ಲೇಖಕ: admin

ಮಡಿಕೇರಿ NEWS DESK ಜು.5 : ಮಡಿಕೇರಿ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಸಿ.ಟಿ.ಜೋಸೆಫ್, ಕಾರ್ಯದರ್ಶಿಯಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ಹಾಗೂ ಉಪಾಧ್ಯಕ್ಷರಾಗಿ ಸಂಜಯ್ ರಾಜ್ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಮೀನಾ ಕುಮಾರಿ, ಜಂಟಿ ಕಾರ್ಯದರ್ಶಿಯಾಗಿ ಡಿ.ಕೆ.ರಾಜೇಶ್, ನಿರ್ದೇಶಕರಾಗಿ ಕಪಿಲ್ ಕುಮಾರ್, ಜಿ.ಸಿ.ರಮೇಶ್, ಕೆದಂಬಾಡಿ ಚಂದ್ರಶೇಖರ್, ಪಿ.ಎಂ.ಚಗಂಪ್ಪ, ಭಾನುಪ್ರಕಾಶ್, ಅಭಿತ್ ಅಪ್ಪಯ್ಯ, ಲತಾ ಕುಮಾರಿ, ದಿವ್ಯ ನಂಜಪ್ಪ ಹಾಗೂ ಲಿಖಿತಾ ಆಯ್ಕೆಯಾದರು. ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

Read More

ಮಡಿಕೇರಿ NEWS DESK ಜು.5 : ಜನರ ಪ್ರಗತಿಗಾಗಿ ಸರಕಾರ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಡಿಕೇರಿ ವಿಧಾನಸಭೆ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದ್ದಾರೆ. ಹೊದ್ದೂರು ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿದ ಅವರು ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿದರು. ಬಸವ ವಸತಿ ಯೋಜನೆ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ ಹೊದ್ದೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಆಯ್ಕೆಯಾದ 26 ಫಲಾನುಭಾವಿಗಳಿಗೆ ವಸತಿ ನಿರ್ಮಾಣದ ಕಾರ್ಯಾದೇಶ ಪತ್ರವನ್ನು ವಿತರಿಸಿದರು. ಬಳಿಕ ಮಾತನಾಡಿದ ಶಾಸಕರು ಯೋಜನೆಯನ್ನು ಪಾರದರ್ಶಕವಾಗಿ ಜಾರಿಗೆ ತರಲಾಗುತ್ತಿದೆ. ಉಚಿತ ವಸತಿ ಯೋಜನೆಗೆ ಫಲಾನುಭವಿಗಳು ಯಾವುದೇ ರೀತಿಯಲ್ಲಿ ಯಾರಿಗೂ ಹಣ ನೀಡುವ ಅಗತ್ಯವಿಲ್ಲ. ಮನೆ ನಿರ್ಮಿಸಿಕೊಂಡು ಸರಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಹೆಚ್ಚುವರಿ ಮನೆ ಮಂಜೂರು ಮಾಡಲು ಸಹಕರಿಸಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸ್ಮರಿಸಿಕೊಳ್ಳುವುದಾಗಿ ತಿಳಿಸಿದರು. ಅಂಗನವಾಡಿ ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಗ್ರಾ.ಪಂ ಅನುದಾನದಲ್ಲಿ 5 ಅಂಗನವಾಡಿ ಕೇಂದ್ರಗಳಿಗೆ ಸ್ಮಾರ್ಟ್ ಟಿವಿಗಳನ್ನು ವಿತರಿಸಲಾಯಿತು.…

Read More

ಮಡಿಕೇರಿ ಜು.5 NEWS DESK : ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜು.6 ರಿಂದ ಆ.5 ರವರೆಗೆ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ನಿರ್ಭಂಧಿತ ವಾಹನಗಳು: ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು. ವಾಹನದ ನೋಂದಣಿ ತೂಕ 18.500 ಕೆ.ಜಿ. ಗಿಂತ ಹೆಚ್ಚಿನ ಸರಕು ಸಾಗಾಣಿ ಮಾಡುವ ಸರಕು ಸಾಗಾಣಿಕೆ ವಾಹನಗಳು. ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು/ ಆರ್ಟಿಕ್ಯೂಲೇಟೆಡ್ ವಾಹನಗಳು. ನಿರ್ಭಂಧದಿಂದ ವಿನಾಯಿತಿ ನೀಡಿದ ವಾಹನಗಳು: ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು. ಹಾಲು ಪೂರೈಕೆ ವಾಹನಗಳು ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) ಈ ಬಗ್ಗೆ…

