತಾ ಹಾಗೂ ರಾಜ್ಯ ಮಹಿಳಾ ಅಧ್ಯಕ್ಷರಾದ ಭಾಗ್ಯಮ್ಮ.ಬಿ ಸೇರಿದಂತೆ ಸಂಸ್ಥೆಯ ಗಣ್ಯರ ಸಮ್ಮುಖದಲ್ಲಿ ನೇಮಕ ಮಾಡಿ ಆದೇಶ ಪತ್ರವನ್ನು ವಿತರಿಸಲಾಗಿದೆ.
ಲೇಖಕ: admin
ಭಾರತದಲ್ಲಿ ಬ್ಯಾಂಕಿಂಗ್ ವೃತ್ತಿಯನ್ನು ಆರಿಸಿಕೊಳ್ಳುವ ಹೊಸಬರಿಗೆ ಮತ್ತು ಅನುಭವಿ ವೃತ್ತಿಪರರಿಗೆ ಅತ್ಯಂತ ಪ್ರತಿಷ್ಠಿತ ಉದ್ಯೋಗಗಳಲ್ಲಿ ಒಂದಾಗಿದೆ. ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿರುವ ‘ಬ್ಯಾಂಕ್ ಆಫ್ ಬರೋಡಾ’ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 2,500 ಹುದ್ದೆಗಳು ಖಾಲಿ ಇದ್ದು, ಇವುಗಳಲ್ಲಿ 450 ಹುದ್ದೆಗಳನ್ನು ಕರ್ನಾಟಕಕ್ಕೆ ಮೀಸಲಿಡಲಾಗಿದೆ. ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲಿ ಪರಿಣತಿ ಹೊಂದಿದವರಿಗೆ ಮಾತ್ರ ಈ ಉದ್ಯೋಗ ನೀಡಲಾಗುತ್ತದೆ. :: ಹುದ್ದೆಗಳ ಸಂಖ್ಯೆ:: ರಾಜ್ಯಕ್ಕೆ ಮೀಸಲಿಟ್ಟ ಒಟ್ಟು 450 ಹುದ್ದೆಗಳಲ್ಲಿ ಸಾಮಾನ್ಯ ವರ್ಗದವರಿಗೆ 184, ಆರ್ಥಿಕ ದುರ್ಬಲ ವರ್ಗದವರಿಗೆ 45, ಇತರೆ ಹಿಂದುಳಿದ ವರ್ಗದವರಿಗೆ 121, ಎಸ್ಟಿ 33 ಹಾಗೂ ಎಸ್ಸಿ ಅಭ್ಯರ್ಥಿಗಳಿಗೆ 67 ಹುದ್ದೆಗಳನ್ನು ಮೀಸಲಿಡಲಾಗಿದೆ. ಅಧಿಕಾರಿಗಳ ವೃಂದದಲ್ಲಿ ಮಾಜಿ ಸೈನಿಕರಿಗೆ ಯಾವುದೇ ಮೀಸಲಾತಿ ಇಲ್ಲ. :: ಹುದ್ದೆಯ ಹೆಸರು :: ಜೂನಿಯರ್ ಮ್ಯಾನೇಜ್ ಮೆಂಟ್ ಗ್ರೇಡ್ ಸ್ಟೇಲ್ -1 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಈಗಾಗಲೇ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು,…
ಸೋಮವಾರಪೇಟೆ ಜು.7 NEWS DESK : ಕೇಂದ್ರಿಯ ಮೀಸಲು ಪಡೆಯಲ್ಲಿ 37 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ, ನಿವೃತ್ತಿ ಪಡೆದು ಗ್ರಾಮಕ್ಕೆ ಆಗಮಿಸಿದ ನಿವೃತ್ತ ಯೋಧನನ್ನು ಮೈಲಾತಪುರ ಗ್ರಾಮಸ್ಥರು ಬರಮಾಡಿಕೊಂಡು ಗೌರವಿಸಿದರು. ಆಲೂರು ಸಿದ್ದಾಪುರ ಸಮೀಪದ ಮೈಲಾತಪುರ ಗ್ರಾಮದ ನಿವೃತ್ತ ಯೋಧ ಮಂಜುನಾಥ್ ಮತ್ತು ಅವರ ಪತ್ನಿಯನ್ನು ಸನ್ಮಾನಿಸಲಾಯಿತು. ಇವರೊಂದಿಗೆ ಅಕ್ಕ ಪಕ್ಕದ ಗ್ರಾಮಗಳ ಮಾಜಿ ಸೈನಿಕರನ್ನು ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಯೋಧ ಮಂಜುನಾಥ್, ದೇಶ ಸೇವೆ ಮಾಡುವ ಭಾಗ್ಯ ನನಗೆ ಸಿಕ್ಕಿರುವುದಕ್ಕೆ ಹೆಮ್ಮೆ ಪಡುತ್ತೇನೆ. 