ಲೇಖಕ: admin

ಮಡಿಕೇರಿ NEWS DESK ಜು.30 : ಸೋಮವಾರಪೇಟೆ ತಾಲ್ಲೂಕು ಮಾನವ ಬಂಧುತ್ವ ವೇದಿಕೆ ವತಿಯಿಂದ ಶನಿವಾರಸಂತೆ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬಸವ ಪಂಚಮಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್ ಅವರು ನಾಗರಪಂಚಮಿ ಎನ್ನುವುದು ಮೌಢ್ಯತೆಯ ಆಚರಣೆಯಾಗಿರುವುದರಿಂದ ಇದರ ಬದಲಾಗಿ ಬಸವ ಪಂಚಮಿ ಆಚರಿಸಲಾಗುತ್ತಿದೆ ಎಂದರು. ಹುತ್ತದ ಹಾವಿಗೆ ಹಾಲೆರೆಯುವ ಬದಲು ಬೆಳೆಯುವ ಮಕ್ಕಳಿಗೆ ಹಾಲನ್ನೆರೆದರೆ ಭವಿಷ್ಯದಲ್ಲಿ ವೈಚಾರಿಕತೆಯ ಪ್ರಜ್ಞೆಯನ್ನು ಮೂಡಿಸುವ ಜವಾಬ್ದಾರಿಯನ್ನು ಮಕ್ಕಳು ನಿಭಾಯಿಸುತ್ತಾರೆ. ಈ ರೀತಿಯ ಸಾಮಾಜಿಕ ಪರಿವರ್ತನೆಯ ಕೆಲಸಗಳನ್ನು ಮಾನವ ಬಂಧುತ್ವ ವೇದಿಕೆ ಜನಪ್ರತಿನಿಧಿ ಸತೀಶ್ ಜಾರಕಿಹೊಳಿ ಅವರ ಆಶಯದಂತೆ ಮಾಡುತ್ತಿದ್ದು, ಮೌಲ್ಯಯುತ ಆದರ್ಶಗಳನ್ನು ಮಕ್ಕಳಲ್ಲಿ ತುಂಬುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು. ದಲಿತ ಸಂಘರ್ಷ ಸಮಿತಿಯ ಒಕ್ಕೂಟದ ಜಿಲ್ಲಾಧ್ಯಕ್ಷ ಜೆ.ಆರ್.ಪಾಲಾಕ್ಷ ಅವರು ಮಾತನಾಡಿ ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆಯನ್ನು ಮೂಡಿಸುವ ಅಗತ್ಯವಿದೆ. ಈ ನಾಡಿನಲ್ಲಿ ನಡೆಯುವ ಎಲ್ಲಾ ಆಚರಣೆಗಳ ಮೂಲ ಉದ್ದೇಶಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಮೂಢನಂಬಿಕೆಗಳನ್ನು ತ್ಯಜಿಸಿ ವಿಜ್ಞಾನದಲ್ಲಿ ಆಸಕ್ತಿ ವಹಿಸಬೇಕು. ಶೈಕ್ಷಣಿಕ…

Read More

ಮಡಿಕೇರಿ ಜು.30 NEWS DESK : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್, 13 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ.  ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. :: ವ್ಯಾಜ್ಯ ಪೂರ್ವ ಪ್ರಕರಣಗಳು :: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ  ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು.  :: ನ್ಯಾಯಾಲಯದಲ್ಲಿ ಬಾಕಿ ಇರುವ…

