ಲೇಖಕ: admin

ಮಡಿಕೇರಿ ಜೂ.6 NEWS DESK : ಪರಿಸರ ದಿನವು ನಮ್ಮ ಪರಿಸರ ಕಾಳಜಿಗಳನ್ನು ಮರು ವಿಮರ್ಶೆಗೆ ಒಡ್ಡಿಕೊಳ್ಳುವ ದಿನ. ಎಲ್ಲೆಲ್ಲೂ ಗಿಡ ನೆಟ್ಟು ಬೆಳೆಸುವ ಹಸಿರು ಕಾರ್ಯಕ್ರಮಗಳು ನಡೆಯುತ್ತವೆ. ಈ ದಿನವು ಗಿಡ ನೆಡುವುದು, ಗಿಡ ವಿತರಣೆ, ಪರಿಸರ ಜಾಥಾ, ವಿವಿಧ ಸ್ಪರ್ಧೆಗಳು, ಘೋಷವಾಕ್ಯ ಬರವಣಿಗೆ ಮತ್ತು ಸಭಾ ಕಾರ್ಯಕ್ರಮಗಳಿಗೆ ಸೀಮಿತವಾಗಿರಬಾರದು. ಪರಿಸರ ಕಾರ್ಯಕ್ರಮ ವಿಶ್ವ ಪರಿಸರ ದಿನದ ಈ ವರ್ಷದ ಘೋಷವಾಕ್ಯ(ಥೀಮ್)ವು ‘ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟಿ ‘ (ಬೀಟ್ ದಿ ಪ್ಲಾಸ್ಟಿಕ್ ) ಅದನ್ನು ಕೊನೆಗಾಣಿಸುವತ್ತ ಗಮನಹರಿಸುತ್ತದೆ.  ಈ ಬಾರಿ ಕೋರಿಯಾ ಗಣರಾಜ್ಯವು  ವಿಶ್ವ ಪರಿಸರ ದಿನದ ಜಾಗತಿಕ ಆಚರಣೆಯ ಆತಿಥ್ಯವನ್ನು ವಹಿಸಿಕೊಂಡಿದೆ. ಈ ವರ್ಷವಿಡೀ ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳ ಕುರಿತು ಹೆಚ್ಚು ಬೆಳಕು ಚೆಲ್ಲುವ ಮೂಲಕ ನಾವು ಪಾಸ್ಟಿಕ್ ಗೆ ಪರ್ಯಾಯವಾಗಿ ಪರಿಸರ ಸ್ನೇಹಿ ವಸ್ತುಗಳ ಬಗ್ಗೆ ಹೆಚ್ಚಿನ ಗಮನಹರಿಸುವ ಕೆಲ¸ವಾಗಬೇಕಿದೆ. ಪರಿಸರ ದಿನವು ನಮ್ಮ ಪರಿಸರ ಕಾಳಜಿಗಳನ್ನು ಮರು ವಿಮರ್ಶೆಗೆ ಒಡ್ಡಿಕೊಳ್ಳುವ ದಿನ. ಎಲ್ಲೆಲ್ಲೂ ಗಿಡ…

Read More

ಮಡಿಕೇರಿ ಜೂ.6 NEWS DESK : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜೂ.11 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರತದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಗಿಎ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಜೂ.6 NEWS DESK : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತದಿಂದ 2025-26 ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ, 03 ಕೊನೆಯ ದಿನವಾಗಿದೆ. (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ). ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವವರು ಉಪ್ಪಾರ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ಅಭ್ಯರ್ಥಿಯ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನದ ಮಿತಿ ರೂ.3.50 ಲಕ್ಷಗಳು. ಸ್ವಾವಲಂಬಿ ಸಾರಥಿ…

