ಬೆಂಗಳೂರು ಜು.29 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಆದ್ಯತೆ ಮೇರೆಗೆ ಅವುಗಳನ್ನು ಪರಿಹರಿಸಿಕೊಡುವುದಾಗಿ ತಿಳಿಸಿದರು.
ಲೇಖಕ: admin
ಮಡಿಕೇರಿ ಜು.29 NEWS DESK : ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಹೈಪಟೈಟಿಸ್ ದಿನಾಚರಣೆಯನ್ನು ಆಚರಿಲಾಯಿತು. ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ವೈರಲ್ ಹೈಪಟೈಟಿಸ್ ನೋಡಲ್ ಅಧಿಕಾರಿ ಡಾ. ಜಿ.ಕೆ.ಸನತ್ ಕುಮಾರ್ ಮಾತನಾಡಿ, ವೈರಲ್ ಹೈಪಟೈಟಿಸ್ ರೋಗದ ಲಕ್ಷಣ, ಚಿಕಿತ್ಸೆ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಿದರು. ಫಿಜಿಷಿಯನ್ ಡಾ.ರಾಜೇಶ್ ಮಾತನಾಡಿ, ವೈರಲ್ ಹೈಪಟೈಟಿಸ್ ಕಾಯಿಲೆ ಮತ್ತು ಚಿಕಿತ್ಸೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ವಿಶ್ವನಾಥ್ ಸಿಂಪಿ ಅವರ ಮಾರ್ಗದರ್ಶನದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ವೈರಲ್ ಹೈಪಟೈಟಿಸ್ ಕಾಯಿಲೆಯ ಅರಿವು ಮೂಡಿಸುವ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದ ನಂತರ ಸಾರ್ವಜನಿಕ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳಿಗೆ ಹೈಪಟೈಟಿಸ್ ಲಸಿಕೆಯನ್ನು ನೀಡಲಾಯಿತು. ಶಿಬಿರದಲ್ಲಿ ಒಟ್ಟು 51 ಮಂದಿ ಫಲಾನುಭವಿಗಳಿಗೆ ಲಸಿಕೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಪ್ರಜ್ಷಲ್, ಶ್ರೂಶ್ರೂ಼ಷಣಾಧಿಕಾರಿ ಹಂಸ ಮತ್ತು ಕಾವೇರಿ, ಸಮಾರಂಭದಲ್ಲಿ ಜಿಲ್ಲಾ ಕ್ಷಯರೋಗ…
ಸೋಮವಾರಪೇಟೆ ಜು.29 NEWS DESK : ಇಂದು ನಡೆದ ಸೋಮವಾರಪೇಟೆ ಪಟ್ಟಣ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಕಡತ ನಾಪತ್ತೆ ಪ್ರಕರಣ ಸದ್ದು ಮಾಡಿತು. ಪ.ಪಂ ಅಧ್ಯಕ್ಷೆ ಜಯಂತಿ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಡತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸದಸ್ಯರು ಒತ್ತಾಯಿಸಿದರು. ಸಿಬ್ಬಂದಿಗಳ ಕಾರ್ಯವೈಖರಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಸದಸ್ಯರು, ತಪ್ಪಿತಸ್ಥರನ್ನು ವಜಾಗೊಳಿಸಿ ಹೊಸ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಗುತ್ತಿಗೆ ಆಧಾರದ ಸಿಬ್ಬಂದಿಗಳನ್ನು 3 ವರ್ಷಕ್ಕೊಮ್ಮೆ ಬದಲಾಯಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಮುಖ್ಯ ಅಧಿಕಾರಿಗಳು ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಮಡಿಕೇರಿ ಜು.29 NEWS DESK : ದೇಶ ರಕ್ಷಣೆಗಾಗಿ ತ್ಯಾಗ ಮಾಡಿದ ಯೋಧರನ್ನು ದಿನನಿತ್ಯ ಸ್ಮರಿಸುವ ಮೂಲಕ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯೋಧರಿಗಾಗಿ ಪ್ರಾರ್ಥಿಸಬೇಕು ಮತ್ತು ಪ್ರತಿಯೊಬ್ಬರು ಗೌರವಿಸುವಂತಾಗಬೇಕೆಂದು ಗಣ್ಯರು ಕರೆ ನೀಡಿದರು. ಸರ್ವ ಸಹಾಯಿ ಮಿತ್ರ ಮಂಡಳಿ ವತಿಯಿಂದ ಚನ್ನಯ್ಯನಕೋಟೆ ಬಸ್ ನಿಲ್ದಾಣದ ಬಳಿ ನಿರ್ಮಿಸಲಾದ ಬೃಹತ್ ಕಾರ್ಗಿಲ್ ವಿಜಯೋತ್ಸವ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ಪುಣ್ಯ ಸ್ಮರಣೆ ಫ್ಲಕ್ಸ್ ಗೆ ಪುಷ್ಪ ನಮನ ಸಲ್ಲಿಸಿ ಗೌರವಿಸಿದರು. ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೆರಿರ ಅರುಣ್ ಕುಮಾರ್ ಮಾತನಾಡಿ, ಗ್ರಾಮದಲ್ಲಿರುವ ಸರ್ವಸಹಾಯಿ ಮಿತ್ರ ಮಂಡಳಿ ಹಲವು ವರ್ಷಗಳಿಂದ ದೇಶ ಅಭಿಮಾನದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ದೇಶ ರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದ ಯೋಧರನ್ನು ಸ್ಮರಿಸುವುದರೊಂದಿಗೆ ಅವರ ಕುಟುಂಬವನ್ನು ಗೌರವಿಸುವ ಮೂಲಕ ಜಿಲ್ಲೆಯಲ್ಲಿಯೇ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ. ಇಂತಹ ಕಾರ್ಯಕ್ರಮಗಳಿಗೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರ ಮೂಲಕ ದೇಶ ಸೇವೆಯಲ್ಲಿರುವ ಯೋಧರಿಗೆ ಸ್ಪೂರ್ತಿ ತುಂಬಬೇಕೆಂದರು. ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ…
