ಕಾರ್ಕಾಳ ಜೂ 2 NEWS DESK : ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (ಎಇಇ) ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಎನ್.ಎಸ್ ಚೇತನ್ ಗೌಡ ಸಾಮಾನ್ಯ ವಿಭಾಗದಲ್ಲಿ 3420 (OBC ವರ್ಗದಲ್ಲಿ 639)ನೇ ರ್ಯಾಂಕ್, ತೇಜಸ್ ವಿ ನಾಯಕ್ ಸಾಮಾನ್ಯ ವಿಭಾಗದಲ್ಲಿ 7773(OBC ವರ್ಗದಲ್ಲಿ 1661)ನೇ ರ್ಯಾಂಕ್, ಕೆ.ಎನ್.ಸಾನಿಕ ಸಾಮಾನ್ಯ ವಿಭಾಗದಲ್ಲಿ 9701, ಎಂ.ಮೋಹಿತ್ ಸಾಮಾನ್ಯ ವಿಭಾಗದಲ್ಲಿ 17504 (ST ವರ್ಗದಲ್ಲಿ 143)ನೇ ರ್ಯಾಂಕ್, ಎಂ.ಮಂಜುನಾಥ್ ಸಾಮಾನ್ಯ ವಿಭಾಗದಲ್ಲಿ 20743ನೇ ರ್ಯಾಂಕ್, ಸಾಚಿ ಶಿವಕುಮಾರ್ ಕಡಿ 24728ನೇ ರ್ಯಾಂಕ್, ಶ್ರೀರಕ್ಷಾ 28163ನೇ ರ್ಯಾಂಕ್, ಯೋಗೇಶ್ ದೀಪಕ್ ನಾಯಕ್ ಸಾಮಾನ್ಯ ವಿಭಾಗದಲ್ಲಿ 31133 (OBC ವರ್ಗದಲ್ಲಿ 8989)ನೇ ರ್ಯಾಂಕ್, ಹೆಚ್.ಎಂ.ಹರ್ಷಿತ್ ರಾಜು, ಸಾಮಾನ್ಯ ವಿಭಾಗದಲ್ಲಿ 31140ನೇ ರ್ಯಾಂಕ್, ಸಿ.ಎಲ್.ಪ್ರೀತಿ ಸಾಮಾನ್ಯ ವಿಭಾಗದಲ್ಲಿ 31939ನೇ ರ್ಯಾಂಕ್, (OBC ವರ್ಗದಲ್ಲಿ…
ಲೇಖಕ: admin
ಮಡಿಕೇರಿ ಜೂ.2 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ವಸತಿ ಶಾಲೆಗಳ ನೌಕರರ ಸಂಘದ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಶಿಕ್ಷಕರು ಹಾಗೂ ನೌಕರರು ವಸತಿ ಶಾಲೆಯ ಖಾಯಂ ಶಿಕ್ಷಕರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ಸರ್ಕಾರ ತಕ್ಷಣ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ವಿ.ಅಲೋಕ್, ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧೀನದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ರಾಜ್ಯಾದ್ಯಂತ 833 ವಸತಿ ಶಾಲೆ-ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇಲ್ಲಿ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಬಡತನ ರೇಖೆಗಿಂತ ಕೆಳಗಿರುವ ಸುಮಾರು 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಶಿಕ್ಷಣವನ್ನು ಉಚಿತವಾಗಿ ಪಡೆಯುತ್ತಿದ್ದಾರೆ. ಇವರಿಗೆ ಗುಣಾತ್ಮಕ ಮತ್ತು ಮೌಲ್ಯಯುತ ಶಿಕ್ಷಣವನ್ನು ಇಲ್ಲಿನ ಶಿಕ್ಷಕರು ನೀಡುತ್ತಾ ಬರುತ್ತಿದ್ದಾರೆ ಎಂದು ಗಮನ ಸೆಳೆದರು. ಶಿಕ್ಷಕರು ಕೆಪಿಎಸ್ಸಿ ಪರೀಕ್ಷೆಯ ಮೂಲಕ ಆಯ್ಕೆಯಾಗಿದ್ದರೂ ನವೋದಯ ವಿದ್ಯಾಲಯ…
