ಲೇಖಕ: admin

ಸೋಮವಾರಪೇಟೆ ಜೂ.7 NEWS DESK : ಎಸ್‍ಎಸ್‍ಎಲ್‍ಸಿಯಲ್ಲಿ ಅತೀ ಹೆಚ್ಚು ಅಂಕಗಳೊಂದಿಗೆ ಕೊಡಗು ಜಿಲ್ಲೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಮೂವರು ವಿದ್ಯಾರ್ಥಿನಿಯರನ್ನು ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಬೆಂಕಳ್ಳಿ-ಕೊತ್ನಳ್ಳಿ ಗ್ರಾಮದ ಸಿ.ಟಿ.ಸತೀಶ್ ಪ್ರಗತಿ ದಂಪತಿ ಪುತ್ರಿ ಸಿ.ಎಸ್.ಆದ್ವಿ 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಟಾಫರ್‍ನೊಂದಿಗೆ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಹೆತ್ತೂರು ಕೊಣಬನಹಳ್ಳಿಯ ಚಂದ್ರಕುಮಾರ್ ಶಿಲ್ಪ ದಂಪತಿ ಪುತ್ರಿ ಕೆ.ವಿ.ಪಂಚಮಿ 621 ಅಂಕಗಳೊಂದಿಗೆ ಜಿಲ್ಲೆಗೆ ದ್ವಿತೀಯ ಹಾಗು ರಾಜ್ಯಕ್ಕೆ ಮಟ್ಟದಲ್ಲಿ 5 ನೇ ಸ್ಥಾನ ಪಡೆದುಕೊಂಡಿದ್ದಾರೆ. ಚಿಕ್ಕತೋಳೂರು ಗ್ರಾಮದ ಸಿ.ಜೆ.ಸೋಮಶೇಖರ್ ಶೈಲಾ ದಂಪತಿ ಪುತ್ರಿ ಸಿ.ಎಸ್.ತೇಜಸ್ವಿನಿ 619 ಅಂಕಗಳೊಂದಿಗೆ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ. ಮೂವರು ಸಾಧಕ ವಿದ್ಯಾರ್ಥಿನಿಯರಿಗೆ ರೋಟರಿ ಅಧ್ಯಕ್ಷ ಜೆ.ಕೆ.ಪೊನ್ನಪ್ಪ ಸಾಲು ಹೊದಿಸಿ ಸನ್ಮಾನಿಸಿದರು. ನಂತರ ಮಾತನಾಡಿದ ಅವರು, ಗ್ರಾಮೀಣ ಭಾಗದ ರೈತ ಕುಟುಂಬದ ಮಕ್ಕಳು ಇಂತಹ ಸಾಧನೆ ಮಾಡಿರುವುದು ನಮ್ಮೆಲ್ಲರಿಗೂ ಹೆಮ್ಮೆ ಎನಿಸಿದೆ.…

Read More

ಮಡಿಕೇರಿ ಜೂ.7 NEWS DESK : ಮಡಿಕೇರಿಯ ಸಿ.ಪಿ.ಸಿ ಲೇಔಟ್‍ನ ಮಸ್ಜಿದ್ ಉರ್ ರ್ರಹ್ಮಾ ಮಸೀದಿಯಲ್ಲಿ ಬಲಿದಾನ ಸಂಕೇತವಾದ ಬಕ್ರೀದ್ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆ ಮಸೀದಿಯಲ್ಲಿ ಮುಸಲ್ಮಾನ ಬಾಂಧವರು ಜಮಾಜ್ ಸಲ್ಲಿಸಿ, ಮಸ್ಜಿದ್ ಉರ್ ರ್ರಹ್ಮಾ ಮಸೀದಿಯ ಧರ್ಮಗುರು ಉಮ್ಮರ್ ಮೌಲವಿ, ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಮಾತನಾಡಿದ ಧರ್ಮಗುರು ಉಮ್ಮರ್ ಮೌಲವಿ, ತ್ಯಾಗ ಬಲಿದಾನ, ಮತ್ತು ಸಹನೆಯ ಪ್ರತೀಕರಾಗಿದ್ದ ಪ್ರವಾದಿ ಇಬ್ರಾಹಿಮರ ಚರಿತ್ರೆ ಮಾನವ ಕುಲಕ್ಕೆ ಮಾದರಿ. ಏಕ ದೇವತ್ವದ ಪ್ರತಿಪಾದಕರಾಗಿದ್ದ ಪ್ರವಾದಿ ಇಬ್ರಾಹಿಮರು ತಮ್ಮ ಜೀವನದುದ್ದಕ್ಕೂ ದೇವನ ಸಂಪ್ರೀತಿಗಾಗಿ ಬದುಕಿದ ಸಂತರು ಎಂದರು. ವಿಶ್ವಾಸಿಗಳು ಎಂದಿಗೂ ಕೋಮುವಾದಿಗಳಾಗಲು ಸಾಧ್ಯವಿಲ್ಲ. ಮಾನವೀಯ ಮೌಲ್ಯಗಳನ್ನು ಕಾಯ್ದುಕೊಳ್ಳುವವರಾಗಿದ್ದಾರೆ. ಪ್ರೀತಿ, ಕಾರುಣೆ, ಚಿಂತನೆ, ಸೇವಾ ಗುಣಗಳನ್ನು ತೋರುವವರಾಗಿದ್ದಾರೆ ಎಂದರು. ಇಂದು ಸಮಾಜದಲ್ಲಿ ಮಾದಕ ದ್ರವ್ಯಗಳ ವ್ಯಸನದ ದಾಸರಾಗಿರುವ ಯುವಕರನ್ನು ಇದರಿಂದ ವಿಮುಕ್ತಗೊಳಿಸಲು ನಾವು ಪ್ರಯತ್ನ ಮಾಡಬೇಕು, ಭಯೋತ್ಪಾದನೆ ಇಲ್ಲದಂತೆ ಮಾಡಬೇಕು, ಕೋಮುವಾದವನ್ನು ಬಿಟ್ಟು ಪರಸ್ಪರ ಎಲ್ಲರೂ ಪ್ರೀತಿ ವಿಶ್ವಾಸದಿಂದ ಇರಬೇಕು…

