ಸೋಮವಾರಪೇಟೆ ಜೂ.28 NEWS DESK : ಬೆಂಗಳೂರು ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದಿಂದ ಕೆಂಪೇಗೌಡರ 516ನೇ ಜನ್ಮದಿನೋತ್ಸವ ಅಂಗವಾಗಿ ನೀಡುವ ರಾಜ್ಯಮಟ್ಟದ ಕರುನಾಡ ಪ್ರಭು ಕೆಂಪೇಗೌಡ ಪ್ರಶಸ್ತಿಯನ್ನು ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ, ತಾಕೇರಿ ಗ್ರಾಮದ ಎ.ಆರ್.ಮುತ್ತಣ್ಣ ಅವರಿಗೆ ಪ್ರದಾನ ಮಾಡಲಾಯಿತು. ಎ.ಆರ್. ಮುತ್ತಣ್ಣ ಅವರ ಸಾಮಾಜಿಕ ಕ್ಷೇತ್ರದ ಸೇವೆಯನ್ನು ಪರಿಗಣಿಸಿ, ಬೆಂಗಳೂರಿನ ಅರಮನೆ ಮೈದಾನದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜೀ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ,ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜೀ ಉಪಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಅಶ್ವಥ್ ನಾರಾಯಣ, ಸಂಸದ ಡಾ. ಮಂಜುನಾಥ್, ಮಾಜೀ ಗೃಹ ಸಚಿವ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಎಂ.ಎಲ್.ಸಿ. ಸಿ.ಟಿ. ರವಿ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಇತರರು…
ಲೇಖಕ: admin
ಮಡಿಕೇರಿ ಜೂ.28 NEWS DESK : ಜಿಲ್ಲಾ ಕೇಂದ್ರ ಮಡಿಕೇರಿಯ ಪ್ರತಿಷ್ಠಿತ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಕ್ಯಾಂಪಸ್ಗೆ, ಕೊಡಗಿನ ಗಾಂಧಿ ಎಂದೇ ಪ್ರಖ್ಯಾತರಾಗಿದ್ದ ಹಾಗೂ ಕಾಲೇಜು ಸ್ಥಾಪನೆಯ ಪ್ರಮುಖ ರೂವಾರಿಯೂ ಆಗಿದ್ದ ‘ಪಂದ್ಯಂಡ ಬೆಳ್ಳಿಯಪ್ಪ’ ಹೆಸರನ್ನು ಇಡಬೇಕೆಂದು ಅಲ್ಲಾರಂಡ ರಂಗ ಚಾವಡಿಯ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1949ರಲ್ಲಿ ಆರಂಭಗೊಂಡ ಈಗಿನ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ವೀರ ಸೇನಾನಿಯ ಹೆಸರಿರುವುದಕ್ಕೆ ತಮ್ಮ ಯಾವುದೇ ಆಕ್ಷೇಪಗಳಿಲ್ಲ. ಬದಲಾಗಿ ಕಾಲೇಜು ಕ್ಯಾಂಪಸ್ಗೆ ಪಂದ್ಯಂಡ ಬೆಳ್ಳಿಯಪ್ಪ ಅವರ ಹೆಸರನ್ನಿಸಿರುವುದು ಹೆಚ್ಚು ಅರ್ಥಪೂರ್ಣವೆನಿಸಿಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಕೊಡಗು ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಡಾ.ಅಶೋಕ ಸಂಗಪ್ಪ ಆಲೂರ ಅವರಿಗೂ ಮನವಿಯನ್ನು ಸಲ್ಲಿಸಿದ್ದು, ಅದಕ್ಕೆ ಅವರು ಪೂರಕ ಸ್ಪಂದನ ನೀಡಿರುವುದಾಗಿ ತಿಳಿಸಿದರು. ಸ್ವಾತಂತ್ರ್ಯ ಚಳುವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಪಂದ್ಯಂಡ ಬೆಳ್ಳಿಯಪ್ಪ ಅವರು, ಕೊಡಗಿನಲ್ಲಿ ಉನ್ನತ ಶಿಕ್ಷಣಕ್ಕೆ ಕಾಲೇಜಿನ ಕೊರತೆ ಇರುವುದನ್ನು ಮನಗಂಡು 1948ರಲ್ಲಿ ಅಂದಿನ ಕೇಂದ್ರ ಸರ್ಕಾರದೊಂದಿಗೆ ನಿರಂತರವಾಗಿ ಸಂಪರ್ಕವಿರಿಸಿಕೊಂಡು ನಡೆಸಿದ ಪ್ರಯತ್ನಗಳ…
ಮಡಿಕೇರಿ ಜೂ.28 NEWS DESK : ಕೊಡಗು ಜಿಲ್ಲಾ ಬಿಲ್ಲವ ಸಮಾಜದ ಯುವ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ವಿನೋದ್ ಪೂಜಾರಿ ಸಿದ್ದಾಪುರ ಆಯ್ಕೆಯಾಗಿದ್ದಾರೆ. ಕೊಡಗು ಜಿಲ್ಲಾ ಬಿಲ್ಲವ ಸಮಾಜದ ಜಿಲ್ಲಾಧ್ಯಕ್ಷ ಲಿಂಗಪ್ಪ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಸಮಾಜದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಬಿಲ್ಲವ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕರ್ಕೇರ, ಖಜಾಂಚಿ ಮಣಿ ಮುಖೇಶ್, ಉಪಾಧ್ಯಕ್ಷ ಸುಧೀರ್, ಸಂಘಟನಾ ಕಾರ್ಯದರ್ಶಿಗಳಾದ ಶೇಖರ್, ಸುರೇಶ್ ಹಾಗೂ ಬಿಲ್ಲವ ಕುಲಬಾಂಧವರು ಸಭೆಯಲ್ಲಿ ಉಪಸ್ಥಿತರಿದ್ದರು.
ಮಡಿಕೇರಿ ಜೂ.28 NEWS DESK : ಕೊಡವ ಮಕ್ಕಡ ಕೂಟದ 114ನೇ ಪುಸ್ತಕ, ಲೇಖಕಿ ಮಾಳೇಟಿರ ಸೀತಮ್ಮ ವಿವೇಕ್ ರಚಿತ 4ನೇ ಕೃತಿ “ಚೀತೆರ ಕಾಳ ಮುತ್ತ್ ಮಾಲೆ” ಕೊಡವ ಕವನ ಸಂಕಲನ ಬಿಡುಗಡೆಗೊಂಡಿತು. ನಗರದ ಪತ್ರಿಕಾ ಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಲೇಖಕಿ ಹಾಗೂ ಕೊಡವ ಮಕ್ಕಡ ಕೂಟದ ಸಲಹೆಗಾರರಾದ ಐಚಂಡ ರಶ್ಮಿ ಮೇದಪ್ಪ ಅವರು ಭಾಷೆಯ ಬೆಳವಣಿಗೆಯಲ್ಲಿ ಸಾಹಿತ್ಯ ಮಹತ್ವಪೂರ್ಣ ಪಾತ್ರ ವಹಿಸುತ್ತದೆ ಎಂದರು. ಕಥೆ, ಕಾದಂಬರಿ, ನಾಟಕ, ಕವನ ಸಂಕಲನಗಳು ಸಾಹಿತ್ಯ ಕ್ಷೇತ್ರದ ಸುಂದರ ಮತ್ತು ಶಕ್ತಿಯುತ ಪ್ರಕಾರಗಳಾಗಿವೆ. ಕವನಗಳು ಭಾಷೆಯ ಬಲವನ್ನು ಹೆಚ್ಚಿಸುತ್ತವೆ, ಓದುಗರ ಜೊತೆ ಕವನ ಮಾತನಾಡುತ್ತದೆ, ಮನ ಮುಟ್ಟುತ್ತದೆ ಮತ್ತು ಹೊಸ ಆಯಾಮಗಳಿಗೆ ಕೊಂಡೊಯ್ಯುತ್ತದೆ ಎಂದು ಅಭಿಪ್ರಾಯಪಟ್ಟರು. ಹಲವು ಪುಸ್ತಕಗಳನ್ನು ರಚಿಸಿರುವ ಲೇಖಕಿ ಮಾಳೇಟಿರ ಸೀತಮ್ಮ ಅವರ ಸಾಹಿತ್ಯ ಸೇವೆ ನಿರಂತರವಾಗಿರಲಿ, ಮತ್ತಷ್ಟು ಕೃತಿ ಹೊರ ಬರಲಿ ಎಂದು ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಮಕ್ಕಡ…
