ಮಡಿಕೇರಿ ಜೂ.29 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಪತ್ರಿಕಾ ಭವನದಲ್ಲಿ ನಡೆಯಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಪಂದ್ಯಂಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿಯ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ”ಒಂದೇ ಊರು ಮೂರು ಚೆಕ್ ಡ್ಯಾಂ” ವರದಿಗೆ ಅಣ್ಣೀರ ಹರೀಶ್ ಮಾದಪ್ಪ ಪಡೆದುಕೊಂಡಿದ್ದಾರೆ. ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿಯನ್ನು ವಾರ್ತಾಭಾರತಿ ಪತ್ರಿಕೆಯಲ್ಲಿ ಪ್ರಕಟವಾದ” ಕೊಡಗಿನ ಕ್ರೀಡಾಕಲಿಗಳಿಗೆ ಕಾಡುತ್ತಿರುವ ದೈಹಿಕ ಶಕ್ತಿ ಕೊರತೆ” ವರದಿಗೆ ಇಸ್ಮಾಯಿಲ್ ಕಂಡಕೆರೆ ಪಡೆದುಕೊಂಡಿದ್ದಾರೆ. ಸಂಘದ ಮಾಜಿ ಉಪಾಧ್ಯಕ್ಷರಾದ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವೀಡಿಯೋಗ್ರಫಿ ಪ್ರಶಸ್ತಿಯನ್ನು ಇಬ್ಬರು ಪಡೆದುಕೊಂಡಿದ್ದಾರೆ. ವಿಸ್ತಾರ ಚಾನಲ್ ನಲ್ಲಿ ಪ್ರಸಾರವಾಗಿರುವ” ಹಸಿರ ಮನಸಿರಿಗೆ ಚಂದದ ಹೊದಿಕೆ” ಸುದ್ದಿಯ ವೀಡಿಯೋಗ್ರಫಿಗೆ ಮನೋಜ್ ಆರ್.ಆರ್. ಪಡೆದುಕೊಂಡಿದ್ದಾರೆ. ಚಿತ್ತಾರ ವಾಹಿನಿಯಲ್ಲಿ ಪ್ರಸಾರವಾದ ದಟ್ಟ ಅರಣ್ಯದೊಳಗೆ ಜಲಲ ಜಲಲ ಜಲಧಾರೆ ವರದಿಯ ವೀಡಿಯೋಗ್ರಫಿಗೆ…
ಲೇಖಕ: admin
ಕುಶಾಲನಗರ NEWS DESK ಜೂ.29 : ಕುಶಾಲನಗರ ತಾಲ್ಲೂಕಿನ ಮಳೆಹಾನಿ ಪ್ರದೇಶಗಳಿಗೆ ಮಡಿಕೇರಿ ಕ್ಷೇತ್ರದ ಶಾಶಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲಿಸಿದರು. ನೆಲ್ಲಿಹುದಿಕೇರಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು ಪ್ರವಾಹ ಪರಿಸ್ಥಿತಿಯ ಕುರಿತು ಅವಲೋಕಿಸಿ ಸ್ಥಳೀಯ ಜನಪ್ರತಿನಿಧಿಗಳಿಂದ ಮಾಹಿತಿ ಪಡೆದರು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಧನಲಕ್ಷ್ಮೀ, ಸದಸ್ಯರಾದ ಹಕೀಮ್, ಸಾಬು ವರ್ಗಿಸ್, ಅಶೋಕ್, ಅನಿಫಾ, ಮುಸ್ತಫ, ಶಫಿಯ, ಡಿಸಿಸಿ ಸದಸ್ಯರಾದ ಕೆ.ಎಂ.ಬಶೀರ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಭಾವ, ಕಾಂಗ್ರೆಸ್ ಮುಖಂಡರಾದ ಸಂಶು, ಅಬ್ದುಲ್ಲ, ಹಂಸ ಸಿ.ಎಂ ಮತ್ತಿತರರು ಹಾಜರಿದ್ದರು.
