ಲೇಖಕ: admin

ಮಡಿಕೇರಿ ಜೂ.6 NEWS DESK : ದ್ವಿತೀಯ ಪಿಯುಸಿ ಪರೀಕ್ಷೆ-3 ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-3 ನ್ನು ವ್ಯವಸ್ಥಿತವಾಗಿ ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚಿಸಿದರು. ಪರೀಕ್ಷೆ-2 ನಡೆಸಿದಂತೆ ಪರೀಕ್ಷೆ-3 ನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಮಾತನಾಡಿ ದ್ವಿತೀಯ ಪಿಯುಸಿ ಪರೀಕ್ಷೆ-3 ಜೂ.9 ರಿಂದ 20 ರವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ. ಪರೀಕ್ಷೆಯು ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ಇಲ್ಲಿ ನಡೆಯಲಿದ್ದು, ಒಟ್ಟು 605 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು. ಒಟ್ಟು ಕಾಲೇಜುಗಳ ಸಂಖ್ಯೆ 65, ಪರೀಕ್ಷೆಗೆ ಹಾಜರಾಗುವ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 605(ಎನ್‍ಸಿ, ಪ್ರೈವೇಟ್, ರಿಪೀಟರ್ಸ್ ಮತ್ತು ಇಂಪ್ರೂವೆಮೆಂಟ್), ಒಟ್ಟು ಪರೀಕ್ಷಾ…

Read More

ಮಡಿಕೇರಿ ಜೂ.6 NEWS DESK : ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪ್ರಕರಣಗಳು ಕಂಡು ಬರದಂತೆ ಗಮನಹರಿಸಬೇಕು. ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.  ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಗತಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.  ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು. ಇಂತಹ ಪ್ರಕರಣಗಳು ಕಂಡು ಬರದಂತೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಸಮಾಜ ಕಲ್ಯಾಣ, ಸಮಗ್ರ ಗಿರಿಜನ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ವಸತಿ ಶಾಲೆಗಳು ಸೇರಿದಂತೆ ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಆಹಾರ ಗುಣಮಟ್ಟವನ್ನು ಪ್ರತೀನಿತ್ಯ ಕಾಯ್ದುಕೊಳ್ಳಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಉತ್ತಮ ಬೆಡ್‍ಶೀಟ್ ಒದಗಿಸಬೇಕು ಎಂದರು. ಅಂಗನವಾಡಿ, ಶಾಲಾ ಹಾಗೂ ಕಾಲೇಜುಗಳ ಕಟ್ಟಡ…

Read More

ಮಡಿಕೇರಿ ಜೂ.6 NEWS DESK : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ 2025-2026ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲೆ ಎನ್.ಎಂ.ನಾಣಯ್ಯ ಮಾತನಾಡಿ, ಕಾಲೇಜಿನ ಕಾರ್ಯ ಚಟುವಟಿಕೆಗಳು ಹಾಗೂ ಶೈಕ್ಷಣಿಕ ಚಟುವಟಿಗಳ ಕುರಿತ ಮಾಹಿತಿ ನೀಡಿದರು. ಹದಿ ಹರೆಯದಲ್ಲಿ ದುಶ್ಚಟಗಳಿಗೆ ಬಲಿಯಾಗದಂತೆ ಸಲಹೆ ನೀಡಿದ ಅವರು, ಜೀವನದಲ್ಲಿ ಶಿಸ್ತನ್ನು ಮೈಗೂಡಿಸಿಕೊಂಡು ಉತ್ತಮ ಸಾಧನೆ ಮಾಡುವ ಮೂಲಕ  ಕಾಲೇಜಿಗೆ ಹಾಗೂ ಹೆತ್ತವರಿಗೆ ಉತ್ತಮ ಕೀರ್ತಿ ತರಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು, ಕಾಲೇಜಿನ ಉಪನ್ಯಾಸಕ ವೃಂದದವರು ಹಾಜರಿದ್ದರು. ವಿದ್ಯಾರ್ಥಿಗಳಾದ ಭೂಮಿಕಾ ಮತ್ತು ತಂಡದವರು ಪ್ರಾರ್ಥಿಸಿದರು, ಕನ್ನಡ ಉಪನ್ಯಾಸಕಿ ಎಂ.ಪಿ.ದಮಯಂತಿ ಸ್ವಾಗತಿಸಿದರು, ಇತಿಹಾಸ ಉಪನ್ಯಾಸಕಿ ಸಿ.ಪಿ.ಅನುಪಮ ವಂದಿಸಿದರು. ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Read More