37 ವರ್ಷಗಳಲ್ಲಿ ಹಲವು ಭಾರಿ ಪ್ರಾಣ ಕಳೆದು ಕೊಳ್ಳಬೇಕಾದಂತಹ ಪರಿಸ್ಥಿತಿ ಎದುರಾಗಿತ್ತು. ನಮ್ಮ ಕಣ್ಣ ಎದುರಿಗೆ ಹಲವು ಸಹೋದ್ಯೋಗಿಗಳು ಜೀವತೆತ್ತಿದ್ದಾರೆ. ಇವೆಲ್ಲಾ ನನ್ನ ವೃತ್ತಿ ಬದುಕಿನ ಅತ್ಯಂತ ದುಃಖದ ಕ್ಷಣಗಳು ಎಂದು ಭಾವುಕರಾಗಿ ನುಡಿದರು. ತಮ್ಮ ಬಾಲ್ಯ ಸ್ನೇಹಿತರು, ಗ್ರಾಮಸ್ಥರು ವೃತ್ತಿ ಬದುಕಿನ ಸಿಹಿ, ಕಹಿ ಘಟನೆಗಳನ್ನು ಮೆಲುಕು ಹಾಕಿದರು. ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರೀ.ಮಹಾಂತ ಶಿವಲಿಂಗ ಸ್ವಾಮೀಜಿ ಮಾತನಾಡಿ,…
ಸೋಮವಾರಪೇಟೆ ಜು.17 NEWS DESK : ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. 1988- 89ನೇ ಶೈಕ್ಷಣಿಕ ಸಾಲಿನಲ್ಲಿ ನಿಡ್ತ ಹಾಗೂ ಮುಳ್ಳೂರು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಒಟ್ಟುಗೂಡಿ ಶಾಲೆಗಳಿಗೆ ನೆರವು ನೀಡುತ್ತಿದ್ದು, ತಾವು ಓದಿದ ಸರ್ಕಾರಿ ಶಾಲೆಗಳಿಗೆ ಏನಾದರೊಂದು ಸಹಾಯ ಮಾಡುವ ಮೂಲಕ, ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸಬೇಕು ಎಂಬ ಉದ್ದೇಶದೊಂದಿಗೆ ಸಂಘವನ್ನು ಪ್ರಾರಂಭಿಸಿದ್ದೇವೆ ಎಂದು ಸಂಘದ ಅಧ್ಯಕ್ಷ ಜಯಕುಮಾರ್ ತಿಳಿಸಿದರು. ನಿಡ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಶೋಕ್ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳಿಗೆ ಲೋಟಗಳನ್ನು ವಿತರಿಸುವುದಾಗಿ ತಿಳಿಸಿದರು. ಇದೇ ಸಂದರ್ಭ ಸಂಘದ ಕಾರ್ಯದರ್ಶಿ ಸುನಿಲ್, ಮುಳ್ಳೂರು ಶಾಲಾ ಆವರಣಕ್ಕೆ ಇಂಟರ್ ಲಾಕ್ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದರು. ನಿಡ್ತ ಸರ್ಕಾರಿ ಶಾಲೆಯ ಮೂವತೈದು ಹಾಗೂ ಮುಳ್ಳೂರು ಕಿರಿಯ ಪ್ರಾಥಮಿಕ ಶಾಲೆಯ ಮೂವತ್ತೆರೆಡು ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಿದರು. ಸಂಘದ ಸದಸ್ಯರಾದ ಮುರುಗನ್, ರಾಮಕೃಷ್ಣ, ಆಶೋಕ್, ಮಲ್ಲೇಶ್, ರೇಖಾ, ಹೇಮಲತಾ,…
