ನಾಪೋಕ್ಲು ಜು.31 NEWS DESK : ಗೌರಿ-ಗಣೇಶೋತ್ಸವವನ್ನು ನಾಪೋಕ್ಲು ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಸೌಹಾರ್ದತೆಯಿಂದ ಆಚರಿಸುವಂತೆ ಠಾಣಾಧಿಕಾರಿ ಪಿ.ಜಿ.ರಾಘವೇಂದ್ರ ಸೂಚಿಸಿದರು. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಗೌರಿ ಗಣೇಶೋತ್ಸವ ಸಮಿತಿಗಳ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ಗಣೇಶ ಇಡುವ ಸ್ಥಳಗಳಲ್ಲಿ ಸಿ.ಸಿ ಕ್ಯಾಮೆರಾ ಅಳವಡಿಸುವುದು, ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಕಾವಲುಗಾರನಾಗಿ ಒಬ್ಬರನ್ನು ನೇಮಿಸಿಕೊಂಡು ರಾತ್ರಿಯಲ್ಲಿ ತಂಗಲು ವ್ಯವಸ್ಥೆ ಮಾಡಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವುದು, ಕೆಇಬಿ ಇಲಾಖೆ, ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದುಕೊಳ್ಳುವುದು ಅಗತ್ಯ ಎಂದರು. ಅತಿಯಾದ ಧ್ವನಿವರ್ಧಕ ಬಳಸಿ ಶಬ್ದ ಮಾಲಿನ್ಯ ಮಾಡದಂತೆ ನೋಡಿಕೊಳ್ಳುವುದು, ಗೌರಿ ಗಣೇಶ ವಿಸರ್ಜನೆ ಮೆರವಣಿಗೆ ಸಮಯ ರಾತ್ರಿ 10 ಗಂಟೆ ಒಳಗಡೆ ಕಡ್ಡಾಯವಾಗಿ ಮುಗಿಸುವುದು, ಗೌರಿ ಗಣೇಶ ವಿಸರ್ಜನೆ ವೇಳೆ ಈಜುಗಾರರು ವಿಸರ್ಜನಾ ಸ್ಥಳದಲ್ಲಿ ಇರುವಂತೆ ನೋಡಿಕೊಳ್ಳುವುದು ಮುಂತಾದ ಮುನ್ನೆಚ್ಚರಿಕೆ ಕ್ರಮಗಳನ್ನು ನಿರ್ವಹಿಸುವಂತೆ ಸಲಹೆ ನೀಡಿದರು. ಈ ಸಂದರ್ಭ ವಿವಿಧ ಗೌರಿ ಗಣೇಶೋತ್ಸವ ಸಮಿತಿ…
ಲೇಖಕ: admin
ಮಡಿಕೇರಿ ಜು.31 NEWS DESK : ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯ ಪ್ರಶಸ್ತಿಗೆ ಭಾಜನರಾದ ಡಾ ಕೆ.ಬಿ. ಸೂರ್ಯಕುಮಾರ್ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ವೈದ್ಯ ಬರಹಗಾರರ ಸಂಘದ ವತಿಯಿಂದ ಕರ್ನಾಟಕ ರಾಜ್ಯದ ವೈದ್ಯರ ಶ್ರೇಷ್ಠ ಪುಸ್ತಕಗಳಿಗೆ ನೀಡುವ ವಾರ್ಷಿಕ ಪ್ರಶಸ್ತಿಗೆ ಮಡಿಕೇರಿಯ ಖ್ಯಾತ ವೈದ್ಯರಾದ ಡಾ. ಕೆ.ಬಿ.ಸೂರ್ಯಕುಮಾರ್ ಅವರು ಬರೆದು, ಹರಿವು ಪ್ರಕಾಶನದವರು ಪ್ರಕಟಿಸಿರುವ ‘ಮಂಗಳಿ’ – ತೃತೀಯ ಲಿಂಗಿಗಳ ಜೀವನ ಆಧಾರಿತ ಒಂದು ಕಥೆಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದ ಹಿನ್ನಲೆಯಲ್ಲಿ ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ನ ಪ್ರಮುಖರು ಹಾಗೂ ಪದಾಧಿಕಾರಿಗಳು ನಗರದಲ್ಲಿರುವ ಡಾ. ಸೂರ್ಯಕುಮಾರ್ ಅವರ ಕ್ಲಿನಿಕ್ ನಲ್ಲಿ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಮಾತನಾಡಿದ ಕೊಡಗು ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಕೊಡಗಿನಲ್ಲಿ ಹುಟ್ಟಿ, ಬೆಳೆದ ಡಾ. ಕೆ.ಬಿ.ಸೂರ್ಯಕುಮಾರ್ ವೃತ್ತಿಯಲ್ಲಿ ವೈದ್ಯರಾದರೂ ಪ್ರವೃತ್ತಿಯಲ್ಲಿ ಬರಹಗಾರರು. ವಿಧಿ ವಿಜ್ಞಾನ ವಿಭಾಗದಲ್ಲಿ…
