ಮಡಿಕೇರಿ ಮೇ 30 NEWS DESK : ಬಡ ರೋಗಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಡಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಸೋಮವಾರಪೇಟೆ ಬಿಜೆಪಿ ಮಂಡಲ ಪ್ರತಿಭಟನೆ ನಡೆಸಿತು. ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆ ಎದುರು ಜಮಾಯಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಮೌನ ಪ್ರತಿಭಟನೆಯ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಡವರ ಹಾಗೂ ಮಧ್ಯಮ ವರ್ಗದ ರೋಗಿಗಳ ಆರೋಗ್ಯವನ್ನು ಕಾಪಾಡಬೇಕು ಎನ್ನುವ ಉದ್ದೇಶದಿಂದ ಕಡಿಮೆ ಬೆಲೆಯ ಔಷಧಿಗಳ ಮಾರಾಟಕ್ಕಾಗಿ ಕ್ರಮ ಕೈಗೊಂಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲೇ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಿದ್ದಾರೆ. ಕೇಂದ್ರ ಸರ್ಕಾರದ ಬಡವರ ಪರವಾದ ಕಾಳಜಿಯನ್ನು ಸಹಿಸದ ರಾಜ್ಯ ಕಾಂಗ್ರೆಸ್ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಪ್ರಸ್ತಾಪ ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಯಾವುದೇ ಕಾರಣಕ್ಕೂ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಬಿಡುವುದಿಲ್ಲ, ಒಂದು ವೇಳೆ ಮುಚ್ಚಲು ಮುಂದಾದರೆ ರಾಜ್ಯವ್ಯಾಪಿ ಹೋರಾಟವನ್ನು ತೀವ್ರಗೊಳಿಸುವುದಾಗಿ…
ಲೇಖಕ: admin
ಮಡಿಕೇರಿ NEWS DESK ಮೇ 30 : ಭಾರೀ ಗಾಳಿಗೆ ವಿದ್ಯುತ್ ಕಂಬ ಬಿದ್ದು ಹಸುವೊಂದು ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ತಾಕೇರಿ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಎಂ.ಟಿ.ರಘು ತಮ್ಮಯ್ಯ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಶು ವೈದ್ಯರು ಮೃತ ಹಸುವಿನ ದೇಹವನ್ನು ತಪಾಸಣೆ ನಡೆಸಿದರು.
ನವದೆಹಲಿ NEWS DESK ಮೇ 30 : ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಎನ್.ವಿ.ಅಂಜಾರಿಯಾ, ವಿಜಯ್ ಬಿಷ್ಣೋಯ್ ಹಾಗೂ ಎ.ಎಸ್.ಚಂದೂರ್ಕರ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ಸಿಜೆಐಯಾಗಿದ್ದ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕಾ ಮತ್ತು ಬೆಲಾ ತ್ರಿವೇದಿ ಅವರು ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೂವರು ನ್ಯಾಯಾಧೀಶರಿಗೆ ಪ್ರಮಾಣ ವಚನ ಬೋಧಿಸಿದರು. ಮೂವರು ನೂತನ ನ್ಯಾಯಾಧೀಶರ ಪ್ರಮಾಣ ವಚನ ಸ್ವೀಕಾರದೊಂದಿಗೆ ಒಟ್ಟು 34 ನ್ಯಾಯಮೂರ್ತಿಗಳ ಸಂಖ್ಯಾಬಲದ ಸರ್ವೋಚ್ಚ ನ್ಯಾಯಾಲಯ ಸಂಪೂರ್ಣ ಸದಸ್ಯರೊಂದಿಗೆ ಕಾರ್ಯನಿರ್ವಹಿಸಲಿದೆ.