Read More

ನಾಪೋಕ್ಲು ಜೂ.6 NEWS DESK : ಪ್ರಕೃತಿಯ ನಾಶ ಮನುಕುಲದ ವಿನಾಶ ಎಂದು ಸಂಸ್ಥೆಯ ಪ್ರಭಾರ ಪ್ರಾಂಶುಪಾಲ ಕೆ.ಆರ್.ರಮೇಶ್ ಹೇಳಿದರು. ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಈ ಸುಂದರ ಜೀವವೈವಿಧ್ಯವನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ. ಪ್ರಕೃತಿಯ ಸಮತೋಲನದಿಂದ ಪಶು, ಪ್ರಾಣಿ, ಪಕ್ಷಿಗಳು ಮತ್ತು ಮಾನವನು ಆರೋಗ್ಯವಾದ ಜೀವನವನ್ನು ಸಾಧಿಸಲು ಸಾಧ್ಯ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಕೆ.ಆರ್.ರಮೇಶ್ ಪರಿಸರದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಸಂಭ್ರಮಿಸಿದರು. ಈ ಸಂದರ್ಭ ಶಿಕ್ಷಕರಾದ ಎಸ್.ಪಿ.ಪರಮೇಶ್, ಎಂ.ಎ.ಅಯ್ಯಪ್ಪ, ಹರೀಶ್, ಹೇಮಾವತಿ, ಶೃಂಗ ಮತ್ತು ರೋಹಿತ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ. 

Read More

ರಿಯಾಸಿ ಜೂ.6 NEWS DESK : ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸಿಎಂ ಒಮರ್ ಅಬ್ದುಲ್ಲಾ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಉಪಸ್ಥಿತರಿದ್ದರು. ಚೆನಾಬ್ ಸೇತುವೆಯ ನಂತರ, ಜಮ್ಮು- ಕಾಶ್ಮೀರದಲ್ಲಿ ಅಂಜಿ ನದಿಯ ಮೇಲೆ ನಿರ್ಮಿಸಲಾದ ದೇಶದ ಮೊದಲ ಕೇಬಲ್-ಸ್ಟೇಡ್ ರೈಲು ಸೇತುವೆ ಇದಾಗಿದೆ. ಈ ಕಾರ್ಯಕ್ರಮ ನಂತರ ಪ್ರಧಾನಿಯವರು ಕತ್ರಾದಿಂದ ಶ್ರೀನಗರಕ್ಕೆ ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (USBRL) ದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ ತೋರಲಿದ್ದಾರೆ.

Read More

ಬೆಂಗಳೂರು ಜೂ.6 NEWS DESK :  ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡಂತಹ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು. ಬಡವರು, ತುಳಿತಕ್ಕೊಳಗಾದವರು, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗ ನಡೆದ  ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಡಿ ದೇವರಾಜ ಅರಸು ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು. ದಿವಂಗತ ದೇವರಾಜ ಅರಸು ಅವರ ಪುಣ್ಯತಿಥಿಯಂದು ಸರ್ಕಾರ ಹಾಗೂ ಏಳು ಕೋಟಿ ಕನ್ನಡಿಗರ ವತಿಯಿಂದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿ ಸ್ಮರಿಸಿದ್ದೇನೆ. ಅರಸು ಅವರಿಂದಾಗಿ ಬಡತನ ನಿರ್ಮೂಲನೆ ಕಾರ್ಯಕ್ರಮ ಕರ್ನಾಟಕದಲ್ಲಿ ಅಚ್ಚುಕಟ್ಟಾಗಿ ನೆರವೇರಿತು. ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು. ಹಾವನೂರು ಆಯೋಗವನ್ನು ರಚನೆ ಮಾಡಿ, ಅದರ ವರದಿ ಪಡೆದು ಜಾರಿ ಮಾಡಿ ಉದ್ಯೋಗದಲ್ಲಿ ಮೀಸಲಾತಿ…

Read More

ಬೆಂಗಳೂರು ಜೂ.6 NEWS DESK : ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಕಾವೇರಿ ನಿವಾಸದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಮುಖ್ಯಮಂತ್ರಿಗಳು ಶುಭಾಶಯ ಕೋರಿದರು.