ಸೋಮವಾರಪೇಟೆ ಜು.7 NEWS DESK : ಯಡೂರು ದೇವರಕೆರೆ ತುಂಬಿರುವ ಹಿನ್ನೆಲೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಉದ್ಯಮಿ ಹರಪಳ್ಳಿ ರವೀಂದ್ರ ಕೆರೆ ತಟದಲ್ಲಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಕಳೆದ 4 ವರ್ಷದ ಹಿಂದೆ ರವಿಂದ್ರ ಅವರು ತನ್ನ ಸ್ವಂತ ಖರ್ಚಿನಲ್ಲಿ ಕೆರೆ ಹೂಳು ತೆಗಿಸಿದ್ದರು. ಪ್ರತಿ ವರ್ಷ ನೀರು ತುಂಬುತ್ತಿರುವುದರಿಂದ ರೈತರು ಕೆರೆಯ ನೀರನ್ನು ಕೃಷಿಗೆ ಉಪಯೋಗಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭ ಯಡೂರು ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ವೈ.ಡಿ.ಮೋಹನ್, ಮಾಜಿ ಅಧ್ಯಕ್ಷ ಮಲ್ಲಪ್ಪ, ಗ್ರಾಮಸ್ಥರಾದ ಲೋಹಿತ್, ಸರ್ವೇಶ್, ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ಅಧ್ಯಕ್ಷ ಹೆಚ್.ಎ.ನಾಗರಾಜ್ ಇದ್ದರು.
ಮಡಿಕೇರಿ ಜು.7 NEWS DESK : ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಯ ಹಿನ್ನೆಲೆಯಲ್ಲಿ ಕೂಡ್ಲೂರು ಗ್ರಾಮದಲ್ಲಿ ಕೊಟ್ಟಿಗೆಯೊಂದರ ಚಾವಣಿಯ ಶೀಟ್ಗಳು ಮುರಿದು ಬಿದ್ದು ಹಾನಿಯುಂಟಾಗಿರುವ ಘಟನೆ ನಡೆದಿದೆ. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯ್ತಿಯ ಕೂಡ್ಲೂರು ಗ್ರಾಮದ ನಿವಾಸಿಯಾದ ಲೋಕೇಶ್ಎಂಬವವರ ಮನೆಗೆ ಹೊಂದಿಕೊಂಡಂತೆ ಇರುವ ಕೊಟ್ಟಿಗೆಗೆ ಹಾನಿ ಸಂಭವಿಸಿದೆ. ಜಿಲ್ಲಾ ಮಳೆ ವಿವರ-ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದೊಂದು ದಿನದ ಅವಧಿಯಲ್ಲಿ ಸರಾಸರಿ 30.97 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 51, ವಿರಾಜಪೇಟೆ 12, ಸೋಮವಾರಪೇಟೆ 44.45, ಪೊನ್ನಂಪೇಟೆ 35.82 ಮತ್ತು ಕುಶಾಲನಗರ ತಾಲ್ಲೂಕಿನಲ್ಲಿ ಸರಾಸರಿ 11.6 ಮಿ.ಮೀ. ಮಳೆ ದಾಖಲಾಗಿದೆ. ಹೋಬಳಿವಾರು ಮಳೆ ವಿವರ- ಮಡಿಕೇರಿ 34 ಮಿ.ಮೀ., ನಾಪೋಕ್ಲು 27, ಸಂಪಾಜೆ 57, ಭಾಗಮಂಡಲ 86, ವಿರಾಜಪೇಟೆ 14, ಅಮ್ಮತ್ತಿ 10, ಸೋಮವಾರಪೇಟೆ 31.4, ಶನಿವಾರಸಂತೆ 31, ಶಾಂತಳ್ಳಿ 92, ಕೊಡ್ಲಿಪೇಟೆ 23.4, ಪೊನ್ನಂಪೇಟೆ 25, ಹುದಿಕೇರಿ 53.3, ಶ್ರೀಮಂಗಲ 52, ಬಾಳೆಲೆ 13, ಕುಶಾಲನಗರ…