ಬೆಂಗಳೂರು NEWS DESK ಮೇ 30 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದರು. ಅಭಿವೃದ್ಧಿ ಕಾರ್ಯಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಕುರಿತು ಹಲವು ಸೂಚನೆಗಳನ್ನು ನೀಡಿದರು. ತಪಾಸಣಾ ವರದಿಗಳನ್ನು ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಶಾಲೆಗಳು, ಹಾಸ್ಟೆಲ್ಗಳು , ವಸತಿ ಶಾಲೆಗಳು, ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ನಿರಂತರವಾಗಿ ಭೇಟಿ ನೀಡಬೇಕು. ಮುನ್ಸೂಚನೆ ಇಲ್ಲದೇ ಇಂತಹ ಭೇಟಿಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು ಎಂದು ಪದೇ ಪದೇ ಸೂಚನೆ ನೀಡಿದ್ದೇನೆ. ಆದರೂ ಕೆಲವರು ಇದನ್ನು ಪಾಲಿಸಿಲ್ಲ ಎನ್ನುವ ವರದಿ ನನಗೆ ಬಂದಿದೆ. ನಿಮ್ಮ ಅಧೀನದಲ್ಲಿರುವ ಇಲಾಖೆಗಳು, ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸುವುದು ನಿಮ್ಮ ಜವಾಬ್ದಾರಿ. ನೀವು ದಕ್ಷತೆಯಿಂದ ಕಾರ್ಯನಿರ್ವಹಿಸದಿದ್ದರೆ ಅಧೀನ ಅಧಿಕಾರಿಗಳು ಕಾರ್ಯನಿರ್ವಹಿಸುವುದನ್ನು ಹೇಗೆ ನಿರೀಕ್ಷಿಸಬಹುದು? ಜಿಲ್ಲೆಯಲ್ಲಿ ಜನಸಾಮಾನ್ಯರಿಗೆ ಆರೋಗ್ಯ, ಸಾರಿಗೆ ಸಂಚಾರದಂತಹ ಮೂಲಭೂತ ಸೌಕರ್ಯಗಳು ಲಭಿಸದಿದ್ದರೆ ಅದನ್ನು ಆಡಳಿತದ ವೈಫಲ್ಯವೆಂದೇ ಪರಿಗಣಿಸಬೇಕಾಗಿದೆ. ಹಾಡಿಗಳಲ್ಲಿ ಶಾಲೆ, ರಸ್ತೆ, ಆಸ್ಪತ್ರೆಯಂತಹ ಮೂಲಸೌಲಭ್ಯ ಒದಗಿಸಲು…
*ಕೆ.ವಿ.ಜಿ ಐಟಿಐ ಭಾಗಮಂಡಲದಲ್ಲಿ ಪ್ರವೇಶಾತಿ ಆರಂಭಗೊಂಡಿದೆ* *ಕೆವಿಜಿ ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ* ಮಡಿಕೇರಿ NEWS DESK ಮೇ 30 : ಭಾಗಮಂಡಲದ ಕೆವಿಜಿ ಐಟಿಐ ನಲ್ಲಿ 2025-27 ನೇ ಶೈಕ್ಷಣಿಕ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ವೇತನ ಅನುದಾನ ಕ್ಕೆ ಒಳಪಟ್ಟ ಈ ತರಬೇತಿ ಸಂಸ್ಥೆಯಲ್ಲಿ ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ( EM), ಎಲೆಕ್ಟ್ರಿಷಿಯನ್ ಮತ್ತು ಮೆಕ್ಯಾನಿಕ್ ಮೋಟಾರ್ ವೆಹಿಕಲ್ (MMV) ವೃತ್ತಿ ವಿಭಾಗಗಳಿದ್ದು, ಆಯ್ಕೆಯು ಸರ್ಕಾರ ದ ನಿಯಮಾನುಸಾರ ನಡೆಯಲಿದೆ. ಕಳೆದ ಹಲವು ವರ್ಷಗಳಿಂದ 100% ಫಲಿತಾಂಶ ಮತ್ತು 100% job ವ್ಯವಸ್ಥೆ ಮಾಡಿಕೊಡುತ್ತಿರುವ ಈ ಸಂಸ್ಥೆಯಲ್ಲಿ, ಕ್ಯಾಂಪಸ್ ಸಂದರ್ಶನದ ಆಯ್ಕೆ, ವಾಹನ ಕಲಿಕೆ ತರಬೇತಿ, ಪ್ರಾಯೋಗಿಕ ತರಬೇತಿ, ಸ್ಮಾರ್ಟ್ ಕ್ಲಾಸ್ ತರಬೇತಿ ನೀಡುತ್ತಿದೆ. Industrial visit, ಹಿಂದುಳಿದ ವರ್ಗಗಳ ಹಾಸ್ಟೆಲ್ ವ್ಯವಸ್ಥೆ ಇನ್ನಿತರ ಹಲವು ಸೌಲಭ್ಯಗಳಿವೆ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು 9900902141 ಸಂಪರ್ಕಿಸಬಹುದಾಗಿದೆ.