Read More

ಮಡಿಕೇರಿ ಜು.29 NEWS DESK  :  ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ (DA-JGUA) ಮತ್ತು ಪ್ರಧಾನಮಂತ್ರಿ ಜನಜಾತೀಯ ಉನ್ನತ ಗ್ರಾಮ ಅಭಿಯಾನ (PM-JUGA) ದ ಅಧೀನದಲ್ಲಿ, ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ ದರ್ಶನ ಯೋಜನೆಯ ಉಪಯೋಜನೆಯಾಗಿ ಆದಿವಾಸಿ ಪ್ರದೇಶಗಳಲ್ಲಿ ಹೋಂಸ್ಟೇ ಅಭಿವೃದ್ಧಿಗೆ ಸಹಾಯಧನ ನೀಡಲಾಗುತ್ತಿದ್ದು, ಈ ಯೋಜನೆಯ ಉದ್ದೇಶ, ಪರಿಶಿಷ್ಟ ಪಂಗಡದ ಬುಡಕಟ್ಟು/ಅದಿವಾಸಿ ಸಮುದಾಯವಿರುವ ಗ್ರಾಮಗಳಲ್ಲಿ ಅತಿಥ್ಯಾಧಾರಿತ ಪ್ರವಾಸೋದ್ಯಮವನ್ನು ಉತ್ತೇಜಿಸುವುದು, ಸ್ಥಳೀಯ ಜನರಿಗೆ ಖಾಯಂ ಸ್ವಯಂ ಉದ್ಯೋಗ ಅವಕಾಶಗಳನ್ನು ಒದಗಿಸುವುದು ಮತ್ತು ಬುಡಕಟ್ಟು/ ಆದಿವಾಸಿ ಸಮುದಾಯದ ಸಂಸ್ಕøತಿ, ಪರಂಪರೆ ಮತ್ತು ನೈಸರ್ಗಿಕ ಸಂಪತ್ತನ್ನು ಪ್ರವಾಸಿಗರಿಗೆ ಪರಿಚಯಿಸುವುದಾಗಿದೆ. ಈ ಯೋಜನೆಯಡಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮವನ್ನು ಆಯ್ಕೆ ಮಾಡಲಾಗಿರುತ್ತದೆ. ಆಯ್ಕೆ ಮಾಡಿರುವ ಈ ಗ್ರಾಮದಲ್ಲಿ ಹೋಂಸ್ಟೇಗಳನ್ನು ಅಭಿವೃದ್ಧಿಪಡಿಸಲು ಸ್ಥಳೀಯ ಪರಿಶಿಷ್ಟ ಪಂಗಡದ ಬುಡಕಟ್ಟು/ ಆದಿವಾಸಿ ಸಮುದಾಯಗಳಿಗೆ ಪ್ರತಿ ಹೋಂ-ಸ್ಟೇ ನಿರ್ಮಾಣಕ್ಕೆ 5 ಲಕ್ಷದವರೆಗೆ ಸಹಾಯಧನ, ನವೀಕರಣಕ್ಕೆ 3 ಲಕ್ಷದವರೆಗೆ ಹಣಕಾಸು ಸಹಾಯಧನ ನೀಡಲಾಗುವುದು.…

Read More

ಮಡಿಕೇರಿ ಜು.30 NEWS DESK : ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಕೊಡಗು ಜಿಲ್ಲೆಯಲ್ಲಿ ಕಾಳುಮೆಣಸು ಹಾಗೂ ಅಡಿಕೆ ಬೆಳೆಗಳನ್ನು ಆಯ್ಕೆ ಮಾಡಲಾಗಿದೆ.  ಹವಾಮಾನ ಆಧಾರಿತ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ  ಇತ್ಯಾದಿ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ. 2025-26ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಕಾಳುಮೆಣಸು ಬೆಳೆಗೆ ಒಟ್ಟು  ರೂ.47000 ಹಾಗೂ ಅಡಿಕೆ ಬೆಳೆಗೆ  ರೂ.128000 ಆಗಿರುತ್ತದೆ. ವಿಮಾ ಕಂಪನಿಗೆ ಒಟ್ಟು ವಿಮಾ ಮೊತ್ತಕ್ಕೆ ರೈತರು ಕಾಳುಮೆಣಸು ಬೆಳೆಗೆ ಶೇ.5ರ ವಿಮಾ ಮೊತ್ತ ರೂ. 2350 ಹಾಗೂ ಅಡಿಕೆ ಬೆಳೆಗೆ ರೂ. 6400 ಪ್ರತಿ ಹೆಕ್ಟೇರ್ ಪಾವತಿಸಬೇಕಾಗಿರುತ್ತದೆ. ವಿಮಾ ನೋಂದಣಿಗೆ 2025 ರ ಆಗಸ್ಟ್, 11 ಕೊನೆಯ…