Read More

ಮಡಿಕೇರಿ ಜು.5 NEWS DESK : ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪ್ರಶಸ್ತಿಗೆ ಭಾಜನರಾದ ಮೂಕೊಂಡ ನಿತಿನ್ ಕುಶಾಲಪ್ಪ ಅವರನ್ನು ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ನಗರದ ಸಾಲು ಮರದ ತಿಮ್ಮಕ್ಕ ಪಾರ್ಕ್ ಸಮೀಪದ ಖಾಸಗಿ ಕೆಫೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್‍ನ ಅಧ್ಯಕ್ಷೆ ಎಂ.ಎ.ರುಬೀನಾ ಹಾಗೂ ಪದಾಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮೂಕೊಂಡ ನಿತಿನ್ ಕುಶಾಲಪ್ಪ ಅವರು, ಮಕ್ಕಳಿಗಾಗಿ ದಕ್ಷಿಣ ಜನಪದ ಕತೆಗಳ ಕುರಿತು ಬರೆದ ಪಫಿನ್ ಬುಕ್ಸ್ ಪ್ರಕಟಿತ “ದಕ್ಷಿಣ: ಸೌತ್ ಇಂಡಿಯನ್ ಮಿಥ್ಸ್ ಅಂಡ್ ಫೇಬಲ್ಸ್ ರಿಟೋಲ್ಡ್’ ಇಂಗ್ಲಿಷ್ ಕೃತಿಗೆ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪುರಸ್ಕಾರ ಲಭಿಸಿದೆ ಎಂದರು. ಕರ್ನಾಟಕದಿಂದ 3 ಹೆಸರು ಬಂದಿದ್ದು, ಕನ್ನಡ ಸಾಹಿತ್ಯದಲ್ಲಿ ಇಬ್ಬರು ಹಾಗೂ ಇಂಗ್ಲಿಷ್ ಸಾಹಿತ್ಯದಲ್ಲಿ ತನಗೆ ಲಭಿಸಿರುವುದಾಗಿ ತಿಳಿಸಿದರು.…

Read More

ಮಡಿಕೇರಿ ಜು.5 NEWS DESK : ರಾಜ್ಯದಲ್ಲಿ ಮಾಹಿತಿ ತಂತ್ರಜ್ಞಾನದ ಮೂಲಕ ವ್ಯಾಪಾರಿ ಕ್ಷೇತ್ರವನ್ನು ಉನ್ನತೀಕರಣಗೊಳಿಸುವ ಉದ್ದೇಶದಿಂದ ಮೈಸೂರಿನಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್(ಕೆಡಿಇಎಂ) ವತಿಯಿಂದ ‘ಬಿಗ್ ಟೆಕ್ ಶೋ 2025’ ನಡೆಯಿತು. ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಮಾತನಾಡಿದ ಐಟಿ, ಬಿಟಿ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಅವರು ರಾಜ್ಯದ ಮಾಹಿತಿ ತಂತ್ರಜ್ಞಾನ ರಫ್ತಿನಲ್ಲಿ ಮೈಸೂರು ವಲಯ ಎರಡನೇ ಸ್ಥಾನದಲ್ಲಿದೆ. ಭವಿಷ್ಯದಲ್ಲಿ ದೇಶದ ಅತ್ಯುತ್ತಮ ತಂತ್ರಜ್ಞಾನದ ಪ್ರದೇಶವಾಗಿ ರೂಪುಗೊಳ್ಳಲಿದೆ ಎಂದರು. ವಿಜ್ಞಾನ ಹಾಗೂ ತಂತ್ರಜ್ಞಾನ ಕಾರ್ಯದರ್ಶಿ ಏಕರೂಪ್ ಕೌರ್, ಭಾರತೀಯ ಮಾಹಿತಿ ತಂತ್ರಜ್ಞಾನ ಪಾರ್ಕ್ ನಿರ್ದೇಶಕ ಸಂಜಯ್ ತ್ಯಾಗಿ, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್(ಕೆಡಿಇಎಂ) ಅಧ್ಯಕ್ಷ ಬಿ.ವಿ.ನಾಯ್ಡು, ಸಿಇಒ ಸಂಜೀವ್ ಗುಪ್ತಾ, ಮೈಸೂರು ಕ್ಲಸ್ಟರ್ ಮುಖ್ಯಸ್ಥ ಜಿ.ಎನ್.ಸುದೀರ್ ಮತ್ತಿತರ ಪ್ರಮುಖರು ಹಾಗೂ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು. *ಕೊಡಗಿನಿಂದ 31 ಮಂದಿ ಭಾಗಿ* ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್‍ನ ಜಿಲ್ಲಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್,…

