ಮಡಿಕೇರಿ ಜೂ.29 NEWS DESK : ಕರ್ನಾಟಕ ಸರ್ಕಾರವು 2026-27 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾಗೊಳಿಸಲು ಅಧಿಸೂಚಿಸಿದೆ. ಕೊಡಗು ಜಿಲ್ಲೆಯಲ್ಲಿ ಕಾಳುಮೆಣಸು ಹಾಗೂ ಅಡಿಕೆ ಬೆಳೆಗೆ ವಿಮಾ ಘಟಕ ಅಧಿಸೂಚಿಸಲಾಗಿದೆ. ಹವಾಮಾನ ಆಧಾರಿತ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಮತ್ತಿತರ ಮಾಹಿತಿಯನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗಿದೆ. 2026-27 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಕಾಳುಮೆಣಸು ಬೆಳೆಗೆ ಒಟ್ಟು ರೂ. 47,000 ಹಾಗೂ ಅಡಿಕೆ ಬೆಳೆಗೆ ರೂ. 1,28,000 ಆಗಿರುತ್ತದೆ. ವಿಮಾ ಕಂಪನಿಗೆ ಒಟ್ಟು ವಿಮಾ ಮೊತ್ತಕ್ಕೆ ರೈತರು ಕಾಳುಮೆಣಸು ಬೆಳೆಗೆ ಶೇ.5 ರ ವಿಮಾ ಮೊತ್ತ ರೂ. 2350 ಹಾಗೂ ಅಡಿಕೆ ಬೆಳೆಗೆ ರೂ. 6400 ಪ್ರತಿ ಹೆಕ್ಟೇರ್ ಪಾವತಿಸಬೇಕಿದೆ.…
ಲೇಖಕ: admin
ಕುಶಾಲನಗರ, ಜೂ.29 NEWS DESK : ಚಿತ್ರದುರ್ಗದ ತಾರಾಮಂಡಲ & ಪುಟಾಣಿ ವಿಜ್ಞಾನದ ಸಂಸ್ಥೆಯ ವತಿಯಿಂದ ಬೆಂಗಳೂರಿನ ಗಾಂಧಿ ಭವನದಲ್ಲಿ ವಿಜ್ಞಾನಿ ಚಾರ್ಲ್ಸ್ ಡಾರ್ವಿನ್ ದ್ವಿ ಶತಮಾನೋತ್ಸವದ ಸಂದರ್ಭದಲ್ಲಿ ನಡೆದ ಸಮಾರಂಭದಲ್ಲಿ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು)ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಅವರಿಗೆ ರಾಜ್ಯಮಟ್ಟದ ಡಾರ್ವಿನ್ ವಿಜ್ಞಾನ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಶಾಲಾ ವಿಜ್ಞಾನ ಕಾರ್ಯಕ್ರಮಗಳ ಯಶಸ್ಸಿನ ಕ್ರಿಯಾಶೀಲ ಶಿಕ್ಷಕರಿಗೆ ಕೊಡಮಾಡುವ ಈ ಪ್ರಶಸ್ತಿಯನ್ನು ಅಂತರಾಷ್ಟ್ರೀಯ ಖ್ಯಾತಿ ಹಿರಿಯ ವಿಜ್ಞಾನಿ ಡಾ ರಾಮಕೃಷ್ಣ ಅವರು ಪ್ರೇಮಕುಮಾರ್ ಅವರಿಗೆ ನೀಡಿ ಗೌರವಿಸಿದರು. ಮಕ್ಕಳಲ್ಲಿ ವಿಜ್ಞಾನ ವಿಷಯ ಕಲಿಕೆಯಲ್ಲಿ ಆಸಕ್ತಿ ಬೆಳೆಸುವುದು ಸೇರಿದಂತೆ ಅವರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಮೂಲಕ ವಿದ್ಯಾರ್ಥಿಗಳು ಭವಿಷ್ಯದ ವಿಜ್ಞಾನಿಗಳಾಗಿ ರೂಪುಗೊಳ್ಳುವ ದಿಸೆಯಲ್ಲಿ ಜಿಲ್ಲೆಯಲ್ಲಿ ವಿವಿಧ ವಿಜ್ಞಾನ/ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ಪ್ರೇಮಕುಮಾರ್ ಅವರು ತಮ್ಮನ್ನು ಕಳೆದ 3 ದಶಕಗಳಿಂದ ತೊಡಗಿಸಿಕೊಂಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆ ಮತ್ತು ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಕೈಗೊಳ್ಳುವ…