ಮಡಿಕೇರಿ ಜೂ.2 NEWS DESK : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಮೂವರು ಪತ್ರಕರ್ತರು ಭಾಜನರಾಗಿದ್ದಾರೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಿರಿಯ ಪತ್ರಕರ್ತ ಕೆ.ಬಿ.ಮಹಂತೇಶ್ ಅವರ ಸ್ಮರಣಾರ್ಥ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನೀಡುವ ಅತ್ಯುತ್ತಮ ಪರಿಣಾಮಕಾರಿ ವರದಿ ಪ್ರಶಸ್ತಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ರೂ.7 ಕೋಟಿ ವೆಚ್ಚದ ಜರ್ಮನ್ ತಂತ್ರಜ್ಞಾನದ ತಡೆಗೋಡೆ ಪೂರ್ಣಗೊಳ್ಳುವುದು ಎಂದು?” ಎಂಬ ವರದಿಗೆ ಹೆಚ್.ಜೆ.ರಾಕೇಶ್ ಪಡೆದುಕೊಂಡಿದ್ದಾರೆ. ಕೋವರ್ ಕೊಲ್ಲಿ ಇಂದ್ರೇಶ್ ಮತ್ತು ಕುಟುಂಬವರ್ಗ ತಮ್ಮ ತಂದೆ ಬಿ.ವಿ.ಚಂದ್ರಶೇಖರ್ ಹಾಗೂ ತಾಯಿ ಪುಷ್ಪಲತಾ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ಸೋರುತಿಹುದು ಮೀನಾಳ ಮನೆಯ ಮಾಳಿಗೆ” ಎಂಬ ವರದಿಗೆ ಕೆ.ಎಂ.ಇಸ್ಮಾಯಿಲ್ ಕಂಡಕರೆ ಪಡೆದುಕೊಂಡಿದ್ದಾರೆ. ಎಂ.ಎನ್.ಚಂದ್ರಮೋಹನ್ ಅವರು ತಮ್ಮ ತಂದೆ ಎಂ.ನಾರಾಯಣ ಹಾಗೂ ತಾಯಿ ಎನ್.ಪದ್ಮಾವತಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಪರಿಸರ ವರದಿ ಪ್ರಶಸ್ತಿಗೆ ಶಕ್ತಿ ಪತ್ರಿಕೆಯಲ್ಲಿ…
ಮಡಿಕೇರಿ ಜೂ.2 NEWS DESK : ಸಮಾಜದಲ್ಲಿನ ಜಾತಿ ವ್ಯವಸ್ಥೆ ದೂರ ಆಗಬೇಕಾಗಿದೆ, ವೈದ್ಯಕೀಯ ಕ್ಷೇತ್ರದಲ್ಲಿ ಜಾತಿ ಪದ್ಧತಿ ಇಲ್ಲದೆ ಇರುವುದು ತೃಪ್ತಿ ತಂದಿದೆ ಎಂದು ಸ್ವತ: ವೈದ್ಯರೂ ಆಗಿರುವ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಮಾನವ ಬಂಧುತ್ವ ವೇದಿಕೆ, ಮಹಿಳಾ ಬಂಧುತ್ವ ವೇದಿಕೆ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದೊಂದಿಗೆ ನಗರದ ಬಾಲಭವನದ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ `ಸಮಕಾಲೀನ ಬಿಕ್ಕಟ್ಟುಗಳು ಮತ್ತು ಸವಾಲುಗಳು’ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಆಸ್ಪತ್ರೆಗಳಲ್ಲಿ ವೈದ್ಯರುಗಳು ರೋಗಿಗಳ ಬಳಿ ಯಾವ ಕಾಯಿಲೆ ಇದೆ ಎಂದು ಕೇಳುತ್ತಾರೆಯೇ ಹೊರತು ನೀನು ಯಾವ ಜಾತಿಯವನು ಎಂದು ಕೇಳುವುದಿಲ್ಲ. ರೋಗಿ ಯಾವುದೇ ಜಾತಿಯವನಾಗಿರಲಿ ರೋಗದ ಬಗ್ಗೆ ಮಾತ್ರ ತಿಳಿದುಕೊಂಡು ಆತನಿಗೆ ಚಿಕಿತ್ಸೆ ನೀಡಲಾಗುತ್ತದೆ ಮತ್ತು ಜಾತಿ ಕೇಳದೆ ರೋಗಿಯ ದಾಖಲಾತಿ ಮಾಡಿಕೊಳ್ಳಲಾಗುತ್ತದೆ. ವೈದ್ಯಕೀಯ ಕ್ಷೇತ್ರದಲ್ಲಿ ಜಾತಿ ಪದ್ಧತಿ ಇಲ್ಲ, ಇದೇ ಮಾದರಿಯಲ್ಲಿ ಸಮಾಜದಲ್ಲೂ ಜಾತಿ ವ್ಯವಸ್ಥೆ ದೂರ ಆಗಬೇಕಾಗಿದೆ.…
ಮಡಿಕೇರಿ ಜೂ.2 NEWS DESK : ಜಿಲ್ಲಾ ಪೊಲೀಸ್ ಘಟಕದಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಜಿಲ್ಲಾ ಪೊಲೀಸ್ ಕಚೇರಿಯ ಸಿಬ್ಬಂದಿಗಳಾದ ಯು.ವಿ.ವೀಣಾ ಮತ್ತು ಪಿ.ಪಿ.ವೇದಾವತಿ ಅವರನ್ನು ಇಲಾಖಾ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.