ಮಡಿಕೇರಿ NEWS DESK ಜು.31 : ನಿರಂತರ ಮಳೆಯಿಂದ ಮಡಿಕೇರಿ- ಸಂಪಾಜೆ ಹೆದ್ದಾರಿಯ ಬೃಹತ್ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ತಡೆಗೋಡೆ ಕೆಳಭಾಗದ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ 2018 ರಲ್ಲಿ ಸಂಭವಿಸಿದ ಜಲಸ್ಫೋಟ ಮತ್ತು ಭೂಕುಸಿತದಲ್ಲಿ ಹಲವು ಪ್ರದೇಶಗಳು ಅಪಾಯಕ್ಕೆ ಸಿಲುಕಿದ್ದವು. ಮಡಿಕೇರಿ ನಗರದ ಸಮೀಪ ಮಂಗಳೂರಿಗೆ ತೆರಳುವ ಹೆದ್ದಾರಿ ಕೂಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಪತ್ರಿವರ್ಷ ಭೂಕುಸಿತ ಉಂಟಾಗುವ ಅಪಾಯವಿದ್ದ ಕಾರಣ ಸರಕಾರ ಬೃಹತ್ ತಡೆಗೋಡೆಯನ್ನು ನಿರ್ಮಿಸಿತ್ತು. ಆದರೆ ಕಳೆದ ಒಂದು ತಿಂಗಳಿನಿಂದ ಮಡಿಕೇರಿ ತಾಲ್ಲೂಕಿನಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿರುವುದರಿಂದ ಮಂಗಳೂರು ರಸ್ತೆಯ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇಂದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಸುರಕ್ಷತೆಯ ದೃಷ್ಟಿಯಿಂದ ತಡೆಗೋಡೆ ಕೆಳಭಾಗದ ನಿವಾಸಿಗಳನ್ನು ರೆಡ್ ಕ್ರಾಸ್ ಸಂಸ್ಥೆಯ ಭವನಕ್ಕೆ ಸ್ಥಳಾಂತರಿಸಿದ್ದಾರೆ. ರೆಡ್ ಕ್ರಾಸ್ ಭವನದಲ್ಲಿ ಆಶ್ರಯ ಪಡೆದಿರುವ ನಿವಾಸಿಗಳನ್ನು ಕಂದಾಯ ಇಲಾಖೆ ಹಾಗೂ ನಗರಸಭೆಯ ಅಧಿಕಾರಿಗಳು ಭೇಟಿ ಮಾಡಿ ಧೈರ್ಯ ತುಂಬಿದರು. ಊಟ, ಉಪಹಾರ ಸೇರಿದಂತೆ ಮೂಲಭೂತ…
ಮಡಿಕೇರಿ ಜು.31 NEWS DESK : ಮಡಿಕೇರಿ-ಮಂಗಳೂರು ರಸ್ತೆಗೆ ನಿರ್ಮಿಸಲಾಗಿದ್ದ ಬೃಹತ್ ತಡೆಗೋಡೆಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪರಿಶೀಲಿಸಿದರು. 2018ರಲ್ಲಿ ಉಂಟಾದ ಪ್ರಾಕೃತಿಕ ವಿಕೋಪದ ಸಂದರ್ಭ ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಭೂ ಕುಸಿತ ಉಂಟಾದ ಹಿನ್ನೆಲೆ ರಸ್ತೆ ಬದಿಗೆ ಬೃಹತ್ ಕಾಂಕ್ರೀಟ್ ತಡೆಗೋಡೆ ನಿರ್ಮಿಸಲಾಗಿತ್ತು. ಇದೀಗ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಡಿಕೇರಿ ಜು.31 NEWS DESK : ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಶಾಲಾ ಶಿಕ್ಷಣ ಇಲಾಖೆ ದೈಹಿಕ ಶಿಕ್ಷಣ ಅಧಿಕಾರಿ ಗಾಯತ್ರಿ ಅವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಮುಖರು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಅನುದಾನಿತ ಶಾಲಾ ಕಾಲೇಜು ನೌಕರರ ಸಂಘದ ಅಧ್ಯಕ್ಷ ಪಡಿಞರಂಡ ಪ್ರಭುಕುಮಾರ್, ಗಾಯತ್ರಿಯವರು ದೈಹಿಕ ಶಿಕ್ಷಣ ಶಿಕ್ಷಕರಾಗಿ ವೃತ್ತಿಗೆ ಸೇರಿ ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಕ್ರೀಡಾರಂಗದಲ್ಲಿ ಮಾರ್ಗದರ್ಶನ ನೀಡಿ ನಂತರ ಮುಖ್ಯಶಿಕ್ಷಕಿಯಾಗಿ ವಿರಾಜಪೇಟೆ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾಗಿ ನಂತರ ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾಗಿ ವೃತ್ತಿ ಜೀವನದಲ್ಲಿ ಯವುದೇ ಕಪ್ಪು ಚುಕ್ಕೆ ಇಲ್ಲದೆ ನಿವೃತ್ತರಾಗುತ್ತಿರುವುದು ಇವರು ಶೖಕ್ಷಣಿಕ ಕ್ಷೇತ್ರಕ್ಕೆ ನೀಡಿರುವ ಬಹು ದೊಡ್ಡ ಕೊಡುಗೆ ಎಂದು ಅಭಿಪ್ರಾಯ ವ್ಯಕ್ತಿಪಡಿಸಿದರು. ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರವೀಣ್, ಸಂಚಾಲಕರಾದ…
ಮಡಿಕೇರಿ ಜು.31 NEWS DESK : ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರು ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಯೂತ್ ಪಂಚಾಯತ್ ಸಂಘಟನೆಯ ವತಿಯಿಂದ ಉಚಿತವಾಗಿ ಕೊಡೆಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯರಾದ ಕೆ.ಎಸ್.ಸಣ್ಣಸ್ವಾಮಿ, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ವಿವಿಧ ಸಂಘ ಸಂಸ್ಥೆಗಳು ಉಚಿತವಾಗಿ ಅನೇಕ ಸವಲತ್ತುಗಳನ್ನು ನೀಡುತ್ತಿವೆ, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಸುತ್ತಮುತ್ತಲಿನ ಶಾಲೆಗಳಿಗೆ ಉಚಿತವಾಗಿ ಸ್ವಚ್ಚತಾ ಪರಿಕರಗಳು ಮತ್ತಿತರ ಸವಲತ್ತುಗಳನ್ನು ನೀಡುತ್ತಿರುವ ಯೂತ್ ಪಂಚಾಯತ್ ಸಂಘಟನೆಯ ಕಾರ್ಯವೈಕರಿಯನ್ನು ಶ್ಲಾಘಿಸಿದರು. ಸಂಘಟನೆ ಕಾರ್ಯದರ್ಶಿಗಳಾದ ಎಂ.ಎಸ್.ರಂಜಿತ್, ಕಿಶೋರ್ ಪೂಜಾರಿ ಮತ್ತು ಬಿಪಿನ್ ಸುಮಾರು 84 ವಿದ್ಯಾರ್ಥಿಗಳಿಗೆ ಕೊಡೆಗಳನ್ನು ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ಎನ್.ರವಿಕುಮಾರ್ ವಹಿಸಿದ್ದರು. ಶಾಲಾ ಶಿಕ್ಷಕಿಯರಾದ ಯಶುಮತಿ, ರುಕ್ಮಿಣಿ, ಗೀತ ಮತ್ತು ದೈಹಿಕ ಶಿಕ್ಷಕರಾದ ಚಂದ್ರಶೇಖರ್, ಪತ್ರಕರ್ತರಾದ ನವೀನ್ ಚಿನ್ನಪ್ಪ ಉಪಸ್ಥಿತರಿದ್ದರು.