ಬೆಂಗಳೂರು ಜೂ.6 NEWS DESK : ರಾಜ್ಯದಲ್ಲಿರುವ ತೃತೀಯ ಲಿಂಗಿಗಳ ಸಮಗ್ರ ಸಮೀಕ್ಷೆ ಆಗಬೇಕೆಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ತ್ರಿತಿಯಲಿಂಗಿಗಳ ಪ್ರತಿನಿಧಿ ಮಲ್ಲಿ  ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು, ತಮ್ಮ ಆಪ್ತ ಕಾರ್ಯದರ್ಶಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿರವರೊಂದಿಗೆ ಮಾತನಾಡಿ, ಒಂದು ವಾರದೊಳಗೆ ಸಮೀಕ್ಷೆಗೆ ಚಾಲನೆ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ವಕೀಲರಾದ ಲಕ್ಷ್ಯ ಕಾಳಪ್ಪ ಉಪಸ್ಥಿತರಿದ್ದರು.

Read More

ಮಡಿಕೇರಿ, ಜೂ.6 NEWS DESK : ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ವಿಜಯ ಲಕ್ಷ್ಮಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಸಾಹಿತಿ, ಲೇಖಕ ಡಾ.ಜೆ .ಸೋಮಣ್ಣ ಮತ್ತು ಹುಣಸೂರು ತಾಲ್ಲೂಕಿನ ನಾಗಪುರದ ಭಾರತೀಯ ಗಿರಿಜನ ಪುನರ್ವಸತಿ ಕೇಂದ್ರದ ಮುಖ್ಯಸ್ಥೆ ಪಿ.ಬಿ.ವೀಣಾ ಅವರಿಗೆ 2025 ನೇ ಸಾಲಿನ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಲಭಿಸಿದೆ. ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಬುಧವಾರ( ಜೂನ್ 4 ರಂದು ) ಮೈಸೂರಿನ ಕಲಾಮಂದಿರದಲ್ಲಿ ಕನ್ನಡ ಮತ್ತು.ಸಂಸ್ಕೃತಿ ಇಲಾಖೆ ಮೂಲಕ ಆಯೋಜಿಸಿದ್ದ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ .ಡಾ ಎಚ್ .ಸಿ.ಮಹಾದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸಾಧನೆಗಾಗಿ ಡಾ ಜೆ.ಸೋಮಣ್ಣ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.  ಕೊಡಗಿನ ಡಾ ಜೆ.ಸೋಮಣ್ಣ ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ ಹಾಗೂ ಹುಣಸೂರಿನ ಗಿರಿಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದ ದಿವಂಗತ ಎಂ.ಬಿ.ಪ್ರಭು ಅವರ ಪತ್ನಿ…

Read More

ಸುಂಟಿಕೊಪ್ಪ, ಜೂ.4 NEWS DESK : ಕೃಷಿ ಇಲಾಖೆ ಸೋಮವಾರಪೇಟೆ ಬಿಜೋಪಚಾರ ಸುರಕ್ಷಿತ ಕೀಟನಾಶಕ ಹಾಗೂ ಭಾರತ ಸರ್ಕಾರ ಗೋಣಿಕೊಪ್ಪ ಸಂಯುಕ್ತಾಶ್ರಯದಲ್ಲಿ ಕೃಷಿ, ತೋಟಗಾರಿಕೆ, ಅರಣ್ಯ ಪಶುಪಾಲನೆ ಹಾಗೂ ಮೀನುಗಾರಿಕೆಯ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಹಾಗೂ ಮುಂಗಾರು ಹಂಗಾಮ ಅಭಿಯಾನ ನಡೆಯಿತು. ಗುಡುಗುಟ್ಟಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ಬೋಸ್ ಮಂದಣ್ಣ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಉದ್ಘಾಟಿಸಿ ಮಾತನಾಡಿ, ಕೃಷಿ ಚಟುವಟಿಕೆ ಗೆ ಪೂರಕವಾದ ಮಳೆಯಾಗಿದು,್ದ ಮುಂದಿನ ದಿನಗಳಲ್ಲಿ ಉತ್ತಮ ಫಸಲು ಬರುವ ನಿರೀಕ್ಷೆಯಿದೆ. ವಿಜ್ಞಾನಿಗಳು ಶಿಪಾರಸ್ಸು ಮಾಡುವ ಕೀಟನಾಶಕಗಳನ್ನು ಬಳಸಿ ಭೂಮಿಯ ಫಲವತ್ತತೆಯನ್ನು ಕಾಯ್ದುಕೊಂಡು ಕೃಷಿ ಅಭಿವೃದ್ಧಿಯಲ್ಲಿ ಮುಂದಾಗಬೇಕೆಂದು ಬೋಸ್ ಮಂದಣ್ಣ ಸಲಹೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಪಂಚಾಯಿತಿ ಸದಸ್ಯ ಪ್ರಸಾದ್ ಕುಟ್ಡಪ್ಪ ವಹಿಸಿ ಮಾತನಾಡಿದರು. ವಿವಿಧ ಇಲಾಖೆಯ ಸಂಶೋದನಾ ವಿಜ್ಞಾನಿಗಳಾದ ಡಾ.ಪ್ರಭಾಕರ, ಡಾ.ಮೋಹನ್ ಕುಮಾರ, ಡಾ.ರಮೇಶ್ ಕೃಷ್ಣ, ಡಾ.ರಾಜೇಂದ್ರ, ಡಾ.ಬಿಶ್ವವರ್ಜನ್, ಡಾ.ಕೃಷ್ಣಕುಮಾರ್, ಡಾ.ಶಿವಕುಮಾರ್, ಡಾ.ಸಲೀಂ ಹಾಗೂ ಚಂದ್ರಶೇಖರ್…

