ಮಡಿಕೇರಿ ಜೂ.4 NEWS DESK : ಬಕ್ರೀದ್ ಹಬ್ಬದ ಆಚರಣೆಯ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರ ಅಧ್ಯಕ್ಷತೆಯಲ್ಲಿ ಶಾಂತಿಸಭೆ ನಡೆಸಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಕ್ರೀದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಎಸ್ಪಿ ಕರೆ ನೀಡಿದರು. ಸಂಭ್ರಮದ ಹಬ್ಬ ಆಚರಣೆಯ ಸಂದರ್ಭ ಯಾವುದೇ ಅಶಾಂತಿ ಸೃಷ್ಟಿಯಾಗದಂತೆ ನೋಡಿಕೊಳ್ಳಲು ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಮುಸ್ಲಿಂ ಮುಖಂಡರುಗಳು, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಡಿವೈಎಸ್ಪಿ ಸೂರಜ್ ಹಾಗೂ ವೃತ್ತ ನಿರೀಕ್ಷಕ ಐ.ಪಿ.ಮೇದಪ್ಪ ಹಾಜರಿದ್ದರು.
ಲೇಖಕ: admin
ನಾಪೋಕ್ಲು ಜೂ.12 NEWS DESK : ಮರಂದೋಡ ಗ್ರಾಮದ ಕೇಕುಮಾನಿ ಶ್ರೀ ಭಗವತಿ ದೇವಸ್ಥಾನದ ಭದ್ರಕಾಳಿ, ವಿಷ್ಣುಮೂರ್ತಿಯ ದೊಡ್ಡ ಪಟ್ಟಣಿ ಉತ್ಸವವು ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತು. ಉತ್ಸವದ ಅಂಗವಾಗಿ ಊರಿನ 13 ಕುಟುಂಬದ ದೊಡ್ಡ ಮನೆಯಿಂದ ಕಲಿಯಪಾತ್ರೆ ಇಳಿಯುವುದು ಬಳಿಕ ಎತ್ತು ಪೋರಾಟದ ಮೂಲಕ ದೇವಸ್ಥಾನಕ್ಕೆ ಆಗಮಿಸಿ ನಂತರ ಬಾಳೋ ಪಾಟ್, ಬೊಳಕಾಟ್ ನಡೆಯಿತು. ಮುಂಜಾನೆ ಸಾರ್ಥವು ಅಯ್ಯಪ್ಪ, ಅಜ್ಜಪ್ಪ ದೇವರ ಕೋಲಾಟ ನಡೆದು ಬಳಿಕ ಭದ್ರಕಾಳಿ ಹಾಗೂ ಪಡಮಾಳಿ ದೇವರ ಕೋಲ ತಿರುಮುಡಿ ಶ್ರೀ ಭಗವತಿ ದೇವಸ್ಥಾನದವರೆಗೆ ತೆರಳಿ ಮೂಲ ಸ್ಥಾನಕ್ಕೆ ಹಿಂತುರುಗಿತು. ಬಳಿಕ ಭಕ್ತಾದಿಗಳು ಹರಕೆ ಕಾಣಿಕೆ ಒಪ್ಪಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಆಡಳಿತ ಮಂಡಳಿಯವರು, ತಕ್ಕ ಮುಖ್ಯಸ್ಥರು ಹಾಗೂ ವಿವಿಧ ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಜೂ.4 NEWS DESK : ಕನ್ನಡದ ಖ್ಯಾತ ಕವಿ, ಸಾಹಿತಿ ಹೆಚ್.ಎಸ್.ವಿ ಎಂದೇ ಮನೆಮಾತಾಗಿದ್ದ ತೂಗು ಮಂಚದ ಕವಿ ಹೆಚ್.ಎಸ್.ವೆಂಕಟೇಶಮೂರ್ತಿ ಅವರಿಗೆ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಚೇರಂಬಾಣೆ ಗೌಡ ಸಮಾಜದಲ್ಲಿ ನಡೆದ ಒಕ್ಕೂಟದ ಮಾಸಿಕ ಸಭೆಯಲ್ಲಿ ಹೆಚ್.ಎಸ್.ವೆಂಕಟೇಶಮೂರ್ತಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿಸ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಒಕ್ಕೂಟದ ವತಿಯಿಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಅಗಲಿದ ಅಮೂಲ್ಯ ಚೇತನಗಳ ಪರಿಚಯ ಸಾಧನೆ ಗಳನ್ನು ಮೆಲುಕು ಹಾಕಿದಂತಾಗುತ್ತದೆ ಹಾಗೂ ಅವರ ಬದುಕು ಬರಹಗಳಿಗೆ ಗೌರವ ನೀಡಿದಂತಾಗುತ್ತದೆ ಎಂದು ತುಳಸಿ ಮೋಹನ್ ಹೇಳಿದರು. ಒಕ್ಕೂಟದ ಉಪಾಧ್ಯಕ್ಷರಾದ ಹೊಸೊಕ್ಲು ಲತಾ ಮೊಣ್ಣಪ್ಪ, ಕೂರನ ಸುಶೀಲ ಅಪ್ಪಾಜಿ ಸೇರಿದಂತೆ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿದ್ದರು. ಹೆಚ್.ಎಸ್.ವಿ ಅವರ ಭಾವಗೀತೆಗಳನ್ನು ಕೇಕಡ ಪೂಜಾ ನಾಗೇಂದ್ರ, ಬೈಮನ ಜ್ಯೋತಿ ತಿಮ್ಮಯ್ಯ ಹಾಡಿದರು. ಕೂಡಕಂಡಿ ಸೋನಿ ಸುದೀಪ್ ಕವನ ವಾಚಿಸಿದರು. ವರದಿ : ದುಗ್ಗಳ ಸದಾನಂದ.