Read More

ಮಡಿಕೇರಿ ಜು.30 NEWS DESK : ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ಪ್ರಸಕ್ತ ಸಾಲಿನಿಂದ ಕಿಶೋರ ಕನಕ ಕಾವ್ಯ ಸ್ಪರ್ಧೆಯನ್ನು ಏರ್ಪಡಿಸುತ್ತಿದೆ. ಕನಕದಾಸರ ಕಾವ್ಯಗಳನ್ನು ಮಾತ್ರ ಗಮಕ ವಾಚನಕ್ಕೆ ಪರಿಗಣಿಸಲಾಗುವುದು. 10 ರಿಂದ 15 ವರ್ಷ ವಯೋಮಾನದ ಕಿರೋರ ಪ್ರತಿಭೆಗಳಿಗೆ ಮಾತ್ರ ಸ್ಪರ್ಧೆಯಲ್ಲಿ ಅವಕಾಶ, ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಪ್ರಥಮ ಬಹುಮಾನ ರೂ.20 ಸಾವಿರ, ದ್ವಿತೀಯ ಬಹುಮಾನ ರೂ. 15 ಸಾವಿರ, ತೃತೀಯ ಬಹುಮಾನ ರೂ.10 ಸಾವಿರ ಮತ್ತು ಇಬ್ಬರಿಗೆ ಸಮಾಧಾನಕರ ಬಹುಮಾನ (ತಲಾ ರೂ.5,000 ದಂತೆ)ಇರುತ್ತವೆ. ಪ್ರತ್ಯೇಕ ಸಮಾರಂಭವೊಂದರಲ್ಲಿ ಬಹುಮಾನ ವಿತರಿಸಲಾಗುವುದು. ಕಿಶೋರ ಪ್ರತಿಭೆ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧ್ಯಯನ ಕೇಂದ್ರದ ಜಾಲತಾಣ https://kanakadasaresearcheenter.karnataka.gov.in/ ರಲ್ಲಿ ಅರ್ಜಿಗಳನ್ನು ಡೌನಲೋಡ್ ಮಾಡಿಕೊಂಡು ಪೂರ್ಣ ಮಾಹಿತಿಯೊನ್ನೊಳಗೊಂಡ ಅರ್ಜಿಗಳನ್ನು ಭರ್ತಿಮಾಡಿ ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಗೆ ಅಥವಾ ಇ-ಮೇಲ್ kanakaresearchcentre@gmail.com ಮೂಲಕ 2025ರ ಸೆಪ್ಟೆಂಬರ್, 20ರೊಳಗೆ ತಲುಪುವಂತೆ…

Read More

ವಿರಾಜಪೇಟೆ ಜು.30 NEWS DESK : ಕೇರಳದ ತಿರುವನಂತಪುರದ ಗ್ರೀನ್ ಫೀಲ್ಡ್ ಸ್ಟೇಡಿಯಂನಲ್ಲಿ ನಡೆದ ಸ್ಟೀಫನ್ ಜಾಕೋಬ್ ಕೋಶಿ ಅಂತಾರಾಷ್ಟ್ರೀಯ ಮಟ್ಟದ ಮಾಸ್ಟರ್ಸ್ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಭಾರತೀಯ ಟೆಕ್ ಸಿಲ್ಲೋ ತಂಡವನ್ನು ಕೊಡಗಿನ ಹಿರಿಯ ಬಾಸ್ಕೆಟ್‌ಬಾಲ್ ಆಟಗಾರರು ಪ್ರತಿನಿಧಿಸಿ ಮೂರು ಚಿನ್ನದ ಪದಕಗಳನ್ನು ಪಡೆದು ಉನ್ನತ ಸಾಧನೆ ಮಾಡಿದ್ದಾರೆ. ಪಂದ್ಯಾವಳಿಯ 55 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಒಂದು ಚಿನ್ನದ ಪದಕ, 60 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಒಂದು ಚಿನ್ನದ ಪದಕ ಹಾಗೂ 65 ವರ್ಷ ಮೇಲ್ಪಟ್ಟ ಆಟಗಾರರ ವಿಭಾಗದಲ್ಲಿ ಒಂದು ಚಿನ್ನದ ಪದಕಗಳನ್ನು ಪಡೆಯುವುದರೊಂದಿಗೆ ಜಿಲ್ಲಾ ತಂಡವು ಸಾಧನೆಯನ್ನು ಮಾಡಿದೆ. ಪಂದ್ಯಾವಳಿಯಲ್ಲಿ ಕೊಡಗಿನ ಹಿರಿಯ ಅಂತಾರಾಷ್ಟ್ರೀಯ ಆಟಗಾರ್ತಿ ಡಾ. ಮಂಡೇಪಂಡ ಪುಷ್ಪ ಕುಟ್ಟಣ್ಣ, ಮತ್ತೋರ್ವ ಹಿರಿಯ ಅಂತಾರಾಷ್ಟ್ರೀಯ ಆಟಗಾರ್ತಿ ಕಾಡ್ಯಮಾಡ ದೇಚಮ್ಮ ಪೂಣಚ್ಚ, ಪಳಂಗಂಡ ವಾಣಿ ಚೆಂಗಪ್ಪ, ಕೊಲ್ಲಿಮಾಡ ರಶ್ಮಿ ಅಯ್ಯಪ್ಪ, ಬಲ್ಯಮೀದೇರೀರ ಆಶಾ ಶಂಕರ್, ತಾತಂಡ ಜ್ಯೋತಿ ಪ್ರಕಾಶ್, ಐನಂಡ ಜಮುನಾ ಚಂಗಪ್ಪ, ಕೋಣೆರೀರ ಶಿಲ್ಪಾ ಪೆಮ್ಮಯ್ಯ, ಚೋವಂಡ…