ಮಡಿಕೇರಿ ಜು.7 NEWS DESK : ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ಧಿ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆ ಬಿಂಬಿಸುವ ಮಾಹಿತಿ ಒಳಗೊಂಡ ವಸ್ತು ಪ್ರದರ್ಶನವಕ್ಕೆ ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತೀರ ಧರ್ಮಜ ಉತ್ತಪ್ಪ ಮತ್ತು ಜಿಲ್ಲಾಧಿಕಾರಿ ವೆಂಕಟ್ ರಾಜಾ ಚಾಲನೆ ನೀಡಿದರು. ನಗರದ ಕೆಎಸ್ಆರ್ ಟಿಸಿ ಬಸ್ಸು ನಿಲ್ದಾಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ “ಕರ್ನಾಟಕ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಕುರಿತ ಮಾಹಿತಿಯುಳ್ಳ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿದರು. ವಸ್ತು ಪ್ರದರ್ಶನ ಮಳಿಗೆಯಲ್ಲಿ ಅಳವಡಿಸಲಾದ ಗ್ಯಾರಂಟಿ ಸಮರ್ಪಣೆ ಅಭಿವೃದ್ಧಿಯ ಸಂಕಲ್ಪ, ನಾಡಿನ ಏಳು ಕೋಟಿ ಜನರ ಬೆಳಕು ಗ್ಯಾರಂಟಿ ಬದುಕು ಫಲಕ, ಸರ್ಕಾರದ ಯೋಜನೆಗಳಾದ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣಿಸಲು “ಶಕ್ತಿ ಯೋಜನೆ, ಬಡ, ಹಿಂದುಳಿದ ಸೇರಿದಂತೆ ಎಲ್ಲ ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಎಲ್ಲ ಮನೆಯ…
ಮಡಿಕೇರಿ ಜು.6 NEWS DESK : ಬಾಬು ಜಗಜೀವನ್ ರಾಂ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು. ನಗರದ ನೂತನ ತಾ.ಪಂ.ಸಭಾಂಗಣದಲ್ಲಿ ನಡೆದ ಬಾಬು ಜಗಜೀವನ್ ರಾಂ ಅವರ 39ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿಯೂ ಇವರ ಪಾತ್ರ ಮಹತ್ವದ್ದಾಗಿದೆ. ಸ್ವಾತಂತ್ರ್ಯಾ ನಂತರದಲ್ಲಿ ಭಾರತ ಸರ್ಕಾರದ ವಿವಿಧ ಸಚಿವ ಹುದ್ದೆಗಳಲ್ಲಿ ಜನಸೇವೆಗಾಗಿ ತಮ್ಮ ಜೀವನವನ್ನು ಮೀಸಲಿಟ್ಟರು ಎಂದರು. ಕೇಂದ್ರ ರೈಲ್ವೆ, ಕಾರ್ಮಿಕ ಸಚಿವರಾಗಿ ಸೇವೆ ಸಲ್ಲಿಸಿದರು. ಕೃಷಿ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಸ್ಮರಣೀಯವಾದ್ದದು, ಈ ಹಿನ್ನೆಲೆಯಲ್ಲಿ ಅವರನ್ನು ಹಸಿರು ಕ್ರಾಂತಿಯ ಹರಿಕಾರ ಎಂದು ಕರೆಯಲಾಗುತ್ತದೆ. ಇವರ ಜೀವನ ಆದರ್ಶವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನ ಅವರು ಮಾತನಾಡಿ ಬಾಬು ಜಗಜೀವನ್ ರಾಂ ಅವರು ಸಮಾನತೆಯ ಹರಿಕಾರರೂ ಆಗಿದ್ದರು. ವಿವಿಧ…