ಮಡಿಕೇರಿ ಜೂ.2 NEWS DESK : ಜಿಲ್ಲೆಯಲ್ಲಿ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 3.89 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.81 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 742.06 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 335.10 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.08 ಮಿ.ಮೀ. ಕಳೆದ ವರ್ಷ ಇದೇ ದಿನ 0.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1074.13 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 464.70 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 756.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 268.50 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.32 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.75…
ಮಡಿಕೇರಿ ಜೂ.1 NEWS DESK : ಇತ್ತೀಚೆಗೆ ಸುರಿದ ಧಾರಾಕಾರ ಮಳೆ ಹಾಗೂ ಬಿರುಗಾಳಿಗೆ ಮರ ಬಿದ್ದು ಮೃತಪಟ್ಟ ಅಮ್ಮತ್ತಿ ಹೋಬಳಿಯ ಬಾಡಗ- ಬಾಣಂಗಾಲ ಗ್ರಾಮದ ಪಿ.ಸಿ.ವಿಷ್ಣು ಬೆಳ್ಯಪ್ಪ ಅವರ ಮನೆಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭಾನುವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈಗಾಗಲೇ ಸರ್ಕಾರದ ನಿರ್ದೇಶನದಂತೆ 5 ಲಕ್ಷ ರೂ ಪರಿಹಾರವನ್ನು ಆನ್ ಲೈನ್ ಮೂಲಕ ಪಾವತಿಸಲಾಗಿದೆ ಎಂದು ತಹಶಿಲ್ದಾರ್ ಅನಂತ ಶಂಕರ ಅವರು ತಿಳಿಸಿದರು. ಹಾಗೆಯೇ ಕಳೆದ ವಾರ ಸುರಿದ ಮಳೆ ಹಾಗೂ ಬಿರುಗಾಳಿಗೆ ಮರ ಬಿದ್ದು ಮೃತರಾದ ಆರ್ಜಿ ಗ್ರಾಮದ ಗೌರಿ ಅವರ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರದ ಆದೇಶ ಪತ್ರವನ್ನು ಭಾನುವಾರ ಶಾಸಕರು ತಮ್ಮ ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ತಹಶಿಲ್ದಾರ್ ಅನಂತ ಶಂಕರ ಇದ್ದರು.