ಕರ್ಕಾಳ ಜು.31 NEWS DESK : ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಾಮರ್ಸ್ ಫೆಸ್ಟ್ ಪ್ರಯುಕ್ತ ನಡೆಸಲ್ಪಟ್ಟ ಎಕನಾವಾಂಝ ಇಂಟರ್ ಕಾಲೇಜುಗಳ ವಿವಿಧ ಸ್ಪರ್ಧಾವಳಿಗಳಲ್ಲಿ ಕರ್ಕಾಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆಯುವುದರ ಮೂಲಕ ಚಾಂಪಿಯನ್ ಶಿಪ್ ನೊಂದಿಗೆ, ನಗದು ಪುರಸ್ಕಾರವನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಆದ್ಯ ಪಡ್ರೆ, ಚಿರಾಯು, ಸುಜೀತ್, ಶ್ರೇಯಸ್, ಮಂಗಿಲಲ್, ಅನ್ವಿತ್, ಕಿಶನ್, ಚಿನ್ಮಯ್, ಸೃಷ್ಟಿ, ಅರುಷಿ, ಸೋನಿಯಾ, ಸಂಜನಾ, ಪ್ರೇರಣಾ, ಹರ್ಷಿತ, ಅನಿಷಾ,ವೃದ್ಧಿ, ದ್ಯುತಿ, ಪೂರ್ವಿ ವಿವಿಧ ಸ್ಪರ್ಧೆ ಯಲ್ಲಿ ಭಾಗವಹಿಸಿ ಕಾಲೇಜಿಗೆ ಸಮಗ್ರ ಪ್ರಶಸ್ತಿಯನ್ನು ತಂದು ಕಾಲೇಜಿನ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಕುಶಾಲನಗರ ಜು.31 NEWS DESK : ಸಾಮಾಜಿಕ ಕಳಕಳಿಯೊಂದಿಗೆ ಪ್ರಾಮಾಣಿಕ ಸೇವಾ ಮನೋಭಾವದ ಮೂಲಕ ಪತ್ರಕರ್ತರು ವಸ್ತುನಿಷ್ಠ ವರದಿ ಮಾಡಿದಲ್ಲಿ ಮಾತ್ರ ಸಮಾಜ ಸುಧಾರಣೆ ಕಾಣಲು ಸಾಧ್ಯವಾಗಲಿದೆ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್, ಸಂಗಮ ಟಿ.ವಿ., ವಂಶಿ ನ್ಯೂಸ್ ಹಾಗೂರಾಷ್ಟ್ರೀಯ ಅಪರಾದ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ಬೆಂಗಳೂರು ಇವರ ಸಹಯೋಗದೊಂದಿಗೆ ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ನೀಡಲಾಗುವ ಕಾವೇರಿ ರತ್ನ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ದೇಶದಲ್ಲಿ ನಾವೆಲ್ಲರೂ ಸಂವಿಧಾನವನ್ನು ಪಾಲಿಸುವ ಮೂಲಕ ಸಮಾಜವನ್ನು ಸದೃಢಗೊಳಿಸಬೇಕು. ಇಂದಿನ ಸಮಾಜದ ಪ್ರಗತಿಗೆ ಪತ್ರಿಕಾ ರಂಗದ ಪಾತ್ರ ಮಹತ್ವದ್ದಾಗಿದೆ. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗದ ಜೊತೆಗೆ ಪತ್ರಿಕಾ ರಂಗವೂ ಗುರುತಿಸಿಕೊಂಡಿದೆ. ಯಾವುದೇ ಕ್ಷೇತ್ರದಲ್ಲಿ ಲೋಪ ದೋಷಗಳು ಕಂಡುಬಂದಲ್ಲಿ ಪತ್ರಿಕಾ ರಂಗ ತನ್ನ ವರದಿಯ ಮೂಲಕ ತಿದ್ದುವಂತ ಕೆಲಸ ಮಾಡುತ್ತದೆ. ವಂಶಿ…