ಮಡಿಕೇರಿ NEWS DESK ಜೂ.29 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲ್ಲೂಕಿನ ಬಲ್ಯಮಂಡೂರಿನಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೇಟಿ ನೀಡಿದರು. ಜಿಲ್ಲಾಡಳಿತದ ಸೂಚನೆಯಂತೆ, ಈ ಹಿಂದೆ ಬಲ್ಯಮುಂಡೂರು ಭಾಗದ ಹಲವು ನಿವಾಸಿಗಳನ್ನು ಸುರಕ್ಷತೆಗಾಗಿ ಕಾಳಜಿ ಕೇಂದ್ರದಲ್ಲಿ ಇರಿಸಲಾಗಿದೆ. ಕೇಂದ್ರಕ್ಕೆ ಭೇಟಿ ನೀಡಿದ ಶಾಸಕರು ಜನರ ಯೋಗಕ್ಷೇಮವನ್ನು ವಿಚಾರಿಸಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಇದೇ ಸಂದರ್ಭ ನಿವಾಸಿಗಳಿಗೆ ಶಾಸಕರು ಭರವಸೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವಲಯ ಅಧ್ಯಕ್ಷ ರಾಜ ಕಾರ್ಯಪ್ಪ, ಹಿರಿಯ ಕಾಂಗ್ರೆಸ್ ಮುಖಂಡ ಪೊನ್ನಪ್ಪ, ತಹಶೀಲ್ದಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ನವದೆಹಲಿ NEWS DESK ಜೂ.29 : ಪ್ರಾಕೃತಿಕ ವಿಕೋಪಗಳಿಂದ ನಲುಗಿ ಹೋಗಿರುವ ಪಾಕಿಸ್ತಾನದಲ್ಲಿ ಒಂದೇ ದಿನ ಮೂರು ಬಾರಿ ಭೂಕಂಪನವಾಗಿದೆ. ಭೂಕಂಪದ ಕೇಂದ್ರಬಿಂದುವು ಪಾಕಿಸ್ತಾನದ ಮುಲ್ತಾನ್ ನಗರದಿಂದ ಪಶ್ಚಿಮಕ್ಕೆ 149 ಕಿಲೋಮೀಟರ್ ದೂರದಲ್ಲಿ, 30.25 ಉತ್ತರ ಅಕ್ಷಾಂಶ ಮತ್ತು 69.82 ಪೂರ್ವ ರೇಖಾಂಶದಲ್ಲಿ ಇದೆ ಎಂದು ಯುರೋ-ಮೆಡಿಟರೇನಿಯನ್ ಭೂಕಂಪನ ಕೇಂದ್ರವನ್ನು ಉಲ್ಲೇಖಿಸಿ ವರದಿ ಮಾಡಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 3.8 ಮತ್ತು 5.2ರಷ್ಟು ದಾಖಲಾಗಿದೆ. ಪಾಕಿಸ್ತಾನದಲ್ಲಿ 3 ಭಾರಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ. ಭೂಕಂಪನದಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಮಡಿಕೇರಿ NEWS DESK ಜೂ.29 : ಮಡಿಕೇರಿ ನಗರದ 4 ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದ 95ನೇ ವರ್ಷದ ದಸರಾ ಉತ್ಸವದ ನೂತನ ಸಮಿತಿಯ ಜಂಟಿ ಅಧ್ಯಕ್ಷರಾಗಿ ನಾಗರಾಜ್ ಹಾಗೂ ಕಿಶೋರ್ ಬಾಬು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಎಂ.ಎಲ್, ಉಪಾಧ್ಯಕ್ಷರಾಗಿ ಚೇತನ್(ದಿನು), ರಂಜಿತ್ ಕೃಷ್ಣಮೂರ್ತಿ(ರಂಜು, ಮೈಸೂರು), ಮೋಹನ್ ಸಂಪತ್, ಅನಿಲ್ ಕೆ.ಎ, ಮಧು ಎಮ್ ಪಿ, ಬಾಲಸುಬ್ರಮಣ್ಯ ಕಾರ್ಯದರ್ಶಿಗಳಾಗಿ ಸದಾಶಿವಶೆಟ್ಟಿ, ಹರೀಶ್, ಸಹ ಕಾರ್ಯದರ್ಶಿಗಳಾಗಿ ಸಂತೋಷ್, ಪುರುಷೋತ್ತಮ್, ಖಜಾಂಚಿಯಾಗಿ ಪವನ್, ಸಹ ಖಜಾಂಚಿಯಾಗಿ ಅಭಿಜಿತ್, ಶೇಖರ್ ಬಿ.ಡಿ, ದೇವಿ ಅಲಂಕಾರ ಸಮಿತಿ ಅಧ್ಯಕ್ಷರಾಗಿ ದೇಜುಶೆಟ್ಟಿ, ದಸರಾ ಸಮಿತಿಯ ಶತಮಾನೋತ್ಸವದ ಕಾರ್ಯಾಧ್ಯಕ್ಷರಾಗಿ ರಂಜಿತ್ ಸಿ.ಎಸ್, ಅಮನ್, ಗೌರವ ಅಧ್ಯಕ್ಷರುಗಳಾಗಿ ನವೀನ್ ಅಂಬೇಕಲ್, ಬಿ.ಎಮ್.ರಮೇಶ್, ಮಹಾಪೋಷಕರಾಗಿ ರಾಜು ಎಂ.ಬಿ, ಎ.ಎ.ಗಣೇಶ್, ಉಮೇಶ್, ಜೇಮ್ಸ್, ದಯಾನಂದ್ ಶೆಟ್ಟಿ ಟಿ.ಎಸ್, ಕೆ.ವಿ.ಸುಬ್ರಮಣಿ, ಎಸ್.ಸಿ.ಹರೀಶ್ ನೇಮಕಗೊಂಡಿದ್ದಾರೆ. *ಕರಗ ಸಮಿತಿ* ರಾಕೇಶ್, ಕುಮಾರೇಶ್, ರತೀಶ್, ನಿಶ್ಚಲ್ ಸೋಮಣ್ಣ. ಕಥಾಸಾರಾಂಶ ರಂಜಿತ್ ಎಚ್.ಎಮ್, ಚಲನವಲನ ಸಮಿತಿ ದಿನೇಶ್ ನಾಯರ್ ಹಾಗೂ ತಂಡ, ಮಂಟಪ ಅಲಂಕಾರ ಸಮಿತಿ ವಿಘ್ನೇಶ್, ರಕ್ಷಿತ್,…
ಮಡಿಕೇರಿ NEWS DESK ಜೂ.28 : ಕೊಡಗಿನ ಮೂಲನಿವಾಸಿ ‘ಕೆಂಬಟ್ಟಿ’ ಸಮುದಾಯವನ್ನು ಪರಿಶಿಷ್ಟ ಜಾತಿಯ ಆದಿಕರ್ನಾಟಕ ಜಾತಿ ಪಟ್ಟಿಯಲ್ಲಿ ಸೇರಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೊಡವ ಭಾಷಿಕ ಸಮುದಾಯಗಳ ಕೂಟದ ನಿಯೋಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಿತು. ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅವರ ನೇತೃತ್ವದಲ್ಲಿ ಎ.ಎಸ್.