ಮಡಿಕೇರಿ NEWS DESK ಮೇ 30 : ರಾಷ್ಟ್ರೀಯ ಜನಗಣತಿಯ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜೂ.2 ರಂದು ಬಾಳೆಲೆಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಬಾಳೆಲೆಯಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಬೇಡಿಕೆಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದು ಹೇಳಿದ್ದಾರೆ. 2025-26 ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್ಟಿ ಪಟ್ಟಿಯಲ್ಲಿ ಸೇರಿಸಬೇಕು. ಸಿಕ್ಕಿಂನ…
ಬೆಂಗಳೂರು ಮೇ 30 NEWS DESK : ಹಿರಿಯ ಸಾಹಿತಿ, ಖ್ಯಾತ ಕವಿ, ನಾಟಕ ರಚನೆಕಾರರ ಡಾ. ಎಚ್. ಎಸ್. ವೆಂಕಟೇಶ ಮೂರ್ತಿ (80) ಅವರು ಶುಕ್ರವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ, ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ವೆಂಕಟೇಶ ಮೂರ್ತಿ ಅವರು ನಾರಾಯಣ ಭಟ್ ಮತ್ತು ನಾಗರತ್ನಮ್ಮ ದಒಪತಿಯ ಮಗನಾಗಿ 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದರು. ಬೆಂಗಳೂರು ವಿಶ್ವ ವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದ ಎಚ್ಎಸ್ವಿ ಅವರು ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೈಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಎಚ್ಎಸ್ವಿ ಅವರು ಕನ್ನಡ ಸಾಹಿತ್ಯದ ಪ್ರಮುಖ ಕವಿ, ನಾಟಕಕಾರ, ವಿಮರ್ಶಕರಾಗಿಯೂ ಸೇವೆ ಸಲ್ಲಿಸಿದ್ದರು.
ಮಡಿಕೇರಿ ಮೇ 30 NEWS DESK : ಅಮ್ಮತ್ತಿ ಹೋಬಳಿ ಚೆನ್ನಯ್ಯನಕೋಟೆ ಗ್ರಾಮದ ಹೆಚ್.ಸಿ.ಚಂದ್ರ ಎಂಬವರ ಮನೆಯ ಹಿಂಬದಿಯ ಗೋಡೆ ರಾತ್ರಿ ಸುರಿದ ಮಳೆಯಿಂದಾಗಿ ಕುಸಿದು ಭಾಗಶ ಹಾನಿಯಾಗಿದೆ.
ಮಡಿಕೇರಿ NEWS DESK ಮೇ 29 : ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅವರಿಗೆ ಕರ್ನಾಟಕ ರಾಜ್ಯ ಹೊಟೇಲ್ ಗಳ ಸಂಘದಿಂದ ನೀಡಲಾಗುವ ‘ಆತಿಥ್ಯ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಬೆಂಗಳೂರಿನ ಎಫ್ಕೆಸಿಸಿ ಭವನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಸ್ವಾಮಿ, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹಲಾಟ್ ಮತ್ತಿತರ ಪ್ರಮುಖರು ಪ್ರಶಸ್ತಿ ನೀಡಿ ಗೌರಿಸಿದರು. ಬಿ.ಆರ್.ನಾಗೇಂದ್ರ ಪ್ರಸಾದ್ ಅವರ ಹೊಟೇಲ್ ಉದ್ಯಮ, ಸಾಮಾಜಿಕ ಕಳಕಳಿ, ಶೈಕ್ಷಣಿಕ ಹಾಗೂ ಧಾರ್ಮಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಸೋಮವಾರಪೇಟೆ NEWS DESK ಮೇ 29 : ಸೋಮವಾರಪೇಟೆಯಿಂದ ಶನಿವಾರಸಂತೆ, ಹಾಸನ ರಾಜ್ಯ ಹೆದ್ದಾರಿಯ ಕಾಗಡಿಕಟ್ಟೆ ಸಮೀಪ ಬುಧವಾರ ರಾತ್ರಿ ರಸ್ತೆಗಡ್ಡಲಾಗಿ ಭಾರೀ ಗಾತ್ರದ ಮರ ಉರುಳಿಬಿದ್ದು ಸಂಚಾರಕ್ಕೆ ತೊಂದರೆಯಾಯಿತು. ಅರಣ್ಯ ಇಲಾಖೆ, ಸೆಸ್ಕ್ ಸಿಬ್ಬಂದಿ ಹಾಗೂ ಸ್ಥಳೀಯರು ಮರವನ್ನು ತೆರವುಗೊಳಿಸಿ ರಸ್ತೆಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಿದರು.






