ಲೇಖಕ: admin

ಸೋಮವಾರಪೇಟೆ NEWS DESK ಮೇ 29 : ಸೋಮವಾರಪೇಟೆ ತಾಲ್ಲೂಕಿನಾದ್ಯಂತ ಗುರುವಾರ ಬೆಳಗ್ಗಿನಿಂದ ಮಳೆಯ ಆರ್ಭಟ ಕಡಿಮೆಯಾಗಿತ್ತು. ಸೆಸ್ಕ್ ಮತ್ತು ಅರಣ್ಯ ಇಲಾಖೆಯವರು ಬಿದ್ದ ಮರಗಳನ್ನು ತೆರವು ಮಾಡುವ ಕೆಲಸದಲ್ಲಿ ತೊಡಗಿದರು. ವಿದ್ಯುತ್ ಮಾರ್ಗದ ಮೇಲೆ ಬಿದ್ದ ಮರಗಳನ್ನು ಸೆಸ್ಕ್ ಸಿಬ್ಬಂದಿಗಳು ತೆಗೆದು, ಅನೇಕ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದರು. ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯವರು, ರಸ್ತೆಯತ್ತ ವಾಲಿದ್ದ ಮರಗಳನ್ನು ತೆರವುಗೊಳಿಸಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಗುರುವಾರ ಬೆಳಿಗ್ಗೆ 8 ಗಂಟೆಯವರೆಗೆ ಶಾಂತಳ್ಳಿ ಹೋಬಳಿಯಲ್ಲಿ 84 ಮಿಲಿ ಮೀಟರ್, ಸೋಮವಾರಪೇಟೆ ಕಸಬ 68, ಶನಿವಾರಸಂತೆ 50 ಹಾಗೂ ಕೊಡ್ಲಿಪೇಟೆ 24 ಮಿಲಿ ಮೀಟರ್ ಮಳೆಯಾಗಿದೆ.

Read More

ಮಡಿಕೇರಿ ಮೇ 29 NEWS DESK : ಕಳೆದ ಎರಡು ವಾರಗಳ ಕಾಲ ಸುರಿದ ನಿರಂತರ ಮಳೆಯಿಂದ ಕಾವೇರಿ ನಾಡು ಕೊಡಗಿನ ಸೌಂದರ್ಯ ಇಮ್ಮಡಿಯಾಗಿದೆ. ಎಲ್ಲೆಲ್ಲೂ ಜಲವೈಭವ ಕಂಡು ಬಂದಿದ್ದು, ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕೊಡಗು ಈಗ ಪ್ರವಾಸಿಗರನ್ನು ಅತಿ ಹೆಚ್ಚು ಆಕರ್ಷಿಸುತ್ತಿದೆ. ನೋಡಿದಲ್ಲೆಲ್ಲಾ ಹಸಿರು, ಮೈದುಂಬಿ ಹರಿಯುತ್ತಿರುವ ನದಿ, ತೊರೆ, ಝರಿ, ಜಲಪಾತಗಳು ದೇಶ ವಿದೇಶಗಳ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ. ಮಡಿಕೇರಿಯ ಅಬ್ಬಿ ಜಲಪಾತ, ಸೋಮವಾರಪೇಟೆಯ ಮಲ್ಲಳ್ಳಿ ಜಲಪಾತ ಸೇರಿದಂತೆ ಪ್ರಮುಖ ಪ್ರವಾಸಿತಾಣಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಕಂಡು ಬರುತ್ತಿದ್ದಾರೆ. ಅಬ್ಬಿ ದುಮ್ಮಿಕ್ಕಿ ಹರಿಯುತ್ತಿದ್ದು, ಪ್ರತಿದಿನ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ.  ತುಂಬಿದ ಕೆರೆ ::  ನಿರಂತರ ಮಳೆಯಿಂದ ಮಡಿಕೇರಿ ನಗರದ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಕೆರೆ ತುಂಬಿ ಹರಿಯುತ್ತಿದ್ದು, ಭಕ್ತರನ್ನು ಆಕರ್ಷಿಸುತ್ತಿದೆ.