ಸುಂಟಿಕೊಪ್ಪ ಜೂ.29 NEWS DESK : ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲ್ಲೂಕು ಘಟಕದಲ್ಲಿ ಹಿರಿಯ ಪತ್ರಕರ್ತರಿಗೆ ಪುಲಿಯಂಡ ರಾಮ್ ದೇವಯ್ಯ ಅವರು ಜ್ಞಾನಗಂಗಾ ಶಾಲೆಯ ಹೆಸರಿನಲ್ಲಿ ಸ್ಥಾಪಿಸಿರುವ ವಾರ್ಷಿಕ ದತ್ತಿ ಪ್ರಶಸ್ತಿಗೆ ಸುಂಟಿಕೊಪ್ಪದ ವರದಿಗಾರ ಎಂ.ಬಿ.ವಿನ್ಸೆಂಟ್ ಅವರು ಭಾಜನರಾಗಿದ್ದಾರೆ. ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದಿಂದ, ಗುಡ್ಡೆಹೊಸೂರಿನ ಐಶ್ವರ್ಯ ಪಬ್ಲಿಕ್ ಶಾಲೆಯಲ್ಲಿ ಜು.4 ರ ಪೂರ್ವಾಹ್ನ 11 ಗಂಟೆಗೆ ನಡೆಯುವ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಐಶ್ವರ್ಯ ವಿದ್ಯಾಸಂಸ್ಥೆಯ ಅಧ್ಯಕ್ಷ ಪುಲಿಯಂಡ ರಾಮ್ ದೇವಯ್ಯ ಅವರು ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಬಿ.ಸಿ.ದಿನೇಶ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕೊಡಗು ಪತ್ರಿಕಾಭವನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ, `ಸಂಯುಕ್ತ ಕರ್ನಾಟಕ’ ಜಿಲ್ಲಾ ವರದಿಗಾರ ಎಸ್.ಜಿ.ಉಮೇಶ್ ಅವರು ದಿನದ ಮಹತ್ವದ ಕುರಿತು ಮಾತನಾಡಲಿದ್ದಾರೆ. ಗುಡ್ಡೆಹೊಸೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಂ.ಆರ್.ಸುಮೇಶ್, ಐಶ್ವರ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲ…
ಸೋಮವಾರಪೇಟೆ ಜೂ.29 NEWS DESK : ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೂ ಹೆಚ್ಚಿನ ಅನುದಾನ ಕಲ್ಪಿಸುವುದು ನಮ್ಮ ಜವಾಬ್ದಾರಿಯಾಗಿದೆ. ಗ್ರಾಮೀಣ ರಸ್ತೆಗಳ ಕಾಮಗಾರಿ ಕಳಪೆಯಾಗದಂತೆ ಗ್ರಾಮಸ್ಥರು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಶಾಸಕ ಡಾ.ಮಂತರ್ಗೌಡ ಹೇಳಿದರು. ಹೊನವಳ್ಳಿ, ಸುಳಿಮಳ್ತೆ ಮಾರ್ಗದಲ್ಲಿ 50 ಲಕ್ಷ ರೂ.ಗಳ ಹೊನ್ನಮ್ಮನ ಕೆರೆ ಸಂಪರ್ಕ ರಸ್ತೆ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮೀಣ ಭಾಗದ ರಸ್ತೆ ಕಾಮಗಾರಿಗಳು ನಡೆಯುವಾಗ ಅವಶ್ಯಕತೆವಿದ್ದಲ್ಲಿ ಗ್ರಾಮಸ್ಥರು ಒಂದಷ್ಟು ಜಾಗವನ್ನು ಬಿಟ್ಟುಕೊಡಬೇಕು. ಸುಗಮರಸ್ತೆಗಳ ನಿರ್ಮಾಣದಿಂದ ಮುಂದಿನ ಪೀಳಿಗೆಗೆ ಉಪಯೋಗವಾಗಲಿದೆ ಎಂದು ಹೇಳಿದರು. ಸುಳಿಮಳ್ತೆ ರಸ್ತೆಗಾಗಿ ಅನೇಕ ವರ್ಷಗಳಿಂದ ಗ್ರಾಮಸ್ಥರು ಮನವಿ ಮಾಡುತ್ತಿದ್ದಾರೆ ಎಂಬ ಸತ್ಯ ನಮಗೂ ತಿಳಿದಿದೆ. ಕಳೆದ ಮೂರು ವರ್ಷಗಳಿಂದ ಒಂದಷ್ಟು ಅನುದಾನ ಕಲ್ಪಿಸಿ ರಸ್ತೆ ಕಾಂಕ್ರೀಟಿಕರಣ ಮಾಡಲಾಗಿದೆ. ಈಗ ಸಚಿವ ಪ್ರಿಯಾಂಕ ಖರ್ಗೆ ಅವರು ಆರ್ಡಿಪಿಆರ್ ಯೋಜನೆಯಲ್ಲಿ ಅನುದಾನ ಕಲ್ಪಿಸಿ ನಮಗೆ ಸಹಾಯ ಮಾಡಿ ಗ್ರಾಮಸ್ಥರ ಬೇಡಿಕೆ ಈಡೇರಿಸಿದ್ದಾರೆ ಎಂದು ಹೇಳಿದರು. ಹೊನ್ನಮ್ಮನ ಕೆರೆ ಜಾತ್ರೋತ್ಸವ ಪ್ರಾರಂಭಕ್ಕೂ ಮೊದಲೇ…