Read More

ಮಡಿಕೇರಿ ಜೂ.6 NEWS DESK : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಭೇಟಿ ಬಚಾವೋ- ಭೇಟಿ ಪಡಾವೋ ಯೋಜನೆ ಅಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಗಿಡ ನೀಡುವ ಕಾರ್ಯಕ್ರಮ ನಡೆಯಿತು. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಿಂಭಾಗದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಹಸಿರು ಬೆಳೆಸಿ-ಹಸಿರು ಉಳಿಸಿ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಅಧಿಕಾರಿಗಳು ಮತ್ತು ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಮಹಿಳಾ ಸಬಲೀಕರಣದ ಸಿಬ್ಬಂದಿಗಳು ಹಾಜರಿದ್ದರು.

Read More

ಸೋಮವಾರಪೇಟೆ ಜೂ.6 NEWS DESK : ಗೌಡಳ್ಳಿ ಬಿಜಿಎಸ್ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪೂರ್ವ ಪ್ರಾಥಮಿಕ ತರಗತಿಯ ಪ್ರಾರಂಭೋತ್ಸವ ನಡೆಯಿತು. ಮಕ್ಕಳು ಬೊಂಬೆಗಳ ವೇಷ ಧರಿಸಿ ಸಂಭ್ರಮಿಸಿದರು. ಮುಖ್ಯ ಶಿಕ್ಷಕಿ ರತ್ನಮ್ಮ, ಎಲ್‍ಕೆಜಿ ಶಿಕ್ಷಕಿ ರೋಜ್ಲಿನ್ ತೆರೆಸಾ, ಯುಕೆಜಿ ಶಿಕ್ಷಕಿ ಸುನಿತ ಇದ್ದರು.

Read More

ಸೋಮವಾರಪೇಟೆ ಜೂ.6 NEWS DESK : ಹಾನಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾನಗಲ್ಲು ಶೆಟ್ಟಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಚೈಲ್ಡ್ ರೈಟ್ ಟ್ರಸ್ಟ್‍ನ ಜಿಲ್ಲಾ ಕ್ಷೇತ್ರ ಸಂಯೋಜಕಿ ಸುಮನ ಪ್ಲಾಸ್ಟಿಕ್ ಮರುಬಳಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಚಾಕಲೇಟ್ ಪ್ಲಾಸ್ಟಿಕ್ ನಿಂದ ಹಿಡಿದು ಎಲ್ಲಾ ತರಹದ ಪ್ಲಾಸ್ಟಿಕ್‍ಗಳನ್ನು ಒಂದು ಪ್ಲಾಸ್ಟಿಕ್ ಬಾಟಲಿಯಲ್ಲಿ ಹಾಕಿ ಇಡಬಹುದು. ನಂತರ ತುಂಬಿದ ಬಾಟಲಿಗಳನ್ನು ಸಂಗ್ರಹಿಸಿಟ್ಟು ಬಾಟಲಿಗಳನ್ನು ಮರುಬಳಕೆ ಮಾಡಬಹುದು ಎಂದು ಹೇಳಿದರು. ಪ್ಲಾಸ್ಟಿಕ್‍ಗಳನ್ನು ಬಾಟಲಿಯಲ್ಲಿ ತುಂಬಿಸುವ ವಿಧಾನವನ್ನು ಪ್ರಾತ್ಯಕ್ಷಿಕೆಯ ಮೂಲಕ ಮಕ್ಕಳಿಗೆ ತಿಳಿಸಿಕೊಟ್ಟರು. ನಮ್ಮ ಸುತ್ತಲಿನ ಪರಿಸರವನ್ನು ನಾವೆಲ್ಲರೂ ರಕ್ಷಿಸಲೇಬೇಕು. ಉತ್ತಮ ಪರಿಸರದಿಂದ ಮಾತ್ರ ಶುದ್ದ ಗಾಳಿ, ನೀರು ಸಿಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನಾವು ಪ್ರತಿಷ್ಠಾನದ ಸ್ಥಾಪಕ ಗೌತಮ್ ಕಿರಗಂದೂರು ಸಸಿಗಳನ್ನು ವಿತರಿಸಿದರು. ಮುಖ್ಯ ಶಿಕ್ಷಕ ಬಿ.ಎಂ.ಸತೀಶ್, ಸಹಶಿಕ್ಷಕ ಟಿ.ಹೆಚ್.ಸುಕುಮಾರ್ ಇದ್ದರು.

Read More