Read More

ಮಡಿಕೇರಿ ಜೂ.7 NEWS DESK : ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಕೊಡಗಿನಲ್ಲಿ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಿದರು. ವಿಶ್ವದಲ್ಲಿ ಶಾಂತಿ, ಸೌಹಾರ್ದತೆ ನೆಲಸಲಿ ಎಂದು ಸಮುದಾಯ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಸಿಹಿ ಹಂಚಿ ಶುಭಹಾರೈಸಿದರು. ಮಡಿಕೇರಿಯ ಸಿ.ಪಿ.ಸಿ ಲೇಔಟ್‍ನ ಮಸ್ಜಿದ್ ಉರ್ ರ್ರಹ್ಮಾ ಮಸೀದಿಯಲ್ಲಿ ತ್ಯಾಗ ಬಲಿದಾನ ಸಂಕೇತವಾದ ಬಕ್ರೀದ್ ಹಬ್ಬವನ್ನು ಶ್ರದ್ಧಾಭಕ್ತಿಯಯಿಂದ ಆಚರಿಸಲಾಯಿತು. ಮುಂಜಾನೆ ಮಸೀದಿಯಲ್ಲಿ ಮುಸಲ್ಮಾನ ಬಾಂಧವರು ಜಮಾಜ್ ಸಲ್ಲಿಸಿ, ಮಸ್ಜಿದ್ ಉರ್ ರ್ರಹ್ಮಾ ಮಸೀದಿಯ ಧರ್ಮಗುರು ಉಮ್ಮರ್ ಮೌಲವಿ, ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಮಾತನಾಡಿದ ಧರ್ಮಗುರು ಉಮ್ಮರ್ ಮೌಲವಿ, ತ್ಯಾಗ ಬಲಿದಾನ, ಮತ್ತು ಸಹನೆಯ ಪ್ರತೀಕರಾಗಿದ್ದ ಪ್ರವಾದಿ ಇಬ್ರಾಹಿಮರ ಚರಿತ್ರೆ ಮಾನವ ಕುಲಕ್ಕೆ ಮಾದರಿ. ಏಕ ದೇವತ್ವದ ಪ್ರತಿಪಾದಕರಾಗಿದ್ದ ಪ್ರವಾದಿ ಇಬ್ರಾಹಿಮರು ತಮ್ಮ ಜೀವನದುದ್ದಕ್ಕೂ ದೇವನ ಸಂಪ್ರೀತಿಗಾಗಿ ಬದುಕಿದ ಸಂತರು ಎಂದರು. ವಿಶ್ವಾಸಿಗಳು ಎಂದಿಗೂ ಕೋಮುವಾದಿಗಳಾಗಲು ಸಾಧ್ಯವಿಲ್ಲ. ಮಾನವೀಯ ಮೌಲ್ಯಗಳನ್ನು ಕಾಯ್ದುಕೊಳ್ಳುವವರಾಗಿದ್ದಾರೆ. ಪ್ರೀತಿ, ಕಾರುಣೆ,…