ಮಡಿಕೇರಿ NEWS DESK ಜು.30 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅನಧಿಕೃತವಾಗಿ, ಕಾನೂನು ಬಾಹಿರವಾಗಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾಗಿರುವುದು ಬಹಳ ಆತಂಕಕಾರಿಯದ ಬೆಳವಣಿಗೆಯಾಗಿದೆ. ಸುಮಾರು ರೂ.390 ಕೋಟಿಗಿಂತಲೂ ಅಧಿಕ ಮೌಲ್ಯದ ಡ್ರಗ್ಸ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಪೊಲೀಸರು ಈ ಪ್ರಕರಣವನ್ನು ಪತ್ತೆ ಮಾಡಿರುವುದು ರಾಜ್ಯದ ಪೊಲೀಸ್ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ ಎಂದು ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಸಹ ಸಂಚಾಲಕ ಮಹೇಶ್ ಕಡಗದಾಳು, ಮೈಸೂರು ಮಹಾನಗರ ಜಿಲ್ಲಾ ಸಂಚಾಲಕ ರಂಗಸ್ವಾಮಿ ಹಾಗೂ ಮೈಸೂರು ಗ್ರಾಮಾಂತರ ಜಿಲ್ಲಾ ಸಂಚಾಲಕ ಅನೀಶ್ ಪಿರಿಯಾಪಟ್ಟಣ ಆರೋಪಿಸಿದ್ದಾರೆ. ಸ್ವತ: ರಾಜ್ಯದ ಗೃಹ ಸಚಿವರು ಈ ಬಗ್ಗೆ ಮಾತನಾಡಿದ್ದು ರಾಜ್ಯ ಪೋಲಿಸ್ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ದೊಡ್ಡ ಮಟ್ಟದ ತಯಾರಿಕಾ ಘಟಕ ಅದರಲ್ಲೂ ಕಾನೂನು ಬಾಹಿರವಾಗಿ ನಡೆಯುತ್ತಿರುವುದರ ಬಗ್ಗೆ ಪೋಲಿಸ್ ಇಲಾಖೆಯ ಗುಪ್ತಚರ ಇಲಾಖೆಯ ಗಮನಕ್ಕೆ ಬಾರದಿರುವುದು ವಿಪರ್ಯಾಸ. ರಾಜ್ಯದಲ್ಲಿ ವ್ಯಾಪಕವಾಗಿ ಡ್ರಗ್ಸ್ ಮಾರಾಟವಾಗುತ್ತಿರುವುದು ಆತಂಕವನ್ನು ಉಂಟು ಮಾಡುತ್ತಿದೆ. ಈಗಾಗಲೇ…
ಮೈಸೂರು NEWS DESK ಜು.30 : ಮೈಸೂರು ಇಡೀ ವಿಶ್ವದಲ್ಲಿ ಸಾಂಸ್ಕೃತಿಕ ನಗರಿ, ಶಿಕ್ಷಣಕ್ಕೆ, ಸಂಸ್ಕೃತಿಗೆ ಹೆಸರವಾಗಿಯಾಗಿರುವ ಊರು ಎಂದು ಜನಜನಿತವಾಗಿದೆ. ಆದರೆ ಇತ್ತೀಚಿಗೆ ಮಾದಕ ದ್ರವ್ಯ ವಸ್ತುಗಳು ವಶವಾಗಿರುವುದು ಈ ಖ್ಯಾತಿಗೆ ಅಪಖ್ಯಾತಿ ತಂದಿದೆ. ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯ ಮುಂದಾಗಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಗ್ರಹಿಸಿದ್ದಾರೆ. ಬುಧವಾರ ನಡೆದ ಲೋಕಸಭಾ ಕಲಾಪದಲ್ಲಿ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು, 390 ಕೋಟಿ ರೂಪಾಯಿ ಮೌಲ್ಯದ ಎಂಡಿಎಂ ಡಗ್ಸ್ ಪತ್ತೆಯಾಗಿರುವುದು ಆತಂಕಕಾರಿ ವಿಷಯವಾಗಿದೆ ಎಂದರು. ಸರ್ಕಾರಿ ಜಾಗದಲ್ಲಿಯೇ ಈ ಡ್ರಗ್ಸ್ ಕೇಂದ್ರವಿದ್ದು, ಕರ್ನಾಟಕ ಪೊಲೀಸರು ಯಾವುದೇ ರೀತಿಯಲ್ಲೂ ಕ್ರಮ ಕೈಗೊಂಡಿಲ್ಲ. ಅಚ್ಚರಿಯ ವಿಷಯ ಎಂದರೆ ಮಹಾರಾಷ್ಟ್ರ ಪೊಲೀಸರು ಮೈಸೂರಿಗೆ ಬಂದು ದಾಳಿ ನಡೆಸಿ ಈ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಿದ್ದಾರೆ ಎಂದು ಸಂಸದ ಯದುವೀರ್ ಸದನದ ಗಮನ ಸೆಳೆದರು. ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್ ಠಾಣೆಯ…