Read More

ವಿರಾಜಪೇಟೆ ಜು.5 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ) ವತಿಯಿಂದ ಕೃಷಿ ಕಾರ್ಯಕ್ರಮದಡಿಯಲ್ಲಿ ಮೂರ್ನಾಡು ಕಾರ್ಯಕ್ಷೇತ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ಮೂರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಪುಷ್ಪಲತಾ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ವಲಯ ಉಪ ಅರಣ್ಯ ಅಧಿಕಾರಿ ಭವ್ಯ, ಪರಿಸರ ಸಂರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಒಂದು ಗಿಡ ನಾಟಿ ಮಾಡುವುದರಿಂದ ನಾವು ನಮ್ಮ ಮುಂದಿನ ಪೀಳಿಗೆಗೆ ಉಡುಗೊರೆಯನ್ನು ನೀಡಿದಂತೆ ಹಾಗೂ ಇತ್ತೀಚಿನ ಸಂದರ್ಭದಲ್ಲಿ ಗುಡ್ಡ ಕುಸಿತ ಇತ್ಯಾದಿ ಹಾನಿಗಳನ್ನು ತಡೆಯುವುದಕ್ಕಾಗಿ ನಾವು ಮುಖ್ಯವಾಗಿ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಎಂದು ಕರೆ ನೀಡಿದರು. ಮೂರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಾನ್ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಚಿತ್ರಕಲೆ…

Read More

ಮಡಿಕೇರಿ ಜು.5 NEWS DESK :  ಮರಗೋಡುವಿನ ಹುಲಿತಾಳ ಗ್ರಾಮದಲ್ಲಿ  ವಿದ್ಯುತ್ ಅವಘಡದಿಂದ ಹೆಚ್.ಪಿ.ಪ್ರದೀಪ್ (32) ಸಾವನ್ನಪ್ಪಿದ್ದು, ಇಂದು ಮಡಿಕೇರಿ ಜಿಲ್ಲಾಸ್ಪತ್ರೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ  ಮಾಹಿತಿ ಪಡೆದರು. ನಂತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Read More

ಸುಂಟಿಕೊಪ್ಪ ಜು.5 NEWS DESK : ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮಳೆಯಾಗುತ್ತಿದ್ದು, ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆ ಮೇರೆ ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಪ್ರಾಕೃತಿಕ ವಿಕೋಪಗಳು ಸಂಭವಿಸಿದ್ದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ವಿವಿಧ ಗ್ರಾಮಗಳ ಮುಖಂಡರೊಂದಿಗೆ ಸಭೆ ನಡೆಸಲಾಯಿತು. ಗುಂಡುಗುಟ್ಟಿ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಸಭೆಯಲ್ಲಿ ಮಾತನಾಡಿದ ಡಿವೈಎಸ್ಪಿ ಚಂದ್ರಶೇಖರ್ ಅವರು ಜಿಲ್ಲೆಯಲ್ಲಿ ಅತೀವ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ವರದಿಯನುಸಾರ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚುಮಳೆಯಾದ ಹಿನ್ನಲೆ ಭೂಮಿಯು ಸಡಿಲತೆಗೊಳ್ಳುತ್ತದೆ ಇಂತಹ ಸಂದರ್ಭಗಳಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಂತಹ ಸಂದರ್ಭದಲ್ಲಿ ವಿಡಿಯೋ ಚಿತ್ರೀಕರಣ ಮಾಡದೆ ಅಪತ್ತು ಸಂಭವಿಸಿದ ಸ್ಥಳದ ತುರ್ತು ಮಾಹಿತಿಯನ್ನು ಸಂಬಂಧಿಸಿದ ಇಲಾಖೆ ರವಾನಿಸಿ ತಮ್ಮಿಂದಾಗುವ ಅಮೂಲ್ಯ ಜೀವಗಳ ರಕ್ಷಣಾ ಕಾರ್ಯಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಈ ವ್ಯಾಪ್ತಿಯಲ್ಲಿ ಹಲವಷ್ಟು ಕುಗ್ರಾಮಗಳನ್ನು ಹೊಂದಿರುವ ಕೇಂದ್ರವಾಗಿದೆ ಈ…

