ಮಡಿಕೇರಿ NEWS DESK ಜೂ.1 : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸ್ವತ: ಸ್ವಚ್ಛತಾ ಕಾರ್ಯಕ್ಕೆ ಮುಂದಾದ ಹಿನ್ನೆಲೆ ಪೌರ ಸೇವಾ ನೌಕರರು ಮುಷ್ಕರವನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ವತಿಯಿಂದ ರಾಜ್ಯವ್ಯಾಪಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದ ಭಾಗವಾಗಿ ವಿರಾಜಪೇಟೆಯಲ್ಲೂ ಪೌರಸೇವಾ ನೌಕರರು ಪುರಸಭೆ ಆವರಣದಲ್ಲಿ ಧರಣಿ ನಡೆಸುತ್ತಿದ್ದರು. ನೌಕರರ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೆ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲವೆಂದು ಪಟ್ಟು ಹಿಡಿದಿದ್ದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಪೊನ್ನಣ್ಣ ಅವರು, ಪುರಸಭೆ ನೌಕರರ ಬೇಡಿಕೆಗಳನ್ನು ಆಲಿಸಿದರು. ಈ ಹಿಂದೆ ತಾವು ಪುರಸಭೆ ನೌಕರರ ಬೇಡಿಕೆಗಳಿಗೆ ಸ್ಪಂದಿಸಿರುವುದನ್ನು ನೆನಪಿಸಿದ ಶಾಸಕರು, ಮುಂದೆಯೂ ಸ್ಪಂದಿಸುವುದಾಗಿ ಭರವಸೆ ನೀಡಿದರು. ಪ್ರತಿಭಟನೆಯನ್ನು ಕೈಬಿಟ್ಟು ಕೆಲಸಕ್ಕೆ ಹಾಜರಾಗುವಂತೆ ಮನವಿ ಮಾಡಿದರು. ಮೊದಲು ನೌಕರರ ಸಂಘದ ಪದಾಧಿಕಾರಿಯೊಬ್ಬರು ಇದಕ್ಕೆ ಒಪ್ಪದೇ ಇದ್ದಾಗ ಪಟ್ಟಣದ ನೈರ್ಮಲ್ಯದ ವಿಚಾರದಲ್ಲಿ ಯಾವುದೇ ರಾಜಿಯಾಗಲು ಸಾಧ್ಯವಿಲ್ಲ. ತಾವೇ ಖುದ್ದು…
ಲೇಖಕ: admin
ಮಡಿಕೇರಿ NEWS DESK ಜೂ.1 : ಕೊಡಗಿನ ಪತ್ರಕರ್ತ ಪ್ರಶಾಂತ್ ಟಿ.ಆರ್ ವಿರಚಿತ ‘ಬಾಳ ಹಾದಿಯಲಿ ಬೆಳ್ಳಿಚುಕ್ಕಿ’ ಕಾದಂಬರಿಗೆ ಈ ಸಾಲಿನ ಇಂಡಿಯನ್ ಐಕಾನ್ ಅವಾರ್ಡ್ ಸಂದಿದೆ. ಒರಿಯಂಟಲ್ ಫೌಂಡೇಶನ್ ಪ್ರತಿ ವರ್ಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಇಂಡಿಯನ್ ಐಕಾನ್ ರಾಷ್ಟçಮಟ್ಟದ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಈ ಬಾರಿಯೂ ಪ್ರಶಸ್ತಿ ಪ್ರಕಟಸಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಾಂತ್.ಟಿ.