ಸುಂಟಿಕೊಪ್ಪ ಜೂ.29 NEWS DESK : ಸುಂಟಿಕೊಪ್ಪ ಲಯನ್ಸ್ ಸಂಸ್ಥೆಯ 2026-2027 ಸಾಲಿನ ನೂತನ ಅಧ್ಯಕ್ಷರಾಗಿ ಎಸ್.ಜಿ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಯಾಗಿ ಗ್ಲೇನ್ ಮನೇಜಸ್ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಕಚೇರಿಯಲ್ಲಿ ಚೆಟ್ಟಿಮಾಡ ರಕ್ಷಿತ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಖಜಾಂಚಿಯಾಗಿ ಕೆ.ಪಿ.ಜಗನ್ನಾಥ್ ಆಯ್ಕೆಯಾದರು. ನೂತನ ಪದಾಧಿಕಾರಿಗಳ ಹಾಗೂ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಸಂಸ್ಥೆಯ ಅಧ್ಯಕ್ಷ ಚೆಟ್ಟಿಮಾಡ ರಕ್ಷಿತ್ ಅವರ ಅಧ್ಯಕ್ಷತೆಯಲ್ಲಿ ಜು. 1 ರಂದು ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದ್ದು ಆಡಳಿತ ಮಂಡಳಿ ನೂತನ ತಂಡಕ್ಕೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ಲಯನ್ಸ್ ರಾಜ್ಯಪಾಲರಾದ ಗೋವರ್ದನ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲ್ಲಿದ್ದಾರೆ.
ಮಡಿಕೇರಿ ಜೂ.29 NEWS DESK : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷರಾಗಿ ಪೂಳಕಂಡ ರಾಜೇಶ್ ಮತ್ತು ಕಾಯ೯ದಶಿ೯ಯಾಗಿ ಡಾ.ಚೇತನ್ ಜಿ.ಡಿ. ಆಯ್ಕೆಯಾಗಿದ್ದಾರೆ. ನೂತನ ವಲಯ ಸೇನಾನಿಯಾಗಿ ಪೊನ್ನಚ್ಚನ ಮಧುಸೂದನ್ ಆಯ್ಕೆಯಾಗಿದ್ದಾರೆ. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನ 22 ನೇ ವಷ೯ದ ಅಧ್ಯಕ್ಷರಾಗಿ ಪಿ.ಆರ್. ರಾಜೇಶ್, ಕಾಯ೯ದಶಿ೯ಯಾಗಿ ಡಾ.ಚೇತನ್ ಜಿ.ಡಿ.ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 4 ರಂದು ಶನಿವಾರ ಮಡಿಕೇರಿ ಕೆಳಗಿನ ಗೌಡ ಸಮಾಜದಲ್ಲಿ ಆಯೋಜಿತವಾಗಿದೆ. ಬೆಂಗಳೂರಿನ ರೋಟರಿ ಜಿಲ್ಲೆ3191ನ ಮಾಜಿ ಸಹಾಯಕ ಗವನ೯ರ್ ಪ್ರಕಾಶ್ ಬೆಳವಾಡಿ ಪ್ರದಗ್ರಹಣ ನೆರವೇರಿಸಲಿದ್ದು, ಸಹಾಯಕ ಗವನ೯ರ್ ಎಚ್.ಎಸ್. ವಸಂತ್ ಕುಮಾರ್, ನಿಕಟಪೂವ೯ ಅಧ್ಯಕ್ಷ ರತ್ನಾಕರ್ ರೈ, ಕಾಯ೯ದಶಿ೯ ಬಿ.ಕೆ.ಕಾಯ೯ಪ್ಪ ವೇದಿಕೆಯಲ್ಲಿರುತ್ತಾರೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಪ್ರಕಟಣೆ ತಿಳಿಸಿದೆ.