Read More

ಮಡಿಕೇರಿ ಜು.5 NEWS DESK : ಕುಶಾಲನಗರದಲ್ಲಿರುವ ವಿದ್ಯಾರ್ಥಿನಿಯರ ಬಿಸಿಎಂ ಹಾಸ್ಟೆಲ್ ನಲ್ಲಿ ಆಹಾರ ಸಾಮಾಗ್ರಿಗಳು ಕಳ್ಳತನವಾಗುತ್ತಿದ್ದು, ಇಲ್ಲಿನ ಸಿಬ್ಬಂದಿಗಳಿಂದಲೇ ಈ ಕೃತ್ಯ ನಡೆದಿದೆ ಎಂದು ಸಾಮಾಜಿಕ ಹೋರಾಟಗಾರ ಬಿ.ಡಿ.ಅಣ್ಣಯ್ಯ ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುಶಾಲನಗರದ ಗಂಧದಕೋಟೆಯಲ್ಲಿ ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿನಿಯರಿಗಾಗಿ ಬಿಸಿಎಂ ವಸತಿ ನಿಲಯವಿದ್ದು, ಇಲ್ಲಿ ಸುಮಾರು 200 ವಿದ್ಯಾರ್ಥಿಗಳಿದ್ದಾರೆ. ವಸತಿ ನಿಲಯಕ್ಕೆ ಬಂದ ಆಹಾರ ಸಾಮಾಗ್ರಿಗಳನ್ನು ಕಳ್ಳತನ ಮಾಡಿ ನರ್ಸಿಂಗ್ ಹಾಸ್ಟೆಲ್ ವೊಂದರಲ್ಲಿ ಇಟ್ಟಿದ್ದ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದೆ ಎಂದರು. ಕಳ್ಳತನದ ಕುರಿತು ವಿದ್ಯಾರ್ಥಿನಿಯರು ನೀಡಿದ ಮಾಹಿತಿಯ ಆಧಾರದಲ್ಲಿ ತಾವು ಪೊಲೀಸರ ಸಹಕಾರದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದೆವು. ತಾಲ್ಲೂಕು ಬಿಸಿಎಂ ಅಧಿಕಾರಿಗೆ ಕರೆ ಮಾಡಿ ಪ್ರಕರಣದ ಕುರಿತು ಮಾಹಿತಿ ನೀಡಿ ಸ್ಥಳಕ್ಕೆ ಬರುವಂತೆ ಕೋರಿಕೊಂಡರೂ ಬಾರದೆ ನಿರ್ಲಕ್ಷ್ಯ ತೋರಿದ್ದಾರೆ. ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ಅವರಿಗೆ ದೂರು ನೀಡಿ ಸಂಪೂರ್ಣ ಮಾಹಿತಿಯನ್ನು ಒದಗಿಸಿದ್ದೇವೆ. ಮುಂದಿನ 1 ವಾರದಲ್ಲಿ ಘಟನೆಗೆ ಕಾರಣರಾದವರ ವಿರುದ್ಧ…

Read More

ಮಡಿಕೇರಿ ಜು.5 NEWS DESK : ರೋಟರಿ ಕ್ಲಬ್ ಮಡಿಕೇರಿ ಸಂಸ್ಥೆಯ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಿತು. ರೋಟರಿ ಕ್ಲಬ್ ಮಡಿಕೇರಿಯ ನೂತನ ಅಧ್ಯಕ್ಷರಾಗಿ ರೋಟರಿಯನ್ ಲಲಿತ ರಾಘವನ್ ಹಾಗೂ ಕಾರ್ಯದರ್ಶಿಯಾಗಿ ಬಿ.ಎಂ.ಸೋಮಣ್ಣ ಅವರು ಅಧಿಕಾರ ಸ್ವೀಕರಿಸಿದರು. ಪಿಡಿಜಿ ರೋಟರಿಯನ್ ಡಾ.ರವಿ ಅಪ್ಪಾಜಿ ಅವರು ಪದಗ್ರಹಣ ಅಧಿಕಾರಿಯಾಗಿ ರೋಟರಿಯನ್ ಸುದಯ್ ನಾಣಯ್ಯ ಅವರಿಂದ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ನೆರವೇರಿಸಿದರು. ನಂತರ ಮಾತನಾಡಿದ ಅವರು, ನೂತನ ಅಧ್ಯಕ್ಷರು ರೋಟರಿ ಮೌಲ್ಯಗಳನ್ನು ಅರಿತು ಸದಾ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಪಣತೊಡಬೇಕು ಮತ್ತು ಉತ್ತಮ ಕೆಲಸಗಳನ್ನು ಮಾಡಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಪಿಡಿಜಿ ರೋಟರಿಯನ್ ಎಂ.ಎಂ.ಚಂಗಪ್ಪ ಅವರು ರೋಟರಿಯಲ್ಲಿ ಗುರುತಿಸಿಕೊಂಡವರು ಸಮಾಜದೊಂದಿಗೆ ಬೆರೆತು ಜನರ ಕಷ್ಟಗಳಿಗೆ ಸ್ಪಂದಿಸಬೇಕು ಮತ್ತು ನೂತನ ಪದಾಧಿಕಾರಿಗಳು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸಿದರು. ರೋಟರಿ ಕ್ಲಬ್ ಮಡಿಕೇರಿಯ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿ…

Read More