ಸಿದ್ದಾಪುರ ಜೂ.28 NEWS DESK : ಆದರ್ಶ ಪರಿಶುದ್ಧತೆಯ ಶತಮಾನಗಳಿಂದ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ 100ನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಯುಕ್ತ ಕೊಡಗು ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ವತಿಯಿಂದ ಜೂ.29 ರಂದು “ಅಸ್ಸಿರಾತಲ್ ಮುಸ್ತಖೀಂ ” ಎಂಬ ಶೀರ್ಷಿಕೆಯಲ್ಲಿ ಉದಾತ್ತ ದೀನಿನ ನೈಜ ಪಾರಂಪರ್ಯದ ವಿಶ್ಲೇಷಣೆ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಭಾನುವಾರ ಸಂಜೆ 7 ಘಂಟೆಗೆ ಸಿದ್ದಾಪುರದ ಮುನವ್ವಿರುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ “ಅಸ್ಸಿರಾತಲ್ ಮುಸ್ತಖೀಂ ” ಎಂಬ ಶೀರ್ಷಿಕೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಮಸ್ತ ಕೇಂದ್ರ ಜಂಇಯ್ಯತುಲ್ ಮುಅಲ್ಲಿಮೀನ್ ಸೆಂಟ್ರಲ್ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಎಂ.ಅಬ್ದುರ್ರಹ್ಮಾನ್ ಮುಸ್ಲಿಯಾರ್ ಅವರನ್ನು ಸನ್ಮಾನಿಸಿ, ಗೌರವಿಸಲಾಗುವುದು. ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಉಪ ಖಾಝಿಗಳು ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಎಂ ಅಬ್ದುಲ್ಲ ಫೈಝಿ ಉಸ್ತಾದ್ ಉದ್ಘಾಟಿಸಲಿದ್ದು, ಮುಖ್ಯ ಭಾಷಣಕಾರರಾಗಿ ಖ್ಯಾತ ವಾಗ್ಮಿ ಸುನ್ನತ್ ಜಮಾಅತಿನ ವೇದಿಕೆಗಳಲ್ಲಿ ಮಿನುಗು ತಾರೆ ಮುಸ್ತಫ್ ಅಶ್ರಫಿ ಕಕ್ಕುಪಡಿ ವಿಷಯ ಮಂಡಿಸಲಿದ್ದಾರೆ.…
ಮಡಿಕೇರಿ ಜೂ.28 NEWS DESK : ಹಿಜ್ರಾ ವರ್ಷ 1447, ಮುಹರ್ರಂ ಒಂದು ಜೂನ್ 27 ರಂದು ಶುಕ್ರವಾರ ಪ್ರಾರಂಭವಾಗಿದೆ ಹಾಗೂ ಮುಹರ್ರಂ 9,10, ತಾಸೂಆ,ಆಶೂರಾ,ದಿನ ಜುಲೈ 5 ಮತ್ತು 6 ಶನಿವಾರ ಮತ್ತು ಭಾನುವಾರ ಆಗಿರುತ್ತದೆ ಎಂದು ಕೊಡಗು ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿಗಳಾದ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜೂ.28 NEWS DESK : ಕೊಡಗು ಪತ್ರಕರ್ತರ ಸಂಘ(ರಿ) ದಿಂದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ ಮಾಡಲಾಗಿದ್ದು, ಜಿಲ್ಲೆಯ ಹತ್ತು ಮಂದಿ ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜು.1 ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಕರ್ತರಾಗಿದ್ದ ದಿ.