ಆರ್ ವಿರಚಿತ ಬಾಳ ಹಾದಿಯಲಿ ಬೆಳ್ಳಿಚುಕ್ಕಿ ಕಾದಂಬರಿಗೆ ಪ್ರಶಸ್ತಿ ಲಭಿಸಿದೆ. ಬಡತನದಲ್ಲಿ ಅರಳಿದ ಕ್ರೀಡಾ ಪ್ರತಿಭೆಯ ಕುರಿತ ಕಥಾವಸ್ತು ಈ ಕಾದಂಬರಿಯಲ್ಲಿ ಅಡಕವಾಗಿದೆ. ವಿಶೇಷ ಎಂದರೆ ಖ್ಯಾತ ನಟ ಅನಿರುದ್ಧ್ ಜಟ್ಕರ್ ಬೆನ್ನುಡಿ ಬರೆದಿದ್ದಾರೆ. ಬಾಲಿವುಡ್ ನಟ ಹಾಗೂ ಕ್ರಿಕೆಟಿಗ ಭಾಸ್ಕರ್ ಮುನ್ನುಡಿ ಬರೆದಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಇದೇ ಜೂ.15ರಂದು ಬೆಂಗಳೂರಿನ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಪ್ರಶಸ್ತಿಯು ಫಲಕ ಹಾಗೂ ನಗದು ಬಹುಮಾನವನ್ನು ಒಳಗೊಂಡಿರುತ್ತದೆ. ಪ್ರಶಾಂತ್ ಟಿ.ಆರ್ ಅವರು ವಿಶ್ವವಾಣಿ ಪತ್ರಿಕೆಯ ಸಿನಿಮಾ ವಿಭಾಗದ…
ಸೋಮವಾರಪೇಟೆ NEWS DESK ಮೇ 31 : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ 600ಕ್ಕೆ 591 ಅಂಕಗಳಿಸಿ ಶೇ.99.36 ಫಲಿತಾಂಶದೊಂದಿಗೆ ಕೊಡಗು ಜಿಲ್ಲೆಗೆ ಟಾಪರ್ ಆಗಿರುವ ಶನಿವಾರಸಂತೆ ಸೆಕ್ರೆಡ್ ಹಾರ್ಟ್ ಆಂಗ್ಲಮಾಧ್ಯಮ ಪಿಯು ಕಾಲೇಜಿನ ವಿದ್ಯಾರ್ಥಿನಿ ಡಿ. ತೇಜಸ್ವಿನಿ ಅವರನ್ನು ಶಾಸಕ ಡಾ.ಮಂತರ್ ಗೌಡ ಅವರು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು. ಕನ್ನಡ 99, ಇಂಗ್ಲೀಷ್ 94, ಭೌತಶಾಸ್ತ್ರ 100, ರಸಾಯನ ಶಾಸ್ತ್ರ 98, ಗಣಿತ 100, ಕಂಪ್ಯೂಟರ್ ಸೈನ್ಸ್ 100 ಅಂಕಗಳಿಸಿದ್ದಾರೆ. ಉಚ್ಚಂಗಿ-ಬೀರಳ್ಳ ಗ್ರಾಮದ ಕೃಷಿಕ ಹಾಗು ನಿವೃತ್ತ ಸೈನಿಕ ಎಲ್.ಎನ್. ಧರ್ಮಪ್ಪ ಹಾಗೂ ಕೆ.ಬಿ. ತಾರಾಮಣಿ ಪುತ್ರಿಯಾಗಿದ್ದಾರೆ.
ಸೋಮವಾರಪೇಟೆ NEWS DESK ಮೇ.31 : ಪೌರ ಸೇವಾ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಪೌರ ಸೇವಾನೌಕರರು ಕರ್ತವ್ಯ ನಿರ್ವಹಿಸದೆ ಪಟ್ಟಣ ಪಂಚಾಯಿತಿ ಎದುರು ಶನಿವಾರದಿಂದ ಮುಷ್ಕರ ಪ್ರಾರಂಭಿಸಿದ್ದಾರೆ. ಪೌರಕಾರ್ಮಿಕರ ಬೇಡಿಕೆಯನ್ನು ಈಡೇರಿಸುವ ವರಗೆ ಪಟ್ಟಣದಲ್ಲಿ ಸ್ವಚ್ಚತಾ ಕಾರ್ಯವನ್ನು ನಿರ್ವಹಿಸುವುದಿಲ್ಲ. ಅಲ್ಲದೆ ಜೂ. 