ಮಡಿಕೇರಿ ಜು.29 NEWS DESK : ಕರಿಕೆ ಗ್ರಾಮದ ವನಶಾಸ್ತವ್ ನಾಗ ಬನದಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಅರ್ಚಕರು ಶ್ರೀ ನಾಗ ಮೂರ್ತಿಗೆ ವಿಶೇಷ ಅಲಂಕಾರ ಸೇವೆಯನ್ನು ಸಲ್ಲಿಸಿ, ಶಾಸ್ತಪೂಜೆ ಮತ್ತು ಸಂಕಲ್ಪ, ಹಾಲಿನ ಅಭಿಷೇಕ, ಕುಂಕುಮಾರ್ಚನೆ ಸೇವೆಯನ್ನು ಸಲ್ಲಿಸಿದರು. ನಂತರ ಮಹಾಪೂಜೆ, ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನೆರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಗನ ಕಲ್ಲಿಗೆ ಪುಷ್ಪಾರ್ಚನೆ ಮತ್ತು ಹಾಲಿನ ಅಭಿಷೇಕ ಮಾಡಿದರು.
ಮಡಿಕೇರಿ ಜು.29 NEWS DESK : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 9.56 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 46.68 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2099.46 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1996.15 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.18 ಮಿ.ಮೀ. ಕಳೆದ ವರ್ಷ ಇದೇ ದಿನ 61.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3144.82 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2697.24 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 43.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1917.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1819.35 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ಮಡಿಕೇರಿ ಜು.29 NEWS DESK : ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮ ಪಂಚಾಯಿತಿಯ ಅಲೆಕಟ್ಟೆ ನಿವಾಸಿ, ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶಿವಪ್ಪ ಅವರ ತಂದೆ ನಿಧನರಾಗಿದ್ದಾರೆ. ಮಾಹಿತಿ ತಿಳಿದು ಮನೆಗೆ ಭೇಟಿ ನೀಡಿದ ಶಾಸಕ ಡಾ.ಮಂತರ್ ಗೌಡ, ಕುಟುಂಬಕ್ಕೆ ಸಾಂತ್ವನ ಹೇಳಿ, ದೈರ್ಯ ತುಂಬಿದರು.
ಮಡಿಕೇರಿ ಜು.29 NEWS DESK : ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಕೊಡಗಿನ ವಿವಿಧೆಡೆ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಗರದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ, ಶ್ರೀ ದಂಡಿನ ಮಾರಿಯಮ್ಮ ದೇವಾಲಯ, ಶ್ರೀ ಕೋಟೆ ಮಾರಿಯಮ್ಮ ದೇವಾಲಯ, ಬ್ರಾಹ್ಮಣರ ಬೀದಿಯ ಅಶ್ವತ್ಥ ಕಟ್ಟೆ, ಶ್ರೀ ಮುತ್ತಪ್ಪ ದೇವಾಲಯ ಸೇರಿದಂತೆ ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ನಾಗನಕಲ್ಲಿಗೆ ಹಾಲಿನ ಅಭಿಷೇಕ, ಎಳನೀರಭಿಷೇಕ, ಕ್ಷೀರಾಭಿಷೇಕ, ಅಲಂಕಾರ ಪೂಜೆ, ಸಂಕಲ್ಪ ಪೂಜೆ, ಮಹಾಪೂಜೆ, ವಿಶೇಷ ಧಾರ್ಮಿಕ ವಿಧಿ ವಿಧಾನಗಳು, ಮಹಾ ಮಂಗಳಾರತಿ, ಮತ್ತು ಪ್ರಸಾದ ವಿತರಣೆ ನಡೆಯಿತು. ಹೆಚ್ಚಿನ ಸಂಖ್ಯೆಯ ಭಕ್ತರು ನಾಗನ ಕಲ್ಲಿಗೆ ಪುಷ್ಪಾರ್ಚನೆ ಹಾಗೂ ಹಾಲಿನ ಅಭಿಷೇಕ ಮಾಡಿದರು.