ಪೊನ್ನಣ್ಣ ಅವರನ್ನು ಇಂದು ಭೇಟಿಯಾದ ‘ಕೆಂಬಟ್ಟಿ’ ಸಮುದಾಯದ ಪ್ರಮುಖರು ರಾಜ್ಯದ ಬೇರೆಲ್ಲೂ ಕಾಣದ ಕೊಡಗಿನ ಪ್ರಾಚೀನ “ಕೆಂಬಟ್ಟಿ” ಸಮುದಾಯವನ್ನು ಪರಿಶಿಷ್ಟ ಜಾತಿಯ ಆದಿಕರ್ನಾಟಕ ಜಾತಿ ಪಟ್ಟಿಯಲ್ಲಿ ನಮೂದಿಸಬೇಕು ಎಂದು ಕೋರಿದರು. ಪೂರ್ವಿಕರ ಮಾಹಿತಿಯಂತೆ ಹಾಗೂ ಬ್ರಿಟಿಷರ The Manual of coorg written by G.Richter and published in 1870ರ ಸಮೀಕ್ಷೆಯ ವರದಿಯನ್ವಯ ‘ಕೆಂಬಟ್ಟಿ’ ಸಮುದಾಯ ಅನಾದಿ ಕಾಲದಿಂದಲೂ ಕೊಡಗಿನಲ್ಲಿ ಜೀವಿಸಿಕೊಂಡು, ಕೊಡವ ಭಾಷಾ ಜನಪದ ಪದ್ಧತಿ ಪರಂಪರೆ ಮೈಗೂಡಿಸಿಕೊಂಡು ಬಂದಿರುವ ಮೂಲನಿವಾಸಿಗಳಾಗಿದ್ದಾರೆ. ಇವರನ್ನು ಪರಿಶಿಷ್ಟ ಜಾತಿಯ…
ಮಡಿಕೇರಿ ಜೂ.28 NEWS DESK : ಮಡಿಕೇರಿ ನಗರಸಭೆ ಸದಸ್ಯರಾದ ನೀಮಾ ಹರ್ಷದ್ ಮನೆಯ ಗೋಡೆ ತೀವ್ರ ಮಳೆಯಿಂದ ಕುಸಿದ ಹಿನ್ನೆಲೆ ಶಾಸಕ ಡಾ.ಮಂತರ್ ಗೌಡ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ವಿರಾಜಪೇಟೆ ಜೂ.28 NEWS DESK : ವಿರಾಜಪೇಟೆ ಪೊಮ್ಮಕ್ಕಡ ಒಕ್ಕೂಟದ 2025-26ನೇ ಸಾಲಿನ ಆಡಳಿತ ಮಂಡಳಿಯ ಮೊದಲ ಸಭೆಯು ವಿರಾಜಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪೊಮ್ಮಕ್ಕಡ ಒಕ್ಕೂಟದ ಅಧ್ಯಕ್ಷೆ ತಾತಂಡ ಜ್ಯೋತಿ ಪ್ರಕಾಶ್, ಬೈಲಾ ಮತ್ತು ವರ್ಷದ ಕಾರ್ಯಕ್ರಮಗಳ ಬಗ್ಗೆ ಸದಸ್ಯರ ಅಭಿಪ್ರಾಯ ಕೋರಿ ಚರ್ಚಿಸಿದರು. ಹಲವಾರು ವಿಚಾರಗಳನ್ನು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿ ಅದರಂತೆ ಮುಂದೆ ನಡೆಸಿಕೊಂಡು ಹೋಗುವಂತೆ ತೀರ್ಮಾನಿಸಲಾಯಿತು. ಕಾರ್ಯದರ್ಶಿ ಕುಞ್ಞೀರ ಚಿತ್ರಾ ಚರ್ಮಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಖಜಾಂಚಿ ತಾತಂಡ ಯಶು ಕಬೀರ್ ಲೆಕ್ಕಪತ್ರ ಮಂಡಿಸಿದರು. ಇದೇ ಸಂದರ್ಭದಲ್ಲಿ ಕಳೆದ ಆಡಳಿತ ಮಂಡಳಿಯ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು. ಮೂಕೊಂಡ ಪ್ರೀತ್ ಈರಪ್ಪ, ಮುರುವಂಡ ಉಷಾ ನೀಲಕಂಠ ಸೇರಿದಂತೆ ಸಭೆಯಲ್ಲಿ ಎಲ್ಲಾ ಸದಸ್ಯರು ಹಾಜರಿದ್ದರು.