2ರಿಂದ ನೀರು ಸರಬರಾಜು ಕೆಲಸವನ್ನು ಮಾಡುವುದಿಲ್ಲ ಎಂದು ಪೌರಕಾರ್ಮಿಕರು ಸ್ಪಷ್ಟಪಡಿಸಿದ್ದಾರೆ. ಪೌರಕಾರ್ಮಿಕರ ಹಲವು ಬೇಡಿಕೆಗಳು ಅನೇಕ ವರ್ಷಗಳಿಂದ ಈಡೇರಿಲ್ಲ. ಸಂಘದ ತೀರ್ಮಾದಂತೆ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಲಾಗಿತ್ತು. ಗಡುವು ಮುಗಿದಿರುವ ಹಿನ್ನೆಲೆಯಲ್ಲಿ ಮುಷ್ಕರ ಪ್ರಾರಂಭಿಸಿದ್ದೇವೆ ಎಂದು ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘದ ಸೋಮವಾರಪೇಟೆ ಶಾಖೆ ಅಧ್ಯಕ್ಷ ಬಿ.ಜೆ.ಮಂಜುನಾಥ ಹೇಳಿದರು. ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಸವಲತ್ತುಗಳನ್ನು ಯಾವುದೇ ಷರತ್ತುಗಳಿಲ್ಲದೆ ನೀಡಬೇಕು. ಪಟ್ಟಣ ಪಂಚಾಯಿತಿ ಹಾಗು ನಗರಸಭೆಯಲ್ಲಿ ಕೆಲಸ ಮಾಡುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು. 2022ನೇ ಸಾಲಿನ ವಿಶೇಷ ನೇಮಕಾತಿ ಅಡಿ ಆಯ್ಕೆಯಾದ ಪೌರಸೇವಾ ನೌಕರರು ಮತ್ತು ಲೋರ್ಸ್ ಗಳಿಗೆ…
ಸೋಮವಾರಪೇಟೆ NEWS DESK ಮೇ 31 : ತೋಳೂರು ಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಸುರಿದ ಧಾರಾಕಾರ ಮಳೆಗೆ ಭೂ ಕುಸಿತ ಉಂಟಾಗಿ ಅಪಾರ ಪ್ರಮಾಣದ ಕಾಫಿ ಗಿಡಗಳು ನಾಶವಾಗಿವೆ. ಕೂತಿ ಗ್ರಾಮದ ಡಿ.ಕೆ.ಪ್ರಕಾಶ್ ಎಂಬುವವರಿಗೆ ಸೇರಿದ ಅರ್ಧ ಎಕರೆಯಷ್ಟು ಜಾಗ ಶುಕ್ರವಾರ ರಾತ್ರಿ ಸಂಭವಿಸಿದ ಭೂಕುಸಿತದಿಂದ ಕೊಚ್ಚಿಹೋಗಿದೆ. ಕೂತಿ-ಹೊಸೂರು -ಶನಿವಾರಸಂತೆಗೆ ಸಂಪರ್ಕ ಕಲ್ಪಿಸುವ ಬೆಟ್ಟದ ರಸ್ತೆಯಲ್ಲಿ ಭೂ ಕುಸಿತವಾಗಿದೆ. ಮಳೆ ಹೀಗೆ ಮುಂದುವರೆದರೆ ರಸ್ತೆಯು ಕುಸಿಯುವ ಆತಂಕ ಎದುರಾಗಿದೆ ಎಂದು ಪ್ರಕಾಶ್ ತಿಳಿಸಿದ್ದಾರೆ. ಸ್ಥಳಕ್ಕೆ ಗ್ರಾಮ ಆಡಳಿತ ಅಧಿಕಾರಿ ಕರಿಬಸವರಾಜು, ಪ್ರಬಾರ ಸಹಾಯ ತೋಟಗಾರಿಕೆ ಇಲಾಖೆ ಅಧಿಕಾರಿ ಎಸ್.ಎಸ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 2018ರಲ್ಲಿ ಭೂ ಕುಸಿತ ಉಂಟಾದ ಪ್ರದೇಶದ ಸಮೀಪದಲ್ಲೆ ಕುಸಿತ ಕಂಡಿದ್ದು, ಜನರಲ್ಲಿ ಆತಂಕ ಮೂಡಿದೆ.