Read More

ಮಡಿಕೇರಿ ಮೇ 29 NEWS DESK :  ಪ್ರಸಕ್ತ (2025-26) ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ‘ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ’ ಪ್ರಯುಕ್ತ ಜೂ.4 ರಂದು ಬೆಳಗ್ಗೆ 8.30 ಗಂಟೆಗೆ ಮೈಸೂರಿನಲ್ಲಿ ‘ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಜೀವನ ಮತ್ತು ಸಾಧನೆಗಳ ಕುರಿತು’ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆಯನ್ನು 6 ರಿಂದ 13 ವರ್ಷ ಮತ್ತು 14 ರಿಂದ 18 ವರ್ಷಗಳ ವಯೋಮಿತಿಗೆ ಒಳಪಟ್ಟಂತೆ ಎರಡು ವಿಭಾಗಗಳಲ್ಲಿ ನಡೆಸಲಾಗುತ್ತಿದ್ದು, ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಪ್ರತಿ ವಿಭಾಗದಲ್ಲಿ ತಲಾ ಮೂರು (ಪ್ರಥಮ, ದ್ವಿತೀಯ, ತೃತೀಯ) ಬಹುಮಾನ ನೀಡಲಾಗುತ್ತದೆ. ವಿಜೇತರಿಗೆ ಪ್ರಶಸ್ತಿಪತ್ರ, ಪುಸ್ತಕಗಳು ಹಾಗೂ ನಗದು ರೂಪದಲ್ಲಿ ಬಹುಮಾನವನ್ನು ‘ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ’ ದಿನದಂದೆ ಕರ್ನಾಟಕ ಕಲಾಮಂದಿರ, ಮೈಸೂರಿನಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ನೀಡಲಾಗುವುದು. ಕೊಡಗು ಜಿಲ್ಲೆಯಿಂದ ಭಾಗವಹಿಸುವ ಆಸಕ್ತ ವಿದ್ಯಾರ್ಥಿಗಳು URL https://forms.gle/SKMT6PyZbAt6yizv6 ಮೂಲಕ ಹೆಸರು ನೋಂದಾಯಿಸ ಬಹುದಾಗಿದೆ…

Read More

ಮಡಿಕೇರಿ ಮೇ 29 NEWS DESK : ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಧಾರಾಕಾರ ಮಳೆ ಇಂದು ಕೊಂಚ ಬಿಡುವು ನೀಡಿದೆ. ಮಳೆಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಅಧಿಕಾರಿಗಳಿಂದ ಪರಿಹಾರ ಕಾರ್ಯ ಬಿರುಸುಗೊಂಡಿದೆ. ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 26 ಇಂಚು ಮಳೆಯಾಗಿದ್ದು, ತಲಕಾವೇರಿ, ಭಾಗಮಂಡಲ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಲ್ಲಿ 5.5 ಇಂಚು ಮಳೆ ಸುರಿದಿದೆ. ಇಂದು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಿದ್ದು, ಮಡಿಕೇರಿಯಲ್ಲಿ ಮೈಕೊರೆಯುವ ಚಳಿ ಗಾಳಿಯ ವಾತಾವರಣವಿದೆ. ಮುಂದಿನ 24 ಗಂಟೆಗಳಲ್ಲಿ ಕೊಡಗಿನಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಭಾಗಮಂಡಲ ಹೋಬಳಿ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಭೇಟಿ ನೀಡಿ ಪರಿಶೀಲಿಸಿದರು. ಬೆಂಗೂರು ಗ್ರಾಮದ ದೋಣಿಕಾಡು ಪ್ರದೇಶವನ್ನು ಹಾಗೂ ಭಾಗಮಂಡಲದ ತ್ರಿವೇಣಿ ಸಂಗಮವನ್ನು ವೀಕ್ಷಿಸಿದರು. ನಂತರ ಪದಕಲ್ಲು ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಭಾಸ್ಕರ್ ಎಂಬುವರ ಮನೆಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಯನ್ನು ಅವಲೋಕಿಸಿದರು.  ಕಾಳಜಿ ಕೇಂದ್ರ…

Read More

ಸೋಮವಾರಪೇಟೆ ಮೇ 29 NEWS DESK : ಸಮೃದ್ಧವಾಗಿರುವ ಕನ್ನಡ ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸಿ ನಾಡಿನ ಮೂಲೆಮೂಲೆಗೆ ಕನ್ನಡ ಕಂಪನ್ನು ಪಸರಿಸುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ ಸದ್ದಿಲ್ಲದೆ ಮಾಡುತ್ತಿದೆ ಎಂದು ಸಾಹಿತ್ಯ ಪರಿಷತ್‍ನ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್‍ನ ಜಿಲ್ಲಾ, ಸೋಮವಾರಪೇಟೆ ತಾಲ್ಲೂಕು ಮತ್ತು ಹೋಬಳಿ ಘಟಕದ ವತಿಯಿಂದ ಸೋಮವಾರಪೇಟೆ ಪಟ್ಟಣದ ಸಾಹಿತ್ಯ ಭವನದಲ್ಲಿ ನಡೆದ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ನಾಡು ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ ಎಂದು ಹೇಳಿದರು. 1915ರಲ್ಲಿ ಮೈಸೂರು ಅರಸರಾಗಿದ್ದ ರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 5 ಸಾವಿರ ರೂ ಹಣವನ್ನು ದಾನವಾಗಿ ನೀಡಿ, ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆ ಮಾಡಿದರು. ಮುಂದೆ 1935 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ ಎಂದು ನಾಮಕರಣವಾಯಿತು. ಕೊಡಗು ಸಾಹಿತ್ಯ…