ಮಡಿಕೇರಿ ಜು.7 NEWS DESK : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕ ಮತ್ತು ಕನ್ನಡ ಭವನದ ಕೊಡಗು ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲಾ ಚುಟುಕು ಕಾವ್ಯಶ್ರೀ ಪ್ರಶಸ್ತಿ, ಕನ್ನಡ ಭವನ ಕಾಸರಗೋಡಿನ ಪ್ರತಿಷ್ಠಿತ ಅಂತರ ರಾಜ್ಯ ಪ್ರಶಸ್ತಿಯಾದ ಕನ್ನಡ ಪಯಸ್ವಿನಿ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಮತ್ತು ಕೊಡಗು ಮಳೆಗಾಲ ಕವಿಗೋಷ್ಠಿ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ನಗರದ ಪತ್ರಿಕಾ ಭವನದಲ್ಲಿ ಕೊಡಗು ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಸ್ಥಾಪಕ ಸಂಚಾಲಕ ಡಾ.ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಉದ್ಘಾಟಿಸಿದರು. *ಪ್ರಶಸ್ತಿ ಪ್ರದಾನ* ಕಾರ್ಯಕ್ರಮದಲ್ಲಿ ಕಿಗ್ಗಾಲು ಎನ್.ಗಿರೀಶ್ ಮೂರ್ನಾಡು, ಮೂಕಳೇರ ಟೈನಿ ಪೂಣಚ್ಚ ಪೊನ್ನಂಪೇಟೆ, ಪಂದ್ಯಂಡ ರೇಣುಕ ಸೋಮಯ್ಯ ಹೊಸೂರು ಅಮ್ಮತ್ತಿ, ಅಪರ್ಣಾ ಹುಲಿತಾಳ, ಅಯ್ಯನೆರವಂಡ ಪ್ರಿತುನ್ ಪೂವಣ್ಣ ಅವರಿಗೆ ಕೊಡಗು ಜಿಲ್ಲಾ ಚುಟುಕು…
ಮಡಿಕೇರಿ NEWS DESK ಜು.6 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಶ್ರೀ ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ ದಸರಾ ಉತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಬಿ.ಕೆ.ಜಗದೀಶ್, ಪ್ರಧಾನ ಕಾರ್ಯದರ್ಶಿಯಾಗಿ ಮುದ್ದುರಾಜು ಬಿ.ಎನ್ ಹಾಗೂ ಖಜಾಂಚಿಯಾಗಿ ಪ್ರದೀಪ್ ಆಯ್ಕೆಯಾಗಿದ್ದಾರೆ. ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಆವರಣದಲ್ಲಿ ಇಂದು ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ನೂತನ ಅಧ್ಯಕ್ಷ ಬಿ.ಕೆ.ಜಗದೀಶ್ ಅವರು ಶ್ರೀ ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿ 50ನೇ ವರ್ಷದ ದಸರಾ ಆಚರಣೆಯ ಸಂಭ್ರಮದಲ್ಲಿದ್ದು, ಎಲ್ಲರ ಸಹಕಾರದೊಂದಿಗೆ ಅದ್ದೂರಿಯಾಗಿ ದಸರಾ ಹಬ್ಬವನ್ನು ಆಚರಿಸಲಾಗುವುದೆಂದು ತಿಳಿಸಿದರು.