ಮಡಿಕೇರಿ NEWS DESK ಮೇ 31 : ಮೀಸಲಾತಿಯ ಶೇ.50 ರ ಮಿತಿಯನ್ನು ತೆಗೆಯುವ ಮತ್ತು ಖಾಸಗಿ ಕ್ಷೇತ್ರಗಳಲ್ಲು ಮೀಸಲಾತಿಯ ಜಾರಿಗಾಗಿ ಹೋರಾಟಗಳು ರೂಪುಗೊಳ್ಳುವ ಅಗತ್ಯವಿದೆ ಎಂದು ಪ್ರಗತಿಪರ ಚಿಂತಕರು ಹಾಗೂ ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್ ಮಟ್ಟು ತಿಳಿಸಿದ್ದಾರೆ. ಮಾನವ ಬಂಧುತ್ವ ವೇದಿಕೆ, ಮಹಿಳಾ ಬಂಧುತ್ವ ವೇದಿಕೆ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದೊಂದಿಗೆ ನಗರದ ಬಾಲಭವನದ ಸಭಾಂಗಣದಲ್ಲಿ ನಡೆದ ‘ಸಮಕಾಲೀನ ಬಿಕ್ಕಟ್ಟುಗಳು ಮತ್ತು ಸವಾಲುಗಳು’ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು, ‘ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ(ಜಾತಿ ಸಮೀಕ್ಷೆ)’ ವಿಷಯದ ಕುರಿತು ಅವರು ಮಾತನಾಡಿದರು. ಪ್ರಸ್ತುತ ಕೇವಲ ಶೇ.2 ರಷ್ಟು ಉದ್ಯೋಗಗಳು ಮಾತ್ರ ಸರ್ಕಾರಿ ಇಲಾಖೆಗಳಲ್ಲಿ ಲಭ್ಯವಿದ್ದರೆ, ಉಳಿದ ಶೇ.98 ರಷ್ಟು ಉದ್ಯೋಗಗಳು ಖಾಸಗಿ ಕ್ಷೇತ್ರಗಳಲ್ಲಿದೆ. ಇಲ್ಲಿನ ಸರ್ಕಾರಗಳ ಮೂಲಕ ಅಗತ್ಯ ಸೌಲಭ್ಯ, ರಿಯಾಯಿತಿಗಳನ್ನು ಪqಯುವ ಖಾಸಗಿ ಸಂಸ್ಥೆಗಳು ಸಾಮಾಜಿಕ ನ್ಯಾಯವನ್ನು ಪರಿಪಾಲಿಸುವ ಮೂಲಕ ಮೀಸಲಾತಿಯನ್ನು ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ನಾವುಗಳು ಧ್ವನಿ ಎತ್ತುವುದು ಅತ್ಯವಶ್ಯ. ಉತ್ತರ ಪ್ರದೇಶದಲ್ಲಿ ಮಾಯಾವತಿ…
ವಿರಾಜಪೇಟೆ ಮೇ 31 NEWS DESK : ವಿದ್ಯಾರ್ಥಿಗಳು ಕಲಿಕೆಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗೆ ಹೆಚ್ಚು ಒತ್ತು ನೀಡುವಂತೆ ಸಾಹಿತಿ ಹಾಗೂ ಬರಹಗಾರರಾದ ಅರವಿಂದ ಚೊಕ್ಕಾಡಿ ಸಲಹೆ ನೀಡಿದರು. ವಿರಾಜಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕ್ರೀಡಾ, ಸಾಂಸ್ಕೃತಿಕ, ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಇಂದಿನ ವಿದ್ಯಾರ್ಥಿಗಳು ಮತ್ತು ಯುವಜನತೆ ಕನ್ನಡ ಭಾಷೆಯ ಬಳಕೆ ಮತ್ತು ಅದರ ಸ್ಥಿತಿಗತಿಯನ್ನು ಉಲ್ಲೇಖಿಸಿದರು. ಸಾಮಾಜಿಕ ಮಾಧ್ಯಮಗಳು ಬಳಸುವ ಭಾಷೆಯು ಜನಸಾಮಾನ್ಯರ ಭಾವನೆಗಳ ಮೇಲೆ ಬೀರುವ ಪರಿಣಾಮಗಳು ಹಾಗೂ ಅದರಿಂದ ಸಮಾಜದ ಮೇಲೆ ಉಂಟಾಗುತ್ತಿರುವ ವ್ಯತಿರಿಕ್ತವಾದ ಘಟನೆಗಳ ಬಗ್ಗೆ ವಿವರಿಸಿದರು. ವೃತ್ತಿ ಶಿಕ್ಷಣವನ್ನು ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದರು. ನಿವೃತ್ತ ಕ್ರೀಡಾ ಅಧಿಕಾರಿ ಸಿ.ಪಿ ಪೂಣಚ್ಚ ಮಾತನಾಡಿ, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಯಲ್ಲೂ ಆಸಕ್ತಿ ವಹಿಸಿದಾಗ ಮಾತ್ರ ದೈಹಿಕವಾಗಿ, ಮಾನಸಿಕವಾಗಿ ಮತ್ತು ಭಾವನಾತ್ಮಕವಾಗಿ ನಾವು ಸದೃಢವಾಗಿ ಮತ್ತು ಆರೋಗ್ಯಯುತವಾಗಿರಲು ಸಹಕಾರಿಯಾಗುತ್ತದೆ…
