ಲೇಖಕ: admin

ಮಡಿಕೇರಿ ಮೇ 29 NEWS DESK :  ಭಾಗಮಂಡಲ ಹೋಬಳಿ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಭೇಟಿ ನೀಡಿ ಪರಿಶೀಲಿಸಿದರು. ಬೆಂಗೂರು ಗ್ರಾಮದ ದೋಣಿಕಾಡು ಪ್ರದೇಶವನ್ನು ಹಾಗೂ ಭಾಗಮಂಡಲದ ತ್ರಿವೇಣಿ ಸಂಗಮವನ್ನು ವೀಕ್ಷಿಸಿದರು. ನಂತರ ಪದಕಲ್ಲು ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಭಾಸ್ಕರ್ ಎಂಬುವರ ಮನೆಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಯನ್ನು ಅವಲೋಕಿಸಿದರು. ಮಳೆಗಾಲದಲ್ಲಿ ಮುಂಜಾಗೃತ ಕ್ರಮವಾಗಿ ಕಾಳಜಿ ಕೇಂದ್ರಕ್ಕೆ ಕಾಯ್ದಿರಿಸಿದ ಚೇರಂಬಾಣೆ ಬಾಲಕರ ಭವನ, ಭಾಗಮಂಡಲ ಐಟಿಐ ಕಾಲೇಜು ಹಾಗೂ ಕಾಶಿ ಮಠದಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು. ಸ್ಥಳದಲ್ಲಿ ಭಾಗಮಂಡಲ ಹೋಬಳಿ ಕಂದಾಯ ಪರಿಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು ಹಾಜರಿದ್ದರು.

Read More

ಮಡಿಕೇರಿ ಮೇ 29 NEWS DESK : ಗಾಳಿ ಮಳೆಯಿಂದಾಗಿ  ಕುಶಾಲನಗರ ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾಮದ ಲೀಲಾವತಿ ಎಂಬವರ ಮನೆಗೆ ಹಾನಿಯಾಗಿದೆ. ಕುಶಾಲನಗರ ತಹಸೀಲ್ದಾರ್ ನಿವಾಸಿಗಳಿಗೆ ಆಹಾರದ ಕಿಟ್ ವಿತರಿಸಿದರು.

Read More

ಮಡಿಕೇರಿ ಮೇ 29 NEWS DESK :  ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 53.94 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.07 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 643.27 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 326.97 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 75.58 ಮಿ.ಮೀ. ಕಳೆದ ವರ್ಷ ಇದೇ ದಿನ 3.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 881.79 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 450.87 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 50.05 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 663.85 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 246.10 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 46.07 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ…

Read More

ಮಡಿಕೇರಿ ಮೇ 29 NEWS DESK : ಭಾರೀ ಗಾಳಿ ಮಳೆಯಿಂದಾಗಿ ಶನಿವಾರಸಂತೆಯ ದೊಡ್ಡಹಣಕೊಡು ಗ್ರಾಮದ ನಿವಾಸಿ ಸುಬ್ಬಯ್ಯ (ಈರಯ್ಯ) ಎಂಬವರ ಮನೆಯ ಗೋಡೆ ಕುಸಿದು ಶೇ.50 ರಷ್ಟು ಹಾನಿಯಾಗಿದೆ.  ಸ್ಥಳಕ್ಕೆ ಅಧಿಕಾರಿಗಳು ಹಾಗೂ ಗ್ರಾ.ಪಂ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಮಡಿಕೇರಿ ಮೇ 29 NEWS DESK : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ/ ಕಾಲೇಜುಗಳಿಗೆ 2025-26ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರು/ ಉಪನ್ಯಾಸಕರ ಹುದ್ದೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅದರಂತೆ ಅರ್ಹ ಅಭ್ಯರ್ಥಿಗಳು ಜೂ.3 ರೊಳಗೆ ಸೂಕ್ತ ದಾಖಲೆಗಳೊಂದಿಗೆ ವಸತಿ ಶಾಲಾ-ಕಾಲೇಜುಗಳಲ್ಲಿ ಅರ್ಜಿ ಪಡೆಯಬಹುದಾಗಿದೆ. ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ಆಯಾಯ ಹುದ್ದೆಗೆ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಬೋಧನಾ ಕೌಶಲ್ಯ, ಸೇವಾ ಅನುಭವ, ಆಂಗ್ಲ ಭಾಷಾ ಸಂವಹನ ಕೌಶಲ್ಯತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದು. ಅತಿಥಿ ಶಿಕ್ಷಕರ ಹುದ್ದೆಗೆ ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳು ಕಡ್ಡಾಯವಾಗಿ ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರಿಗೆ ಮೊದಲನೆ ಆದ್ಯತೆ. ಒಂದು ವೇಳೆ ಅಂತಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಮೆರಿಟ್ ಆಧಾರದ ಮೇಲೆ ಪರಿಗಣಿಸಲಾಗುವುದು. ನೇರ ನೇಮಕಾತಿ ಮೂಲಕ ಖಾಯಂ ಶಿಕ್ಷಕ/ ಉಪನ್ಯಾಸಕರು ಅಥವಾ ವರ್ಗಾವಣೆ/ ನಿಯೋಜನೆ ಆದೇಶದ…

Read More

ಮಡಿಕೇರಿ ಮೇ 29 NEWS DESK : ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ Food Craft Institute (FCI), Mysore ಹಾಗೂ Institute of Hotel Management (IHM) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮ ಜಾರಿಗೊಳಿಸಲು ಸರ್ಕಾರವು ಅನುಮೋದನೆ ನೀಡಿದೆ. ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ 2 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 2 ಅಭ್ಯರ್ಥಿಗಳ ಗುರಿಯನ್ನು ಪ್ರಸ್ತುತ ಸಾಲಿನಲ್ಲಿ ನಿಗಧಿಪಡಿಸಿದೆ. ಈ ತರಬೇತಿ ಕಾರ್ಯಕ್ರಮಗಳ ವಿವರ/ಅಭ್ಯರ್ಥಿಗಳ ವಿದ್ಯಾರ್ಹತೆಯ ವಿವರ: ಫುಡ್ ಮತ್ತು ಬೇವರೇಜ್ ಸರ್ವಿಸ್ ಸ್ಟೀವರ್ಡ್‍ಗೆ ಕನಿಷ್ಠ 10ನೇ ತರಗತಿ ಪಾಸ್, 20 ರಿಂದ 45 ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿಯ ಒಬ್ಬರು ಮತ್ತು ಪರಿಶಿಷ್ಟ ಪಂಗಡದ ಒಬ್ಬರು. ಮಲ್ಟಿ ಕ್ಯೂಸಿನ್ ಕುಕ್…