ವಿರಾಜಪೇಟೆ ಜೂ.4 NEWS DESK : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಎ.ಎಸ್ ಮುಸ್ತಫ ತಿಳಿಸಿದ್ದಾರೆ. ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಮ್ಮ ತಂದೆ ದಿವಂಗತ ಎ.ಕೆ.ಸುಬ್ಬಯ್ಯ ಹಾಗೂ ತಾಯಿ ದಿವಂಗತ ಎ.ಎಸ್.ಪೊನ್ನಮ್ಮ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಆರ್.ಸವಿತಾ ರೈ ತಮ್ಮ ತಂದೆ ದಿವಂಗತ ಬಿ.ಎಸ್.ರಂಗನಾಥ ರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕೃಷಿ ವರದಿ, ಸಿದ್ದಾಪುರದ ಸಮಾಜ ಸೇವಕರಾದ ಕೆ.ಯು.ಅಬ್ದುಲ್ ಮಜೀದ್ ಅವರು ತಮ್ಮ ತಂದೆ ದಿವಂಗತ ಉಸ್ಮಾನ್ ಹಾಜಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾದ ಕೋಲತಂಡ ರಘು ಮಾಚಯ್ಯ ಅವರು ತಮ್ಮ ತಂದೆ ದಿವಂಗತ ಕೋಲತಂಡ ಉತ್ತಪ್ಪ ಹಾಗೂ ತಾಯಿ ಕಾಮವ್ವ ಅವರ ಹೆಸರಿನಲ್ಲಿ ಸ್ಥಾಪಿಸಿದ ಅತ್ಯುತ್ತಮ ಅರಣ್ಯ…
ವಿರಾಜಪೇಟೆ ಜೂ.4 NEWS DESK : ತಿತಿಮತಿ ಸರ್ಕಾರಿ ಪಿಯು ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಸೇವೆಸಲ್ಲಿಸಿತ್ತಿದ್ದ ಚಾರ್ಲ್ಸ್ ಡಿಸೋಜಾ ಸೇವೆಯಿಂದ ನಿವೃತರಾಗಿದ್ದಾರೆ. 1987 ರಲ್ಲಿ ವೃತ್ತಿ ಜೀವನವನ್ನು ಆರಂಭಿಸಿದ ಚಾರ್ಲ್ಸ್ ಡಿಸೋಜಾ 2005 ರ ವರೆಗೂ ವಿವಿಧ ಶಾಲೆಗಳಲ್ಲಿ ಪ್ರೌಢ ಶಾಲಾ ಶಿಕ್ಷಕರಾಗಿ, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶಾಲಾ ತನಿಖಾಧಿಕಾರಿಗಳಾಗಿ, ನಂತರ ವಿರಾಜಪೇಟೆ ತಾಲ್ಲೂಕು ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಬಡ್ತಿಯ ಮೂಲಕ ವಿರಾಜಪೇಟೆ ಸ.ಪ.ಪೂ. ಕಾಲೇಜಿಗೆ ಆಂಗ್ಲ ಭಾಷಾ ಉಪನ್ಯಾಸಕರಾಗಿ 2005 ರಲ್ಲಿ ಪಾದಾರ್ಪಣೆ ಮಾಡಿದ ಅವರು 13 ವರ್ಷಗಳ ಕಾಲ ಅಲ್ಲಿಯೇ ಸೇವೆ ಸಲ್ಲಿಸಿದ್ದಾರೆ. ಆ ಸಂದರ್ಭದಲ್ಲಿ ಕಾಲೇಜಿನ ಎನ್.ಎಸ್.ಎಸ್ ಘಟಕದ ಅಧಿಕಾರಿಗಳಾಗಿಯೂ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ನಂತರ ಸುಳ್ಯದ ಐವರ್ನಾಡು ಪಿಯು ಕಾಲೇಜು, ತಿತಿಮತಿಯ ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರಾಗಿ, ಪ್ರಭಾರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದರು. 38 ವರ್ಷಗಳ ವೃತ್ತಿ ಸೇವಾ ಅನುಭವವನ್ನು ಹೊಂದಿದ್ದ ಅವರು ಮಡಿಕೇರಿಯ ಆಕಾಶವಾಣಿಯಲ್ಲಿ 60ಕ್ಕೂ ಅಧಿಕ…