Read More

ಮಡಿಕೇರಿ ಮೇ 29 NEWS DESK : ಕರ್ನಾಟಕ ಮಾನವ ಬಂಧತ್ವ ವೇದಿಕೆ, ಮಹಿಳಾ ಬಂಧುತ್ವ ವೇದಿಕೆ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಮೇ 31 ರಂದು “ಸಮಕಾಲೀನ ಬಿಕ್ಕಟ್ಟುಗಳು ಮತ್ತು ಸವಾಲುಗಳು” ಎಂಬ ರಾಜ್ಯ ಮಟ್ಟದ ವಿಚಾರ ಸಂಕಿರಣ ನಡೆಯಲಿದೆ. ಪತ್ರಿಕಾ ಪ್ರಟಕಟಣೆ ನೀಡಿರುವ ಮಾನವ ಬಂಧುತ್ವ ವೇದಿಕೆ ಗೌರವ ಸಂಚಾಲಕ ರಮಾನಾಥ್ ಬೇಕಲ್, ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಸಮೀಪದ ಬಾಲಭವನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಮೊದಲ ಗೋಷ್ಠಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಡಾ.ಎ.ಬಿ.ರಾಮಚಂದ್ರಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪಾಲ್ಗೊಳ್ಳಲಿದ್ದು, ಹಿರಿಯ ಪತ್ರಕರ್ತ ದಿನೇಶ್ ಅವಿೂನ್ ಮಟ್ಟು “ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ (ಜಾತಿ ಸಮೀಕ್ಷೆ) ಒಳ ನೋಟಗಳು” ಎಂಬ ವಿಷಯದ ಕುರಿತು ವಿಷಯ ಮಂಡಣೆ ಮಾಡಲಿದ್ದಾರೆ.…

Read More

ಆಡುಗೋಡಿ ಮೇ 29 NEWS DESK :  ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ದಲಿತ ಕುಟುಂಬದಲ್ಲಿ ಹುಟ್ಟಿದ ಡಾ.ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ‌ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ ಎನ್ನುವುದಕ್ಕೆ ಇವರೇ ಸಾಕ್ಷಿ ಎಂದರು. 1992-93 ರಲ್ಲಿ ನಾನು ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಆರ್ಥಿಕ ಅನುಮೋದನೆ ನೀಡಿದ್ದೆ. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ  ರೂ.725 ಕೋಟಿ ಹಣ ಕೊಟ್ಟಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೇವೆ. ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ.…

Read More

ಸೋಮವಾರಪೇಟೆ ಮೇ 29 NEWS DESK : ಸೋಮವಾರಪೇಟೆಯ ವಿವಿಧೆಡೆ ಗಾಳಿ ಮಳೆಯಿಂದ ಮನೆಗಳಿಗೆ ಹಾನಿಯಾಗಿದ್ದು, ಸಂತ್ರಸ್ತರಿಗೆ ಆಹಾರ ಕಿಟ್ ವಿತರಿಸಲಾಯಿತು. ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿ ದೊಡ್ಡಹನಕೋಡು ಗ್ರಾಮದ ನಿವಾಸಿ ಈರಮ್ಮ ಹಾಗೂ ಪಾರ್ವತಿ  ಎಂಬವರ ಮನೆಗೆ ಹಾನಿಯಾಗಿದ್ದು, ಸೋಮವಾರಪೇಟೆ ತಹಸೀಲ್ದಾರ್ ಆಹಾರ ಕಿಟ್ ವಿತರಿಸಿದದರು.

Read More

ಮಂಗಳೂರು ಮೇ 29 NEWS DESK : ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಅವರ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿಯ ಪ್ರಸ್ತುತ ಪರಿಸ್ಥಿತಿಯ ಕುರಿತು ಗಂಭೀರ ಚರ್ಚೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ಯಾವುದೇ ಕಾರಣಕ್ಕೂ ದ್ವೇಷ ಇರಬಾರದು ಎಂಬ ಬಗ್ಗೆಯೂ ಬಿ.ಕೆ ಹರಿಪ್ರಸಾದ್ ಅವರ ಜೊತೆ ಚರ್ಚಿಸಿದೆ ಎಂದು ಹೇಳಿದರು. ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.  ಈ ಸಂದರ್ಭ  ವಸತಿ ಸಚಿವರಾದ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಜೊತೆಗಿದ್ದರು.

Read More

ಮಡಿಕೇರಿ ಮೇ 29 NEWS DESK : ಶಾಂತಳ್ಳಿ ಹೋಬಳಿ ತಲ್ತಾರೆಶೆಟ್ಟಳ್ಳಿ ಗ್ರಾಮದ ನಿವಾಸಿ ಸುಶೀಲ ಎಂಬವರ ಮನೆ ಭಾರಿ ಮಳೆಗಾಳಿಯಿಂದ ಹಾನಿಯಾಗಿದ್ದು, ಅವರಿಗೆ ತಹಶೀಲ್ದಾರ್ ಆಹಾರದ ಕಿಟ್ ವಿತರಿಸಲಾಯಿತು.

Read More