Read More

ಗೋಣಿಕೊಪ್ಪ ಜು.30 NEWS DESK : ಬಾಳೆಲೆ ಫಾರ್ಮರ್ಸ್ ಅಸೋಸಿಯೆಷನ್ ವತಿಯಿಂದ ನಿಟ್ಟೂರು ಗ್ರಾಮದಲ್ಲಿರುವ ಡ.ಮಾಪಂಗಡ ಬೆಳ್ಯಪ್ಪ ಅವರ ಗದ್ದೆಯಲ್ಲಿ ಆ.15 ರಂದು ಪೊನ್ನಂಪೇಟೆ ತಾಲ್ಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಅಸೋಷಿಯೇಷನ್ ಅಧ್ಯಕ್ಷ ಅಳಮೇಂಗಡ ಬೋಸ್ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿವಿಧ ಸಂಘ-ಸಂಸ್ಥೆಗಳ ಸಹಯೊಗದಲ್ಲಿ 4ನೇ ವರ್ಷದ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. 10 ವರ್ಷ, 10-14 ವರ್ಷ, 15 ರಿಂದ 17 ವರ್ಷ, 18-35 ವರ್ಷದ ಯುವಕರಿಗೆ, 36 ವರ್ಷ ಮೇಲ್ಪಟ್ಟವರಿಗೆ ಹಾಗೂ 56 ವರ್ಷ ಮೇಲ್ಟಟ್ಟವರಿಗೆ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ಮಧ್ಯಾಹ್ನ 2 ಗಂಟೆಯ ನಂತರ ಸ್ಪರ್ಧೆ ನಡೆಯಲಿದೆ. ಶಾಲಾ-ಕಾಲೇಜು ಮುಗಿದ ಮೇಲೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು. ಪುರುಷರಿಗೆ ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ನಡೆಯಲಿದೆ. 7 ಜನರ ತಂಡ ಭಾಗವಹಿಸಬಹುದಾಗಿದೆ. ವಾಲಿಬಾಲ್ ಕ್ರೀಡೆಗೆ ಪುರುಷರು ಮಾತ್ರ ಭಾಗವಹಿಸಬೇಕಿದೆ. ಎರಡು ವಿಭಾಗದಲ್ಲಿ ವಿಜೇತರಿಗೆ 15 ಸಾವಿರ, ದ್ವಿತೀಯ 10 ಸಾವಿರ,…