Read More

ಸೋಮವಾರಪೇಟೆ ಜೂ.7 NEWS DESK : ತಾಲ್ಲೂಕಿನ ಗರಗಂದೂರು ಡಿ ಚೆನ್ನಮ್ಮ ಎಜುಕೇಶನ್ ಸೊಸೈಟಿ ವತಿಯಿಂದ ಪ್ರೀ ನರ್ಸರಿ ಮತ್ತು ಎಲ್‍ಕೆಜಿ, ಯುಕೆಜಿ ತರಗತಿಗಳನ್ನು ಕಾಫಿ ಬೆಳೆಗಾರರಾದ ಮಚ್ಚಂಡ ಮಲ್ಲಿಕಾ ಬೋಪಣ್ಣ ಉದ್ಘಾಟಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕರ್ನಲ್ ಬಿಜಿವಿ ಕುಮಾರ್ ಮಾತನಾಡಿ, ಇಂದಿನ ಜೀವನಕ್ಕೆ ಆಂಗ್ಲ ಮಾಧ್ಯಮದ ಶಿಕ್ಷಣದ ಅಗತ್ಯತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಪೂರ್ವ ಪ್ರಾಥಮಿಕ ಎಲ್‍ಕೆಜಿ ಹಾಗೂ ಯು.ಕೆ.ಜಿ ತರಗತಿಗಳನ್ನು ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಡಿಸಿಪಿ ಬಿ.ಎ.ಪೂಣಚ್ಚ, ಜ್ಯೋತಿ ಬೆಳಗುವುದರ ಮೂಲಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣದ ಅವಶ್ಯಕತೆ ಇದೆ. ಜಗತ್ತಿನ ಸಂಪರ್ಕ ಭಾಷೆಯಾದ  ಇಂಗ್ಲಿಷ್ ಭಾಷೆಯ ಮಹತ್ವ ಹೆಚ್ಚಾಗಿದೆ. ಮಾದಾಪುರದ ಸುತ್ತಲಿನ ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುವಂತೆ ಆಂಗ್ಲ ಮಾಧ್ಯಮದ ಶಾಲೆಯನ್ನು ತೆರೆದಿರುವುದು ಉತ್ತಮ ಕಾರ್ಯ ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಸಿ.ಜಿ.ಮಂದಪ್ಪ, ಉಪನ್ಯಾಸಕ ರಾಜ ಸುಂದರಂ, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ರೀಟಾ,…

Read More

ಸೋಮವಾರಪೇಟೆ ಜೂ.7 NEWS DESK : ಭಾರತೀಯ ಕೃಷಿ ಅನುಸಂಧಾನ ಪರಿಷತ್, ಜಿಲ್ಲಾ ಆಡಳಿತ, ಕೃಷಿ ವಿಜ್ಞಾನ ಕೇಂದ್ರ ಗೋಣಿಕೊಪ್ಪ, ಕೃಷಿ ಇಲಾಖೆ ಸೋಮವಾರಪೇಟೆ, ಪುಷ್ಪಗಿರಿ ರೈತ ಉತ್ಪಾದಕರ ಸಂಘ, ಸೋಮವಾರಪೇಟೆ, ಕಾಫಿ ಮಂಡಳಿ, ಸಂಬಾರು ಮಂಡಳಿ ವತಿಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಕೃಷಿಕರಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಕೂತಿ ಗ್ರಾಮದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಅಭಿಯಾನದಲ್ಲಿ ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ವಿಷಯ ತಜ್ಞ ಡಾ.ವೀರೇಂದ್ರ ಕುಮಾರ್ ಮಾತನಾಡಿ, ಕೃಷಿಯಲ್ಲಿ ಹೊಸ ತಂತ್ರಜ್ಞಾನ ಬಳಕೆಯೊಂದಿಗೆ ಸುಧಾರಿತ ಬೇಸಾಯ ಮಾಡಿದರೆ ಉತ್ತಮ ಫಸಲು ಪಡೆಯಬಹುದು ಎಂದು ಹೇಳಿದರು. ಮೇ ತಿಂಗಳಲ್ಲಿ ಉತ್ತಮ ಮಳೆ ಬಿದ್ದಿರುವ ಕಾರಣ, ಕಾಳುಮೆಣಸು ಉತ್ಪಾದನೆ ಹೆಚ್ಚಾಗುವ ನಿರೀಕ್ಷೆಯಿದ್ದು, ಕೃಷಿಕರು ಕಾಳುಮೆಣಸು ಬಳ್ಳಿಗಳ ರಕ್ಷಣೆಯತ್ತ ಗಮನಹರಿಸಬೇಕು. ಹಿರಿಯ ವಿಜ್ಞಾನಿಗಳಿಂದ ಮಾಹಿತಿ ಪಡೆದುಕೊಂಡು ಬಳ್ಳಿ ಔಷಧಿ ಮತ್ತು ಗೊಬ್ಬರವನ್ನು ಬಳಕೆ ಮಾಡಬೇಕು. ಸಂಶೋಧನ ಕೇಂದ್ರದ ವಿಜ್ಞಾನಿಗಳಿಗೆ ದೂರವಾಣಿ ಕರೆ ಅಥವಾ ವ್ಯಾಟ್ಸಪ್ ಮೂಲಕ ಮಾಹಿತಿ ಪಡೆದುಕೊಳ್ಳಬೇಕು ಎಂದು…