Read More

ಮಡಿಕೇರಿ NEWS DESK ಮೇ 28 : ಕೊಡಗು ಜಿಲ್ಲೆಯಲ್ಲಿ ಅವಧಿಗೂ ಮುನ್ನ ಮಳೆ ಅತಿಯಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಜನರ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ವಿಪತ್ತ ನಿರ್ವಹಣಾ ಪಡೆಯನ್ನು ಜಿಲ್ಲೆಗೆ ಕರೆಸಲಾಗಿದೆ. 2018, 2019 ಮತ್ತು 2020 ರಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಹಾಗೂ ಪ್ರವಾಹದ ಅನಾಹುತಗಳ ಕರಾಳ ದಿನಗಳು ಹಸಿರಾಗಿರುವಾಗಲೇ ಪ್ರಸ್ತುತ ವರ್ಷ ಅವಧಿಗೂ ಮುನ್ನ ಮುಂಗಾರು ಆರಂಭಗೊಂಡು ಇಲ್ಲಿಯವರೆಗೆ 25 ಇಂಚಿಗೂ ಅಧಿಕ ಮಳೆಯಾಗಿದೆ. ಗಾಳಿ ಮಳೆಯ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೂ ಅಪಾರ ಹಾನಿ ಉಂಟಾಗಿದೆ. ಈ ಬೆಳವಣಿಗೆಯಿಂದ ಜಿಲ್ಲೆಯಲ್ಲಿ ಆತಂಕದ ಛಾಯೆ ಮೂಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತ ಎನ್‌ಡಿಆರ್‌ಎಫ್ ತಂಡವನ್ನು ಅವಧಿಗೂ ಮೊದಲೇ ಜಿಲ್ಲೆಯಲ್ಲಿ ನಿಯೋಜಿಸಿದೆ. ಎನ್‌ಡಿಆರ್‌ಎಫ್ ವೃತ್ತ ನಿರೀಕ್ಷಕ ಹರಿಶ್ಚಂದ್ರ ಪಾಂಡೆ ನೇತೃತ್ವದ 80 ಯೋಧರ ತಂಡ ಬೆಂಗಳೂರಿನಿಂದ ಮಡಿಕೇರಿಗೆ ಆಗಮಿಸಿದ್ದು, ಜನರ ರಕ್ಷಣೆಗೆ ಸನ್ನದ್ಧವಾಗಿದೆ. ಮಡಿಕೇರಿಯ ಮೈತ್ರಿ ಸಭಾಂಗಣದಲ್ಲಿ ಬೀಡು ಬಿಟ್ಟಿರುವ ಯೋಧರು ಗಾಳಿ, ಮಳೆ,…

Read More

ಮೈಸೂರು NEWS DESK ಮೇ 28 : ಕನ್ನಡ ಭಾಷೆ ತಮಿಳಿನಿಂದ ಬಂದಿದ್ದು ಎಂದು ಚಿತ್ರನಟ ಕಮಲ್‌ ಹಾಸನ್‌ ಹೇಳರುವುದು ಖಂಡನಾರ್ಹ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ. ಕಮಲ್‌ ಅತ್ಯದ್ಭುತ ನಟ, ಇಡೀ ಭಾರತದಲ್ಲಿಯೇ ಅತ್ಯಂತ ಮನೋಜ್ಞ ನಟ ಎಂದು ಖ್ಯಾತಿ ಗಳಿಸಿದ್ದಾರೆ. ನಾನು ಕೂಡ ಅವರ ಚಿತ್ರಗಳನ್ನು ನೋಡಿದ್ದೇನೆ. ಹಾಗೆಂದು ಅವರು ಹೇಳಿದ್ದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕನ್ನಡ ಭಾಷೆಯ ಮೇಲೆ ಹಲವಾರು ಭಾಷೆಗಳು ಪ್ರಭಾವ ಬೀರಿದೆ ಎಂದು ತಜ್ಞರು ಹೇಳಿದ್ದಾರೆ. ಈ ಬಗ್ಗೆ ಚರ್ಚೆ ನಡೆಸುವುದು ಸರಿಯಲ್ಲ. ನಮ್ಮ ಲಿಪಿ ಕೂಡ ಇತಿಹಾಸದಲ್ಲಿ ದಾಖಲಾಗಿದೆ. ಇದನ್ನ ಅವರು ತಿಳಿದುಕೊಳ್ಳಬೇಕು ಎಂದರು. ತಮಿಳು ಮತ್ತು ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಹೀಗಿರುವಾಗ ಕಮಲ್‌ ಹಾಸನ್‌ ಈ ರೀತಿಯ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದರು. ನಮ್ಮ ಕರ್ನಾಟಕದ ಅತ್ಯಂತ ಹೆಮ್ಮೆಯ ಸಂಸ್ಥೆಯು ರಾಜ್ಯದ ಹೆಮ್ಮೆಯಾಗಿದೆ. ಇದನ್ನು ನಿರ್ಮಾಣ ಮಾಡಿರುವುದೇ…