Read More

ಮಡಿಕೇರಿ ಜೂ.6 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜೂ.21 ರಂದು ‘ಒಂದು ಭೂಮಿ ಒಂದು ಆರೋಗ್ಯಕ್ಕೆ ಯೋಗ’ ಎನ್ನುವ ಘೋಷ ವಾಕ್ಯದೊಂದಿಗೆ ನಗರದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆಯೆಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ ಜಿ. ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸೂಚಿತ ದಿನದಂದು ನಗರದ ಕೆಳಗಿನ ಗೌಡ ಸಮಾಜದಲ್ಲಿ ಬೆಳಗ್ಗೆ 6.45 ಗಂಟೆಗೆ ಯೋಗ ದಿನಾಚರಣೆಯ ಉದ್ಘಾಟನೆ. ಬೆಳಗ್ಗೆ 7 ರಿಂದ 8 ರವರೆಗೆ ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆ ನಡೆಯಲಿದೆಯೆಂದು ತಿಳಿಸಿದರು. ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಜೂ.20 ರಂದು ಸಂಜೆ 5 ಗಂಟೆಗೆ ನಗರದ ಸರ್ಕಾರಿ ಬಸ್ ಡಿಪೋ ಬಳಿಯಲ್ಲಿರುವ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಯೋಗಾಸನಗಳ ಪೂರ್ವಾಭ್ಯಾಸವನ್ನು ಆಯೋಜಿಸಲಾಗಿದೆಯೆಂದು ತಿಳಿಸಿದರು. ಯೋಗಾಭ್ಯಾಸದೊಂದಿಗೆ ಸ್ವಚ್ಛತೆ :: ಇದೇ ಜೂ.10 ರಂದು ಯೋಗ ದಿನಾಚರಣೆಯ ಭಾಗವಾಗಿ ಬೆಳಗ್ಗೆ 8.30 ರಿಂದ ನಗರದ ಗಾಂಧಿ ಮೈದಾನದಿಂದ,…

Read More

ಮಡಿಕೇರಿ ಜೂ.6 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘ ಮತ್ತು ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತಾಶ್ರಯದಲ್ಲಿ ಜೂ.9 ರಂದು ಸಾಹಿತ್ಯ ಪ್ರಪಂಚದ ಅಂತರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಭಾಸ್ತಿ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಗರದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಹೋಟೆಲ್ ರೆಡ್‍ಬ್ರಿಕ್ಸ್‍ನ ‘ಸತ್ಕಾರ’ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಕಾರ್ಯಕ್ರಮವನ್ನು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಪದ್ಮಾ ಶೇಖರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದಾರೆಂದರು. ಸಾಹಿತಿಗಳು ಮತ್ತು ಬೂಕರ್ ಪ್ರಶಸ್ತಿ ಪುರಸ್ಕøತರಾದ ದೀಪಾ ಭಾಸ್ತಿ ಅವರನ್ನು ಕವಿ ಮತ್ತು ಅನುವಾದಕಿ ಹಾಸನದ ಜ.ನಾ.ತೇಜಶ್ರೀ ಸನ್ಮಾನಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಕಸಾಪ ಮಾಜಿ ಅಧ್ಯಕ್ಷ…