ಚೆಟ್ಟಳ್ಳಿ ಜೂ.29 NEWS DESK : ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ವರ್ಷ ಪೂರೈಸಿದ ಪ್ರಯುಕ್ತ ಸಹಕಾರ ಸಪ್ತಾಹದ ಅಂಗವಾಗಿ ಚೆಟ್ಟಳ್ಳಿಯ ನರೇಂದ್ರ ಮೋದಿ ಸಹಕಾರ ಭವನದಲ್ಲಿ ರೈತರ ಸಮಾವೇಶ ಹಾಗೂ ಸಹಕಾರ ಜಾಗೃತಿ ಸಭೆ ನಡೆಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಸಹಕಾರ ಇಲಾಖೆ ಕೊಡಗು ಜಿಲ್ಲೆ ಹಾಗೂ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶದ ರೈತರ ಹಿತಾಸಕ್ತಿ ಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಸಹಕಾರ ಸಚಿವಾಲಯವನ್ನು ಸ್ಥಾಪಿಸಿದ್ದು, ಐದು ವರ್ಷಗಳ ಅವಧಿಯಲ್ಲಿ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಗಳನ್ನು ಇಟ್ಟಿದೆ ಎಂದರು. ರೈತರಿಗೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳು ತಲುಪುತ್ತಿದ್ದು, ಸಹಕಾರ ಸಂಘಗಳು ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸುತ್ತಿವೆ. ಐದು ಲಕ್ಷ…
ಮಡಿಕೇರಿ NEWS DESK ಜೂ.29 : ಬೆಂಗಳೂರಿನ ಹೆಬ್ಬಾಳದಲ್ಲಿ ಗೌಡ ರೈಡರ್ಸ್ ಕ್ಲಬ್ ಅನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. “ರೈಡ್ ಫಾರ್ ಯೂನಿಟಿ” ಎಂಬ ಗೌಡ ಸಮುದಾಯದ ಐಕ್ಯತಾ ರೈಡ್ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ 40 ರೈಡರ್ಸ್ ಹಾಗೂ 5 ಪಿಲಿಯನ್ ರೈಡರ್ಸ್ (ಹಿಂಬದಿ ಸವಾರರು) ಭಾಗವಹಿಸಿದ್ದರು. ವಿಶೇಷವಾಗಿ ಮಡಿಕೇರಿ, ಹಾಸನ, ಸುಳ್ಯ, ಮೈಸೂರು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ ರೈಡರ್ಸ್ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬೆಂಗಳೂರು ಕೊಡಗು ಗೌಡ ಸಮಾಜದ ಅಧ್ಯಕ್ಷ ವಿಂಗ್ ಕಮಾಂಡರ್ (ನಿವೃತ್ತ) ಅಯ್ಯೇಟ್ಟಿರ ಮನೋಜ್ ಕುಮಾರ್, ಅವರು “ಗೌಡ ರೈಡರ್ಸ್ ಕ್ಲಬ್ ಕೇವಲ ಬೈಕ್ ರೈಡಿಂಗ್ ಗೆ ಮಾತ್ರ ಸೀಮಿತವಾಗದೆ, ಮುಂದಿನ ದಿನಗಳಲ್ಲಿ ಸಮಾಜ ಸೇವೆ, ಯುವಜನರ ಸಂಘಟನೆ ಹಾಗೂ ಸಮುದಾಯದ ಹಿತಕ್ಕಾಗಿ ವಿವಿಧ ಸೇವಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಲಿದೆ” ಎಂದು ತಿಳಿಸಿದರು. ಕೊಡಗು ಗೌಡ ಸಮಾಜಗಳ ಒಕ್ಕೂಟದ ನಿರ್ದೇಶಕರು ಹಾಗೂ ಕೊಡಗು ಗೌಡ ಸಮಾಜದ ಕಾರ್ಯದರ್ಶಿ ಬೇಕಲ್ ಬಿಪಿನ್, ನಿರ್ದೇಶಕರಾದ ಕಾಳೆಯಂಡ ತೇಜ ಕುಮಾರ್,…