ಮೈಸೂರು, ಜೂ.4 NEWS DESK : ಕರ್ನಾಟಕದ ಸುಧಾರಣೆಯ ಹರಿಕಾರರು, ಶಿಕ್ಷಣ ತಜ್ಞರು, ಸಂಗೀತ ಆರಾಧಕರು, ಅನ್ನದಾತರು, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮಜಯಂತಿಯಂದು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂಸದರು ಜೂನ್ 4 ರಂದು ಕೃಷ್ಣರಾಜ ಒಡೆಯರ್ ಜಯಂತಿಯಂದು ನಡೆಯಲಿರುವ ಕಾರ್ಯಕ್ರಮಗಳ ವಿವರವನ್ನು ಹಂಚಿಕೊಂಡರು. ನಮ್ಮ ಮೈಸೂರು ಎಂದಿಗೂ ಸ್ವಚ್ಛತೆಗೆ ಹೆಸರುವಾಸಿಯಾಗಿದೆ. ಅಂದಿನ ಕಾಲದಲ್ಲಿ ರಾಜರ್ಷಿ ನಲವಾಡಿ ಕೃಷ್ಣರಾಜ ಒಡೆಯರ್ ಅವರು ಇದಕ್ಕಾಗಿ ಹೆಚ್ಚು ಆದ್ಯತೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಮ್ಮ ನಗರವನ್ನು ಸ್ವಚ್ಛವಾಗಿರುವಂತೆ ನೋಡಿಕೊಳ್ಳುತ್ತಿರುವ 3500 ಪೌರ ಕಾರ್ಮಿಕರಿಗೆ ದಿನಸಿ ಸಾಮಗ್ರಿಗಳನ್ನು ಮಹರಾಜ ಕಾಲೇಜು ಮೈದಾನದಲ್ಲಿ 12.15 ಗಂಟೆಯಿಂದ ವಿತರಿಸಲಾಗುವುದು ಎಂದು ಸಂಸದರು ತಿಳಿಸಿದರು. ಇದೇ ಯಾವುದೇ ಪಕ್ಷದ ಕಾರ್ಯಕ್ರಮವಲ್ಲ, ನಾಲ್ವಡಿ ಅಭಿಮಾನಿಗಳು ಆಯೋಜಿಸಿರುವ ಕಾರ್ಯಕ್ರಮವಾಗಿದೆ. ಇದು ಪಕ್ಷಾತೀತ ಮತ್ತು ಜಾತ್ಯತೀತವಾಗಿರುವ ಹಾಗೂ ಅಪ್ಪಟ ಜನೋಪಯೋಗಿ ಕಾರ್ಯಕ್ರಮವಾಗಿದೆ ಎಂದು ಯದುವೀರ್ ತಿಳಿಸಿದರು. ಪೌರ…
ಬೆಂಗಳೂರು ಜೂ.4 NEWS DESK : ಅಹಮದಾಬಾದ್ನಲ್ಲಿ ನಡೆದ ಐಪಿಎಲ್ ಫೈನಲ್ನಲ್ಲಿ ಪಂಜಾಬ್ ವಿರುದ್ಧ ಆರ್ಸಿಬಿ ಭರ್ಜರಿ ಜಯ ಗಳಿಸಿದ್ದು, ಈ ಮೂಲಕ ಅಭಿಮಾನಿಗಳ 18 ವರ್ಷಗಳ ಕನಸು ಕೊನೆಗೂ ನನಸಾಗಿದೆ. ಇದರ ಬೆನ್ನಲ್ಲೇ ಆರ್ಸಿಬಿ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿ ಹಲವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಗದಗ ಜಿಲ್ಲಾ ಪ್ರವಾಸ ಮುಗಿಸಿ ಬರುತ್ತಿದ್ದಂತೆ ಬೆಂಗಳೂರು ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಟ್ಯಾಬ್ ನಲ್ಲೇ ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಿದರು.ಆರ್ ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, Rrrrrrrrr…. Cccccccc…. Bbbbbbbbb….ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್ಸಿಬಿ ತಂಡಕ್ಕೆ ಅಭಿನಂದನೆಗಳು ಎಂದು ಹೇಳಿದ್ದಾರೆ. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್ಸಿಬಿಯ ಹುಡುಗರು ನನಸಾಗಿಸಿದ್ದಾರೆ.ಆರ್ಸಿಬಿಯ ಈ ವಿಜಯದಲ್ಲಿ ವಿರಾಟ್…