ಮಡಿಕೇರಿ ಜೂ.2 NEWS DESK : ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಳೆ ಹಾನಿ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿದರು. ವಿರಾಜಪೇಟೆ ತಾಲ್ಲೂಕಿನ ಬೆಟೋಳಿ ಗ್ರಾಮ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ತಡೆಗೋಡೆ ಪರಿಶೀಲಿಸಿದರು. ಕಳೆದ ವಾರ ಸುರಿದ ಧಾರಾಕಾರ ಮಳೆಗೆ ಎತ್ತರದ ತಡೆಗೋಡೆ ಕುಸಿದಿದ್ದು, ಸಂಬಂಧಪಟ್ಟ ಎಂಜಿನಿಯರಿಂಗ್ ವಿಭಾಗದವರು ಸರಿಪಡಿಸುವಂತೆ ಶಾಸಕರು ನಿರ್ದೇಶನ ನೀಡಿದರು. ಈಗಾಗಲೇ ನಿರ್ಮಿಸಿರುವ ಸುತ್ತುಗೋಡೆ ಮತ್ತಷ್ಟು ಬೀಳುವ ಸಾಧ್ಯತೆ ಇದೆ. ಆದ್ದರಿಂದ ಈ ಬಗ್ಗೆ ಎಚ್ಚರ ವಹಿಸಬೇಕು. ಯಾರಿಗೂ ತೊಂದರೆ ಆಗದಂತೆ ಮುನ್ನೆಚ್ಚರ ವಹಿಸಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ಸೂಚಿಸಿದರು. ಬಳಿಕ ಆರ್ಜಿ ಗ್ರಾಮದ ಅನ್ವರುಲ್ ಉಧಾ ಶಾಲೆಯ ಬಳಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿದ ಶಾಸಕರು ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಕಾಮಗಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಎಂಜಿನಿಯರ್ ಗೆ ಸೂಚಿಸಿದರು. ನಂತರ…
ಮಡಿಕೇರಿ NEWS DESK ಜೂ.1 : ಸೋಮವಾರಪೇಟೆ ಸಮೀಪದ ನಳಂದ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪಳಿಯಂಡ ಸೂರ್ಯ ಗಣಪತಿ ಐಎಂಯುಸಿಇಟಿ ಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ 3641 ನೇ ರ್ಯಾಂಕ್ ಗಳಿಸುವ ಮೂಲಕ ಕಾಲೇಜಿಗೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ. ಇಂಡಿಯನ್ ಮೆರಿಟೈನ್ ವಿಶ್ವ ವಿದ್ಯಾಲಯದವರು ಕೇವಲ ಕೆಲವೇ ಕೆಲವು ಐಐಟಿ ಕಾಲೇಜುಗಳನ್ನು ಕೇಂದ್ರೀಕರಿಸಿ ನಡೆಸುವ ಐಎಂಯುಸಿಇಟಿ (IMUCET) ಪರೀಕ್ಷೆಯಲ್ಲಿ ಅತ್ಯುತ್ತಮ ರ್ಯಾಂಕ್ ಗಳಿಸಿರುವುದಕ್ಕೆ ಸೂರ್ಯಗಣಪತಿ ಅಪಾರ ಸಂತಸ ವ್ಯಕ್ತಪಡಿಸಿದ್ದಾರೆ. ಕೋಚಿಂಗ್ ಪಡೆಯದೇ ಕಾಲೇಜಿನಲ್ಲಿ ಕಲಿತ ಜ್ಞಾನಾರ್ಜನೆಯೊಂದಿಗೆ ಕೇವಲ 30 ದಿನಗಳ ಅವಧಿಯಲ್ಲಿ ಸಾಮಾನ್ಯ ಜ್ಞಾನ, ಇಂಗ್ಲೀಷ್ ಹಾಗೂ ಭೌತಶಾಸ್ತ್ರ ವಿಷಯಗಳ ಬಗ್ಗೆ ಹೆಚ್ಚು ಅಧ್ಯಯನ ನಡೆಸಿದ್ದರ ಫಲವಾಗಿ ನಾನು ಅಂದುಕೊಂಡ ರ್ಯಾಂಕ್ ಗಳಿಸಲು ಸಾಧ್ಯವಾಯಿತು ಎಂದು ಸಾಧಕ ಸೂರ್ಯ ಗಣಪತಿ ಹೇಳುತ್ತಾರೆ. ಇಡೀ ದೇಶದಲ್ಲಿ ಇರುವ ಕೆಲವೇ ಕೆಲವು ಕಾಲೇಜುಗಳ ಪೈಕಿ ಚೆನ್ನೈನಲ್ಲಿ ಇರುವ ಎಎಂಇಟಿ ವಿಶ್ವವಿದ್ಯಾಲಯದಲ್ಲಿ ಸೀಟು ಗಿಟ್ಟಿಸುವ ತವಕದಲ್ಲಿದ್ದಾರೆ. ನಾನು ಪ್ರೌಢ ಶಿಕ್ಷಣ ಹಂತದಿಂದಲೇ ಭಾರತೀಯ ಸೇನಾ ವಿಭಾಗಕ್ಕೆ ಸೇರುವ ಮೂಲಕ…