Read More

ಮಡಿಕೇರಿ ಮೇ 28 NEWS DESK : ಕೊಡಗು ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಮಾರ್ಗಗಳು, ಕಂಬಗಳು ಹಾಗೂ ಪರಿವರ್ತಕಗಳು ಹಾನಿಗೊಳಗಾಗಿದ್ದು, ವಿಭಾಗ ವ್ಯಾಪ್ತಿಯಲ್ಲಿ ಒಟ್ಟು 594 ಸಂಖ್ಯೆ ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುತ್ತದೆ. ನಿಗಮದ ನಿರ್ವಹಣಾ ಸಿಬ್ಬಂದಿಗಳು ಹಗಲಿರುಳು ವಿದ್ಯುತ್ ಮಾರ್ಗದ ದುರಸ್ಥಿ ಕಾರ್ಯವನ್ನು ನಿರ್ವಹಿಸಲು ಶ್ರಮಿಸುತ್ತಿದ್ದು, ಅತೀ ಹೆಚ್ಚಿನ ಗಾಳಿ ಮಳೆಯಿಂದಾಗಿ ದುರಸ್ಥಿ ಕಾರ್ಯಕ್ಕೆ ತೊಂದರೆ ಉಂಟಾಗುತ್ತಿದೆ. ಸಿಬ್ಬಂದಿಗಳ ಕೊರತೆಯ ನಡುವೆಯೂ ನಿರಂತರವಾಗಿ ವಿದ್ಯುತ್ ಮಾರ್ಗದ ದುರಸ್ಥಿ ಕಾರ್ಯವನ್ನು ನಿರ್ವಹಿಸುತ್ತಿದ್ದು. ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸುವಂತೆ ಈ ಮೂಲಕ ಕೋರಲಾಗಿದೆ.

Read More

ಮಡಿಕೇರಿ ಮೇ 28 NEWS DESK : ಕುಡಿಯ ಸೇರಿದಂತೆ ಲೈನ್‍ಮನೆಗಳಲ್ಲಿ ವಾಸಿಸುವ ಎಲ್ಲಾ ಆದಿವಾಸಿ ಕುಟುಂಬಗಳಿಗೆ ಆಧಾರ್ ಕಾರ್ಡ್ ಮಾಡಿಸುವಂತಾಗಬೇಕು. ಜೊತೆಗೆ ಸರ್ಕಾರದ ಸೌಲಭ್ಯಗಳು ಆದಿವಾಸಿ ಜನರಿಗೆ ತಲುಪುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಿವೇಶನ ಹಂಚಿಕೆ ಕುರಿತು ನಡೆದ ಸಭೆಯ ಅಧ್ಯಕ್ಷತೆಯಲ್ಲಿ ವಹಿಸಿ ಅವರು ಮಾತನಾಡಿದರು. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಾವೇರಿ ನದಿ ಪಾತ್ರದಲ್ಲಿ ಪರಿಸರ ಸ್ವಚ್ಚತಾ ಕಾರ್ಯ ಕೈಗೊಳ್ಳುವ ಸಂಬಂಧ ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್ ಮಾಹಿತಿ ನೀಡಿದರು. ಬಸವ, ಅಂಬೇಡ್ಕರ್ ಹಾಗೂ ಇಂದಿರಾ ವಸತಿ ಯೋಜನೆ ಪ್ರಗತಿ ಸಾಧಿಸುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನಿರ್ದೇಶನ ನೀಡಿದರು. ಗಿರಿಜನ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಜೊತೆ ಚರ್ಚಿಸಿ ಆಧಾರ್ ಕಾರ್ಡ್ ಮಾಡಿಸುವ ಸಂಬಂಧ ತುರ್ತು ಕ್ರಮವಹಿಸುವಂತೆ ಐಟಿಡಿಪಿ ಇಲಾಖೆ ಅಧಿಕಾರಿಗೆ ನಿರ್ದೇಶನ ನೀಡಿದರು. ರಸ್ತೆ ಸುರಕ್ಷತಾ ಸಮಿತಿ ಸಭೆಯನ್ನು ಪ್ರತೀ…

Read More