ಮಡಿಕೇರಿ ಜೂ.3 NEWS DESK : ತಾಲ್ಲೂಕಿನ ಸಾಮಾಜಿಕ ಅರಣ್ಯ ವಲಯದ ಹೊದ್ದೂರು ವಾಟೆಕಾಡು ಅರಣ್ಯ ಇಲಾಖೆಯ ಸಸ್ಯಕ್ಷೇತ್ರದಲ್ಲಿ 2025-26 ನೇ ಸಾಲಿನ ಮಳೆಗಾಲದಲ್ಲಿ ನೆಡಲು ವಿವಿಧ ಹಣ್ಣಿನ, ಔಷಧೀಯ ಹಾಗೂ ಕಾಡು ಜಾತಿಯ ಸಸಿ ಬೆಳೆಸಲಾಗಿದೆ. ಮಹಾಗನಿ, ಸಿಲ್ವರ್, ನೇರಳೆ, ಹಲಸು, ನಿಂಬೆ, ನೆಲ್ಲಿ, ಸಂಪಿಗೆ, ಕಾಡು ಬಾದಾಮಿ, ಲಾವಂಚ, ಮಾವು, ಹೆಬ್ಬಲಸು, ಸೀಬೆ, ತೇಗ, ಹೊನ್ನೆ, ಬಟರ್ ಪ್ರೂಟ್, ಬೀಟೆ, ಹಿಪ್ಪೆ, ಸಿಮಾರೂಬಾ, ಮುಂತಾದ ಸಸಿಗಳು ಲಭ್ಯವಿದ್ದು, ರೈತ ಫಲಾನುಭವಿಗಳಿಗೆ ಸರ್ಕಾರದ ಹೊಸ ಪರಿಷ್ಕೃತ ಆದೇಶದಂತೆ ರೂ.6 ಪ್ರತಿ ಸಸಿಗೆ ರಿಯಾಯಿತಿ ದರದಲ್ಲಿ ಪಡೆದುಕೊಳ್ಳಬಹುದು. ರೈತರು ತಮ್ಮ ಆಧಾರ್ ಪ್ರತಿ, ರಾಷ್ಟ್ರೀಕೃತ ಬ್ಯಾಂಕ್ ಪಾಸ್ಬುಕ್ ಪ್ರತಿ, ತಮ್ಮ ಜಮೀನಿನ ಆರ್ಟಿಸಿ ಪ್ರತಿಯನ್ನು ನೀಡಿ ಸಸಿಗಳನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಮಡಿಕೇರಿ ಉಪ ವಲಯ ಅರಣ್ಯಾಧಿಕಾರಿ 9482915684, 9164698938, ಗಸ್ತು ಅರಣ್ಯ ಪಾಲಕರು-9632995904, 9980434942 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಸಾಮಾಜಿಕ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ. ಸೋಮವಾರಪೇಟೆ…
ಮಡಿಕೇರಿ ಜೂ.3 NEWS DESK : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2025-26ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುತ್ತದೆ. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ, ಓರಿಯಂಟಲ್ ಜನರಲ್ ಇನ್ಶುರೆನ್ಸ್ ಕಂಪನಿ ವಿಮಾ…
ಮಡಿಕೇರಿ ಜೂ.3 NEWS DESK : ಬಾಳೆಲೆ ಹೋಬಳಿ ನಿಟ್ಟೂರು ಗ್ರಾಮದಲ್ಲಿ ಮಳೆಯಿಂದ ಮನೆಗೆ ಹಾನಿಯಾಗಿದೆ. ಗ್ರಾಮದ ಬೋಜಪ್ಪ ಎಂಬುವವರ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಹಾನಿಯಾಗಿದ್ದು, ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.