ಮಡಿಕೇರಿ ಜೂ.28 NEWS DESK : ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಅವರ 516ನೇ ಜನ್ಮದಿನೋತ್ಸವದಲ್ಲಿ ಸಾಹಿತ್ಯ ಕ್ಷೇತ್ರದ ಸಾಧನೆಗೆ ಬಾರಿಯಂಡ ಜೋಯಪ್ಪ ಅವರನ್ನು ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ರಾಜ್ಯಮಟ್ಟದ ‘ಕರುನಾಡ ಪ್ರಭು ಕೆಂಪೇಗೌಡ’ ಪ್ರಶಸ್ತಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಸನ್ಮಾನಿಸಿದರು. ಪ್ರಶಸ್ತಿಯು ಸ್ಮರಣಿಕೆಯೊಂದಿಗೆ ಬೆಳ್ಳಿ ಪದಕ ಮತ್ತು 25ಸಾವಿರ ನಗದನ್ನು ಹೊಂದಿಗೆ ಸನ್ಮಾನದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಬಾರಿಯಂಡ ಜೋಯಪ್ಪ ಅವರು, “ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಮತ್ತು ಸಾಹಿತ್ಯ ಸೇವೆಯನ್ನು ಪರಿಗಣಿಸಿ ನನ್ನನ್ನು ನಾಡ ಪ್ರಭು ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆ ಮಾಡಿ ಸನ್ಮಾನಿಸಿ ಗೌರವಿಸಿದ್ದು ನನಗೆ ಅತೀವ ಖುಷಿ ಕೊಟ್ಟಿದೆ ” ಎಂದರು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಾ.ಸಿ ಎನ್.ಅಶ್ವಥ್ ನಾರಾಯಣ್, ಪ್ರತಿಷ್ಠಾನ ಅಧ್ಯಕ್ಷರಾದ ಪ್ರೊ. ಎಂ.ಕೃಷ್ಣ ಗೌಡ, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕೇಂದ್ರ ಸಚಿವ ಪ್ರಹಲ್ಲಾದ್ ಜೋಶಿ, ಮಾಜಿ ಸ್ಪೀಕರ್ ಕೆ.ಜಿ.…
ಮಡಿಕೇರಿ ಜೂ.28 NEWS DESK : ಕಳೆದ ನಾಲ್ಕು ದಿನಗಳ ಗಾಳಿ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಕೊಡಗು ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಭೇಟಿ ನೀಡಿದರು. ಪ್ರವಾಹದಿಂದ ಪದೇ ಪದೇ ಸಂಕಷ್ಟಕ್ಕೆ ಒಳಗಾಗುವ ಪ್ರದೇಶಗಳಲ್ಲಿ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಹೆಚ್ಚಿನ ಮಳೆಯಾಗುವ ನಾಪೋಕ್ಲು ವ್ಯಾಪ್ತಿಯ ಚೆರಿಯಪರಂಬು ಭಾಗದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಪ್ರದೇಶಕ್ಕೆ ಸಚಿವರು, ಶಾ¸ಕ ಡಾ.ಮಂತರ್ ಗೌಡ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಪ್ರತಿ ವರ್ಷ ಮುಂಗಾರಿನ ಅವಧಿಯಲ್ಲಿ ಉಕ್ಕಿ ಹರಿಯುವ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಹಾಗೂ ಸುತ್ತಮುತ್ತಲಿನ ಪರಿಸರದ ವೀಕ್ಷಿಸಿದ ಸಚಿವರು ಮತ್ತು ಶಾಸಕರು, ಅಧಿಕಾರಿಗಳಿಗೆ ಸುರಕ್ಷತೆಯ ಬಗ್ಗೆ ಸಲಹೆ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಲ್ದಾರೆ ಪಂಚಾಯ್ತಿ ವ್ಯಾಪ್ತಿಯ ಬಾಡಗ ಬಾಣಂಗಾಲದ ಗಿರಿಜನ ಕಾಲೋನಿಯಲ್ಲಿ ಮಳೆಯಿಂದ ಹಾನಿಯಾದ ಅನಿಲ್ ಕುಮಾರ್…