ಕೆ.ಬಿ. ಮಹಂತೇಶ್ ಸ್ಮರಣಾರ್ಥ ಅವರ ಪತ್ನಿ ಭಾಗೀರಥಿ ಅವರು ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ ಕುಡೆಕಲ್ ಸಂತೋಷ್ ಅವರ ಇರುವುದೊಂದೇ ಕ್ರೀಡಾಂಗಣ ಅದಕ್ಕೂ ಗ್ರಹಣ ಎಂಬ ವರದಿ ಆಯ್ಕೆಯಾಗಿದೆ. ಕೊಡಗು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಮತ್ತು ಪುತ್ರ ಬಿ.ಎನ್. ಅಂಜನ್ ಅವರು ದಿವಂಗತ ಬಿ.ಆರ್.ಶಶಿರಮ್ಮ ಮತ್ತು ದಿವಂಗತ ಬಿ.ಟಿ. ರಾಮದಾಸ ಶೆಟ್ಟಿ ಅವರ ಜ್ಞಾಪಕಾರ್ಥ ಸ್ಥಾಪಿಸಿರುವ ಅತ್ಯುತ್ತಮ ಗ್ರಾಮೀಣ ವರದಿಗೆ…
ಕಾರ್ಕಳ ಜೂ.28 NEWS DESK : “ಇಂದು ಓದುವ ವಿಧಾನ ಬದಲಾಗಿ ವಿದ್ಯಾರ್ಥಿಗಳಿಗೆ ಓದಿದ ವಿಷಯಗಳು ಮರೆತು ಹೋಗುತ್ತಿದೆ. ಕೇವಲ ಪರೀಕ್ಷೆಗೋಸ್ಕರ ಓದದೆ ಜ್ಞಾನಕೋಸ್ಕರ ಓದುವಂತವರಾಗಬೇಕು. ಆಗ ಮಾತ್ರ ಸಾರ್ಥಕತೆಯನ್ನು ಕಂಡುಕೊಳ್ಳಲು ಸಾಧ್ಯ ಎಂದು ಕೆ.ರಾಜೇಂದ್ರ ಭಟ್ ತಿಳಿಸಿದರು. ಕ್ರಿಯೇಟಿವ್ ಕಾಲೇಜು ಕಾರ್ಕಳದ ಹೊಸ ಪರಿಕಲ್ಪನೆಯಿಂದ ಹುಟ್ಟಿಕೊಂಡಿರುವ ಕ್ರಿಯೇಟಿವ್ ಸ್ಪೂರ್ತಿ ಮಾತು ಸರಣಿ ಕಾರ್ಯಕ್ರಮದ 9ನೇ ಆವೃತ್ತಿಯ ಕಾರ್ಯಕ್ರಮವು ಕಲಿಯುವುದು ಒಂದು ಹಬ್ಬ- ಸಂಭ್ರಮಿಸೋಣ ಎಂಬ ಶೀರ್ಷಿಕೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜರುಗಿತು. ರಾಷ್ಟ್ರೀಯ ಮಟ್ಟದ ಜೆಸಿಐ ತರಬೇತುದಾರರು ಹಾಗೂ ಖ್ಯಾತ ವಾಗ್ಮಿಗಳಾದ ಕೆ.ರಾಜೇಂದ್ರ ಭಟ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶರೀರದ ಒಳಗಿನಿಂದ ಎನರ್ಜಿ ಸೃಷ್ಟಿಸಿಕೊಂಡಾಗ ದೊರೆಯುವುದೇ ಸ್ಫೂರ್ತಿ, ವಿದ್ಯಾರ್ಥಿಗಳು ಪ್ರಯೋಗ ಮಾಡಬಹುದಾದ 10 ಸ್ಪೂರ್ತಿಗಳ ಬಗ್ಗೆ ಉದಾಹರಣೆಗಳನ್ನು ನೀಡುತ್ತಾ ತಿಳಿಸಿದರು. ಎಲ್ಲ ಮಕ್ಕಳು ಅದ್ಭುತವನ್ನು ಸೃಷ್ಟಿಸುವ ಸಾಮಥ್ರ್ಯವನ್ನು ಹೊಂದಿದ್ದಾರೆ. ಓದುವಿಕೆಯಲ್ಲಿ ಮೌನ ಓದುವಿನಿಂದಾಗುವ ಅನೇಕ ಲಾಭಗಳನ್ನು ತಿಳಿಸುತ್ತಾ, ಸ್ಮಾರ್ಟ್ ವರ್ಕ್ ಮಾಡಿದರೆ ಯಾವುದೇ ವಿಷಯಗಳು ಕಠಿಣವೆನಿಸುವುದಿಲ್ಲ ಕಡಿಮೆ ಪರಿಶ್ರಮ ಹಾಕಿ, ಆಸಕ್ತಿಯಿಂದ…