Read More

ಕುಶಾಲನಗರ  ಜೂ.7 NEWS DESK :  ಕುಶಾಲನಗರ ಪಟ್ಟಣದ ಗಣಪತಿ ದೇವಾಲಯ ಮುಂಭಾಗ ಸಂಚಾರಿ ಪೊಲೀಸ್ ಚೌಕಿ ಬಳಿ ಯುತಿಯೊಬ್ಬಳು ನೆರಳು ಗಿಡ ನೆಟ್ಟು ತನ್ನ ಹುಟ್ಟು ಹಬ್ಬವನ್ನು ಆಚರಿಸುವ ಮೂಲಕ ಸಂಭ್ರಮಿಸಿ ಇತರರಿಗೆ ಮಾದರಿಯಾಗಿದ್ದಾಳೆ. ಕುಶಾಲನಗರ ಪಟ್ಟಣದ ಹೃದಯ ಭಾಗದ ಪೊಲೀಸ್ ಚೌಕಿಯಲ್ಲಿ ಸಂಚಾರಿ ಪೊಲೀಸರು ದಿನದ ಬಹುತೇಕ ಅವಧಿ ಬಿಸಿಲಿಗೆ ಮೈಯೊಡ್ಡಿ ತಮ್ಮ ನಿತ್ಯದ ಸಂಚಾರಿ ನಿಯಂತ್ರಣ ಕೆಲಸ ಮಾಡುತ್ತಿರುವುದನ್ನು ಗಮನಿಸಿದ ಯುವತಿ ಚೈತನ್ಯ ಪೊಲೀಸರಿಗೆ ನೆರಳು ಕಲ್ಪಿಸುವ ಆಶಯದೊಂದಿಗೆ ಗಿಡ ಒಂದನ್ನು ನೆಟ್ಟು ಅದಕ್ಕೆ ಕಬ್ಬಿಣದ ಆವರಣ ಬೇಲಿ ನಿರ್ಮಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಪ್ರತಿಯೊಬ್ಬರು ತಮ್ಮ ಹುಟ್ಟುಹಬ್ಬವನ್ನು  ಕನಿಷ್ಠ ಒಂದು ಗಿಡ ನೆಟ್ಟು ಬೆಳೆಸಿ  ಆಚರಿಸುವ ಮೂಲಕ ಸಂಭ್ರಮಿಸುವಂತೆ ಚೈತನ್ಯಳ ಸಾರ್ವಜನಿಕ ಸಂದೇಶ ಕುಶಾಲನಗರ ಪಟ್ಟಣ ಸುತ್ತಮುತ್ತ ಪ್ರಾಪ್ತಿಯ ಜನರ ಗಮನ ಸೆಳೆದಿದೆ.

Read More

*ನಾಡಿನ ಸಮಸ್ತ ಜನತೆಗೆ ಮಾನವೀಯತೆ ಮತ್ತು ಸಹೋದರತೆಯ ಸಂಕೇತವಾದ ಬಕ್ರೀದ್ ಹಬ್ಬದ ಶುಭಾಶಯಗಳು. ಸರ್ವರಿಗೂ ಹಬ್ಬ ಶುಭವನ್ನು ತರಲಿ, ಸುಖ, ಶಾಂತಿ, ಸಮೃದ್ಧಿ ಸಿಗಲಿ*

Read More

*ತ್ಯಾಗ ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಸರ್ವ ಮುಸಲ್ಮಾನ ಬಂಧುಗಳಿಗೆ ಹಬ್ಬದ ಶುಭಾಶಯಗಳು*

Read More

*ಸರ್ವರಿಗೂ ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬದ ಶುಭಾಶಯಗಳು. ನಾಢಿನ ಸಮಸ್ತ ಜನತೆಗೆ ದೇವರು ಸುಖ, ಶಾಂತಿ, ಸಮೃದ್ಧಿ, ಸೌಹಾರ್ದತೆ ನೀಡಲಿ*

Read More