ಮಡಿಕೇರಿ NEWS DESK ಜೂ.29 : ಸಮಾಜದ ಸ್ವಾಸ್ಥ್ಯ ಮತ್ತು ಸಾಮರಸ್ಯವನ್ನು ಕದಡುತ್ತಿರುವ ಮತಾಂತರ ಚಟುವಟಿಕೆ ಸಾಮಾಜಿಕ ಪಿಡುಗಾಗಿ ಮಾರ್ಪಟ್ಟಿದ್ದು, ಇದರ ನಿರ್ಮೂಲನೆಗೆ ಕೇಂದ್ರ ಸರಕಾರ ಕಠಿಣ ಕಾನೂನು ಜಾರಿಗೆ ತರಬೇಕೆಂದು ಬಿಜೆಪಿ ಎಸ್ಟಿ ಮೋರ್ಚಾದ ಕೊಡಗು ಜಿಲ್ಲಾಧ್ಯಕ್ಷ ಎಂ.ಎA.ಪರಮೇಶ್ವರ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕುಶಾಲನಗರ ವ್ಯಾಪ್ತಿಯಲ್ಲಿ ಮಹಿಳೆ ಹಾಗೂ ಆಕೆಯ ಪುತ್ರನನ್ನು ಮತಾಂತರ ಮಾಡಿರುವ ಪ್ರಕರಣ ಹೇಯ ಕೃತ್ಯವಾಗಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದೂ ಸಂಘಟನೆಗಳ ವತಿಯಿಂದ ಜೂ.30 ರಂದು ಕುಶಾಲನಗರದಲ್ಲಿ ನಡೆಯುವ ಜನಾಂದೋಲನ ಜಾಗೃತಿ ಸಮಾವೇಶಕ್ಕೆ ಎಸ್ಟಿ ಮೋರ್ಚಾ ಸಂಪೂರ್ಣ ಬೆಂಬಲವನ್ನು ನೀಡಲಿದೆ. ಅಲ್ಲದೆ ಮತಾಂತರ ಪಿಡುಗಿನ ನಿರ್ಮೂಲನೆಗೆ ಯಾವುದೇ ಹೋರಾಟಕ್ಕೂ ಸಿದ್ಧವಿದೆ ಎಂದು ತಿಳಿಸಿದ್ದಾರೆ. ಶಾಂತಿ, ಸೌಹಾರ್ದತೆಗೆ ಹೆಸರಾಗಿರುವ ಕೊಡಗು ಜಿಲ್ಲೆಯಲ್ಲಿ ಎಲ್ಲಾ ಜಾತಿ, ಧರ್ಮದವರು ಒಗ್ಗಟ್ಟಿನಿಂದ ಜೀವನ ಸಾಗಿಸುತ್ತಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಮತಾಂತರ ಚಟುವಟಿಕೆ ವ್ಯಾಪಕವಾಗುತ್ತಿದ್ದು, ಇದು ಅಶಾಂತಿಗೆ ಕಾರಣವಾಗುತ್ತಿದೆ. ಕಳೆದ ವರ್ಷ ದಕ್ಷಿಣ ಕೊಡಗಿನ ಮನೆಯೊಂದರಲ್ಲಿ ಕ್ರೈಸ್ತ…
ಲೋವರ್ ಸಿಯಾಂಗ್ NEWS DESK ಜೂ.29 : ಈಶಾನ್ಯ ಭಾರತದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ವಿವಿಧೆಡೆ ಸಾರ್ವಜನಿಕ ಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ತೀವ್ರತೆಯನ್ನು ಪಡೆದುಕೊಂಡಿರುವುದರಿಂದ ಗುಡ್ಡಗಳು ಕುಸಿಯುತ್ತಿವೆ. ಅರುಣಾಚಲ ಪ್ರದೇಶದ ಲೋವರ್ ಸಿಯಾಂಗ್ ಜಿಲ್ಲೆಯ ಸಿಜೆ ಪ್ರದೇಶದಲ್ಲಿ ಭೀಕರ ಗುಡ್ಡ ಕುಸಿತವಾಗಿದೆ. ಬೃಹತ್ ಗುಡ್ಡ ಕುಸಿಯುವ ಸಂದರ್ಭ ಕೆಸರುಮಯ ರಸ್ತೆಯಲ್ಲಿದ್ದ ಬೈಕ್ ಸವಾರನನ್ನು ಬೈಕ್ ಸಹಿತ ಮಣ್ಣು, ಕಲ್ಲಿನ ರಾಶಿ ಕೆಳಭಾಗಕ್ಕೆ ಎಳೆದುಕೊಂಡು ಹೋಗಿದೆ. ಆದರೆ ಅದೃಷ್ಟವಶಾತ್ ಬೈಕ್ ಸವಾರನ ಮೇಲೆ ಮಣ್ಣಿನ ರಾಶಿ ಬೀಳದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಭೀಕರ ದೃಶ್ಯಕ್ಕೆ ಸಾಕ್ಷಿಯಾದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.