ಸೋಮವಾರಪೇಟೆ ಜೂ.28 NEWS DESK : ಚೌಡ್ಲು ಪಂಚಾಯಿತಿ ವ್ಯಾಪ್ತಿಯ ಅಂಜನೇಯ ದೇವಾಲಯದಿಂದ ಒಎಲ್ವಿ ಕಾನ್ವೆಂಟ್ ರಸ್ತೆ ಗುಂಡಿಮಯವಾಗಿದ್ದು, ಸಂಚಾರಕ್ಕೆ ಸಮಸ್ಯೆಯಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಏರಿಳಿಕೆಯ ರಸ್ತೆಯಾಗಿದ್ದು. ಮದ್ಯದಲ್ಲಿ ಮಾತ್ರ ರಸ್ತೆ ಸಮತಟ್ಟಾಗಿ ಗುಂಡಿಗಳಿಂದ ಕೂಡಿದೆ. ಮಳೆಗಾಲದಲ್ಲಿ ಹೊಂಡಮಯವಾಗುವುದರಿಂದ ವಿದ್ಯಾರ್ಥಿಗಳು ನಡೆದಾಡಲು ಕಷ್ಟಪಡಬೇಕಾಗಿದೆ. ಶಾಲಾ ವಾಹನಗಳ ಸಂಚಾರಕ್ಕೂ ಸಮಸ್ಯೆಯಾಗಿದೆ. ರಸ್ತೆ ಸರಿಪಡಿಸಲು ಸಾಕಷ್ಟು ಭಾರಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರಾದ ಮೋಹನ್, ಮುರುಳೀಧರ್, ಕುಶಾಲಪ್ಪ ಆರೋಪಿಸಿದ್ದಾರೆ. ಆಡಳಿತ ಪಕ್ಷದ ಪ್ರಮುಖರು ಈ ರಸ್ತೆಯನ್ನೂ ಅವಲಂಭಿಸಿದ್ದಾರೆ. ಆದರೂ ರಸ್ತೆ ದುರಸ್ತಿ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ತಕ್ಷಣವೇ ರಸ್ತೆ ಸರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ.
ಮಡಿಕೇರಿ NEWS DESK ಜೂ.28 : ಕೊಡಗು ಮೂಲದ ಲೇಖಕ ಹಾಗೂ ಎಂಜಿನಿಯರ್ ಮೂಕೊಂಡ ಪಿ.ನಿತಿನ್ ಕುಶಾಲಪ್ಪ ಅವರ ‘ದಕ್ಷಿಣ್ : ಸೌತ್ ಇಂಡಿಯನ್ ಮಿಥ್ಸ್ ಅಂಡ್ ಫೇಬಲ್ಸ್ ರಿಟೋಲ್ಡ್’, ಕೃತಿಗಾಗಿ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕಾರ ದೊರೆತ್ತಿದೆ. ‘ದಕ್ಷಿಣ್ : ಸೌತ್ ಇಂಡಿಯನ್ ಮಿಥ್ಸ್ ಅಂಡ್ ಫೇಬಲ್ಸ್ ರಿಟೋಲ್ಡ್’, ಕೃತಿ ಕಥೆ ಹೇಳುವ ವಿಶಿಷ್ಟ ಶೈಲಿಯನ್ನು ಪ್ರತಿಬಿಂಬಿಸುತ್ತದೆ. ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕಾರ ರೂ.50 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದೆ. ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ನಿತಿನ್, ಕೊಡಗಿನ ಸ್ಥಳೀಯ ಇತಿಹಾಸ, ಜಾನಪದ ಮತ್ತು ಕಾದಂಬರಿಯಲ್ಲಿ ಆಳವಾದ ಆಸಕ್ತಿ ಹೊಂದಿದ್ದಾರೆ. ಅವರ ಗಮನಾರ್ಹ ಪ್ರಕಟಣೆಗಳಲ್ಲಿ ‘ದಿ ಅರ್ಲಿ ಕೂರ್ಗ್ಸ್’, ‘ಲಾಂಗ್ ಎಗೋ ಇನ್ ಕೂರ್ಗ್’, ‘1785 ಕೂರ್ಗ್’, ‘ಕೊಡಗು ಪ್ರಿನ್ಸಿಪಾಲಿಟಿ ವರ್ಸಸ್ ಬ್ರಿಟಿಷ್ ಎಂಪೈರ್’, ‘ದಿ ಮೇಜರ್ ಹೂ ಕೆಪ್ಟ್ ಹಿಸ್ ಕೂಲ್’, ‘ದಿ ಹೌಸ್ ಆಫ್ ಅವಧ್’ ಮತ್ತು ‘ದಿ…