ಮಡಿಕೇರಿ ಜು.29 NEWS DESK : ತೋಳೂರು ಶೆಟ್ಟಳ್ಳಿಯ ಡಾ. ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ ಶಾಂತಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಎಎಎಮ್ ಹಾಗೂ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಮತ್ತು ತಂಡದವರು ಭೇಟಿ ನೀಡಿ ಆರೋಗ್ಯ ಜಾಗೃತಿ ಮೂಡಿಸಿದರು. ಎಂಎಫ್ ಆರ್ ಮತ್ತು ಸಿಪಿಆರ್, ಡೆಂಗಿ ಮುಕ್ತ ಶಾಲಾ ಆವರಣ, ಒತ್ತಡ ನಿರ್ವಹಣೆ, ಜಂಕ್ ಫುಡ್ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಿದರು. CHOs ನವೀನ್ ಮತ್ತು ಪ್ರಕಾಶ್ ಸಿಪಿಆರ್ ಕುರಿತು ಪ್ರಾತ್ಯಕ್ಷತೆಯನ್ನು ತೋರಿಸಿದರು. ತಂಡದಲ್ಲಿ ಆಶಾ ಕಾರ್ಯಕರ್ತರು ಮತ್ತು 245 ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಪಾಲ್ಗೊಂಡಿದ್ದರು.
ಮೈಸೂರು, ಜು.29 NEWS DESK : ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವುದಕ್ಕಾಗಿ ಕೇಂದ್ರ ಸರ್ಕಾರ ಈ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಏಕತಾ ಮಾಲ್ ವೈವಿಧ್ಯಮಯ ತಾಣವಾಗಿ ಹೊರಹೊಮ್ಮಲಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಮೈಸೂರು ವಸ್ತುಪ್ರದರ್ಶನದ ಮೈದಾನದಲ್ಲಿ ತಲೆ ಎತ್ತಲಿರುವ ಈ ಏಕತಾ ಮಾಲ್ ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಂಸದರು ಮಾತನಾಡಿದರು. ಇದು ಕೇಂದ್ರದ ಮಹತ್ವದ ಯೋಜನೆಯಾಗಿದೆ. ಜಿಲ್ಲೆಗಳ ವೈವಿಧ್ಯಮಯ ಮತ್ತು ವಿಶಿಷ್ಠವಾದ ಉತ್ಪನ್ನಗಳು ಒಂದೇ ಸೂರಿನಲ್ಲಿ ಸಿಗಬೇಕು ಎಂಬ ದೃಷ್ಟಿಯಿಂದ ಇದು ನಿರ್ಮಾಣವಾಗಲಿದೆ ಎಂದು ತಿಳಿಸಿದರು. ಭಾರತೀಯ ಉತ್ಪನ್ನಗಳು, ಮೇಕ್ ಇನ್ ಇಂಡಿಯಾ ಉತ್ಪನ್ನಗಳು, ಸ್ಥಳೀಯ ಪ್ರತಿಭೆಗಳು ತಮ್ಮ ವಸ್ತುಗಳನ್ನು ಪ್ರದರ್ಶಿಸಲು ಇಲ್ಲಿ ಅವಕಾಶ ನೀಡಲಾಗಿದೆ. ವೈವಿಧ್ಯತೆಯನ್ನು ಜಗದಗಲ ಪಸರಿಸಲು ಈ ಏಕತಾ ಮಾಲ್ ನೆರವಾಗಲಿದೆ ಎಂದು ಸಂಸದರು ತಿಳಿಸಿದರು. ಒಂದು ಜಿಲ್ಲೆ, ಒಂದು ಉತ್ಪನ್ನ ಎಂಬ ವಿಶೇಷ ಪ್ರೋತ್ಸಾಹ ದೊರೆಯಲಿದೆ. ಗ್ರಾಮೀಣ ಕಲಾವಿದರಿಗೆ, ವಿವಿಧ…