Read More

ಸೋಮವಾರಪೇಟೆ ಜೂ.6 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮತ್ತು ಸ್ಥಳೀಯ ಸಂಸ್ಥೆ, ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಆರ್.ಎಂ.ಸಿ ಆವರಣ, ಪಟ್ಟಣ ಪಂಚಾಯಿತಿ, ಹನಪಿ ಜಾಮೀಯ ಮಸೀದಿ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು, ಸಂತಜೋಸೆಫರ ವಿದ್ಯಾಸಂಸ್ಥೆ, ಸಾಂದೀಪನಿ, ಎಸ್‍ಜೆಎಂ ಹಾಗೂ ಜಿಎಂಪಿ ಶಾಲೆಯ ವಿದ್ಯಾರ್ಥಿಗಳು ಗಿಡನೆಟ್ಟರು. ನಂತರ ಚನ್ನಬಸಪ್ಪ ಸಭಾಂಗಣದಲ್ಲಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪರಿಸರ ರಕ್ಷಣೆಯ ಕುರಿತು ಚಿತ್ರಕಲೆ ಮತ್ತು ಪ್ರೌಢಶಾಲಾ ಪ್ರಬಂಧ ಸ್ಪರ್ಧೆ ನಡೆಯಿತು. ಚಿತ್ರಕಲೆ ಸ್ಪರ್ಧೆಯಲ್ಲಿ ಸಾಂದೀಪನಿ ಶಾಲೆಯ ಪುರಸ್ಕೃತ ಜಿ.ಶೆಟ್ಟಿ ಪ್ರಥಮ, ಎಸ್‍ಜೆಎಂ ಶಾಲೆಯ ಹೆಚ್.ಆರ್.ಮೋಕ್ಷಿತ ದ್ವಿತೀಯ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ರಿಹಾನ ಪಾತೀಮ ತೃತೀಯ ಸ್ಥಾನ ಗಳಿಸಿದರು. ಪ್ರಬಂಧ ಸ್ಪರ್ಧೆಯಲ್ಲಿ ಸಂತ ಜೋಸೆಫರ ಶಾಲೆಯ ಮಹಮ್ಮದ್ ಫಾಝ್ ಪ್ರಥಮ, ಸಾಂದೀಪನಿ ಶಾಲೆಯ ಕೆ.ಎಸ್.ಹರ್ಷಿಣಿ ದ್ವಿತೀಯ, ಜ್ಞಾನವಿಕಾಸ ಶಾಲೆಯ ಎನ್. ಶ್ರಾವ್ಯ…

Read More

ಮಡಿಕೇರಿ ಜೂ.6 NEWS DESK : ಕರ್ನಾಟಕ ರಾಜ್ಯ ಸರಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ  ರಂಗಪ್ರಯೋಗ ಶಾಲೆಯ 2025-26 ನೇ ಸಾಲಿನ ರಂಗಶಿಕ್ಷಣಕ್ಕೆ (ಡಿಪ್ಲೋಮಾ ಇನ್  ಡ್ರಾಮಾ ಆಟ್ರ್ಸ್) ಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ  ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು. ಪದಿವೀಧರರಿಗೆ ಆದ್ಯತೆ ಕೊಡಲಾಗಿದೆ. ರಂಗಭೂಮಿಯಲ್ಲಿ ಆಸಕ್ತಿಯಿದ್ದು ಸ್ವಲ್ಪ ಮಟ್ಟಿನ ಅನುಭವ  ಇರಬೇಕಾದದ್ದು ಅಗತ್ಯ ವಿದ್ಯಾರ್ಥಿ/  ವಿದ್ಯಾರ್ಥಿನಿಯರಿಗೆ ಉಚಿತ, ವಸತಿ  ಸೌಲಭ್ಯವಿದೆ. ಕರ್ನಾಟಕ ಹಾಗೂ ಭಾತರದ ರಂಗತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥ ಭಂಡಾರ ಹಾಗೂ  ದೃಶ್ಯ, ದೃವ್ಯ ಪರಿಕರಗಳ ಅನುಕೂಲತೆ ಇದೆ.  ರಂಗ ಶಾಲೆಯ ವಿದ್ಯಾರ್ಥಿಗಳಿಗೆ   ಭಾರತೀಯ  ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ ಆಹಾರ್ಯ, ಶಿಕ್ಷಣದಲ್ಲಿ ಅರ್ಜಿಗಾಗಿ ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ. ಅರ್ಜಿಗಾಗಿ  ರಂಗಶಾಲೆಯ ವೆಬ್‍ಸೈಟ್ www.theatreschoolsanehalli.org  ನಲ್ಲಿ ಪ್ರವೇಶ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಜೂನ್, 25  ರೊಳಗಾಗಿ ಅರ್ಜಿಯನ್ನು ಭರ್ತಿ ಮಾಡಿ…

Read More