*ನಾಡಿನ ಸಮಸ್ತ ಜನತೆಗೆ ತ್ಯಾಗ ಬಲಿದಾನದ ಸಂಕೇತವಾದ ಪವಿತ್ರ ಬಕ್ರೀದ್ ಹಬ್ಬದ ಶುಭಾಶಯಗಳು*
ಲೇಖಕ: admin
*ಸರ್ವರಿಗೂ ತ್ಯಾಗ ಬಲಿದಾನದ ಪ್ರತೀಕವಾದ ಪವಿತ್ರ ಬಕ್ರೀದ್ ಹಬ್ಬದ ಶುಭಾಶಯಗಳು. ಈ ಹಬ್ಬವು ಎಲ್ಲರ ಬದುಕಿನ ಕಷ್ಟಗಳನ್ನು ದೂರವಾಗಿಸಿ ಸುಖ, ಶಾಂತಿ, ಸಮೃದ್ಧಿ, ನೆಮ್ಮದಿಯನ್ನು ನೀಡಲಿ*
*ಸರ್ವರಿಗೂ ಬಕ್ರೀದ್ ಹಬ್ಬ ಶುಭವನ್ನುಂಟು ಮಾಡಲಿ, ಸರ್ವ ಜನತೆಗೆ ಹಬ್ಬದ ಶುಭಾಶಯಗಳು*
*ನಾಡಿನ ಸಮಸ್ತ ಮುಸಲ್ಮಾನ ಬಂಧುಗಳಿಗೆ ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬದ ಶುಭಾಶಯಗಳು. ನಾಡಿಗೆ, ನಾಡಿನ ಜನತೆಗೆ ಹಬ್ಬವು ಒಳಿತನ್ನು ಮಾಡಲಿ*
*ನಾಡಿನ ಸರ್ವ ಜನತೆಗೆ ಭ್ರಾತೃತ್ವವನ್ನು ಸಾರುವ ಪವಿತ್ರ ಬಕ್ರೀದ್ ಹಬ್ಬದ ಶುಭಾಶಯಗಳು. ಈ ಹಬ್ಬವು ನಾಡಿನಲ್ಲಿ ಸ್ನೇಹ ಹಾಗೂ ಸೌಹಾರ್ದತೆಯನ್ನು ಬೆಳೆಸಲು ಪ್ರೇರಣೆ ನೀಡಲಿ*
*ನಾಡಿನ ಸಮಸ್ತ ಜನತೆಗೆ ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬದ ಶುಭಾಶಯಗಳು. ಸರ್ವರಲ್ಲಿ ಸುಖ, ಶಾಂತಿ, ಸಮೃದ್ಧಿ, ಸೌಹಾರ್ದತೆ ಮೂಡಲಿ*
*ಸರ್ವ ಮುಸಲ್ಮಾನ ಬಾಂಧವರಿಗೆ ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬದ ಶುಭಾಶಯಗಳು. ಸರ್ವ ಜನತೆಗೆ ದೇವರು ಒಳ್ಳೆಯದನ್ನು ಮಾಡಲಿ*
*ಸರ್ವರಿಗೂ ಬಕ್ರೀದ್ ಹಬ್ಬದ ಶುಭಾಶಯಗಳು, ಸರ್ವಶಕ್ತನಾದ ದೇವರು ನಾಡಿನ ಸಮಸ್ತ ಜನತೆಗೆ ಶಾಂತಿ, ಸಮೃದ್ಧಿ, ಆರೋಗ್ಯ, ಅಭಿವೃದ್ಧಿಯನ್ನು ನೀಡಲಿ*
ಮಡಿಕೇರಿ NEWS DESK ಜೂ.6 : ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ ಹಾಗೂ ಯುಕೆಜಿ ತರಗತಿ ಪ್ರಾರಂಭೋತ್ಸವ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಅವರು, ಗುಣಮಟ್ಟದ ಶಿಕ್ಷಣ ಪಡೆಯುವುದು ಪ್ರತಿಯೊಬ್ಬರ ಹಕ್ಕು. ಈ ನಿಟ್ಟಿನಲ್ಲಿ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮವನ್ನು ಪ್ರಾರಂಭ ಮಾಡಿದ್ದು, ಇದು ಬಡ ಮಕ್ಕಳಿಗೆ ಹೆಚ್ಚು ಪ್ರಯೋಜನವಾಗಲಿದೆ ಎಂದರು. ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಎ.ಎಸ್.ಟಾಟು ಮೊಣಪ್ಪ ಮಾತನಾಡಿ, ಅಂಗನವಾಡಿಯಲ್ಲಿ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಗ್ರಾಮೀಣ ಭಾಗದ ಜನಸಾಮಾನ್ಯರಿಗೆ ಇದರಿಂದ ತುಂಬಾ ಅನುಕೂಲವಾಗಲಿದ್ದು, ಮಾಯಮುಡಿ ವ್ಯಾಪ್ತಿಯ ಜನರು ಪ್ರಯೋಜನ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಬಡವರ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಈ ತರಗತಿಗಳ ಅಗತ್ಯವಿದೆ. ಸರ್ಕಾರದಿಂದ ಮಕ್ಕಳಿಗೆ ನೀಡಲಾಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಪೋಷಕರು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿ ಸರ್ಕಾರದ ಸೌಲಭ್ಯಗಳನ್ನು ಮಕ್ಕಳಿಗೆ ಒದಗಿಸಬೇಕು ಎಂದು…
ಮಡಿಕೇರಿ NEWS DESK ಜೂ.6 : ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ) ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ಮಡಿಕೇರಿ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಮಿತಿಗೆ ಆರು ಸದಸ್ಯರುಗಳನ್ನು ಸರ್ಕಾರ ನಾಮನಿರ್ದೇಶನ ಮಾಡಿದೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಶಿಫಾರಸ್ಸಿನ ಮೇರೆಗೆ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ಮಕ್ಕಂದೂರು ಗ್ರಾಮದ ಕನ್ನಿಕಂಡ ಶ್ಯಾಮ್, ನಾಪೋಕ್ಲು ಕೊಳಕೇರಿ ಗ್ರಾಮದ ಕಲಿಯಂಡ ಕುಶಾಲಪ್ಪ, ಭಾಗಮಂಡಲ ತಣ್ಣಿಮಾನಿಯ ತಿಲಕ್ ಸುಬ್ರಾಯ, ಯವಕಪಾಡಿಯ ಎ.ಎ.ರೈನಾ ಕಾರ್ಯಪ್ಪ ಹಾಗೂ ಕರಿಕೆ ಗ್ರಾಮದ ಎ.ಎಂ.ಜಯನ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಕೆ.ಯು.ಅಬ್ದುಲ್ ರಜಾಕ್ ಹಿರಿಯ ಕಾಂಗ್ರೆಸ್ಸಿಗರಿಗೆ ಶಾಸಕ ಡಾ.ಮಂತರ್ ಗೌಡ ಅವರು ಸಮಿತಿಯಲ್ಲಿ ಅವಕಾಶ ಕಲ್ಪಿಸಿದ್ದು, ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.