ಮಡಿಕೇರಿ ಮೇ 30 NEWS DESK : ಮಳೆಯಿಂದ ಹಾನಿಯಾದ ವಿವಿಧ ಸ್ಥಳಗಳಿಗೆ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಮವಾರಪೇಟೆ ಹೋಬಳಿ ಕುಂಬೂರು ಹಾಗೂ ಜಂಬೂರು, ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮದಲ್ಲಿ ಮಳೆಯಿಂದಾಗಿ ಹಾನಿಯಾಗಿರುವ ಮನೆಗಳನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭ ಕಂದಾಯ ಅಧಿಕಾರಿಗಳು ಹಾಜರಿದ್ದರು. ಭಾಗಮಂಡಲ ಹೋಬಳಿ ಕಡಿಯತ್ತೂರು ಗ್ರಾಮದ ತೊರೇರ ತಂಗಮ್ಮ ಎಂಬವರ ಕೊಟ್ಟಿಗೆ ಮೇಲೆ ಮರ ಬಿದ್ದು ಕೊಟ್ಟಿಗೆ ಹಾನಿಯಾಗಿದೆ.
ಮಡಿಕೇರಿ ಮೇ 31 NEWS DESK : ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಜೂ.1 ರಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಲಿದ್ದಾರೆ. ಜೂ.1 ರಂದು ಬೆಳಗ್ಗೆ 10.30 ಗಂಟೆಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಲಿದ್ದಾರೆ. ನಂತರ ಬೆಳಗ್ಗೆ 11.30 ಗಂಟೆಗೆ ಆರ್ಜಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ಅನ್ವರುಲ್ ಉದಾ ಶಾಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮೈತಾಡಿ ಗ್ರಾಮ ವ್ಯಾಪ್ತಿಯಲ್ಲಿ ಮನೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಸಿದ್ದಾಪುರ ರಸ್ತೆ ವೀಕ್ಷಿಸಲಿದ್ದಾರೆ. ಹಾಗೆಯೇ ಮಾಲ್ದಾರೆ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ಶಾಸಕರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಮಡಿಕೇರಿ ಮೇ 31 NEWS DESK : ಮಡಿಕೇರಿಯ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ನೋಂದಾಯಿತ ವೆಲ್ಡರ್ಗಳಿಗೆ ನೋಂದಣಿಯ ಹಿರಿತನದ ಆಧಾರದ ಮೇಲೆ ವೆಲ್ಡಿಂಗ್ ಕಿಟ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕೆಡಿಪಿ ಸಭೆಯ ನಾಮನಿರ್ದೇಶಿತ ಸದಸ್ಯರುಗಳಾದ ಎಂ.ಯು.ಅಬ್ದುಲ್ ರಜಾಕ್, ಮಂದ್ರಿರಾ ಮೋಹನ್ ದಾಸ್, ಶ್ಯಾಮ್ ಸುಬ್ಬಯ್ಯ, ತಹಶೀಲ್ದಾರ್ ಪ್ರವೀಣ್ ಕುಮಾರ್, ತಾ.ಪಂ.ಇಒ ಶೇಖರ್ ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ ಇದ್ದರು.