Read More

ಗೋಣಿಕೊಪ್ಪ ಜು.30 NEWS DESK : ಗೋಣಿಕೊಪ್ಪ ವಾಹನ ಚಾಲಕರ ಸಂಘದ ಅಧ್ಯಕ್ಷರಾಗಿ ಸಿ.ಕೆ.ಬೋಪಣ್ಣ ಪುನರಾಯ್ಕೆಯಾಗಿದ್ದಾರೆ. ವಾಹನ ಚಾಲಕರ ಸಂಘದ ಕಚೇರಿಯಲ್ಲಿ ನಡೆದ ಮಹಾಸಭೆಯಲ್ಲಿ ಸರ್ವ ಸದಸ್ಯರ ಒಮ್ಮತದ ತೀರ್ಮಾನದಂತೆ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ಉಪಾಧ್ಯಕ್ಷರಾಗಿ ಶರತ್ ಕಾಂತ್, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣೇಗೌಡ, ಸಹ ಕಾರ್ಯದರ್ಶಿ ರೇಣುಕುಮಾರ್, ಕೋಶಾಧಿಕಾರಿ ವಿ.ಟಿ.ವೇಣು ಮತ್ತು ನಿರ್ದೇಶಕರುಗಳಾಗಿ ಅನಿಲ್, ಅಶೋಕ್, ಕೀರ್ತಿ, ಕೃಷ್ಣ ಶ್ರೀನಿವಾಸ್, ಸುರೇಶ್, ಅನೀಶ್ ಇವರುಗಳು ಆಯ್ಕೆಯಾಗಿದ್ದಾರೆ.

Read More

ನಾಪೋಕ್ಲು ಜು.30 NEWS DESK : ನಾಪೋಕ್ಲು ವ್ಯಾಪ್ತಿಯ ವಿವಿಧ ದೇವಾಲಯಗಳಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೂರುಳಿಯ ಸುಭಾಷ್ ನಗರದಲ್ಲಿ ನಾಗನಕಟ್ಟೆಗೆ ಪೂಜೆ ಸಲ್ಲಿಸಲಾಯಿತು. ವಿವಿಧ ದೇವಾಲಯಗಳಲ್ಲಿ ಕ್ಷೀರಾಭಿಷೇಕ, ವಿಶೇಷ ಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಬಲ್ಲಮಾವಟಿಯ ಭಗವತಿ ದೇವಾಲಯದಲ್ಲಿ ಮಹಾಪೂಜೆ ಬಳಿಕ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಕಕ್ಕಬೆಯ ಪಾಡಿ ಇಗ್ಗುತಪ್ಪ ದೇವಾಲಯ, ಪಾಲೂರಿನ ಮಹಾಲಿಂಗೇಶ್ವರ ದೇವಾಲಯ, ಬಲ್ಲಮಾವಟಿಯ ಭಗವತಿ ದೇವಾಲಯ ಭಕ್ತರು ಶ್ರದ್ಧಾಭಕ್ತಿಯಿಂದ ನಾಗನಿಗೆ ಪೂಜೆ ಸಲ್ಲಿಸಿದರು. ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಅರ್ಚಕ ಜಗದೀಶ್ ಪೂಜೆ ನೆರವೇರಿಸಿದರು. ಈ ಸಂದರ್ಭ ಹಂಬಲ ನಿವಾಸಿ ಸುಬ್ರಮಣಿ, ಸಿಬ್ಬಂದಿ ಶ್ರೀಕಾಂತ್, ಸಂಪತ್ ಭಟ್ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು. ಪಾಲೂರಿನ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆದ ನಾಗರಪಂಚಮಿ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿದರು.ಅಧಿಕ ಸಂಖ್ಯೆಯ ಭಕ್ತಾಧಿಗಳು ಪಾಲ್ಗೊಂಡಿದ್ದರು. ಕೂರುಳಿಯ…

Read More

ಮಡಿಕೇರಿ ಜು.30 NEWS DESK : ಕರ್ನಾಟಕ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಲಾಡ್  ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಸೋಮವಾರಪೇಟೆ ತಾಲ್ಲೂಕಿನ ಚನ್ನಾಪುರ ದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ‘ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ ವತಿಯಿಂದ 6ನೇ ತರಗತಿಯಿಂದ 12ನೇ ತರಗತಿಯವರೆಗೆ 37.55 ಕೋಟಿ ರೂಪಾಯಿ ವೆಚ್ಚದಲ್ಲಿ ವಸತಿ ಶಾಲೆ ನಿರ್ಮಿಸಲು ಸರ್ಕಾರದಿಂದ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ  ಶಾಸಕರಾದ ಶ್ರೀ ಡಾ.ಮಂತರ್ ಗೌಡ ಅವರು ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸಿದರು.

Read More